Tag: ಅಧ್ಯಕ್ಷೆ

  • ಫಸ್ಟ್‌ ಟೈಂ ಸೆಬಿಗೆ ಮಹಿಳೆ ಬಾಸ್‌

    ನವದೆಹಲಿ: ಭಾರತದ ಭದ್ರತೆ ಹಾಗೂ ವಿನಿಮಯ ಮಂಡಳಿ(SEBI) ಹೊಸ ಮಹಿಳಾ ಅಧ್ಯಕ್ಷೆಯನ್ನು ನೇಮಿಸಿದೆ. ಸೊಮವಾರ ಸೆಬಿಯ ಹೊಸ ಅಧ್ಯಕ್ಷೆಯಾಗಿ ಮಾಧಬಿ ಪುರಿ ಬುಚ್ ನೇಮಕಗೊಂಡಿದ್ದಾರೆ.

    ಮಾಧಬಿ ಸೆಬಿಯ ಅಧ್ಯಕ್ಷೆಯಾಗುವುದರೊಂದಿಗೆ ಸೆಬಿಯ ಮೊದಲ ಮಹಿಳಾ ಅಧ್ಯಕ್ಷರೆನಿಸಿಕೊಂಡಿದ್ದಾರೆ.

    ಫೆಬ್ರವರಿ 28ರಂದು ಅಜಯ್ ತ್ಯಾಗಿಯವರ ಸೆಬಿ ಅಧ್ಯಕ್ಷತೆಯ ಅವಧಿ ಪೂರ್ಣವಾಗಿದ್ದು, ಮಾಧಬಿ ಪುರಿ ಬುಚ್ ಅವರನ್ನು 3 ವರ್ಷಗಳ ಅವಧಿಗೆ ಸೆಬಿಯ ಅಧ್ಯಕ್ಷೆಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. ಇದನ್ನೂ ಓದಿ: ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿನಿಯ ವೀಡಿಯೋ ಶೇರ್ ಮಾಡಿದ ಪ್ರಿಯಾಂಕಾ!

    ಮಾಧಬಿ ಪುರಿ ಬುಚ್ ಯಾರು?
    ಮಾಧಬಿ ಪುರಿ ಬುಚ್ ಸೆಬಿಯ ಮಾಜಿ ಪೂರ್ಣ ಅವಧಿಯ ಸದಸ್ಯ(ಡಬ್ಲ್ಯೂಟಿಎಮ್)ರಾಗಿದ್ದಾರೆ. ಮಾಧಬಿ 2017 ಏಪ್ರಿಲ್ 5ರಿಂದ 2021 ಅಕ್ಟೋಬರ್ 4ರ ವರೆಗೆ ಸೆಬಿಯ ಪೂರ್ಣ ಅವಧಿಯ ಸದಸ್ಯರಾಗಿದ್ದರು. ಇದನ್ನೂ ಓದಿ: ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

    ಮಾಧಬಿ ಅವರಿಗೆ ಹಣಕಾಸು ಮಾರುಕಟ್ಟೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವವಿದ್ದು, ಸೆಬಿಯಲ್ಲಿ ಹೂಡಿಕೆ, ಸಾಮೂಹಿಕ ಹೂಡಿಕೆ ಯೋಜನೆ ಹಾಗೂ ಕಣ್ಗಾವಲು ಸೇರಿದಂತೆ ವಿವಿಧ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದಾರೆ.

  • ಅಮೆರಿಕದ ಪ್ರತಿಷ್ಠಿತ ವಿವಿಗೆ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಇತಿಹಾಸ ಸೃಷ್ಟಿಸಿದ ಭಾರತ ಸಂಜಾತೆ

    ಅಮೆರಿಕದ ಪ್ರತಿಷ್ಠಿತ ವಿವಿಗೆ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಇತಿಹಾಸ ಸೃಷ್ಟಿಸಿದ ಭಾರತ ಸಂಜಾತೆ

    ನ್ಯೂಯಾರ್ಕ್‌: ಭಾರತ ಮೂಲದ ಪ್ರಾಧ್ಯಾಪಕಿ ನೀಲಿ ಬೆಂಡಪುಡಿ ಅವರು ಜಾಗತಿಕ ಶೈಕ್ಷಣಿಕ ವಲಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಅಮೆರಿಕದ ಪ್ರೆಸ್ಟೀಜಿಯಸ್‌ ಪೆನ್ಸಿಲ್ವೇನಿಯಾ ಸ್ಟೇಟ್‌ ಯೂನಿವರ್ಸಿಟಿಯ (ಪೆನ್‌ ಸ್ಟೇಟ್‌) ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆಯಾಗಿದ್ದಾರೆ.

