Tag: ಅಘ್ಘಾನಿಸ್ತಾನ

  • ದೆಹಲಿಯ ಆಸ್ಪತ್ರೆಗಳ ಮೇಲೆ ಅಫ್ಘಾನಿಸ್ತಾನ ಅವಲಂಬಿತವಾಗಿದೆ: ಪರಿಸ್ಥಿತಿ ಬಿಚ್ಚಿಟ್ಟ ಜಾನ್

    ದೆಹಲಿಯ ಆಸ್ಪತ್ರೆಗಳ ಮೇಲೆ ಅಫ್ಘಾನಿಸ್ತಾನ ಅವಲಂಬಿತವಾಗಿದೆ: ಪರಿಸ್ಥಿತಿ ಬಿಚ್ಚಿಟ್ಟ ಜಾನ್

    ಉಡುಪಿ: ಭಾರತದ ಔಷಧ ಅಫ್ಘಾನಿಸ್ತಾನಕ್ಕೆ ಸದಾ ರವಾನೆಯಾಗುತ್ತದೆ. ಗಂಭೀರ ಆರೋಗ್ಯ ಪರಿಸ್ಥಿತಿಗಳು ಉಂಟಾದ ಸಂದರ್ಭದಲ್ಲಿ ಅಫ್ಘಾನಿಸ್ತಾನದಿಂದ ಡೆಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಾರೆ ಎಂಬ ಸತ್ಯಾಂಶವನ್ನು ಅಘ್ಘಾನಿಸ್ತಾನದಿಂದ ತಾಯ್ನಾಡಿಗೆ ಮರಳಿರುವ ಮಲ್ಪೆಯ ಜಾನ್ ಎಂಬವರು ಬಿಚ್ಚಿಟ್ಟಿದ್ದಾರೆ.

    ಅಫ್ಘಾನಿಸ್ತಾನ ತಾಲಿಬಾನ್ ಕೈವಶವಾಗುವ ದಿನವೇ ಮಲ್ಪೆಯ ಜಾನ್ ಭಾರತಕ್ಕೆ ವಾಪಸ್ಸಾಗಿದ್ದಾರೆ. ಫ್ಯೂಯೆಲ್ ಸೂಪರ್ ವೈಸರಾಗಿ ಜಾನ್ ಅವರು ವೃತ್ತಿ ನಿರ್ವಹಿಸುತ್ತಿದ್ದರು. ಅಲ್ಲಿಂದ ತಾಯ್ನಾಡಿಗೆ ಮರಳಿದ ಬಳಿಕ ಅಲ್ಲಿನ ಸ್ಥಿತಿಯನ್ನು ಟಿವಿಯಲ್ಲಿ ನೋಡಿ ದೇವರೇ ನನ್ನನ್ನು ಕರೆಸಿಕೊಂಡರು ಎಂದು ಜಾನ್ ಖುಷಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣಕ್ಕೆ 5 ಸಾವಿರ ಅಮೆರಿಕ ಸೈನಿಕರ ನಿಯೋಜನೆ

    ಅಘ್ಘಾನಿಸ್ತಾನ ಪರಿಸ್ಥಿತಿ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಾನ್, ಕಳೆದ 10 ದಿನಗಳಿಂದ ತಾಲಿಬಾನಿಗಳು ನಮ್ಮ ಎಲ್ಲಾ ಕಂಪನಿಗಳನ್ನು ವಶಪಡಿಸಿಕೊಂಡು ಬರುತ್ತಿದ್ದರು. ಕಾಬೂಲ್ ಬ್ರಾಂಚ್ ಮಾತ್ರ ನಮ್ಮ ಕೈಯಲ್ಲಿ ಉಳಿದಿತ್ತು. ನಮಗೆ ಮೆಸೇಜ್ ಮೂಲಕ ಬಾಸ್ ಮಾಹಿತಿಯನ್ನು ಕೊಟ್ಟಿದ್ದರು. ಕೂಡಲೇ ದೇಶಕ್ಕೆ ವಾಪಸಾಗಲು ಸಿದ್ಧರಾಗಿ ಎಂದು ಹೇಳಿದರು.

