Tag: ಅಡಿಕೆ ಗಿಡ

  • 60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    60ಕ್ಕೂ ಹೆಚ್ಚು ಅಡಿಕೆ ಗಿಡ ಕಡಿದ ದುಷ್ಕರ್ಮಿಗಳು – ಕಣ್ಣೀರಿಟ್ಟ ರೈತ ಮಹಿಳೆ

    ಹಾಸನ: ಅಡಿಕೆ ಗಿಡಗಳನ್ನು ಯಾರೋ ಕಿಡಿಗೇಡಿಗಳು ಕಡಿದು ಹಾಕಿರುವ ಘಟನೆ ಹನುಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ರೈತ ಮಹಿಳೆ ತಾಯಮ್ಮ ಅವರಿಗೆ ಸೇರಿದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ತಾಯಮ್ಮ ಕಳೆದ ಎರಡು ವರ್ಷದಿಂದ ತುಂಬಾ ಶ್ರಮವಹಿಸಿ ಅಡಿಕೆ ಗಿಡ ಬೆಳೆಸಿದ್ದರು. ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದರು. ಆದರೆ ಕಳೆದ ರಾತ್ರಿ ಸುಮಾರು 60ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಅಡಿಕೆ ಗಿಡಗಳನ್ನು ಕಡಿದು ಹಾಕಿರುವುದನ್ನು ಕಂಡು ತಾಯಮ್ಮ ಕಣ್ಣೀರಿಟ್ಟಿದ್ದಾರೆ.

    ಕಿಡಿಗೇಡಿಗಳ ಕೃತ್ಯದಿಂದ ರೈತ ಮಹಿಳೆಗೆ ಒಂದು ಲಕ್ಷಕ್ಕೂ ಹೆಚ್ಚು ನಷ್ಟವಾಗಿದೆ. ನನಗೆ ಆದ ಪರಿಸ್ಥಿತಿ ಬೇರೆ ಯಾವ ರೈತರಿಗೂ ಆಗಬಾರದು. ಈ ಕೆಲಸ ಮಾಡಿದವರಿಗೆ ರೈತರ ಕಷ್ಟದ ಅರಿವಿಲ್ಲ. ಕೂಡಲೇ ಅವರನ್ನು ಕಂಡು ಹಿಡಿದು ಶಿಕ್ಷೆ ನೀಡಬೇಕು ಎಂದು ರೈತಮಹಿಳೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:  ನಾನು ಲಾರ್ಡ್ ಶಿವ ಅಲ್ಲ, ನಾನು ನಿಮ್ಮ ಶಿವಣ್ಣ ಮಾತ್ರ: ಹ್ಯಾಟ್ರಿಕ್ ಹೀರೋ ಹೀಗಂದಿದ್ಯಾಕೆ..?

    ದುದ್ದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರೈತ ಮಹಿಳೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

  • ಭಾರೀ ಗಾಳಿ- ನೆಲಕ್ಕುರುಳಿದ 150ಕ್ಕೂ ಹೆಚ್ಚು ಅಡಿಕೆ ಮರಗಳು

    ಭಾರೀ ಗಾಳಿ- ನೆಲಕ್ಕುರುಳಿದ 150ಕ್ಕೂ ಹೆಚ್ಚು ಅಡಿಕೆ ಮರಗಳು

    ಹಾವೇರಿ: ಭಾರೀ ಗಾಳಿಗೆ ಅಡಿಕೆ ಮರಗಳು ನೆಲಕ್ಕೆ ಉರುಳಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿರುವ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದಲ್ಲಿ ನಡೆದಿದೆ.

    ರೈತರಾದ ಶಿವನಗೌಡ ಮಲಗಿನಹಳ್ಳಿ ಮತ್ತು ಬಸನಗೌಡ ಮನಗಿನಹಳ್ಳಿ ಅವರಿಗೆ ಸೇರಿದ ಅಡಿಕೆ ತೋಟ ಇದಾಗಿದ್ದು, ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಫಸಲಿಗೆ ಬಂದಿದ್ದ ಅಡಿಕೆ ಮರಗಳು ನೆಲಕ್ಕೆ ಉರುಳಿವೆ. ಬರೋಬ್ಬರಿ 150 ಕ್ಕೂ ಅಧಿಕ ಅಡಿಕೆ ಮರಗಳು ನೆಲಕಚ್ಚಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ. ಇದರಿಂದಾಗಿ ರೈತ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

    ಇಷ್ಟು ದಿನ ಗಿಡಗಳನ್ನು ಬೆಳೆಸಿ ಈಗ ಫಸಲಿಗೆ ಬಂದಿದ್ದ ಮರಗಳು ನೆಲ ಕಚ್ಚಿರುವುದಕ್ಕೆ ತೀವ್ರ ಬೇಸರವಾಗಿದ್ದು, ಆತಂಕದಲ್ಲಿದ್ದಾರೆ. ಭಾರೀ ಗಾಳಿಗೆ ಬೇರು ಸಮೇತ ಅಡಿಕೆ ಗಿಡಗಳು ನೆಲ್ಲಕ್ಕುರುಳಿವೆ. ಒಂದಲ್ಲ ಎರಡಲ್ಲ ಬರೋಬ್ಬರಿ 150ಕ್ಕೂ ಅಧಿಕ ಮರಗಳು ನೆಲಕ್ಕುರುಳಿರುವುದಕ್ಕೆ ರೈತ ತೆಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

  • ರಾತ್ರೋರಾತ್ರಿ ಕಿಡಿಗೇಡಿಗಳಿಂದ 500ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶ

    ರಾತ್ರೋರಾತ್ರಿ ಕಿಡಿಗೇಡಿಗಳಿಂದ 500ಕ್ಕೂ ಹೆಚ್ಚು ಅಡಿಕೆ ಗಿಡಗಳು ನಾಶ

    ದಾವಣಗೆರೆ: ರಾತ್ರೋರಾತ್ರಿ ಕಿಡಿಗೇಡಿಗಳು 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ನಾಶ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮರುಳಸಿದ್ದಪ್ಪ ಎಂಬವರಿಗೆ ಸೇರಿದ ಅಡಿಕೆ ಮರಗಳಾಗಿದ್ದು, ಭಾನುವಾರ ಮರುಳ ಸಿದ್ದಪ್ಪ ಸಂಬಂಧಿಕರ ಮದುವೆಗೆಂದು ಹೋಗಿದ್ದರು. ಮದುವೆ ಮುಗಿಸಿ ಇಂದು ಬೆಳಗ್ಗೆ ಬಂದು ಅಡಿಕೆ ಮರಗಳನ್ನು ನೋಡಿ ಆಕಾಶವೇ ಕಳಚಿ ಬಿದ್ದಂತಾಗಿದೆ.

    ಕಳೆದ ನಾಲ್ಕೈದು ವರ್ಷಗಳಿಂದ ಕಷ್ಟ ಪಟ್ಟು ಸಾಕಿದ್ದ ಅಡಿಕೆ ಮರಗಳು ನೆಲಸಮವಾಗಿದೆ. ವೈಯಕ್ತಿಕ ದ್ವೇಷದಿಂದ ಅಡಿಕೆ ಮರಗಳನ್ನು ಕಡಿದಿದ್ದಾರೆ. ಇಂತಹ ಕೆಲಸ ಮಾಡಿದ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಘಟನೆ ಸಾಗರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.