Tag: ಅಜಂ ಖಾನ್

  • ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

    ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ: ಸುಪ್ರೀಂ

    ನವದೆಹಲಿ: ದೇಶದ ಎಲ್ಲಾ ಜನತೆಗೆ ಸರಿಸಮನಾಗಿ ಸಂವಿಧಾನದ 19(1)(ಎ) ಅಡಿ ನೀಡಲಾಗಿರುವ ವಾಕ್ ಸ್ವಾತಂತ್ರ್ಯವನ್ನು(Freedom of speech) ಸಚಿವರು, ಸಂಸದರು, ಶಾಸಕರು ಕೂಡ ಅನುಭವಿಸುತ್ತಾರೆ. ಈ ವಿಚಾರದಲ್ಲಿ ರಾಜಕಾರಣಿಗಳಿಗೆ ಹೆಚ್ಚುವರಿ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು 4:1ರ ಅನುಪಾತದಲ್ಲಿ ಸುಪ್ರೀಂಕೋರ್ಟ್(Supreme Court) ತೀರ್ಪು ನೀಡಿದೆ.

    2016ರ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಸಚಿವರೊಬ್ಬರು ನೀಡುವ ಹೇಳಿಕೆಯನ್ನು ಇಡೀ ಸರ್ಕಾರಕ್ಕೆ ಅನ್ವಯಿಸಲಾಗದು. ಸಾಮೂಹಿಕ ಹೊಣೆಗಾರಿಕೆಯ ತತ್ವವನ್ನು ಅನ್ವಯಿಸಿದರೂ ಸಚಿವರು ನೀಡಿದ ಹೇಳಿಕೆಯನ್ನು ಸರ್ಕಾರಕ್ಕೆ ವಿಕೃತವಾಗಿ ಆರೋಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

    ನ್ಯಾಯಮೂರ್ತಿಗಳಾದ ಎಸ್‍ಎ ನಜೀರ್, ಬಿಆರ್ ಗವಾಯಿ, ಎಎಸ್ ಬೋಪಣ್ಣ, ರಾಮಸುಬ್ರಮಣಿಯನ್ ಮತ್ತು ಬಿವಿ ನಾಗರತ್ನ ಅವರಿದ್ದ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದೆ. ಈ ಪೈಕಿ ಬಿವಿ ನಾಗರತ್ನ ಅವರು ಭಿನ್ನ ತೀರ್ಪು ನೀಡಿದ್ದಾರೆ.

    ಸಾಮೂಹಿಕ ಅತ್ಯಾಚಾರಕ್ಕೆ ಕುಟುಂಬದ ಬಗ್ಗೆ ಉತ್ತರಪ್ರದೇಶದ ಎಸ್‍ಪಿ ಮುಖಂಡ, ಅಂದು ಸಚಿವರಾಗಿದ್ದ ಅಜಂ ಖಾನ್(Azam Khan) ಇದು ರಾಜಕೀಯ ಷಡ್ಯಂತ್ರ ಅಲ್ಲದೇ ಬೇರೆ ಏನೂ ಇಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದಅರ್ಜಿ ವಿಚಾರಣೆ ನಡೆಸಿದ್ದ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ. ಇದನ್ನೂ ಓದಿ: ಹೊರಗಡೆಯ ಆಹಾರಕ್ಕೆ ನಿರ್ಬಂಧ ಹೇರಬಹುದು, ಥಿಯೇಟರ್‌ಗಳು ಶುದ್ಧವಾದ ಕುಡಿಯುವ ನೀರು ಫ್ರೀ ನೀಡಬೇಕು: ಸುಪ್ರೀಂ

    ನಾಲ್ವರು ನ್ಯಾಯಾಧೀಶರು ಹೇಳಿದ್ದೇನು?
    ಸಂವಿಧಾನದ 19(2)ವಿಧಿಯಲ್ಲಿರದ ನಿರ್ಬಂಧಗಳನ್ನು 19(1)ರ ಮೇಲೆ ವಿಧಿಸುವಂತಿಲ್ಲ. ಸಚಿವರೊಬ್ಬರು ನೀಡುವ ಹೇಳಿಕೆಯನ್ನು ಇಡೀ ಸರ್ಕಾರಕ್ಕೆ ಅನ್ವಯಿಸಲಾಗದು. ಸಚಿವರು ನೀಡಿದ ಹೇಳಿಕೆಯನ್ನು ಸರ್ಕಾರಕ್ಕೆ ಅನ್ವಯಿಸಿ ದೂಷಿಸುವುದು ಸಾಧ್ಯವಿಲ್ಲ. ಜನರ ಹಕ್ಕುಗಳಿಗೆ ವಿರುದ್ಧವಾಗಿ ಸಚಿವರು ಹೇಳಿಕೆ ನೀಡಿದಲ್ಲಿ ಅದು ಸಾಂವಿಧಾನಿಕ ಲೋಪವಾಗದು.

    ಸಾರ್ವಜನಿಕ ಹುದ್ದೆಯಲ್ಲಿರುವವರಿಂದ ಕರ್ತವ್ಯಚ್ಯುತಿ ಉಂಟಾದರೆ ಮಾತ್ರ ಅದು ಸಾಂವಿಧಾನಿಕ ಲೋಪ. ಸಾರ್ವಜನಿಕ ಹುದ್ದೆಯಲ್ಲಿರುವವರು ಅಪರಾಧ ಘಟಿಸುವಿಕೆಗೆ ಕಾರಣರಾದರೆ ಆಗ ಸಾಂವಿಧಾನಿಕ ಲೋಪವಾಗುತ್ತದೆ. ವಾಕ್‍ಸ್ವಾತಂತ್ರ್ಯದ ಹಕ್ಕು,ನಿರ್ಬಂಧಗಳನ್ನು ಸರ್ಕಾರ, ಸರ್ಕಾರದಾಚೆಯ ಶಕ್ತಿಗಳ ವಿರುದ್ಧ ಚಲಾಯಿಸಬಹುದು.

     

    ನ್ಯಾ. ಬಿವಿ ನಾಗರತ್ನ ಹೇಳಿದ್ದೇನು?
    ಸಚಿವರ ಹೇಳಿಕೆಯೂ ಸರ್ಕಾರದ ವಿಚಾರ ಹೊಂದಿದರೆ ಅದು ಸರ್ಕಾರದ ನಿಲುವನ್ನೇ ಪ್ರದರ್ಶಿಸಿದಂತೆ ಆಗುತ್ತದೆ. ಸಚಿವರ ಹೇಳಿಕೆಯ ಸಾಮೂಹಿಕ ಜವಾಬ್ದಾರಿಯನ್ನು ಸರ್ಕಾರದ ಮೇಲೆ ಹೊರಿಸಬಹುದು. ಆದರೆ ವಾಕ್‍ಸ್ವಾತಂತ್ರ್ಯದ ಹಕ್ಕಿನ ಮೇಲೆ ಕೋರ್ಟ್‍ನಿಂದ ಹೆಚ್ಚುವರಿ ನಿರ್ಬಂಧ ಸಾಧ್ಯವಿಲ್ಲ. ಹೆಚ್ಚಿನ ನಿರ್ಬಂಧ ವಿಧಿಸುವ ಸಂಬಂಧ ಕಾನೂನು ರೂಪಿಸುವುದು ಸಂಸತ್‍ನ ಕೆಲಸವಾಗಿದೆ.