    ವಿಶ್ವವಿದ್ಯಾಲಯದ ಅಧ್ಯಕ್ಷರನ್ನಾಗಿ ನೀಲಿ ಬೆಂಡಪುಡಿ ಅವರನ್ನು ಆಯ್ಕೆ ಮಾಡಿರುವುದಾಗಿ ಶೈಕ್ಷಣಿಕ ಸಂಸ್ಥೆ ಶುಕ್ರವಾರ ಘೋಷಿಸಿದೆ. ಇದನ್ನೂ ಓದಿ: ಮೆಕ್ಸಿಕೋ ಅಪಘಾತ – 49 ಮಂದಿ ಸಾವು, 58 ಮಂದಿಗೆ ಗಾಯ

    ಬೆಂಡಪುಡಿ ಅವರು, ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಜನಿಸಿದರು. 1986 ಉನ್ನತ ಶಿಕ್ಷಣಕ್ಕಾಗಿ ಅಮೆರಿಕಗೆ ತೆರಳಿದರು. ಸದ್ಯ ಅವರು ಲೂಯಿಸ್‌ವೆಲ್ಲಿ ವಿಶ್ವವಿದ್ಯಾಲಯದಲ್ಲಿ ಮಾರ್ಕೆಟಿಂಗ್‌ ವಿಷಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಬೆಂಡಪುಡಿ ಅವರನ್ನು ಅಧ್ಯಕ್ಷೆಯಾಗಿ ನೇಮಿಸಿ ವಿಶ್ವವಿದ್ಯಾಲಯದ ಸ್ಟೇಟ್‌ ಬೋರ್ಡ್‌ ಟ್ರಸ್ಟೀಸ್‌ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಆ ಮೂಲಕ ಬೆಂಡಪುಡಿ ಅವರು ವಿವಿಯ 19 ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೇ ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಇದನ್ನೂ ಓದಿ: ಅದ್ಧೂರಿಯಾಗಿ ನೆರವೇರಿತು ಕತ್ರಿನಾ ಕೈಫ್-ವಿಕ್ಕಿ ಕೌಶಲ್ ಮದುವೆ

    ಪೆನ್‌ ಸ್ಟೇಟ್‌ ವಿಶ್ವದ ಅತ್ಯಂತ ಪ್ರತಿಷ್ಠಿತ ವಿವಿಗಳಲ್ಲಿ ಒಂದು. ಅಂತಹ ವಿವಿಯಲ್ಲಿ ಪ್ರಮುಖ ಜವಾಬ್ದಾರಿ ನಿಭಾಯಿಸಲು ಹೆಮ್ಮೆ ಎನಿಸುತ್ತದೆ. ಸಂಸ್ಥೆಯಲ್ಲಿ ಜವಾಬ್ದಾರಿಯುತ ಸ್ಥಾನ ನೀಡಿದ ಟ್ರಸ್ಟ್‌ಗೆ ನಾನು ಋಣಿ. ಸಂಸ್ಥೆಯ ಉನ್ನತಿಗೆ ನಾನು ಶ್ರಮಿಸುತ್ತೇನೆ ಎಂದು ಬೆಂಡಪುಡಿ ಪ್ರತಿಕ್ರಿಯಿಸಿದ್ದಾರೆ.

  • 85 ವರ್ಷದ ಅಜ್ಜಿಗೆ ಒಲಿದುಬಂತು ಪಂಚಾಯತ್ ಅಧ್ಯಕ್ಷೆ ಸ್ಥಾನ

    85 ವರ್ಷದ ಅಜ್ಜಿಗೆ ಒಲಿದುಬಂತು ಪಂಚಾಯತ್ ಅಧ್ಯಕ್ಷೆ ಸ್ಥಾನ

    ಹೈದರಾಬಾದ್: 85 ವರ್ಷದ ಎಸ್. ಪೆರುಮಾತಾಳ್ ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಶಿವಂತಿಪಟ್ಟಿ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.

    85 ವರ್ಷದ ಎಸ್. ಪೆರುಮಾತಾಳ್ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಪೆರುಮಾತಾಳ್ ಬಹುಮತವನ್ನು ಪಡೆದು ಆಯ್ಕೆಯಾಗುವ ಮೂಲಕವಾಗಿ ಅತ್ಯಂತ ಹಿರಿಯ ಪಂಚಾಯತ್ ಸದಸ್ಯೆ ಮತ್ತು ಅಧ್ಯಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ದೀರ್ಘಕಾಲದಿಂದಲೂ ರಾಜಕೀಯದಲ್ಲಿ ಪೆರುಮಾತಾಳ್ ತೊಡಗಿಸಿಕೊಂಡಿದ್ದರು. ಆದರೆ ಇದೆ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದು ಅಧಿಕಾರ ಚುಕ್ಕಾಣಿಯನ್ನು ಹಿಡಿದಿದ್ದಾರೆ. ರಾಜಕೀಯದಲ್ಲಿ ತೊಡಗಿಕೊಂಡಿದ್ದ ಪೆರುಮಾತಾಳ್ ತಮ್ಮ ಮಗನಿಗಾಗಿ ಪ್ರಚಾರದಲ್ಲಿ ತೊಡಗಿಕೊಳ್ಳುತ್ತಿದ್ದರು. ಆದರೆ ಈ ಭಾರಿ ತಾವೇ ಸ್ಪರ್ಧೆ ಮಾಡಿ 1,568 ಮತಗಳನ್ನು ಪಡೆದುಕೊಂಡು ಪಂಚಾಯತ್ ಅಧ್ಯಕ್ಷರಾಗಿದ್ದಾರೆ. ಇದನ್ನೂ ಓದಿ: ಮತ್ತೆ ಸರ್ಜಿಕಲ್‌ ಸ್ಟ್ರೈಕ್‌? – ಪಾಕಿಸ್ತಾನಕ್ಕೆ ಅಮಿತ್‌ ಶಾ ಎಚ್ಚರಿಕೆ

