Tag: ಅಜಿಂಕ್ಯ ರಹಾನೆ

  • ಪಿಂಕ್ ಬಾಲ್ ಟೆಸ್ಟ್ ಬಗ್ಗೆ ಕನಸು ಕಾಣುತ್ತಿದ್ದ ರಹಾನೆಯ ಕಾಲೆಳೆದ ಕೊಹ್ಲಿ, ಧವನ್

    ಪಿಂಕ್ ಬಾಲ್ ಟೆಸ್ಟ್ ಬಗ್ಗೆ ಕನಸು ಕಾಣುತ್ತಿದ್ದ ರಹಾನೆಯ ಕಾಲೆಳೆದ ಕೊಹ್ಲಿ, ಧವನ್

    ನವದೆಹಲಿ: ಕೋಲ್ಕತ್ತಾದಲ್ಲಿ ಮುಂಬರುವ ಹಗಲು-ರಾತ್ರಿ ಟೆಸ್ಟ್ ಬಗ್ಗೆ ಕನಸು ಕಾಣುತ್ತಿರುವ ಬಗ್ಗೆ ಸೋಮವಾರ ರಾತ್ರಿ ಫೋಟೋವೊಂದನ್ನು ಪೋಸ್ಟ್ ಮಾಡಿದ ಭಾರತದ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅವರನ್ನು ನಾಯಕ ವಿರಾಟ್ ಕೊಹ್ಲಿ ಮತ್ತು ತಂಡದ ಸಹ ಆಟಗಾರ ಶಿಖರ್ ಧವನ್ ಅವರು ಟ್ರೋಲ್ ಮಾಡಿದ್ದಾರೆ.

    ನವೆಂಬರ್ 22 ರಿಂದ 26 ರವರೆಗೆ ಬಾಂಗ್ಲಾದೇಶ ವಿರುದ್ಧ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುವ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ಉಭಯ ತಂಡಗಳು ಇತಿಹಾಸದಲ್ಲಿ ಮೊದಲ ಬಾರಿಗೆ ದೀಪಗಳ ಅಡಿಯಲ್ಲಿ ಟೆಸ್ಟ್ ಪಂದ್ಯವನ್ನು ಆಡಲಿವೆ.

    https://www.instagram.com/p/B5AcA3ahWN0/?utm_source=ig_embed

    ಮೊದಲ ಹಗಲು ಮತ್ತು ರಾತ್ರಿ ಪಂದ್ಯವನ್ನು ಆಡಲು ಸಿದ್ಧವಾಗಿರುವ ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯಾ ರಹಾನೆ ಅವರು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಪಿಂಕ್ ಬಾಲ್ ಪಕ್ಕದಲ್ಲಿ ಮಲಗಿರುವ ಫೋಟೋವನ್ನು ಹಾಕಿ, ನಾನು ಈಗಾಗಲೇ ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಬಗ್ಗೆ ಕನಸು ಕಾಣುತ್ತಿರುವೆ ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ವಿರಾಟ್ ಕೊಹ್ಲಿ ಹಾಗೂ ಶಿಖರ್ ಧವನ್ ಅವರು ಕಮೆಂಟ್ ಮಾಡುವ ಮೂಲಕ ಕಾಲೆಳೆದಿದ್ದಾರೆ.

    ಶಿಖರ್ ಧವನ್,  ಕನಸಿನಲ್ಲಿಯೇ ಫೋಟೋ ತೆಗೆದುಕೊಂಡ ಎಂದು ಹೇಳುವ ಮೂಲಕ ರಹಾನೆ ಅವರನ್ನು ಕಾಲೆಳೆದರೆ, ಕೊಹ್ಲಿ ಅವರು ತುಂಬಾ ಒಳ್ಳೆಯ ಪೋಸ್ ಜಿಂಕ್ಸಿ ಎಂದು ಕಾಮೆಂಟ್ ಮಾಡಿದ್ದಾರೆ.

