Tag: ಅಟ್ಟಿಕಾ ಬಾಬು

  • ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ – ಚುನಾವಣೆ ಮುನ್ನವೇ ಸೋಲಿನ ಭೀತಿ?

    ಹಣವಿಲ್ಲವೆಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿದ ಟಿಕೆಟ್ ಆಕಾಂಕ್ಷಿ – ಚುನಾವಣೆ ಮುನ್ನವೇ ಸೋಲಿನ ಭೀತಿ?

    ತುಮಕೂರು: ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಪ್ರಬಲ ಆಕಾಂಕ್ಷಿಯಾದ (Ticket Aspirant) ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ (Rafiq Ahmed) ಸೋಲಿನ ಭೀತಿ ಮತ್ತೆ ಕಾಡ್ತಾ ಇದ್ಯಾ? ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ಗುಮಾನಿ ಹುಟ್ಟಿಕೊಂಡಿದೆ.

    ಕಾಂಗ್ರೆಸ್‍ನ ಇನ್ನೊಬ್ಬ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಬಾಬು (Attica Babu) ಮಾತು ಈ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಕೆಲದಿನಗಳ ಹಿಂದೆ ಮಸೀದಿಗಳಿಗೆ ಭೇಟಿ ಕೊಟ್ಟು ಆಡಿದ ಮಾತುಗಳು ರಫಿಕ್ ಅಹ್ಮದ್ ಸ್ಪರ್ಧೆ ಮಾಡಲ್ಲ ಎನ್ನುವುದಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ. ರಫಿಕ್ ಅಹ್ಮದ್ ನನಗೆ ಸಹಾಯ ಮಾಡುತ್ತಾರೆ. ಅವರ ಬಳಿ ಹಣ ಇಲ್ಲ. ಹಾಗಾಗಿ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅಟ್ಟಿಕಾ ಬಾಬು ಮಸೀದಿಯಲ್ಲಿ ಹೇಳಿದ್ದಾರೆ. ಅಟ್ಟಿಕಾ ಬಾಬು ಕೂಡ ಮುಸ್ಲಿಂ ಸಮುದಾಯದವನಾಗಿದ್ದು, ನನ್ನ ಹೆಸರು ಅಯೂಬ್ ನನ್ನ ತಂದೆ ಪಾಷ ಸಾಬ್ ಎಂದು ಹೇಳಿಕೊಂಡಿದ್ದಾರೆ. ಈ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು ಸಂಚಲನ ಸೃಷ್ಟಿಸಿದೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

    ಹಾಲಿ ಶಾಸಕರಾಗಿದ್ದರೂ ಕಳೆದ ಬಾರಿ ರಫಿಕ್ ಅಹ್ಮದ್ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ತುಮಕೂರು ನಗರದಲ್ಲಿ ಮುಸ್ಲಿಂ ಸಮುದಾಯದ ಮತ ಹೆಚ್ಚಿದ್ದರೂ ಕಾಂಗ್ರೆಸ್‍ನಿಂದ ಮುಸ್ಲಿಂ ಸಮುದಾಯದ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಕಷ್ಟವಾಗುತ್ತದೆ ಎಂಬ ಲೆಕ್ಕಾಚಾರ ಇದೆ. ಕಾಂಗ್ರೆಸ್‍ನಿಂದ ಹಿಂದೂ ವ್ಯಕ್ತಿಗೆ ಟಿಕೆಟ್ ಕೊಟ್ಟರೆ ಗೆಲುವು ಸುಲಭ ಎಂಬ ಸ್ಟ್ರಾಟಜಿಯನ್ನು ನಾಯಕರು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಫಿಕ್ ಅಹ್ಮದ್‍ಗೆ ಸೋಲಿನ ಭೀತಿ ಕಾಡ್ತಾ ಇದ್ದು, ಚುನಾವಣೆಗೆ ಖರ್ಚು ಮಾಡಲು ಹಣ ಇಲ್ಲ ಎಂಬ ನೆಪವೊಡ್ಡಿ ಕಣದಿಂದ ಹಿಂದೆ ಸರಿಯುತ್ತಾರೆ ಎಂಬ ಮಾತು ಆಪ್ತ ಮೂಲಗಳಿಂದ ಕೇಳಿ ಬರುತ್ತಿದೆ. ಹಾಗಾಗಿ ತಮ್ಮ ಸಮುದಾಯದವರೇ ಆದ ಅಟ್ಟಿಕಾ ಗೋಲ್ಡ್ ಕಂಪನಿಯ ಅಟ್ಟಿಕಾ ಬಾಬು ಅವರ ಬೆಂಬಲಕ್ಕೆ ರಫಿಕ್ ಅಹ್ಮದ್ ನಿಂತಿದ್ದಾರೆ ಎನ್ನುವ ಸಂಗತಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಕರಗಿತು 10 ಲಕ್ಷ ಕೋಟಿ – ಶ್ರೀಮಂತರ ಪಟ್ಟಿಯಿಂದ 22ನೇ ಸ್ಥಾನಕ್ಕೆ ಜಾರಿದ ಅದಾನಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನ್ನನ್ನು ಕಳ್ಳತನ ಕೇಸ್‍ನಲ್ಲಿ ಅರೆಸ್ಟ್ ಮಾಡಿಲ್ಲ – ಎರಡನೇ ಮದುವೆ ಕೂಡ ಆಗಿಲ್ಲ: ಅಟ್ಟಿಕಾ ಬಾಬು ಸ್ಪಷ್ಟನೆ