    ಪ್ರತಿನಿತ್ಯ ಜನರೊಂದಿಗೆ ಮಾತನಾಡುವುದರಿಂದ, ಪಂಚಾಯತ್‍ನಲ್ಲಿ ಪ್ರಚಾರ ಮಾಡುವುದು, ಮನೆಗಳಿಗೆ ಭೇಟಿ ನೀಡುವುದು ನನಗೆ ಯಾವುದೇ ಸಮಸ್ಯೆಯಾಗಿಲ್ಲ. ಪಂಚಾಯತ್‍ಗೆ ಕುಡಿಯುವ ನೀರಿನ ಪೂರೈಕೆ ನಿರಂತರವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ನನ್ನ ಬಾಲ್ಯದಿಂದಲೂ ಕುಡಿಯುವ ನೀರು ಇಲ್ಲಿನ ಪ್ರಮುಖ ಸಮಸ್ಯೆಯಾಗಿದೆ. ಆ ಸಮಸ್ಯೆಯನ್ನು ಶೀಘ್ರದಲ್ಲೇ ಬಗೆಹರಿಸುತ್ತೇನೆ. ನಾವು ಮಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದ್ದು, ನಮ್ಮಲ್ಲಿ ಕುಡಿಯುವ ನೀರಿಗೆ ಬೇರೆ ಯಾವುದೇ ಮೂಲವಿಲ್ಲ. ಬೀದಿ ದೀಪಗಳನ್ನು ಅಳವಡಿಸಲು ಮತ್ತು ಪಂಚಾಯತ್‍ನಲ್ಲಿ ರಸ್ತೆಗಳನ್ನು ನಿರ್ಮಿಸಲು ಪ್ರಯತ್ನಿಸುತ್ತೇನೆ ಎಂದು ಪೆರುಮಾತಾಳ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

  • ಎಂಜಿನಿಯರಿಂಗ್ ಓದುತ್ತಿರುವಾಗಲೇ ಜಿ.ಪಂ.ಅಧ್ಯಕ್ಷೆಯಾದ ಯುವತಿ

    ಎಂಜಿನಿಯರಿಂಗ್ ಓದುತ್ತಿರುವಾಗಲೇ ಜಿ.ಪಂ.ಅಧ್ಯಕ್ಷೆಯಾದ ಯುವತಿ

    ಚೆನ್ನೈ: 22 ವರ್ಷದ ತಮಿಳುನಾಡಿನ ಯುವತಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯಾಗುವ ಮೂಲಕ ಸುದ್ದಿಯಾಗಿದ್ದಾರೆ.

    ಹೊಸದಾಗಿ ರಚನೆಯಾದ ತೆಂಕಸಿ ಜಿಲ್ಲೆಯಲ್ಲಿ ಮಹಿಳೆಯರಿಗಾಗಿ ಮೀಸಲಾಗಿರುವ ವೆಂಕದಂಪಟ್ಟಿ ಪಂಚಾಯತ್ ನಲ್ಲಿ 22 ವರ್ಷದ ಯುವತಿ ಸರುಲತಾ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಈ ಗೆಲುವಿನ ಬಗ್ಗೆ ನನಗೆ ಸಂತೋಷವಾಗಿದೆ ಮತ್ತು ನಾನು ವಿನಮ್ರನಾಗಿದ್ದೇನೆ, ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದಿದ್ದಾರೆ.

