Tag: ಅಗ್ನಿಶಾಮಕ ದಳ

  • ಭಾರೀ ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

    ಭಾರೀ ಬೆಂಕಿಗೆ ಹೊತ್ತಿ ಉರಿದ ಮುಂಬೈ ಶಾಪ್ – ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

    ಮುಂಬೈ: ಮುಂಬೈನ ಅಂದೇರಿ ಪಶ್ಚಿಮ ಭಾಗದಲ್ಲಿಂದು ಮಳಿಗೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಳಿಗೆಯೊಂದು ಹೊತ್ತಿ ಉರಿದಿದೆ.

    https://twitter.com/Blinkorshrink/status/1552971079508967426?ref_src=twsrc%5Etfw%7Ctwcamp%5Etweetembed%7Ctwterm%5E1552971079508967426%7Ctwgr%5E%7Ctwcon%5Es1_&ref_url=https%3A%2F%2Fwww.news18.com%2Fnews%2Findia%2Fmassive-fire-breaks-out-in-mumbais-andheri-three-fire-engines-rush-to-spot-5649943.html

    1,000 ಚದರ ಅಡಿಯ ಅಂಗಡಿ ಇದಾಗಿದ್ದು, ಭಾರೀ ಪ್ರಮಾಣದಲ್ಲಿ ಬೆಂಕಿ ಜ್ವಾಲೆ ಕಾಣಿಸಿಕೊಂಡಿದೆ. ಸ್ಟಾರ್ ಬಜಾರ್ ಸಮೀಪದ ಲಿಂಕ್ ರೋಡ್ ಬಳಿ ಇರುವ ಈ ಶಾಪ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಅದೃಷ್ಠವಶಾತ್ ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಅಗ್ನಿಅವಘಢದ ವಿಡಿಯೋ ಬಹಿರಂಗವಾಗಿದ್ದು, ಆತಂಕ ತರುವಂತಿದೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ಭಾರತ ದೇಶದವರಲ್ಲ, ದೇಶದಿಂದ ಹೊರ ಹಾಕಿಸುವೆ : ಮಾಜಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ

    ಇಲ್ಲಿನ ಮಹಾಲಕ್ಷ್ಮೀ ಎಸ್ಟೇಟ್ ಸಮೀಪದ ಚಿತ್ರಕೋಟ್ ಸ್ಟುಡಿಯೋ ಹಿಂಭಾಗದಲ್ಲಿ ಇಂದು ಸಂಜೆ 4.30 ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಶಾಪ್ ಹೊತ್ತಿ ಉರಿದಿದೆ. ಇತ್ತ ಮಾಹಿತಿ ಪಡೆದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೂರಂತಸ್ತಿನ ಕಟ್ಟಡದಲ್ಲಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕು – ಯಶಸ್ವಿ ಕಾರ್ಯಾಚರಣೆ

    ಮೂರಂತಸ್ತಿನ ಕಟ್ಟಡದಲ್ಲಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕು – ಯಶಸ್ವಿ ಕಾರ್ಯಾಚರಣೆ

    ಬೆಳಗಾವಿ: ಮಕ್ಕಳ ಮುದ್ದಿನ ಬೆಕ್ಕನ್ನು ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

    ಮೂರಂತಸ್ತಿನ ಕಟ್ಟಡದ ಬಾಲ್ಕನಿಯಲ್ಲಿ ಸಿಲುಕಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕನ್ನು ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಸತತ ಎರಡು ಘಂಟೆಗಳ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಈ ಹಿನ್ನೆಲೆ ಮಕ್ಕಳು ಸೇರಿ ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಟ್ರಿಪ್‍ಗೆ ಕೈಕೊಟ್ಟ ಪತ್ನಿ- ಪಿಲ್ಲೊ ಜೊತೆ ಹೊರಟ ಪತಿ

