Tag: ಅತ್ಯಾಚಾರ

  • ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಮೈಸೂರು ದಸರೆಗೆ ಬಲೂನ್‌ ಮಾರಲು ಬಂದಿದ್ದ ಬಾಲಕಿಯ ಶವ ಪತ್ತೆ – ರೇಪ್‌ & ಮರ್ಡರ್‌ ಶಂಕೆ

    ಮೈಸೂರು: ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ (Mysuru Dasara) ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ. ಬಾಲಕಿಯ ದೇಹದ ಮೇಲೆ ಬಟ್ಟೆ ಇಲ್ಲದೆ ಮೃತದೇಹ ಪತ್ತೆಯಾದ ಕಾರಣ ಅತ್ಯಾಚಾರ ಎಸಗಿ ಕೊಲೆ (Rape and Murder) ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

    ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ (Kalaburagi) ಕಡೆಯಿಂದ ಮೈಸೂರಿಗೆ ಹಕ್ಕಿಪಿಕ್ಕಿ ಜನಾಂಗದ 50 ಕ್ಕೂ ಹೆಚ್ಚು ಕುಟುಂಬ ಬಂದಿವೆ. ಇವರು ದೊಡ್ಡಕೆರೆ ಮೈದಾನದ ಸುತ್ತಲಿನ ರಸ್ತೆಯಲ್ಲಿ ನೆಲೆಸಿದ್ದರು. ಬುಧವಾರ ಚಾಮುಂಡೇಶ್ವರಿ ದೇವಾಲಯದ ತೆಪ್ಪೋತ್ಸವ ಮುಗಿಸಿ, ಗುರುವಾರ ಬೇರೆ ಕಡೆ ತೆರಳಲು  ಸಿದ್ಧತೆ ನಡೆಸಿದ್ದರು.

     

    ರಾತ್ರಿ ವ್ಯಾಪಾರ ಮುಗಿಸಿ ಬಂದ ಬಾಲಕಿ ತಂದೆ, ತಾಯಿಯೊಂದಿಗೆ ಮಲಗಿದ್ದಳು. ಮುಂಜಾನೆ ಮಳೆ ಬಂದು ಎಲ್ಲರೂ ಎದ್ದಾಗ ಬಾಲಕಿ ಸ್ಥಳದಿಂದ ನಾಪತ್ತೆಯಾಗಿದ್ದಳು. ಹುಡುಕಾಡಿದಾಗ ಟೆಂಟ್‌ನಿಂದ 50 ಮೀ ದೂರದಲ್ಲಿರುವ ಮಣ್ಣಿನ ರಾಶಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಇದನ್ನೂ ಓದಿ:  ರಮ್ಯಾಗೆ ಅವಹೇಳನ| ದರ್ಶನ್‌ ಅಭಿಮಾನಿಗಳ ವಿರುದ್ಧ 380 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

    ಕೇವಲ ಎರಡೇ ದಿನಗಳ ಬಾಲಕಿ ಶವ ಪತ್ತೆಯಾದ ಜಾಗದ ಬಳಿ ರೌಡಿಶೀಟರ್‌ನ ಸಹರ್ವತಿಯ ಕೊಲೆ ನಡೆದಿತ್ತು. ಈಗ ಅದೇ ಜಾಗದ ಸಮೀಪ ಬಾಲಕಿಯ ಮೃತದೇಹ ಸಿಕ್ಕಿದೆ. ವ್ಯಾಪಾರಕ್ಕೆ ಆಗಮಿಸಿದ್ಧ 50 ಹಕ್ಕಿಪಿಕ್ಕಿ ಕುಟುಂಬಸ್ಥರನ್ನು ಪೊಲೀಸರು ಈಗ ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಆಗಮಿಸಿದ್ದು, ಪೊಲೀಸರು ಸಿಸಿಟಿವಿ ಪರಿಶೀಲನೆ ಮಾಡುತ್ತಿದ್ದಾರೆ.

  • ಬಾಲಕಿಯ ರೇಪ್‌ ಮಾಡಿ ಕೊಲೆ – ಕಾಮುಕನಿಗೆ ಗಲ್ಲು ಶಿಕ್ಷೆ

    ಬಾಲಕಿಯ ರೇಪ್‌ ಮಾಡಿ ಕೊಲೆ – ಕಾಮುಕನಿಗೆ ಗಲ್ಲು ಶಿಕ್ಷೆ

    ಬೆಳಗಾವಿ: 8 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ (Rape and Murder) ಮಾಡಿದ್ದ ಆರೋಪಿಗೆ ಗಲ್ಲು ಶಿಕ್ಷೆ (Death Penalty)ಪ್ರಕಟ ಮಾಡಿ ಬೆಳಗಾವಿ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ನ್ಯಾಯಾಲಯ (POCSO Court) ಆದೇಶಿಸಿದೆ.

    ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ರಾವಸಾಹೇಬ ಮಿರ್ಜಿಗೆ ಗಲ್ಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. 2019 ಸೆಪ್ಟೆಂಬರ್ 10 ರಂದು ಬೆಳಗಾವಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಚಾಕಲೇಟ್ ಆಮಿಷ ತೋರಿಸಿ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆಗೈದು ಬಾವಿಗೆ ಎಸೆದಿದ್ದ. ಇದನ್ನೂ ಓದಿ:  ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಮಗು ಸಾವು

    ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿ ನ್ಯಾಯಾಧೀಶರಾದ ಸಿ.ಎಮ್ ಪುಷ್ಪಲತಾ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

  • 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ನಿಪ್ಪಾಣಿ ವ್ಯಕ್ತಿಗೆ 30 ವರ್ಷ ಜೈಲು ಶಿಕ್ಷೆ

    14 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ನಿಪ್ಪಾಣಿ ವ್ಯಕ್ತಿಗೆ 30 ವರ್ಷ ಜೈಲು ಶಿಕ್ಷೆ

    – 10,000 ರೂ. ದಂಡ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡಲು ಆದೇಶ

    ಚಿಕ್ಕೋಡಿ: ನಿಪ್ಪಾಣಿ (Nippani) ತಾಲೂಕಿನ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಅಪರಾಧಿ ವಿರುದ್ಧ ಬೆಳಗಾವಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ (POCSO Act) ಪ್ರಕರಣ ದಾಖಲಿಸಿದ್ದು, ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.

    ಆಕಾಶ್ ಅಲಿಯಾಸ್ ಅಕ್ಷಯ್ ಮಹಾದೇವ್ಮ ಸಾಳುಂಕೆ  ಶಿಕ್ಷೆಗೊಳಗಾದ ಅಪರಾಧಿ. ಈತ ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿಯ ಬುದ್ಧನಗರದಲ್ಲಿ ವಾಸಿಸುತ್ತಿದ್ದ. 2019ರ ಆಗಸ್ಟ್ 18ರಂದು ನಿಪ್ಪಾಣಿಯಲ್ಲಿ ಆಕಾಶ್ ಸಾಳುಂಕೆ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ಸಂಬಂಧ, ನಿಪ್ಪಾಣಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 55/2019ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 376 ಮತ್ತು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ

    ಸಾಕ್ಷಿಗಳ ಹೇಳಿಕೆಗಳು ಮತ್ತು ಸಂಬಂಧಿತ ಕಾಂಕ್ರೀಟ್ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ, ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ 2025ರ ಸೆಪ್ಟೆಂಬರ್ 4ರಂದು ತೀರ್ಪು ನೀಡಿದರು. ಅಪರಾಧಿ ವಿರುದ್ಧ ಐಪಿಸಿ ಸೆಕ್ಷನ್ 376 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, 30 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದರು. ಇದನ್ನೂ ಓದಿ: ಮಂಗಳೂರು | ಬೈಕಂಪಾಡಿಯಲ್ಲಿ ಅಗ್ನಿ ಅವಘಡ – ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ

  • ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    ಅಪ್ರಾಪ್ತೆ ಮೇಲೆ 2 ಮಕ್ಕಳ ತಂದೆಯಿಂದ ನಿರಂತರ ಅತ್ಯಾಚಾರ – ಹೆರಿಗೆಯಾದ ಅರ್ಧ ಗಂಟೆಯಲ್ಲೇ ಮಗು ಸಾವು

