Tag: ಅತಿಥಿಗಳು

  • ಕತ್ರಿನಾ, ವಿಕ್ಕಿ ಮದುವೆಗೆ ಬರುವ ಅತಿಥಿಗಳಿಗೆ ಸೀಕ್ರೆಟ್‌ ಕೋಡ್‌- ಯಾರ‍್ಯಾರಿಗೆ ಆಹ್ವಾನ?

    ಕತ್ರಿನಾ, ವಿಕ್ಕಿ ಮದುವೆಗೆ ಬರುವ ಅತಿಥಿಗಳಿಗೆ ಸೀಕ್ರೆಟ್‌ ಕೋಡ್‌- ಯಾರ‍್ಯಾರಿಗೆ ಆಹ್ವಾನ?

    ನವದೆಹಲಿ: ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಹಾಗೂ ನಟ ವಿಕ್ಕಿ ಕೌಶಲ್‌ ಜೋಡಿ ವಿವಾಹದ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗ್ತಿದೆ. ಮದುವೆ ಎಲ್ಲಿ ನಡೆಯುತ್ತೆ, ಎಷ್ಟು ಖರ್ಚಾಗುತ್ತೆ, ಅತಿಥಿಗಳು ಯಾರ‍್ಯಾರು ಬರ್ತಾರೆ. ಹೀಗೆ ನಾನಾ ವಿಷಯಗಳು ಚರ್ಚೆಯಾಗ್ತಿವೆ.

    ರಾಜಸ್ಥಾನದ ಸವಾಯ್‌ ಮಾಧೊಪುರ್‌ ಹೋಟೆಲ್‌ನಲ್ಲಿ ಮೂರು ದಿನಗಳ ಕಾಲ ಈ ಜೋಡಿಯ ವಿವಾಹ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪತ್ನಿ ಡ್ರೆಸ್ ಸರಿಪಡಿಸೋದ್ರಲ್ಲಿ ಬ್ಯುಸಿಯಾದ ನಿಕ್ – ಪರ್ಫೆಕ್ಟ್ ಜಂಟಲ್ ಮ್ಯಾನ್ ಅಂದ ನೆಟ್ಟಿಗರು

    ಕತ್ರಿನಾ ಕೈಫ್‌ ಹಾಗೂ ವಿಕ್ಕಿ ಕೌಶಲ್‌ ವಿವಾಹ ಸಮಾರಂಭಕ್ಕೆ ಬರುವವರು ಮೊಬೈಲ್‌ ಬಳಸುವಂತಿಲ್ಲ ಎಂದು ಷರತ್ತು ವಿಧಿಸಿರುವ ಸುದ್ದಿ ಬಹಳ ಸದ್ದು ಮಾಡಿತ್ತು. ಅಂತೆಯೇ ಅತಿಥಿಗಳ ವಿಚಾರವಾಗಿ ಮತ್ತೊಂದು ಕುತೂಹಲಕಾರಿ ಸುದ್ದಿ ಹೊರಬಿದ್ದಿದೆ. ಈ ಜೋಡಿ ಮದುವೆಗೆ ಬರುವವರಿಗೆ ಸೀಕ್ರೆಟ್‌ ಕೋಡ್‌ ಇರುತ್ತಂತೆ. ಸೀಕ್ರೆಟ್‌ ಕೋಡ್‌ ಹೊಂದಿರುವವರು ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅರ್ಹರು. ಕೋಡ್‌ ಇದ್ರೆ ಮಾತ್ರ ಅತಿಥಿಗಳಿಗೆ ಹೋಟೆಲ್‌ನಲ್ಲಿ ರೂಮ್‌ಗಳು ಸಿಗುತ್ತವೆ.

