Tag: ಅದಾ ಶರ್ಮಾ

  • ಸುಶಾಂತ್ ಮನೆಗೆ ನಟಿ ಶಿಫ್ಟ್- ಪಾಸಿಟಿವ್ ವೈಬ್ ಇದೆ ಎಂದ ಅದಾ ಶರ್ಮಾ

    ಸುಶಾಂತ್ ಮನೆಗೆ ನಟಿ ಶಿಫ್ಟ್- ಪಾಸಿಟಿವ್ ವೈಬ್ ಇದೆ ಎಂದ ಅದಾ ಶರ್ಮಾ

    ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ನಿಧನರಾಗಿ 4 ವರ್ಷಗಳು ಕಳೆದಿವೆ. ನಟ ವಾಸಿಸುತಿದ್ದ ಮುಂಬೈ ಅಪಾರ್ಟ್ಮೆಂಟ್ ಬಗ್ಗೆ ಸಾಕಷ್ಟು ನೆಗೆಟಿವ್ ವಿಚಾರಗಳು ಹಬ್ಬಿತ್ತು. ಆದರೆ ಯಾವುದಕ್ಕೂ ಕ್ಯಾರೆ ಎನ್ನದೇ ಸುಶಾಂತ್‌ ಮನೆಯಲ್ಲಿ ಅದಾ ಖರೀದಿಸಿದ್ದರು. ಕೆಲಸದ ನಡುವೆ ಈ ಮನೆಗೆ ಬರಲು ಆಗಿರಲಿಲ್ಲ. ಇದೀಗ ನಟನ ಮನೆಗೆ ಅದಾ ಶರ್ಮಾ (Adah Sharma) ಶಿಫ್ಟ್ ಆಗಿದ್ದಾರೆ. ನಟನ ಮನೆಯಲ್ಲಿ ವಾಸವಾಗಿರುವ ಅನುಭವವನನ್ನು ನಟಿ ಬಿಚ್ಚಿಟ್ಟಿದ್ದಾರೆ.

    ಸುಶಾಂತ್ ಮನೆಯನ್ನು ಖರೀದಿ ಮಾಡುವುದು ಬೇಡ ಎಂದು ಅನೇಕರು ಹೇಳಿದ್ದರಂತೆ. ಯಾರ ಮಾತಿಗೂ ನಟಿ ಕಿವಿ ಕೊಡದೇ ಇತ್ತೀಚೆಗೆ ಶಿಫ್ಟ್ ಆಗಿದ್ದಾರೆ. ಸುಶಾಂತ್ ನಿಧನರಾದ ಈ ಮನೆಯಲ್ಲಿ ಭಯ ಆಗಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಆ ರೀತಿ ಏನು ಆಗಲಿಲ್ಲ. ಈ ಮನೆಯಲ್ಲಿ ಪಾಸಿಟಿವ್ ವೈಬ್ ಅನುಭವ ಆಗಿದೆ ಎಂದು ಖುಷಿಯಿಂದ ಸಂದರ್ಶನದಲ್ಲಿ ನಟಿ ಮಾತನಾಡಿದ್ದಾರೆ.

    ಇನ್ನೂ ಸುಶಾಂತ್ ಮನೆಗೆ ಅದಾ ಶರ್ಮಾ ಹೊಸ ರೂಪ ಕೊಟ್ಟಿದ್ದಾರೆ. ಇದೀಗ ಸ್ಟೈಲ್‌ಗೆ ತಕ್ಕಂತೆ ಮನೆಗೆ ಹೊಸ ವಿನ್ಯಾಸ ಮಾಡಿಸಿದ್ದಾರೆ. ಮನೆಯ ಕೆಳಗಿನ ಫ್ಲೋರ್‌ನಲ್ಲಿ ದೇವಸ್ಥಾನ ಮತ್ತು ಡ್ಯಾನ್ಸ್‌ ರೂಮ್‌ ಸೇರಿದಂತೆ ಹಲವು ಬದಲಾವಣೆಗಳನ್ನು ಅವರ ಅಭಿರುಚಿಗೆ ತಕ್ಕಂತೆ ಮಾಡಿಸಿಕೊಂಡಿದ್ದಾರೆ. ಇದನ್ನೂ ಓದಿ:ನಟಿ ರವೀನಾ ಟಂಡನ್ ಮರ್ಡರ್ ಆಗಿರುತ್ತಿತ್ತು: ಕಂಗನಾ ಶಾಕಿಂಗ್ ಹೇಳಿಕೆ