    ದ್ವೇಷ ಭಾಷಣಗಳು ಸಮಾಜವನ್ನು ಅಸಮಾನವಾಗಿಸುತ್ತವೆ.ಇದರಿಂದಾಗಿ ಮೂಲಭೂತ ಮೌಲ್ಯಗಳಿಗೆ ದ್ವೇಷ ಭಾಷಣಗಳು ಹೊಡೆತ ನೀಡುತ್ತವೆ. ವಿವಿಧ ಹಿನ್ನೆಲೆಯ ನಾಗರಿಕರ ಮೇಲೆ ಆಕ್ರಮಣ ಮಾಡುತ್ತವೆ. ಪ್ರತಿಯೊಬ್ಬ ವ್ಯಕ್ತಿಯ ಘನತೆ ಎತ್ತಿಹಿಡಿಯುವುದು ಎಲ್ಲರ ಕರ್ತವ್ಯ. ಧರ್ಮ,ಜಾತಿ,ಮಹಿಳೆಯರ ಗೌರವಗಳನ್ನು ದ್ವೇಷ ಭಾಷಣ ಹಾಳು ಮಾಡಬಾರದು.

    Live Tv
    [brid partner=56869869 player=32851 video=960834 autoplay=true]

  • 45 ವರ್ಷಗಳಲ್ಲಿಯೇ ಮೊದಲ ಬಾರಿಗೆ ರಾಮ್‌ಪುರ ಚುನಾವಣೆಯಿಂದ ದೂರ ಉಳಿದ ಅಜಂ ಖಾನ್ ಕುಟುಂಬ

    45 ವರ್ಷಗಳಲ್ಲಿಯೇ ಮೊದಲ ಬಾರಿಗೆ ರಾಮ್‌ಪುರ ಚುನಾವಣೆಯಿಂದ ದೂರ ಉಳಿದ ಅಜಂ ಖಾನ್ ಕುಟುಂಬ

    ಲಕ್ನೋ: 1977ರ ನಂತರ 45 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ, ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ (Samajwadi Party leader Azam Khan) ಮತ್ತು ಅವರ ಕುಟುಂಬಸ್ಥರು ರಾಮ್‌ಪುರ (Rampur) ವಿಧಾನಸಭಾ ಸ್ಥಾನ  (Assembly seat) ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

    ದ್ವೇಷ ಭಾಷಣ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಬಳಿಕ ತೆರವಾದ ಸ್ಥಾನಕ್ಕೆ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯಲಿದೆ. ಸಮಾಜವಾದಿ ಪಕ್ಷವು ಅಜಂ ಖಾನ್ ಅವರ ಪತ್ನಿ ತಂಜೀನ್ ಫಾತಿಮಾ (Tanzeen Fatima) ಅಥವಾ ಅವರ ಸೊಸೆಯನ್ನು ಕಣಕ್ಕಿಳಿಸುತ್ತಿಲ್ಲ. ಬದಲಾಗಿ ಅಸೀಮ್ ರಜಾಗೆ (Asim Raza) ಟಿಕೆಟ್ ನೀಡಿದೆ. ಅಜಂ ಖಾನ್ ಅಥವಾ ಅವರ ಕುಟುಂಬಸ್ಥರು 1977 ರಿಂದ ಈ ಕ್ಷೇತ್ರದಿಂದ ನಿರಂತರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

    ಅಜಂ ಖಾನ್ ಅವರು 1977 ರಿಂದ 2022 ರವರೆಗೆ 12 ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅದರಲ್ಲಿ ಹತ್ತು ಬಾರಿ ಗೆದ್ದಿದ್ದಾರೆ ಮತ್ತು ಎರಡು ಬಾರಿ ಸೋತಿದ್ದಾರೆ. 2019ರಲ್ಲಿ ಅಜಂ ಖಾನ್ ಸಂಸತ್ ಸದಸ್ಯರಾದ ಬಳಿಕ ನಡೆದ ಉಪಚುನಾವಣೆಯಲ್ಲಿ ಅವರ ಪತ್ನಿ ತಜೀನ್ ಫಾತ್ಮಾ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅಸೀಂ ರಾಜಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಇದನ್ನೂ ಓದಿ: ಇರಾನ್‍ನಲ್ಲಿ ಹೆಚುತ್ತಿರುವ ಹಿಜಬ್ ವಿರೋಧಿ ಪ್ರತಿಭಟನೆ- ಮೆಟ್ರೋದಲ್ಲಿ ಮಹಿಳೆಯರನ್ನು ಥಳಿಸಿದ ಪೊಲೀಸರು

    ಎಪ್ಪತ್ತು ಮತ್ತು ಎಂಬತ್ತರ ದಶಕದಲ್ಲಿ ಕಾಂಗ್ರೆಸ್ (Congress) ಪ್ರಬಲ ಶಕ್ತಿ ಹೊಂದಿದ್ದ ಪಕ್ಷವಾಗಿತ್ತು. 1980 ಮತ್ತು 1993ರ ನಡುವೆ, ಅಜಂ ಖಾನ್ ಐದು ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಸತತವಾಗಿ ಗೆದ್ದರು. ಆದರೆ 1996ರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‍ನ ಅಫ್ರೋಜ್ ಅಲಿ ಖಾನ್ ವಿರುದ್ಧ ಸೋತರು. ಅಜಂ ಖಾನ್ ಅವರನ್ನು ರಾಜ್ಯಸಭೆಗೆ ಕಳುಹಿಸಲಾಯಿತು. ನಂತರ ಅವರು 2002 ಮತ್ತು 2022ರ ನಡುವೆ ಮತ್ತೆ ಸತತವಾಗಿ ಐದು ಬಾರಿ ಚುನಾವಣೆಯಲ್ಲಿ ಗೆದ್ದರು. ಇದನ್ನೂ ಓದಿ: ಡೇಟಿಂಗ್ ಆ್ಯಪ್, ಲೀವ್ ಇನ್ ಟುಗೆದರ್ ಹಾವಳಿ- ಕಾಲೇಜುಗಳಲ್ಲಿ ಮಹಿಳಾ ಆಯೋಗದಿಂದ ಸ್ಪೆಷಲ್ ಕ್ಲಾಸ್

    ಅಜಂ ಖಾನ್ ಮತ್ತು ಅವರ ಕುಟುಂಬ ಕಾನೂನು ಮೊಕದ್ದಮೆಗಳನ್ನು ಎದುರಿಸಿದೆ. 2014ರಲ್ಲಿ ಅಖಿಲೇಶ್ ಯಾದವ್ (Akhilesh Yadav) ಸರ್ಕಾರದಲ್ಲಿ ಸಚಿವರಾಗಿದ್ದಾಗ ಸರ್ಕಾರಿ ಭೂಮಿಯನ್ನು ಕಬಳಿಸಲು ಸಂಚು ರೂಪಿಸಿದ್ದ ಆರೋಪದಡಿ ಅಜಂ ಖಾನ್ ಅವರ ಪತ್ನಿ ಮತ್ತು ಪುತ್ರನ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿತ್ತು.

    ನಂತರ ದ್ವೇಷ ಭಾಷಣ ಮಾಡಿದ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಾಯವು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅಜಂ ಖಾನ್ ಅವರನ್ನು ಅಸೆಂಬ್ಲಿ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಯೋಗಿ, ಮೋದಿ ವಿರುದ್ಧ ದ್ವೇಷದ ಭಾಷಣ – ಅಜಂ ಖಾನ್‍ಗೆ 3 ವರ್ಷ ಜೈಲು

    ಯೋಗಿ, ಮೋದಿ ವಿರುದ್ಧ ದ್ವೇಷದ ಭಾಷಣ – ಅಜಂ ಖಾನ್‍ಗೆ 3 ವರ್ಷ ಜೈಲು

    ಲಕ್ನೋ: ದ್ವೇಷದ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್‍ಗೆ (Azam Khan) ಕೋರ್ಟ್ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು (Jail) ಶಿಕ್ಷೆಯನ್ನು ವಿಧಿಸಿದೆ.

