Tag: ಅಣ್ಣಮ್ಮ ದೇವಿ

  • ಅಣ್ಣಮ್ಮ ದೇವಿ ಮೆರವಣಿಗೆಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

    ಅಣ್ಣಮ್ಮ ದೇವಿ ಮೆರವಣಿಗೆಯಲ್ಲಿ ಹಿಂದೂ, ಮುಸ್ಲಿಂ ಮುಖಂಡರ ಭರ್ಜರಿ ಡಾನ್ಸ್

    ಬೆಂಗಳೂರು: ರಾಜ್ಯದಲ್ಲಿ ಆಜಾನ್ ಮತ್ತು ಸುಪ್ರಭಾತ ನಡುವಿನ ಧರ್ಮ ದಂಗಲ್ ನಡುವೆ ಭಾವೈಕ್ಯತೆ ಸಾರುವ ದೃಶ್ಯಕ್ಕೆ ಬೆಂಗಳೂರು ಸಾಕ್ಷಿಯಾಗಿದೆ.

    ಬೆಂಗಳೂರಿನ ಚಂದ್ರಾಲೇಔಟ್‍ನ ಗಂಗೋಂಡನಹಳ್ಳಿ ಕಳೆದ ಎರಡು ವರ್ಷಗಳಿಂದ ಕೊರೊನಾ ಮಹಾಮಾರಿಯ ಪರಿಣಾಮ ಯಾವುದೇ ಜಾತ್ರೆ ಮಹೋತ್ಸವಗಳು ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಅಣ್ಣಮ್ಮದೇವಿ ಜಾತ್ರೆ ಮಹೋತ್ಸವ ನಡೆಯಿತು. ವಿಶೇಷ ಅಂದರೆ ಗಂಗೊಂಡನಹಳ್ಳಿ ಹಿಂದೂಗಳಿಗಿಂತ ಹೆಚ್ಚಾಗಿ ಮುಸ್ಲಿಮರೇ ವಾಸವಾಗಿದ್ದಾರೆ. ಅಣ್ಣಮ್ಮ ಜಾತ್ರೆ ಮೆರವಣಿಗೆಯಲ್ಲಿ ಹಿಂದೂ ಮುಸ್ಲಿಮರು ಎನ್ನುವ ಯಾವುದೇ ಭೇದ, ಭಾವ ಇಲ್ಲದೇ ಪರಸ್ಪರ ಕೈ, ಕೈ ಹಿಡಿದುಕೊಂಡು ದೇವಿ ಮುಂದೆ ಭರ್ಜರಿ ಡಾನ್ಸ್ ಮಾಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದು ಆಪ್ತರ ಮೇಲೆ ಅನುಮಾನ ಪಟ್ಟಿದ್ದಾರಾ ಡಿಕೆಶಿ?

    ಮೆರವಣಿಗೆ ಪ್ರಾರಂಭದಿಂದ ಕೊನೆಯವರೆಗೂ ಮುಸ್ಲಿಮರು ಮೆರವಣಿಗೆಯಲ್ಲಿ ಭಾಗಿಯಾಗಿ ಹಿಂದೂಗಳಿಗೆ ಸಾಥ್ ನೀಡಿ ಭಕ್ತಿ ಭಾವದಿಂದ ಅಣ್ಣಮ್ಮ ತಾಯಿ ಕೃಪೆಗೆ ಪಾತ್ರರಾಗಿದ್ದಾರೆ. ದಿನ ಬೆಳಗಾದರೆ, ಧರ್ಮ-ಧರ್ಮಗಳ ನಡುವಿನ ಕಿತ್ತಾಟದ ನಡುವೆ ಈ ರೀತಿ ಭಾವೈಕ್ಯತೆ ಸಾರುವ ಅಪರೂಪದ ಘಟನೆಯಿಂದ ಎರಡು ಧರ್ಮದ ಜನರು ಫುಲ್ ಖುಷ್ ಆಗಿದ್ದಾರೆ. ಇದನ್ನೂ ಓದಿ: ಲಕ್ಷ್ಮಣ ಸವದಿಯ ಮುಂದಿನ ರಾಜಕೀಯ ಹಾದಿ ಏನು?

  • ಮುಸ್ಲಿಮ್‌ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ

    ಮುಸ್ಲಿಮ್‌ ಬಾಹುಳ್ಯ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ – ದಾರಿ ಬದಲಾವಣೆ ಮಾಡುವಂತೆ ಮನವಿ

    ಬೆಂಗಳೂರು: ರಾಜ್ಯದಲ್ಲಿ ಧರ್ಮ ದಂಗಲ್ ಬಿಸಿ ಈಗ ಅಣ್ಣಮ್ಮ ದೇವಿ ಮೆರವಣಿಗೆಗೂ ತಟ್ಟಿದೆ. ಮುಸ್ಲಿಮ್‌ ಜನ ನೆಲೆಸಿರುವ ಜಾಗದಲ್ಲಿ ಸಾಗುವ ಅಣ್ಣಮ್ಮ ದೇವಿ ಮೆರವಣಿಗೆಯ ದಾರಿಯನ್ನು ಬದಲಾವಣೆ ಮಾಡಿ ಎಂದು ವ್ಯಕ್ತಿಯೊಬ್ಬರು ಬೆಂಗಳೂರು ಪೊಲೀಸರಿಗೆ ಮನವಿ ಮಾಡಿದ್ದಾರೆ.

