Tag: ಅತಿಥಿ ಉಪನ್ಯಾಸಕ

  • ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ

    ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ- ವೇತನ 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ

    ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಸಂಕ್ರಾಂತಿ ಸಿಹಿಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಅತಿಥಿ ಉಪನ್ಯಾಸಕರ ವೇತನವನ್ನು 11 ಸಾವಿರದಿಂದ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ಇರೋರಿಗೆ 32 ಸಾವಿರ ನೀಡಲಾಗುತ್ತೆ. ಪೂರ್ಣ ಪ್ರಮಾಣದಲ್ಲಿ ವರ್ಕ್‍ಲೋಡ್ ನೀಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರು ಅನೇಕ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆ ಬಗ್ಗೆ ವರದಿ ನೀಡಲು ಸಿಎಂ ಸಮಿತಿ ನೇಮಕ ಮಾಡಿದ್ರು. ಕುಮಾರ್ ನಾಯಕ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದ್ರು. ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ವರದಿಯನ್ನು ಸಿಎಂ ಗಮನಿಸಿ ವರದಿಯನ್ನ ಅನುಷ್ಠಾನ ಮಾಡಲು ಸಿಎಂ ಒಪ್ಪಿದ್ದಾರೆ ಎಂದರು. ಇದನ್ನೂ ಓದಿ: ಆರೋಪಿಗಳ ರಕ್ಷಣೆಗೆ ಲಂಚ – ರವಿ ಡಿ.ಚನ್ನಣ್ಣನವರ್ ಅಮಾನತಿಗೆ AAP ಆಗ್ರಹ

    2002 ರಿಂದ ಅತಿಥಿ ಉಪನ್ಯಾಸಕರು ಹುದ್ದೆ ಸೃಷ್ಟಿಯಾಗಿದೆ. 2012ರ ಮೊದಲು ಕಾಲೇಜುಗಳೇ ನೇಮಕ ಮಾಡುತ್ತಿತ್ತು. 2012 ರ ನಂತ್ರ ನಮ್ಮ ಇಲಾಖೆ ನೇಮಕ ಮಾಡುತ್ತಿದೆ. 5 ವರ್ಷ ಮೇಲ್ಪಟ್ಟು ಸೇವೆ ಮಾಡಿದ ಯುಜಿಸಿ ಕ್ವಾಲಿಫಿಕೇಶನ್ ಇರೋರಿಗೆ 32 ಸಾವಿರ ಕೊಡ್ತೀವಿ. 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸದ ಯುಜಿಸಿ ಕ್ವಾಲಿಫಿಕೇಶನ್ ಇರೋ ಅತಿಥಿ ಉಪನ್ಯಾಸಕರಿಗೆ 30 ಸಾವಿರ, 5 ವರ್ಷ ಸೇವೆ ಹೆಚ್ಚು ಸೇವೆ ಸಲ್ಲಿಸಿದ ಯುಜಿಸಿ ಕ್ವಾಲಿಫಿಕೇನ್ ಇಲ್ಲದವರಿಗೆ 28 ಸಾವಿರ, 5 ವರ್ಷ ಸೇವೆ ಇಲ್ಲದ ಯುಜಿಸಿ ಕ್ವಾಲಿಫಿಕೇಶನ್ ಇಲ್ಲದವರಿಗೆ 26 ಸಾವಿರ ಸಂಬಳ ನೀಡ್ತೀವಿ. ಪ್ರತಿ ತಿಂಗಳು 10 ರಂದು ಸಂಬಳ ಕೊಡ್ತೀವಿ ಎಂದು ಸಚಿವರು ಘೋಷಣೆ ಮಾಡಿದರು.

