Tag: ಅಟ್ಯಾಕ್

  • ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    ಅಂಗಡಿ ಬಳಿ ಕುಳಿತವನ ಮೇಲೆ ಡೆಡ್ಲಿ ಅಟ್ಯಾಕ್ – ಚಿಕಿತ್ಸೆ ಫಲಿಸದೇ ಯುವಕ ಸಾವು

    – ದಾಳಿಗೆ ಕಾರಣವಾಯ್ತಾ ಲವ್ ಬ್ರೇಕಪ್?

    ಆನೇಕಲ್: ಸ್ನೇಹಿತರ ಜೊತೆ ಮಾತನಾಡುತ್ತಾ ಅಂಗಡಿ ಬಳಿ ಕುಳಿತ್ತಿದ್ದ ಯುವಕನ ಮೇಲೆ ಅಪರಿಚಿತ ಗ್ಯಾಂಗೊಂದು ಹಲ್ಲೆ ಮಾಡಿದ ಪರಿಣಾಮ ಚಿಕಿತ್ಸೆ ಫಲಿಸದೇ ಯುವಕ ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ.

    ಆನೇಕಲ್ ಪಟ್ಟಣದ ವಾರ್ಡ್ 9ರ ನಿವಾಸಿ ರವಿಕುಮಾರ್ ಮೃತ ಯುವಕ. ರವಿಕುಮಾರ್ ರಾತ್ರಿ 9:30ರ ಸುಮಾರಿಗೆ ಸ್ನೇಹಿತರ ಜೊತೆ ವಿನಾಯಕ ನಗರ ಸುಂದರ್ ರಾಜ್ ಬಡಾವಣೆಯ ಅಂಗಡಿ ಬಳಿ ಕುಳಿತಿದ್ದ. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದೊಣ್ಣೆಯಿಂದ ರವಿಕುಮಾರ್ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಇನ್ಸ್ಟಾದಲ್ಲಿ ಬೆಂಗಳೂರಿಗರ ಬಗ್ಗೆ ನಾಲಗೆ ಹರಿಬಿಟ್ಟ ಒಡಿಶಾ ಯುವತಿ

    ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರವಿಕುಮಾರ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ರವಿಕುಮಾರ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: Mysuru | ಸಿಡಿಮದ್ದು ಸ್ಫೋಟ – ಮಹಿಳೆಗೆ ಗಾಯ

    ಅಮೆಜಾನ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಯುವತಿಯೊಬ್ಬಳನ್ನು ಪ್ರೀತಿ ಮಾಡುತ್ತಿದ್ದ. ಇತ್ತೀಚೆಗೆ ಅವರಿಬ್ಬರಿಗೂ ಬ್ರೇಕಪ್ (Breakup) ಆಗಿತ್ತು. ಇದೇ ವಿಚಾರಕ್ಕೆ ರವಿಕುಮಾರ್ ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ತಮ್ಮ ಮತ್ತು ಗ್ಯಾಂಗ್ ದಾಳಿ ನಡೆಸಿ ಸೇಡು ತೀರಿಸಿಕೊಂಡಿದೆ ಎನ್ನಲಾಗಿದೆ. ಇದನ್ನೂ ಓದಿ: Bengaluru | ಬಾಗಿಲು ಮುಚ್ಚುವ ವೇಳೆ ಗನ್ ಹಿಡಿದು ಬಂದು ಚಿನ್ನದಂಗಡಿ ದರೋಡೆ

    ಈಗಾಗಲೇ ಘಟನಾ ಸ್ಥಳದಿಂದ ಎಫ್‌ಎಸ್‌ಎಲ್ ತಂಡ ಸಾಕ್ಷ್ಯಾಧಾರಗಳನ್ಮು ಸಂಗ್ರಹಿಸಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ. ಶೀಘ್ರ ಆರೋಪಿಗಳ ಬಂಧನ ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಹೇಳಿಕೆ ನೀಡಿದ್ದಾರೆ.

