Tag: ಅಗ್ನಿಸಾಕ್ಷಿ ಸೀರಿಯಲ್‌

  • ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

    ದುಬೈ ಮರಳುಗಾಡಿನಲ್ಲಿ ನಟಿ ಫೋಟೋಶೂಟ್- ಬಾಲಿವುಡ್ ಬ್ಯೂಟಿಯಂತೆ ಮಿಂಚಿದ ಇಶಿತಾ

    ನಪ್ರಿಯ ‘ಅಮೃತಧಾರೆ’ (Amruthadaare) ಸೀರಿಯಲ್ ನಟಿ ಇಶಿತಾ ವರ್ಷ (Ishita Varsha) ದುಬೈ ಮರಳುಗಾಡಿನಲ್ಲಿ ಅದ್ಧೂರಿಯಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಬಾಲಿವುಡ್ ಬ್ಯೂಟಿಯಂತೆ ಕಂಗೊಳಿಸಿದ ನಟಿಯ ಕಂಡು ಫ್ಯಾನ್ಸ್ ಬೆರಗಾಗಿದ್ದಾರೆ. ಇದನ್ನೂ ಓದಿ:ರೀಲ್ಸ್ ವಿವಾದ: ನಮಗೆ ಪೊಲೀಸರ ದಿಕ್ಕು ತಪ್ಪಿಸೋ ಉದ್ದೇಶವಿಲ್ಲ ಎಂದ ವಿನಯ್ ಗೌಡ

    ಸದಾ ಒಂದಲ್ಲಾ ಒಂದು ಶೈಲಿಯಲ್ಲಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸೋ ಇಶಿತಾ ಇದೀಗ ದುಬೈಗೆ (Dubai) ಹಾರಿದ್ದಾರೆ. ಅಲ್ಲಿ ಮರುಳುಗಾಡಿನಲ್ಲಿ ನಿಂತು ವಿವಿಧ ಭಂಗಿಯಲ್ಲಿ ಫೋಟೋಶೂಟ್‌ ಮಾಡಿಸಿದ್ದಾರೆ. ರೆಡ್ ಕಲರ್ ಡ್ರೆಸ್ ಧರಿಸಿ ಬಾಲಿವುಡ್ ಬ್ಯೂಟಿಯಂತೆ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

    ಸ್ಟಾರ್ ನಟಿಯರನ್ನೇ ಸೆಡ್ಡು ಹೊಡೆಯುವಂತೆ ಇಶಿತಾ ನಯಾ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಬಳುವ ಬಳ್ಳಿಯಂತೆ ಮಿಂಚಿರೋ ಇಶಿತಾರನ್ನು ಕಂಡು ಪಡ್ಡೆಹುಡುಗರು ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ರೀಲ್ಸ್ ಮಾಡಿದ ಜಾಗದಲ್ಲಿ ವಿನಯ್‌, ರಜತ್‌ರನ್ನು ಸ್ಥಳ ಮಹಜರಿಗೆ ಕರೆತಂದ ಪೊಲೀಸರು

    ‘ಅಗ್ನಿಸಾಕ್ಷಿ’ ಸೀರಿಯಲ್‌ನಲ್ಲಿ ಮಾಯಾ ಪಾತ್ರಧಾರಿಯಾಗಿ ಸತತ 7 ವರ್ಷಗಳ ಕಾಲ ರಂಜಿಸಿದರು. ಇಂದಿಗೂ ಅವರ ಪಾತ್ರವನ್ನು ಜನರು ಸ್ಮರಿಸುತ್ತಾರೆ. ಅಷ್ಟರ ಮಟ್ಟಿಗೆ ಈ ಸೀರಿಯಲ್ ಸೂಪರ್ ಹಿಟ್ ಆಗಿತ್ತು.