    ಈ ಕುರಿತು ಸರುಲತಾ ಅವರು ಪ್ರತಿಕ್ರಿಯಿಸಿದ್ದು, ನಾನು ಈ ಗೆಲುವಿಗೆ ತುಂಬಾ ಸಂತೋಷ ಪಡುತ್ತೇನೆ. ನನ್ನನ್ನು ನಂಬಿದ ಜನರಿಗೆ ನಾನು ವಿನಮ್ರನಾಗಿದ್ದೇನೆ ಎಂದು ತಿಳಿಸಿದರು. ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಹೆಚ್ಚು ಹೆಚ್ಚು ವಿದ್ಯಾವಂತ ಯುವಕರು ರಾಜಕೀಯ ಪ್ರವೇಶಿಸಬೇಕು. ವಿದ್ಯಾವಂತ ಯುವಕರು ಇತರರಿಗಿಂತ ಹೆಚ್ಚು ಉತ್ತಮವಾಗಿ ಆಡಳಿತ ಮಾಡಬಹುದು ಎಂದು ಅವರು ನಂಬುತ್ತಾರೆ. ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾದ ಕಾಂಗ್ರೆಸ್ ನಿಯೋಗ

    ಒಟ್ಟು 5 ಜನರು ಈ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, 22 ವರ್ಷದ ಯುವತಿ ಈ ಚುನಾವಣೆಯಲ್ಲಿ ಗೆದ್ದಿದ್ದಾರೆ. ಲತಾ ಅವರು ಕೊಯಮತ್ತೂರಿನಲ್ಲಿ ಹಿಂದುಸ್ತಾನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿದ್ದಾರೆ.

    ತಮಿಳುನಾಡಿನ ಹೊಸದಾಗಿ ರಚನೆಯಾದ ಒಂಬತ್ತು ಜಿಲ್ಲೆಗಳಲ್ಲಿ ಚುನಾವಣೆ ನಡೆದಿತ್ತು. ಸರುಲತಾ ಅವರ ತಂದೆ ರವಿ ಸುಬ್ರಮಣಿಯನ್ ಅವರು ಕಳೆದ ಬಾರಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು.

    ಪಂಚಾಯತ್ ಅಧಿಕಾರ ನಿರ್ವಹಣೆಗೆ ಕುಟುಂಬದ ಪುರುಷರ ಸಹಾಯವನ್ನು ಪಡೆಯುತ್ತಿರಾ ಎಂಬ ಪ್ರಶ್ನೆಗೆ, ನಾನು ಜನರೊಂದಿಗೆ ಸಮಾಲೋಚಿಸಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: ಒಡೆದು ಹೋದ 4 ಕೆರೆ ಕಟ್ಟೆಗಳು – ಆತಂಕದಲ್ಲಿ ಗ್ರಾಮಸ್ಥರು

    ಮುಂದೆ ಭವಿಷ್ಯದಲ್ಲಿ ವಿಧಾನಸಭೆಗೆ ಅಥವಾ ಸಂಸತ್ತಿಗೆ ಹೋಗುವ ಆಸೆ ಇದೆಯಾ ಎಂದು ಕೇಳಿದ್ದಕ್ಕೆ ನಾನು ಅದರ ಬಗ್ಗೆ ಏನೂ ಯೋಚಿಸಿಲ್ಲ ಎಂದು ಹೇಳಿದ್ದಾರೆ.

  • ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ ನೇಮಕ

    ಅಖಿಲ ಭಾರತ ವೀರಶೈವ ಮಹಾಸಭಾ – ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಸಿಎಂ ಬಿಎಸ್‍ವೈ ಪುತ್ರಿ ನೇಮಕ

    ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಸಿಎಂ ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಉದಯಕುಮಾರ್ ನೇಮಕವಾಗಿದ್ದಾರೆ.

    ಯಡಿಯೂರಪ್ಪ ಅವರ ಅವರು ಮೊದಲ ಪುತ್ರಿ ಅರುಣಾದೇವಿ ಉದಯಕುಮಾರ್ ಅವರನ್ನು ಇಂದು ಮಹಿಳಾ ವಿಭಾಗದ ಅಧ್ಯಕ್ಷರಾಗಿ ನೇಮಕ ಮಾಡಲಾಯ್ತು. ಬೆಂಗಳೂರಿನ ಅಖಿಲ ಭಾರತ ವೀರಶೈವ ಮಹಾಸಭಾದ ಕಚೇರಿಯಲ್ಲಿ ಅರುಣಾದೇವಿ ಅವರು ಅಧಿಕಾರ ಸ್ವೀಕರಿಸಿದರು.

    ಇದೇ ಕಾರ್ಯಕ್ರಮದಲ್ಲಿ ವೀರಶೈವ ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ. ಗುರುಬಸಪ್ಪ ನೇಮಕಗೊಂಡರು. ಅರುಣಾದೇವಿಯವರು ವೀರಶೈವ ಮಹಾಸಭಾದ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಉಪಸ್ಥಿತಿಯಲ್ಲಿ ಪದಗ್ರಹಣ ಮಾಡಿದರು.

