Tag: ಅಣ್ಣಾ ಸಾಹೇಬ್ ಜೊಲ್ಲೆ

  • ಪ್ರಿಯಾಂಕಾ ʻಕೈʼ ಹಿಡಿದ ಚಿಕ್ಕೋಡಿ – ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮುಗಿಲುಮುಟ್ಟಿದ ಸಂಭ್ರಮ

    ಪ್ರಿಯಾಂಕಾ ʻಕೈʼ ಹಿಡಿದ ಚಿಕ್ಕೋಡಿ – ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮುಗಿಲುಮುಟ್ಟಿದ ಸಂಭ್ರಮ

    ಚಿಕ್ಕೂಡಿ: ಜಿದ್ದಾಜಿದ್ದಿನ ಕಣವಾಗಿಗಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ (Congress Party) ಗೆಲುವಿನ ನಗೆ ಬೀರಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಗೆಲುವು ಸಾಧಿಸಿದ್ದಾರೆ.

    ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆ (Annasaheb Jolle) ವಿರುದ್ಧ ಪ್ರಿಯಾಂಕಾ ಜಾರಕಿಹೊಳಿ 92,655 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ‌ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ್‌ ಜೊಲ್ಲೆ 6,18,168 ಮತಗಳನ್ನು ಪಡೆದರೆ ಪ್ರಿಯಾಂಕಾ ಜಾರಕಿಹೊಳಿ 7,10,823 ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ.

    ಇನ್ನೂ ಅಂಚೆ ಮತ ಎಣಿಕೆ ಹಾಗೂ ಇಟಿಪಿಬಿಎಸ್ ಮತ ಎಣಿಕೆ ಜಾರಿಯಿದ್ದು ಕೈ ಅಭ್ಯರ್ಥಿಯ ಗೆಲುವಿನ ಅಂತರದಲ್ಲಿ ಅಲ್ಪ ವ್ಯತ್ಯಾಸ ಆಗುವ ಸಾಧ್ಯತೆಗಳಿವೆ. 22 ಸುತ್ತಿನ ಮತ ಎಣಿಕೆಯ ಒಂದೇ ಒಂದು ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮುನ್ನಡೆ ಸಾಧಿಸಲಿಲ್ಲ. ಎಲ್ಲ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಪಡೆದುಕೊಂಡಿದ್ದು ವಿಶೇಷ. ಅಲ್ಲದೇ ಪತ್ನಿ ಶಶಿಕಲಾ ಅವರು ಶಾಸಕರಾಗಿರುವ ನಿಪ್ಪಾಣಿ ಕ್ಷೇತ್ರದಲ್ಲೇ ಕಾಂಗ್ರೆಸ್‌ 29,752 ಮತಗಳ ಮುನ್ನಡೆ ಸಾಧಿಸಿರುವುದು ಬಿಜೆಪಿಗೆ ತೀವ್ರ ಮುಖಭಂಗವುಂಟುಮಾಡಿದೆ.

    ಪ್ರಧಾನಿ ಮೋದಿ ಅಲೆಯ ನಡುವೆಯೂ ಚಿಕ್ಕೋಡಿ ಮತದಾರ ಪ್ರಭುಗಳು ಜಾರಕಿಹೊಳಿ ಕುಟುಂಬಕ್ಕೆ ಜೈ ಎಂದಿದ್ದಾರೆ. ತಂದೆ ಸಚಿವ ಸತೀಶ ಜಾರಕಿಹೊಳಿ ಪುತ್ರ ರಾಹುಲ್‌ ಜಾರಕಿಹೊಳಿ ಹಾಗೂ ಅಭ್ಯರ್ಥಿ ಪ್ರೀಯಾಂಕಾ ಜಾರಕಿಹೊಳಿ ಹಗಲಿರುಳು ಕ್ಷೇತ್ರದಲ್ಲಿ ಗೆಲುವಿಗಾಗಿ ಶ್ರಮಿಸಿದ್ದರು.

    ಅಲ್ಲದೇ, ಸಾಮಾನ್ಯ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲುವುದೇ ಕಷ್ಟ ಎನ್ನುತ್ತಿದ್ದವರಿಗೆ ಜಾತಿಗಿಂತ ವ್ಯಕ್ತಿ ಮುಖ್ಯ ಎನ್ನುವ ಸಂದೇಶವನ್ನು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನರು ಸಾರಿದ್ದಾರೆ.

  • ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ, ವದಂತಿಗೆ ಕಿವಿಗೊಡಬೇಡಿ: ಅಣ್ಣಾ ಸಾಹೇಬ್ ಜೊಲ್ಲೆ

    ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿವೆ, ವದಂತಿಗೆ ಕಿವಿಗೊಡಬೇಡಿ: ಅಣ್ಣಾ ಸಾಹೇಬ್ ಜೊಲ್ಲೆ

    ವಿಜಯಪುರ: ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುತ್ತಿದೆ. ಇಂತಹ ವದಂತಿಗೆ ಯಾರೂ ಕಿವಿಕೊಡಬೇಡಿ ಎಂದು ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಜನರಿಗೆ ಕಿವಿಮಾತು ಹೇಳಿದ್ದಾರೆ.

    ವಿಜಯಪುರದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ದಂಪತಿಗೆ ಸನ್ಮಾನ ಸಮಾರಂಭ ಜರುಗಿತು. ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸೀರೆ ಕೊಟ್ಟು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜೋಗೂರ ಸನ್ಮಾನಿಸಿದರು. ಇನ್ನು ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಗಣ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಇದೆ ವೇಳೆ ಮಾತನಾಡಿದ ಅಣ್ಣಾ ಸಾಹೇಬ್ ಜೊಲ್ಲೆ, ಪೌರತ್ವ ಕಾಯ್ದೆಯ ಬಗ್ಗೆ ಪ್ರತಿಪಕ್ಷಗಳು ಜನರನ್ನು ತಪ್ಪು ದಾರಿಗೆಳೆಯುತ್ತಿವೆ. ಇಂಥ ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಲ್ಲದೆ ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ. ಹೋರಾಟ ಮಾಡುವವರು ಈ ಕಾಯ್ದೆಯ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.

    ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಶಶಿಕಲಾ ಜೊಲ್ಲೆ ಅವರು, ಕಾಂಗ್ರೆಸ್ ದಶಕಗಳ ಕಾಲ ಅಧಿಕಾರದಲ್ಲಿದ್ದರೂ ಗರೀಬಿ ಹಟಾವೋ ಘೋಷಣೆ ಹೇಳುತ್ತ ಹೋಯಿತು. ಆದರೆ ಬಡವರ ಉದ್ಧಾರ ಮಾಡಲಿಲ್ಲ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಭಾರತ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ. ತ್ರಿವಳಿ ತಲಾಕ್, ಸಿಎಎ ಸೇರಿದಂತೆ ನಾನಾ ಕಾಯ್ದೆಗಳು ಜಾರಿಯಾಗುತ್ತಿವೆ. ವಿಶ್ವಾದ್ಯಂತ ಭಾರತದ ಗೌರವ ಹೆಚ್ಚಿದೆ ಎಂದು ಕಾಂಗ್ರೆಸ್ ವಿರುದ್ಧ ಮಾತಿನ ಚಾಟಿ ಬೀಸಿದರು.

    ಪೌರತ್ವ ಕಾಯ್ದೆ ಅನುಕೂಲತೆಯ ಬಗ್ಗೆ ಬಿಜೆಪಿ ನಾಯಕರು, ಕಾರ್ಯಕರ್ತರು ಜನರಿಗೆ ಮಾಹಿತಿ ಮುಟ್ಟಿಸಬೇಕು. ಭಾರತೀಯ ಮುಸ್ಲಿಮರಿಗೆ ಪೌರತ್ವ ಕಾಯ್ದೆಯಿಂದ ಯಾವುದೇ ರೀತಿಯ ತೊಂದರೆಯಿಲ್ಲ ಎಂಬುದರ ಕುರಿತು ಅರಿವು ಮೂಡಿಸಬೇಕು ಎಂದು ಕರೆ ಕೊಟ್ಟರು. ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹಿಂಸಾಚಾರ ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.

    ಇದೇ ವೇಳೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಮಹಿಳಾ ಸಾಹಿತಿ ಡಾ. ಸರಸ್ವತಿ ಚಿಮ್ಮಲಗಿ ಅವರಿಗೂ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್, ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಕವಟಗಿ ಮುಂತಾದವರು ಭಾಗಿಯಾಗಿದ್ದರು.