Tag: ಅಘ್ಘಾನಿಸ್ತಾನ

  • ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್

    ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್

    ಕಾಬೂಲ್: ಮಹಿಳಾ ಶಿಕ್ಷಣಕ್ಕೆ (Women’s Education) ನಿಷೇಧ ಹೇರಿರುವ ತಾಲಿಬಾನ್ (Taliban) ಸರ್ಕಾರ ಇದೀಗ ಅಘ್ಘಾನಿಸ್ತಾನದಲ್ಲಿ (Afghanistan) ವಿಶ್ವವಿದ್ಯಾಲಯದ (University) ಪ್ರವೇಶ ಪರೀಕ್ಷೆಗೆ (Entrance Exam) ವಿದ್ಯಾರ್ಥಿನಿಯರು (Female Students) ಹಾಜರಾಗದಂತೆ ಸೂಚಿಸಿದೆ.

    ಫೆಬ್ರವರಿ ತಿಂಗಳಲ್ಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಈ ನಡುವೆ ಇದೀಗ ವಿದ್ಯಾರ್ಥಿನಿಯರು ಯುನಿವರ್ಸಿಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ತಾಲಿಬಾನ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಪ್ರಬಲ ಭೂಕಂಪ – 7 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

    ತಾಲಿಬಾನ್ ಶಿಕ್ಷಣ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ಸರ್ಕಾರ ಆದೇಶ ಹೊರಡಿಸುವವರೆಗೆ ಮಹಿಳಾ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಪತ್ನಿ ಕೊಲೆ – ಆರೋಪಿ ಪತಿಯಿಂದ ರೋಚಕ ರಹಸ್ಯ ಬಯಲು

    ಡಿಸೆಂಬರ್‌ನಲ್ಲಿ ತಾಲಿಬಾನ್ ಸರ್ಕಾರ ಮುಂದಿನ ಸೂಚನೆ ಬರುವವರೆಗೆ ಎಲ್ಲಾ ಮಹಿಳೆಯರಿಗೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಹಾಜರಾಗುವುದನ್ನು ನಿಷೇಧಿಸಿತ್ತು. ಅಫ್ಘಾನಿಸ್ತಾನದಲ್ಲಿ 6ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿನಿಯರ ಮೇಲೆ ಸಂಪೂರ್ಣ ನಿಷೇಧಕ್ಕೆ ತಾಲಿಬಾನ್ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನೆಗಳು ನಡೆದಿತ್ತು. ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದರು.

    ತಾಲಿಬಾನ್‍ನ ಉನ್ನತ ಶಿಕ್ಷಣ ಸಚಿವಾಲಯ ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲೆ ಇತ್ತೀಚೆಗೆ ದಬ್ಬಾಳಿಕೆಯನ್ನು ಹೆಚ್ಚಿಸುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ನಿಷೇಧವನ್ನು ಹೇರಿದೆ. ಇದು ಅಂತಾರಾಷ್ಟ್ರೀಯವಾಗಿ ಭಾರೀ ಟೀಕೆಗೆ ಕಾರಣವಾಗಿದೆ. 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ಕ್ರಮಗಳನ್ನು ವ್ಯಾಪಕವಾಗಿ ಜಾರಿಗೆ ತಂದಿದೆ. ಪ್ರಾರಂಭದಲ್ಲಿ ಮಧ್ಯಮ ಹಾಗೂ ಪ್ರೌಢಶಾಲೆಯಿಂದ ಹುಡುಗಿಯರನ್ನು ನಿಷೇಧಿಸಲಾಗಿತ್ತು. ಬಳಿಕ ಉದ್ಯೋಗದಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ಭಾರತದ ರೋಷವೇಶ – ಭರ್ಜರಿ ಗೆಲುವಿನೊಂದಿಗೆ ಟೂರ್ನಿಗೆ ಗುಡ್ ಬೈ

    ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ ಭಾರತದ ರೋಷವೇಶ – ಭರ್ಜರಿ ಗೆಲುವಿನೊಂದಿಗೆ ಟೂರ್ನಿಗೆ ಗುಡ್ ಬೈ

    ದುಬೈ: ಏಷ್ಯಾಕಪ್‍ನ (Asia Cup 2022) ಸೂಪರ್ ಫೋರ್ ಹಂತದ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದ್ದ ಪಂದ್ಯದಲ್ಲಿ ವಿರಾಟ್ ಕೊಹ್ಲಿಯ (Virat Kohli)  ಭರ್ಜರಿ ಶತಕ ಮತ್ತು ಭುವನೇಶ್ವರ್ ಕುಮಾರ್ ಮಾರಕ ದಾಳಿಯ ಪರಿಣಾಮವಾಗಿ ಅಘ್ಘಾನಿಸ್ತಾನ (Afghanistan) ವಿರುದ್ಧ ಭಾರತ (India) 101 ರನ್‍ಗಳ ಭರ್ಜರಿ ಜಯ ಸಾಧಿಸಿ ಟೂರ್ನಿಗೆ ಗುಡ್ ಬೈ ಹೇಳಿದೆ.


    ಭಾರತ ನೀಡಿದ 213 ರನ್‍ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಲಾಗದೆ ಬೆದರಿ ಬೆಂಡಾದ ಅಘ್ಘಾನಿಸ್ತಾನ ಕೇವಲ 111 ರನ್ ಸಿಡಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಇತ್ತ 101 ರನ್‍ಗಳ ಈ ಭರ್ಜರಿ ಗೆಲುವಿನೊಂದಿಗೆ ಭಾರತ ಟೂರ್ನಿಗೆ ಅಂತ್ಯ ಹಾಡಿದೆ. ಇದನ್ನೂ ಓದಿ: 2 ವರ್ಷ 9 ತಿಂಗಳು 16 ದಿನಗಳ ಬಳಿಕ ಕೊಹ್ಲಿ ಶತಕ – ಟಿ20ಯಲ್ಲಿ ಚೊಚ್ಚಲ 100

    ಬುಸುಗುಟ್ಟಿದ ಭುವಿ:
    ಕಳೆದೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾದ ವಿಲನ್ ಆಗಿ ಬಿಂಬಿತರಾಗಿದ್ದ ಭುವನೇಶ್ವರ್ ಕುಮಾರ್ ಇಂದಿನ ಪಂದ್ಯದಲ್ಲಿ ಮಾರಕ ಬೌಲಿಂಗ್‍ನಿಂದ ಅಘ್ಘಾನಿಸ್ತಾನ ತಂಡಕ್ಕೆ ನೀರು ಕುಡಿಸಿದರು. ಆರಂಭದ ಓವರ್‌ನಿಂದಲೇ ಅಘ್ಘಾನಿಸ್ತಾನಕ್ಕೆ ಕಾಟ ಕೊಟ್ಟ ಭುವಿ ಮೊದಲ ಓವರ್‌ನಲ್ಲಿ ಎರಡು ವಿಕೆಟ್ ಬೇಟೆಯಾಡಿದರು. ಆರಂಭಿಕರಿಬ್ಬರು ಶೂನ್ಯ ಸುತ್ತಿದರೆ, ಆ ಬಳಿಕ ಬಂದ 3 ಜನ ಒಂದಂಕಿ ಮೊತ್ತಕ್ಕೆ ಸುಸ್ತಾದರು. ಇತ್ತ ಭುವಿ 4 ಓವರ್ ಎಸೆದು 4 ರನ್ ನೀಡಿ 5 ವಿಕೆಟ್ ಕಿತ್ತು ಮಿಂಚಿದರು.