    – ಹಣ್ಣು ಕೊಡುವುದಾಗಿ ಕರೆದೊಯ್ದು ಕೃತ್ಯ, ಆರೋಪಿ ಅರೆಸ್ಟ್

    ಲಕ್ನೋ: 11 ವರ್ಷದ ಬಾಲಕಿ ಮೇಲೆ 2 ಮಕ್ಕಳ ತಂದೆ ನಿರಂತರ ಅತ್ಯಾಚಾರವೆಸಗಿದ್ದು, ಹೆರಿಗೆಯಾದ ಅರ್ಧ ಗಂಟೆಯಲ್ಲಿ ನವಜಾತ ಶಿಶು (Infant) ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ (Bareilly) ನಡೆದಿದೆ.

    ಆರೋಪಿ ರಶೀದ್ (31) ಅಪ್ರಾಪ್ತೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಆರರಿಂದ ಏಳು ತಿಂಗಳ ಹಿಂದೆ ರಶೀದ್ ಬಾಲಕಿಯನ್ನು ತನ್ನ ಮನೆಗೆ ಹಣ್ಣು ಕೊಡಿಸುವುದಾಗಿ ಕರೆದೊಯ್ದಿದ್ದ. ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಆಕೆಯ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೇ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಅವಳನ್ನು ಹಲವು ಬಾರಿ ಬ್ಲ್ಯಾಕ್‌ಮೇಲ್ ಮಾಡಲು ವೀಡಿಯೋ ಕೂಡ ಮಾಡಿದ್ದಾನೆ ಎಂದು ಬಾಲಕಿಯ ಅಣ್ಣ ಹೇಳಿದ್ದಾನೆ. ಇದನ್ನೂ ಓದಿ: ಬಿಡಿಎ ಫ್ಲಾಟ್ / ವಿಲ್ಲಾ ಖರೀದಿಸಿ ನೋಂದಣಿಗಾಗಿ ಕಾಯುತ್ತಿರುವ ಹಂಚಿಕೆದಾರರಿಗೆ ಸುವರ್ಣಾವಕಾಶ

    ಗುರುವಾರ ಬಾಲಕಿ ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪರಿಣಾಮ ಆಕೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್ ಪರೀಕ್ಷೆಗೆ ಒಳಪಡಿಸಲಾಯಿತು. ಈ ಪರೀಕ್ಷೆಯಲ್ಲಿ ಆಕೆ ಏಳು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಬಳಿಕ ಆಕೆಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಬಾಲಕಿ ಅದೇ ದಿನ ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳಲ್ಲೇ ಹೆರಿಗೆಯಾಗಿದ್ದು, ಅರ್ಧ ಗಂಟೆಯ ಬಳಿಕ ಮಗು ಮೃತಪಟ್ಟಿದೆ. ಇದನ್ನೂ ಓದಿ: ಚಾಮರಾಜನಗರ | ಲಾರಿ, ಕಾರು ಮೊಪೆಡ್ ನಡುವೆ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

    ಘಟನೆ ಸಂಬಂಧ ಎರಡು ಮಕ್ಕಳ ತಂದೆ ರಶೀದ್ ವಿರುದ್ಧ ದೂರು ದಾಖಲಾಗಿದ್ದು, ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ. ನವಾಬ್‌ಗಂಜ್ ಠಾಣೆಯ ಅಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ಶುಕ್ರವಾರ ರಶೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಅಲ್ಲದೇ ಆರೋಪಿಯೊಂದಿಗೆ ಹೊಂದಾಣಿಕೆಯಾಗಲು ಮಗುವಿನಿಂದ ಡಿಎನ್‌ಎ ಮಾದರಿಯನ್ನು ತೆಗೆದುಕೊಳ್ಳಲಾಗಿದೆ ಎಂದು ಅರುಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಕ್ರಿಕೆಟ್‌ ಪಂದ್ಯ ನಡೆಯುತ್ತಿದ್ದಾಗ ಪಾಕ್‌ ಸ್ಟೇಡಿಯಂನಲ್ಲಿ ಸ್ಫೋಟ – ಓರ್ವ ಸಾವು, ಹಲವರಿಗೆ ಗಾಯ

