Tag: ಅಜಯ್ ಕುಮಾರ್

  • ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್‌ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ

    ಹುತಾತ್ಮ ಅಗ್ನಿವೀರ್‌ ಕುಟುಂಬಕ್ಕೆ 98.39 ಲಕ್ಷ ನೀಡಲಾಗಿದೆ – ರಾಹುಲ್‌ ಆರೋಪದ ಬೆನ್ನಲ್ಲೇ ಸೇನೆ ಸ್ಪಷ್ಟನೆ

    ನವದೆಹಲಿ: ಹುತಾತ್ಮರಾಗಿರುವ ಅಗ್ನಿವೀರ್‌ ಅಜಯ್‌ ಕುಮಾರ್‌ (Agniveer Ajay Kumar) ಅವರ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ. ನೀಡಲಾಗಿದೆ ಎಂದು ಎಡಿಜಿಪಿ – ಇಂಡಿಯನ್‌ ಆರ್ಮಿ (ADGP Indian Army) ಸ್ಪಷ್ಟನೆ ನೀಡಿದೆ.

    ಹುತಾತ್ಮ ಅಗ್ನಿವೀರ್ ಕುಟುಂಬಕ್ಕೆ ನೀಡಿದ ಹಣಕಾಸಿನ ನೆರವಿನ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸಂಸತ್ತಿನಲ್ಲಿ ಸುಳ್ಳು ಹೇಳಿದ್ದಾರೆ. ಸುಳ್ಳು ಹೇಳಿದ ರಕ್ಷಣಾ ಸಚಿವ ರಾಜ್‌ನಾಥ್‌ ಸಿಂಗ್‌ ಅವರು ಸಂಸತ್ತಿನಲ್ಲಿ ಕ್ಷಮೆ ಕೇಳಬೇಕು ಎಂದು ರಾಹುಲ್‌ ಗಾಂಧಿ (Rahul Gandhi) ಆಗ್ರಹಿಸಿದ ಬೆನ್ನಲ್ಲೇ ಎಡಿಜಿಪಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಸ್ಪಷ್ಟನೆ ನೀಡಿದೆ.

    ಪೋಸ್ಟ್‌ನಲ್ಲಿ ಏನಿದೆ?
    ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಅಗ್ನಿವೀರ್ ಅಜಯ್ ಕುಮಾರ್ ಅವರ ಕುಟುಂಬಕ್ಕೆ ಪರಿಹಾರವನ್ನು ಪಾವತಿಸಿಲ್ಲ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

    ಅಗ್ನಿವೀರ್ ಅಜಯ್ ಕುಮಾರ್ ಅವರ ಅತ್ಯುನ್ನತ ತ್ಯಾಗಕ್ಕೆ ಭಾರತೀಯ ಸೇನೆಯು ವಂದನೆ ಸಲ್ಲಿಸುತ್ತದೆ. ಸಕಲ ಸೇನಾ ಗೌರವಗಳೊಂದಿಗೆ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಬಾಕಿಯಿರುವ ಒಟ್ಟು ಮೊತ್ತದಲ್ಲಿ ಅಗ್ನಿವೀರ್ ಅಜಯ್ ಕುಟುಂಬಕ್ಕೆ ಈಗಾಗಲೇ 98.39 ಲಕ್ಷ ರೂ. ಪಾವತಿ ಮಾಡಲಾಗಿದೆ. ಇದನ್ನೂ ಓದಿ: ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಬೆಂಗ್ಳೂರಿಗೆ ವರ್ಗಾವಣೆ?- CISF ಹೇಳಿದ್ದೇನು?

    ಅಗ್ನಿವೀರ್ ಸ್ಕೀಮ್‌ನ ನಿಬಂಧನೆಗಳ ಪ್ರಕಾರ ಅನ್ವಯವಾಗುವಂತೆ ಅಂದಾಜು 67 ಲಕ್ಷ ಮೊತ್ತದ ಎಕ್ಸ್ – ಗ್ರೇಷಿಯಾ ಮತ್ತು ಇತರ ಪ್ರಯೋಜನಗಳನ್ನು ಪೊಲೀಸ್ ಪರಿಶೀಲನೆಯ ನಂತರ ಅಂದಾಜು ಒಟ್ಟು ಮೊತ್ತ 1.65 ಕೋಟಿ ರೂ. ನೀಡಲಾಗುತ್ತದೆ ಎಂದು ತಿಳಿಸಿದೆ.

    ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯ ವೇಳೆ ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ‘ಅಗ್ನಿವೀರರು ಯೂಸ್‌ ಅಂಡ್‌ ಥ್ರೋ ಕಾರ್ಮಿಕರಿದ್ದಂತೆ. ಸೇನಾಪಡೆಯಲ್ಲಿ ಒಬ್ಬ ಜವಾನನಿಗೆ ಪಿಂಚಣಿ ಸಿಗುತ್ತದೆ. ಇನ್ನೊಬ್ಬ ಜವಾನನಿಗೆ ಸಿಗುವುದಿಲ್ಲ. ನೀವು ಸೈನಿಕರನ್ನು ವಿಭಜನೆ ಮಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದರು.