    ಅಘ್ಘಾನಿಸ್ತಾನ ಪರ ರಶೀದ್ ಖಾನ್ 15 ರನ್ (19 ಎಸೆತ, 2 ಬೌಂಡರಿ) ಬಾರಿಸಿ ವಿಕೆಟ್ ಕಳೆದುಕೊಂಡರು. ಇತ್ತ ಇಬ್ರಾಹಿಂ ಜದ್ರಾನ್ 64 ರನ್ ( 59 ಎಸೆತ, 4 ಬೌಂಡರಿ, 2 ಸಿಕ್ಸ್) ಸಿಡಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ ನಿಗದಿತ ಓವರ್‌ಗಳಲ್ಲಿ ಅಘ್ಘಾನಿಸ್ತಾನ 8 ವಿಕೆಟ್ ನಷ್ಟಕ್ಕೆ 111 ರನ್ ಸಿಡಿಸಿತು. ಇದನ್ನೂ ಓದಿ: ಬೌಲರ್‌ಗೆ ಬ್ಯಾಟ್‍ನಲ್ಲಿ ಹೊಡೆಯಲು ಮುಂದಾದ ಆಸಿಫ್ ಅಲಿ – ಜೋರಾದ #BanAsifAli ಕೂಗು

    ಭಾರತದ ಪರ ಭುವನೇಶ್ವರ್ ಕುಮಾರ್ 5 ವಿಕೆಟ್ ಕಿತ್ತು ಮಿಂಚಿದರೆ, ಅರ್ಶ್‍ದೀಪ್ ಸಿಂಗ್, ಆರ್. ಅಶ್ವಿನ್ ಮತ್ತು ದೀಪಕ್ ಹೂಡಾ ತಲಾ 1 ವಿಕೆಟ್ ಪಡೆದು ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾದರು.

    ಈ ಮೊದಲು ಟಾಸ್ ಗೆದ್ದ ಅಘ್ಘಾನಿಸ್ತಾನ ಭಾರತಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು. ಇದನ್ನು ಸರಿಯಾಗಿ ಬಳಸಿಕೊಂಡ ರಾಹುಲ್ ಪಡೆ ಆರಂಭದಲ್ಲೇ ಅಘ್ಘಾನಿಸ್ತಾನ ಬೌಲರ್‌ಗಳ ಬೆವರಿಳಿಸಿತು. ಆರಂಭಿಕರಾಗಿ ಬಂದ ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್ ಮನ ಬಂದಂತೆ ಬ್ಯಾಟ್‍ಬೀಸಿದರು. ಇದನ್ನೂ ಓದಿ: ಏಷ್ಯಾಕಪ್ ಸೋಲು, ರೊಚ್ಚಿಗೆದ್ದ ಅಭಿಮಾನಿಗಳು – #BoycottIPL ಟ್ರೆಂಡ್

    ನಾ ಮುಂದು ತಾ ಮುಂದು ಎಂಬಂತೆ ಬೌಂಡರಿ, ಸಿಕ್ಸರ್‌ಗಳ ಮಳೆ ಸುರಿಸಿದ ಇಬ್ಬರೂ ಕೂಡ ನೋಡ ನೋಡುತ್ತಿದ್ದಂತೆ ಅರ್ಧಶತಕದ ಗಡಿ ದಾಟಿದರು. ಒಂದು ಕಡೆ ಇನ್ನಷ್ಟು ಬಿರುಸಿನ ಬ್ಯಾಟಿಂಗ್‍ಗೆ ಮುಂದಾದ ರಾಹುಲ್ 62 ರನ್ (41 ಎಸೆತ, 6 ಬೌಂಡರಿ, 2 ಸಿಕ್ಸ್) ಬಾರಿಸಿ ಔಟ್ ಆದರು. ಈ ಮೊದಲು ಕೊಹ್ಲಿ ಜೊತೆ ಮೊದಲ ವಿಕೆಟ್‍ಗೆ 199 ರನ್ (76 ಎಸೆತ) ಜೊತೆಯಾಟವಾಡಿದರು. ಆ ಬಳಿಕ ಬಂದ ಸೂರ್ಯಕುಮಾರ್ ಒಂದು ಸಿಕ್ಸ್‌ಗೆ ಸುಸ್ತಾಗಿ ವಿಕೆಟ್ ಕಳೆದುಕೊಂಡರು.

    ಕೊಹ್ಲಿ ಚೊಚ್ಚಲ ಟಿ20 ಶತಕ:
    ಒಂದು ಕಡೆ ಪಟಪಟನೇ ಎರಡು ವಿಕೆಟ್ ಬಿದ್ದರೆ, ಇತ್ತ ಕೊಹ್ಲಿ ಪಟಾಕಿಯಂತೆ ಸಿಡಿಯಲಾರಂಭಿಸಿದರು. ಸಿಕ್ಕಸಿಕ್ಕ ಎಸೆತಗಳಿಗೆ ರೊಚ್ಚಿಗೆದ್ದು ಹೊಡೆಯಲಾರಂಭಿಸಿದ ಕೊಹ್ಲಿ ನೋಡನೋಡುತ್ತಿದ್ದಂತೆ 2 ವರ್ಷ 9 ತಿಂಗಳ ಶತಕದ ಬರ ನೀಗಿಸಿಕೊಂಡರು. ಭರ್ಜರಿ ಶತಕದ ಬಳಿಕವೂ ಆಡಿ ಭರ್ತಿ 20 ಓವರ್‌ಗಳ ಬಳಿಕ ಅಜೇಯ 122 ರನ್ (61 ಎಸೆತ, 12 ಬೌಂಡರಿ, 6 ಸಿಕ್ಸ್) ಚಚ್ಚಿ ಬಿಸಾಕಿದರು. ಇವರಿಗೆ ಉತ್ತಮ ಸಾಥ್ ನೀಡಿದ ಪಂತ್ 20 ರನ್ (16 ಎಸೆತ, 3 ಬೌಂಡರಿ) ಬಾರಿಸಿ ಅಜೇಯರಾಗಿ ಉಳಿದರು. ಅಂತಿಮವಾಗಿ 20 ಓವರ್‌ಗಳಲ್ಲಿ ಭಾರತ 2 ವಿಕೆಟ್‍ನಷ್ಟಕ್ಕೆ 212 ರನ್‍ಗಳ ಬೃಹತ್ ಮೊತ್ತ ಪೇರಿಸಿತು.

    ರನ್ ಏರಿದ್ದು ಹೇಗೆ:
    35 ಎಸೆತ 50 ರನ್
    68 ಎಸೆತ 100 ರನ್
    99 ಎಸೆತ 150 ರನ್
    115 ಎಸೆತ 200 ರನ್
    120 ಎಸೆತ 212 ರನ್

    Live Tv
    [brid partner=56869869 player=32851 video=960834 autoplay=true]

  • ಅಘ್ಘಾನ್ ಮಣಿಸಿದ ನ್ಯೂಜಿಲೆಂಡ್ ಸೆಮೀಸ್‍ಗೆ – ಭಾರತ ಮನೆಗೆ

    ಅಘ್ಘಾನ್ ಮಣಿಸಿದ ನ್ಯೂಜಿಲೆಂಡ್ ಸೆಮೀಸ್‍ಗೆ – ಭಾರತ ಮನೆಗೆ

    ದುಬೈ: ಸೆಮಿಫೈನಲ್‍ಗೇರಲು ಕಡೆಯ ಅವಕಾಶವನ್ನೂ ಸಂಪೂರ್ಣವಾಗಿ ಬಳಸಿಕೊಂಡ ನ್ಯೂಜಿಲೆಂಡ್ ತಂಡ ಅಘ್ಘಾನಿಸ್ತಾನ ವಿರುದ್ಧ 8 ವಿಕೆಟ್‍ಗಳ ಜಯದೊಂದಿಗೆ ಗ್ರೂಪ್-2ರಲ್ಲಿ ದ್ವಿತೀಯ ಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿತು. ಈ ಮೂಲಕ ಭಾರತದ ಸೆಮಿಫೈನಲ್ ಕನಸು ಭಗ್ನಗೊಂಡಿದೆ.


    ನ್ಯೂಜಿಲೆಂಡ್ ವಿರುದ್ಧ ಅಘ್ಘಾನಿಸ್ತಾನ ಗೆಲ್ಲುತ್ತಿದ್ದರೆ ಭಾರತ ತಂಡ ನಾಳೆಯ ಪಂದ್ಯದ ಫಲಿತಾಂಶವನ್ನು ಗಮನಿಸಿ ಸೆಮಿಫೈನಲ್ ಪ್ರವೇಶಿಸುವ ಅವಕಾಶವಿತ್ತು. ಆದರೆ ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆಲುವಿನೊಂದಿಗೆ ಈ ಅವಕಾಶ ಭಾರತಕ್ಕೆ ಕೈತಪ್ಪಿತು.

    ಅಘ್ಘಾನಿಸ್ತಾನ ನೀಡಿದ 125 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ನ್ಯೂಜಿಲೆಂಡ್ 18.1 ಓವರ್‍ ಗಳಲ್ಲಿ 125 ರನ್ ಸಿಡಿಸಿ ಗೆದ್ದು ಬೀಗಿತು. ನ್ಯೂಜಿಲೆಂಡ್ ಪರ ಕೇನ್ ವಿಲಿಯಮ್ಸನ್ 40 ರನ್ (42 ಎಸೆತ, 3 ಬೌಂಡರಿ) ಮತ್ತು ಡೆವೊನ್ ಕಾನ್ವೇ 36 ರನ್ ( 32 ಎಸೆತ, 4 ಬೌಂಡರಿ) ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದನ್ನೂ ಓದಿ: ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಗುಡ್ ಬೈ ಹೇಳಲು ಮುಂದಾದ್ರಾ ಕ್ರಿಸ್ ಗೇಲ್?

    ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಅಘ್ಘಾನಿಸ್ತಾನ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ಸಾಗಿತು. ಕೇವಲ 19 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ನಜೀಬುಲ್ಲಾ ಜದ್ರಾನ್ ಆಸರೆಯಾದರು. ಒಂದು ಕಡೆ ವಿಕೆಟ್ ಉರುಳುತ್ತಿದ್ದರು ಇನ್ನೊಂದು ಕಡೆ ಭರ್ಜರಿ ಬ್ಯಾಟ್ ಬೀಸಿದ ಜದ್ರಾನ್ 73 ರನ್ (48 ಎಸೆತ, 6 ಬೌಂಡರಿ, 3 ಸಿಕ್ಸ್) ಸಿಡಿಸಿ ತಂಡದ ಮೊತ್ತವನ್ನು 100ರ ಗಡಿದಾಟಿಸಿ 18ನೇ ಓವರ್‍ ನಲ್ಲಿ ವಿಕೆಟ್ ಒಪ್ಪಿಸಿದರು.

    ಜದ್ರಾನ್‍ಗೆ ಗುಲ್ಬದಿನ್ ನಾಯಬ್ 15 ರನ್ (18 ಎಸೆತ, 1 ಬೌಂಡರಿ) ಮತ್ತು ಮೊಹಮ್ಮದ್ ನಬಿ 14 ರನ್ (20 ಎಸೆತ) ಸಿಡಿಸಿ ಸಾಥ್ ನೀಡಿದ್ದನ್ನು ಹೊರತು ಪಡಿಸಿ ಉಳಿದ 6 ಮಂದಿ ಆಟಗಾರರು ಒಂದಂಕಿ ಮೊತ್ತಕ್ಕೆ ಔಟ್ ಆದರು. ಪರಿಣಾಮ 20 ಓವರ್‍ ಗಳ ಅಂತ್ಯಕ್ಕೆ 8 ವಿಕೆಟ್ ಕಳೆದುಕೊಂಡು 124 ರನ್ ಕುಸಿತಕಂಡು ಸಾಧಾರಣ ಮೊತ್ತ ಕಲೆಹಾಕಿತು. ಇದನ್ನೂ ಓದಿ: ಟೀಂ ಇಂಡಿಯಾ ಸೆಮಿಫೈನಲ್ ಕನಸು ನನಸಾಗಲು ಇದೊಂದೇ ಮಾರ್ಗ

    ನ್ಯೂಜಿಲೆಂಡ್ ಪರ ಟ್ರೆಂಟ್ ಬೌಲ್ಟ್ 3 ವಿಕೆಟ್ ಕಿತ್ತು ಮಿಂಚಿದರೆ, ಟಿಮ್ ಸೌಥಿ 2 ವಿಕೆಟ್ ಬೇಟೆಯಾಡಿದರು. ಆಡಮ್ ಮಿಲ್ನೆ, ಜೇಮ್ಸ್ ನೀಶಮ್, ಇಶ್ ಸೋಧಿ ತಲಾ 1 ವಿಕೆಟ್ ಕಿತ್ತರು.