  • ಲೈಬ್ರರಿಯ ಕ್ಲರ್ಕ್‌ ಆದ ಪ್ರಜ್ವಲ್‌ ರೇವಣ್ಣ – ದಿನಕ್ಕೆ 522 ರೂ. ಸಂಬಳ

    ಲೈಬ್ರರಿಯ ಕ್ಲರ್ಕ್‌ ಆದ ಪ್ರಜ್ವಲ್‌ ರೇವಣ್ಣ – ದಿನಕ್ಕೆ 522 ರೂ. ಸಂಬಳ

    ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ (Rape Case) ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪರಪ್ಪನ ಅಗ್ರಹಾರದಲ್ಲಿ (Parappana Agrhara) ಸಾಮಾನ್ಯ ಕೈದಿಗಳಂತೆ ತಮ್ಮ ತಪ್ಪಿಗೆ ಶಿಕ್ಷೆಯನ್ನ ಅನುಭವಿಸುತ್ತಿದ್ದಾರೆ.

    ಜೈಲಾಧಿಕಾರಿಗಳು ಪ್ರಜ್ವಲ್ ರೇವಣ್ಣರನ್ನು ಲೈಬ್ರರಿಯ ಕ್ಲರ್ಕ್ (Library Clerk) ಆಗಿ ನೇಮಿಸಿದ್ದು, ಪುಸ್ತಕಗಳನ್ನು ಕೊಡುವುದು ಹಾಗೂ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ. ಇದನ್ನೂ ಓದಿ: ಗಂಡನನ್ನು ಹೊಡೆದು ಕೊಲ್ಲುವಾಗ ಎದುರಲ್ಲೇ ಇದ್ದ ಸೋನಮ್ ಹನಿಮೂನ್‌ ಕೊಲೆ ಕೇಸ್‌ ಚಾರ್ಜ್‌ಶೀಟ್‌ನಲ್ಲೇನಿದೆ?

     

    ಸದ್ಯ ಒಂದು ದಿನದ ಮಟ್ಟಿಗೆ ಪ್ರಜ್ವಲ್ ಕೆಲಸ ಮಾಡಿದ್ದು, ದಿನಗೂಲಿಯಾಗಿ ದಿನಕ್ಕೆ 522 ರೂ. ಗಳನ್ನ ನೀಡಲಾಗುತ್ತದೆ.  ಕೆಲಸಕ್ಕೆ ಹಾಜರಾಗದಿದ್ದರೆ ಸಂಬಳ ನೀಡಲಾಗುವುದಿಲ್ಲ.  ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಇಬ್ಬರು ಯುವಕರ ಬಂಧನ

    ಟ್ರಯಲ್ ಕೋರ್ಟ್‌ಗೆ ಆಗಾಗ ಬರಬೇಕಾಗಿರುವುದರಿಂದ ಹಾಗೂ ವಕೀಲರ ಜೊತೆ ಇತರೇ ಕೇಸ್‌ಗಳ ಸಂಬಂಧ ಚರ್ಚೆ ಮಾಡಬೇಕಾಗಿರುವ ಕಾರಣ ಪ್ರಜ್ವಲ್‌ ರೇವಣ್ಣ ಅವರನ್ನು ಪೂರ್ತಿ ಕೆಲಸಕ್ಕೆ ನಿಯೋಜಿಸಿಲ್ಲ.

  • ಅಪ್ರಾಪ್ತನಿಂದ ರೇಪ್‌- 2 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

    ಅಪ್ರಾಪ್ತನಿಂದ ರೇಪ್‌- 2 ತಿಂಗಳ ಗರ್ಭಿಣಿಯಾದ ಅಪ್ರಾಪ್ತೆ

    ಬಾಗಲಕೋಟೆ: ಅಪ್ರಾಪ್ತೆಯ (Minor) ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರ (Rape) ಎಸಗಿದ ಘಟನೆ ಇಳಕಲ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಬಾಲಕಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದು (Pregnant) ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

    ಇಬ್ಬರು ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ಓದುತ್ತಿದ್ದರು. ಅಪ್ರಾಪ್ತೆ 7ನೇ ತರಗತಿಯಲ್ಲಿ ಬಾಲಕ 8ನೇ ತರಗತಿಯಲ್ಲಿದ್ದಾಗ ಅತ್ಯಾಚಾರ ಎಸಗಿದ್ದಾನೆ.