    ಇನ್ನು ಕತ್ರಿನಾ ಹಾಗೂ ವಿಕ್ಕಿ ತಮ್ಮ ವಿವಾಹಕ್ಕೆ ಯಾರ‍್ಯಾರನ್ನು ಆಹ್ವಾನಿಸಬೇಕು ಎಂದು ಲಿಸ್ಟ್‌ ಕೂಡ ರೆಡಿ ಮಾಡಿದ್ದಾರಂತೆ. ಕೋವಿಡ್‌ ರೂಪಾಂತರಿ ಓಮಿಕ್ರಾನ್‌ ಭೀತಿ ಇರುವುದರಿಂದ ಕೆಲವೇ ಪ್ರಮುಖ ಅತಿಥಿಗಳನ್ನು ಆಹ್ವಾನಿಸಲು ಇಬ್ಬರೂ ನಿರ್ಧರಿಸಿದ್ದಾರೆ. ಕತ್ರಿನಾ ಅವರಿಗೆ ಬಹಳ ಹತ್ತಿರದವರಾದ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಮತ್ತು ಕುಟುಂಬದವರು ಗೆಸ್ಟ್‌ ಲಿಸ್ಟ್‌ನಲ್ಲಿದ್ದಾರೆ ಎನ್ನಲಾಗಿದೆ. ʼಕತ್ರಿನಾ ಇನ್‌ ನ್ಯೂಯಾರ್ಕ್‌ʼ ಸಿನಿಮಾ ನಿರ್ದೇಶಿಸಿರುವ ಕಬಿರ್ ಖಾನ್‌ ಅವರಿಗೂ ಆಹ್ವಾನ ನೀಡಲಾಗಿದೆಯಂತೆ. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ

    ಬಾಲಿವುಡ್‌ ನಟ ಶಾರೂಕ್‌ ಖಾನ್‌, ನಿರ್ದೇಶಕ ರೋಹಿತ್‌ ಶೆಟ್ಟಿ, ನಟಿಯರಾದ ಅನುಷ್ಕಾ ಶರ್ಮ ಹಾಗೂ ಆಲಿಯಾ ಭಟ್‌ ಅತಿಥಿಗಳ ಲಿಸ್ಟ್‌ನಲ್ಲಿ ಇದ್ದಾರೆ ಎನ್ನಲಾಗಿದೆ.

  • ಮಗನ ಮದ್ವೆಗೆ 50ಕ್ಕಿಂತ ಹೆಚ್ಚಿನ ಅತಿಥಿಗಳ ಆಹ್ವಾನ- 6.26 ಲಕ್ಷ ದಂಡ

    ಮಗನ ಮದ್ವೆಗೆ 50ಕ್ಕಿಂತ ಹೆಚ್ಚಿನ ಅತಿಥಿಗಳ ಆಹ್ವಾನ- 6.26 ಲಕ್ಷ ದಂಡ

    – ಅತಿಥಿಗಳಲ್ಲಿ 15 ಮಂದಿಗೆ ಕೊರೊನಾ ದೃಢ
    – ಸೋಂಕಿತರ ಖರ್ಚಿಗಾಗಿ ರಾಜ್ಯ ಸರ್ಕಾರ ದಂಡ

    ಜೈಪುರ: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರ ಅನೇಕ ನಿರ್ಬಂಧವನ್ನು ಹೇರಿದೆ. ಆದರೂ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಕುಟುಂಬವೊಂದು ಮದುವೆಗೆ 50ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನಿಸಿದ್ದರು. ಇದಕ್ಕಾಗಿ 6.26 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭಡಾಡಾ ಮೊಹಲ್ಲಾ ನಿವಾಸಿ ಘಿಸುಲಾಲ್ ರತಿ ಜೂನ್ 13 ರಂದು ತಮ್ಮ ಮಗನ ಮದುವೆಗೆ ಒಂದು ಸಮಾರಂಭವನ್ನು ಏರ್ಪಡಿಸಿದ್ದರು. ಈ ಸಮಾರಂಭಕ್ಕೆ 50ಕ್ಕೂ ಹೆಚ್ಚು ಅತಿಥಿಗಳನ್ನು ಆಹ್ವಾನಿಸಿದ್ದರು. ಈ ಮೂಲಕ ಘಿಸುಲಾಲ್ ರತಿ ಸರ್ಕಾರ ಕೋವಿಡ್-19 ನಿರ್ವಹಣೆಗೆ ಆದೇಶಿಸಿದ್ದ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

    ಕಾರ್ಯಕ್ರಮದ ನಂತರ 15 ಅತಿಥಿಗಳಲ್ಲಿ ಕೊರೊನಾ ಇರುವುದು ದೃಢವಾಗಿದೆ. ಅಲ್ಲದೇ ಅವರಲ್ಲಿ ಒಬ್ಬ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಭಟ್ ತಿಳಿಸಿದ್ದಾರೆ.

    ಈ ಸಂಬಂಧ ಜೂನ್ 22 ರಂದು ರತಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

    ಕೊರೊನಾ ಪಾಸಿಟಿವ್ ಬಂದ ರೋಗಿಗಳಿಗೆ ಐಸೋಲೇಷನ್ ವಾರ್ಡ್, ಕ್ವಾರಂಟೈನ್ ಸೌಲಭ್ಯ, ಆಹಾರ, ಅಂಬುಲೆನ್ಸ್ ವ್ಯವಸ್ಥೆ ಮಾಡಲು ರಾಜ್ಯ ಸರ್ಕಾರವು 6,26,600 ರೂಪಾಯಿಯನ್ನು ದಂಡವಾಗಿ ವಿಧಿಸಲಾಗಿದೆ. ಆ ಹಣವನ್ನು ಸಿಎಂ ಪರಿಹಾರ ನಿಧಿಗೆ ನೀಡುವಂತೆ ಕುಟುಂಬಕ್ಕೆ ತಿಳಿಸಲಾಗಿದೆ ಎಂದು ಭಟ್ ಹೇಳಿದ್ದಾರೆ.

  • ಕೇಜ್ರಿವಾಲ್ 3.0  – ಪ್ರಮಾಣ ವಚನಕ್ಕೆ 50 ಮಂದಿ ವಿಶೇಷ ಅತಿಥಿಗಳು

    ಕೇಜ್ರಿವಾಲ್ 3.0 – ಪ್ರಮಾಣ ವಚನಕ್ಕೆ 50 ಮಂದಿ ವಿಶೇಷ ಅತಿಥಿಗಳು

    ನವದೆಹಲಿ: ಭಾರೀ ಬಹುಮತದೊಂದಿಗೆ ಮೂರನೇ ಬಾರಿ ದೆಹಲಿ ಜನರ ದಿಲ್ ಕದ್ದಿರುವ ಅರವಿಂದ ಕೇಜ್ರಿವಾಲ್ ಇಂದು ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿ ಹೃದಯ ಭಾಗದಲ್ಲಿರುವ ರಾಮಲೀಲಾ ಮೈದಾನದಲ್ಲಿ ಸರಳ ಕಾರ್ಯಕ್ರಮ ನಡೆಯಲಿದೆ.

    ಕೇಜ್ರಿವಾಲ್ ಜೊತೆಯ ಮನೀಶ್ ಸಿಸೋಡಿಯಾ, ಸತ್ಯೇಂದರ್ ಜೈನ್, ಗೋಪಾಲ್ ರೈ, ಕೈಲಾಶ್ ಗೆಹ್ಲೋಟ್, ಇಮ್ರಾನ್ ಹುಸೈನ್ ಮತ್ತು ರಾಜೇಂದ್ರ ಗೌತಮ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಇತರೆ ರಾಜ್ಯದ ರಾಜಕೀಯ ಗಣ್ಯರನ್ನ ಆಹ್ವಾನಿಸಲಾಗುತ್ತೆ ಎನ್ನಲಾಗಿತ್ತು. ಆದರೆ ಯಾವುದೇ ರಾಜಕೀಯ ಗಣ್ಯರನ್ನ ಆಹ್ವಾನಿಸದಿರಲು ಆಪ್ ನಿರ್ಧರಿಸಿದೆ. ಪ್ರೊಟೊಕಾಲ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೆಹಲಿಯ ಬಿಜೆಪಿಯ ಏಳು ಸಂಸದರಿಗೂ ಆಹ್ವಾನ ನೀಡಿದೆ.