    ಬಹುನಿರೀಕ್ಷಿತ ಪಂದ್ಯವನ್ನು ಆಡಲು ನಾಯಕ ಕೊಹ್ಲಿ ಮತ್ತು ಉಪನಾಯಕ ರಹಾನೆ ಅವರು ತಂಡದ ಎಲ್ಲಾ ಆಟಗಾರಗಿಂತ ಮೊದಲೇ ಕೋಲ್ಕತ್ತಾಗೆ ಬಂದಿದ್ದಾರೆ. ಇಂದು ಬೆಳಗ್ಗೆ 9:40 ಸುಮಾರಿಗೆ ಕೊಹ್ಲಿ ಮತ್ತು ರಹಾನೆ ಕೋಲ್ಕತಾಗೆ ಬಂದಿದ್ದಾರೆ. ಇಂದು ನಾಯಕ ಕೊಹ್ಲಿ ಅವರು ಪಿಚ್ ನೋಡಲು ಈಡನ್ ಗಾರ್ಡನ್ಸ್ ಮೈದಾನಕ್ಕೆ ಹೋಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಮೂಲಗಳ ಪ್ರಕಾರ ಕೊಹ್ಲಿ ಅವರು ಈ ಯೋಜನೆಯನ್ನು ಕೈಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

    ರೋಹಿತ್ ಶರ್ಮಾ ಅವರು ಬುಧವಾರ ನಸುಕಿನ ಜಾವ 1:55 ಕ್ಕೆ ಬರಲಿದ್ದರೆ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಅದೇ ದಿನ ಬೆಳಿಗ್ಗೆ 9.35 ಕ್ಕೆ ಆಗಮಿಸಲಿದ್ದಾರೆ. ಆದರೆ ಶುಕ್ರವಾರ ಪಂದ್ಯ ಆರಂಭವಾಗುವರೆಗೂ ಪಿಚ್‍ನಲ್ಲಿ ಪಿಂಕ್ ಬಾಲ್‍ನಲ್ಲಿ ಅಭ್ಯಾಸ ಮಾಡಲು ಬಿಡುವುದಿಲ್ಲ ಎಂದು ಪಿಚ್ ಕ್ಯೂರೇಟರ್ ಸುಜನ್ ಮುಖರ್ಜಿ ಹೇಳಿದ್ದಾರೆ.

    ಇಂದೋರ್ ನಲ್ಲಿ ನಡೆದ ಮೊದಲ ಪಂದ್ಯವನ್ನು ಇನ್ನಿಂಗ್ಸ್ ಮತ್ತು 130 ರನ್‍ಗಳಿಂದ ಭಾರತ ಗೆದ್ದಿದ್ದು ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

  • 9 ವರ್ಷದ ರಾಜಸ್ಥಾನ್ ನಂಟು ಮುರಿದು ದೆಹಲಿ ಪರ ಬ್ಯಾಟ್ ಬೀಸಲಿದ್ದಾರೆ ರಹಾನೆ

    9 ವರ್ಷದ ರಾಜಸ್ಥಾನ್ ನಂಟು ಮುರಿದು ದೆಹಲಿ ಪರ ಬ್ಯಾಟ್ ಬೀಸಲಿದ್ದಾರೆ ರಹಾನೆ

    ಮುಂಬೈ: ಟೀಂ ಇಂಡಿಯಾ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ ಮುಂದಿನ ಇಂಡಿಯನ್ ಪ್ರಿಮಿಯರ್ ಲೀಗ್ ಆವೃತ್ತಿಯಲ್ಲಿ ದೆಹಲಿ ಪರ ಆಡಲಿದ್ದಾರೆ. ಈ ಮೂಲಕ ಐಪಿಎಲ್‍ನಲ್ಲಿ ಒಂಬತ್ತು ವರ್ಷಗಳಿಂದ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ರಹಾನೆ ತಂಡದಿಂದ ಹೊರಬಿದ್ದಿದ್ದಾರೆ.