    ನಡೆದಿದ್ದೇನು?
    ಬೆಳಗಾವಿಯ ಖಡೇಬಜಾರ್ ರಸ್ತೆಯಲ್ಲಿರುವ ಮೂರಂತಸ್ತಿನ ಕಟ್ಟಡದ ಬಾಲ್ಕನಿಯಲ್ಲಿ ಬೆಕ್ಕು ಸಿಲುಕಿಕೊಂಡಿತ್ತು. ಶನಿವಾರ ರಾತ್ರಿ ಕಟ್ಟಡದ ಮೂರಂತಸ್ತಿನ ತುದಿಗೆ ಇಳಿದಿದ್ದ ಬೆಕ್ಕು ಮರಳಿ ಬಾಲ್ಕನಿ ಕಿಟಕಿಗೆ ನೆಗೆಯಲಾಗದೇ ಪ್ರಾಣಭಯದಲ್ಲಿ ಪರದಾಡುತ್ತಿತ್ತು. ಸುಮಾರು ಎರಡು ಗಂಟೆಗಳ ಕಾಲ ಮ್ಯಾಂವ್… ಮ್ಯಾಂವ್… ಎಂದು ಗುಡುತ್ತ ಅತ್ತಿಂದಿತ್ತ, ಇತ್ತಿಂದತ್ತ ಸುಳಿದಾಡುತ್ತಿತ್ತು.

    ಈ ವೇಳೆ ಬೆಕ್ಕನ್ನು ರಕ್ಷಿಸುವಂತೆ ಪಾಲಕರ ಬಳಿ ಮಕ್ಕಳು ಹಠ ಹಿಡಿದಿದ್ದರು. ಈ ವೇಳೆ ಪೋಷಕರು ಬೆಕ್ಕನ್ನು ರಕ್ಷಣೆ ಮಾಡಲು ಹರಸಾಹಸಪಟ್ಟಿದ್ದಾರೆ. ಆದ್ರೆ, ಅದು ಅವರಿಗೆ ಸಾಧ್ಯವಾಗದೇ ಇದ್ದಾಗ ಅನಿಮಲ್ ವೆಲ್ಪೇರ್ ಅಸೋಸಿಯೇಷನ್‍ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅನಿಮಲ್ ವೆಲ್ಪೇರ್ ಅಸೋಸಿಯೇಷನ್ ವರುಣ್ ಕರ್ಕನೀಸ್ ತಂಡದವರ ಪ್ರಯತ್ನ ಫಲ ನೀಡಿಲ್ಲ. ಇದನ್ನೂ ಓದಿ: ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ಬಾಹುಬಲಿ: ಸತೀಶ್ ಜಾರಕಿಹೊಳಿ

    ಬಳಿಕ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ವಾಹನದ ಏಣಿ ಸಹಾಯದಿಂದ ಬಾಲ್ಕನಿ ಏರಿ ಬೆಕ್ಕನ್ನು ರಕ್ಷಣೆ ಮಾಡಿದ್ದಾರೆ. ಇತ್ತ ಬೆಕ್ಕನ್ನು ರಕ್ಷಣೆ ಮಾಡಿದ ದೃಶ್ಯವನ್ನು ನೋಡಿ ಸುತ್ತ ನೆರೆದಿದ್ದ ಜನರು ಚಪ್ಪಾಳೆ ತಟ್ಟಿ, ಕೂಗಾಡಿ ಖುಷಿಪಟ್ಟರು.

    Live Tv
    [brid partner=56869869 player=32851 video=960834 autoplay=true]

  • ದೆಹಲಿಗೆ ರೊಬೋಟಿಕ್ ಅಗ್ನಿಶಾಮಕ ವಾಹನ ಎಂಟ್ರಿ – ಏನೆಲ್ಲಾ ಇದೆ ವಿಶೇಷ?

    ದೆಹಲಿಗೆ ರೊಬೋಟಿಕ್ ಅಗ್ನಿಶಾಮಕ ವಾಹನ ಎಂಟ್ರಿ – ಏನೆಲ್ಲಾ ಇದೆ ವಿಶೇಷ?

    ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ 2 ರೊಬೋಟ್ ಅಗ್ನಿಶಾಮಕ ವಾಹನವನ್ನು ಖರೀದಿಸಿದೆ.

    ರಾಜ್ಯದಲ್ಲಿ ಆಗುವಂತಹ ಅಗ್ನಿ ಅವಘಡಗಳ ನಿಯಂತ್ರಣಕ್ಕೆ ಈ ರೊಬೋಟ್ ಅಗ್ನಿಶಾಮಕ ವಾಹನಗಳು ಮಹತ್ವದ ಪಾತ್ರ ವಹಿಸಲಿವೆ. ಕಿರಿದಾದ ರಸ್ತೆ, ಗೋದಾಮು, ಬೇಸ್ಮೆಂಟ್, ಮಹಡಿ, ಅರಣ್ಯ, ಆಯಿಲ್ ಟ್ಯಾಂರ‍್ಸ್ ಎಂಥದ್ದೇ ಸ್ಥಳದಲ್ಲೂ ಕಾರ್ಯ ನಿರ್ವಹಿಸುವ ಪರಿಣಿತಿ ಹೊಂದಿವೆ. ಇದನ್ನೂ ಓದಿ: ಜಮ್ಮು ಸುರಂಗ ಕುಸಿತ – 10 ಮೃತದೇಹಗಳು ಪತ್ತೆ