    2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಅಜಂ ಖಾನ್ ದ್ವೇಷದ ಭಾಷಣ ಮಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಇಂದು ರಾಂಪುರ ನ್ಯಾಯಾಲಯ (Court) ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

    ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ) ಮತ್ತು ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 125ರ ಅಡಿಯಲ್ಲಿ ಅಜಂ ಖಾನ್ ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಪಿಒಕೆ ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ: ರಾಜನಾಥ್ ಸಿಂಗ್

    ಅಜಂ ಖಾನ್‍ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದರಿಂದ ಶಾಸಕ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಸಮಾಜವಾದಿ ಪಕ್ಷದ ನಾಯಕರಾದ ಅಜಂ ಖಾನ್ ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ ಸುಮಾರು 90 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ವಂಚನೆ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದನ್ನೂ ಓದಿ: ನ.11ಕ್ಕೆ ಬೆಂಗಳೂರಿಗೆ ಮೋದಿ – ಅಂದು ಏನೇನು ಕಾರ್ಯಕ್ರಮ ನಡೆಯುತ್ತೆ?

    Live Tv
    [brid partner=56869869 player=32851 video=960834 autoplay=true]

  • ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ

    ಜೈಲಿನಿಂದ ಬಿಡುಗಡೆಯಾಗ್ತಿದ್ದಂತೆ ಎನ್‍ಕೌಂಟರ್ ಬೆದರಿಕೆ ಹಾಕಲಾಗ್ತಿದೆ ಅಂತ ಅಜಂ ಖಾನ್ ಆರೋಪ

    ಲಕ್ನೋ: ನನಗೆ ಎನ್‍ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸೀತಾಪುರ ಜೈಲಿನಿಂದ ಹೊರಬಂದ ನಂತರ ಎಸ್‍ಪಿ ನಾಯಕ ಅಜಂ ಖಾನ್ ಆರೋಪಿಸಿದ್ದಾರೆ.

    ಈ ಕುರಿತು ರಾಂಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆತ್ಮೀಯರು ಸಾಕಷ್ಟು ಬಾರಿ ನನ್ನನ್ನು ಹತ್ಯೆಗೈಯಲು ಪ್ರಯತ್ನಪಟ್ಟಿದ್ದಾರೆ. ಆದರೂ ನಾನು ಬದುಕುಳಿದಿದ್ದೇನೆ. ನನಗೆ ಎನ್‍ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ನಾನು ಯಾವಾಗಲೂ ನನ್ನ ನಂಬಿಕೆಯನ್ನು ಸಾಬೀತುಪಡಿಸಲು ಪ್ರಯತ್ನಿಸಿದೆ. ಆದರೆ ಯಾರು ಅದಕ್ಕೆ ಸಾಥ್ ನೀಡಲಿಲ್ಲ. ಸುಪ್ರೀಂ ಕೋರ್ಟ್‍ನಿಂದ ನನಗೆ ನ್ಯಾಯ ಸಿಕ್ಕಿದೆ. ನನ್ನ ವಿನಾಶಗಳಲ್ಲಿ ನನ್ನದೇ ಕೈ ಇದೆ. ನನ್ನದೇ ಜನರ ಕೊಡುಗೆ ದೊಡ್ಡದು ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಮದುವೆ ಮನೆಯಲ್ಲಿ ಕರಿಮಣಿ ಪೋಣಿಸಿದ ಶಾಸಕ ರೇಣುಕಾಚಾರ್ಯ

    ಜ್ಞಾನವಾಪಿ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಷಯವು ಬಾಬರಿ ಮಸೀದಿಗಿಂತ ಸ್ವಲ್ಪ ಭಿನ್ನವಾಗಿದೆ. ಏಕೆಂದರೆ ಅದರ ವಿಚಾರಣೆಯು 2-3 ವಾರಗಳಲ್ಲಿ ಮುಗಿದಿದೆ. ಬಾಬರಿ ಮಸೀದಿ ಪ್ರಕರಣವು ಮುಗಿದು ವರ್ಷಗಳೇ ಕಳೆದಿವೆ. ಈ ಬಗ್ಗೆ ಈಗ ನಾನೀಗ ಮಾತನಾಡುವುದು ತಪ್ಪು. ?ಕೆಲವರು ದೇಶದ ವಾತಾವರಣ ಹಾಳು ಮಾಡುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

    ಮತ್ತೊಂದೆಡೆ, ವಿರೋಧ ಪಕ್ಷದ ನಾಯಕ ಎಂದು ಏಕೆ ನಿಮ್ಮನ್ನ ಹೆಸರಿಸಲಿಲ್ಲ ಎಂಬ ಪ್ರಶ್ನೆಗೆ ಮಾತನಾಡಿ, ಯಾಕೆಂದರೆ ನಾನು ಅವರಿಗಿಂತ ದೊಡ್ಡ ನಾಯಕ ಎಂದು ಉತ್ತರಿಸಿದರು. ಇನ್ನೂ ಮುಂಬರುವ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದರು.

    ಅನೇಕ ಪ್ರಕರಣಗಳಲ್ಲಿ ಅಜಂ ಖಾನ್ ಅವರು ಕಳೆದ ಕನಿಷ್ಠ 27 ತಿಂಗಳಿನಿಂದ ಜೈಲು ವಾಸ ಅನುಭವಿಸುತ್ತಿದ್ದರು. ಇದರಲ್ಲಿ ಭೂ ಕಬಳಿಕೆ, ವಂಚನೆ ಪ್ರಕರಣಗಳು ಸೇರಿವೆ. ರಾಂಪುರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ಅಜಂ ಖಾನ್ ಅವರ ವಿರುದ್ಧದ 89ನೇ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದೆ. ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲಿ ಇನ್ಮುಂದೆ 33% ಮಹಿಳೆಯರಿಗೆ ಮೀಸಲು

    ಉತ್ತರ ಪ್ರದೇಶದ ಸೀತಾಪುರ ಜೈಲಿನಲ್ಲಿ 27 ತಿಂಗಳುಗಳನ್ನು ಕಳೆದ ನಂತರ ಅಜಂ ಖಾನ್ ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸೀತಾಪುರ ಜೈಲಿನಿಂದ ಅವರನ್ನು ಕರೆದೊಯ್ಯಲು ಇಬ್ಬರು ಪುತ್ರರು, ಶಿವಪಾಲ್ ಯಾದವ್ ಮತ್ತು ಎಲ್ಲಾ ಬೆಂಬಲಿಗರು ಸ್ಥಳದಲ್ಲಿ ಹಾಜರಿದ್ದರು. ಸೀತಾಪುರದಲ್ಲಿರುವ ಎಸ್‍ಪಿಯ ಮಾಜಿ ಶಾಸಕ ಅನೂಪ್ ಗುಪ್ತಾ ಅವರ ಮನೆಯಲ್ಲಿ ಉಪಹಾರ ಸೇವಿಸಿದ ನಂತರ ಅವರು ರಾಂಪುರದಲ್ಲಿರುವ ತಮ್ಮ ಮನೆಗೆ ತೆರಳಿದರು.