  • ಹಾಡಹಗಲೇ ಯುವಕನ ಮೇಲೆ ಪುಂಡರ ಅಟ್ಯಾಕ್

    ಹಾಡಹಗಲೇ ಯುವಕನ ಮೇಲೆ ಪುಂಡರ ಅಟ್ಯಾಕ್

    ಬೆಂಗಳೂರು: ಹಾಡಹಗಲೇ ಯುವಕನ ಮೇಲೆ ಪುಂಡರ ಗ್ಯಾಂಗ್‌ವೊಂದು ಏಕಾಏಕಿ ಅಟ್ಯಾಕ್ (Attack) ಮಾಡಿದ್ದು, ದೊಣ್ಣೆ ಮತ್ತು ಬ್ಯಾಟ್‌ನಿಂದ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಕಾಟನ್ ಪೇಟೆಯ (Cottonpete) ಜಾಲಿ ಮೊಹಲ್ಲಾದಲ್ಲಿ ನಡೆದಿದೆ.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಿನೇ ದಿನೇ ಪುಂಡರ ಅಟ್ಟಹಾಸ ಹೆಚ್ಚುತ್ತಿದ್ದು, ಬಿಬಿಎಂಪಿ (BBMP) ಕಸದ ಆಟೋ ಚಾಲಕ ಸತೀಶ್ ಎಂಬಾತನ ಮೇಲೆ ಪುಂಡರ ಗುಂಪೊಂದು ಏಕಾಏಕಿ ಹಲ್ಲೆ ಮಾಡಿದೆ. ಚಾಲಕ ಸತೀಶ್ 11 ಗಂಟೆಯ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ರಾಜೇಂದ್ರ, ಮನು ಮತ್ತು ಗ್ಯಾಂಗ್ ಸೇರಿಕೊಂಡು ಜಾಲಿ ಮೊಹಲ್ಲಾ ರಸ್ತೆಯಲ್ಲಿ ಚಾಲಕ ಸತೀಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಕ್ರಿಕೆಟ್ ಬ್ಯಾಟ್ ಮತ್ತು ದೊಣ್ಣೆಯಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪುಂಡರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಹಲ್ಲೆಯಿಂದ ಚಾಲಕ ಸತೀಶ್‌ಗೆ ಗಂಭೀರ ಗಾಯಗಳಾಗಿದ್ದು, ಹಲ್ಲೆ ನಡೆಸಿದ ರಾಜೇಂದ್ರ, ಮನು ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ

    ಕಿಡಿಗೇಡಿಗಳು ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ವಿರುದ್ಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಪರ ಸ್ತ್ರೀ ಜೊತೆ ತಂದೆಯ ದೈಹಿಕ ಸಂಪರ್ಕ ವಿಡಿಯೋ ವೈರಲ್ – ಮನನೊಂದು ಮಗ ಆತ್ಮಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜಾನ್ ಒಂದು ಹೇಳಿಕೆಯಿಂದ ಬಿತ್ತು ಭಾರೀ ಪೆಟ್ಟು – ಮಕಾಡೆ ಮಲಗಿದ `ಅಟ್ಯಾಕ್’

    ಜಾನ್ ಒಂದು ಹೇಳಿಕೆಯಿಂದ ಬಿತ್ತು ಭಾರೀ ಪೆಟ್ಟು – ಮಕಾಡೆ ಮಲಗಿದ `ಅಟ್ಯಾಕ್’

    ಒಂದು ಕಾಲದಲ್ಲಿ ಬಾಲಿವುಡ್‌ನಲ್ಲಿ ದಕ್ಷಿಣ ಭಾರತದ ಸಿನಿಮಾಗಳಿಗೆ ಮಣೆ ಹಾಕ್ತಿರಲಿಲ್ಲ. ಸೌತ್ ಚಿತ್ರಗಳನ್ನ ಅಲ್ಲಿನ ಕಲಾವಿದರನ್ನ ಬಾಲಿವುಡ್ ಮಂದಿ ಅಸಡ್ಡೆಯಿಂದ ನೋಡ್ತಿದ್ರು. ಈಗ ಭಾರತೀಯ ಚಿತ್ರರಂಗದ ಸ್ವರೂಪವೇ ಬದಲಾಗಿದೆ.

    ದಕ್ಷಿಣದ ಸಿನಿಮಾಗಳನ್ನ ಬಿಟೌನ್‌ನಲ್ಲಿ ಅಪ್ಪಿ ಒಪ್ಪಿಕೊಳ್ತಿದ್ದಾರೆ. ಅದಕ್ಕೆ ತಾಜಾ ಉದಾಹರಣೆ `ಪುಷ್ಪ’ ಸಿನಿಮಾ, ಈಗೀಗ ದಕ್ಷಿಣ ಭಾರತದ ಸಿನಿಮಾಗಳಿಗೆ ಬಾಲಿವುಡ್ ಮನ್ನಣೆ ದೊರೆಯುತ್ತಿದೆ. ಸೌತ್ ಚಿತ್ರಗಳನ್ನ ಹಿಂದಿ ಸಿನಿಮಾ ರಸಿಕರು ಮುಗಿಬಿದ್ದು ನೋಡ್ತಿದ್ದಾರೆ. ಆದರೆ ಇತ್ತೀಚಿನ ಬಿಟೌನ್ ನಟ ಜಾನ್ ಅಬ್ರಹಾಂ ಕೊಟ್ಟಿರೋ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ.