    Arvind Kejriwal

    300 ಮೀಟರ್ ದೂರದಿಂದಲೇ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಈ ವಾಹನಗಳು ಸುಲಭವಾಗಿ ಮಹಡಿಯನ್ನು ಹತ್ತುತ್ತವೆ. ಸೆನ್ಸಾರ್ ಮತ್ತು ಕ್ಯಾಮೆರಾ ಹಾಕಿದ್ದು ತಾಪಮಾನಕ್ಕೆ ಅನುಗುಣವಾಗಿ ನೀರು ಬಿಡುಗಡೆ ಮಾಡಲಿದೆ. ದೆಹಲಿಯ ಪಿವಿಸಿ ಮಾರ್ಕೆಟ್‌ನಲ್ಲಿ ನಡೆದ ಅಗ್ನಿ ಅವಘಡದ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಜನರ ರಕ್ಷಣೆಗಾಗಿ ಈ ಉಪಕ್ರಮವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಟ್ರ್ಯಾಕ್ಟರ್ ಏರಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಸಂಗಣ್ಣ ಕರಡಿ

    fire
    ಸಾಂದರ್ಭಿಕ ಚಿತ್ರ

    ಈ ಕುರಿತು ಮಾತನಾಡಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಈ ಉಪಕ್ರಮವು ಅಮೂಲ್ಯ ಜೀವಗಳನ್ನು ಉಳಿಸಲು ಸಹಾಯ ಮಾಡುತ್ತದೆ. ನಮ್ಮ ಅಗ್ನಿಶಾಮಕ ದಳದವರು 100 ಮೀಟರ್‌ಗಳಷ್ಟು ಸುರಕ್ಷಿತ ದೂರದಿಂದ ಹೋರಾಡಿ ಬೆಂಕಿಯನ್ನು ನಂದಿಸಬಹುದು. ಈ ಮಿಷನ್‌ಗಳು 300 ಮೀಟರ್ ದೂರದಿಂದಲೇ ಕಾರ್ಯ ನಿರ್ವಹಿಸುವುದರಿಂದ ಅಗ್ನಿಶಾಮಕ ದಳಕ್ಕೆ ಮತ್ತಷ್ಟು ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.

  • ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ

    ಬೆಣ್ಣೆ ಹಳ್ಳದಲ್ಲಿ ಪ್ರವಾಹ – ನಾಲ್ವರು ಕಾರ್ಮಿಕರನ್ನ ರಕ್ಷಿಸಿದ ಅಗ್ನಿಶಾಮಕ ದಳ

    ಗದಗ: ಜಿಲ್ಲೆಯ ರೋಣ ತಾಲೂಕಿನ ಬೆಣ್ಣೆ ಹಳ್ಳ ಪ್ರವಾಹದಲ್ಲಿ ಸಿಲುಕಿದ್ದ ನಾಲ್ವರು ಕಾರ್ಮಿಕರನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಯಶಸ್ವಿಯಾಗಿದೆ.

    ಯಾಸ ಹಡಗಲಿ ಗ್ರಾಮದ ಯಲ್ಲಪ್ಪ ರಾಘವಪುರ, ಅರುಣ್ ವಾಲ್ಮೀಕಿ, ಪರಶುರಾಮ ಮುತ್ತಣ್ಣವರ್ ಮತ್ತು ಗವಿಸಿದ್ದ ಕಲ್ಲಿ ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿದ್ದರು. ಯಾಸ ಹಡಗಲಿ ಹಾಗೂ ಯಾವಗಲ್ ಸಂಪರ್ಕ ಕಲ್ಪಿಸುವ ಬೆಣ್ಣೆಹಳ್ಳ ಸೇತುವೆ ಕಾರ್ಯಭರದಿಂದ ಸಾಗಿತ್ತು. ಮಳೆಗಾಲ ಆರಂಭವಾದ್ದರಿಂದ ‘ಡೇ ಆಂಡ್ ನೈಟ್’ ಕೆಲಸ ಶುರುವಾಗಿತ್ತು. ಇದನ್ನೂ ಓದಿ: ತಮಿಳು ಹೆಸರಾಂತ ನಟ ಧನುಷ್ ತಮ್ಮ ಮಗ ಎಂದ ದಂಪತಿಗೆ ನೋಟಿಸ್ 