    ಅತಿಥಿ ಉಪನ್ಯಾಸಕರನ್ನ ಖಾಯಂ ಮಾಡಲು ಸಾಧ್ಯವಿಲ್ಲ. ಕೃಪಾಂಕ ನೀಡುವ ಪ್ರಸ್ತಾಪವೂ ಇಲ್ಲ. ಸಂಬಳ ಜಾಸ್ತಿ ಮಾಡೋಕೆ ಸಮಿತಿ ವರದಿ ನೀಡಿದೆ. ಅದನ್ನ ಸರ್ಕಾರ ಒಪ್ಪಿಕೊಂಡಿದೆ. ವರ್ಷದಲ್ಲಿ 10 ತಿಂಗಳು ಅತಿಥಿ ಉಪನ್ಯಾಸಕರಿಗೆ ಕೆಲಸ ಇರುತ್ತೆ. ಫುಲ್ ವರ್ಕ್ ಲೋಡ್ ಅತಿಥಿ ಉಪನ್ಯಾಸಕರಿಗೆ ಕೊಡ್ತೀವಿ ಎಂದು ತಿಳಿಸಿದರು.

  • ಬಯಲಾಯ್ತು ಧನದಾಹಿ ಪ್ರಿನ್ಸಿಪಾಲ್ ಮಹಾ ಕರ್ಮಕಾಂಡ – ಅತಿಥಿ ಉಪನ್ಯಾಸಕರಿಗೆ ಸಂಬಳ ಕೊಡೋ ನೆಪದಲ್ಲಿ ಲೂಟಿ

    ಬಯಲಾಯ್ತು ಧನದಾಹಿ ಪ್ರಿನ್ಸಿಪಾಲ್ ಮಹಾ ಕರ್ಮಕಾಂಡ – ಅತಿಥಿ ಉಪನ್ಯಾಸಕರಿಗೆ ಸಂಬಳ ಕೊಡೋ ನೆಪದಲ್ಲಿ ಲೂಟಿ

    – ಎರಡು ವರ್ಷದಲ್ಲಿ ಸುಮಾರು 20 ಲಕ್ಷ ರೂ. ಪಂಗನಾಮ

    ತುಮಕೂರು: ಸರ್ಕಾರಿ ಕಾಲೇಜುಗಳಂದ್ರೆ ಅಲ್ಲಿ ಸಾಮಾನ್ಯವಾಗಿ ಬಡ ವಿದ್ಯಾರ್ಥಿಗಳೇ ಹೆಚ್ಚು ವಿದ್ಯಾಭ್ಯಾಸ ಮಾಡುತ್ತಿರುತ್ತಾರೆ. ಕಷ್ಟನೋ, ಸುಖನೋ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಅಪ್ಪ-ಅಮ್ಮಂದಿರು ತಮ್ಮ ಮಕ್ಕಳನ್ನು ಶಾಲೆಗೆ ಕಳುಸುತ್ತಾರೆ. ಆದರೆ ಅತಿಥಿ ಉಪನ್ಯಾಕರಿಗೆ ಸಂಬಳ ಕೊಡುವ ನೆಪದಲ್ಲಿ ಬಡ ವಿದ್ಯಾರ್ಥಿಗಳಿಂದ ಪ್ರಾಂಶುಪಾಲ ಲಕ್ಷ ಲಕ್ಷ ಲೂಟಿ ಮಾಡಿರೋದು ಬೆಳಕಿಗೆ ಬಂದಿದೆ.

    ತುಮಕೂರು ಜಿಲ್ಲೆ ತಿಪಟೂರು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಐದಾರು ವರ್ಷಗಳಿಂದ ನಿರಂತರವಾಗಿ ವಿದ್ಯಾರ್ಥಿಗಳಿಂದ ಕಾಲೇಜು ಅಭಿವೃದ್ಧಿ ಹೆಸರಿನಲ್ಲಿ ಪ್ರಾಂಶುಪಾಲ ಅಲ್ಲಮಪ್ರಭು ಮತ್ತು ಎಫ್‍ಡಿಎ ಸುನಿಲ್ ಕೂರ್ಗಿ ಇಬ್ಬರೂ ಜತೆಯಾಗಿ ಹಣ ಪೀಕ್ತಿದ್ದಾರೆ. ಸರ್ಕಾರದಿಂದ ಬಿಡುಗಡೆಯಾದ ವೇತನವನ್ನು ತನ್ನ ಕುಟುಂಬದವರ ಖಾತೆಗೆ ಜಮೆ ಮಾಡುತ್ತಿದ್ದಾರೆ.