    ಟಿಕೆಟ್ ಮಾಡಿ ಕಳುಹಿಸಿದರು. ವಿಮಾನದಲ್ಲಿ ಕುಳಿತು ಅರ್ಧ ಗಂಟೆಯ ಒಳಗೆ ಅಫ್ಘಾನಿಸ್ತಾನ ಚಿತ್ರಣವೇ ಬದಲಾಗಿದೆ. ತಾಲಿಬಾನ್‍ಗಳು ದೇಶ ವಶಪಡಿಸಿದ್ದಾರೆ ಎಂಬ ಮಾಹಿತಿ ನನಗೆ ಗೊತ್ತಾಯಿತು. ಸಂಕಟ ಸಮಯದಲ್ಲಿ ದೇವರೇ ನನ್ನನ್ನು ಅಲ್ಲಿಂದ ಕರೆದುಕೊಂಡು ಬಂದಿದ್ದಾರೆ ಎಂದು ಅನಿಸುತ್ತದೆ. ದೇವರ ಕೃಪೆಯಿಂದ ನಾನು ವಾಪಸ್ ಬಂದಿದ್ದೇನೆ. ಮನುಷ್ಯ ಮಾತ್ರರಿಂದ ಈ ಕೆಲಸ ಆಗಲು ಸಾಧ್ಯವಿಲ್ಲ. ಅಫ್ಘಾನ್ ಜನಕ್ಕೆ ಆ ದಿನದ ಯೋಚನೆ ಮಾತ್ರ. ಭವಿಷ್ಯದ ಬಗ್ಗೆ ನಾಳಿನ ಬಗ್ಗೆ ಯಾರೂ ಯೋಚನೆ ಮಾಡುವುದಿಲ್ಲ. ಇಂದಿನ ದಿನ ಬದುಕಿದರೆ, ಈ ದಿನ ಚೆನ್ನಾಗಿ ಹೋದರೆ ಆಯ್ತು ಎಂದು ಜೀವನ ಮಾಡುತ್ತಾರೆ. ನಾಳಿನ ಬಗ್ಗೆ ಆಲೋಚನೆಗಳೇ ಅಲ್ಲಿನ ಜನಕ್ಕೆ ಇರುವುದಿಲ್ಲ ಎಂದು ಅಲ್ಲಿನ ಮಾಹಿತಿ ನೀಡಿದರು. ಇದನ್ನೂ ಓದಿ: ತಾಲಿಬಾನಿಗಳನ್ನ RSS, ಬಜರಂಗದಳಕ್ಕೆ ಹೋಲಿಸಿದ ಕವಿ ಮುನ್ವರ್ ರಾಣಾ

    ಅಫ್ಘನ್ನರಿಗೆ ಭಾರತದಲ್ಲೇ ಚಿಕಿತ್ಸೆ:
    ಕಾಬೂಲ್ ಪಟ್ಟಣದಲ್ಲಿ ವಾರಕ್ಕೆ ಎರಡು-ಮೂರು ಬಾರಿ ಬಾಂಬ್ ಸ್ಫೋಟಗಳು ಆಗುತ್ತಿರುತ್ತವೆ. ಅಫ್ಘಾನಿಸ್ತಾನದಲ್ಲಿ ಭಾರತೀಯರಿಗೆ ಬಹಳ ಗೌರವ ಇದೆ. ಅಫ್ಘಾನಿಸ್ತಾನ ದೇಶಕ್ಕೆ ಭಾರತ ದೇಶದಿಂದ ಬಹಳ ಸಹಾಯಗಳು ಆಗಿದೆ. ಆ ಕೃತಜ್ಞತಾಭಾವ ಅವರಲ್ಲಿದೆ. ಭಾರತದ ಔಷಧ ಅಫ್ಘಾನಿಸ್ತಾನಕ್ಕೆ ಸದಾ ರವಾನೆಯಾಗುತ್ತದೆ. ಗಂಭೀರ ಆರೋಗ್ಯ ಪರಿಸ್ಥಿತಿಗಳು ಉಂಟಾದ ಸಂದರ್ಭದಲ್ಲಿ ಅಫ್ಘಾನಿಸ್ತಾನದಿಂದ ಡೆಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಾರೆ. ದೆಹಲಿಯ ಲಜಪತ್ ನಗರದಲ್ಲಿ ಅಪಘಾನಿಸ್ತಾನದವರೇ ಹೆಚ್ಚು ವಾಸಿಸುತ್ತಿದ್ದಾರೆ. ಅಲ್ಲಿ ಆಸ್ಪತ್ರೆಯಿಲ್ಲ, ಸರಿಯಾದ ಚಿಕಿತ್ಸೆಗಳು ಸಿಗುವುದಿಲ್ಲ. ಅಮೆರಿಕ ಅಲ್ಲಿ 20 ವರ್ಷದ ಕಾಂಟ್ರ್ಯಾಕ್ಟರ್ ಇಟ್ಟುಕೊಂಡಿತ್ತು. ವಾಪಸ್ ಯಾಕೆ ಹೋದರು ಎಂಬ ಬಗ್ಗೆ ನಮಗೆ ಮಾಹಿತಿಯಿಲ್ಲ ಎಂದು ಅಲ್ಲಿನ ಸ್ಥಿತಿಯನ್ನು ವಿವರಿಸಿದರು.