  • ಕೋರ್ಟ್ ಆವರಣದಲ್ಲೇ ಯುಪಿ ವಕೀಲ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯ ಬರ್ಬರ ಹತ್ಯೆ

    ಕೋರ್ಟ್ ಆವರಣದಲ್ಲೇ ಯುಪಿ ವಕೀಲ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯ ಬರ್ಬರ ಹತ್ಯೆ

    ಆಗ್ರಾ: ಉತ್ತರ ಪ್ರದೇಶದ ವಕೀಲರ ಸಂಘದ ಮೊದಲ ಮಹಿಳಾ ಅಧ್ಯಕ್ಷೆಯಾಗಿ 2 ದಿನಗಳ ಹಿಂದೆ ಆಯ್ಕೆಯಾಗಿದ್ದ ಧರ್ವೇಶ್ ಯಾದವ್ ಅವರನ್ನು ಕೋರ್ಟ್ ಆವರಣದಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಸಹೋದ್ಯೋಗಿ ವಕೀಲನೇ ಧರ್ವೆಶ್ ಅವರನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ಆದೇ ಪಿಸ್ತೂಲಿನಿಂದ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೊಲೆ ಮಾಡಿದ ವಕೀಲನನ್ನು ಮನೀಶ್ ಶರ್ಮಾ ಎಂದು ಗುರುತಿಸಲಾಗಿದ್ದು ಕೊಲೆ ಮಾಡಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮನೀಶ್ ಶರ್ಮಾನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಸ್ಥಿತಿ ಗಂಭೀರವಾಗಿದೆ.

    2 ದಿನಗಳ ಹಿಂದೆ ನಡೆದ ಚುನಾವಣೆಯಲ್ಲಿ ಧರ್ವೇಶ್ ಯಾದವ್ ಅವರು ಅಧ್ಯಕ್ಷೆಯಾಗಿ ಆಯ್ಕೆ ಆಗುವ ಮೂಲಕ ಉತ್ತರ ಪ್ರದೇಶದಲ್ಲಿ ಇತಿಹಾಸ ಸೃಷ್ಟಿಸಿದ್ದರು. ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ಧರ್ವೇಶ್ ಯಾದವ್ ಅವರಿಗೆ ಇಂದು ಆಗ್ರಾ ನ್ಯಾಯಾಲಯದ ಅವರಣದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಸುಮಾರು ಮಧ್ಯಾಹ್ನ 2.30ಕ್ಕೆ ಈ ಕಾರ್ಯಕ್ರಮಕ್ಕೆ ಧರ್ವೇಶ್ ಯಾದವ್ ಅವರು ಬಂದಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮಧ್ಯದಲ್ಲಿ ಎದ್ದುನಿಂತ ಮನೀಶ್ ಶರ್ಮಾ 3 ಸುತ್ತಿನ ಗುಂಡಿನ ದಾಳಿ ಮಾಡಿದ್ದಾನೆ. ನಂತರ ಅವನು ಕೂಡ ಗುಂಡು ಹಾರಿಸಿಕೊಂಡಿದ್ದಾನೆ.

    ಕೂಡಲೇ ಧರ್ವೆಶ್ ಅವರನ್ನು ಹತ್ತಿರದ ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಧರ್ವೇಶ್ ಯಾದವ್ ಅವರು ಸಾವನ್ನಪ್ಪಿದ್ದಾರೆ.

    ಮನೀಶ್ ಶರ್ಮಾ ಅನುಮತಿ ಪಡೆದ ರಿವಾಲ್ವರ್ ಬಳಕೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಾರ್ ಕೌನ್ಸಿಲ್ ಕೃತ್ಯವನ್ನು ಖಂಡಿಸಿದ್ದು 50 ಲಕ್ಷ ರೂ. ಹಣವನ್ನು ಉತ್ತರ ಪ್ರದೇಶ ಸರ್ಕಾರ ಧರ್ವೇಶ್ ಯಾದವ್ ಅವರ ಕುಟುಂಬಕ್ಕೆ ನೀಡಬೇಕೆಂದು ಆಗ್ರಹಿಸಿದೆ.

  • ಮೈಸೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ತೆಕ್ಕೆಗೆ

    ಮೈಸೂರು ಜಿಲ್ಲಾಪಂಚಾಯ್ತಿ ಜೆಡಿಎಸ್ ತೆಕ್ಕೆಗೆ

    ಮೈಸೂರು: ಇಲ್ಲಿ ಜಿಲ್ಲಾ ಪಂಚಾಯ್ತಿ ಅಧಿಕಾರ ಜೆಡಿಎಸ್ ತೆಕ್ಕೆಗೆ ಬಿದ್ದಿದ್ದು, ಅಧ್ಯಕ್ಷರಾಗಿ ಪರಿಮಳಾ ಶ್ಯಾಮ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ಅಂತರಸಂತೆ ಕ್ಷೇತ್ರದ ಜೆಡಿಎಸ್ ಸದಸ್ಯೆಯಾಗಿರುವ ಪರಿಮಳಾ ಶ್ಯಾಮ್ ವಿರುದ್ಧವಾಗಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ನಾಮಧಾರಿಗೌಡ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆಯಲಿದ್ದು, ಮೈತ್ರಿ ಲೆಕ್ಕದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಗೆಲುವು ಸಾಧಿಸಿದೆ.

    ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಒಟ್ಟು 49 ಸ್ಥಾನಗಳಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ 22, ಜೆಡಿಎಸ್ 18, ಬಿಜೆಪಿ 8 ಹಾಗೂ ಪಕ್ಷೇತರ 1 ಸ್ಥಾನ ಗಳಿಸಿದೆ. ಶಾಸಕ ಅನಿಲ್ ಚಿಕ್ಕಮಾದುವಿಂದ ತೆರವಾದ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಚುನಾವಣೆ ನಂತರ ಕಾಂಗ್ರೆಸ್ಸಿನ 3 ಸದಸ್ಯರು ಜೆಡಿಎಸ್ ಬೆಂಬಲಿಸಿದ್ದರಿಂದ ಜೆಡಿಎಸ್ 20 ಸ್ಥಾನ ಹಾಗೂ ಕಾಂಗ್ರೆಸ್ 20 ಸ್ಥಾನ ಗಳಿಸಿದೆ.

    ಮೀಸಲಾತಿ ಅಭ್ಯರ್ಥಿ ಇಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ಬಿಜೆಪಿ ದೂರ ಉಳಿದಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್‍ನ ಪರಿಮಳಾ ಶ್ಯಾಮ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸದ್ಯ ಉಪಾಧ್ಯಕ್ಷ ಸ್ಥಾನಕ್ಕೆ ಮಾತ್ರ ಬಿಜೆಪಿ ನಾಮಪತ್ರ ಸಲ್ಲಿಸಿದೆ.

    ಪರಿಮಳಾ ಶ್ಯಾಮ್ ಅಧ್ಯಕ್ಷ ಸ್ಥಾನದ ಏಕೈಕ ಆಕಾಂಕ್ಷಿಯಾಗಿದ್ದು, ಚುನಾವಣಾಧಿಕಾರಿ ರೂಪಾ ಅವರಿಗೆ ಪರಿಮಳಾ ಶ್ಯಾಮ್ ಅವರು ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಹಿಂದುಳಿದ ವರ್ಗ(ಮಹಿಳೆ)ಗೆ ಮೀಸಲಾಗಿರುವ ಸ್ಥಾನವನ್ನು ಅವರು ಪಡೆದುಕೊಂಡಿದ್ದಾರೆ. ಜೆಡಿಎಸ್ ಸದಸ್ಯ ಬೀರಿಹುಂಡಿ ಬಸವಣ್ಣ ಜತೆ ಆಗಮಿಸಿ ಉಮೇದುವಾರಿಕೆಯಿಂದ ಅನಾಯಾಸವಾಗಿ ಪರಿಮಳಾ ಶ್ಯಾಮ್ ಅವರಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಫ್ರಾನ್ಸ್ ಮೂಲದ ತಾಯಿಯ ಮಗಳು ಕೊಪ್ಪಳದ ಗ್ರಾಮ ಪಂಚಾಯತ್ ಅಧ್ಯಕ್ಷೆ!

    ಫ್ರಾನ್ಸ್ ಮೂಲದ ತಾಯಿಯ ಮಗಳು ಕೊಪ್ಪಳದ ಗ್ರಾಮ ಪಂಚಾಯತ್ ಅಧ್ಯಕ್ಷೆ!

    ಕೊಪ್ಪಳ: ಫ್ರಾನ್ಸ್ ಮೂಲದ ತಾಯಿಯೊಬ್ಬರ ಮಗಳು ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಹೌದು, ಪ್ರವಾಸಕ್ಕೆಂದು ಭಾರತಕ್ಕೆ ಬಂದ ಫ್ರಾನ್ಸ್ ಮಹಿಳೆ ಆ ಸ್ಥಳದ ಐತಿಹಾಸಿಕ ಹಿನ್ನೆಲೆ ಕೇಳಿ ಅಲ್ಲೇ ವಾಸವಾದರು. ಬಳಿಕ ಸ್ಥಳೀಯರೊಬ್ಬರನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ ಹುಟ್ಟಿದ ಮಗಳು ಇಂದು ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ.

    ಅಂಜನಾದೇವಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದಾರೆ. ಮೂಲತಃ ಆನೆಗೊಂದಿಯಲ್ಲಿ ಹುಟ್ಟಿ ಬೆಳದ ಅಂಜನಾದೇವಿಯವರು ಕನ್ನಡ ಸೇರಿದಂತೆ ನಾಲ್ಕೈದು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಾರೆ. ಇವರ ಕುಟುಂಬ ಸದಸ್ಯರು ಇಂದಿಗೂ ಫ್ರಾನ್ಸ್ ನಲ್ಲಿ ವಾಸವಿದ್ದಾರೆ. ವಿದೇಶಿ ಮೂಲದ ಮಹಿಳೆಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನ ಸಿಕ್ಕಿರುವುದು ನಿಜಕ್ಕೂ ವಿಶೇಷವಾಗಿದೆ.