    ಐಪಿಎಲ್ ಉಭಯ ತಂಡಗಳ ನಡುವಿನ ವರ್ಗಾವಣೆ ಪ್ರಕ್ರಿಯೆ ಇಂದು ಪೂರ್ಣಗೊಳ್ಳಲಿದೆ. ಈ ಮೂಲಕ ರಹಾನೆಯನ್ನು ಕೈಬಿಟ್ಟಿರುವ ರಾಜಸ್ಥಾನ ತಂಡವು ದೆಹಲಿ ಕ್ಯಾಪಿಟಲ್ಸ್ ತಂಡದ ಇಬ್ಬರು ಆಟಗಾರರನ್ನು ಪಡೆಯಲಿದೆ. ಇದಲ್ಲದೆ ಮುಂದಿನ ಆವೃತ್ತಿಯಲ್ಲಿ ವರ್ಗಾವಣೆ ಒಪ್ಪಂದಗಳ ನಂತರ, ಟ್ರೆಂಟ್ ಬೋಲ್ಟ್ ಈಗ ಮುಂಬೈ ಇಂಡಿಯನ್ಸ್ ಮತ್ತು ಅಂಕಿತ್ ರಜಪೂತ್ ರಾಜಸ್ಥಾನದಲ್ಲಿ ಆಡಲಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಗುರುವಾರ ಮುಕ್ತಾಯವಾದ ನಂತರ, ಯಾವುದೇ ಆಟಗಾರರನ್ನು ಫ್ರಾಂಚೈಸಿಗಳ ವರ್ಗಾಯಿಸಲು ಸಾಧ್ಯವಾಗುವುದಿಲ್ಲ.

    ಅಜಿಂಕ್ಯ ರಹಾನೆ 2011ರಿಂದ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡಿದ್ದರು. ಕಳೆದ ಆವೃತ್ತಿಯಲ್ಲಿ ಅವರನ್ನು 4 ಕೋಟಿ ರೂ.ಗೆ ಖರೀದಿಸಿತ್ತು. ಆದರೆ ರಹಾನೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡದ ಹಿನ್ನೆಲೆಯಲ್ಲಿ ತಂಡವು ಅವರನ್ನು ಕೈಬಿಟ್ಟಿದೆ ಎಂದು ವರದಿಯಾಗಿದೆ.

    ರಹಾನೆಯನ್ನು ತಂಡಕ್ಕೆ ಸೇರಿಸಿಕೊಳ್ಳಲು ದೆಹಲಿ ಕ್ಯಾಪಿಟಲ್ಸ್ ರಾಜಸ್ಥಾನ್ ತಂಡದೊಂದಿಗೆ ಮಾತುಕತೆ ನಡೆಸಿತ್ತು. ಸೌರವ್ ಗಂಗೂಲಿ ದೆಹಲಿ ಸಲಹೆಗಾರರಾಗಿದ್ದಾಗ ರಹಾನೆ ಅವರನ್ನು ತಂಡಕ್ಕೆ ಸೇರಿಸುವ ಬಗ್ಗೆ ಸಲಹೆ ನೀಡಿದ್ದರು. ರಹಾನೆ ಎಲ್ಲಾ ಮಾದರಿಯ ಆಟಗಾರ ಎಂದು ಗಂಗೂಲಿ ಭಾವಿಸಿದ್ದಾರೆ. ವರದಿಗಳ ಪ್ರಕಾರ, ರಹಾನೆ ಕೂಡ ತಂಡವನ್ನು ಬದಲಾಯಿಸಲು ಬಯಸಿದ್ದರು. ಐಪಿಎಲ್‍ನ 2019ರ ಆವೃತ್ತಿಯಲ್ಲಿ ಎಂಟು ಪಂದ್ಯಗಳ ನಂತರ ರಹಾನೆ ನಾಯಕತ್ವವನ್ನು ಹಿಂಪಡೆದು ಸ್ಟೀವ್ ಸ್ಮಿತ್‍ಗೆ ಹಸ್ತಾಂತರಿಸಲಾಗಿತ್ತು. ಈ ನಡೆಯ ಬಗ್ಗೆ ರಹಾನೆ ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

    ರಹಾನೆ ಆಗಮನದಿಂದ ದೆಹಲಿ ತಂಡದ ಬ್ಯಾಟಿಂಗ್ ಕ್ರಮಾಂಕ ಇನ್ನಷ್ಟು ಬಲಗೊಳ್ಳಲಿದೆ. ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಮತ್ತು ಹನುಮಾ ವಿಹಾರಿ ಅವರಂತಹ ಆಟಗಾರರಿಗೆ ರಹಾನೆ ಸಾಥ್ ನೀಡಲಿದ್ದಾರೆ. ದೆಹಲಿ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಮತ್ತು ವೈಯಕ್ತಿಕ ತರಬೇತುದಾರ ಪ್ರವೀಣ್ ಅಮ್ರೆ ಅವರೊಂದಿಗೆ ರಹಾನೆ ದೆಹಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

