Tag: ಅಧಿಕಾರಿಗಳ ದಾಳಿ

  • ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌  ಮೇಲೆ ಅಧಿಕಾರಿಗಳ ದಾಳಿ

    ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕೆ ಜಾಲ ಪತ್ತೆ- ಗೋಡೌನ್‌ ಮೇಲೆ ಅಧಿಕಾರಿಗಳ ದಾಳಿ

    ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲವನ್ನು ಕೆಎಂಎಫ್‌ ಅಧಿಕಾರಿಗಳು ಬೇಧಿಸಿದ್ದಾರೆ.

    ಇಲ್ಲಿನ ಹೊಸ ಹುಂಡಿಯಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕಾ ಗೋಡೌನ್‌ ಮೇಲೆ ಮಾನವ ಹಕ್ಕು ಹೋರಾಟಗಾರರ ತಂಡ ದಾಳಿ ನಡೆಸಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಒಂದೇ ದಿನ 2 ಸರಕಳ್ಳತನ – ಆರೋಪಿಗಳು ಪರಾರಿ

    ಈ ಗೋಡೌನ್‌ ಮೂಲಕ ಕಳೆದ ನಾಲ್ಕು ತಿಂಗಳಿಂದ ನಂದಿನಿ ತುಪ್ಪದ ಹೆಸರಿನಲ್ಲಿ ನಕಲಿ ತುಪ್ಪವನ್ನು ಮೈಸೂರು ನಗರಾದ್ಯಂತ ಮಾರಾಟ ಮಾಡಲಾಗುತ್ತಿದೆ. ನಕಲಿ ತುಪ್ಪ ತಯಾರಕರ ವಿತರಣಾ ಜಾಲವನ್ನು ಕೊನೆಗೂ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

    ಅಧಿಕಾರಿಗಳ ದಾಳಿ ವೇಳೆ, ಕೆಲವು ಅಸಲಿ ನಂದಿನಿ ತುಪ್ಪದ ಪ್ಯಾಕೆಟ್‌ಗಳು ಪತ್ತೆಯಾಗಿವೆ. ಇನ್ನೂ ಕೆಲವನ್ನು ಪ್ಯಾಕಿಂಗ್‌ ಮಾಡಲಾಗುತ್ತಿತ್ತು. ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಶ್ರಣ ಮಾಡಿ ಅದನ್ನು ಟನಲ್‌ನಲ್ಲಿ ತುಂಬಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರು ಅರಮನೆ ಆನೆಗಳು ಗುಜರಾತ್‌ಗೆ ಶಿಫ್ಟ್‌

    ಈ ಮಾದರಿಯ ತುಪ್ಪ ಆರೋಗ್ಯಕ್ಕೆ ಹಾನಿಕಾರಕ. ಈ ಜಾಲದ ಹಿಂದೆ ಯಾರ‍್ಯಾರು ಇದ್ದಾರೆ ಎಂಬ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ಬಾಲ್ಯ ವಿವಾಹ ತಡೆದ ಅಧಿಕಾರಿಗಳು: ನಾಪತ್ತೆಯಾದ್ರು ವಧು-ವರ

    ಬಾಲ್ಯ ವಿವಾಹ ತಡೆದ ಅಧಿಕಾರಿಗಳು: ನಾಪತ್ತೆಯಾದ್ರು ವಧು-ವರ

    ಬೆಂಗಳೂರು: ಬಾಲ್ಯ ವಿವಾಹ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮದುವೆ ಮನೆ ಮೇಲೆ ದಾಳಿ ನಡೆಸಿ, ಮದುವೆ ತಡೆದ ಘಟನೆ ನೆಲಮಂಗಲ ತಾಲೂಕಿನ ಹೊನ್ನಗಂಗಯ್ಯನ ಪಾಳ್ಯದಲ್ಲಿ ನಡೆದಿದೆ.

    ಹೊನ್ನಗಂಗಯ್ಯನ ಪಾಳ್ಯದ ಗಂಗಮ್ಮ ತಿಮ್ಮಯ್ಯ ಸಮುದಾಯ ಭವನದಲ್ಲಿ ಮದುವೆ ಆಯೋಜಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಕಲ್ಯಾಣ ಮಂಟಪಕ್ಕೆ ಬಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ನೆಲಮಂಗಲ ತಾಲೂಕು ಆಡಳಿತ ಅಧಿಕಾರಿಗಳು ವಿವಾಹ ತಡೆದಿದ್ದಾರೆ. ಆದರೆ ಅಧಿಕಾರಿಗಳು ಕಲ್ಯಾಣ ಮಂಟಪಕ್ಕೆ ಬಂದಿದ್ದಾರೆ ಎನ್ನುವುದು ವಧು-ವರರಿಗೆ ಗೊತ್ತಾಗಿದ್ದು ಅವರಿಬ್ಬರು ಮದುವೆ ಮಂಟಪಕ್ಕೆ ಆಗಮಿಸದೇ ನಾಪತ್ತೆಯಾಗಿದ್ದಾರೆ.

    ವಿವಾಹಕ್ಕೆ ಆಗಮಿಸಲಿದ್ದ ಸಂಬಂಧಿಕರಿಗಾಗಿ ತರತರಿಯ ಭೋಜನವನ್ನು ಸಿದ್ಧಪಡಿಸಲಾಗುತ್ತಿತ್ತು. ಹೀಗಾಗಿ ಅದನ್ನು ಕೂಡಾ ಅಧಿಕಾರಿಗಳು ತಡೆದರು. ಘಟನೆ ಸಂಬಂಧ ವಧು ಹಾಗೂ ವರನ ಪೋಷಕರ ವಿರುದ್ಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.