    ಸದ್ಯ ಅಪ್ರಾಪ್ತನಿಗೆ 17 ವರ್ಷವಾಗಿದ್ದು ಅಪ್ರಾಪ್ತೆಗೆ 16 ವರ್ಷವಾಗಿದೆ. ಅಪ್ರಾಪ್ತೆಯ ತಂದೆ ನೀಡಿದ ದೂರಿನ್ವಯ ಅಪ್ರಾಪ್ತನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

  • 5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

    5ರ ಬಾಲೆಯ ಮೇಲೆ ರೇಪ್‌ – ಬೆಳಗಾವಿಯಲ್ಲಿ ಬಾಗಲಕೋಟೆ ಮೂಲದ ವ್ಯಕ್ತಿ ಅರೆಸ್ಟ್‌

    ಬೆಳಗಾವಿ: ಎರಡು ವರ್ಷದ ಹಿಂದೆ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ವ್ಯಕ್ತಿಯನ್ನು ಬಂಧಿಸಲಾಗಿದೆ.

    ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಮಂಗಳವಾರ ರಾತ್ರಿ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್‌ನನ್ನು ಬಂಧಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ (Bheemashankar Guled) ತಿಳಿಸಿದ್ದಾರೆ.

    ಎಸ್‌ಪಿ ಹೇಳಿದ್ದೇನು?
    ಮಂಗಳವಾರ ಸಂಜೆ ಪುನೀತ್ ಕೆರೆಹಳ್ಳಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಮಾತಾಡಿದ ಆಡಿಯೋ ಮತ್ತು ವಿಡಿಯೋ ತುಣುಕು ಇತ್ತು. ಇದರಲ್ಲಿ ಬಾಲಕಿ ಮೇಲೆ ಓರ್ವ ವ್ಯಕ್ತಿ ಮಲಗುವ ರೀತಿಯಲ್ಲಿತ್ತು. ಇದನ್ನೂ ಓದಿ: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಕೊಪ್ಪಳ ಮೂಲದ ಓರ್ವ ವಶಕ್ಕೆ

     

    ಈ ವಿಡಿಯೋ ಪ್ರಕಟವಾದ ನಂತರ ನಮ್ಮ ಸೈಬರ್‌ ಕ್ರೈಂ ಪೊಲೀಸರಿಗೆ (Cyber Crime Police) ಮಾಹಿತಿ ನೀಡಲಾಗಿತ್ತು. ವಿಡಿಯೋದಲ್ಲಿನ ವಿಳಾಸ ಆಧರಿಸಿ ನಮ್ಮ ಪೊಲೀಸರು ತನಿಖೆ ಶುರು ಮಾಡಿದ್ದರು. ಕೂಡಲೇ ನಮ್ಮ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.  ಇದನ್ನೂ ಓದಿ: ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?

    ಈ ಘಟನೆ 2023 ಅಕ್ಟೋಬರ್ 5 ರಂದು ನಡೆದಿದ್ದು ಮಸೀದಿ ಪಕ್ಕದ ಮನೆಯ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆರೋಪಿ ಘಟನೆ ನಡೆದ ಹಿಂದಿನ ದಿನ ಬಾಗಲಕೋಟೆಯ ಮಹಾಲಿಂಗಪುರದಿಂದ ಬಂದಿದ್ದ. ಚಿಕ್ಕಮ್ಮನ ಮನೆಗೆ ಬಂದಾಗ ಹೀನಾಯ ಕೃತ್ಯ ಎಸಗಿದ್ದ.

     
    ಈ ವಿಚಾರ ಗೊತ್ತಾದಾಗ ಅಲ್ಲಿರುವ ಸ್ಥಳೀಯರು ಬಾಲಕಿ ತಂದೆ ಕರೆದು ಮಾತಾಡಿದ್ದರು. ಆ ದಿನ ದೂರು ಕೊಡುವುದು ಬೇಡಾ ಅಂತಾ ತೀರ್ಮಾನಿಸಿ ಬಿಟ್ಟಿದ್ದರು. ಇದಾದ ಬಳಿಕ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಪೋಷಕರ ಜೊತೆಗೆ ಮಾತಾಡಲಾಗಿತ್ತು.