    ಅವರ ಬಿಡುಗಡೆಯ ಸಂದರ್ಭದಲ್ಲಿ ಅವರ ಪಕ್ಷದ ಎಸ್‍ಪಿಯ ಯಾವ ದೊಡ್ಡ ನಾಯಕರೂ ಇರಲಿಲ್ಲ. ಆದರೆ ಎಸ್‍ಪಿ ಅಧ್ಯಕ್ಷ ಅಖಿಲೇಶ್ ಟ್ವೀಟ್ ಮಾಡುವ ಮೂಲಕ ಅಜಂ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ. ಅಲ್ಲದೆ ಎಸ್‍ಪಿಯ ಹಿರಿಯ ನಾಯಕ ಜಾಮೀನಿನ ಮೇಲೆ ಬಿಡುಗಡೆಯಾದ ಆಜಂ ಖಾನ್ ಜೀ ಅವರಿಗೆ ಹೃತ್ಪೂರ್ವಕ ಸ್ವಾಗತ. ಜಾಮೀನಿನ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ನ್ಯಾಯಕ್ಕೆ ಹೊಸ ಮಾನದಂಡಗಳನ್ನು ನೀಡಿದೆ. ಉಳಿದೆಲ್ಲ ಸುಳ್ಳು ಪ್ರಕರಣಗಳು ಮತ್ತು ಪ್ರಕರಣಗಳಲ್ಲಿ ಅವರು ಖುಲಾಸೆಯಾಗುತ್ತಾರೆ ಎಂಬ ಭರವಸೆ ಇದೆ. ಸುಳ್ಳಿಗೆ ಕ್ಷಣಗಳಿವೆ, ಶತಮಾನಗಳಲ್ಲ ಎಂದು ಹೇಳಿದರು.

  • ಎಸ್‍ಪಿ ನಾಯಕ ಅಜಂ ಖಾನ್‍ಗೆ ಮಧ್ಯಂತರ ಜಾಮೀನು – ಜೈಲಿನಿಂದ ರಿಲೀಸ್

    ಎಸ್‍ಪಿ ನಾಯಕ ಅಜಂ ಖಾನ್‍ಗೆ ಮಧ್ಯಂತರ ಜಾಮೀನು – ಜೈಲಿನಿಂದ ರಿಲೀಸ್

    ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‍ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು, ಇಂದು ಬಿಡುಗಡೆಯಾಗಿದ್ದಾರೆ.

    ಹೌದು, ಸುಮಾರು 27 ತಿಂಗಳ ಸೆರೆವಾಸದ ಬಳಿಕ ಕೊನೆಗೂ ಅಜಂ ಖಾನ್‍ಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಉತ್ತರಪ್ರದೇಶದ ರಾಂಪುರದ ಕೊತ್ವಾಲಿ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಅವರಿಗೆ ಈ ಜಾಮೀನನ್ನು ಸುಪ್ರೀಂ ಕೋರ್ಟ್ ನೀಡಿದೆ.

    ಫೆಬ್ರವರಿ 2020 ರಿಂದ ಜೈಲಿನಲ್ಲಿರುವ ಖಾನ್ ವಿರುದ್ಧ ಇದು 88 ಪ್ರಕರಣಗಳಿದ್ದು, ವಿಚಾರಣಾ ನ್ಯಾಯಾಲಯದಿಂದ 88 ಪ್ರಕರಣಗಳಿಗೂ ಜಾಮೀನು ಪಡೆದುಕೊಂಡಿದ್ದಾರೆ. 89ನೇ ಪ್ರಕರಣದಲ್ಲಿ ಜಾಮೀನಿಗೆ ವಿಚಾರಣೆ ಪ್ರಾರಂಭವಾಗುವ ಮುನ್ನ ಸುಪ್ರೀಂಕೋರ್ಟ್ ಆರ್ಟಿಕಲ್ 142 ಮೂಲಕ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಲಾಲು ಪ್ರಸಾದ್ ಯಾದವ್‍ಗೆ ಶಾಕ್ ಕೊಟ್ಟ ಸಿಬಿಐ – ಲಾಲು, ಪುತ್ರಿ ನಿವಾಸದ ಮೇಲೆ ದಾಳಿ

    ಇತ್ತೀಚೆಗೆ ರಾಂಪುರ ಪಬ್ಲಿಕ್ ಸ್ಕೂಲ್‍ನ ಭೂ ಕಬಳಿಕೆ ಮತ್ತು ಶಾಲೆಗೆ ಮಾನ್ಯತೆ ಪಡೆಯಲು ಕಟ್ಟಡದ ಪ್ರಮಾಣಪತ್ರಗಳನ್ನು ನಕಲಿ ಮಾಡಲಾಗಿದೆ ಎಂಬ ಆರೋಪವನ್ನು ಅಜಂ ಖಾನ್ ಮೇಲೆ ಹೊರಿಸಲಾಗಿತ್ತು. ಇದನ್ನೂ ಓದಿ: ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

    ಇದೀಗ ಅಜಂ ಖಾನ್ ಬಿಡುಗಡೆಯಾಗುತ್ತಿರುವ ಹಿನ್ನೆಲೆ ಅವರನ್ನು ಬರಮಾಡಿಕೊಳ್ಳಲು ಪಕ್ಷದ ಬೆಂಬಲಿಗರು ಬೆಳ್ಳಂಬೆಳಗ್ಗೆ ಸೀತಾಪುರ ಜೈಲಿನ ಬಳಿ ಜಮಾಯಿಸಿ ಜೈಕಾರ ಕೂಗಿದರು. ಅವರ ಪುತ್ರರಾದ ಅಬ್ದುಲ್ಲಾ ಮತ್ತು ಅದೀಬ್ ಸಹ ಜೈಲಿನ ಬಳಿ ಆಗಮಿಸಿ ತಂದೆಯನ್ನು ಸ್ವಾಗತಿಸಿದರು.

  • ಜೈಲಿನಿಂದಲೇ ಅಜಂ ಖಾನ್‌ ವಿಧಾನಸಭೆಗೆ ಎಂಟ್ರಿ

    ಜೈಲಿನಿಂದಲೇ ಅಜಂ ಖಾನ್‌ ವಿಧಾನಸಭೆಗೆ ಎಂಟ್ರಿ

    ಲಕ್ನೋ: ದೇಶದಲ್ಲಿ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಹಲವು ಪ್ರಕರಣಗಳಲ್ಲಿ ಜೈಲುವಾಸ ಅನುಭವಿಸುತ್ತಿರುವ ಸಮಾಜವಾದಿ ಪಕ್ಷದ ಅಜಂ ಖಾನ್‌ ಅವರು ಭಾರಿ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

    ರಾಂಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಅಜಂ ಖಾನ್ 63,642 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಬಿಜೆಪಿಯ ಆಕಾಶ್ ಸಕ್ಸೇನಾ ವಿರುದ್ಧ 50,880 ಮತಗಳ ಅಂತರದಿಂದ ಭಾರಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ನಾನು ಆತಂಕವಾದಿಯಲ್ಲ ಎಂದು ಮತದಾರರು ಸಾಬೀತು ಮಾಡಿದ್ದಾರೆ: ಕೇಜ್ರಿವಾಲ್

    ಎಸ್‌ಪಿ ಅಭ್ಯರ್ಥಿ ಅಜಂ ಖಾನ್ ಅವರ ಮೇಲೆ ದಾಖಲಾಗಿರುವ ಹಲವು ದೂರುಗಳ ಹಿನ್ನೆಲೆಯಲ್ಲಿ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ. ಭೂ ಕಬಳಿಕೆಯೂ ಸೇರಿದಂತೆ ಖಾನ್‌ ವಿರುದ್ಧ ಉತ್ತರ ಪ್ರದೇಶದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಹತ್ತಾರು ದೂರುಗಳು ದಾಖಲಾಗಿದ್ದು, ಸರ್ಕಾರವೂ ‘ಭೂ ಮಾಫಿಯಾ’ಗಳ ಪಟ್ಟಿಯಲ್ಲಿ ಆಜಂ ಅವರ ಹೆಸರನ್ನು ಪ್ರಕಟಿಸಿತ್ತು.

    ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಟಿ, ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಗ್ಗೆಯೂ ರಾಂಪುರ ಠಾಣೆಯ ಪೊಲೀಸರು ದೂರು ದಾಖಲಿಸಿದ್ದರು. ಇದಲ್ಲದೆ ಆಜಂ ಅವರು ತಮ್ಮ ಕೃಷಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ 25ಕ್ಕೂ ಹೆಚ್ಚು ರೈತರು ಇತ್ತೀಚೆಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಇದನ್ನೂ ಓದಿ: ಮೌನವಾಗಿರುವ ಬಿಜೆಪಿ ಮತದಾರರು ದೊಡ್ಡ ಸಂದೇಶ ಕೊಟ್ಟಿದ್ದಾರೆ: ತೇಜಸ್ವಿ ಸೂರ್ಯ 

    ಮಗನ ಜನನ ದಿನಾಂಕದ ನಕಲಿ ಪ್ರಮಾಣಪತ್ರ ಪ್ರಕರಣದಲ್ಲಿ ಪತ್ನಿ ಮತ್ತು ಮಗ ಸೇರಿದಂತೆ ಖಾನ್ ಅವರನ್ನು ಫೆ.23 ರಂದು ಬಂಧಿಸಲಾಗಿತ್ತು.

  • ಮೇಕೆ ಕಳ್ಳತನ – ಸಂಸದ ಅಜಂ ಖಾನ್ ವಿರುದ್ಧ ಎಫ್‍ಐಆರ್

    ಮೇಕೆ ಕಳ್ಳತನ – ಸಂಸದ ಅಜಂ ಖಾನ್ ವಿರುದ್ಧ ಎಫ್‍ಐಆರ್

    ಲಕ್ನೋ: ಪುಸ್ತಕ ಹಾಗೂ ಎಮ್ಮೆ ಕಳ್ಳತನದ ಆರೋಪದ ನಂತರ ಇದೀಗ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ವಿರುದ್ಧ ಮೇಕೆ ಕಳ್ಳತನದ ಕುರಿತು ದೂರು ದಾಖಲಾಗಿದೆ.

    ರಾಂಪುರ ಪಬ್ಲಿಕ್ ಗೇಟ್‍ನ ಯತೀಮ್ ಖಾನ್ ಸರಾಯ್ ಗೇಟ್ ನಿವಾಸಿ ನಸೀಮಾ ಖಾತೂನ್(50) ಅಕ್ಟೋಬರ್ 2016ರಂದು ನೀಡಿದ ದೂರಿನ ಮೇರೆಗೆ ಅಜಂ ಖಾನ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಅಕ್ಟೋಬರ್ 15, 2016ರಂದು ಅಜಂ ಖಾನ್, ಏಳು ಸಹೋದ್ಯೋಗಿಗಳು ಹಾಗೂ 25 ಜನ ಅಪರಿಚಿತರು ನಮ್ಮ ಮನೆಗೆ ನುಗ್ಗಿ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಮನೆಯಲ್ಲಿದ್ದ ಆಭರಣಗಳು, ಮೂರು ಎಮ್ಮೆ, ಒಂದು ಹಸು ಹಾಗೂ ನಾಲ್ಕು ಮೇಕೆಗಳನ್ನು ಕದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಕಳೆದೆರಡು ದಶಕಗಳಿಂದ ವಕ್ಫ್ ಮಂಡಳಿಯ ಆಸ್ತಿಯಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದೇನೆ. ಶಾಲೆಗೆ ಭೂಮಿ ಅಗತ್ಯವಿರುವುದರಿಂದ ಖಾನ್ ಹಾಗೂ ಅವರ ತಂಡದ ಸದಸ್ಯರು ಆ ಜಾಗವನ್ನು ಖಾಲಿ ಮಾಡುವಂತೆ ಕೇಳಿಕೊಂಡರು. ನಾವು ಖಾಲಿ ಮಾಡದ ಹಿನ್ನೆಲೆ ಮನೆಯನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

    ಎಫ್‍ಐಆರ್‍ನಲ್ಲಿ ಶಿಯಾ ವಕ್ಫ್ ಮಂಡಳಿಯ ಅಧ್ಯಕ್ಷ ವಸೀಮ್ ರಿಜ್ವಿ, ಸುನ್ನಿ ಕೇಂದ್ರ ವಕ್ಫ್ ಮಂಡಳಿಯ ಅಧ್ಯಕ್ಷ ಜುಫರ್ ಅಹ್ಮದ್ ಫಾರೂಕಿ ಹಾಗೂ ಮಾಜಿ ವಲಯಾಧಿಕಾರಿ ಆಲಿ ಹಸನ್ ಹೆಸರು ಸಹ ಉಲ್ಲೇಖಿಸಲಾಗಿದೆ. ವಿದ್ಯುತ್ ಕಳ್ಳತನ ಮಾಡಿರುವ ಆರೋಪದ ಮೇಲೆ ಸಂಸದ ಅಜಂ ಖಾನ್ ಪತ್ನಿ ತಂಜೀನ್ ಫಾತಿಮಾ ವಿರುದ್ಧ ಸಹ ಎಫ್‍ಐಆರ್ ದಾಖಲಿಸಲಾಗಿದೆ.

    ಅಜಂ ಖಾನ್ ವಿರುದ್ಧ ರಾಜ್ಯ ಸರ್ಕಾರ ‘ಲ್ಯಾಂಡ್ ಮಾಫಿಯಾ’ ಆರೋಪ ಹೊರಿಸಿದ್ದು, ಈ ಮೂಲಕ ಅವರ ಮೇಲೆ ಒಟ್ಟು 82 ಪ್ರಕರಣಗಳು ದಾಖಲಾದಂತಾಗಿದೆ. ಅವುಗಳಲ್ಲಿ 50 ಪ್ರಕರಣಗಳು ಭೂ ಕಬಳಿಕೆಗೆ ಸಂಬಂಧಿಸಿವೆ. ಅಲಿಯಗಂಜ್ ರೈತರ ದೂರಿನ ಮೇರೆಗೆ ಅಜಂ ಖಾನ್ ವಿರುದ್ಧ ಇನ್ನೂ 28 ಪ್ರಕರಣಗಳು ದಾಖಲಾಗಿವೆ. ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಸ್ಥಳೀಯ ಕೋರ್ಟ್‍ನಿಂದ ಅಜಂ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ಸಹ ತಿರಸ್ಕೃತಗೊಂಡಿದೆ.

  • ಕ್ಷಮೆ ಕೇಳಿದ ಅಜಂ ಖಾನ್ – ಅಖಿಲೇಶ್ ವಿರುದ್ಧ ಏಕವಚನದಲ್ಲೇ ರಮಾದೇವಿ ಕ್ಲಾಸ್

    ಕ್ಷಮೆ ಕೇಳಿದ ಅಜಂ ಖಾನ್ – ಅಖಿಲೇಶ್ ವಿರುದ್ಧ ಏಕವಚನದಲ್ಲೇ ರಮಾದೇವಿ ಕ್ಲಾಸ್

    – ನಿಮ್ಮ ಕ್ಷಮೆಯನ್ನ ಸ್ವೀಕರಿಸಲ್ಲ
    – ಸ್ಪೀಕರ್ ಸ್ಥಾನದ ಗೌರವ ಗೊತ್ತಿಲ್ಲ

    ನವದೆಹಲಿ: ಸದನದಲ್ಲಿ ಸೆಕ್ಸಿ ಹೇಳಿಕೆ ನೀಡಿ, ವಿವಾದಕ್ಕೆ ಗುರಿಯಾಗಿದ್ದ ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಕ್ಷಮೆ ಕೇಳಿದ್ದಾರೆ.

    ಸ್ಪೀಕರ್ ಸ್ಥಾನದ ಬಗ್ಗೆ ನನಗೆ ಗೌರವವಿದೆ. ಆ ಸ್ಥಾನಕ್ಕೆ ಅಗೌರವ ತೋರುವ ಉದ್ದೇಶದಿಂದ ಹಾಗೆ ಮಾತನಾಡಿಲ್ಲ. ನನ್ನ ನಡವಳಿಕೆ ಹಾಗೂ ಮಾತುಗಳ ಬಗ್ಗೆ ಎಲ್ಲಾ ಸಂಸದರಿಗೂ ಗೊತ್ತು. ಅದರ ಹೊರತಾಗಿಯೂ ನಾನು ಸ್ಪೀಕರ್ ಸ್ಥಾನಕ್ಕೆ ಅವಮಾನ ಮಾಡಿದ್ದೇನೆ ಎನ್ನುವುದಾದರೆ ಕ್ಷಮೆ ಕೇಳುತ್ತೇನೆ ಎಂದು, ಕ್ಷಮೆಯಾಚಿಸಿ ಕುಳಿತರು.

    ಬಳಿಕ ಮಾತು ಆರಂಭಿಸಿದ ಬಿಜೆಪಿ ಸಂಸದೆ, ಡೆಪ್ಯುಟಿ ಸ್ಪೀಕರ್ ರಮಾದೇವಿ ಅವರು, ನಿಮ್ಮ ಕ್ಷಮೆಯನ್ನು ಸ್ವೀಕರಿಸುವುದಿಲ್ಲ. ನಾನು ಸ್ಪೀಕರ್ ಸ್ಥಾನದಲ್ಲಿ ಕುಳಿತಿದ್ದೆ. ಆಗ ಅಜಂ ಖಾನ್ ಹಾಗೇ ಮಾತನಾಡಿದ್ದಾರೆ. ಸ್ಪೀಕರ್ ಸ್ಥಾನದ ಗೌರವ ಇವರಿಗೆ ಗೊತ್ತಿಲ್ಲ. ಆ ಸನ್ನಿವೇಶವನ್ನು ದೇಶದ ಜನರು ನೋಡಿದ್ದಾರೆ. ಸದನದಲ್ಲಿ ಅಷ್ಟೇ ಅಲ್ಲ ಹೊರಗಡೆಯೂ ಹೀಗೆ ಬಾಯಿ ಹರಿಬಿಡುತ್ತಾರೆ. ಅವರಿಗೆ ನಾಲಿಗೆ ಮೇಲೆ ಹಿಡಿತವೇ ಇಲ್ಲ ಎಂದು ಗುಡುಗಿದರು.

    ಈ ವೇಳೆ ಅಜಂ ಖಾನ್ ಪರ ಎಸ್‍ಪಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಧ್ವನಿ ಏರಿಸುತ್ತಿದ್ದಂತೆ ಗರಂ ಆದ ರಮಾದೇವಿ ಅವರು, ಅಜಂ ಖಾನ್ ಬೆಂಬಲಕ್ಕೆ ಯಾಕೆ ನಿಲ್ಲುತ್ತಿಯಾ? ನಾನು ಮಾತುನಾಡುತ್ತೇನೆ ಅದನ್ನು ಮೊದಲು ಕೇಳು. ಅವರಿಂದ ನಾವೇಕೆ ಕ್ಷಮೆ ನಿರೀಕ್ಷೆ ಮಾಡಬೇಕು. ಜನರ ಸೇವೆಗಾಗಿ ಸಂಘರ್ಷ ಮಾಡುತ್ತಾ ಸಂಸತ್ ಬಂದಿದ್ದೇನೆಯೇ ಹೊರತು ನಿಮ್ಮ ಮಾತುಗಳನ್ನು ಕೇಳಲು ಇಲ್ಲಿಗೆ ಬಂದಿಲ್ಲ ಎಂದು ಏಕ ವಚನದಲ್ಲೇ ಕಿಡಿಕಾರಿದರು.

    ಈ ಹಿಂದೆ ಆಗಿದ್ದೇನು?:
    ತ್ರಿವಳಿ ತಲಾಖ್ ಕುರಿತು ಲೋಕಸಭೆಯಲ್ಲಿ ಗುರುವಾರ ಗಂಭೀರ ಚರ್ಚೆ ನಡೆದಿತ್ತು. ಈ ವೇಳೆ ಸ್ಪೀಕರ್ ಸ್ಥಾನದಲ್ಲಿದ್ದ ಬಿಜೆಪಿಯ ಸಂಸದೆ ರಮಾದೇವಿ ಅವರ ಕಡೆಗೆ ನೋಡಿದ ಅಜಂ ಖಾನ್, ನೀವು ಎಂದರೆ ನನಗೆ ತುಂಬಾ ಇಷ್ಟ. ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಮಾತನಾಡಬೇಕು ಎನಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಅಜಂ ಖಾನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಮಾದೇವಿ ಅವರು, ಸಂಸದರಾಗಿ ಹೀಗೆ ಮಾತನಾಡುವುದು ನಿಮ್ಮ ಘನತೆಗೆ ಶೋಭೆ ತರುವುದಿಲ್ಲ ಎಂದು ಗುಡುಗಿದ್ದರು. ತಕ್ಷಣವೇ ಎಚ್ಚೆತ್ತುಕೊಂಡ ಅಜಂ ಖಾನ್ ಅವರು, ನೀವು ನನ್ನ ಸಹೋದರಿ ಸಮಾನ. ಆ ದೃಷ್ಟಿಯಿಂದ ಮಾತನಾಡಿದೆ ಅಷ್ಟೇ ಎಂದು ಹೇಳಿ ಜಾರಿಕೊಂಡಿದ್ದರು.

    ಆಡಳಿತ ಪಕ್ಷದ ಸದಸ್ಯರು, ಅಜಂ ಖಾನ್ ಸದನಕ್ಕೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಆದರೆ ಕ್ಷಮೆ ಯಾಚಿಸಲು ನಿರಾಕರಿಸಿದ ಅಜಾಂ ಖಾನ್, ಅಸಂಸದೀಯ ಪದವನ್ನು ನಾನು ಬಳಸಿಲ್ಲ. ಬೇಕಾದರೆ ರಾಜೀನಾಮೆ ನೀಡುತ್ತೇನೆ. ಕ್ಷಮೆ ಕೇಳುವುದಿಲ್ಲ ಎಂದು ಕಲಾಪದಿಂದ ಹೊರನಡೆದಿದ್ದರು. ಈ ವೇಳೆ ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಅವರು, ಅಜಂ ಖಾನ್ ಮಾತು ಕವಿತೆಯಂತಿತ್ತು. ಅದರಲ್ಲೇನು ತಪ್ಪಿದೆ ಅಂತ ಸಮರ್ಥಿಸಿಕೊಂಡು ಸದನದಿಂದ ನಿರ್ಗಮಿಸಿದ್ದರು.

    ಅಜಂ ಖಾನ್ ರಾಜೀನಾಮೆಗೆ ಬಿಜೆಪಿ ಸಂಸದರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಪಕ್ಷಾತೀತವಾಗಿ ಮಹಿಳಾ ಸಂಸದರು ಅಜಂ ಖಾನ್ ವಿರುದ್ಧ ಗುಡುಗಿದ್ದಾರೆ. ಹೀಗಾಗಿ ಅವರ ವಿರುದ್ಧ ಶೀಘ್ರವೇ ಕ್ರಮಕೈಗೊಳ್ಳಲಾಗುತ್ತದೆ ಎಂದು ಸ್ಪೀಕರ್ ಓಂ ಬಿರ್ಲಾ ಭರವಸೆ ನೀಡಿದ್ದಾರೆ.

    ಈ ಸಂಬಂಧ ಮಾಯಾವತಿ ಅವರು ಕೂಡ ಟ್ವೀಟ್ ಮಾಡಿದ್ದು, ಎಸ್‍ಪಿ ಸಂಸದರ ಹೇಳಿಕೆ ಹೇಳಿಕೆ ಮಹಿಳೆಯ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದು, ನೋವು ತಂದಿದೆ. ಅಜಂ ಖಾನ್ ಅವರ ಹೇಳಿಕೆ ಅತ್ಯಂತ ಖಂಡನೀಯ. ಅವರು ಲೋಕಸಭೆಯಲ್ಲಿ ಅಷ್ಟೇ ಅಲ್ಲದೆ ಎಲ್ಲಾ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

  • ತಾಯಿ, ಮಗನಿಗೆ ಮುತ್ತು ಕೊಡುವುದು ಸೆಕ್ಸಾ: ಅಜಂ ಖಾನ್ ಪರ ಮಾಂಝಿ ಬ್ಯಾಟ್

    ತಾಯಿ, ಮಗನಿಗೆ ಮುತ್ತು ಕೊಡುವುದು ಸೆಕ್ಸಾ: ಅಜಂ ಖಾನ್ ಪರ ಮಾಂಝಿ ಬ್ಯಾಟ್

    ಪಾಟ್ನಾ: ಸಮಾಜವಾದಿ ಪಕ್ಷದ ಸಂಸದ ಅಜಂ ಖಾನ್ ಪರ ಬ್ಯಾಟ್ ಬೀಸಲು ಹೋಗಿ ಹಿಂದುಸ್ತಾನಿ ಆವಂ ಮೋರ್ಚಾ ಮುಖಂಡ, ಬಿಹಾರದ ಮಾಜಿ ಸಿಎಂ ಜಿತನ್ ರಾಮ್ ಮಾಂಝಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಪಾಟ್ನಾದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಣ್ಣ-ತಂಗಿ, ಅಕ್ಕ-ತಮ್ಮ ಭೇಟಿಯಾದಾಗ ಪರಸ್ಪರ ಚುಂಬಿಸುತ್ತಾರೆ. ಇದು ಸೆಕ್ಸ್ ಗೆ ಸಮಾನವೇ? ತಾಯಿ, ಮಗನಿಗೆ ಮುತ್ತು ಕೊಡುವುದು ಸೆಕ್ಸಾ? ಅಜಂ ಖಾನ್ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ಕ್ಷಮೆ ಕೇಳಬೇಕು ಎನ್ನುವುದು ಸರಿ. ಆದರೆ ಅಜಂ ಖಾನ್ ರಾಜೀನಾಮೆ ಕೊಡುವಷ್ಟು ದೊಡ್ಡ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ.

    ತ್ರಿವಳಿ ತಲಾಖ್ ಕುರಿತು ಲೋಕಸಭೆಯಲ್ಲಿ ಗುರುವಾರ ಗಂಭೀರ ಚರ್ಚೆ ನಡೆದಿತ್ತು. ಈ ವೇಳೆ ಸ್ಪೀಕರ್ ಸ್ಥಾನದಲ್ಲಿದ್ದ ಬಿಜೆಪಿಯ ಸಂಸದೆ ರಮಾದೇವಿ ಅವರ ಕಡೆಗೆ ನೋಡಿದ ಅಜಂ ಖಾನ್, ನೀವು ಎಂದರೆ ನನಗೆ ತುಂಬಾ ಇಷ್ಟ. ನಿಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಮಾತನಾಡಬೇಕು ಎನಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಅಜಂ ಖಾನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಮಾದೇವಿ ಅವರು, ಸಂಸದರಾಗಿ ಹೀಗೆ ಮಾತನಾಡುವುದು ನಿಮ್ಮ ಘನತೆಗೆ ಶೋಭೆ ತರುವುದಿಲ್ಲ ಎಂದು ಗುಡುಗಿದ್ದರು. ತಕ್ಷಣವೇ ಎಚ್ಚೆತ್ತುಕೊಂಡ ಅಜಂ ಖಾನ್ ಅವರು, ನೀವು ನನ್ನ ಸಹೋದರಿ ಸಮಾನ. ಆ ದೃಷ್ಟಿಯಿಂದ ಮಾತನಾಡಿದೆ ಅಷ್ಟೇ ಎಂದು ಹೇಳಿ ಜಾರಿಕೊಂಡಿದ್ದರು.

    ಆಡಳಿತ ಪಕ್ಷದ ಸದಸ್ಯರು, ಅಜಂ ಖಾನ್ ಸದನಕ್ಕೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಆದರೆ ಕ್ಷಮೆ ಯಾಚಿಸಲು ನಿರಾಕರಿಸಿದ ಅಜಾಂ ಖಾನ್, ಅಸಂಸದೀಯ ಪದವನ್ನು ನಾನು ಬಳಸಿಲ್ಲ. ಬೇಕಾದರೆ ರಾಜೀನಾಮೆ ನೀಡುತ್ತೇನೆ. ಕ್ಷಮೆ ಕೇಳುವುದಿಲ್ಲ ಎಂದು ಕಲಾಪದಿಂದ ಹೊರನಡೆದಿದ್ದರು. ಈ ವೇಳೆ ಎಸ್‍ಪಿ ನಾಯಕ ಅಖಿಲೇಶ್ ಯಾದವ್ ಅವರು, ಅಜಂ ಖಾನ್ ಮಾತು ಕವಿತೆಯಂತಿತ್ತು. ಅದರಲ್ಲೇನು ತಪ್ಪಿದೆ ಅಂತ ಸಮರ್ಥಿಸಿಕೊಂಡು ಸದನದಿಂದ ನಿರ್ಗಮಿಸಿದ್ದರು.

    ಅಜಂ ಖಾನ್ ರಾಜೀನಾಮೆಗೆ ಬಿಜೆಪಿ ಸಂಸದರು ಪಟ್ಟು ಹಿಡಿದು ಕುಳಿತಿದ್ದಾರೆ. ಜೊತೆಗೆ ಪಕ್ಷಾತೀತವಾಗಿ ಮಹಿಳಾ ಸಂಸದರು ಅಜಂ ಖಾನ್ ವಿರುದ್ಧ ಗುಡುಗಿದ್ದಾರೆ. ಹೀಗಾಗಿ ಅವರ ವಿರುದ್ಧ ಶೀಘ್ರವೇ ಕ್ರಮಕೈಗೊಳ್ಳಲಾಗುತ್ತದೆ ಎಂದು ಸ್ಪೀಕರ್ ಓಂ ಬಿರ್ಲಾ ಭರವಸೆ ನೀಡಿದ್ದಾರೆ.