    ಕೆಲಸ ಮಾಡ್ತಿದ್ದಂತಹ ಸಂದರ್ಭದಲ್ಲಿ ರಾತ್ರಿ 3 ಗಂಟೆ ವೇಳೆಗೆ ಏಕಾಏಕಿ ಪ್ರವಾಹ ಬಂದಿದೆ. ಮೂರು ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುತ್ತಿದ್ದರೂ, ಬೆಣ್ಣೆಹಳ್ಳದಲ್ಲಿ ನೀರಿನ ಹರಿವು ಸಾಮಾನ್ಯವಾಗಿತ್ತು. ರಾತ್ರಿ ಕ್ಷಣ-ಕ್ಷಣಕ್ಕೂ ನೀರಿನ ಹರಿವು ಹೆಚ್ಚಾಗಿದೆ. ನೋಡನೋಡುತ್ತಿದ್ದಂತೆ ನೀರಿನ ಪ್ರಮಾಣ ಹೆಚ್ಚಾಗಿ ಸೇತುವೆ ಜಲಾವೃತವಾಗಿದೆ.

    ದಿಕ್ಕು ತೋಚದೆ ನಡುಗಡ್ಡೆಯಲ್ಲಿ ನಾಲ್ವರು ಸಿಲುಕಿದ್ದಾರೆ. ನಂತರ ರೋಣ ತಹಶೀಲ್ದಾರ್  ಹಾಗೂ ಅಗ್ನಿ ಶಾಮಕ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣೆಗೆ ಮುಂದಾದರು. ಪ್ರವಾಹದಲ್ಲಿ ಸಿಲುಕಿದ್ದವರನ್ನು ಲೈಫ್ ಜಾಕೆಟ್ ಹಾಗೂ ಹಗ್ಗದ ಮೂಲಕ ರಕ್ಷಿಸಲಾಗಿದೆ. ಈಗ ಕಾರ್ಮಿಕರು ನೀರಿನಿಂದ ಹೊರಬಂದು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.

    ಅಗ್ನಿ ಶಾಮಕದಳ ಅಧಿಕಾರಿ ಮಂಜುನಾಥ್ ಮೇಲ್ಮನೆ, ಸಿಬ್ಬಂದಿಗಳಾದ ಸಂತೋಷ್, ಆನಂದ್‌ ಗೌಡ್ರು, ಮುತ್ತಣ್ಣ ಪ್ರಧಾನಿ, ಎಸ್.ಬಿ.ಕಟ್ಟಿಮನಿ, ಎಸ್.ಅಳಗವಾಡಿ ಸೇರಿದಂತೆ ಅನೇಕ ಸಿಬ್ಬಂದಿಗಳು ಸ್ಥಳೀಯರು ಪಾಲ್ಗೊಂಡಿದ್ದರು. ಇದನ್ನೂ ಓದಿ:  ಕಾರವಾರದಲ್ಲಿ ಉದ್ದ ಕಣ್ಣಿನ ಅಪರೂಪದ ಏಡಿ ಪತ್ತೆ 

  • ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

    ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

    ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯ ಟವರ್ 2 ರಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದ್ದು, ಟವರ್‍ನಲ್ಲಿದ್ದ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

    ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಆರಂಭದಲ್ಲಿ ಬೆಂಕಿಯಿಂದ ತೀವ್ರ ಹೊಗೆ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ಸಿಬ್ಬಂದಿ ರೋಗಿಗಳನ್ನು ಸ್ಥಳದಿಂದ ಸ್ಥಳಾಂತರಿಸಲು ಹರಸಾಹಸ ಪಡಬೇಕಾಯಿತು. ಇದನ್ನೂ ಓದಿ: ಹಂಪಿಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಿಂತನೆ: ವಚನಾನಂದ ಮಹಾಸ್ವಾಮೀಜಿ