    ಜಾನ್ ಅಬ್ರಾಹಾಂ ನಟನೆಯ ಅಟ್ಯಾಕ್ ಚಿತ್ರ ಏ.೧ರಂದು ತೆರೆಕಂಡಿತ್ತು. ಈ ಚಿತ್ರದ ಪ್ರಚಾರದ ವೇಳೆ ನಟ ಜಾನ್, ನಾನು ಎಂದೂ ತೆಲುಗು ಸಿನಿಮಾ ಮಾಡುವುದಿಲ್ಲ. ನಾನು ಬಾಲಿವುಡ್ ಹೀರೋ, ಬಿಸಿನೆಸ್ ಮಾಡುವ ಸಲುವಾಗಿ ತೆಲುಗು ಅಥವಾ ಪರಭಾಷಾ ಚಿತ್ರಗಳಲ್ಲಿ ನಟಿಸೋದಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಜಾನ್ ನಟನೆಯ `ಅಟ್ಯಾಕ್’ ಸಿನಿಮಾ ಕಲೆಕ್ಷನ್‌ಗೆ ಪೆಟ್ಟು ಬಿದ್ದಿದೆ.

    ಜಾನ್ ಅಬ್ರಾಹಾಂ ನಟನೆಯ `ಅಟ್ಯಾಕ್’ ಚಿತ್ರದ ಮೇಲೆ ಸಿಕ್ಕಾಪಟ್ಟೆ ನಿರೀಕ್ಷೆಯಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಚಿತ್ರದ ಮೊದಲ ದಿನದ ಕಲೆಕ್ಷನ್ ೩.೫ ಕೋಟಿ ಗಳಿಸಿ ಚಿತ್ರ ಸೋಲುವ ಲಕ್ಷಣ ಕಾಣುತ್ತಿದೆ. `ಅಟ್ಯಾಕ್’ ಚಿತ್ರಕ್ಕೆ ಪೈಪೋಟಿ ನೀಡುತ್ತಿರುವ ಚಿತ್ರ `ಆರ್‌ಆರ್‌ಆರ್’ ಈ ಚಿತ್ರವನ್ನ ಅಭಿಮಾನಿಗಳು ಮುಗಿಬಿದ್ದು ನೋಡ್ತಿದ್ದಾರೆ. ಇದನ್ನು ಓದಿ:ಜಾನ್ ಅಬ್ರಾಹಾಂ ಹೊಸ ಚಿತ್ರದಲ್ಲಿ ಬಿಟೌನ್ ಕಿಲಾಡಿ

    `ಆರ್‌ಆರ್‌ಆರ್’ ಚಿತ್ರದ ಎದುರು ಹೀನಾಯವಾಗಿ ಅಟ್ಯಾಕ್ ಸೋಲ್ತಿರೋದಕ್ಕೆ ನೆಟ್ಟಿಗರು ನಟ ಜಾನ್‌ರನ್ನ ಹಿಗ್ಗಾಮುಗ್ಗಾ ಟ್ರೋಲ್ ಮಾಡ್ತಿದ್ದಾರೆ. ತೆಲುಗಿನಲ್ಲಿ ಬಿಗ್ ಬಜೆಟ್ ಚಿತ್ರ, ತಮಿಳಿನಲ್ಲಿ ಹೈ ಒಲ್ಟೇಜ್ ಆಕ್ಷನ್, ಮಲೆಯಾಳಂನಲ್ಲಿ ಸೂಪರ್ ಕಂಟೆAಟ್, ಕನ್ನಡದಲ್ಲಿ ಭಿನ್ನ ಕಾನ್ಸೆಪ್ಟ್ ಇರುತ್ತದೆ. ಇಂತಹ ಚಿತ್ರಗಳಲ್ಲಿ ನಟಿಸಬೇಕು ಅಂದ್ರು ನಿಮಗೆ ಯಾರು ಅವಕಾಶ ಕೊಡಲ್ಲ ಅಂತಾ ಜಾನ್‌ಗೆ ನೆಟ್ಟಿಗರು ಲೆಫ್ಟು ರೈಟು ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.