  • ದೇಶ ಸುರಕ್ಷಿತ ಅಲ್ಲ ಎಂದ ಖಾನ್‍ಗಳು ಅಫ್ಘಾನಿಸ್ತಾನಕ್ಕೆ ಹೋಗಲಿ: ಯತ್ನಾಳ್

    ದೇಶ ಸುರಕ್ಷಿತ ಅಲ್ಲ ಎಂದ ಖಾನ್‍ಗಳು ಅಫ್ಘಾನಿಸ್ತಾನಕ್ಕೆ ಹೋಗಲಿ: ಯತ್ನಾಳ್

    – ಡ್ರಗ್ಸ್ ಕೇಸ್‍ನಲ್ಲಿ ಕೈ ಹಾಗೂ ಬಿಜೆಪಿ ಶಾಸಕರು ಇದ್ದಾರೆ

    ವಿಜಯಪುರ: ದೇಶ ಸುರಕ್ಷಿತ ಅಲ್ಲ ಎಂದ ಖಾನ್‍ಗಳು ದೇಶ ಬಿಡಲಿ. ಅವ್ರೆಲ್ಲಾ ನೇರವಾಗಿ ಅಫ್ಘಾನಿಸ್ತಾನಕ್ಕೆ ಹೋಗಲಿ. ದೇಶದಲ್ಲಿನ ಹಿಂದೂಗಳು ಸಿನಿಮಾ ನೋಡುತ್ತಾರೆ. ಖಾನ್‍ಗಳು ಸಾವಿರಾರು ಕೋಟಿ ಗಳಿಸುತ್ತಾರೆ. ಅವರ ಮಕ್ಕಳೆಲ್ಲಾ ಹೀಗೆ ಮಜಾ ಮಾಡ್ಕೊಂಡು ದೇಶದ ವ್ಯವಸ್ಥೆಯನ್ನೇ ಕೆಡಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

    ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಅವರ ತಂದೆ ಶಾರೂಖ್ ಖಾನ್‍ರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಡ್ರಗ್ಸ್ ಮಾಫಿಯಾ ಭಯೋತ್ಪಾದನೆಯ ಒಂದು ಭಾಗ. ಸಿನಿಮಾ ನಟರು ಡ್ರಗ್ಸ್ ಮಾಫಿಯಾದ ಒಂದು ಭಾಗವಾಗಿದ್ದಾರೆ. ಡ್ರಗ್ಸ್ ಮೂಲಕ ಹಿಂದೂ ಯುವಕರನ್ನು ಟಾರ್ಗೆಟ್ ಮಾಡಲಾಗಿದೆ. ಯೌವನ ಹಾಳು ಮಾಡಲಾಗುತ್ತಿದೆ. ನಪುಂಸಕತ್ವ ಉಂಟು ಮಾಡಿ, ಹಿಂದೂಗಳ ಜನಸಂಖ್ಯೆ ಕಡಿಮೆ ಮಾಡಬೇಕು ಎನ್ನುವ ದುರುದ್ದೇಶ ಇದರ ಹಿಂದಿದೆ. ರಾಜ್ಯದಲ್ಲಿ ಡ್ರಗ್ಸ್ ಕೇಸನ್ನು ಮುಚ್ಚಿ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಕ್ಟೋಬರ್ 7 ರವರೆಗೆ ಆರ್ಯನ್ ಖಾನ್ ಎನ್‍ಸಿಬಿ ವಶಕ್ಕೆ- ಕೋರ್ಟ್‍ನಲ್ಲಿ ವಾದ- ಪ್ರತಿವಾದ ಹೇಗಿತ್ತು?

    ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ ಆದರೂ ಏನು ಮಾಡಲು ಆಗುತ್ತಿಲ್ಲ. ಎಬಿವಿಪಿ ಸಾಕಷ್ಟು ಹೋರಾಟ ಮಾಡುತ್ತಿದೆ. ನಮ್ಮ ಗೃಹ ಸಚಿವರು ದೇಶ ಭಕ್ತರಾಗಿದ್ದು, ಡ್ರಗ್ಸ್ ಮಾಫಿಯಾವನ್ನು ಸುಮ್ಮನೆ ಬಿಡಬಾರದು. ಬೆಂಗಳೂರು ಡ್ರಗ್ಸ್ ಪ್ರಕರಣದಲ್ಲೂ ಪ್ರಭಾವಿಗಳ ಮಕ್ಕಳು, ಸಿನಿಮಾ ನಟರು ಇದ್ದಾರೆ. ಡ್ರಗ್ಸ್ ಕೇಸ್‍ನಲ್ಲಿ ಸೀಮಿತ ತನಿಖೆ ನಡೆದಿದೆ. ತಮಗೆಷ್ಟು ಬೇಕೋ ಅಷ್ಟೇ ತನಿಖೆ ನಡೆಸಿದ್ದಾರೆ. ಆಳವಾಗಿ ತನಿಖೆ ನಡೆದಿದ್ದರೆ ಕೈ ಹಾಗೂ ಬಿಜೆಪಿ ಶಾಸಕರು ಇದರಲ್ಲಿ ಇದ್ದರು. ಡ್ರಗ್ಸ್ ಕೇಸ್‍ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲ ಶಾಸಕರ ಮಕ್ಕಳ ಹೆಸರು ಕೇಳಿ ಬಂದಿತ್ತು ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಬಂಧನದ ಬಳಿಕ ಪುತ್ರನ ಜೊತೆ 2 ನಿಮಿಷ ಮಾತಾಡಿದ ನಟ ಶಾರೂಖ್!