    ತಮಿಳುನಾಡಿನ ಆರೋಗ್ಯ ಪ್ರಧಾನ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಪ್ರಕಾರ, ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂದಿನ ಮೂರು ಬ್ಲಾಕ್‍ಗಳು ಸುರಕ್ಷಿತವಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಹೆಚ್ಚು ಗಮನಹರಿಸಬೇಕು: ರಾಹುಲ್ ಸಲಹೆ

    ಇಲ್ಲಿಯವರೆಗೆ ಯಾವುದೇ ಸಾವು, ನೋವು ಅಥವಾ ಗಾಯಗಳ ವರದಿಯಾಗಿಲ್ಲ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

  • ಮಾಂಜ್ರಾನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

    ಮಾಂಜ್ರಾನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

    ಬೀದರ್: ಸ್ನೇಹಿತರ ಜೊತೆ ಈಜಲು ಹೋಗಿ ಮಾಂಜ್ರಾನದಿ ಪಾಲಾಗಿದ್ದ ಯುವಕನ ಮೃತದೇಹ ತಡರಾತ್ರಿ ಪತ್ತೆಯಾಗಿದೆ.

    ಪರಮೇಶ್ವರ್ ಬೋರಾಳೆ (22) ಈಜಲು ಹೋಗಿದ್ದ ಯುವಕ. ನೀರಿನಲ್ಲಿ ಮುಳಗಿ ನಿನ್ನೆ ನಾಪತ್ತೆಯಾಗಿದ್ದು ತಡರಾತ್ರಿ ಮೃತದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ನುರಿತ ಈಜುಗಾರರು ಹಲವು ಗಂಟೆಗಳಿಂದ ಸತತವಾಗಿ ಶೋಧ ಕಾರ್ಯ ಮಾಡಿದ್ದು, ತಡರಾತ್ರಿ ಯುವಕನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಅಶ್ಲೀಲ ವೀಡಿಯೋ ಪೋಸ್ಟ್: ದೂರು ದಾಖಲು

    ಜಿಲ್ಲೆಯ ಭಾಲ್ಕಿ ತಾಲೂಕಿನ ತಳವಾಡ ಎಂ ಗ್ರಾಮದಲ್ಲಿ ಘಟನೆ ನಡೆದಿದೆ. ಒಂದು ವೇಳೆ ಮೃತದೇಹ ಸಿಗದೆ ಇದ್ದಿದ್ದರೆ, ಯುವಕನ ಹುಡುಕಾಟಕ್ಕೆ ಇಂದು ಎನ್.ಡಿ.ಆರ್.ಎಫ್ ತಂಡ ಭಾಲ್ಕಿಗೆ ಬರುವ ಸಾಧ್ಯತೆ ಇತ್ತು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಅಶ್ಲೀಲ ವೀಡಿಯೋ ಪೋಸ್ಟ್: ದೂರು ದಾಖಲು

    ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸತತ ಶೋಧ ಕಾರ್ಯ ಮಾಡಿ ಯುವಕನ ಮೃತದೇಹ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

  • ದೆಹಲಿಯಲ್ಲಿ ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ: 5 ಅಂಗಡಿಗಳು ಭಸ್ಮ

    ದೆಹಲಿಯಲ್ಲಿ ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ: 5 ಅಂಗಡಿಗಳು ಭಸ್ಮ

    ನವದೆಹಲಿ: ರಾಷ್ಟ್ರ ರಾಜಧಾನಿಯ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆಯೇ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮೂರು ಕಟ್ಟಡಗಳಿಗೆ ವ್ಯಾಪಿಸಿರುವ ಬೆಂಕಿಯಿಂದ 5 ಅಂಗಡಿಗಳು ಸುಟ್ಟು ಭಸ್ಮವಾಗಿವೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

    ಆಜಾದ್ ಮಾರುಕಟ್ಟೆಯಲ್ಲಿ ಸಂಭವಿಸಿರುವ ಅಗ್ನಿ ದುರಂತವನ್ನು 20 ಅಗ್ನಿಶಾಮಕ ದಳದ ವಾಹನಗಳ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ವಿಭಾಗೀಯ ಅಧಿಕಾರಿ ರಾಜಿಂದರ್ ಅತ್ವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ- ಪವರ್ ಕಟ್ ಮಾಡಿ ಕಿಡಿಗೇಡಿಗಳ ದುಷ್ಕೃತ್ಯ

    ಈ ನಡುವೆ ಆನಂದ್ ಪರ್ವತ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, 6 ಮಂದಿ ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಬಿ.ಎಲ್.ಕಪೂರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಸ್ಥಳದಲ್ಲಿ 10 ಅಗ್ನಿಶಾಮಕ ವಾಹನಗಳೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.