    ನನ್ನನ್ನು ಕಳ್ಳತನ ಕೇಸ್‍ನಲ್ಲಿ ಅರೆಸ್ಟ್ ಮಾಡಿಲ್ಲ – ಎರಡನೇ ಮದುವೆ ಕೂಡ ಆಗಿಲ್ಲ: ಅಟ್ಟಿಕಾ ಬಾಬು ಸ್ಪಷ್ಟನೆ

    ಬೆಂಗಳೂರು: ನನ್ನನ್ನು ಯಾವುದೇ ಕಳ್ಳತನದ ಕೇಸ್‌ನಲ್ಲಿ ಪೊಲೀಸರು ಅರೆಸ್ಟ್ ಮಾಡಿಲ್ಲ. ನಂಗೆ ಎರಡನೇ ಮದುವೆ ಕೂಡ ಆಗಿಲ್ಲ ಎಂದು ಪ್ರಸಿದ್ಧ ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ (Attica Gold) ಮಾಲೀಕರಾದ ಅಟ್ಟಿಕಾ ಬಾಬು (Attica Babu) ಅಲಿಯಾಸ್ ಬೊಮ್ಮನಹಳ್ಳಿ ಬಾಬು ಆಂಧ್ರಪ್ರದೇಶದ ಪೊಲೀಸರು (Police) ಬಂಧಿಸಿದ್ದ ಪ್ರಕರಣಕ್ಕೆ  ಸ್ಪಷ್ಟನೆ ನೀಡಿದ್ದಾರೆ.

    ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಅಣ್ಣನ ಮಗನನ್ನು ನಾನೇ ಸಾಕಿಕೊಂಡಿದ್ದೆ. ಅವನನ್ನು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಮದುವೆ ಮಾಡಿಕೊಟ್ಟಿದ್ದೆ. ಹೆಂಡತಿ ಮನೆಯಲ್ಲಿ ವಾಸವಾಗಿದ್ದ, ಆದರೆ ಅವರ ಕುಟುಂಬದಲ್ಲಿ ಗಲಾಟೆ ಆಗಿದೆ. ಆಗ ಅಣ್ಣನ ಮಗನ ಹೆಂಡತಿ ವರದಕ್ಷಿಣೆ ಕಿರುಕುಳ ಕೇಸ್ ಹಾಕಿದ್ಲು. ಅದರಲ್ಲಿ ನನ್ನ ಮತ್ತು ನನ್ನ ಕುಟುಂಬದ ಹೆಸರು ಕೂಡ ಸೇರಿಸಿದ್ದಾರೆ. ಹಾಗಾಗಿ ಪೊಲೀಸರು ಬಂದು ನೋಟಿಸ್‍ಗೆ ಉತ್ತರ ನೀಡಲು ಹೇಳಿದ್ದರು. ಈ ಕಾರಣಕ್ಕೆ ನಾನು ಆಂಧ್ರಪ್ರದೇಶಕ್ಕೆ ಹೋಗಿದ್ದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಕೇಸ್‌ ಕೂಡ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: 2ನೇ ಮದುವೆಯಾಗಿ ಮೋಸ ಮಾಡಿದ್ದಾರೆಂದು ಮಹಿಳೆ ಆರೋಪ – ಅಟ್ಟಿಕಾ ಗೋಲ್ಡ್‌ ಮಾಲೀಕ ಬಂಧನ

    ಏನಿದು ಪ್ರಕರಣ:
    ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಡಿ.16 ರಂದು ಬಾಬುರನ್ನು ಬಂಧಿಸಿದ್ದರು. ಅಟ್ಟಿಕಾ ಬಾಬು, ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದು, ಡಿಸೆಂಬರ್ 12 ರಂದು ಯಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೇ ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿದ್ದರು. ಇದನ್ನೂ ಓದಿ: ಮಧ್ಯರಾತ್ರಿ ಫೋನ್‍ನಲ್ಲಿ ಮಾತನಾಡಿದ್ದಕ್ಕೆ ಮಗಳನ್ನೇ ಕೊಂದ ತಂದೆ