  • ಅಘ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರು ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ

    ಅಘ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರು ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ

    ಕಾಬೂಲ್: ತಾಲಿಬಾನಿಗಳ ಅಟ್ಟಹಾಸದ ಬಳಿಕ ಅಘ್ಘಾನಿಸ್ತಾನದಲ್ಲಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ನಡುವೆ ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಅವಕಾಶವಿದ್ದರೆ ಅಂತಹ ವಿವಿಗಳಲ್ಲಿ ಮಹಿಳೆಯರು ಶಿಕ್ಷಣ ಪಡೆಯಬಹುದು ಎಂದು ಅಘ್ಘಾನಿಸ್ತಾನದ ಶಿಕ್ಷಣ ಸಚಿವ ಶೇಖ್ ಅಬ್ದುಲ್ ಬಕಿ ಹಕ್ಕಾನಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

    ಅಘ್ಘಾನಿಸ್ತಾನದಲ್ಲಿ ಮಹಿಳೆಯರ ಶಿಕ್ಷಣ ಕುರಿತಾಗಿ ರೂಪಿಸಿರುವ ಹೊಸ ನಿಯಮಗಳನ್ನು ತಿಳಿಸಿರುವ ಹಕ್ಕಾನಿ, ಪುರುಷ ಮತ್ತು ಮಹಿಳೆಯರನ್ನು ಪ್ರತ್ಯೇಕವಾಗಿ ಕೂರಿಸಿ ಅವರ ಮಧ್ಯೆ ಪರದೆ ಹಾಕಿರುವ ವ್ಯವಸ್ಥೆ ಇದ್ದರೆ ಅಂತಹ ವಿವಿಗಳಲ್ಲಿ ಮಹಿಳಾ ಅಭ್ಯರ್ಥಿಗಳು ಶಿಕ್ಷಣ ಪಡೆಯಬಹುದು. ಪದವಿ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಜಾಬ್ ಧರಿಸಬೇಕು ಎಂಬ ನಿಯಮಾವಳಿ ರೂಪಿಸಿ ಮಹಿಳಾ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳ ಹೊಸ ಆದೇಶ- ಹುಡುಗ, ಹುಡುಗಿ ಜೊತೆಯಾಗಿ ಓದುವಂತಿಲ್ಲ

    ಈ ಹಿಂದೆ ಅಫ್ಘಾನಿಸ್ತಾನ ವಶ ಪಡೆದುಕೊಂಡ ಬಳಿಕ ತಾಲಿಬಾನಿಗಳು ಮಹಿಳಾ ಶಿಕ್ಷಣದ ಬಗ್ಗೆ ದಿನಕ್ಕೊಂದು ಆದೇಶಗಳನ್ನು ಹೊರಡಿಸುತ್ತಿದ್ದರು. ಹುಡುಗ ಮತ್ತು ಹುಡುಗಿಯರು ಶಾಲೆಗಳಲ್ಲಿ ಜೊತೆಯಾಗಿ ಓದುವಂತಿಲ್ಲ. ವಿದ್ಯಾರ್ಥಿಗಳು ಶಿಕ್ಷಕರು ಪಾಠ ಮಾಡುವ ಹಾಗಿಲ್ಲ. ವಿದ್ಯಾರ್ಥಿನಿಯರಿಗೆ ಕಡ್ಡಾಯವಾಗಿ ಶಿಕ್ಷಕಿಯರೇ ಪಾಠ ಮಾಡಬೇಕು ಎಂದು ಆದೇಶ ಹೊರಡಿಸಿಲಾಗಿತ್ತು. ಶೇಖ್ ಅಬ್ದುಲ್ ಬಾಕಿ ಹಕ್ಕಾನಿಯನ್ನು ಶಿಕ್ಷಣ ಸಚಿವ ಎಂದು ತಾಲಿಬಾನಿಗಳು ನೇಮಕ ಮಾಡಿದ್ದ ಬಳಿಕ ಇದೀಗ ಚರ್ಚೆ ನಡೆಸಿ ಪ್ರತ್ಯೇಕ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಇದಕ್ಕೂ ಮೊದಲು ಅಫ್ಘಾನಿಸ್ತಾನದ ಪೂರ್ವ ಹೆರಾತ್ ನಗರದಲ್ಲಿ ಕೋ-ಎಜುಕೇಶನ್ ಮೇಲೆ ನಿರ್ಬಂಧ ಹಾಕಲಾಗಿತ್ತು. ಇದನ್ನೂ ಓದಿ: ಪ್ರಮಾಣವಚನ ಸ್ವೀಕಾರ ಸಮಾರಂಭವನ್ನೇ ರದ್ದುಗೊಳಿಸಿದ ತಾಲಿಬಾನ್ ಸರ್ಕಾರ

  • ತಾಲಿಬಾನಿಗಳ ಕ್ರೂರತ್ವ- ಮನೆ, ಮನೆಗೆ ನುಗ್ಗಿ ಯುವಕರ ಬರ್ಬರ ಹತ್ಯೆ

    ತಾಲಿಬಾನಿಗಳ ಕ್ರೂರತ್ವ- ಮನೆ, ಮನೆಗೆ ನುಗ್ಗಿ ಯುವಕರ ಬರ್ಬರ ಹತ್ಯೆ

    -ಅಮರುಲ್ಲಾ ಸಲೇಹ್ ಸಹೋದರ ವಶ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೂರತ್ವ ಮಿತಿಮೀರಿ ಹೋಗುತ್ತಿದೆ. ಪಂಜ್‍ಶೀರ್ ಪ್ರಾಂತ್ಯದಲ್ಲಿ ತಾಲಿಬಾನ್ ವಿರೋಧಿ ನಾರ್ದನ್ ಅಲಯನ್ಸ್ ಯೋಧರು ದಿಟ್ಟ ಹೋರಾಟದ ನಡುವೆಯೂ ತಾಲಿಬಾನಿಗಳು ಪಂಜ್‍ಶೀರ್‍ ಗೆ ನುಗ್ಗಿದ್ದಾರೆ. ಅಲ್ಲದೆ ಮನೆ, ಮನೆಗೆ ನುಗ್ಗಿ ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿ ಮಾರಣಹೋಮ ನಡೆಸುತ್ತಿದ್ದಾರೆ.