    ಐಪಿಎಲ್‍ನಲ್ಲಿ ರಹಾನೆ ದಾಖಲೆ ಅಂತರಾಷ್ಟ್ರೀಯ ಟಿ-20 ವೃತ್ತಿಜೀವನಕ್ಕಿಂತ ಉತ್ತಮವಾಗಿದೆ. ಐಪಿಎಲ್‍ನ 140 ಪಂದ್ಯಗಳಲ್ಲಿ ರಹಾನೆ ಸುಮಾರು 33 ಸರಾಸರಿಯಲ್ಲಿ 3,820 ರನ್ ಗಳಿಸಿದ್ದಾರೆ. ಅಂತರಾಷ್ಟ್ರೀಯ ಟಿ-20ಯ 20 ಪಂದ್ಯಗಳಲ್ಲಿ 21 ಸರಾಸರಿಯಲ್ಲಿ 375 ರನ್ ಗಳಿಸಿದ್ದಾರೆ.

    2020ರ ಐಪಿಎಲ್‍ನಲ್ಲಿ ನ್ಯೂಜಿಲೆಂಡ್ ವೇಗದ ಬೌಲರ್ ಟ್ರೆಂಟ್ ಬೌಲ್ಟ್ ದೆಹಲಿ ಕ್ಯಾಪಿಟಲ್ಸ್ ಬದಲಿಗೆ ಮುಂಬೈ ಇಂಡಿಯನ್ಸ್ ಪರ ಆಡಲಿದ್ದು, ದೇಶೀಯ ವೇಗದ ಬೌಲರ್ ಅಂಕಿತ್ ರಜಪೂತ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬದಲು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಆಡಲಿದ್ದಾರೆ. ಬೋಲ್ಟ್ 2014ರಲ್ಲಿ ಐಪಿಎಲ್‍ಗೆ ಪಾದಾರ್ಪಣೆ ಮಾಡಿದ್ದರು. ಅವರು ಕಳೆದ ಎರಡು ಆವೃತ್ತಿಗಳಲ್ಲಿ ದೆಹಲಿ ತಂಡದ ಪರ ಆಡಿದ್ದರು. ಒಟ್ಟು 33 ಪಂದ್ಯಗಳನ್ನು ಆಡಿರುವ ಬೋಲ್ಟ್ ಒಟ್ಟು 38 ವಿಕೆಟ್ ಪಡೆದಿದ್ದಾರೆ. ಪಂಜಾಬ್ ತಂಡವನ್ನು 2018ರಲ್ಲಿ ಸೇರಿಕೊಂಡಿದ್ದ ಅಂಕಿತ್ 23 ಐಪಿಎಲ್ ಪಂದ್ಯಗಳಲ್ಲಿ 22 ವಿಕೆಟ್ ಪಡೆದಿದ್ದಾರೆ. ಅಂಕಿತ್ 2018ರಲ್ಲಿ ಹೈದರಾಬಾದ್ ತಂಡದ ವಿರುದ್ಧ ಪಂದ್ಯದಲ್ಲಿ ಕೇವಲ 14 ರನ್ ನೀಡಿ, 5 ವಿಕೆಟ್ ಉಳಿಸಿ ಭರ್ಜರಿ ಮಿಂಚಿದ್ದರು.

  • ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

    ರಹಾನೆ, ಶುಭಮನ್ ಏಕದಿನಕ್ಕೆ ಆಯ್ಕೆ ಆಗದ್ದು ಅಶ್ಚರ್ಯ ತಂದಿದೆ – ಗಂಗೂಲಿ

    ನವದೆಹಲಿ: ಮುಂದಿನ ತಿಂಗಳು ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತದ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಆಯ್ಕೆ ಆಗದ್ದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

    ಆಗಸ್ಟ್ 2 ಭಾರತ, ವೆಸ್ಟ್ ಇಂಡೀಸ್ ವಿರುದ್ಧ ಮೂರು ಮಾದರಿಯ ಸರಣಿಯನ್ನು ಆಡಲು ತೆರಳಲಿದ್ದು, ಆಗಲೇ ಎಂಎಸ್‍ಕೆ ಪ್ರಸಾದ್ ಅವರ ನೇತೃತ್ವದ ಆಯ್ಕೆ ಸಮಿತಿಯೂ ಆಟಗಾರರನ್ನು ಕಳೆದ ಭಾನುವಾರ ಆಯ್ಕೆ ಮಾಡಿದೆ.

