Tag: ಅಡ್ಡ ಮತ

  • ರಾಜ್ಯಸಭಾ ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ – ಬಿಜೆಪಿಯ ಐವರು ಆಯ್ಕೆ

    ರಾಜ್ಯಸಭಾ ಚುನಾವಣೆಯ ಬಳಿಕ MVA ಸರ್ಕಾರಕ್ಕೆ ಮತ್ತೆ ಶಾಕ್ – ಬಿಜೆಪಿಯ ಐವರು ಆಯ್ಕೆ

    ಮುಂಬೈ: ರಾಜ್ಯಸಭಾ ಚುನಾವಣೆಯಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ ಶಾಕ್ ನೀಡಿದ್ದ ಬಿಜೆಪಿ ಈಗ ವಿಧಾನ ಪರಿಷತ್ ಚುನಾವಣೆಯಲ್ಲೂ ಶಾಕ್ ನೀಡಿದೆ. ಬಿಜೆಪಿ ತನ್ನ 5ನೇ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡಿದ್ದರಿಂದ ಮಹಾರಾಷ್ಟ್ರದಲ್ಲಿ ಈಗ ರಾಜಕೀಯ ಚಟುವಟಿಕೆ ಬಿರುಸಾಗಿದೆ.

    ಶಿವಸೇನೆಯ 56 ಶಾಸಕರ ಪೈಕಿ 4 ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ಒಟ್ಟು 288 ಸದಸ್ಯರ ಪೈಕಿ 285 ಶಾಸಕರು ಮತದಾನ ಮಾಡಲು ಅರ್ಹತೆ ಪಡೆದಿದ್ದರು. ವಿಧಾನ ಸಭೆಯಲ್ಲಿ ಬಿಜೆಪಿ 106 ಶಾಸಕರ ಬಲವನ್ನು ಹೊಂದಿದೆ. ಆದರೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ 133 ಮತಗಳು ಬಿದ್ದಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಯೋಗ ದಿನ: ನಾಡಿನ ಜನತೆಗೆ ಯೋಗದ ಪ್ರಾಮುಖ್ಯತೆ ಸಾರಿದ ಗಣ್ಯರು

    ಶಿವಸೇನೆ 56 ಶಾಸಕರ ಬೆಂಬಲವನ್ನು ಹೊಂದಿದ್ದು 52 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ 44 ಶಾಸಕರ ಬಲವನ್ನು ಹೊಂದಿದ್ದು 41 ಮತಗಳನ್ನು ಪಡೆದಿದೆ. ಆದರೆ ಎನ್‌ಸಿಪಿ 53 ಶಾಸಕರ ಬಲವನ್ನು ಹೊಂದಿದ್ದು 57 ಮಂದಿ ವೋಟ್ ಹಾಕಿದ್ದಾರೆ.

    ಬಿಜೆಪಿ ಪರವಾಗಿ ಶಿವಸೇನೆ ಮತ್ತು ಪಕ್ಷೇತರರು ಮತ ಚಲಾಯಿಸಿದ್ದರಿಂದ ಐವರು ಪರಿಷತ್‌ಗೆ ಆಯ್ಕೆ ಆಗಿದ್ದಾರೆ. ಶಿವಸೇನೆ ಮತ್ತು ಎನ್‌ಸಿಪಿಯ ಇಬ್ಬರು ಮತ್ತು ಕಾಂಗ್ರೆಸ್‌ನ ಒಬ್ಬರು ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. ಇದನ್ನೂ ಓದಿ: ಚುನಾವಣೆ ಪ್ರಚಾರಕ್ಕೆ ಮಕ್ಕಳ ಬಳಕೆ – ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಪತ್ರ ಬರೆದ ಎನ್‌ಸಿಪಿಸಿಆರ್

    bjP

    ಪರಿಷತ್‌ಗೆ ಆಯ್ಕೆಯಾಗಲು ಅಭ್ಯರ್ಥಿ ಕನಿಷ್ಠ 26 ಮತಗಳನ್ನು ಪಡೆಯಬೇಕಿತ್ತು. ಬಿಜೆಪಿ ತನಗೆ ಬಹುಮತ ಇಲ್ಲದೇ ಇದ್ದರೂ 5ನೇ ಅಭ್ಯರ್ಥಿಯನ್ನು ಇಳಿಸಿದ್ದರೆ ಎಂವಿಎ ಸರ್ಕಾರ 6ನೇ ಅಭ್ಯರ್ಥಿಯನ್ನು ಇಳಿಸಿತ್ತು. ಹೀಗಿದ್ದರೂ ಬಿಜೆಪಿ ಅಡ್ಡ ಮತದಾನ ಮತ್ತು ಪಕ್ಷೇತರ ಶಾಸಕರನ್ನು ಸೆಳೆಯುವ ಮೂಲಕ 5 ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಯಶಸ್ವಿಯಾಗಿತ್ತು.