    ಮೊದಲಿನಿಂದಲೂ ಸಾಮಾಜಿಕ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಅಂಜನಾದೇವಿಯವರು, 2015ರಲ್ಲಿ ಗ್ರಾಮ ಪಂಚಾಯಿತಿಯ 2ನೇ ವಾರ್ಡಿನಲ್ಲಿ ಸಾಮಾನ್ಯ ಮಹಿಳಾ ಖೋಟಾದಡಿ ಸ್ಪರ್ಧಿಸಿ ಗೆದ್ದಿದ್ದರು. ಹಿಂದಿನ ಅಧ್ಯಕ್ಷರು ರಾಜೀನಾಮೆ ನೀಡಿದ ಕಾರಣ ಆನೆಗೊಂದಿಯ ಅಧ್ಯಕ್ಷ ಸ್ಥಾನ ಖಾಲಿಯಾಗಿತ್ತು. ಹೀಗಾಗಿ ಗುರುವಾರ ನಡೆದ ಚುನಾವಣೆಯಲ್ಲಿ ಸರ್ವ ಸದಸ್ಯರು ಅವಿರೋಧವಾಗಿ ಅಂಜನಾದೇವಿಯನ್ನು ಆಯ್ಕೆ ಮಾಡಿದ್ದಾರೆ. 14 ಜನ ಸಂಖ್ಯಾಬಲ ಹೊಂದಿದ ಆನೆಗೊಂದಿ ಗ್ರಾಪಂ ವ್ಯಾಪ್ತಿಯಲ್ಲಿ ಆನೆಗೊಂದಿ, ಕಡೇಬಾಗಿಲು, ಚಿಕ್ಕರಾಂಪುರ್ ಹಾಗೂ ಬಸವನದುರ್ಗ ಗ್ರಾಮಗಳು ಸೇರುತ್ತವೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅಂಜನಾದೇವಿ, ನಮ್ಮ ತಾಯಿ ಶಾರದಾ(ಫ್ರಾನ್ಸುವಾ) ಮೂಲತಃ ಫ್ರಾನ್ಸ್ ಮೂಲದವರಾಗಿದ್ದು, 1965ರಲ್ಲಿ ಭಾರತದ ಪ್ರವಾಸಕ್ಕೆಂದು ಬಂದು ಇಲ್ಲಿಯೇ ನೆಲೆಸಿದ್ದರು. ನಂತರ ಸ್ಥಳೀಯರಾದ ಶಾಂತಮೂರ್ತಿ ಎಂಬವರನ್ನು ವಿವಾಹವಾಗಿದ್ದರು. ತಂದೆ-ತಾಯಿ ಅಂಜನಾದ್ರಿ ಬೆಟ್ಟದ ಸಮೀಪವೇ ವಾಸವಾಗಿದ್ದರು. ಹೀಗಾಗಿ ನನಗೆ ಅಂಜನಾದೇವಿ ಎಂದೇ ಹೆಸರನ್ನು ಇಟ್ಟಿದ್ದರು. ನಾನು ಹುಟ್ಟಿ, ಬೆಳೆದಿದ್ದು ಎಲ್ಲಾ ಆನೆಗೊಂದಿಯಲ್ಲಿಯೇ. ಈಗಲೂ ನನ್ನ ಅಜ್ಜಿ ಫ್ರಾನ್ಸ್ ನಲ್ಲಿ ಇದ್ದಾರೆ. ಅವರನ್ನು ಸಹ ನೋಡಿಕೊಂಡು ಬಂದಿದ್ದೇನೆ. ಆದರೆ ನನಗೆ ನನ್ನ ಭಾರತವೇ ತುಂಬಾ ಇಷ್ಟ. ಅಲ್ಲಿನ ವಾತಾವರಣ ನನಗೆ ಹಿಡಿಸಲಿಲ್ಲ. ಇಲ್ಲಿಯೇ ನೆಮ್ಮದಿಯಾಗಿದ್ದೇನೆಂದು ಹೇಳಿದರು.

    ಮೊದಲಿನಿಂದಲೂ ನಾನು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೆ, ಅಲ್ಲದೇ ನನ್ನ ಹಳ್ಳಿಗೆ ಏನಾದರೂ ಮಾಡಬೇಕೆಂದು ಪ್ರಯತ್ನಪಡುತ್ತಲೇ ಇದ್ದೆ. ಗ್ರಾಮಸ್ಥರ ಒತ್ತಾಯದ ಮೇರೆಗೆ ಚುನಾವಣೆಯಲ್ಲಿ ನಿಂತು ಜಯ ಸಾಧಿಸಿದ್ದೆ. ಈಗ ಗ್ರಾಮ ಪಂಚಾಯತ್ ಅಧ್ಯಕ್ಷೆಯನ್ನಾಗಿ ಮಾಡಿದ್ದಾರೆ. ನನ್ನ ಮೇಲಿಟ್ಟುರುವ ನಂಬಿಕೆಯನ್ನು ನಾನು ಉಳಿಸಿಕೊಳ್ಳುತ್ತೇನೆ. ನನ್ನ ಅವಧಿಯಲ್ಲಿ ಗ್ರಾಮದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು.