    ಈ ವಿಚಾರವಾಗಿ ಇಂದು ಟ್ವೀಟ್ ಮಾಡಿರುವ ಮಾಜಿ ನಾಯಕ ಸೌರವ್ ಗಂಗೂಲಿ ಅವರು ಏಕದಿನ ತಂಡದಲ್ಲಿ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ಶುಭಮನ್ ಗಿಲ್ ಇಲ್ಲದಿರವುದಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ “ಎಲ್ಲಾ ಮಾದರಿಯಲ್ಲೂ ಆಡಬಲ್ಲ ಅನೇಕ ಆಟಗಾರರು ತಂಡದಲ್ಲಿ ಇದ್ದಾರೆ. ಆದರೆ ಅಜಿಂಕ್ಯ ರಹಾನೆ ಮತ್ತು ಶುಭಮನ್ ಗಿಲ್ ಏಕದಿನ ತಂಡದಲ್ಲಿ ಇಲ್ಲದಿರುವುದು ಆಶ್ಚರ್ಯ” ಎಂದು ಬರೆದುಕೊಂಡಿದ್ದಾರೆ.

    ಜೊತೆಗೆ ಬಿಸಿಸಿಐನ್ನು ಟ್ಯಾಗ್ ಮಾಡಿ ಇನ್ನೊಂದು ಟ್ವೀಟ್ ಮಾಡಿದ್ದು, ಭಾರತದ ಆಯ್ಕೆ ಸಮಿತಿಯೂ ಆಟಗಾರರ ಲಯ ಮತ್ತು ಆತ್ಮವಿಶ್ವಾಸ ನೋಡಿಕೊಂಡು ಎಲ್ಲಾ ಮಾದರಿಯ ಪಂದ್ಯಗಳಿಗೂ ಒಂದೇ ಆಟಗಾರರನ್ನು ಆಯ್ಕೆ ಮಾಡುವ ಸಮಯ ಬಂದಿದೆ. ಭಾರತದಲ್ಲಿ ಕೆಲ ಆಟಗಾರರು ಮಾತ್ರ ಎಲ್ಲಾ ಸ್ವರೂಪಗಳಲ್ಲಿ ಆಡುತ್ತಿದ್ದಾರೆ. ದೊಡ್ಡ ದೊಡ್ಡ ತಂಡಗಳು ಸ್ಥಿರ ಆಟಗಾರರನ್ನು ಹೊಂದಿರಬೇಕು. ಈ ಆಯ್ಕೆ ಎಲ್ಲರನ್ನು ಸಂತೋಷಪಡಿಸುವುದರ ಬದಲು ದೇಶಕ್ಕಾಗಿ ಮತ್ತು ಸ್ಥಿರ ಪ್ರದರ್ಶನಕ್ಕಾಗಿ ಇರಬೇಕು ಎಂದು ಬರೆದುಕೊಂಡಿದ್ದಾರೆ.

    ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ-20, ಏಕದಿನ ಮತ್ತು ಟೆಸ್ಟ್ ಪಂದ್ಯಗಳ ಸರಣಿಗೆ ಭಾರತ ತಂಡಗಳನ್ನು ಭಾನುವಾರ ಪ್ರಕಟಿಸಿದೆ. ಆದರೆ ಭಾರತ ಎ ಮತ್ತು ವೆಸ್ಟ್ ಇಂಡೀಸ್ ಎ ನಡುವೆ ಇತ್ತೀಚೆಗೆ ಮುಕ್ತಾಯಗೊಂಡ ಐದು ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದ ಶುಭಮನ್ ಗಿಲ್ ಅವರನ್ನು ಏಕದಿನ ತಂಡದಿಂದ ಕೈಬಿಟ್ಟ ಬಗ್ಗೆ ಅನೇಕ ಮಾಜಿ ಆಟಗಾರರು ಅಸಮಾಧಾನ ವ್ಯಕ್ತಪಡಿಸಿದರು.

    ಇದರ ಜೊತೆ ಭಾರತ ತಂಡದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಯಾವ ಆಟಗಾರರ ಆಡಬೇಕು ಎಂಬ ಗೊಂದಲದ ನಡುವೇ ಬಿಸಿಸಿಐನ ಮಾಜಿ ಕಾರ್ಯದರ್ಶಿ ಸಂಜಯ್ ಜಗದಾಳೆ ಅವರು ಏಕದಿನ ತಂಡದಲ್ಲಿ 4ನೇ ಕ್ರಮಾಂಕಕ್ಕೆ ಅಜಿಂಕ್ಯ ರಹಾನೆ ಅವರು ಸೂಕ್ತ ಎಂದು ಹೇಳಿದ್ದರು.

    ಈ ಎಲ್ಲಾ ಗೊಂದಲಗಳ ನಡುವೇ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಪ್ರಕಟಗೊಂಡಿದ್ದು ತಂಡಗಳು ಇಂತಿವೆ.

    ಟೆಸ್ಟ್ ತಂಡ:
    ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪನಾಯಕ), ಅಜಿಂಕ್ಯ ರಹಾನೆ, ಮಯಾಂಕ್ ಅಗರ್ವಾಲ್, ಕೆ. ಎಲ್.ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಹಾಗೂ ಉಮೇಶ್ ಯಾದವ್.

    ಏಕದಿನ ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಕೇದಾರ್ ಜಾಧವ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್ ಹಾಗೂ ನವದೀಪ್ ಸೈನಿ.

    ಟಿ-20 ತಂಡ:
    ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹ್ಮದ್, ದೀಪಕ್ ಚಹರ್ ಹಾಗೂ ನವದೀಪ್ ಸೈನಿ.

  • ಅತ್ಯುತ್ತಮವಾಗಿ ಕ್ಯಾಚ್ ಹಿಡಿದು ಆಸ್ಟ್ರೇಲಿಯಾಗೆ ಬ್ರೇಕ್ ಕೊಟ್ಟ ರಹಾನೆ

    ಅತ್ಯುತ್ತಮವಾಗಿ ಕ್ಯಾಚ್ ಹಿಡಿದು ಆಸ್ಟ್ರೇಲಿಯಾಗೆ ಬ್ರೇಕ್ ಕೊಟ್ಟ ರಹಾನೆ

    ಸಿಡ್ನಿ: ನಾಲ್ಕನೆ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ತಂಡದ ಉಪನಾಯಕ ಅಜಿಂಕ್ಯ ರಹಾನೆ ಉತ್ತಮವಾಗಿ ಕ್ಯಾಚ್ ಹಿಡಿಯುವ ಮೂಲಕ ಟೀಂ ಇಂಡಿಯಾದ ಮೇಲುಗೈಗೆ ಕಾರಣರಾಗಿದ್ದಾರೆ.

    ಆಸ್ಟ್ರೇಲಿಯಾ ಇನ್ನಿಂಗ್ಸ್ ನ ಶಮಿ ಎಸೆದ 52ನೇ ಓವರಿನ ನಾಲ್ಕನೇಯ ಎಸೆತವನ್ನು ಮಾರ್ನಸ್ ಲ್ಯಾಬುಶಾನೆ ಶಾರ್ಟ್ ಮಿಡ್‍ವಿಕೆಟ್ ನತ್ತ ಹೊಡೆದಿದ್ದರು. ಈ ವೇಳೆ ಅಲ್ಲಿದ್ದ ರಹಾನೆ ಅತ್ಯುತ್ತಮವಾಗಿ ಕ್ಯಾಚ್ ಹಿಡಿದು ಆಸ್ಟ್ರೇಲಿಯಾದ ಹಿನ್ನಡೆಗೆ ಕಾರಣರಾದರು.