    ಗುಲಾಬ್‌ ಪಾಶಾ ಎಂಬವರು ಬೆಂಗಳೂರು ದಕ್ಷಿಣ ಡಿಸಿಪಿಗೆ ಮನವಿ ಮಾಡಿ ಮೆರವಣಿಗೆ ಸಾಗುವ ದಾರಿಯನ್ನು ಬದಲಾವಣೆ ಮಾಡಿ ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.

    ಯಲೇಚನಹಳ್ಳಿಯ ಬಿಬಿಎಂಪಿಯ ವಾರ್ಡ್‌ ಬಿಜೆಪಿ ಸದಸ್ಯ ಬಾಲಕೃಷ್ಣ ಅವರ ನೇತೃತ್ವದಲ್ಲಿ ಈ ಮೆರವಣಿಗೆ ಆಯೋಜನೆ ಮಾಡಲಾಗಿದೆ ಎಂದು ಗುಲಾಬ್‌ ಪಾಶಾ ತಿಳಿಸಿದ್ದಾರೆ.  ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

    ಮನವಿಯಲ್ಲಿ ಏನಿದೆ?
    ಏಪ್ರಿಲ್‌ 23 ಶನಿವಾರ ರಾತ್ರಿ 8 ಗಂಟೆಗೆ ಹಿಂದೂ ಸಂಘಟನೆ ಅಣ್ಣಮ್ಮ ದೇವಿ ಮೆರವಣಿಗೆಯನ್ನು ಆಯೋಜಿಸಿದೆ. ಇಲ್ಲಿಯವರೆಗೆ ಅಣ್ಣಮ್ಮ ದೇವಿ ಮೆರವಣಿಗೆ ಆಯೋಜನೆ ಆಗಿರಲಿಲ್ಲ. ಮೊದಲ ಬಾರಿಗೆ ನಡೆಯುತ್ತಿರುವ ಈ ಮೆರವಣಿಗೆ ಮುಸ್ಲಿಮ್‌ ಜನರು ಹೆಚ್ಚಿನ ಸಂಖ್ಯೆಯಲ್ಲಿರುವ ಫಯಾಜ್‌ಬಾದ್‌ ಮತ್ತು ಕನಕ ನಗರದಲ್ಲಿ ಸಾಗಲಿದೆ. ಕರ್ನಾಟಕ ಮತ್ತು ಭಾರತದ ಹಲವು ಭಾಗದಲ್ಲಿ ಕೋಮು ಸಾಮಾರಸ್ಯಕ್ಕೆ ಧಕ್ಕೆ ಆಗುತ್ತಿರುವ ಹಿನ್ನೆಲೆಯಲ್ಲಿ ನಮಗೆ ಬಹಳ ಹೆದರಿಕೆ ಆಗುತ್ತಿದೆ.

    ಮೆರವಣಿಗೆ ಸಾಗುವ ಜಾಗದಲ್ಲಿ ಮಸೀದಿ ಇದೆ. ಅಷ್ಟೇ ಅಲ್ಲದೇ ರಂಜಾನ್‌ ಪ್ರಾರ್ಥನೆ ಸಹ ನಡೆಯುತ್ತಿದೆ. ಹೀಗಾಗಿ ಈ ಕೂಡಲೇ ಫಯಾಜ್‌ಬಾದ್‌ ಮತ್ತು ಕನಕ ನಗರದಲ್ಲಿ ಸಾಗುವ ಮೆರವಣಿಗೆ ದಾರಿಯನ್ನು ಬದಲಾವಣೆ ಮಾಡಬೇಕೆಂದು ಕೇಳಿಕೊಳ್ಳುತ್ತೇವೆ ಎಂದು ಮನವಿ ಮಾಡಲಾಗಿದೆ.

    ಹೆಚ್ಚಿನ ಪೊಲೀಸರನ್ನು ನಿಯೋಜಿಸಿ:
    ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಜಾಗದಲ್ಲಿ ಅಣ್ಣಮ್ಮ ದೇವಿ ಮೆರವಣಿಗೆ ಸಾಗಲಿದೆ. ರಾತ್ರಿ ಎಂಟು ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮೆರವಣಿಗೆ ನಡೆಯಲಿದೆ. ಸೂಕ್ಷ್ಮ ಪ್ರದೇಶದಲ್ಲಿ ಮೆರವಣಿಗೆ ನಡೆಯುತ್ತಿರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಿ ಎಂದು ಜನಾಧಿಕಾರ ಸಂಘರ್ಷ ಪರಿಷತ್‌ ಉಪಾಧ್ಯಕ್ಷ ಅದರ್ಶ ಅಯ್ಯರ್‌ ಪೊಲೀಸ್‌ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ.