Tag: ಅನಂತಕುಮಾರ್ ಹಗ್ಡೆ

  • ಹೆಗ್ಡೆ ಹಿಂದೂ ಅನ್ನೋದಕ್ಕೆ ತಂದೆ, ತಾಯಿಯ ಡಿಎನ್‍ಎ ಕೊಡಿ: ಕಾಂಗ್ರೆಸ್ ಮುಖಂಡ

    ಹೆಗ್ಡೆ ಹಿಂದೂ ಅನ್ನೋದಕ್ಕೆ ತಂದೆ, ತಾಯಿಯ ಡಿಎನ್‍ಎ ಕೊಡಿ: ಕಾಂಗ್ರೆಸ್ ಮುಖಂಡ

    ಭೋಪಾಲ್: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಹಿಂದೂ ಅನ್ನೋದಕ್ಕೆ ಸಾಕ್ಷಿಗೆ ಅವರ ತಂದೆ, ತಾಯಿಯ ಡಿಎನ್‍ಎ ತಂದು ಕೊಡಿ ಎಂದು ಮಧ್ಯಪ್ರದೇಶದ ಕಾಂಗ್ರೆಸ್ ಮುಖಂಡ, ಸಚಿವ ಗೋವಿಂದ್ ಸಿಂಗ್ ಕೇಳಿದ್ದಾರೆ.

    ಹೆಗ್ಡೆ ಅವರ ತಂದೆ, ತಾಯಿಯವರ ಡಿಎನ್‍ಎ ತಂದು ಕೊಡಲಿ. ಡಿಎನ್‍ಎ ಪರಿಶೀಲನೆ ನಡೆಸಿ ಹೆಗ್ಡೆಯವರ ಜಾತಿ ಯಾವುದು ಎಂದು ಪತ್ತೆ ಮಾಡೋಣ. ಕೆಲವರು ಕೆಳಮಟ್ಟದ ಪದಗಳನ್ನು ಬಳಸುವ ಮೂಲಕ ಗೌರವಕ್ಕೆ ಚ್ಯುತಿ ತರಲು ಪ್ರಯತ್ನಿಸುತ್ತಿದ್ದಾರೆ. ಇಂತಹ ವ್ಯಕ್ತಿಗಳ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡಲ್ಲ ಎಂದು ಗೋವಿಂದ್ ಸಿಂಗ್ ಹೇಳಿದ್ದಾರೆ.

    ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕೂಗ್ತಿ ಮಹಾಸತಿ ದೇವಸ್ಥಾನದಲ್ಲಿ ನಡೆದ ತಾಯ್ನೆಲದ ಸೇವೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ, ಭಾರತೀಯ ಯೋಧರ ಶೌರ್ಯದ ಬಗ್ಗೆ ಸಂದೇಹ ಪಡುವ ಬಿಕನಾಸಿ ಪರಿಸ್ಥಿತಿ ಕಾಂಗ್ರೆಸ್‍ನಿಂದ ನಿರ್ಮಾಣವಾಗಿದೆ. ನಮ್ಮ ಪೈಲಟ್‍ಗಳು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಸಾಕ್ಷಿ ಕೇಳುತ್ತಿದ್ದಾರೆ. ಆದರೆ ಮುಸಲ್ಮಾನನ ಮಗ ಗಾಂಧಿ ಹೇಗಾದ ಎನ್ನುವುದಕ್ಕೆ ಸಾಕ್ಷಿ ಕೊಡುತ್ತಾರಾ ಎಂದು ಪ್ರಶ್ನಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದರು.

    ಮುಸಲ್ಮಾನ ಅಪ್ಪ, ಕ್ರಿಶ್ಚಿಯನ್ ತಾಯಿಗೆ ಹುಟ್ಟಿರುವ ಈ ಪರದೇಶಿ ಬ್ರಾಹ್ಮಣ ಹೇಗಾದ ಎನ್ನುವುದಕ್ಕೆ ಡಿಎನ್‍ಎ ಸಾಕ್ಷಿ ಕೊಡುತ್ತಾರಾ? ಮಾಜಿ ಪ್ರಧಾನಿ ರಾಜೀವ್ ಗಾಂಧಿ ಉಗ್ರರ ದಾಳಿಗೆ ಬಲಿಯಾದಾಗ ಅವರ ದೇಹ ಛಿದ್ರ ಛಿದ್ರವಾಗಿತ್ತು. ಮೃತ ದೇಹವನ್ನು ಪತ್ತೆ ಹಚ್ಚಲು, ಡಿಎನ್‍ಎ ಪರೀಕ್ಷೆಗೆ ಮಕ್ಕಳ ರಕ್ತದ ಮಾದರಿ ನೀಡುವಂತೆ ಸೋನಿಯಾ ಗಾಂಧಿ ಕೇಳಲಾಗಿತ್ತು. ಆದರೆ ಸೋನಿಯಾ ಗಾಂಧಿ ಅವರು, ರಾಹುಲ್ ಗಾಂಧಿ ರಕ್ತದ ಮಾದರಿ ಬೇಡ, ಪ್ರಿಯಾಂಕಾ ಗಾಂಧಿ ರಕ್ತವನ್ನು ತೆಗೆದುಕೊಳ್ಳಿ ಎಂದು ಹೇಳಿದ್ದರು. ಅಂತಹವರು ಈಗ ಏರ್ ಸ್ಟ್ರೈಕ್ ಸಾಕ್ಷಿ ಕೇಳುತ್ತಿದ್ದಾರೆ ಎಂದು ಗಾಂಧಿ ಕುಟುಂಬದ ವಿರುದ್ಧ ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಗೌರಿ ಸಂತಾನ, ಆ ಸಂತಾನ ಅಂತಾ ಹೇಳಿಕೊಳ್ಳುವ ಬಹುತೇಕ ಬುದ್ದಿ ಜೀವಿಗಳು ಮಾರಾಟವಾಗಿದ್ದಾರೆ: ಅನಂತಕುಮಾರ್ ಹೆಗ್ಡೆ

    ಗೌರಿ ಸಂತಾನ, ಆ ಸಂತಾನ ಅಂತಾ ಹೇಳಿಕೊಳ್ಳುವ ಬಹುತೇಕ ಬುದ್ದಿ ಜೀವಿಗಳು ಮಾರಾಟವಾಗಿದ್ದಾರೆ: ಅನಂತಕುಮಾರ್ ಹೆಗ್ಡೆ

    ಬೆಳಗಾವಿ: ಪ್ರಧಾನಿ ಮೋದಿ ವಿರುದ್ಧ ಪ್ರಚಾರ ನಡೆಸಲು ಕಾಂಗ್ರೆಸ್ ಕೆಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ 5 ಲಕ್ಷ ಕೋಟಿ. ರೂಪಾಯಿಗೆ ಗುತ್ತಿಗೆ ನೀಡಿದೆ. ಮೋದಿ ವಿರುದ್ಧ ಪ್ರಚಾರ ನಡೆಸಲು ಗೌರಿ ಸಂತಾನ, ಆ ಸಂತಾನ ಎಂಬ ಎಲ್ಲ ವಿಚಾರವಾದಿಗಳ ಬೆಂಬಲವಿದೆ. ರಾಜ್ಯದ ಬಹುತೇಕ ಬುದ್ದಿಜೀವಿಗಳು ತಮ್ಮನ್ನ ಹಣಕ್ಕಾಗಿ ಮಾರಾಟ ಮಾಡಿಕೊಂಡಿದ್ದಾರೆ ಅಂತಾ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಆರೋಪಿಸಿದ್ರು.

    ಭಾನುವಾರ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಪ್ರಚಾರದ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅನಂತಕುಮಾರ್ ಹಗ್ಡೆ, ನಟ ಪ್ರಕಾಶ್ ರೈ ನಾಲಿಗೆ ಎರಡು ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಪ್ರಕಾಶ್ ರೈ ನಾನು ಹಿಂದೂ ವಿರೋಧಿ ಅಲ್ಲ, ಆದ್ರೆ ಮೋದಿ, ಅಮಿತ್ ಶಾ ಮತ್ತು ಅನಂತಕುಮಾರ್ ಹಗ್ಡೆ ವಿರೋಧಿ ಅಂತಾ ಹೇಳ್ತಾರೆ. ನಿದ್ದೆ ಮಂಪರಿನಲ್ಲಿ ಹುಚ್ಚು ಹಿಡಿದವ್ರು ಮಾತ್ರ ಈ ರೀತಿ ಹೇಳೋದಕ್ಕೆ ಸಾಧ್ಯ ಅಂತಾ ರೈ ವಿರುದ್ಧ ಕಿಡಿಕಾರಿದ್ರು.

    ನರೇಂದ್ರ ಮೋದಿ ಕಪ್ಪು ಹಣದ ಬಾಣ ಬಿಡುತ್ತಿದ್ದಂತೆ ಒಬ್ಬೊಬ್ಬರು ದೇಶ ಬಿಟ್ಟು ಹೋಗಲು ಆರಂಭಿಸಿದ್ರು. ಇನ್ನೇನು ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಕೊಲೊಂಬಿಯಾ ಗರ್ಲ್ ಫ್ರೆಂಡ್ ಜೊತೆ ಹೋಗಲಿದ್ದಾರೆ. ಮಗನ ಜೊತೆ ಸೋನಿಯಾ ಗಾಂಧಿ ದೇಶ ಬಿಡ್ತಾರೆ ಅಂತಾ ಭವಿಷ್ಯ ನುಡಿದ್ರು.

    ಸಿದ್ದರಾಮಯ್ಯ ರಾಜ್ಯದ ದೇವಸ್ಥಾನ, ಮಠಗಳ ಮೇಲೆ ಕಣ್ಣೀಟ್ಟಿದ್ದಾರೆ. ಆದ್ರೆ ಜಕಾತ್ (ದಾನ) ಹೆಸರಲ್ಲಿ ಮಸೀದಿ, ಚರ್ಚ್ ಗಳಿಗೆ ಎಷ್ಟು ಹಣ ಬರುತ್ತೆಂದು ಲೆಕ್ಕ ಇಟ್ಟಿದ್ದಾರಾ? ಜಕಾತ್ ಹೆಸರಲ್ಲಿ ಬಂದ ಹಣದಿಂದ ಬಾಂಬ್, ತಲ್ವಾರ್ ಖರೀದಿ ಮಾಡಲಾಗುತ್ತೆ ಅಂತಾ ಆರೋಪ ಮಾಡಿದ್ರು.