    ಅಫ್ಘಾನಿಸ್ತಾನದಲ್ಲಿ ಮಿಲಿಟರಿಗೆ, ಸ್ಪೆಷಲ್ ಕೋರ್ಸ್‍ಗಳಿಗೆ 20 ವರ್ಷಗಳ ಕಾಲ ಅಮೆರಿಕ ಟ್ರೈನಿಂಗ್ ಕೊಟ್ಟಿತ್ತು. ಎಲ್ಲಾ ವ್ಯರ್ಥ ಆಗಿದೆ. ಅಮೆರಿಕ 20 ವರ್ಷಗಳಿಂದ ಅಘ್ಘಾನಿಸ್ತಾನಕ್ಕೆ ಮಾಡಿದ ಎಲ್ಲಾ ಸವಲತ್ತುಗಳನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡಿದ್ದಾರೆ. ಇನ್ನೂ ಒಂದೆರಡು ತಿಂಗಳಿನಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತದೆ ಎಂದು ನನ್ನ ಕಂಪನಿ ಮಾಲೀಕರು ಹೇಳಿದ್ದಾರೆ. ನನ್ನನ್ನು ಮತ್ತೆ ಕೆಲಸಕ್ಕೆ ಬರುವಂತೆ ಹೇಳಿದ್ದಾರೆ. ಆದರೆ ಹೋಗುವ ಬಗ್ಗೆ ಅಥವಾ ಇಲ್ಲೇ ಇರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಅಭಿಪ್ರಾಯ ಹಂಚಿಕೊಂಡರು. ಇದನ್ನೂ ಓದಿ: ಪ್ರಾಣಿಗಳನ್ನು ತುಂಬಿಕೊಂಡಂತೆ 800 ಜನ ಒಂದೇ ವಿಮಾನದಲ್ಲಿ ಭಾರತಕ್ಕೆ ಬಂದಿಲ್ಲ

  • ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ

    ವಿಮಾನದಿಂದ ಬಿದ್ದವರ ಗುರುತು ಪತ್ತೆ- ಮೂವರಲ್ಲಿ ಒಬ್ಬ ಯುವ ಫುಟ್‍ಬಾಲ್ ಆಟಗಾರ

    ಕಾಬೂಲ್: ಅಘ್ಘಾನಿಸ್ತಾನ ತಾಲಿಬಾನಿಗಳ ಕೈವಶವಾಗುತ್ತಿದ್ದಂತೆ ಜನ ಭಯಗೊಂಡು ದೇಶ ತೊರೆಯಲು ಸಿಕ್ಕ ಸಿಕ್ಕ ವಿಮಾನ ಹತ್ತಲು ಪ್ರಾರಂಭಿಸಿದ್ದರು. ಈ ವೇಳೆ ಅಮೆರಿಕಾಗೆ ತೆರಳಲುತ್ತಿದ್ದ ವಿಮಾನ ಟೇಕಾಫ್ ಗೊಂಡ ಕೆಲವೇ ನಿಮಿಷಗಳಲ್ಲಿ ವಿಮಾನದ ಮೇಲಿಂದ ಮೂವರು ಬಿದ್ದಿದ್ದರು. ಇದೀಗ ಅವರ ಗುರುತು ಪತ್ತೆಯಾಗಿದ್ದು, ಮೂವರಲ್ಲಿ ಓರ್ವ ಅಘ್ಘಾನ್‍ನ ಯುವ ಫುಟ್‍ಬಾಲ್ ಆಟಗಾರ ಎಂದು ವರದಿಯಾಗಿದೆ.