    ಪ್ರಸ್ತುತ ‘ಅಮೃತಧಾರೆ’ ಸೀರಿಯಲ್‌ನಲ್ಲಿ ಗೌತಮ್ ದಿವಾನ್ ತಂಗಿಯಾಗಿ ಇಶಿತಾ ನಟಿಸುತ್ತಿದ್ದಾರೆ. ರೀಪ್ಲೇಸ್‌ಮೆಂಟ್ ಪಾತ್ರಕ್ಕೆ ಅವರು ಎಂಟ್ರಿ ಕೊಟ್ಟಿದ್ರೂ ಕೂಡ ಅದ್ಭುತವಾಗಿ ನಟಿಸುತ್ತಿದ್ದಾರೆ. ಅವರ ನಟನೆ ಮತ್ತೆ ಪ್ರೇಕ್ಷಕರ ಮನಗೆದ್ದಿದೆ.

    ನೃತ್ಯ ಸಂಯೋಜಕ ಮುರುಗಾನಂದ ಜೊತೆ ಇಶಿತಾ ಮದುವೆ ಆಗಿದ್ದಾರೆ. ಅವರ ಕೂಡ ಬಣ್ಣದ ಲೋಕದಲ್ಲಿ ಸ್ಟಾರ್ ನಟರ ಸಿನಿಮಾಗಳಿಗೆ ಕೆಲಸ ಮಾಡ್ತಿರೋದ್ರಿಂದ ಪತ್ನಿಯ ಕೆರಿಯರ್‌ಗೆ ಪ್ರೋತ್ಸಾಹಿಸುತ್ತಿದ್ದಾರೆ.

  • ಪ್ರೇಮಿಗಳ ದಿನದಂದು 2ನೇ ಮಗುವಿನ ಫೋಟೋ ರಿವೀಲ್ ಮಾಡಿದ ‘ಅಗ್ನಿಸಾಕ್ಷಿ’ ನಟ

    ಪ್ರೇಮಿಗಳ ದಿನದಂದು 2ನೇ ಮಗುವಿನ ಫೋಟೋ ರಿವೀಲ್ ಮಾಡಿದ ‘ಅಗ್ನಿಸಾಕ್ಷಿ’ ನಟ

    ಸ್ಯಾಂಡಲ್‌ವುಡ್ ನಟ ವಿಜಯ್ ಸೂರ್ಯ (Vijay Suriya) ಅವರು ಇದೀಗ 2ನೇ ಮಗುವಿನ ಮುಖವನ್ನು ರಿವೀಲ್ ಮಾಡಿದ್ದಾರೆ. ಪ್ರೇಮಿಗಳ ದಿನದಂದು (Valentine’s Day) ಕುಟುಂಬದ ಮುದ್ದಾದ ಫೋಟೋವನ್ನ ‘ಅಗ್ನಿಸಾಕ್ಷಿ’ ನಟ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಭಾವಿ ಪತಿ ಜೊತೆ ಅರ್ಜುನ್ ಸರ್ಜಾ ಪುತ್ರಿಯ ಬರ್ತ್‌ಡೇ ಸಂಭ್ರಮ

    ಫೆ.14 ವಿಜಯ್ ಸೂರ್ಯ ಪಾಲಿಗೆ ವಿಶೇಷ ದಿನ. ವ್ಯಾಲೆಂಟೈನ್ ಡೇ ಜೊತೆಗೆ ವಿಜಯ್ ಸೂರ್ಯ ದಾಂಪತ್ಯ ಬದುಕಿಗೆ ಕಾಲಿಟ್ಟ ದಿನವಾಗಿದೆ. ಗುಳಿ ಕೆನ್ನೆ ಹುಡುಗಿ ಚೈತ್ರಾ ಶ್ರೀನಿವಾಸ್ ಜೊತೆ ವಿಜಯ್ ಸೂರ್ಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟು 5 ವರ್ಷಗಳಾಗಿವೆ. ಈ ಶುಭ ಸಂದರ್ಭದಲ್ಲಿ 2ನೇ ಮಗುವಿನ ಮುಖವನ್ನು ನಟ ರಿವೀಲ್ ಮಾಡಿದ್ದಾರೆ.