    ಹಲ್ಲೆಯ ಬಳಿಕ ಅಟ್ಟಿಕಾ ಬಾಬು ವಿರುದ್ಧ ಶೇಕ್ ಮೀನಾಜ್ ಕೊಲೆಗೆ ಯತ್ನ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448,342,307,386,427,498,506 ಮತ್ತು ವರದಕ್ಷಿಣೆ ಕಿರುಕುಳ ಅರೋಪದಡಿ ಕೇಸ್ ದಾಖಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • 2ನೇ ಮದುವೆಯಾಗಿ ಮೋಸ ಮಾಡಿದ್ದಾರೆಂದು ಮಹಿಳೆ ಆರೋಪ – ಅಟ್ಟಿಕಾ ಗೋಲ್ಡ್‌ ಮಾಲೀಕ ಬಂಧನ

    2ನೇ ಮದುವೆಯಾಗಿ ಮೋಸ ಮಾಡಿದ್ದಾರೆಂದು ಮಹಿಳೆ ಆರೋಪ – ಅಟ್ಟಿಕಾ ಗೋಲ್ಡ್‌ ಮಾಲೀಕ ಬಂಧನ

    ಬೆಂಗಳೂರು: ಪ್ರಸಿದ್ಧ ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ (Attica Gold) ಮಾಲೀಕರಾದ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು (Bommanahalli Babu) ಮಹಿಳೆಗೆ ಮೋಸ ಮಾಡಿರುವ ಆರೋಪದಡಿ ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

    ಎರಡನೇ ಮದುವೆಯಾಗಿ ಮೋಸ ಮಾಡಿರುವುದಾಗಿ ಮಹಿಳೆಯೊಬ್ಬರು ಆಂಧ್ರಪ್ರದೇಶದಲ್ಲಿ ಅಟ್ಟಿಕಾ ಬಾಬು ವಿರುದ್ಧ ದೂರು ದಾಖಲಿಸಿದ್ದರು. ಹಾಗಾಗಿ ಬೆಂಗಳೂರಿಗೆ (Bengaluru) ಆಗಮಿಸಿದ ಆಂಧ್ರಪ್ರದೇಶ ಪೊಲೀಸರು ಬಾಬುರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬಂಡೆಮಠದ ಸ್ವಾಮೀಜಿ ಕೇಸ್‌ಗೆ ಟ್ವಿಸ್ಟ್ – ಪ್ರತೀಕಾರ ತೀರಿಸಿಕೊಂಡ ನೀಲಾಂಬಿಕೆ

    ಶೇಕ್ ಮೀನಾಜ್ ಎಂಬಾಕೆಯನ್ನು ಮದುವೆಯಾಗಿದ್ದ ಅಟ್ಟಿಕಾ ಬಾಬು, ಡಿಸೆಂಬರ್ 12 ರಂದು ಯಲ್ಲೂರಿಗೆ ಹೋಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ ಎಂದು ಶೇಕ್ ಮೀನಾಜ್ ಆರೋಪಿಸಿದ್ದಾರೆ. ಇದನ್ನೂ ಓದಿ: ಮುಂದಿನ ವಾರ ವಿಚಾರಣೆಗೆ ಹಾಜರಾಗುತ್ತೇನೆ: ಪೊಲೀಸ್ ನೋಟಿಸ್ ಗೆ ದುನಿಯಾ ವಿಜಯ್ ಉತ್ತರ

    ಹಲ್ಲೆಯ ಬಳಿಕ ಅಟ್ಟಿಕಾ ಬಾಬು ವಿರುದ್ಧ ಶೇಕ್ ಮೀನಾಜ್ ಕೊಲೆಗೆ ಯತ್ನ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಯಲ್ಲೂರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ IPC section 448,342,307,386,427,498A,506 ಮತ್ತು ವರದಕ್ಷಿಣೆ ಕಿರುಕುಳ ಅರೋಪದಡಿ ಕೇಸ್ ದಾಖಲಾಗಿತ್ತು. ಆ ಬಳಿಕ ಯಲ್ಲೂರು ಪೊಲೀಸರು ಬಾಬುರನ್ನು ಹುಡುಕಿಕೊಂಡು ಬೆಂಗಳೂರಿಗೆ ಆಗಮಿಸಿದ್ದರು. ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಇಂದು ಅಟ್ಟಿಕಾ ಬಾಬುರನ್ನು ಯಲ್ಲೂರು ಪೊಲೀಸರು ವಶಕ್ಕೆ ಪಡೆದು ಅನಂತಪುರಕ್ಕೆ ಕರೆದೊಯ್ದಿದ್ದರು. ಅಲ್ಲಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]