    2023ರಲ್ಲಿ ನಟಿಸಿದ ‘ದಿ ಕೇರಳ ಸ್ಟೋರಿ’ ಸಿನಿಮಾ ಸಕ್ಸಸ್ ಕಂಡಿದೆ. ಈ ಚಿತ್ರದ ನಂತರ ನಟಿಗೆ ಬೇಡಿಗೆ ಹೆಚ್ಚಾಗಿದೆ. ಮತ್ತಷ್ಟು ಬಾಲಿವುಡ್ ಸಿನಿಮಾ ಆಫರ್‌ಗಳು ಅರಸಿ ಬರುತ್ತಿವೆ. ಅಂದಹಾಗೆ, ನಟಿ ಅದಾ ಅವರು ಕನ್ನಡದ ‘ರಣವಿಕ್ರಮ’ (Ranavikrama) ಸಿನಿಮಾದಲ್ಲಿ ನಟಿಸಿದ್ದಾರೆ. ಪುನೀತ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

  • ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ ನಟಿ ಅದಾ

    ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ ನಟಿ ಅದಾ

    ಬಾಲಿವುಡ್ ನ ಖ್ಯಾತ ನಟ ಸುಶಾಂತ್ ಸಿಂಗ್ (Sushant Singh) ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನೇ ಖರೀದಿಸಿದ್ದಾರೆ ನಟಿ ಅದಾ ಶರ್ಮಾ (Adah Sharma). ಈ ಮೂಲಕ ನೀವು ನನ್ನ ಹೃದಯದಲ್ಲಿ ಇದ್ದೀರಿ ಎನ್ನುವಂತಹ ಸಂದೇಶವನ್ನೂ ಅವರು ಕೊಟ್ಟಿದ್ದಾರೆ.

    ಯುವ ನಟ ಸುಶಾಂತ್ ಸಿಂಗ್ ಮುಂಬೈನ ಮೋಂಟ್ ಬ್ಲ್ಯಾಂಕ್ ಅಪಾರ್ಟ್ ಮೆಂಟ್ ನಲ್ಲಿ ವಾಸವಿದ್ದರು. 2020 ಜೂನ್ 14ರಂದು ಅದೇ ಅಪಾರ್ಟ್ ಮೆಂಟ್ ನ ರೂಮ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲಿಂದ ಆ ಫ್ಲ್ಯಾಟ್ (Flat) ಖಾಲಿಯೇ ಉಳಿದಿತ್ತು. ಸುಶಾಂತ್ ಸಿಂಗ್ ಆತ್ಮ ಅಲ್ಲಿದೆ ಎಂದೂ ಹಬ್ಬಿಸಲಾಗಿತ್ತು.

     

    ಮುಂಬೈನ  ಆ ಫ್ಲ್ಯಾಟ್ ನಾಲ್ಕು ಕೋಣೆಗಳನ್ನು ಹೊಂದಿದ್ದು, ಸಮುದ್ರಕ್ಕೆ ಮುಖ ಮಾಡಿದ ಮನೆಯಾಗಿದೆ. ಒಟ್ಟು 2500 ಸ್ಕ್ವೇರ್ ಫೀಟ್ ವಿಸ್ತೀರ್ಣ ಹೊಂದಿದೆ. ಇಲ್ಲಿಯೇ ಹಲವಾರು ವರ್ಷಗಳಿಂದ ಸುಶಾಂತ್ ಸಿಂಗ್ ವಾಸವಿದ್ದರು. ಸಾವಿನ ನಂತರ ಯಾರೂ ಈ ಮನೆಯಲ್ಲಿ ಉಳಿದುಕೊಳ್ಳಲು ಇಷ್ಟ ಪಟ್ಟಿರಲಿಲ್ಲ.

  • ಅಂದು ‘ದಿ ಕೇರಳ ಸ್ಟೋರಿ’, ಇಂದು ‘ಬಸ್ತರ್’: ವಿವಾದದ ಸುಳಿಯಲ್ಲಿ ಅದಾ ಸಿನಿಮಾ

    ಅಂದು ‘ದಿ ಕೇರಳ ಸ್ಟೋರಿ’, ಇಂದು ‘ಬಸ್ತರ್’: ವಿವಾದದ ಸುಳಿಯಲ್ಲಿ ಅದಾ ಸಿನಿಮಾ

    ದಿ ಕೇರಳ ಸ್ಟೋರಿ ಮೂಲಕ ಸಂಚಲನ ಸೃಷ್ಟಿ ಮಾಡಿದ್ದ ಸುದೀಪ್ತೋ ಸೇನ್ (Sudipto Sen) ಮತ್ತು ಅದಾ ಶರ್ಮಾ (Adah Sharma) ಕಾಂಬಿನೇಷನ್ ಇದೀಗ ಮತ್ತೊಂದು ಸಿನಿಮಾ ಮಾಡಿ ಅದನ್ನು ರಿಲೀಸ್ ಕೂಡ ಮಾಡಿದೆ. ಬಸ್ತರ್ ಹೆಸರಿನ ಸಿನಿಮಾ ಈ ವಾರ ದೇಶದಾದ್ಯಂತ ಬಿಡುಗಡೆ ಆಗಿದ್ದು, ಈ ಸಿನಿಮಾ ಕೂಡ ವಿವಾದಕ್ಕೆ (Controversy) ಕಾರಣವಾಗಿದೆ. ಅಂದು ದಿ ಕೇರಳ ಸ್ಟೋರಿ ಕೂಡ ವಿವಾದ ಸಿಲುಕಿಕೊಂಡಿತ್ತು.

    ಬಸ್ತರ್ (Bastar) ನಕ್ಸಲೈಟ್ ಕುರಿತಾದ ಸಿನಿಮಾವಾಗಿದ್ದು,  ಸುಳ್ಳಿನ ಹಿಂದಿರುವ ಸತ್ಯವನ್ನು ಈ ಸಿನಿಮಾ ಮೂಲಕ ಹೇಳುವುದಾಗಿ ಚಿತ್ರತಂಡ ತಿಳಿಸಿತ್ತು. ಆ ಸತ್ಯವನ್ನೂ ಸಿನಿಮಾದಲ್ಲಿ ಹೇಳಲಾಗಿದೆ. ನಕ್ಸಲ್ ಹಿಂಸಾಚಾರದ ಕುರಿತಾಗಿ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿದೆ. ಇದೇ ವಿವಾದಕ್ಕೆ ಕಾರಣವಾಗಿದೆ.

    ಭಾರತೀಯ ಸೈನಿಕರನ್ನು ನಕ್ಸಲ್ ರು ಹೇಗೆ ಹತ್ಯೆ ಮಾಡಿದರು ಎನ್ನುವುದನ್ನು ಸಿನಿಮಾದಲ್ಲಿ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಇದೇ ಆಕ್ರೋಶಕ್ಕೆ ಕಾರಣವಾಗಿದೆ. ಅನಗತ್ಯ ವಿಷಯಗಳನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ ಎಂದು ಹಲವರು ಆಕ್ರೋಶ ಹೊರ ಹಾಕಿದ್ದಾರೆ. ಕೆಲವು ಕಡೆ ಸಿನಿಮಾ ಪ್ರದರ್ಶನವನ್ನೂ ನಿಲ್ಲಿಸಿದ್ದಾರೆ.

    ಕಡಿಮೆ ಬಜೆಟ್ ನಲ್ಲಿ ತಯಾರಾದ ದಿ ಕೇರಳ ಸ್ಟೋರಿ ಸಿನಿಮಾ ಕಡಿಮೆ ಅವಧಿಯಲ್ಲಿ ನೂರಾರು ಕೋಟಿ ಕಲೆಕ್ಷನ್ ಮಾಡಿತು. ವಿವಾದ, ಬೈಕಾಟ್, ಬ್ಯಾನ್ ನಡುವೆಯೂ ಹಲವು ರಾಜ್ಯಗಳಲ್ಲಿ ಇದು ತುಂಬಿದ ಪ್ರದರ್ಶನ ಕಂಡಿತು. ಕೆಲ ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದರಿಂದ ಹೆಚ್ಚಿನ ಮೊತ್ತ ನಿರ್ಮಾಪಕರಿಗೆ ಹರಿದು ಬಂದಿತ್ತು. ಬಸ್ತರ್ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದೆ.

  • ಮಹಿಳಾ ಮೀಸಲಾತಿ ಬಗ್ಗೆ ‘ದಿ ಕೇರಳ ಸ್ಟೋರಿ’ ನಟಿ ಅದಾ ಪ್ರತಿಕ್ರಿಯೆ

    ಮಹಿಳಾ ಮೀಸಲಾತಿ ಬಗ್ಗೆ ‘ದಿ ಕೇರಳ ಸ್ಟೋರಿ’ ನಟಿ ಅದಾ ಪ್ರತಿಕ್ರಿಯೆ

    ಲೋಕಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ (Women Reservation Bill) ಜಾರಿಗೆ ತಂದಿರುವ ಬಗ್ಗೆ ಇದೀಗ ‘ದಿ ಕೇರಳ ಸ್ಟೋರಿ’ (The Kerala Story) ನಟಿ ಅದಾ ಶರ್ಮಾ(Adah Sharma) ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಧ್ವನಿಗೂಡಿಸಲು ಅನುಕೂಲವಾಗಲಿದೆ ಎಂದು ನಟಿ ರಿಯಾಕ್ಟ್ ಮಾಡಿದ್ದಾರೆ.

