Tag: ಅತ್ಯಾಚಾರ ಆರೋಪ

  • ಅತ್ಯಾಚಾರ ಆರೋಪ ಪ್ರಕರಣ – ರಮೇಶ್ ಜಾರಕಿಹೊಳಿಗಿಲ್ಲ ಮುಕ್ತಿ

    ಅತ್ಯಾಚಾರ ಆರೋಪ ಪ್ರಕರಣ – ರಮೇಶ್ ಜಾರಕಿಹೊಳಿಗಿಲ್ಲ ಮುಕ್ತಿ

    ನವದೆಹಲಿ : ಅತ್ಯಾಚಾರ ಆರೋಪ ಹೊತ್ತಿರುವ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿಗೆ ಕಾನೂನು ಸಂಕಷ್ಟಗಳು ಅಂತ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. ಪ್ರಕರಣ ತನಿಖೆಗೆ ರಚನೆಯಾದ ಎಸ್‍ಐಟಿ ‘ಬಿ – ರಿಪೋರ್ಟ್’ ಸಲ್ಲಿಸಿದ ಬಳಿಕವೂ ಸಂತ್ರಸ್ತೆಯಿಂದ ಕಾನೂನು ಹೋರಾಟ ಮುಂದುವರಿದಿದೆ.

    ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಪ್ರಕರಣದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದೆ. ನ್ಯಾ. ಇಂದಿರಾ ಬ್ಯಾನರ್ಜಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಎಸ್‍ಐಟಿ ರಚನೆಯ ವಿಧಾನದ ಬಗ್ಗೆ ಹೈಕೋರ್ಟ್ ನಿರ್ಧರಿಸಲಿ ಎಂದು ಹೇಳಿದೆ. ಇದನ್ನೂ ಓದಿ: ಯತ್ನಾಳ್ ಸತ್ತಿದ್ದಾರೆ, ಅದಕ್ಕಾಗಿ ಶವಯಾತ್ರೆ ಮಾಡ್ತಿದ್ದೇವೆ: ಮೊಹಮ್ಮದ್ ನಲಪಾಡ್

    SUPREME COURT

    ಇಂದು ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ವಕೀಲರು, ಎಸ್‍ಐಟಿ ರಚನೆ ಸರಿ ಇಲ್ಲ, ತನಿಖಾ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ನಡೆದಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಎಸ್‍ಐಟಿ ಸರ್ಕಾರದ ತನ್ನ ಇಚ್ಛೆನುಸಾರ ರಚನೆ ಮಾಡಿಲ್ಲ, ರಾಜಕೀಯ ಒತ್ತಡ ಹೇರಿ ರಚನೆ ಮಾಡಿಸಲಾಗಿದೆ. ಈ ಎಸ್‍ಟಿಯು ಬಿ-ರಿಪೋರ್ಟ್ ಸಲ್ಲಿಸಿದ್ದು ಈ ವರದಿಯ ಮೇಲೆ ನಮ್ಮಗೆ ನಂಬಿಕೆ ಇಲ್ಲ ಎಂದರು.

    ಹೀಗೆ ಸಿದ್ದವಾಗಿರುವ ವರದಿಯನ್ನು ಸೆಷನ್ಸ್ ನ್ಯಾಯಲಯಕ್ಕೆ ಸಲ್ಲಿಸಲು ಹೈಕೋರ್ಟ್ ಅನುಮತಿ ನೀಡಿದೆ, ಸುಪ್ರೀಂಕೋರ್ಟ್ ಈ ಆದೇಶಕ್ಕೆ ತಡೆ ನೀಡಬೇಕು, ಎಸ್‍ಐಟಿ ರಚನೆ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

    ವಾದ ಆಲಿಸಿದ ಪೀಠ, ಎಸ್‍ಐಟಿ ರಚನೆಯೂ ಸರಿ ಇದಿಯೇ, ಅದು ಪಾರದರ್ಶಕವಾಗಿದಿಯೇ ಎಂದು ಖಚಿತಪಡಿಸಿಕೊಳ್ಳಲು ರಾಜ್ಯ ಹೈಕೋರ್ಟ್ ಗೆ ಸೂಚಿಸಿ ಪ್ರಕರಣವನ್ನು ಇತ್ಯರ್ಥ ಪಡಿಸಿದೆ. ಮಾರ್ಚ್ 9 ರಂದು ಈ ಸಂಬಂಧ ಹೈಕೋರ್ಟ್ ನಲ್ಲಿ ವಿಚಾರಣೆ ಕೂಡ ನಡೆಸಲಿದೆ. ಸುಪ್ರೀಂಕೋರ್ಟ್ ಈ ನಿರ್ದೇಶನದಿಂದ ಎಸ್‍ಐಟಿ ಬಿ – ರಿಪೋರ್ಟ್ ಸಲ್ಲಿಸಿದ್ದರು, ಹೈಕೋರ್ಟ್ ನಲ್ಲಿ ವಿಚಾರಣೆ ಅಂತ್ಯವಾಗುವವರೆಗೂ ವರದಿಯನ್ನು ಸೆಷನ್ಸ್ ನ್ಯಾಯಲಯಕ್ಕೆ ಸಲ್ಲಿಸಲ್ಲಿಸಲು ತಡೆಯಾಜ್ಞೆ ನೀಡದಂತಾಗಿದೆ.