    ಎರಡು ವರ್ಷದಲ್ಲಿ ಸರಿಸುಮಾರು 20 ಲಕ್ಷ ರೂಪಾಯಿ ಲಪಟಾಯಿಸಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ 40 ಲಕ್ಷ ಹಣವನ್ನು ಇದೇ ರೀತಿ ಗೋಲ್‍ಮಾಲ್ ಮಾಡಿದ್ದಾರೆ. ಈ ಅಕ್ರಮದ ಆರೋಪದ ಬಗ್ಗೆ ಪದವಿಪೂರ್ವ ಕಾಲೇಜುಗಳ ಉಪನಿರ್ದೇಶಕರ ಕೈವಾಡವೂ ಇದೆ ಎನ್ನಲಾಗ್ತಿದೆ. ಆದರೆ ಈ ಆರೋಪವನ್ನು ಉಪನಿರ್ದೇಶಕ ನರಸಿಂಹಮೂರ್ತಿ ತಳ್ಳಿಹಾಕಿದ್ದಾರೆ.

    ಒಟ್ಟಾರೆಯಾಗಿ ಕಾಲೇಜು ಅಭಿವೃದ್ಧಿ ಹೆಸರಲ್ಲಿ ಹಣ ನುಂಗುತ್ತಿದ್ದ ಇಬ್ಬರು ಆರೋಪಿಗಳ ವಿರುದ್ಧ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

  • ಉದ್ಯೋಗವಿಲ್ಲದೇ ದಿನಗೂಲಿ ಕುರಿಗಾಯಿಯಾದ ಉಪನ್ಯಾಸಕ

    ಉದ್ಯೋಗವಿಲ್ಲದೇ ದಿನಗೂಲಿ ಕುರಿಗಾಯಿಯಾದ ಉಪನ್ಯಾಸಕ

    ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಜಿಲ್ಲೆಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ.

    ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ವೀರನಗೌಡ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿ ಕುರಿ ಮೇಯಿಸುತ್ತಿದ್ದಾರೆ. ಎಂಎ, ಬಿಎಡ್ ಪದವೀಧರ ವೀರನಗೌಡ ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.

    ಇಬ್ಬರು ಮಕ್ಕಳಿರುವ, ಕೂಡು ಕುಟುಂಬದ ವೀರನಗೌಡ ಸಿಇಟಿ ಹಾಗೂ ಕೆಸೆಟ್ ಸಹ ಮಾಡಿಕೊಂಡಿದ್ದಾರೆ. ಕಳೆದ ಆರೇಳು ತಿಂಗಳಿಂದ ವೇತನ ಇಲ್ಲದೇ ಆರ್ಥಿಕ ಸಂಕಷ್ಟದಲ್ಲಿರುವ ವೀರನಗೌಡ ಆರ್ಥಿಕ ಸಂಕಷ್ಟ ನಿಭಾಯಿಸಲು ಕಾಡು, ಮೇಡು ಅಲೆದು ಕುರಿ ಕಾಯುತ್ತಿದ್ದಾರೆ. ಹೀಗಾಗಿ ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ಕಡೆ ಗಮನಹರಿಸಬೇಕು ಅಂತ ವೀರನಗೌಡ ಮನವಿ ಮಾಡಿದ್ದಾರೆ.

  • ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲಾಗದೆ ಅತಿಥಿ ಉಪನ್ಯಾಸಕ ಗೋಳಾಟ

    ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲಾಗದೆ ಅತಿಥಿ ಉಪನ್ಯಾಸಕ ಗೋಳಾಟ

    ಕೊಪ್ಪಳ: ಪತ್ನಿಯ ಚಿಕಿತ್ಸಾ ವೆಚ್ಚ ಭರಿಸಲಾಗದೆ ಕಂಗಾಲಾದ ಅತಿಥಿ ಉಪನ್ಯಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ತನ್ನ ನೋವನ್ನ ಹೇಳಿಕೊಂಡಿದ್ದಾರೆ.

    ಡಾ.ಮಂಜಣ್ಣ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ್ ರಾವ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿದ್ದಾರೆ. ಇದೀಗ ತನ್ನ ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲು ಸಹಾಯ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಬಳಿ ಸಾಮಾಜಿಕ ಜಾಲತಾಣದ ಮೂಲಕ ಬೇಡಿಕೊಂಡಿದ್ದಾರೆ.

    ಮಂಜಣ್ಣ ಅವರ ಪತ್ನಿ ಕಿಡ್ನಿ ಹಾಗೂ ಶ್ವಾಸಕೋಶ ವೈಫಲ್ಯದಿಂದ ಬಳಲುತ್ತಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ಬೇಕಾಗಿದೆ. ಆದರೆ ಆಕೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಕೈಚೆಲ್ಲಿ ಕುಳಿತಿದ್ದಾರೆ. ಅದಕ್ಕಾಗಿ ಸಾಮಾಜಿಕ ಜಾಲತಾಣದ ಮೂಲಕ ಸಚಿವರಲ್ಲಿ ಬೇಡಿಕೊಂಡಿದ್ದು, ಯಾರಾದರೂ ಸಹಾಯ ಮಾಡಿ ಎಂದು ಕೇಳಿಕೊಂಡಿದ್ದಾರೆ.

  • ಲೈಂಗಿಕವಾಗಿ ಬಳಸಿಕೊಂಡು ವಿದ್ಯಾರ್ಥಿನಿಗೆ ಉಪನ್ಯಾಸಕ ವಂಚನೆ!

    ಲೈಂಗಿಕವಾಗಿ ಬಳಸಿಕೊಂಡು ವಿದ್ಯಾರ್ಥಿನಿಗೆ ಉಪನ್ಯಾಸಕ ವಂಚನೆ!

    ಕೊಪ್ಪಳ: ಕಾಲೇಜೊಂದರ ಅತಿಥಿ ಉಪನ್ಯಾಸಕನೊಬ್ಬ ಪ್ರೀತಿಸುವ ನಾಟಕವಾಡಿ ವಿದ್ಯಾರ್ಥಿನಿಗೆ ವಂಚಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಯಲಬುರ್ಗಾ ಮೂಲದ ಬಾಳಪ್ಪ ಹಡಪದ ವಂಚಿಸಿದ ಉಪನ್ಯಾಸಕನಾಗಿದ್ದು, ಹೊನ್ನತೆಮ್ಮ (20) ಮೋಸ ಹೋದ ವಿದ್ಯಾರ್ಥಿನಿ. ಕೊಪ್ಪಳ ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕನಾಗಿರೋ ಬಾಳಪ್ಪ ಕಳೆದ ಮೂರು ವರ್ಷದಿಂದ ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

    ಇದನ್ನೂ ಓದಿ: ಮುಖ್ಯಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ- ಸಹಶಿಕ್ಷಕಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನ

    ಆದ್ರೆ ಇದೀಗ ಬಾಳಪ್ಪ ಬೇರೊಂದು ಮದುವೆಯಾಗಿದ್ದಾನೆ. ಹೀಗಾಗಿ ಇದೀಗ ವಿದ್ಯಾರ್ಥಿನಿ ಆತ ತನ್ನನ್ನು ಪಿಯುಸಿಯಲ್ಲಿದ್ದಾಗಿನಿಂದ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಅಂತ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.

     

     

    ಸದ್ಯ ಮೋಸ ಮಾಡಿದ ಅತಿಥಿ ಉಪನ್ಯಾಸಕನ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.