  • ಮಧ್ಯರಾತ್ರಿ ನೆರೆಮನೆ ಮೇಲೆ ದಾಳಿ – ಕಿಟಕಿ ಬಾಗಿಲು ಒಡೆದ ಮಹಿಳೆಯರು

    ಮಧ್ಯರಾತ್ರಿ ನೆರೆಮನೆ ಮೇಲೆ ದಾಳಿ – ಕಿಟಕಿ ಬಾಗಿಲು ಒಡೆದ ಮಹಿಳೆಯರು

    – ಮಲಗಿದ್ದವರ ಮನೆಯ ಮೇಲೆ ನೆರೆ ಮನೆಯವ್ರಿಂದ ಅಟ್ಯಾಕ್

    ಚಿಕ್ಕಬಳ್ಳಾಪುರ: ಮಧ್ಯರಾತ್ರಿ ದಂಪತಿ ಮನೆಯ ಮೇಲೆ ಸೈಜುಗಲ್ಲು ದೊಣ್ಣೆಗಳಿಂದ ದಾಳಿ ನಡೆಸಿರುವ ಪಕ್ಕದ ಮನೆಯವರು ಕಿಟಕಿ ಬಾಗಿಲು ಬಡಿದು ಒಡೆದು ಹಾಕಲು aಯತ್ನಿಸಿರುವ ಭಯಾನಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ.

    ಬಾಗೇಪಲ್ಲಿ ಪಟ್ಟಣದ 9 ನೇ ವಾರ್ಡಿನಲ್ಲಿ ಈ ಘಟನೆ ನಡೆದಿದ್ದು, ಗಾರೆ ಮೇಸ್ತ್ರಿ ಲಕ್ಷ್ಮಿಪತಿಯವರ ಮನೆಯ ಮೇಲೆ ಪಕ್ಕದ ಮನೆಯ ಗಂಗಪ್ಪ ಹಾಗೂ ಅವರ ಕುಟುಂಬಸ್ಥರು ಅದರಲ್ಲೂ ಮಹಿಳೆಯರು ಅಟ್ಯಾಕ್ ಮಾಡಿದ್ದಾರೆ. ಈ ವೇಳೆ ಲಕ್ಷ್ಮಿಪತಿಗೆ ಮನೆಯ ಬಾಗಿಲು ತೆರೆಯುವಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮನಬಂದಂತೆ ಮನಸ್ಸೋ ಇಚ್ಛೆ ಬೈದಿದ್ದಾರೆ.

    ನೆರೆಮನೆಯವರ ಕೃತ್ಯಕ್ಕೆ ಬೆದರಿದ ಲಕ್ಷ್ಮಿಪತಿ ಹಾಗೂ ಅವರ ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಮನೆಯಲ್ಲೇ ಚಿಲಕ ಹಾಕಿಕೊಂಡು ಒಳಗಡೆಯೇ ಇದ್ದು ಹೊರಗೆ ಬಂದಿಲ್ಲ. ಈ ವೇಳೆ ದೊಡ್ಡ ದೊಡ್ಡ ಸೈಜುಗಲ್ಲು, ಇಟ್ಟಿಗೆ ಹಾಗೂ ದೊಣ್ಣೆಗಳಿಂದ ಕಿಟಕಿ ಬಾಗಿಲು ಹೊಡೆದಿದ್ದು, ಮನೆಯ ಹೊರಭಾಗದಲ್ಲಿದ್ದ ಬೈಕ್ ಹಾಗೂ ಗೃಹೋಪಯೋಗಿ ವಸ್ತುಗಳನ್ನ ಧ್ವಂಸಗೊಳಿಸಿದ್ದಾರೆ.