    ತಾಲಿಬಾನಿಗಳಿಂದ ತಪ್ಪಿಸಿಕೊಳ್ಳಲು ಅಲ್ಲಿಯ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಹಂಗಾಮಿ ಉಪಾಧ್ಯಕ್ಷ, ನಾರ್ದನ್ ಅಲಯನ್ಸ್ ಅನ್ನು ಮುನ್ನಡೆಸುತ್ತಿರುವ ಅಮರುಲ್ಲಾ ಸಲೇಹ್ ಸದ್ಯ ಪಂಜ್‍ಶೀರ್ ಅನ್ನು ತೊರೆದಿದ್ದಾರೆ. ಅಲ್ಲಿ ಸಿಕ್ಕ ಸಲೇಹ್ ಸಹೋದರ ರೋಹುಲ್ಲಾ ಸಲೇಹ್ ರನ್ನು ವಶಕ್ಕೆ ಪಡೆದ ತಾಲಿಬಾನಿಗಳು ಚಿತ್ರಹಿಂಸೆ ನೀಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆಡಿದ್ರೆ ದೇಹ ಪ್ರದರ್ಶನವಾಗುತ್ತೆ – ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆ ನಿಷೇಧ

    ಇಂದು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ. 2001 ಇದೇ ದಿನ ಅಮೆರಿಕಾ ಮೇಲೆ ಅಲ್‍ಕೈದಾ ದಾಳಿ ನಡೆಸಿತ್ತು. ಹೀಗಾಗಿ ಅಮೆರಿಕಾಗೆ ಠಕ್ಕರ್ ಕೊಡುವುದಕ್ಕಾಗಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ ಅಸ್ತಿತ್ವಕ್ಕೆ ಇಂದೇ ಬರುವ ನಿರೀಕ್ಷೆ ಇದೆ. ಇದನ್ನೂ ಓದಿ: ತಾಲಿಬಾನ್‍ನಲ್ಲಿ ಸರ್ಕಾರ ಘೋಷಣೆ – ಮೋಸ್ಟ್ ವಾಂಟೆಡ್ ಉಗ್ರ ಈಗ ಆಂತರಿಕ ಸಚಿವ

    ಪದವಿಗಳಿಗೆ ಬೆಲೆ ಇಲ್ಲ:
    ತಾಲಿಬಾನ್ ಆಡಳಿತದಲ್ಲಿ ಪಿಹೆಚ್‍ಡಿಗಳಿಗೆ, ಪದವಿಗಳಿಗೆ ಬೆಲೆ ಇಲ್ಲ. ಇದನ್ನು ಅಲ್ಲಿನ ಶಿಕ್ಷಣ ಮಂತ್ರಿಯೇ ಅಧಿಕೃತವಾಗಿ ಘೋಷಿಸಿದ್ದಾರೆ. ನೀವೇ ನೋಡಿ ಅಧಿಕಾರ ನಡೆಸ್ತಿರುವ ಮುಲ್ಲಾಗಳು, ತಾಲಿಬಾನಿಗಳಿಗೆ ಪಿಹೆಚ್‍ಡಿಯ ಕೋಡು ಇವೆಯಾ? ಅವರಿಗೆ ಕನಿಷ್ಠ ಹೈಸ್ಕೂಲ್ ಶಿಕ್ಷಣ ಕೂಡ ಇಲ್ಲ. ಆದ್ರೂ ಎಲ್ಲರಿಗಿಂತ ಉತ್ತಮ ಆಡಳಿತ ನೀಡ್ತಿದ್ದು, ಅವರೇ ಎಲ್ಲರಿಗಿಂತ ಶ್ರೇಷ್ಠ ಎಂದು ತಾಲಿಬಾನ್ ಸರ್ಕಾರದ ಶಿಕ್ಷಣ ಮಂತ್ರಿ ಶೇಖ್ ಮೌಲ್ವಿ ನೂರಲ್ಲಾ ಹೇಳಿದ್ದಾರೆ.

  • ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

    ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ದನಿ ಎತ್ತುತ್ತೇವೆ: ತಾಲಿಬಾನ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರಾಡಳಿತವನ್ನು ಜಾರಿಗೆ ತಂದಿರುವ ತಾಲಿಬಾನಿಗಳ ಕೆಟ್ಟ ಕಣ್ಣು ಈಗ ಭಾರತದ ಕಾಶ್ಮೀರದ ಮೇಲೆ ಬಿದ್ದಿದೆ. ನಾವು ಕಾಶ್ಮೀರಿ ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ಎಂದು ತಾಲಿಬಾನ್ ಬಹಿರಂಗವಾಗಿ ಹೇಳಿಕೊಂಡಿದೆ.

     

    ಜಮ್ಮುಕಾಶ್ಮೀರಕ್ಕೆ ನೀಡಲಾಗಿದ್ದ ಪ್ರತ್ಯೇಕ ಸ್ಥಾನಮಾನವನ್ನು ಭಾರತ ಸರ್ಕಾರ ಹಿಂಪಡೆದ ನಂತರ ಅಲ್ಲಿನ ಮುಸ್ಲಿಮರು ಸಿಟ್ಟಾಗಿದ್ದಾರೆ. ಅವರಿಗೆ ಧ್ವನಿಯಾಗುವ ಕೆಲಸ ಮಾಡುತ್ತೇವೆ, ಹೋರಾಡುತ್ತೇವೆ ಎಂದು ಹೇಳಿದೆ. ಕೆಳದಿನಗಳ ಹಿಂದೆ ಪಾಕ್ ಟಿವಿ ಚಾನಲ್ ಒಂದರ ಚರ್ಚೆಯಲ್ಲಿ ಆಡಳಿತ ಪಕ್ಷ ಪಿಟಿಐ ಪ್ರತಿನಿಧಿ, ತಾಲಿಬಾನ್ ನಮ್ಮ ಬೆಂಬಲಕ್ಕೆ ಇದೆ ಎಂದು ಘಂಟಾಘೋಷವಾಗಿ ಸಾರಿದ್ದರು. ಕಾಶ್ಮಿರದ ವಿಮುಕ್ತಿಗಾಗಿ ಅವರು ನಮಗೆ ನೆರವು ನೀಡುತ್ತಾರೆ ಎಂದಿದ್ದರು ಎಂಬುದು ಇಲ್ಲಿ ಗಮನಿಸಬೇಕಾದ ವಿಚಾರವಾಗಿದೆ. ಇದನ್ನೂ ಓದಿ: ಅಂದು ಗಾಳಿಯಲ್ಲಿ ಗುಂಡು ಹಾರಿಸಿ ತಾಲಿಬಾನಿಗಳ ಸಂಭ್ರಮ – ಇಂದು ಅಮೆರಿಕದ ವಿರುದ್ಧ ಸಿಟ್ಟು