    ಆಗಸ್ಟ್ 16ರಂದು ಅಘ್ಘಾನಿಸ್ತಾನದ ಜನರು ವಿಮಾನ ನಿಲ್ದಾಣಗಳತ್ತ ಆಗಮಿಸಿ ವಿಮಾನಗಳನ್ನೇರಿ ದೇಶ ತೊರೆಯಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವಿಮಾನದಿಂದ ಮೂವರು ಕೆಳಗೆ ಬಿದ್ದಿರುವ ಬಗ್ಗೆ ವರದಿಯಾಗಿತ್ತು. ಆ ಮೂವರಲ್ಲಿ ಒಬ್ಬರು ಶಫೀವುಲ್ಲಾ ಮತ್ತೊಬ್ಬರು ಫಿದಾ ಮೊಹಮ್ಮದ್ ಎಂದು ಗುರುತು ಪತ್ತೆಯಾಗಿತ್ತು. ಬಳಿಕ ಇದೀಗ ಇನ್ನೊಬ್ಬರ ಗುರುತು ಕೂಡ ಪತ್ತೆಯಾಗಿದ್ದು ಅವರನ್ನು ಅಘ್ಘಾನಿಸ್ತಾನದ ಯುವ ಫುಟ್‍ಬಾಲ್ ಆಟಗಾರ ಝಾಕಿ ಅನ್ವಾರಿ ಎಂದು ಗುರುತಿಸಲಾಗಿದೆ.

    ಈ ಬಗ್ಗೆ ಅಘ್ಘಾನಿಸ್ತಾನದ ರಾಷ್ಟ್ರೀಯ ಫುಟ್‍ಬಾಲ್ ತಂಡ ಯುವ ಆಟಗಾರರಾದ ಝಾಕಿ ಅನ್ವಾರಿ ಅವರ ಸಾವಿನ ಬಗ್ಗೆ ದೃಢಪಡಿಸಿ ಸಂತಾಪ ಸೂಚಿಸಿದೆ. ಇದನ್ನೂ ಓದಿ: “ಜೋರಾದ ಸದ್ದು ಕೇಳಿಸ್ತು.. ನೋಡಿದ್ರೆ ಮನೆ ಮೇಲೆ ಇಬ್ರು ಬಿದ್ದಿದ್ರು”

    ಅಮೆರಿಕಾದ ಪ್ಲೇನ್ ಟೇಕಾಫ್ ಗೊಂಡ ಕೆಲವೇ ನಿಮಿಷಗಳಲ್ಲಿ ಮೇಲಿಂದ ಇಬ್ಬರು ಬೀಳುವ ಭಯಾನಕ ದೃಶ್ಯ ಮೊಬೈಲ್ ಗಳಲ್ಲಿ ಸೆರೆಯಾಗಿತ್ತು. ಅಂದು ವಿಮಾನದಿಂದ ಕೆಳಗೆ ಬಿದ್ದವರ ಗುರುತು ಪತ್ತೆಯಾಗಿದೆ.

    ವಲಿ ಸಾಲೆಕ್ ಎಂಬವರ ಮನೆ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ. ಸೋಮವಾರ ಮಧ್ಯಾಹ್ನ ಎರಡು ಗಂಟೆ ನಂತ್ರ ವಿಶ್ರಾಂತಿ ಪಡೆಯುತ್ತಿದ್ದೆ. ಆಗ ಮೇಲಿನಿಂದ ಏನೋ ಬಿದ್ದಂತೆ ಆಯ್ತು. ನಾವು ಟೈರ್ ಸ್ಫೋಟಗೊಂಡು ಮನೆಯ ಮೇಲೆ ಬಂದಿದೆಯಾ ಅಂತ ನೋಡಲು ಹೋದೆ. ನನ್ನೊಂದಿಗೆ ಮಗಳು ಮತ್ತು ಪತ್ನಿ ಸಹ ಬಂದರು. ಮೇಲೆ ನೋಡಿದ್ರೆ ಇಬ್ಬರ ಶವಗಳು ಎರಡು ತುಂಡಾಗಿದ್ದವು. ಈ ಭೀಕರ ದೃಶ್ಯ ಕಂಡ ಪತ್ನಿ ಮತ್ತು ಮಗಳು ಮೂರ್ಛೆ ಹೋದರು ಎಂದು ವಲಿ ಹೇಳ್ತಾರೆ.  ಇದನ್ನೂ ಓದಿ: ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

    ಸ್ಥಳೀಯರ ಸಹಾಯದಿಂದ ಎರಡೂ ಶವಗಳನ್ನು ಸಮೀಪದ ಮಸೀದಿ ಬಳಿ ತೆಗೆದುಕೊಂಡು ಹೋಗಲಾಯ್ತು. ಅಲ್ಲಿ ಇಬ್ಬರ ಜೇಬುಗಳನ್ನ ಪರಿಶೀಲಿಸಿದಾಗ ಅವರ ಗುರುತು ಪತ್ತೆಯಾಯ್ತು. ಒಬ್ಬರು ಶಫೀವುಲ್ಲಾ, ಮತ್ತೊಬ್ಬರು ಫಿದಾ ಮೊಹಮ್ಮದ್. ಶಫೀವುಲ್ಲಾ ದಾಖಲೆ ಆತ ವೈದ್ಯ ಅಂತ ಗೊತ್ತಾಯ್ತು. ಇಬ್ಬರ 30 ವರ್ಷದೊಳಗಿನ ಯುವಕರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

  • ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

    ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮುಂದುವರಿದಿದೆ. ಇದೀಗ ಅಘ್ಘಾನ್ ಕ್ರಿಕೆಟ್ ಮಂಡಳಿಯನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ತಾಲಿಬಾನಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

    ತಾಲಿಬಾನಿಗಳು ಅಘ್ಘಾನಿಸ್ತಾನ್ ಕ್ರಿಕೆಟ್ ಮಂಡಳಿಗೆ ಮುತ್ತಿಗೆ ಹಾಕಿ ಅಲ್ಲಿನ ಮಾಜಿ ಕ್ರಿಕೆಟಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದ್ದು, ಕೆಲದಿನಗಳ ಹಿಂದೆ ಕ್ರಿಕೆಟ್ ತಂಡಕ್ಕೂ ತಾಲಿಬಾನಿಗಳು ಕಾಟ ಕೊಡುವ ಬಗ್ಗೆ ಅಲ್ಲಿನ ಕ್ರಿಕೆಟ್ ಆಟಗಾರರು ತಮ್ಮ ನೋವು ತೋಡಿಕೊಂಡಿದ್ದರು. ಇದನ್ನೂ ಓದಿ: ಐಸ್‍ಕ್ರೀಮ್ ಸವಿದು, ಜಿಮ್ ಮಾಡಿ ಫುಲ್ ಎಂಜಾಯ್ ಮೂಡ್‍ನಲ್ಲಿ ತಾಲಿಬಾನಿಗಳು

    ತಾಲಿಬಾನ್ ಉಗ್ರರು ಅಘ್ಘಾನಿಸ್ತಾನದ ಎಲ್ಲಾ ಕ್ರಿಕೆಟ್ ಸ್ಟೇಡಿಯಂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಅಘ್ಘಾನಿಸ್ತಾನದ ಕ್ರಿಕೆಟಿಗರ ಭವಿಷ್ಯ ಅಪಾಯಕ್ಕೆ ಸಿಲುಕಿದೆ. ಈ ನಡುವೆ ಅಘ್ಘಾನಿಸ್ತಾನ ತಂಡ ಮುಂಬರುವ ಟಿ20 ವಿಶ್ವಕಪ್‍ಗೂ ಅರ್ಹತೆ ಪಡೆದುಕೊಂಡಿದೆ.

    ಅಘ್ಘಾನಿಸ್ತಾನದ ಸ್ಟಾರ್ ಕ್ರಿಕೆಟರ್ ರಶೀದ್ ಖಾನ್, ಅಘ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಿದ್ದಾರೆ. ಜನರು ಭಯ ಭೀತಿಯಿಂದ ದೇಶ ತೊರೆಯುತ್ತಿದ್ದಾರೆ. ಇವೆಲ್ಲವನ್ನೂ ನೋಡಿ ನನಗೆ ನಿದ್ದೆ ಮಾಡಲಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನಮಗಾಗಿ ಪ್ರಾರ್ಥಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

  • ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ – ಅಫ್ಘನ್ ದೇಶವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಭಾಷಣ

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ತಾಲಿಬಾನಿ ಆಡಳಿತ ನಿನ್ನೆಯಿಂದ ಆರಂಭವಾಗಿದೆ. ನಿನ್ನೆ ರಾಜಧಾನಿ ಕಾಬೂಲ್ ನಗರವನ್ನು ತಾಲಿಬಾನ್ ಉಗ್ರರು ನಿಯಂತ್ರಣಕ್ಕೆ ತೆಗೆದುಕೊಂಡರು. ಇದಕ್ಕೂ ಮೊದಲೇ ಅಫ್ಘನ್ ಅಧ್ಯಕ್ಷ ಅಶ್ರಫ್ ಘನಿ ತನ್ನ ಆಪ್ತರೊಂದಿಗೆ ಉಜ್ಭೇಕಿಸ್ಥಾನದ ತಾಷ್ಕೆಂಟ್‍ಗೆ ಓಡಿ ಹೋಗಿ ತಲೆ ಮರೆಸಿಕೊಂಡಿದ್ದಾರೆ. ಈ ಎಲ್ಲದರ ನಡುವೆ ಅಘ್ಘಾನಿಸ್ಥಾನವನ್ನುದ್ದೇಶಿಸಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಇಂದು ರಾತ್ರಿ ಭಾಷಣ ಮಾಡಲಿದ್ದಾರೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ತಾಲಿಬಾನಿಗಳ ಅಟ್ಟಹಾಸ ಅಘ್ಘಾನಿಸ್ತಾನದಲ್ಲಿ ಆರಂಭವಾಗುತ್ತಿದ್ದಂತೆ ಅಲ್ಲಿನ ನಾಗರೀಕರು ಅಸಹಾಯಕ ಸ್ಥಿತಿಗೆ ತಲುಪಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ಸಿಕ್ಕ, ಸಿಕ್ಕ ವಿಮಾನವೇರಿ ದೇಶ ತೊರೆಯುತ್ತಿದ್ದಾರೆ. ಅಸಹಾಯಕ ಸ್ಥಿತಿಯಲ್ಲಿ ಮಾಜಿ ಅಧ್ಯಕ್ಷ ಹಮೀದ್ ಕರ್ಜೈ ನೇತೃತ್ವದಲ್ಲಿ ತಾಲಿಬಾನ್‍ಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದೆ. ಈ ಬೆಳವಣಿಗೆ ನಡುವೆ ಜೊ ಬೈಡನ್ ಅಘ್ಫಾನ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡುವುದಾಗಿ ತಿಳಿಸಿರುವುದು ಬಾರಿ ಕೂತುಹಲ ಮೂಡಿಸಿದೆ. ಇದನ್ನೂ ಓದಿ: ನಾಲ್ಕು ಕಾರ್, ಒಂದು ಹೆಲಿಕಾಪ್ಟರ್ ನಲ್ಲಿ ನಗದು ಹೊತ್ತೊಯ್ದ ಅಶ್ರಫ್ ಘನಿ

    ತಾಲಿಬಾನಿಗಳ ವಶಕ್ಕೆ ಅಫ್ಘಾನಿಸ್ತಾನ ಒಳಪಡುತ್ತಿದ್ದಂತೆ. ಅಮೆರಿಕಾದಲ್ಲಿ ಅಫ್ಘಾನ್ ಪ್ರಜೆಗಳಿಂದ ಪ್ರತಿಭಟನೆ ನಡೆಯಿತು. ವೈಟ್ ಹೌಸ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಅಘ್ಘಾನ್ ಪ್ರಜೆಗಳು ಅಲ್ಲಿ ನಡೆಯುತ್ತಿರುವ ಘಟನೆಗೆ ಅಮೆರಿಕ ನೇರ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿ, ಜೊ ಬೈಡನ್ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ಅಫ್ಘಾನ್ ನಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚೀನಾ ತನ್ನ ಕುತಂತ್ರ ಬುದ್ಧಿ ತೋರಿಸಲು ಮುಂದಾಗಿದೆ. ತಾಲಿಬಾನ್ ಸರ್ಕಾರದ ಜೊತೆಗೆ ಕೈಜೊಡಿಸಲು ಮುಂದಾಗಿರುವ ಚೀನಾ, ತಾಲಿಬಾನ್ ಜೊತೆ ಸ್ನೇಹ ಸಂಬಂಧ ಬೆಳೆಸಲು ಸಿದ್ಧ ಎಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.