     

  • ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆ

    ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಜಾನುವಾರುಗಳ ರಕ್ಷಣೆ

    ಕೊಪ್ಪಳ: ಶಿವಪುರ ಬಳಿ ಇರುವ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಜಾನುವಾರುಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ

    ತುಂಗಭದ್ರಾ ಡ್ಯಾಂ ನಿಂದ ಒಂದು ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ನದಿಗೆ ಬಿಡುಗಡೆ ಮಾಡಲಾಗಿದ್ದ ಕಾರಣ ನದಿ ದಾಟಲು ಆಗದೇ ನಡುಗಡ್ಡೆಯಲ್ಲಿ ಮೂಕಪ್ರಾಣಿಗಳು ಸಿಲುಕಿಕೊಂಡು ಮಳೆ ಚಳಿಗೆ ರೋಧಿಸುತ್ತಿದ್ದವು. ಸರಿಯಾಗಿ ಅವುಗಳಿಗೆ ಆಹಾರವಿಲ್ಲದೆ ನಿತ್ರಾಣಗೊಂಡಿದ್ದವು. ಈ ಹಿನ್ನೆಲೆ ಅಲ್ಲಿನ ಜಾನುವಾರು ಪಾಲಕರು ಕರೆ ಮಾಡಿ ತಮ್ಮ ಪರಿಸ್ಥಿತಿಯ ಬಗ್ಗೆ ಕೇಳಿಕೊಂಡಾಗ ಜಿಲ್ಲಾಧಿಕಾರಿಗಳು ಅವರ ರಕ್ಷಣೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಅಕಾಲಿಕ ಮಳೆ – ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಸಭೆ ಕರೆದ ಸಿಎಂ

    ಅಗ್ನಿಶಾಮಕ ಸಿಬ್ಬಂದಿ ಬೋಟ್ ಮೂಲಕ ಜನರನ್ನು, ಜಾನುವಾರುಗಳನ್ನು ಮತ್ತು ಅವರ ಸಾಮಾಗ್ರಿಗಳನ್ನು ಸಾಗಿಸಿ ರಕ್ಷಿಸಿದ್ದಾರೆ.

    ಈ ಕುರಿತು ಮಾತನಾಡಿದ ಜಾನುವಾರು ಪಾಲಕರು, ನಾವು 15 ದಿನಗಳ ಹಿಂದೆಯೇ ಆ ದಡಕ್ಕೆ ಹೋಗಿದ್ದೆವು. ನಾವು ಅಲ್ಲಿ ಹೋಗಿದ 10 ದಿನದ ಬಳಿಕ ಇಲ್ಲಿ ಪೂರ್ತಿಯಾಗಿ ನೀರು ತುಂಬಿಕೊಂಡಿದೆ. ಅದು ಅಲ್ಲದೇ ನಾವು ತೆಗೆದುಕೊಂಡು ಹೋಗಿದ್ದ ದಿನಸಿಗಳು ಸಹ ಖಾಲಿಯಾಗಿ, ಜಾನುವಾರುಗಳಿಗೂ ಮೇವಿನ ಸಮಸ್ಯೆ ಉಂಟಾಯಿತು. ಈ ಹಿನ್ನೆಲೆ ನಾವು ಕರೆ ಮಾಡಿ ರಕ್ಷಣೆ ಮಾಡುವಂತೆ ಮನವಿ ಮಾಡಿಕೊಂಡೆವು ಎಂದು ತಿಳಿಸಿದರು.

    ಈ ವೇಳೆ ಸರಿಯಾದ ರಕ್ಷಣೆಯಿಲ್ಲದೇ ಕೆಲವು ಜಾನುವಾರುಗಳು ಮೃತಪಟ್ಟಿದ್ದು, ಇನ್ನುಳಿದ ಜಾನುವಾರುಗಳ ಚಿಕಿತ್ಸೆಗೆ ಪಶು ವೈದ್ಯರ ಅವಶ್ಯಕತೆ ಇದೆ ಎಂದು ತಿಳಿಸಿದ್ದೇವೆ ಎಂದರು. ಇದನ್ನೂ ಓದಿ: ನಡುಗಡ್ಡೆಯಲ್ಲಿ ಸಿಲುಕಿದ 500 ದನಕರುಗಳು – ಹಸುಗಳನ್ನು ಕಾಪಾಡುವಂತೆ ಡಿಸಿಗೆ ಮನವಿ