    ತಂದೆ ತಾಯಿ ದೂರು ನೀಡಲು ಒಪ್ಪದ ಕಾರಣ ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕದಿಂದ ದೂರು ಪಡೆದು ರಾತ್ರಿಯೇ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್ ಬಂಧಿಸಿದ್ದೇವೆ. ಆರೋಪಿ ಮೌಲ್ವಿ ಅಲ್ಲ. ಆತ ವೆಲ್ಡಿಂಗ್‌ ಕೆಲಸ ಮಾಡಿಕೊಂಡಿದ್ದ. ಕೆಲಸ ಇಲ್ಲದೇ ಇದ್ದಾಗ ಮಸೀದಿಗಳಿಗೆ ಹೋಗಿ ಭಾಷಣ ಮಾಡುತ್ತಿದ್ದ ಎಂದು ತಿಳಿಸಿದರು.

  • ಪ್ರಜ್ವಲ್‌ ರೇವಣ್ಣ ರೇಪ್‌ ಕೇಸ್‌ – ತಾಂತ್ರಿಕ ಸಾಕ್ಷ್ಯ ಕೇಳಿದ ಕೋರ್ಟ್‌, ಆ.1ಕ್ಕೆ ತೀರ್ಪು

    ಪ್ರಜ್ವಲ್‌ ರೇವಣ್ಣ ರೇಪ್‌ ಕೇಸ್‌ – ತಾಂತ್ರಿಕ ಸಾಕ್ಷ್ಯ ಕೇಳಿದ ಕೋರ್ಟ್‌, ಆ.1ಕ್ಕೆ ತೀರ್ಪು

    ಬೆಂಗಳೂರು:ಕೆ.ಆರ್.ನಗರದಲ್ಲಿ (KR Nagara) ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ (Rape Case) ಸಂಬಂಧಿಸಿದಂತೆ ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ತೀರ್ಪು ಪ್ರಕಟಿಸಲಿದೆ.

    ಇಂದು ನ್ಯಾ. ಗಜಾನನ ಭಟ್‌ ಅವರು ಸರ್ಕಾರಿ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ (Prajwal Revanna) ಪರ ವಕೀಲ ಅರುಣ್ ಜಿ ಬಳಿ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆಗಳನ್ನು ಕೇಳಿದರು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿದರು. ಇದನ್ನೂ ಓದಿ: ಹಣ ಹೊರಗಡೆ ಸಿಕ್ಕಿದ್ರೆ ಜಡ್ಜ್‌ ದುರ್ವತನೆ ಹೇಗೆ ಆಗುತ್ತೆ: ಸಿಬಲ್‌ ವಾದ

    ಸರ್ಕಾರಿ ಪರ ವಕೀಲರು ಹೊಳೆನರಸೀಪುರದ ಕನ್ನಿಕಡದ ಮನೆಯ ಗೂಗಲ್ ಮ್ಯಾಪ್ ನೀಡಲಾಗಿದೆ, ಗ್ಯೂಗಲ್ ಮ್ಯಾಪ್‌ನಲ್ಲಿ ಮನೆ, ಕೆಲಸದವರ ಶೆಡ್ ಎಲ್ಲವನ್ನೂ ನೀಡಲಾಗಿದೆ. ಗೂಗಲ್ ಮ್ಯಾಪ್ ಆಧರಿಸಿ ಮಹಜರು ಪ್ರಕ್ರಿಯೆ ನಡೆದಿದೆ ಎಂದು ತಿಳಿಸಿದರು. ಅಂತಿಮವಾಗಿ ಕೋರ್ಟ್‌ ಇಂದು ಮಧ್ಯಾಹ್ನದ ಒಳಗೆ ಸ್ಪಷ್ಟನೆ ನೀಡುವಂತೆ ಸರ್ಕಾರಿ ಪರ ವಕೀಲರಿಗೆ ಸೂಚಿಸಿತು.

    ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಸೆರೆ ಮಾಡಿದ ಆರೋಪ ಪ್ರಜ್ವಲ್‌ ರೇವಣ್ಣ ಮೇಲಿದೆ. ಇಂದಿನ ಕೋರ್ಟ್‌ ಕಲಾಪಕ್ಕೆ ಪ್ರಜ್ವಲ್‌ ರೇವಣ್ಣ ಹಾಜರಾಗಿದ್ದರು.

  • Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    Uttar Pradesh | ಸ್ಕೂಲ್ ವ್ಯಾನ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ರೇಪ್ – ಡ್ರೈವರ್ ಬಂಧನ

    ಲಕ್ನೋ: ಸ್ಕೂಲ್ ವ್ಯಾನ್‌ನಲ್ಲಿ (School Van) 4 ವರ್ಷದ ಬಾಲಕಿ ಮೇಲೆ ಚಾಲಕ ಅತ್ಯಾಚಾರವೆಸಗಿದ ಘಟನೆ ಉತ್ತರಪ್ರದೇಶದಲ್ಲಿ (Uttar Pradesh) ನಡೆದಿದ್ದು, ಆರೋಪಿಯನ್ನು ಯುಪಿ ಪೊಲೀಸರು ಬಂಧಿಸಿದ್ದಾರೆ.

    ಮೊಹಮ್ಮದ್ ಆರಿಫ್ ಬಂಧಿತ ಶಾಲಾ ವಾಹನ ಚಾಲಕ. ಈ ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಪೂರ್ವ ಪೊಲೀಸ್ ಉಪ ಆಯುಕ್ತ (DCP) ಶಶಾಂಕ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಟೇಕಾಫ್ ಆಗಿ 16 ನಿಮಿಷಕ್ಕೆ ಲ್ಯಾಂಡ್ ಆಯ್ತು ಏರ್ ಇಂಡಿಯಾ ವಿಮಾನ

    ಜುಲೈ 17 ರಂದು ಬಾಲಕಿಯ ತಾಯಿ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನ್ನ 4 ವರ್ಷದ ಮಗಳು ಶಾಲೆಯಲ್ಲಿ ಓದುತ್ತಿದ್ದು, ಸ್ಕೂಲ್ ವ್ಯಾನ್ ಚಾಲಕ ಆರಿಫ್ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಾಯಿ ಆರೋಪಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಜ್ಯುವೆಲರಿ ಶಾಪ್ ದರೋಡೆ ಕೇಸ್ – 30 ರೂ. ಫೋನ್ ಪೇ ಮಾಡಿ ಸಿಕ್ಕಿಬಿದ್ದ ಖದೀಮರು

    ನನ್ನ ಮಗಳು ಖಾಸಗಿ ಭಾಗದಲ್ಲಿ ನೋವಿನ ಬಗ್ಗೆ ನನಗೆ ತಿಳಿಸಿದ್ದಳು. ಅವಳನ್ನು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಖಾಸಗಿ ಭಾಗದಲ್ಲಿ ಗಾಯಗಳಾಗಿರುವುದು ಕಂಡುಬಂದಿದೆ. ಈ ಕುರಿತು ನಾನು ಪ್ರಾಂಶುಪಾಲರಿಗೆ ದೂರು ನೀಡಿದ್ದೇನೆ. ಪ್ರಾಂಶುಪಾಲರು ಅದರ ಬಗ್ಗೆ ಮಾತನಾಡುವುದಾಗಿ ಹೇಳಿದರು. ಅಲ್ಲದೇ ದೂರು ನೀಡುವುದರಿಂದ ಮಗುವಿನ ಭವಿಷ್ಯ ಮತ್ತು ಶಾಲೆಯ ಖ್ಯಾತಿ ಹಾಳಾಗುತ್ತದೆ ಎಂದು ಹೇಳಿದ್ದರು. ಅದಾದ ಬಳಿಕವೂ ಎರಡು ದಿನ ಕಾದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ನಂತರ ಮತ್ತೆ ಚಾಲಕ ಕರೆ ಮಾಡಿ ಮಗಳನ್ನು ಶಾಲಾ ವಾಹನದಲ್ಲಿ ಕಳುಹಿಸುವಂತೆ ಕೇಳಿದಾಗ ಅವನ ಮೇಲೆ ಕೋಪಗೊಂಡೆ. ಈ ವೇಳೆ ಚಾಲಕ ನಮ್ಮ ಮೇಲೆ ದೌರ್ಜನ್ಯ ಎಸಗಿ ಅಪಹರಣದ ಬೆದರಿಕೆ ಹಾಕಿದ್ದಾನೆ. ಇಷ್ಟದರೂ ಶಾಲೆಯ ಆಡಳಿತ ಮಂಡಳಿ ಆತನ ವಿರುದ್ಧ ದೂರು ನೀಡದಂತೆ ಮನವಿ ಮಾಡಿದೆ. ಈ ಬಗ್ಗೆ ನನ್ನ ಬಳಿ ಎಲ್ಲಾ ಸಾಕ್ಷಿಗಳಿವೆ ಎಂದು ಬಾಲಕಿಯ ತಾಯಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಆರ್‌ಟಿ ಅರಣ್ಯದಲ್ಲಿ ಪ್ರವಾಸಿಗರಿಗೆ ತಾಯಿ ಚಿರತೆ, ಎರಡು ಮರಿಗಳ ದರ್ಶನ