    ಮೊದಲಿನಿಂದಲೂ ಈ ಲಕ್ಷ್ಮಿಪತಿ ಹಾಗೂ ಗಂಗಪ್ಪ ಕುಟುಂಬಸ್ಥರ ನಡುವೆ ಭಿನ್ನಾಭಿಪ್ರಾಯಗಳಿದ್ದು, ಪರಸ್ಪರ ವೈಮನಸ್ಸಿದೆ. ಹೀಗಾಗಿ ಕೆಲ ದಿನಗಳ ಹಿಂದೆ ಲಕ್ಷ್ಮಿಪತಿಯ ಮಗಳು ಶಾಲೆಯಿಂದ ಸ್ನೇಹಿತೆ ಜೊತೆ ಬರುವಾಗ ಗಂಗಪ್ಪ ಕೆಟ್ಟ ಮಾತುಗಳಿಂದ ನಿಂದಿಸುತ್ತಿದ್ದನಂತೆ. ಇದರಿಂದ ಲಕ್ಷ್ಮಿಪತಿಯ ಪತ್ನಿ ಯಾಕೆ ನನ್ನ ಮಗಳನ್ನ ಬೈತೀಯಾ ಎಂದು ಗಂಗಪ್ಪನ ಕುಟುಂಬಸ್ಥರ ಜೊತೆ ಗಲಾಟೆ ಮಾಡಿಕೊಂಡಿದ್ದರಂತೆ.

    ಈ ವಿಚಾರಕ್ಕೆ ಜಿದ್ದು ಇಟ್ಟುಕೊಂಡಿದ್ದ ಗಂಗಪ್ಪ ಹಾಗೂ ಅವರ ಕುಟುಂಬಸ್ಥರು ಮಧ್ಯರಾತ್ರಿ ಲಕ್ಷ್ಮಿಪತಿ ಮನೆಯವರ ಮೇಲೆ ಅಟ್ಯಾಕ್ ಮಾಡಿದ್ದಾರೆ. ದಾಳಿ ವೇಳೆಯೇ ಪೊಲೀಸರಿಗೆ ಕರೆ ಮಾಡಿ ತಮ್ಮನ್ನ ರಕ್ಷಣೆ ಮಾಡಿ ಎಂದು ಲಕ್ಷ್ಮಿಪತಿ ಕುಟುಂಬದವರು ಕೇಳಿಕೊಂಡಿದ್ದಾರೆ. ಸಾಕಷ್ಟು ಸಮಯದ ನಂತರ ಸ್ಥಳಕ್ಕೆ ಬಂದ ಪೊಲೀಸರು, ಗಂಗಪ್ಪ ಕುಟುಂಬಸ್ಥರಿಗೆ ಬುದ್ಧಿವಾದ ಹೇಳಿ ಹೋಗಿದ್ದಾರೆ. ಆದರೆ ಪೊಲೀಸರು ಹೋದ ಮೇಲೆ ಮತ್ತೆ ಅದೇ ರೀತಿ ದಾಳಿ ನಡೆಸಿದ್ದಾರೆ. ಹೀಗಾಗಿ ಗಂಗಪ್ಪ ಹಾಗೂ ಕುಟುಂಬಸ್ಥರ ದಾಳಿಗೆ ಬೆದರಿರುವ ಲಕ್ಷ್ಮಿಪತಿ ದಂಪತಿ ಹಾಗೂ ಮಕ್ಕಳು ಸದ್ಯ ತಮ್ಮ ಸ್ವಂತ ಮನೆಯನ್ನ ತೊರೆದು ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

  • Exclusive: ಬೈ ಎಲೆಕ್ಷನ್ ವೇಳೆಯಲ್ಲೇ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಅಟ್ಯಾಕ್

    Exclusive: ಬೈ ಎಲೆಕ್ಷನ್ ವೇಳೆಯಲ್ಲೇ ಕಾಂಗ್ರೆಸ್ ಅಧ್ಯಕ್ಷನ ಮನೆ ಮೇಲೆ ಅಟ್ಯಾಕ್

    ಬಳ್ಳಾರಿ: ಲೋಕಸಭಾ ಉಪಚುನಾವಣೆಯ ವೇಳೆಯಲ್ಲೇ ಬಳ್ಳಾರಿ ಬ್ರೂಸ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಬ್ಬರ ಮನೆ ಮೇಲೆ ದಾಳಿ ಮಾಡಲಾಗಿದೆ.

    ಮಾಜಿ ಶಾಸಕ ಅನಿಲ್ ಲಾಡ್ ಆಪ್ತ ಸಹಾಯಕ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರ್ಷದ್ ಅಹ್ಮದ್ ಅವರ ಮನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಮನೆ ಮುಂದೆ ನಿಲ್ಲಿಸಿದ್ದ ಕಾರು ಹಾಗೂ ನಿರ್ಮಾಣ ಹಂತದ ಮನೆಯ ಬಾಗಿಲು ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ.