    ಮಹಿಳಾ ಮೀಸಲಾತಿ ಕುರಿತು ಮಾತನಾಡಿದ ಅದಾ ಶರ್ಮಾ, ಮಹಿಳಾ ಸಬಲೀಕರಣದ ಮೂಲಕ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು. ಲೋಕಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ 33% ಮೀಸಲಾತಿ ಜಾರಿಗೆ ಬಂದಿರೋದು ತುಂಬಾ ಖುಷಿಯಾಗಿದೆ. ಈ ಮೂಲಕ ಮಹಿಳೆಯ ಧ್ವನಿ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಲಿದೆ ಎಂದಿದ್ದಾರೆ. ಇದನ್ನೂ ಓದಿ:ರಾಖಿ ಸಾವಂತ್ ಆಸೆ ಈಡೇರಿಸ್ತಾರಾ ರಿಷಬ್ ಶೆಟ್ಟಿ?

    ‘ದಿ ಕೇರಳ ಸ್ಟೋರಿ’ (The Kerala Story) ಸಕ್ಸಸ್ ನಂತರ ಅದಾ ಶರ್ಮಾಗೆ ಬೇಡಿಕೆ ಜಾಸ್ತಿಯಾಗಿದೆ. ಚಿತ್ರದ ಆಯ್ಕೆಯಲ್ಲಿ ಅವರು ಮತ್ತಷ್ಟು ಚ್ಯೂಸಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿ ನಟಿಯ ಚಿತ್ರಕ್ಕೆ ‘ಸಿ.ಡಿ’ ಎಂದ ಹೆಸರಿಟ್ಟ ತಂಡ

    ದಿ ಕೇರಳ ಸ್ಟೋರಿ ನಟಿಯ ಚಿತ್ರಕ್ಕೆ ‘ಸಿ.ಡಿ’ ಎಂದ ಹೆಸರಿಟ್ಟ ತಂಡ

    ದಿ ಕೇರಳ ಸ್ಟೋರಿ ಯಶಸ್ಸಿನ ನಂತರ ಸಾಲು ಸಾಲು ಚಿತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ ಬಾಲಿವುಡ್ (Bollywood)ನಟಿ ಅದಾ ಶರ್ಮಾ (Adah Sharma). ಅವುಗಳಲ್ಲಿ ಒಂದು ಚಿತ್ರಕ್ಕೆ ವಿಚಿತ್ರ ಹೆಸರನ್ನು ಇಡಲಾಗಿದೆ. ಅದು ಹಾರರ್ ಸಿನಿಮಾವಾಗಿದ್ದರಿಂದ ‘ಸಿ.ಡಿ’ (CD) ಎಂದು ಹೆಸರಿಡಲಾಗಿದೆ ಎನ್ನುತ್ತಾರೆ ನಿರ್ದೇಶಕರು. ಸಿಡಿ ಅಂದರೆ ಕ್ರಿಮಿನಲ್ ಅಥವಾ ಡೆವಿಲ್ ಎಂದೂ ಅರ್ಥೈಸಿದ್ದಾರೆ.

    ಟೈಟಲ್ (Title) ಹೊಂದಿರುವ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದ್ದು, ಅದಾ ಶರ್ಮಾ ಕೆಂಪು ಡ್ರೆಸ್‍ ನಲ್ಲಿದ್ದಾರೆ. ಅವರ ಸುತ್ತಲೂ ಅನೇಕ ಕೈಗಳು ಇವೆ. ಆ ನಟಿ ಗಾಬರಿಗೊಂಡಿದ್ದಾಳೆ ಎಂದು ಬಿಂಬಿಸುವ ಪ್ರಯತ್ನವನ್ನು ಪೋಸ್ಟರ್ ನಲ್ಲಿ ಮಾಡಲಾಗಿದೆ. ಇದೊಂದು ಸೈಕಲಾಜಿಕಲ್ ಮತ್ತು ಹಾರರ್ ಸಿನಿಮಾವಾಗಿದ್ದು, ಕೃಷ್ಣ ಅನ್ನಮ್ ಎನ್ನುವವರು ನಿರ್ದೇಶನ ಮಾಡುತ್ತಿದ್ದಾರೆ.

     

    ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ ಟೀಮ್. ಭರಣಿ ಶಂಕರ್, ರೋಹಿ, ಮಹೇಶ್ ವಿಟ್ಟಾ ಸೇರಿದಂತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ಅದಾ ಶರ್ಮಾ ಅವರ ಪಾತ್ರದ ಬಗ್ಗೆ ಈವರೆಗೂ ಒಂದೇ ಒಂದು ಸುಳಿವನ್ನೂ ಬಿಟ್ಟುಕೊಟ್ಟಿಲ್ಲ ಟೀಮ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದಿ ಕೇರಳ ಸ್ಟೋರಿ’ ಅದಾ ಶರ್ಮಾಗೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ‘ದಿ ಕೇರಳ ಸ್ಟೋರಿ’ ಅದಾ ಶರ್ಮಾಗೆ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ನ್ನಡದ ‘ರಣವಿಕ್ರಮ’ (Ranavikrama) ಬ್ಯೂಟಿ ಅದಾ ಶರ್ಮಾ (Adah Sharma) ಅವರು ಇತ್ತೀಚಿಗೆ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಮೂಲಕ ಬಿಗ್ ಹಿಟ್ ನೀಡಿದ್ದರು. ಮತ್ತೆ ಸಿನಿಮಾಗಳಲ್ಲಿ ಆಕ್ಟೀವ್ ಆಗಿದ್ದ ನಟಿ ಈಗ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಅಂದರೆ ‘ದಿ ಕೇರಳ ಸ್ಟೋರಿ’ ಸಿನಿಮಾ. ಈ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದ ಬೆಡಗಿ ಅದಾಗೆ ಅನಾರೋಗ್ಯ ಕಾಡ್ತಿದೆ. ಫುಡ್ ಅಲರ್ಜಿಯಿಂದ ಆರೋಗ್ಯ ವ್ಯತ್ಯಾಸವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ವೈದ್ಯರು ಈಗ ಆಕೆಯ ಸ್ಥಿತಿ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಮೆಗಾಸ್ಟಾರ್ ಮನೆಮಗಳು ನಿಹಾರಿಕಾ ಜೊತೆಗಿನ ಮದುವೆ ಬಗ್ಗೆ ತರುಣ್ ಸ್ಪಷ್ಟನೆ

    ಅದಾ ಶರ್ಮಾ ನಟನೆಯ ಮುಂಬರುವ ಸಿನಿಮಾ ‘ಕಮಾಂಡೋ’ ಪ್ರಚಾರಕ್ಕಾಗಿ ಎಲ್ಲಾ ಸಿದ್ಧತೆ ಮಾಡಲಾಗಿತ್ತು. ಭಾವನಾ ರೆಡ್ಡಿ ಎಂಬ ಖಡಕ್ ಪೊಲೀಸ್ ಆಧಿಕಾರಿಯಾಗಿ ಅದಾ ಜೀವ ತುಂಬಿದ್ದರು. ಇನ್ನೇನು ಪ್ರಚಾರ ಕಾರ್ಯ ಶುರು ಮಾಡಬೇಕು. ಈ ಸಂದರ್ಭದಲ್ಲಿ ಅದಾ ಆರೋಗ್ಯ ಕೈಕೊಟ್ಟಿದೆ. ಹಾಗಾಗಿ ಚಿತ್ರದ ಪ್ರಚಾರ ಕಾರ್ಯವನ್ನು ಸದ್ಯಕ್ಕೆ ರದ್ದು ಮಾಡಲಾಗಿದೆ. ಆತಂಕದಲ್ಲಿದ್ದ ಅದಾ ಅಭಿಮಾನಿಗಳು, ಆಕೆಯ ಸದ್ಯ ಹೆಲ್ಡ್ ಅಪ್‌ಡೇಟ್ ತಿಳಿದು ನಿಟ್ಟುಸಿರು ಬಿಟ್ಟಿದ್ದಾರೆ.

    ಕನ್ನಡದ ‘ರಣವಿಕ್ರಮ’ ಸಿನಿಮಾದಲ್ಲಿ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ನಾಯಕಿಯಾಗಿ ಅದಾ ಶರ್ಮಾ ನಟಿಸಿದ್ದರು. ಈ ಚಿತ್ರ ಫ್ಯಾನ್ಸ್‌ಗೆ ಮನರಂಜನೆ ನೀಡಿತ್ತು. ದಿ ಕೇರಳ ಸ್ಟೋರಿ ಬಿಗ್‌ ಬ್ರೇಕ್‌ ನಂತರ ಒಳ್ಳೆಯ ಕಥೆಗಳು ನಟಿಗೆ ಅರಸಿ ಬರುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟಾರ್ ನಟರಿಗೆ ಟಾಂಗ್ ಕೊಟ್ಟ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

    ಸ್ಟಾರ್ ನಟರಿಗೆ ಟಾಂಗ್ ಕೊಟ್ಟ ‘ದಿ ಕೇರಳ ಸ್ಟೋರಿ’ ನಟಿ ಅದಾ ಶರ್ಮಾ

    ಸಾಕಷ್ಟು ಸದ್ದು ಮಾಡಿ, ಬಾಕ್ಸ್ ಆಫೀಸಿನಲ್ಲಿ ದುಡ್ಡೂ ಮಾಡಿರುವ ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾ (Adah Sharma)  ಕೆಲ ಸ್ಟಾರ್ ನಟರಿಗೆ ತಮ್ಮ ಮಾತಿನಲ್ಲೇ ತಿವಿದಿದ್ದಾರೆ. ‘ದಿ ಕೇರಳ ಸ್ಟೋರಿ’ ಸಿನಿಮಾ ವಿರೋಧಿಸಿ ಮಾತನಾಡಿದ್ದ ಕಮಲ್ ಹಾಸನ್, ನಾಸಿರುದ್ದೀನ್ ಶಾ ಸೇರಿದಂತೆ ಹಲವರಿಗೆ ತಮ್ಮ ಮಾತಿನಲ್ಲೇ ಏಟು ನೀಡಿದ್ದಾರೆ ಅದಾ. ‘ನಮ್ಮ ಸಿನಿಮಾದ ಓಟವನ್ನು ಕಟ್ಟಿ ಹಾಕಲು ಕೆಲವು ನಟರು ಪ್ರಯತ್ನಪಟ್ಟರು. ಆದರೆ, ಅದು ಆಗಲಿಲ್ಲ. ಯಾರ ಸಾಮರ್ಥ್ಯ ಏನು ಅಂತ ಗೊತ್ತಾಗಿದೆ’ ಎಂದು ಮಾತನಾಡಿದ್ದಾರೆ.

    ಈ ಹಿಂದೆ ಬಾಲಿವುಡ್ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿಬಗ್ಗೆ ಕಾಮೆಂಟ್ ಮಾಡಿದ್ದರು. ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿದ್ದ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದರು. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದರು.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ನಟಿ, ಡೆಲಿವರಿ ಆಗ್ತಿದ್ದಂತೆ ಶೂಟಿಂಗ್ ಹಾಜರಾದ ಮಮತಾ

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,   ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕುಎಂದು ಪ್ರತಿಕ್ರಿಯಿಸಿದ್ದರು.

    ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ದಿ ಕೇರಳ ಸ್ಟೋರಿ’ ಸಕ್ಸಸ್ ಬೆನ್ನಲ್ಲೇ ಮದುಮಗಳಾದ ಅದಾ ಶರ್ಮಾ

    ‘ದಿ ಕೇರಳ ಸ್ಟೋರಿ’ ಸಕ್ಸಸ್ ಬೆನ್ನಲ್ಲೇ ಮದುಮಗಳಾದ ಅದಾ ಶರ್ಮಾ

    ಬಾಲಿವುಡ್ ನಟಿ ಅದಾ ಶರ್ಮಾ (Adah Sharma) ಅವರು ‘ದಿ ಕೇರಳ ಸ್ಟೋರಿ’ (The Kerala Story)  ಸಿನಿಮಾ ಸೂಪರ್ ಸಕ್ಸಸ್ ನಂತರ ಕೈ ತುಂಬಾ ಅವಕಾಶಗಳು ಅರಸಿ ಬರುತ್ತಿದೆ. ಈ ನಡುವೆ ಮದುಮಗಳಾಗಿ ನಟಿ ಮಿಂಚ್ತಿದ್ದಾರೆ. ಈ ಕುರಿತ ವೀಡಿಯೋ ಎಲ್ಲೆಡೆ ಸದ್ದು ಮಾಡುತ್ತಿದೆ. ಹೌದಾ.? ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ್ರಾ ಅದಾ ಶರ್ಮಾ?

    ಬಹುಭಾಷಾ ನಟಿಯಾಗಿ ಗಮನ ಸೆಳೆಯುತ್ತಿರೋ ಈ ಮುದ್ದು ಮುಖದ ಚೆಲುವೆ ಅದಾ, ಕನ್ನಡದ ‘ರಣವಿಕ್ರಮ’ ಸಿನಿಮಾದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್‌ಗೆ (Puneeth Rajkumar) ನಾಯಕಿಯಾಗಿ ನಟಿಸಿದ್ದ ಅದಾ ಶರ್ಮಾ ಇತ್ತೀಚಿಗೆ ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ನಟಿಸಿ ದೇಶದೆಲ್ಲೆಡೆ ಸಂಚಲನ ಮೂಡಿಸಿದ್ರು. ಮೀನಾಕ್ಷಿ ಎಂಬ ಪಾತ್ರದ ಮೂಲಕ ಮನೆ ಮಾತಾದರು. ಲವ್ ಜಿಹಾದ್ ಕುರಿತ ಈ ಕಥೆಯನ್ನ ಅಭಿಮಾನಿಗಳು ಮೆಚ್ಚಿಕೊಂಡಿದ್ರು. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ‘ದಿ ಕೇರಳ ಸ್ಟೋರಿ’ ಸಕ್ಸಸ್ ನಂತರ ಬಂಪರ್ ಆಫರ್ಸ್‌ಗಳು ನಟಿ ಅದಾಗೆ ಅರಸಿ ಬರುತ್ತಿದೆ. ಈ ಚಿತ್ರದ ಯಶಸ್ಸಿನಿಂದ ಚಿತ್ರರಂಗದಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಹೀಗಿರುವಾಗ ವೈವಾಹಿಕ ಜೀವನಕ್ಕೆ ಅದಾ ಕಾಲಿಡುವ ತಾಲೀಮು ನಡೆಸುತ್ತಿದ್ದಾರೆ. ಹಸಿರು ಬಣ್ಣದ ಸೀರೆಯುಟ್ಟು ಸ್ಲೀವ್‌ಲೆಸ್ ಬ್ಲೌಸ್ ಧರಿಸಿ ಮದುಮಗಳಾಗಿ ಬೈಕ್ ಮೇಲೆ ಕುಳಿತು ಪೋಸ್ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.

    ಅಯ್ಯೋ.. ಅದಾ ಶರ್ಮಾ ಮದುವೆಯಾಗುತ್ತಿದ್ದಾರಾ.? ಅಂತಾ ಗಾಬರಿಯಾಗಬೇಡಿ. ಜಾಹಿರಾತು ಶೂಟ್‌ವೊಂದಕ್ಕಾಗಿ ನಟಿ ಅದಾ ಮದುಮಗಳ ಗೆಟಪ್‌ನಲ್ಲಿ ಕಂಗೊಳಿಸಿದ್ದಾರೆ. ಮದುಮಗಳ ಲುಕ್‌ನಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆ್ಯಡ್ ಶೂಟ್‌ಗೆ ಎಂದು ತಿಳಿದ ಮೇಲೆ ಮೇಲ್ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ದಿ ಕೇರಳ ಸ್ಟೋರಿ ಕೆಟ್ಟ ಯಶಸ್ಸಿನ ಟ್ರೆಂಡ್: ನಟ ನಾಸಿರುದ್ದೀನ್ ಶಾ

    ಬಾಲಿವುಡ್ ನ ಖ್ಯಾತ ನಟ ನಾಸಿರುದ್ದೀನ್ ಶಾ (Naseeruddin Shah) ‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿರುವ ಅವರು,  ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು  ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ.

    ಬಾಕ್ಸ್ ಆಫೀಸಿನಲ್ಲಿ ಇನ್ನೂರಕ್ಕೂ ಹೆಚ್ಚು ಕೋಟಿ ರೂಪಾಯಿ ಕಲೆಕ್ಷನ್ ಮಾಡಿ, ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ ಬಗ್ಗೆ ಈ ಹಿಂದೆ ಕಮಲ್ ಹಾಸನ್ (Kamal Haasan) ಕೂಡ ಮಾತನಾಡಿದ್ದರು. ಅದೊಂದು ಪ್ರೊಪಗಾಂಡ ಸಿನಿಮಾ ಎಂದು ಟೀಕಿಸಿದ್ದರು. ಸತ್ಯವನ್ನು ಹೇಳದೇ ಅಸತ್ಯವನ್ನೇ ತುಂಬಿರುವಂತಹ ಚಿತ್ರವದು ಎಂದು ಮಾತನಾಡಿದ್ದರು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್‌ಗೆ ಸ್ಟಾರ್ ನಟ ಕಮಲ್ ಹಾಸನ್ ವಿಲನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್,  ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

    ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ಹಲವರು ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದೆ.

     

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕೆಲ ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.

  • `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    `ಕರ್ಣನ್, ಜೈ ಭೀಮ್’ ಸಿನಿಮಾ ಜಾತಿ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? – ನಟ ಚೇತನ್‌ ಪ್ರಶ್ನೆ

    ಬೆಂಗಳೂರು: ʻದಿ ಕೇರಳ ಸ್ಟೋರಿʼ (The Kerala Story) ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್‌ ಹಾಸನ್‌ (Kamal Haasan) ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್‌ (Chetan Kumar) ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗಳ ವಿರುದ್ಧ ಇದ್ದೇನೆ’ ಎಂದಿದ್ದಾರೆ. ನಾವು ರಾಜಕೀಯವಾಗಿ/ಸೈದ್ಧಾಂತಿಕವಾಗಿ ವಿರೋಧಿಸುವುದನ್ನು ಪ್ರಾಪಗಾಂಡ ಎಂದು ಕರೆಯುತ್ತೇವೆ. ‘ಕರ್ಣನ್’ ಮತ್ತು ‘ಜೈ ಭೀಮ್’ ಅನ್ನು ಜಾತಿ ವಿರೋಧಿ ಅಥವಾ ಪೊಲೀಸ್ ವಿರೋಧಿ ಪ್ರಾಪಗಾಂಡ ಎಂದು ಪರಿಗಣಿಸಬಹುದಲ್ಲವೇ? ಬಲವಾದ ಪ್ರಜಾಪ್ರಭುತ್ವಕ್ಕಾಗಿ, ವಿಭಿನ್ನ ಸಿದ್ಧಾಂತಗಳು ಕೂಡ ಅಸ್ತಿತ್ವದಲ್ಲಿ ಇರಬೇಕು/ ಇರುತ್ತವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಿ ಕೇರಳ ಸ್ಟೋರಿ ವಿರೋಧಿಸಿ ಮಾತನಾಡಿದ ಕಮಲ್ ಹಾಸನ್

    ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ನಟ ಕಮಲ್‌ ಹಾಸನ್‌, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಅಭಿ-ಅವಿ ಮ್ಯಾರೇಜ್ : ಬೆಂಗಳೂರಿನಲ್ಲಿ ಮದುವೆ, ಮಂಡ್ಯದಲ್ಲಿ ಬೀಗರ ಊಟ

    ‘ದಿ ಕೇರಳ ಸ್ಟೋರಿ’ ಸಿನಿಮಾದ ಕಥೆಯೇ ಬೋಗಸ್ ಎಂದು ಹಲವರು ಈಗಾಗಲೇ ವಾದ ಮಾಡಿದ್ದಾರೆ. ಅವರು ಹೇಳಿದ ಪ್ರಮಾಣದಲ್ಲಿ ಮಹಿಳೆಯರು ಇಸ್ಲಾಂ ಮೂಲಭೂತವಾದಕ್ಕೆ ಸಿಲುಕಿಲ್ಲ ಎಂದು ಚರ್ಚೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ಟೀಮ್ ಮಾಧ್ಯಮಗೋಷ್ಠಿ ನಡೆಸಿ, ಅಲ್ಲಿಗೆ ಸಂತ್ರಸ್ತರನ್ನು ಕರೆತಂದಿದ್ದರು. ಒಬ್ಬೊಬ್ಬರ ಕಥೆಯನ್ನು ಸಿನಿಮಾ ಟೀಮ್ ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿತು.

    ದಿ ಕೇರಳ ಸ್ಟೋರಿಯ ಟ್ರೈಲರ್ ರಿಲೀಸ್ ಆದ ಸಂದರ್ಭದಲ್ಲಿ ಒಟ್ಟು 32 ಸಾವಿರ ಯುವತಿಯರ ಮತಾಂತರ ಮಾಡಲಾಗಿದೆ ಎಂದು ಹೇಳಿತ್ತು. ಅಂಕಿ ಸಂಖ್ಯೆಯ ಕುರಿತು ವ್ಯಾಪಕ ಟೀಕೆ ಬಂದ ಬೆನ್ನಲ್ಲೇ ಸಂಖ್ಯೆಯ ವಿಚಾರವನ್ನು ಸಿನಿಮಾದಿಂದಲೇ ಕೈ ಬಿಡಲಾಯಿತು. ಆದರೆ, ಸಾಕಷ್ಟು ಸಂಖ್ಯೆಯಲ್ಲಿ ಮತಾಂತರ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಎರಡು ದಿನಗಳ ಹಿಂದೆ ನಡೆದ ಮಾಧ್ಯಮ ಗೋಷ್ಠಿಗೆ 26 ಯುವತಿಯರನ್ನು ಕರೆತಂದಿದ್ದರು ನಿರ್ದೇಶಕ ಸುದೀಪ್ತೋ ಸೇನ್.