    ಮೊದಲ ಮಗುವಿನ ಹೆಸರು ಸೋಹನ್ ಸೂರ್ಯ, 2ನೇ ಮಗುವಿನ ಹೆಸರು ಕಾರ್ತಿಕೇಯ ಸೂರ್ಯ ಎಂದು ಹೆಸರಿಟ್ಟಿದ್ದಾರೆ. ಇದೀಗ ಕುಟುಂಬದ ಫೋಟೋ ಶೇರ್ ಮಾಡಿ ಹ್ಯಾಪಿ ಆ್ಯನಿವರ್ಸರಿ ಬಾಬಾ ಎಂದು ಪತ್ನಿಗೆ ವಿಜಯ್ ವಿಶ್ ಮಾಡಿದ್ದಾರೆ. 2ನೇ ಮಗುವಿನ ಕ್ಯೂಟ್ ಲುಕ್ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಇದನ್ನೂ ಓದಿ:ಅಬುದಾಬಿಯಲ್ಲಿ ಮೊಳಗಿತು ‘ಕರಟಕ ದಮನಕ’ ಸಾಂಗ್

    ‘ಅಗ್ನಿಸಾಕ್ಷಿ’ (Agnisakshi) ಸೀರಿಯಲ್ ಮೂಲಕ ವಿಜಯ್ ಸೂರ್ಯ ಕಿರುತೆರೆಗೆ ಪ್ರವೇಶಿಸಿದ್ದರು. ಇದೀಗ ತೆಲುಗು ಸೀರಿಯಲ್ ಜೊತೆಗೆ ಸಿನಿಮಾ ಮಾಡುತ್ತಾ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ‘ನಮ್ಮ ಲಚ್ಚಿ’ (Namma Lacchi) ಎಂಬ ಸೀರಿಯಲ್‌ನಲ್ಲಿ ವಿಜಯ್ ನಟಿಸುತ್ತಿದ್ದಾರೆ.

    ‘ಡಿಟೆಕ್ಟಿವ್ ತೀಕ್ಷ್ಣ’ ಎಂಬ ಸಿನಿಮಾದಲ್ಲಿ ವಿಜಯ್ ನಟಿಸಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ವಿಜಯ್ ಬಣ್ಣ ಹಚ್ಚಿದ್ದಾರೆ.

  • Bigg Boss Kannada: ದೊಡ್ಮನೆ ಆಟಕ್ಕೆ ಕಾಲಿಡುತ್ತಾರಾ ರಾಜೇಶ್‌ ಧ್ರುವ- ನಟ ಪ್ರತಿಕ್ರಿಯೆ

    Bigg Boss Kannada: ದೊಡ್ಮನೆ ಆಟಕ್ಕೆ ಕಾಲಿಡುತ್ತಾರಾ ರಾಜೇಶ್‌ ಧ್ರುವ- ನಟ ಪ್ರತಿಕ್ರಿಯೆ

    ನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss Kannada 10) ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಯಾರೆಲ್ಲಾ ಸೆಲೆಬ್ರಿಟಿಗಳು ಈ ಬಾರಿ ದೊಡ್ಮನೆಗೆ ಬರುತ್ತಾರೆ ಎಂಬುದರ ಬಗ್ಗೆ ಅಭಿಮಾನಿಗಳಲ್ಲಿ ಕೌತುಕ ಮನೆ ಮಾಡಿದೆ. ಹೀಗಿರುವಾಗ ‘ಅಗ್ನಿಸಾಕ್ಷಿ’ (Agnisakshi) ಖ್ಯಾತಿಯ ರಾಜೇಶ್ ಧ್ರುವ (Rajesh Dhruva), ದೊಡ್ಮನೆಗೆ ಕಾಲಿಡುವ ಬಗ್ಗೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ರಾಜೇಶ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಗೆ ನಾನು ಹೋಗುತ್ತಿಲ್ಲ: ನಟಿ ರಂಜನಿ ರಾಘವನ್ ಸ್ಪಷ್ಟನೆ