    2 ಬೈಕ್‍ಗಳಲ್ಲಿ ಬಂದಿದ್ದರೆನ್ನಲಾದ ದುಷ್ಕರ್ಮಿಗಳು ಹರ್ಷದ್ ಅಹ್ಮದ್ ಮನೆ ಮೇಲೆ ದಾಳಿ ಮಾಡಿರುವುದು ರಾಜಕೀಯ ವೈಷಮ್ಯಕ್ಕೆ ಮತ್ತಷ್ಟೂ ಕಿಚ್ಚು ಹಚ್ಚಿದಂತಾಗಿದೆ. ಚುನಾವಣಾ ಪ್ರಚಾರ ಮುಗಿಸಿಕೊಂಡು ಮನೆಯಲ್ಲಿದ್ದ ಹರ್ಷದ್ ಅಹ್ಮದ್ ರ ಮನೆಯಿಂದ ಹೊರಬರುವ ಮುನ್ನವೇ ದುಷ್ಕರ್ಮಿಗಳು ಕಾರು ಕಿಟಕಿ ಗಾಜುಗಳನ್ನು ಪುಡಿ ಮಾಡಿ ಪರಾರಿಯಾಗಿದ್ದಾರೆ.

    ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೌಲಬಜಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ನಗರ ಕಾಂಗ್ರೆಸ್ ಅಧ್ಯಕ್ಷರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಹರ್ಷದ್ ಅಹ್ಮದ್ ಗೆ ಧೈರ್ಯ ತುಂಬಿದ್ದಾರೆ.

    2008ರಲ್ಲೂ ಸಹ ಇದೇ ರೀತಿಯಾಗಿ ಮಾಜಿ ಶಾಸಕ ಅನಿಲ್ ಲಾಡ್ ಮನೆ ಮುಂದಿದ್ದ ಕಾರುಗಳನ್ನು ಸುಟ್ಟು ಹಾಕಿದ ಪ್ರಕರಣ ಬಳ್ಳಾರಿಯಲ್ಲಿ ನಡೆದಿತ್ತು. ಹೀಗಾಗಿ ಈ ಪ್ರಕರಣ ಇದೀಗ ರಾಜಕೀಯ ಪ್ರಚಾರದಲ್ಲಿ ಮತ್ತಷ್ಟೂ ಕಿಚ್ಚು ಹಚ್ಚಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರೈತನ ಮೇಲೆ ಕಾಡು ಹಂದಿಯ ಭಯಾನಕ ಅಟ್ಯಾಕ್: ವಿಡಿಯೋ ವೈರಲ್

    ರೈತನ ಮೇಲೆ ಕಾಡು ಹಂದಿಯ ಭಯಾನಕ ಅಟ್ಯಾಕ್: ವಿಡಿಯೋ ವೈರಲ್

    ಕಲಬುರಗಿ: ಜಿಲ್ಲೆಯಲ್ಲಿ ಕಾಡು ಹಂದಿಯೊಂದು ರೈತನ ಮೇಲೆ ಭಯಾನಕವಾಗಿ ಅಟ್ಯಾಕ್ ಮಾಡಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಚಿಂಚೋಳಿ ತಾಲೂಕಿನ ಸಿರೋಳಿ ತಾಂಡಾದಲ್ಲಿ ಈ ಘಟನೆ ಒಂದು ವರ್ಷದ ಹಿಂದೆ ನಡೆದಿದೆ. ತಾರಾಸಿಂಗ್ ಎಂಬ ರೈತ ಸುಮಾರು 10 ರಿಂದ 15 ನಿಮಿಷ ಕಾಡು ಹಂದಿಯೊಂದಿಗೆ ಸೆಣಿಸಿದ್ದಾರೆ. ರೈತ ಸಹಾಯಕ್ಕಾಗಿ ಅಂಗಲಾಚಿದ್ದರು ಯಾರು ಮುಂದೆ ಬಂದಿರಲಿಲ್ಲ. ಆದರೆ ರೈತನನ್ನು ಅಲ್ಲಿರುವ ಶ್ವಾನಗಳ ಗುಂಪು ರಕ್ಷಣೆ ಮಾಡಿದೆ.

    ಈ ದೃಶ್ಯವನ್ನು ಪಕ್ಕದ ಜಮೀನಿನಲ್ಲಿದ್ದ ರೈತರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    https://www.youtube.com/watch?v=fpq3b7wCTWk