    ತಾಯಿ ನೀಡಿದ ದೂರಿನ ಆಧಾರದ ಮೇಲೆ ಚಾಲಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುವುದಾಗಿ ಡಿಸಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಾಟ್ನಾ ಆಸ್ಪತ್ರೆಯಲ್ಲಿ ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್‌ ಹತ್ಯೆ – ಐವರು ಆರೋಪಿಗಳು ಕೋಲ್ಕತ್ತಾದಲ್ಲಿ ಅರೆಸ್ಟ್‌

  • ಮಾತನಾಡುವ ನೆಪದಲ್ಲಿ ಪಕ್ಕದ ಮನೆಯವನಿಂದ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ

    ಮಾತನಾಡುವ ನೆಪದಲ್ಲಿ ಪಕ್ಕದ ಮನೆಯವನಿಂದ ಬಾಲಕಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ

    ಬೆಂಗಳೂರು: ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಪಕ್ಕದ ಮನೆಯವನೇ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಮಾದನಾಯಕನಹಳ್ಳಿ (Madanayakanahalli) ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ.

    ದೀಪು (26) ಬಂಧಿತ ಆರೋಪಿ. ದೀಪು ಬಾಲಕಿಯ ಮನೆಯ ಪಕ್ಕದಲ್ಲೇ ವಾಸಗಿದ್ದು, ರಾತ್ರಿ ವೇಳೆ ಬೆಂಗಳೂರಿನಲ್ಲಿ ಆಟೋ ಓಡಿಸಿ ಬೆಳಿಗ್ಗೆ ಮನೆಯಲ್ಲೆ ಇರುತ್ತಿದ್ದ. ಬಾಲಕಿ ಪಕ್ಕದ ಮನೆಯವಳಾಗಿದ್ದರಿಂದ ಪರಿಚಯ ಮಾಡಿಕೊಂಡಿದ್ದ ಆರೋಪಿ 4 ತಿಂಗಳ ಹಿಂದೆ ಮಾತನಾಡುವ ನೆಪದಲ್ಲಿ ಮನೆಗೆ ಕರೆಸಿಕೊಂಡು ಕೃತ್ಯವೆಸಗಿದ್ದಾನೆ. ಅಲ್ಲದೇ 3-4 ಬಾರಿ ಆತನ ಮನೆಗೆ ಕರೆಸಿಕೊಂಡು ಬಾಲಕಿಯ ವಿರೋಧದ ನಡುವೆಯೂ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನೂ ಓದಿ: ರೌಡಿಶೀಟರ್ ಶಿವಪ್ರಕಾಶ್ ಕೊಲೆ ಕೇಸ್‌ – ಮಾಜಿ ಸಚಿವ ಬೈರತಿ ಬಸವರಾಜ್ A5 ಆರೋಪಿ

    ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ಆಕೆಯ ತಾಯಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಬಾಲಕಿಯ ತಾಯಿ, ಆರೋಪಿ ದೀಪು ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಮಾದನಾಯಕನಹಳ್ಳಿ ಪೊಲೀಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಕಾರು ಡಿಕ್ಕಿಯಾಗಿ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಸಾವು – NRI ಅರೆಸ್ಟ್, ಕಾರು ಸೀಜ್