    ಬಿಗ್ ಬಾಸ್‌ಗೆ ಬರಲಿರುವ ಅಂದಾಜಿಸಲ್ಪಟ್ಟ ಸ್ಪರ್ಧಿಗಳ ಪಟ್ಟಿಯಲ್ಲಿ ನನ್ನ ಹೆಸರು ಚಾಲ್ತಿಯಲ್ಲಿದೆ ಅಂತಾ ತುಂಬಾ ಜನ ವಿಶ್ ತಿಳಿಸುತ್ತಾ ಇದ್ದೀರಿ, ಆದರೆ ನಾನು ಬಿಗ್ ಬಾಸ್‌ ಶೋಗೆ ಹೋಗುತ್ತಿಲ್ಲ. ಅದಕ್ಕೆ ಕಾರಣ ಕಿರುತೆರೆಯಲ್ಲಿ ಒಂದೊಳ್ಳೆ ಪಾತ್ರದ ಮೂಲಕ ಮತ್ತೆ ಸಕ್ರಿಯ ಆಗಿದ್ದೀನಿ, ಉಳಿದೆಲ್ಲ ಮಾಹಿತಿ ಶೀಘ್ರದಲ್ಲಿ ತಿಳಿಸುವೆ. ನಿಮ್ಮ ಹಾರೈಕೆ- ಪ್ರೀತಿ ಸದಾ ನನ್ನ ಜೊತೆಯಿರಲಿ, ಧನ್ಯೋಸ್ಮಿ ಎಂದು ರಾಜೇಶ್ ಧ್ರುವ ಬರೆದುಕೊಂಡಿದ್ದಾರೆ. ಈ ಮೂಲಕ ಬಿಗ್ ಬಾಸ್‌ಗೆ ಹೋಗುವ ಸುದ್ದಿಗೆ ನಟ ಬ್ರೇಕ್ ಹಾಕಿದ್ದಾರೆ.

    ಜನಪ್ರಿಯ ‘ಅಗ್ನಿಸಾಕ್ಷಿ’ ಸೀರಿಯಲ್‌ನಲ್ಲಿ ರಾಜೇಶ್ ಪಾತ್ರಕ್ಕೆ ಪ್ರಾಮುಖ್ಯತೆ ಇತ್ತು. ಅವರ ಪಾತ್ರ ಪ್ರೇಕ್ಷರ ಗಮನ ಸೆಳೆದಿತ್ತು. ನಾಯಕ ನಟ ಸಿದ್ಧಾರ್ಥ್ ಪಾತ್ರದಷ್ಟೇ ಇವರ ಪಾತ್ರ ಕೂಡ ಹೈಲೆಟ್ ಆಗಿತ್ತು.

    ಸರಯೂ, ಅರಮನೆ ಗಿಳಿ, ಸೇರಿದಂತೆ ಹಲವು ಸೀರಿಯಲ್ ಮತ್ತು ರಿಯಾಲಿಟಿ ಶೋನಲ್ಲಿ ರಾಜೇಶ್ ಕಾಣಿಸಿಕೊಂಡಿದ್ದಾರೆ. ‘ಶ್ರೀ ಬಾಲಾಜಿ ಸ್ಟುಡಿಯೋ’ ಚಿತ್ರದ ಮೂಲಕ ನಟ ಗಮನ ಸೆಳೆದಿದ್ದರು. ಈ ಚಿತ್ರ ಮಲಯಾಳಂ ಭಾಷೆಯಲ್ಲೂ ಡಬ್ ಆಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆಲುಗು ಬಿಗ್ ಬಾಸ್‌ಗೆ ಕನ್ನಡದ ‘ಅಗ್ನಿಸಾಕ್ಷಿ’ ನಟಿ