  • ಬೆಂಗಳೂರಿನಲ್ಲಿ ತಪ್ಪಿದ ದೊಡ್ಡ ದುರಂತ – ಇದ್ದಕಿದ್ದಂತೆ ಕುಸಿದ ಮನೆ

    ಬೆಂಗಳೂರಿನಲ್ಲಿ ತಪ್ಪಿದ ದೊಡ್ಡ ದುರಂತ – ಇದ್ದಕಿದ್ದಂತೆ ಕುಸಿದ ಮನೆ

    ಬೆಂಗಳೂರು: ಇದ್ದಕ್ಕಿಂದಂತೆ ಮನೆ ಕುಸಿದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‍ನಲ್ಲಿ ನಡೆದಿದೆ. ಇದನ್ನೂ ಓದಿ: ಕಿರುತೆರೆ ಖಡಕ್ ಖಳನಟ ಈಗ ಬೆಳ್ಳಿತೆರೆಯ ನಾಯಕನಟ – ‘ಬಹುಕೃತಂ ವೇಷಂ’ನಲ್ಲಿ ಶಶಿಕಾಂತ್ ಹೊಸ ಅವತಾರ

    building collapse

    ಈ ಕಟ್ಟಡ ಮಾಲೀಕ ಸುರೇಶ್‍ರವರಿಗೆ ಸೇರಿದ್ದಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆ ಮನೆ ಬಾಗಿತ್ತು. ಅಲ್ಲದೇ ಎರಡು ವಾರದ ಹಿಂದೆ ಕಟ್ಟದಲ್ಲಿ ವಾಸವಾಗಿದ್ದ ಎಲ್ಲರನ್ನು ಖಾಲಿ ಮಾಡಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಮನೆ ವಾಲುವುದಕ್ಕೆ ಪ್ರಾರಂಭವಾಗಿದೆ. ವಿಚಾರ ತಿಳಿದು ಸ್ಥಳೀಯ ನಿವಾಸಿಗಳು ಕೂಡಲೇ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸುವಷ್ಟರಲ್ಲಿ ಮನೆ ಕುಸಿದು ಬಿದ್ದಿದೆ.

    building collapse

    ಈ ಕಟ್ಟಡದಲ್ಲಿ ಸುಮಾರು 70 ಮಂದಿ ವಾಸವಾಗಿದ್ದು, ಎಲ್ಲರೂ ಮೆಟ್ರೋ ಕಾಮಗಾರಿ ಮಾಡುವ ಕಾರ್ಮಿಕರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ನಗರದ ವಿಲ್ಸನ್ ಗಾರ್ಡನ್‍ನ ಲಕ್ಕ ಸಂದ್ರದ 14ನೇ ಕ್ರಾಸ್ ಬಳಿ ನಡೆದಿದೆ. ಇದನ್ನೂ ಓದಿ: ಒಳ ಉಡುಪು ಜಾಹೀರಾತಿನಲ್ಲಿ ಅಭಿನಯ – ಟ್ರೋಲ್ ಕೆಂಗಣ್ಣಿಗೆ ಗುರಿಯಾದ ರಶ್ಮಿಕಾ ಮಂದಣ್ಣ

    ಸದ್ಯ ಸ್ಥಳಕ್ಕೆ ಬಿಬಿಎಂಪಿ ಜಂಟಿ ಆಯುಕ್ತ ವೀರಭದ್ರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬಿಲ್ಡಿಂಗ್ ಗೆ ಎಲ್ಲೂ ಡ್ಯಾಮೇಜ್ ಆಗಿಲ್ಲ. ಇದು ಕೇವಲ ಹಳೇ ಬಿಲ್ಡಿಂಗ್ ಎಂದು ರಿಪೋರ್ಟ್‍ನಲ್ಲಿ ತಿಳಿಸಿರುವುದಾಗಿ ಹೇಳಿದ್ದಾರೆ.

  • ಕಟ್ಟಡ ಕುಸಿತ- ಹಲವರು ನಾಪತ್ತೆ

    ಕಟ್ಟಡ ಕುಸಿತ- ಹಲವರು ನಾಪತ್ತೆ

    ನವದೆಹಲಿ: 4 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ ಇಬ್ಬರು ಮಕ್ಕಳ ಶವ ಪತ್ತೆ ಯಾಗಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ನವದೆಹಲಿಯ ಸಬ್ಜಿ ಮಂಡಿ ಏರಿಯಾದಲ್ಲಿ ನಡೆದಿದೆ.