    Live Tv

  • ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಕೋಲಾರ: ಶುಕ್ರವಾರ ನಡೆದ ರಾಜ್ಯಸಭಾ ಚುನಾವಣೆ ಸಂದರ್ಭ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ. ನಾನು ಯಾಕೆ ಅಡ್ಡ ಮತದಾನ ಮಾಡಿದೆ ಎಂಬುದಕ್ಕೆ ಈಗ ಹಳೆ ಕಥೆ ಬಿಚ್ಚಿಟ್ಟು ಶ್ರೀನಿವಾಸ್ ಗೌಡ ತನ್ನ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಕೋಲಾರದಲ್ಲಿ ಮಾತನಾಡಿದ ಶ್ರೀನಿವಾಸ್ ಗೌಡ, ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್‌ಗೆ ಮತ ಹಾಕಿದ್ದೇನೆ. ಈ ಹಿನ್ನೆಲೆ ಜೆಡಿಎಸ್ ಮುಖಂಡರು ನನ್ನ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ ಎಂದು ತಿಳಿಸಿದರು.

    7 ತಿಂಗಳ ಹಿಂದೆಯೇ ಪ್ರಜ್ವಲ್ ರೇವಣ್ಣ ಅವರು ನನ್ನನ್ನು ಉಚ್ಚಾಟನೆ ಮಾಡಿದ್ದರು. ಇದೀಗ ಜೆಡಿಎಸ್‌ನವರಿಗೆ ನನ್ನ ವಿಷಯದಲ್ಲಿ ಮಾತನಾಡುವ ಹಕ್ಕು ಇಲ್ಲ. ಅವರು ಉಚ್ಚಾಟನೆ ಮಾಡಿದ ಬಳಿಕ ನಾನು ಯಾವುದೇ ಪಕ್ಷಕ್ಕೂ ಹೋಗಬಹುದು ಎಂದು ಹೇಳಿದರು.

    ನಾನೊಬ್ಬ ಹಿರಿಯ ಶಾಸಕನಾಗಿದ್ದರೂ ನನ್ನನ್ನು ಸಚಿವನನ್ನಾಗಿ ಮಾಡಿಲ್ಲ. ನಾನು ಮಂತ್ರಿಯಾಗಿದ್ದಾಗ ಕುಮಾರಸ್ವಾಮಿಯವರು ಶಾಸಕರೂ ಆಗಿರಲಿಲ್ಲ. ಇಂತಹ ಹಿರಿಯ ಶಾಸಕನನ್ನು ಪಕ್ಷ ಸರಿಯಾಗಿ ನೋಡಿಕೊಂಡಿಲ್ಲ. ನನ್ನ ಹಿನ್ನೆಲೆ ನೋಡಿಯಾದರೂ ಗೌರವ ನೀಡಬೇಕಿತ್ತು ಎಂದು ನುಡಿದರು. ಇದನ್ನೂ ಓದಿ: ಬಿಜೆಪಿ ‘ಎ’ ಟೀಂ ಅಂತ ಎಲ್ಲರೂ ಒಪ್ಪಿಕೊಂಡಾಗಿದೆ, ಬಿ ಟೀಂ ಯಾವುದಾದರೇನು: ಬೊಮ್ಮಾಯಿ

    ನಾನು ಧರಂ ಸಿಂಗ್ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದೆ. ಅವರ ನಡತೆ ನ್ಯಾಯಯುತವಾಗಿರಲಿಲ್ಲ. ಈಗ ತಾಲೂಕು, ಜಿಲ್ಲಾ ಪಂಚಾಯತ್ ಎಲ್ಲದರಿಂದಲೂ ನಾನು ಹೊರ ಬಂದಿದ್ದೇನೆ. ನನ್ನ ಕೈಲಾದಮಟ್ಟಿಗೆ ಅಭಿವೃದ್ಧಿ ಮಾಡಿದ್ದೇನೆ. ಕೋಲಾರಕ್ಕೆ ರಿಂಗ್ ರಸ್ತೆ ಮಾಡಿಸುವ ಕನಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ – ಸುಳಿವು ಬಿಟ್ಟುಕೊಟ್ಟ ಅಶ್ವಥ್ ನಾರಾಯಣ್

    2018ರಲ್ಲಿ ನನಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ತಪ್ಪಿತ್ತು. ಕಾಂಗ್ರೆಸ್‌ನಲ್ಲಿ ಟಿಕೆಟ್ ಕೇಳಿದ್ದಾಗ ಮಿಸ್ ಆಯ್ತು ಎಂದು ಜೆಡಿಎಸ್‌ನಿಂದ ಸ್ಪರ್ಧೆಗೆ ನಿಂತಿದ್ದೆ. ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ ಶಾಸಕರಿಗೂ 50 ಲಕ್ಷ ರೂ. ನೀಡಲಾಗಿದೆ. ಅದನ್ನು ಎಲ್ಲಾ ಜೆಡಿಎಸ್ ಶಾಸಕರೂ ಪಡೆದಿದ್ದಾರೆ. ಆದರೆ ನಾನು ಪಡೆದಿಲ್ಲ ಎಂದು ಹೇಳಿಕೆ ನೀಡಿದರು.