    ತೆಲುಗು ಬಿಗ್ ಬಾಸ್‌ಗೆ ಕನ್ನಡದ ‘ಅಗ್ನಿಸಾಕ್ಷಿ’ ನಟಿ

    ನ್ನಡದ ಅಗ್ನಿಸಾಕ್ಷಿ, ರುಕ್ಕು ಸೀರಿಯಲ್‌ನಲ್ಲಿ ನಟಿಸಿದ ಶೋಭಾ ಶೆಟ್ಟಿ (Shobha Shetty) ಇದೀಗ ತೆಲುಗಿನ ಬಿಗ್ ಬಾಸ್ ಮನೆಗೆ (Bigg Boss House) ಕಾಲಿಟ್ಟಿದ್ದಾರೆ. ತೆಲುಗು ಸೀರಿಯಲ್‌ಗಳ ಮೂಲಕ ಗುರುತಿಸಿಕೊಂಡಿದ್ದ ನಟಿ, ಈಗ ನಾಗಾರ್ಜುನ (Nagarjuna) ನಿರೂಪಣೆ ಬಿಗ್ ಬಾಸ್ ಶೋಗೆ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:‘ಮಾರ್ಟಿನ್’ ಧ್ರುವ ಜೊತೆ ಸೊಂಟ ಬಳುಕಿಸಿದ ಜಾರ್ಜಿಯಾ ಆಂಡ್ರಿಯಾನಿ

    ತೆಲುಗಿನಲ್ಲಿ ದೊಡ್ಮನೆ ಆಟ ಆರಂಭವಾಗಿದೆ. ಬಿಗ್ ಬಾಸ್ ಸೀಸನ್ 7ಗೆ (Bigg Boss Telugu 7) ಭಾನುವಾರ (ಸೆ.3) ಚಾಲನೆ ಸಿಕ್ಕಿದೆ. ಶಕೀಲಾ, ಕಿರಣ್ ರಾಥೋಡ್ ಇರುವ ಈ ಸೀಸನ್‌ನಲ್ಲಿ ಕನ್ನಡದ ಯುವ ನಟಿ ಶೋಭಾ ಶೆಟ್ಟಿ ಕೂಡ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ದೊಡ್ಮನೆಗೆ ಗ್ಲ್ಯಾಮರ್ ತುಂಬಲು ಶೋಭಾ ಕೂಡ ಸಾಥ್ ನೀಡಿದ್ದಾರೆ.

    ಈ ಶೋ ಶುರುವಾಗುವ ಮುನ್ನವೇ ಶೋಭಾ ಶೆಟ್ಟಿ ಮನೆಗೆ ಹೋಗುತ್ತಾರೆ ಎಂಬ ಅಂತೆ ಕಂತೆ ಸುದ್ದಿಯಿತ್ತು. ಈಗ ಸ್ಪಷ್ಟನೆ ಸಿಕ್ಕಿದೆ. ತೆಲುಗು ಪ್ರೇಕ್ಷಕರನ್ನ ಕನ್ನಡದ ನಟಿ ಗೆದ್ದು ಬೀಗಲಿ ಎಂಬುದೇ ಕನ್ನಡ ಸಿನಿ ಪ್ರೇಮಿಗಳ ಆಶಯ.

    ಅಗ್ನಿಸಾಕ್ಷಿ (Agnisakshi) ಸೀರಿಯಲ್‌ನಲ್ಲಿ ನಾಯಕಿ ವೈಷ್ಣವಿ ಗೌಡ (Vaishnavi Gowda) ಅಲಿಯಾಸ್ ಸನ್ನಿಧಿ ಸಹೋದರಿ ತನು ಪಾತ್ರದಲ್ಲಿ ಶೋಭಾ ಶೆಟ್ಟಿ ನಟಿಸಿದ್ದರು. ತೆಲುಗು ಕಿರುತೆರೆಯಲ್ಲಿ ನಟಿಗೆ ಒಳ್ಳೆಯ ಫ್ಯಾನ್ ಬೇಸ್ ಇದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]