    ಕಟ್ಟಡ ಕುಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದರು. ಅವರಲ್ಲಿ ಇಬ್ಬರು ಮಕ್ಕಳ ಶವಗಳನ್ನು ಹೊರಗೆ ತೆಗೆಯಲಾಗಿದೆ. 7 ಅಗ್ನಿಶಾಮಕದಳದ ವಾಹನಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ ವೃದ್ಧರೊಬ್ಬರನ್ನು ರಕ್ಷಿಸಲಾಗಿದ್ದು, ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಹಿಳಾ ಪೇದೆ ಜೊತೆ ಸ್ವಿಮ್ಮಿಂಗ್ ಪೂಲಲ್ಲಿ ಹಿರಿಯ ಪೊಲೀಸ್ ಅಧಿಕಾರಿಯ ಮಿಲನ

    ಇಂದು ಬೆಳಗ್ಗೆ 11.50ಕ್ಕೆ ದೆಹಲಿಯ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಕಟ್ಟಡದಲ್ಲಿ ಕಾಮಗಾರಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ಹೀಗಾಗಿ, ಕಟ್ಟಡದೊಳಗೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರು ಅವಶೇಷಗಳಡಿ ಸಿಲುಕಿದ್ದಾರೆ. ಕಟ್ಟಡದ ಕೆಳಗೆ ನಿಲ್ಲಿಸಿದ್ದ ಕಾರು ಕೂಡ ಕಟ್ಟಡದ ಅಡಿಯಲ್ಲಿ ಸಿಲುಕಿದೆ. ಇದನ್ನೂ ಓದಿ: ಆಸ್ಕರ್ ಫರ್ನಾಂಡಿಸ್ ನಡೆದು ಬಂದ ಹಾದಿ

    ಸಬ್ಜಿ ಮಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿರುವ ಘಟನೆ ಬಹಳ ಬೇಸರದ ಸಂಗತಿ. ರಕ್ಷಣಾ ಕಾರ್ಯಾಚರಣೆಗೆ ದೆಹಲಿ ಆಡಳಿತಾಧಿಕಾರಿಗಳು ಬಹಳ ಪ್ರಯತ್ನಿಸುತ್ತಿದ್ದಾರೆ. ನಾನೇ ಖುದ್ದಾಗಿ ಪರಿಸ್ಥಿತಿಯ ಬಗ್ಗೆ ಗಮನ ಹರಿಸುತ್ತಿದ್ದೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದನ್ನೂ ಓದಿ: ಕಚ್ಛಾ ತೈಲ ಬೆಲೆ ಏರಿಕೆ ನೆಪ ಹೇಳಿ ಪೆಟ್ರೋಲ್, ಡೀಸೆಲ್ ದರ ಏರಿಕೆ: ಸಿದ್ದರಾಮಯ್ಯ

    ಪ್ರತ್ಯಕ್ಷದರ್ಶಿಯ ಪ್ರಕಾರ, ಇದ್ದಕ್ಕಿದ್ದಂತೆ ಕಟ್ಟಡ ಶೇಕ್ ಆಗಿದ್ದು, ಆಗ ಕರೆಂಟ್ ಕೂಡ ಹೋಯಿತು. ನಂತರ ಕಟ್ಟಡ ನೆಲಸಮವಾಯಿತು. ಕಟ್ಟಡದ ಬಳಿ ಹೋಗುತ್ತಿದ್ದ ಮಕ್ಕಳ ಮೇಲೆ ಕೂಡ ಕಟ್ಟಡದ ಭಾಗಗಳು ಸಿಲುಕಿವೆ. ಕಾಮಗಾರಿ ವೇಳೆ ಕಟ್ಟಡದಲ್ಲಿದ್ದವರು ಈ ವೇಳೆ ಹೊರಬರಲಾರದೆ ಒಳಗೆ ಸಿಲುಕಿದ್ದಾರೆ. ಅವರ ಮೇಲೆ ಕಟ್ಟಡದ ಭಾಗಗಳು ಬಿದ್ದಿವೆ ಎನ್ನಲಾಗುತ್ತಿದೆ.