    ರಹಾನೆ ಈ ಕ್ಯಾಚ್ ಹಿಡಿಯಲು ಕಾರಣವಾಗಿದ್ದು ಕೊಹ್ಲಿಯ ಫೀಲ್ಡಿಂಗ್ ಪ್ಲಾನ್. ಬಲಗೈ ಬ್ಯಾಟ್ಸ್ ಮನ್ ಲ್ಯಾಬುಶಾನೆ ಎಡಭಾಗದಲ್ಲಿ ಎರಡು ಫೀಲ್ಡರ್ ಗಳ ಮಧ್ಯೆ ಬೌಂಡರಿ ಹೊಡೆದಿದ್ದರು. ಲ್ಯಾಬುಶಾನೆ ಎಡಭಾಗದಲ್ಲೇ ಹೆಚ್ಚು ಬ್ಯಾಟ್ ಬೀಸುತ್ತಿದ್ದಾರೆ ಎನ್ನುವುದನ್ನು ಅರಿತ ಕೊಹ್ಲಿ ಶಾರ್ಟ್ ಮಿಡ್ ವಿಕೆಟ್ ಬಳಿ ರಹಾನೆ ಅವರನ್ನು ನಿಲ್ಲಲು ಸೂಚಿಸಿದ್ದರು. ಶಮಿ ಅವರ ಮತ್ತೊಂದು ಎಸೆತದಲ್ಲಿ 38 ರನ್ ಗಳಿಸಿದ್ದ ಲ್ಯಾಬುಶಾನೆ ಅಂತಹದ್ದೆ ಹೊಡೆತ ಹೊಡೆಯಲು ಹೋಗಿ ರಹಾನೆಗೆ ಕ್ಯಾಚ್ ನೀಡಿ ಔಟಾದರು.

    ಮೂರನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 83.3 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 236 ರನ್ ಗಳಿಸಿದೆ. ಹ್ಯಾರಿಸ್ 79 ರನ್, ಉಸ್ಮಾನ್ ಖವಾಜ 27 ರನ್, ಹೆಡ್ 20, ಹ್ಯಾಂಡ್ಸ್ ಕಾಂಬ್ ಔಟಾಗದೇ 28 ರನ್, ಪ್ಯಾಟ್ ಕಮ್ಮಿನ್ಸ್ ಔಟಾಗದೇ 25 ರನ್ ಗಳಿಸಿದ್ದಾರೆ.

    ಸಿಡ್ನಿ ಪಿಚ್ ಸ್ಪಿನ್ನರ್ ಗಳಿಗೆ ನೆರವಾಗಲಿದೆ ಎಂದು ಊಹಿಸಿದಂತೆ ಇಂದು ಕುಲ್‍ದೀಪ್ ಯಾದವ್ ವಿಕೆಟ್ ಪಡೆದರೆ, ಜಡೇಜಾ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 1 ವಿಕೆಟ್ ಪಡೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕ್ರಿಕೆಟರ್ ಅಜಿಂಕ್ಯ ರಹಾನೆ ತಂದೆ ಬಂಧನ

    ಕ್ರಿಕೆಟರ್ ಅಜಿಂಕ್ಯ ರಹಾನೆ ತಂದೆ ಬಂಧನ

    ನವದೆಹಲಿ: ಟೀಂ ಇಂಡಿಯಾದ ಟೆಸ್ಟ್ ಕ್ರಿಕೆಟರ್ ಅಜಿಂಕ್ಯ ರಹಾನೆ ಅವರ ತಂದೆ ಮಧುಕರ್ ಬಾಬು ರಾವ್ ರಹಾನೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದಾರೆ.

    ಇಂದು ಮಧುಕರ್ ಅವರು ಚಲಾಯಿಸುತ್ತಿದ್ದ ಕಾರ್ 67 ವರ್ಷದ ಮಹಿಳೆಯೊಬ್ಬರ ಮೇಲೆ ಹರಿದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸರು ಮಧುಕರ್ ಅವರನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

    ಮಧುಕರ್ ಅವರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹುಂಡೈ ಐ20 ಕಾರಿನಲ್ಲಿ ಹೋಗುತ್ತಿದ್ದ ವೇಳೆ ವಾಹನದ ನಿಯಂತ್ರಣ ತಪ್ಪಿ ಕಣಗಲ್ ಪ್ರದೇಶದ ಬಳಿ ಆಶಾತಾಯ್ ಕಾಂಬ್ಳೆ ಎಂಬ ಮಹಿಳೆಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಸ್ಥಳದಲ್ಲಿದ್ದವರು ಮಹಿಳೆಯನ್ನ ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಕೊಲ್ಹಾಪುರ ಪೊಲೀಸರು ಐಪಿಸಿ ಸೆಕ್ಷನ್ 304ಎ, 337, 338, 279 ಹಾಗೂ 184ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.