Tag: ಅಧಿಕಾರ ಸ್ವೀಕಾರ

  • ಬಿಡಿಎ ಅಯುಕ್ತರಾಗಿ ರಾಜೇಶ್ ಗೌಡ ಅಧಿಕಾರ ಸ್ವೀಕಾರ

    ಬಿಡಿಎ ಅಯುಕ್ತರಾಗಿ ರಾಜೇಶ್ ಗೌಡ ಅಧಿಕಾರ ಸ್ವೀಕಾರ

    ಬೆಂಗಳೂರು: ಬಿಡಿಎ ನೂತನ ಆಯುಕ್ತರಾಗಿ ಹಿರಿಯ ಐಎಎಸ್ ಅಧಿಕಾರಿ ಎಂ.ಬಿ.ರಾಜೇಶ್ ಗೌಡ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ನೂತನ ಆಯುಕ್ತರಿಗೆ ಶುಭ ಕೋರಿ ಮಾತನಾಡಿದ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಪ್ರಾಧಿಕಾರ ಸಾರ್ವಜನಿಕರ ಸೇವೆಯ ಸಂಸ್ಥೆಯಾಗಿದ್ದು, ಸಾರ್ವಜನಿಕ ಸ್ನೇಹಿ ಸಂಸ್ಥೆಯನ್ನಾಗಿ ಮಾಡುವ ಹೊಣೆ ಎಲ್ಲರದ್ದಾಗಿದೆ. ಸಣ್ಣಪುಟ್ಟ ಕೆಲಸಗಳಿಗಾಗಿ ಸಾರ್ವಜನಿಕರು ಬಿಡಿಎಗೆ ಅಲೆಯದಂತೆ ನೋಡಿಕೊಳ್ಳಬೇಕು. ಬಿಡಿಎ ಒಂದು ಕುಟುಂಬ ಇದ್ದಂತೆ. ಎಲ್ಲರೂ ಒಗ್ಗಟ್ಟಾಗಿ ಸಂಸ್ಥೆ ಮತ್ತು ಸಾರ್ವಜನಿಕರ ಏಳ್ಗೆಗಾಗಿ ಶ್ರಮಿಸಿ, ಸಂಸ್ಥೆಗೆ ಹೆಸರು ತರೋಣ ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

    ನೂತನ ಆಯುಕ್ತ ರಾಜೇಶ್ ಗೌಡ ಮಾತನಾಡಿ, ಸಾರ್ವಜನಿಕರಿಗಾಗಿ ಇರುವ ಸಂಸ್ಥೆಯ ಉನ್ನತಿಗೆ ಕೆಲಸ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಡಿಎನ ಹಲವಾರು ಅಧಿಕಾರಿಗಳು ಇದ್ದರು.

  • ಸೈಕಲ್‍ನಲ್ಲಿ ಆಗಮಿಸಿ ಅಧಿಕಾರ ಸ್ವೀಕರಿಸಿದ ಆರೋಗ್ಯ ಸಚಿವ

    ಸೈಕಲ್‍ನಲ್ಲಿ ಆಗಮಿಸಿ ಅಧಿಕಾರ ಸ್ವೀಕರಿಸಿದ ಆರೋಗ್ಯ ಸಚಿವ

    ನವದೆಹಲಿ: ಸೈಕಲ್‍ನಲ್ಲಿ ಸಿಂಪಲ್ ಆಗಿ ಆರೋಗ್ಯ ಸಚಿವಾಲಯಕ್ಕೆ ಬಂದ ಡಾ. ಹರ್ಷವರ್ಧನ್ ಅವರು ಕೇಂದ್ರ ಸರ್ಕಾರದ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

    ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಟ್ವೀಟ್ ಮಾಡಿದ ಅವರು, ನನ್ನ ಮೇಲೆ ನಂಬಿಕೆ ಇಟ್ಟು ಆರೋಗ್ಯ ಸಚಿವರ ಸ್ಥಾನ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಇಂದು ನಾನು ಕೇಂದ್ರ ಸರ್ಕಾರದ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಮೋದಿ ಸರ್ಕಾರ ದೇಶದ ಜನತೆಯ ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡುತ್ತದೆ. ಆರೋಗ್ಯ ಸಚಿವನಾಗಿ ನನ್ನ ಕರ್ತವ್ಯ ಹಾಗೂ ಜವಬ್ದಾರಿಯನ್ನು ಉತ್ತಮ ರೀತಿಯಲ್ಲಿ ನಿಭಾಯಿಸಲು ಶ್ರಮಿಸುತ್ತೇನೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಅಷ್ಟೇ ಅಲ್ಲದೆ ಇಂದು `ವಿಶ್ವ ಬೈಸಿಕಲ್ ದಿನ’ವಾಗಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವರು ಸೈಕಲಿಂಗ್ ತಮ್ಮ ಅಚ್ಚುಮೆಚ್ಚಿನ ಕ್ರೀಡೆ ಎಂದು ಹೇಳಿಕೊಂಡಿದ್ದಾರೆ.

    ವೈದ್ಯ ಮತ್ತು ರಾಜಕಾರಣಿ ಡಾ.ಹರ್ಷವರ್ಧನ್ ಮತ್ತೊಮ್ಮೆ ಆರೋಗ್ಯ ಸಚಿವಾಲಯದ ಅಧಿಕಾರ ವಹಿಸಿಕೊಂಡಿದ್ದಾರೆ. ಹಿಂದೆ ಮೇ 2014 ರಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಹರ್ಷವರ್ಧನ್ ನಂತರ ಮೇ 2017 ರಲ್ಲಿ ಭೂ ವಿಜ್ಞಾನ ಮತ್ತು ತಂತ್ರಜ್ಞಾನದ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡಿದ್ದರು. ನಂತರ ಜೆ.ಪಿ. ನಡ್ಡ ಆರೋಗ್ಯ ಸಚಿವರಾಗಿದ್ದರು.

  • ಪಬ್ಲಿಕ್ ಹೀರೋ ಆಗಿದ್ದ ಅನಿರುದ್ಧ್ ಶ್ರವಣ್ ಚಿಕ್ಕಬಳ್ಳಾಪುರದ ಹೊಸ ಜಿಲ್ಲಾಧಿಕಾರಿ

    ಪಬ್ಲಿಕ್ ಹೀರೋ ಆಗಿದ್ದ ಅನಿರುದ್ಧ್ ಶ್ರವಣ್ ಚಿಕ್ಕಬಳ್ಳಾಪುರದ ಹೊಸ ಜಿಲ್ಲಾಧಿಕಾರಿ

    ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ.

    ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅನಿರುದ್ಧ್ ಶ್ರವಣ್ ಅವರು, ಜಿಲ್ಲೆಯ ಸಮಸ್ತ ಅಭಿವೃದ್ಧಿ, ಹಾಗೂ ಪಾರದರ್ಶಕ ಆಡಳಿತ ನಡೆಸಲು ಎಲ್ಲಾ ಕಾನೂನಾತ್ಮಕ ಕ್ರಮಗಳನ್ನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

    ಇದೇ ವೇಳೆ ಜಿಲ್ಲೆಯ ಯಾವುದೇ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರು ನೇರ ಮಾಹಿತಿ ಪಡೆಯಬಹುದು. ಈ ವಿಚಾರದಲ್ಲಿ ಮಾಧ್ಯಮಗಳಿಗೂ ಹೆಚ್ಚಿನ ಜವಾಬ್ದಾರಿ ಇದೆ. ತಮ್ಮ ಕಾರ್ಯಕ್ಕೆ ಮಾಧ್ಯಮಗಳು ಸಹ ಸಹಕಾರ ನೀಡಬೇಕು. ಸರ್ಕಾರ ಕೈಗೊಳ್ಳುವ ಎಲ್ಲಾ ಯೋಜನೆಗಳು ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ಜಿಲ್ಲೆಯಲ್ಲಿ 2 ವರ್ಷ ಸೇವೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಪ್ರಮುಖ ಸಮಸ್ಯೆಗಳ ಪರಿಹಾರ ಕೈಗೊಳ್ಳುವ ಕಾರ್ಯ ಮಾಡಲಾಗುವುದು ಎಂದರು. ಇದೇ ವೇಳೆ ಜಿಲ್ಲೆಯ ಗಂಭೀರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

    ಈ ಹಿಂದೆ ಕಲಬುರಗಿ ಜಿಲ್ಲಾಪಂಚಾಯತ್ ಸಿಇಓ ಆಗಿ 2 ವರ್ಷ ಕಾರ್ಯನಿರ್ವಹಿದ್ದ ಅನಿರುದ್ಧ್ ಶ್ರವಣ್ ಅವರು ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದರು. ಅಲ್ಲದೇ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಖ್ಯಾತಿಗೆ ಭಾಜನರಾಗಿದ್ದರು. ಬಳಿಕ ಅವರಿಗೆ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗಿದೆ.

    ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ದೀಪ್ತಿ ಅದಿತ್ಯಾ ಕಾನಡೆ ಅವರು ದೀರ್ಘಾವಧಿ ರಜೆ ಪಡೆದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ರನ್ನ ಸರ್ಕಾರ ನೇಮಕ ಮಾಡಿದೆ.