    ಅಫ್ಘಾನಿಸ್ತಾನದಲ್ಲಿ ಅಧಿಕೃತವಾಗಿ ಉಗ್ರಾಡಳಿತ ಆರಂಭವಾಗಲು ಕೌಂಟ್‍ಡೌನ್ ಶುರುವಾಗಿದೆ. ಇರಾನ್ ಮಾದರಿಯಲ್ಲಿ ಅಫ್ಘಾನಿಸ್ತಾನದ ಸರ್ವೋಚ್ಛ ನಾಯಕರನ್ನಾಗಿ ತಾಲಿಬಾನ್ ಸುಪ್ರೀಂ ಅಖುಂಡಾಜಾದ್ ಹೆಸರನ್ನು ಘೋಷಿಸುವ ಸಂಭವ ಇದೆ. ತಾಲಿಬಾನ್ ಸರ್ಕಾರದ ಮುಖ್ಯಸ್ಥನನ್ನಾಗಿ ಮುಲ್ಲಾ ಬರಾದರ್ ಹೆಸರನ್ನು ಅಯ್ಕೆ ಮಾಡಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ತಾಲಿಬಾನ್ ಸಂಸ್ಥಾಪಕ ಮುಲ್ಲಾ ಒಮರ್ ಮಗ ಮುಲ್ಲಾ ಯಾಕೂಬ್, ಸಿರಾಜುದ್ದೀನ್ ಹಕ್ಕಾನಿ ಮತ್ತು ಷೇರ್ ಮಹಮ್ಮದ್ ಸ್ಟಾನ್ಜಾಯ್‍ಗೂ ಪ್ರಮುಖ ಜವಾಬ್ದಾರಿಗಳು ಸಿಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ಶುಕ್ರವಾರದ ನಮಾಜ್ ಬಳಿಕ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ರಚನೆ

     

     

    ಮಹಿಳೆಯರನ್ನು ಸರ್ಕಾರದಿಂದ ಹೊರಗಿಡಲು ತಾಲಿಬಾನ್ ತೀರ್ಮಾನಿಸಿದೆ. ಆದರೆ ಇದನ್ನು ಪ್ರಶ್ನಿಸಿ ಮಹಿಳೆಯರು ಕಾಬೂಲ್‍ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಹಿಳೆಯರ ಉದ್ಯೋಗ ಮತ್ತು ಶಿಕ್ಷಣದ ಬಗ್ಗೆ ಭರವಸೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಪಂಜಶೀರ್ ಪ್ರಾಂತ್ಯ ತಾಲಿಬಾನಿಗಳ ಪಾಲಿಗೆ ಕೈಗೆಟುಕದ ದ್ರಾಕ್ಷಿಯಂತಾಗಿದೆ. ತಾಲಿಬಾನ್ ವಶದಲ್ಲಿದ್ದ ಎರಡು ಪ್ರದೇಶಗಳನ್ನು ವಶಪಡಿಸಿಕೊಂಡಿದೆ. ಹೀಗಾಗಿ ತಾಲಿಬಾನ್ ರಾಕೆಟ್ ದಾಳಿ ನಡೆಸುತ್ತಿದೆ. ಚರಿಕಾರ್ ನಗರದಲ್ಲಿ ಭಾರೀ ಸ್ಫೋಟ ಉಂಟಾಗಿದೆ. ಆದರೆ ಇದಕ್ಕೆಲ್ಲ ಜಗ್ಗದ ಉತ್ತರದ ಪ್ರತಿರೋಧ ಪಡೆ, ನಮ್ಮ ಕಣಿವೆ ಅತಿಕ್ರಮಿಸಲು ಬಂದರೆ ತಾಲಿಬಾನಿಗಳನ್ನು ನೇರ ನರಕಕ್ಕೆ ಕಳಿಸೋದಾಗಿ ಅಬ್ಬರಿಸಿದೆ.

  • ಅಫ್ಘಾನ್ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು: ಪ್ರವೀಣ್ ತೊಗಾಡಿಯಾ

    ಅಫ್ಘಾನ್ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು: ಪ್ರವೀಣ್ ತೊಗಾಡಿಯಾ

    ಮುಂಬೈ: ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್‍ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

    ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಭಾರತವು ತಾಲಿಬಾನ್ ಉದ್ದೇಶದ ಕೇಂದ್ರಬಿಂದುವಾಗಿರುವುದರಿಂದ ದೇಶವು ಬಹಳ ದೊಡ್ಡ ಅಪಾಯ ಎದುರಿಸುತ್ತಿದೆ. ಆದ್ದರಿಂದ ದೇಶವು ತಾಲಿಬಾನೀಕರಣ ಆಗುವುದನ್ನು ತಡೆಯಬೇಕಿದೆ ಎಂದರು.

    ಅಫ್ಘಾನಿಸ್ತಾನದ ಮುಸ್ಲಿಂರಿಗೆ ಆಶ್ರಯ ಕಲ್ಪಿಸ ಬಾರದು. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ ಭಾರತವು ಗಡಿಯನ್ನು ತೆರೆದಿರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ದಾಳಿಯ ಹೊಣೆ ಹೊತ್ತ ISKP ಸಂಘಟನೆ

    Kabul Airport

    ಅಘ್ಘಾನಿಸ್ತಾನದಲ್ಲಿ ನೆತ್ತರಕೋಡಿ ಹರಿಸಿದ್ದು ನಾವೇ ಎಂದು ಇಸ್ಲಾಮಿಕ್ ಸ್ಟೇಟ್ ಐಎಸ್‍ಕೆಪಿ(ISKP) ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಅಮೆರಿಕ ನೇತೃತ್ವದಲ್ಲಿ ಸೇನಾ ಪಡೆಗಳ ಹಿಂತೆಗೆತ ಕಾರ್ಯಾಚರಣೆ ವೇಳೆ ಅಘ್ಘಾನಿಸ್ತಾನದಲ್ಲಿ ಏಳು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಬಳಿಕ ರಾತ್ರಿಯಿಡಿ ನೆತ್ತರು ಹರಿಸಿದ ಪಾಪಿಗಳು ನಾವು ಎಲ್ಲಾ ಭದ್ರತಾ ತಡೆಗೋಡೆಗಳನ್ನೂ ದಾಟಿ ಅಮೆರಿಕ ಭದ್ರತಾ ಪಡೆಗಳಿರುವ ಪ್ರದೇಶಕ್ಕಿಂತ 16 ಅಡಿ ದೂರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಕ್ಕೆ ಒಬ್ಬ ಬಾಂಬರ್‍ನಿಂದ ಸಾಧ್ಯವಾಗಿದೆ ಎಂದು ದಾಳಿಯ ಹೊಣೆ ಹೊತ್ತ ಐಎಸ್‍ಕೆಪಿ ಸಂಘಟನೆ ಪ್ರಚಾರ ಪಡೆದುಕೊಂಡಿದೆ.

  • ಕಾಬೂಲ್ ದಾಳಿಯ ಹೊಣೆ ಹೊತ್ತ ISKP ಸಂಘಟನೆ

    ಕಾಬೂಲ್ ದಾಳಿಯ ಹೊಣೆ ಹೊತ್ತ ISKP ಸಂಘಟನೆ

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ನೆತ್ತರಕೋಡಿ ಹರಿಸಿದ್ದು ನಾವೇ ಎಂದು ಇಸ್ಲಾಮಿಕ್ ಸ್ಟೇಟ್ ಐಎಸ್‍ಕೆಪಿ(ISKP) ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ.