    50 ಮಂದಿ ವಿಶೇಷ ಅತಿಥಿಗಳು ಸಾಕ್ಷಿ:
    ರಾಜಕೀಯ ನಾಯಕರ ನೆರಳು ಬೀಳದಂತೆ ನೋಡಿಕೊಂಡಿರುವ ಅರವಿಂದ ಕೇಜ್ರಿವಾಲ್ ತಮ್ಮ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳನ್ನು ಆಹ್ವಾನಿಸಿದ್ದಾರೆ. ದಿಲ್ಲಿ ನಿರ್ಮಾಣಕ್ಕೆ ಕಾರಣವಾದ 50 ಮಂದಿ ಪ್ರಮುಖರ ಜೊತೆಗೆ ಕೇಜ್ರಿವಾಲ್ ವೇದಿಕೆ ಹಂಚಿಕೊಳ್ಳಲು ನಿರ್ಧರಿಸಿದ್ದಾರೆ. ದಿಲ್ಲಿಯ ಪ್ರಸಿದ್ಧ ಸಿಗ್ನೇಚರ್ ಬ್ರಿಡ್ಜ್ ನ ವಿನ್ಯಾಸಕಾರರು, ಶಿಕ್ಷಕರು, ಬಸ್ ಮಾರ್ಷಲ್‍ಗಳು, ಕಂಡಕ್ಟರ್, ಅಗ್ನಿಶಾಮಕ ದಳದ ಕಾರ್ಯಾಚರಣೆ ವೇಳೆ ಜೀವ ಕಳೆದುಕೊಂಡವರ ಕುಟುಂಬ ವರ್ಗ, ಆಟೋರಿಕ್ಷಾ ಚಾಲಕರು, ರೈತರು, ಅಂಗನವಾಡಿ ನೌಕರರು, ಕ್ರೀಡಾಪಟುಗಳು, ಐಐಟಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು, ಪಿಡಬ್ಲ್ಯೂಡಿ ಎಂಜಿನಿಯರ್‌ಗಳು ಸೇರಿದಂತೆ ಒಟ್ಟಾರೆ 50 ಮಂದಿ ಪ್ರಮಾಣ ವಚನ ಸಮಾರಂಭದ ವೇದಿಕೆಯಲ್ಲಿ ಕೇಜ್ರಿವಾಲ್ ಜತೆಗೆ ಇರಲಿದ್ದಾರೆ.

    ವೇದಿಕೆಯ ಕೇಂದ್ರ ಬಿಂದು ಚೋಚಾ ಮಫ್ಲರ್ ಮ್ಯಾನ್:
    ದೆಲ್ಲಿ ಚುನಾವಣೆ ಫಲಿತಾಂಶ ದಿನ ಆಪ್ ಕೇಂದ್ರ ಕಚೇರಿ ಬಳಿ ಎಲ್ಲರ ಗಮನ ಸೆಳೆದಿದ್ದ ಚೋಟಾ ಮಫ್ಲರ್‌ಮ್ಯಾನ್ ಅಂತಲೇ ಫೇಮಸ್ ಆಗಿದ್ದ ಒಂದು ವರ್ಷದ ಅವ್ಯಾನ್ ಯಥಾವತ್ ಇಂದಿನ ಕಾರ್ಯಕ್ರಮದ ಕೇಂದ್ರ ಬಿಂದುವಾಗಲಿದ್ದಾನೆ. ಅರವಿಂದ ಕೇಜ್ರಿವಾಲ್ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅವ್ಯಾನ್ ಯಥಾವತ್ ಪೋಷಕರಿಗೆ ವಿಶೇಷ ಆಹ್ವಾನ ನೀಡಲಾಗಿದೆ. ಅದ್ಧೂರಿಯಲ್ಲದ ತೀರ ಸರಳ ಎನಿಸಿದ ಅರ್ಥಬದ್ದ ಕಾರ್ಯಕ್ರಮಕ್ಕೆ ಆಪ್ ಪ್ಲಾನ್ ಮಾಡಿದ್ದು. ಇಂದಿನಿಂದ ಆಪ್‍ನ ಮತ್ತೊಂದು ಶೆಕೆ ದೆಹಲಿಯಲ್ಲಿ ಆರಂಭವಾಗಲಿದೆ.