    ಈ ಸಂಬಂಧ ಮಾಯಾವತಿ ಅವರು ಕೂಡ ಟ್ವೀಟ್ ಮಾಡಿದ್ದು, ಎಸ್‍ಪಿ ಸಂಸದರ ಹೇಳಿಕೆ ಹೇಳಿಕೆ ಮಹಿಳೆಯ ಗೌರವಕ್ಕೆ ಧಕ್ಕೆ ಉಂಟು ಮಾಡಿದ್ದು, ನೋವು ತಂದಿದೆ. ಅಜಂ ಖಾನ್ ಅವರ ಹೇಳಿಕೆ ಅತ್ಯಂತ ಖಂಡನೀಯ. ಅವರು ಲೋಕಸಭೆಯಲ್ಲಿ ಅಷ್ಟೇ ಅಲ್ಲದೆ ಎಲ್ಲಾ ಮಹಿಳೆಯರಲ್ಲಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

  • ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

    ತಾಜ್‍ಮಹಲ್ ಧ್ವಂಸಗೊಳಿಸಿದರೆ ನಾನು ಉತ್ತರ ಪ್ರದೇಶ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ: ಅಜಂ ಖಾನ್

    ನವದೆಹಲಿ: ತಾಜ್‍ಮಹಲ್ ನಾಶಮಾಡಿದರೆ ನಾನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿನಾಥ್ ಅವರ ಸರ್ಕಾರಕ್ಕೆ ಬೆಂಬಲ ನೀಡುತ್ತೇನೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

    ತಾಜ್ ಮಹಲ್, ಕೆಂಪು ಕೋಟೆ, ಸಂಸತ್ ಭವನಗಳು ಹಾಗೂ ಕುತುಬ್ ಮಿನಾರ್ ಮುಂತಾದ ಸ್ಮಾರಕಗಳು ಗುಲಾಮಗಿರಿಯ ಸಂಕೇತವಾಗಿವೆ. ಈ ವಾದ-ವಿವಾದಗಳು ಕಳೆದ ಕೆಲವು ದಶಕಗಳಿಂದ ನಡೆಯುತ್ತಿದೆ. ಒಂದು ವೇಳೆ ಸರ್ಕಾರ ತಾಜ್‍ಮಹಲ್ ಅನ್ನು ಧ್ವಂಸಗೊಳಿಸುವ ನಿರ್ಧಾರ ತೆಗೆದುಕೊಂಡರೆ ನಾನು ಆ ನಿರ್ಧಾರವನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ.

    ಪ್ರವಾಸೋದ್ಯಮ ಇಲಾಖೆ 32 ಪುಟಗಳುಳ್ಳ `ಉತ್ತರ ಪ್ರದೇಶದ ಪ್ಯಾರ್ಯಟನ್- ಅಪಾರ ಸಂಭವನೀಯೆನ್’ ಶೀರ್ಷಿಕೆ ಅಡಿಯಲ್ಲಿ ಒಂದು ಕೈಪಿಡಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ರಾಜ್ಯದ ಸಾಂಸ್ಕøತಿಕ ಮತ್ತು ಪರಂಪರೆಯ ತಾಣಗಳ ಬಗ್ಗೆ ಮಾಹಿತಿಯನ್ನು ಹೊಂದಿದೆ. ಆದರೆ ಈ ಕೈಪಿಡಿಯಲ್ಲಿ ವಿಶ್ವದ ಏಳು ಅದ್ಭುತ ತಾಣಗಳಲ್ಲಿ ಒಂದಾಗಿರುವ ತಾಜ್‍ಮಹಲ್ ಬಗ್ಗೆ ಯಾವುದೇ ಉಲ್ಲೇಖವನ್ನು ಮಾಡಿಲ್ಲ.

    ಈ ಕೈಪಿಡಿಯನ್ನು ರಾಜ್ಯ ಪ್ರವಾಸೋದ್ಯಮ ಸಚಿವೆ ರೀಟಾ ಬಹುಗುಣ ಅವರು ಬಿಡುಗಡೆ ಮಾಡಿದ್ದು, ಇದರಲ್ಲಿ ವಾರಣಾಸಿಯಲ್ಲಿರುವ ಗಂಗಾ ಆರತಿಯ ಚಿತ್ರವು ಮುಖಪುಟದಲ್ಲಿದೆ. ಜೊತೆಗೆ ಸಿಎಂ ಆದಿತ್ಯನಾಥ್ ಮತ್ತು ಬಹುಗುಣ ಅವರ ಸಾಂಪ್ರದಾಯಿಕ ದೀಪವು ಪುಸ್ತಕದ ಒಳಗಡೆ ಇದೆ. ಈ ಕೈಪಿಡಿ ಬಿಡುಗಡೆ ಮಾಡಿದ ಕೆಲವು ಗಂಟೆಗಳಲ್ಲಿ ಅಜಂ ಖಾನ್ ವಿವಾದಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

    ಇವರ ಪ್ರತಿಕ್ರಿಯೆಗೆ ಬಹುಗುಣ ಅವರು, ತಾಜ್‍ಮಹಲ್ ವಿಶ್ವ ಪರಂಪರೆಯ ಮತ್ತು ಪ್ರಖ್ಯಾತ ಪ್ರವಾಸಿಗರ ಆಕರ್ಷಣೆಯ ಸ್ಥಳವಾಗಿದೆ. ಇದರ ಸುತ್ತಲಿನ ಸೌಕರ್ಯಗಳ ಸುಧಾರಣೆಗಾಗಿ ನಾವು 156 ಕೋಟಿ ರೂ.ಗಳನ್ನು ನೀಡಿದ್ದೇವೆ ಎಂದು ಹೇಳಿದರು.

    ಹೊಸದಾಗಿ ಬಿಡುಗಡೆಯಾದ ಕೈಪಿಡಿಯಲ್ಲಿ ಪ್ರೀತಿಯ ಸಂಕೇತವಾದ, ಸಾಂಪ್ರದಾಯಿಕ ಸ್ಮಾರಕವಾದ ತಾಜ್‍ಮಹಲ್ ಹೆಸರನ್ನು ಬಿಟ್ಟಿರುವುದರಿಂದ ಕಾಂಗ್ರೆಸ್ ಉಪಾಧ್ಯಾಕ್ಷ ರಾಹುಲ್ ಗಾಂಧಿ ಅವರು ಕೂಡ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

    ದೀಪದ ಬೆಳಕಿನಿಂದ ಸೂರ್ಯನೇನೂ ಸುಂದರವಾಗಿ ಕಾಣಿಸುವುದಿಲ್ಲ. ಹೀಗಾಗಿ ಕವಿ ಭರತೇಂದು ಒಂದು ಮಾತನ್ನು ಹೇಳ್ತಾರೆ, `ಕತ್ತಲೆಯ ರಾಜ್ಯ, ಹುಚ್ಚು ದೊರೆ’ ಎಂದು ವ್ಯಂಗ್ಯವಾಗಿ ಟೀಕೆ ಮಾಡಿದ್ದಾರೆ.