    ಅಮೆರಿಕ ನೇತೃತ್ವದಲ್ಲಿ ಸೇನಾ ಪಡೆಗಳ ಹಿಂತೆಗೆತ ಕಾರ್ಯಾಚರಣೆ ವೇಳೆ ಅಘ್ಘಾನಿಸ್ತಾನದಲ್ಲಿ ಏಳು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಬಳಿಕ ರಾತ್ರಿಯಿಡಿ ನೆತ್ತರು ಹರಿಸಿದ ಪಾಪಿಗಳು ನಾವು ಎಲ್ಲಾ ಭದ್ರತಾ ತಡೆಗೋಡೆಗಳನ್ನೂ ದಾಟಿ ಅಮೆರಿಕ ಭದ್ರತಾ ಪಡೆಗಳಿರುವ ಪ್ರದೇಶಕ್ಕಿಂತ 16 ಅಡಿ ದೂರದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಕ್ಕೆ ಒಬ್ಬ ಬಾಂಬರ್‍ ನಿಂದ ಸಾಧ್ಯವಾಗಿದೆ, ಎಂದು ದಾಳಿಯ ಹೊಣೆ ಹೊತ್ತ ಐಎಸ್‍ಕೆಪಿ ಸಂಘಟನೆ ಪ್ರಚಾರ ಪಡೆದುಕೊಂಡಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಜಗತ್ತು ಒಟ್ಟಾಗಿ ಹೋರಾಡಬೇಕು: ಭಾರತ

    ಐಎಸ್‍ಕೆಪಿ ಸಂಘಟನೆ ಅಥವಾ ಐಎಸ್‍ಐಎಸ್-ಕೆ ಇಸ್ಲಾಮಿಕ್ ಸ್ಟೇಟ್ ಖೋರಸಾನ್ ಪ್ರಾಂತ್ಯದ ಐಸಿಸ್ ಉಗ್ರ ಸಂಘಟನೆಯ ಪ್ರಾಂತೀಯ ಸಂಘಟನೆಯಾಗಿದೆ. 2015 ಜನವರಿಯಲ್ಲಿ ಈ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಐಎಸ್‍ಕೆಪಿ ಸಂಘಟನೆಯು ಆಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಸಕ್ರಿಯವಾಗಿದೆ ಎಂಬ ಬಗ್ಗೆ ಮಾಹಿತಿ ಇದೆ. ಇದನ್ನೂ ಓದಿ: ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು

    ಜಿಹಾದಿ ಸಂಘಟನೆಗಳಲ್ಲೇ ಅತೀ ಕ್ರೂರವಾದ ಸಂಘಟನೆಯಾಗಿ ಗುರುತಿಸಿಕೊಂಡಿರುವ ಐಎಸ್‍ಕೆಪಿ, ತಾಲಿಬಾನ್ ಮತ್ತು ಅಮೆರಿಕ ಸೇನೆಯನ್ನು ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಿರುವುದು ಸ್ಪಷ್ಟವಾಗಿದೆ. ತಾಲಿಬಾನ್, ಹಕ್ಕಾನಿ ಸಂಘಟನೆಗಿಂತಲೂ ಐಎಸ್‍ಕೆಪಿ ಸಂಘಟನೆ ಬಲಿಷ್ಠವಾಗಿದ್ದು, ತಾಲಿಬಾನ್‍ನಿಂದ ಹೊರಬಿದ್ದವರೇ ಐಎಸ್‍ಕೆಪಿ ಜೊತೆ ಸೇರಿಕೊಂಡು ಉಗ್ರರಾಗಿದ್ದಾರೆ. ಈ ಪಾಪಿಗಳು ಶಾಲಾ ಮಕ್ಕಳು, ಗರ್ಭಿಣಿ, ಹಸುಗೂಸುಗಳಿಗೂ ಗುಂಡಿಕ್ಕಿದ್ದು, ಆಸ್ಪತ್ರೆಗಳಿಗೂ ನುಗ್ಗಿ ರಕ್ತ ಹರಿಸಿರುವ ಚರಿತ್ರೆಯನ್ನು ಐಎಸ್‍ಕೆಪಿ ಹೊಂದಿದೆ.

  • ಐ ಲವ್ ತಾಲಿಬಾನ್ ಎಂದು ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

    ಐ ಲವ್ ತಾಲಿಬಾನ್ ಎಂದು ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

    ಬಾಗಲಕೋಟೆ: ಐ ಲವ್ ತಾಲಿಬಾನ್ ಎಂದು ಫೇಸ್‍ಬುಕ್ ಪೋಸ್ಟ್ ಹಾಕಿದ್ದ ಜಮಖಂಡಿಯ ಆಸೀಫ್ ಗಲಗಲಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಆಸೀಫ್ ಗಲಗಲಿ, ಅವಿವೇಕಿ ತಾಲಿಬಾನ್ ಉಗ್ರರ ಬಗ್ಗೆ ಪ್ರೀತಿ ತೋರಿದ್ದನು. ಈತ ತನ್ನ ಫೇಸ್‍ಬುಕ್ ಪೋಸ್ಟ್ ನಲ್ಲಿ ಐಲವ್ ತಾಲಿಬಾನಿ ಎಂದು ಬರೆದುಕೊಂಡಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಸ್ವ ಸಮುದಾಯದವರು ಈತನ ದೇಶದ್ರೋಹ ಕೃತ್ಯವನ್ನು ಖಂಡಿಸಿದ್ದರು.

    Social media logos

    ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕಿರುಕುಳ ಹಿನ್ನೆಲೆಯಲ್ಲಿ ಅಫ್ಘಾನ್ ದೇಶ ಬಿಟ್ಟು ಜನ ಓಡಿ ಹೋಗುತ್ತಿದ್ದಾರೆ. ಹೀಗಿರುವಾಗ ತಾಲಿಬಾನಿಗಳ ಮೇಲೆ ಪ್ರೀತಿ ತೋರಿದ್ದಕ್ಕೆ ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿತ್ತು. ಈ ಪೋಸ್ಟ್ ವಿರುದ್ಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನಾಪತ್ತೆಯಾಗಿದ್ದ ಆಸೀಫ್ ಗಲಗಲಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಜಮಖಂಡಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪಬ್ಲಿಕ್‌ ಟಿವಿ ನೇರ ಪ್ರಸಾರ ವೀಕ್ಷಿಸಿ