     

  • ರಕ್ಷಣಾ ಕಾರ್ಯದರ್ಶಿಗೂ ಕೊರೊನಾ ಪಾಸಿಟಿವ್- ಇದೇ ಕಟ್ಟಡದಲ್ಲಿದೆ ರಾಜನಾಥ್ ಸಿಂಗ್ ಕಚೇರಿ

    ರಕ್ಷಣಾ ಕಾರ್ಯದರ್ಶಿಗೂ ಕೊರೊನಾ ಪಾಸಿಟಿವ್- ಇದೇ ಕಟ್ಟಡದಲ್ಲಿದೆ ರಾಜನಾಥ್ ಸಿಂಗ್ ಕಚೇರಿ

    – ಸಚಿವಾಲಯದ ಕಚೇರಿಯಲ್ಲಿ 35ಕ್ಕೂ ಹೆಚ್ಚು ಜನ ಕೆಲಸ
    – ಸೇನೆ, ನೌಕಾಪಡೆಯ ಮುಖ್ಯಸ್ಥರ ಕಚೇರಿಗಳೂ ಇಲ್ಲಿವೆ

    ನವದೆಹಲಿ: ಭಾರತೀಯ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರಿಗೂ ಕೊರೊನಾ ಸೋಂಕು ತಗುಲಿರುವುದು ಬುಧವಾರ ಖಚಿತವಾಗಿದೆ ಎಂದು ವರದಿಯಾಗಿದೆ.

    ಅಜಯ್ ಕುಮಾರ್ ಅವರಿಗೆ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಸಂಪರ್ಕದ ಮೂಲ ಪತ್ತೆಹಚ್ಚಲು ರಕ್ಷಣಾ ಸಚಿವಾಲಯದ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಅಜಯ್ ಕುಮಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ.

    ರೈಸೀನಾ ಹಿಲ್ಸ್ ಸೌತ್ ಬ್ಲಾಕ್‍ನಲ್ಲಿರುವ ರಕ್ಷಣಾ ಸಚಿವಾಲಯದ ಕೇಂದ್ರ ಕಚೇರಿಯಲ್ಲಿ ಕನಿಷ್ಟ 35 ಜನ ಅಧಿಕಾರಿಗಳು ಕೆಲಸ ಮಾಡುತ್ತಿದ್ದು, ಅಜಯ್ ಕುಮಾರ್ ಅವರಿಗೆ ಸೋಂಕು ತಗುಲಿದ ಹಿನ್ನೆಲೆ ಎಲ್ಲರನ್ನೂ ಹೋಮ್ ಕ್ವಾರಂಟೈನ್‍ನಲ್ಲಿಡಲಾಗಿದೆ. ಅಜಯ್ ಕುಮಾರ್ ಅವರ ಆರೋಗ್ಯ ಸ್ಥಿತಿಗತಿ ಕುರಿತು ಈ ವರೆಗೆ ಅಧಿಕೃತವಾಗಿ ಎಲ್ಲಿಯೂ ಹೇಳಿಲ್ಲ. ಈ ಕುರಿತು ಪ್ರತಿಕ್ರಿಯಿಸಲು ರಕ್ಷಣಾ ಸಚಿವಾಲಯದ ವಕ್ತಾರರು ನಿರಾಕರಿಸಿದ್ದಾರೆ.

    ಮುನ್ನೆಚ್ಚರಿಕಾ ಕ್ರಮವಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕಚೇರಿಗೆ ಹಾಜರಾಗಿಲ್ಲ ಎಂದು ತಿಳಿದುಬಂದಿದೆ. ಇದೇ ಕಚೇರಿಯ ಮೊದಲನೇ ಮಹಡಿಯಲ್ಲಿ ರಕ್ಷಣಾ ಸಚಿವರು, ರಕ್ಷಣಾ ಕಾರ್ಯದರ್ಶಿ, ಸೇನೆ ಮುಖ್ಯಸ್ಥ ಹಾಗೂ ನೌಕಾಪಡೆಯ ಮುಖ್ಯಸ್ಥರ ಕಚೇರಿಗಳು ಇವೆ. ಜನರ ಸಂಪರ್ಕ- ಪತ್ತೆಹಚ್ಚುವುದು, ಸಂಪರ್ಕ ತಡೆಯ ಕುರಿತ ಎಲ್ಲ ನಿಯಮಗಳನ್ನು ಸೂಕ್ಷ್ಮವಾಗಿ ಅನುಸರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.