  • ರೇಪ್ ಪ್ರಕರಣಕ್ಕೆ ಕಾಂಗ್ರೆಸ್ ಉಸ್ತುವಾರಿ ಸಚಿವ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದು ಹೀಗೆ

    ರೇಪ್ ಪ್ರಕರಣಕ್ಕೆ ಕಾಂಗ್ರೆಸ್ ಉಸ್ತುವಾರಿ ಸಚಿವ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದು ಹೀಗೆ

    ಬೆಂಗಳೂರು: ಕೇರಳದ ಸೋಲಾರ್ ಹಗರಣ ಹಾಗು ಅತ್ಯಾಚಾರ ಪ್ರಕರಣದ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.

    ನ್ಯಾಯಾಂಗ ತನಿಖಾ ವರದಿಯಲ್ಲಿ ನನ್ನ ವಿರುದ್ಧ ಯಾವುದೇ ಆರೋಪಗಳಿಲ್ಲ. ರಾಜಕೀಯವಾಗಿ ಕಾಂಗ್ರೆಸ್ ನಾಯಕರನ್ನು ಹಣಿಯಲು ಎಲ್‍ಡಿಎಫ್ ಸರ್ಕಾರ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.

    ಪ್ರಕರಣದ ಕೇಂದ್ರ ಬಿಂದು ಸರಿತಾ ನಾಯರ್ 2013ರಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ನನ್ನ ಹೆಸರಿದೆ ಎಂದು ತನಿಖಾ ಸಮಿತಿ ಹೇಳುತ್ತಿದೆ. ಆ ಪತ್ರದಲ್ಲಿ ಹೆಸರಿರುವ ಎಲ್ಲರ ವಿರುದ್ಧ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದ ಸರ್ಕಾರ ಈಗ ಯೂ ಟರ್ನ್ ಹೊಡೆದಿದೆ ಅಂತ ತಿರುಗೇಟು ಕೊಟ್ಟಿದ್ದಾರೆ.

    ನನ್ನ ಇಮೇಜ್‍ಗೆ ಧಕ್ಕೆ ತರಲು ದೂರುದಾರರ ಜೊತೆ ಸೇರಿ ಷಡ್ಯಂತ್ರ ರೂಪಿಸಿದೆ. ಸರಿತಾ ನಾಯರ್ ಕ್ರಿಮಿನಲ್ ಹಿನ್ನಲೆಯವರಾಗಿದ್ದು, ಆಕೆಯ ವಿರುದ್ಧ 34 ವಂಚನೆ ಕೇಸುಗಳು ದಾಖಲಾಗಿದೆ. ಹಲವು ಕೇಸುಗಳಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಇದೆಲ್ಲದರ ಹೊರತಾಗಿ ನನ್ನ ವಿರುದ್ಧ ದೂರು ನೀಡಲು ಆಕೆಗೆ 10 ಕೋಟಿಯ ರೂ. ಆಮಿಷ ನೀಡಲಾಗಿತ್ತು ಎಂಬುದನ್ನು ಸ್ವತಃ ಆಕೆಯೇ ಈ ಹಿಂದೆ ಹೇಳಿದ್ರು ಅಂತ ಹೊಸ ಬಾಂಬ್ ಹಾಕಿದ್ದಾರೆ.

    ಇದನ್ನೂ ಓದಿ: ಕರ್ನಾಟಕ ಉಸ್ತುವಾರಿಯ ‘ಕೈ’ಚಳಕಕ್ಕೆ ಸರಿತಾಗೆ 5 ದಿನ ನಡೆಯೋಕೂ ಸಾಧ್ಯವಾಗಿಲ್ವಂತೆ!

    ಜೊತೆಗೆ ಕೆಲ ಮಾಧ್ಯಮಗಳ ವಿರುದ್ಧ ಎರ್ನಾಕುಲಂನ ಸಿಜೆಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ವೇಣುಗೋಪಾಲ್ ಹೇಳಿದ್ದಾರೆ. 2013ರಲ್ಲಿ ಸೋಲಾರ್ ಪ್ಯಾನಲ್ ಉದ್ಘಾಟನೆಗೆ ಹೋದಾಗ ನನ್ನ ಜೊತೆ ಅನುಚಿತವಾಗಿ ವರ್ತಿಸಿದ್ರು. ರಾತ್ರಿ ಹೊತ್ತು ಫೋನ್ ಮಾಡಿ ಕಾಟ ಕೊಡ್ತಿದ್ರು ಅಂತ ಸರಿತಾ ಆರೋಪಿಸಿದ್ರು.