    ಗ್ರಾಮಸ್ಥರಾದ ಷಣ್ಮುಖರವರು ಮಾತನಾಡಿ, ಅಂಜನಾದೇವಿಯವರನ್ನು ಹುಟ್ಟಿನಿಂದಲೂ ನಾವು ನೋಡಿಕೊಂಡು ಬಂದಿದ್ದೇವೆ. ಗ್ರಾಮ ಅಭಿವೃದ್ದಿಯಾಗಬೇಕು ಎನ್ನುವ ಉದ್ದೇಶದಿಂದ ವಿದ್ಯಾವಂತ ಮಹಿಳೆಯನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿದ್ದೇವೆಂದು ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಲಕ್ಷ್ಮಿ ಹೆಬ್ಬಾಳ್ಕರ್ ತಲೆ ದಂಡಕ್ಕೆ ಮುಹೂರ್ತ ಫಿಕ್ಸ್?

    ಲಕ್ಷ್ಮಿ ಹೆಬ್ಬಾಳ್ಕರ್ ತಲೆ ದಂಡಕ್ಕೆ ಮುಹೂರ್ತ ಫಿಕ್ಸ್?

    ಬೆಂಗಳೂರು: ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆಯಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಶೀಘ್ರದಲ್ಲಿಯೇ ಅಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಲು ಮುಹೂರ್ತ ಸಿದ್ಧವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಹೌದು, ಶೀಘ್ರದಲ್ಲಿಯೇ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಜಿ ಆಗಲಿದ್ದಾರೆ. ಇಷ್ಟು ದಿನ ತೆರೆ ಮರೆಯಲ್ಲಿ ನಡೆಯುತ್ತಿದ್ದ ಪ್ರಯತ್ನಕ್ಕೆ ಈಗ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ಈಗಾಗಲೇ ಲಕ್ಷ್ಮಿ ಹೆಬ್ಬಾಳ್ಕರ್ ಪದಚ್ಯುತಿಗೆ ದೆಹಲಿಯಲ್ಲಿ ಮುಹೂರ್ತ ನಿಗದಿಯಾಗುತ್ತಿದೆ ಎನ್ನುವ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕಾಗಿ ಮಹಿಳಾ ಕಾಂಗ್ರೆಸ್ ನಲ್ಲಿ ಲಾಬಿ ಹೆಚ್ಚಾಗಿದ್ದು, ಇನ್ನು 15 ದಿನದ ಒಳಗಾಗಿ ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಾಗಲಿದೆ. ಈಗಾಗಲೇ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ರಾಜ್ಯದ 12 ಜನ ಮಹಿಳಾ ನಾಯಕಿಯರನ್ನು ಕರೆದು ಸಂದರ್ಶನ ನಡೆಸಿದ್ದಾರೆ. ಅಲ್ಲದೇ ಬುಧವಾರವೂ ಸಹ ರಾಜ್ಯದ 9 ಮಹಿಳಾ ಕಾಂಗ್ರೆಸ್ ಮುಖಂಡರನ್ನ ದೆಹಲಿಗೆ ಕರೆದು ಸಂದರ್ಶನ ನಡೆಸಿದ್ದಾರೆ. ಇಂದು 3 ಜನರ ಸಂದರ್ಶನ ನಡೆಯುತ್ತಿದೆ ಎನ್ನಲಾಗಿದೆ.

    ಪುಷ್ಪ ಅಮರ್ ನಾಥ್, ನಾಗಲಕ್ಷ್ಮಿ ಚೌದರಿ, ಕಮಲಾಕ್ಷಿ ರಾಜಣ್ಣ, ಶಾರದಾ ಗೌಡ ಹಾಗೂ ಗೀತಾ ರಾಜಣ್ಣ ಸೇರಿದಂತೆ ಒಟ್ಟು 12 ಜನ ಮಹಿಳಾ ನಾಯಕಿಯರ ಸಂದರ್ಶನ ಮಾಡಲಾಗಿದೆ. ಇವರಲ್ಲಿ ಒಬ್ಬರು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

    ಹಾಲಿ ಅಧ್ಯಕ್ಷೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್, ಲೋಕಸಭಾ ಚುನಾವಣೆಯವರೆಗೂ ಮುಂದುವರಿಯಲು ಅವಕಾಶ ಕೊಡಿ ಎಂಬ ಮನವಿಗೆ ಸುಶ್ಮಿತಾ ದೇವ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅನಿವಾರ್ಯವಾಗಿ ತಮ್ಮ ಸ್ಥಾನವನ್ನು ಬಿಟ್ಟುಕೊಡಲೇಬೇಕಾದ ಪರಿಸ್ಥಿತಿ ಎದುರಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv