Tag: ಅನಂತಕುಮಾರ ಹೆಗಡೆ

  • 18ರವರೆಗೆ ಮಂಡ್ಯದಲ್ಲಿ ನಿಖಿಲ್ ಎಲ್ಲಿದೀಯಪ್ಪ, ಬಳಿಕ ಆನಂದ್ ಎಲ್ಲಿದೀಯಪ್ಪ ಎಂದು ಹುಡುಕ್ತಾರೆ: ಅನಂತ್ ಕುಮಾರ್ ಹೆಗಡೆ

    18ರವರೆಗೆ ಮಂಡ್ಯದಲ್ಲಿ ನಿಖಿಲ್ ಎಲ್ಲಿದೀಯಪ್ಪ, ಬಳಿಕ ಆನಂದ್ ಎಲ್ಲಿದೀಯಪ್ಪ ಎಂದು ಹುಡುಕ್ತಾರೆ: ಅನಂತ್ ಕುಮಾರ್ ಹೆಗಡೆ

    ಕಾರವಾರ: 18ನೇ ತಾರೀಕಿನವರೆಗೆ ನಿಖಿಲ್ ಎಲ್ಲಿದೀಯಪ್ಪ ಎಂದು ಮಂಡ್ಯದಲ್ಲಿ ನಿಖಿಲ್‍ಗಾಗಿ ಹುಡುಕುತ್ತಾರೆ. ನಂತರ ಇಲ್ಲಿಗೆ ಬಂದು ಆನಂದ್ ಎಲ್ಲಿದೀಯಪ್ಪ ಎಂದು ಹುಡುಕುತ್ತಾರೆ. 18ನೇ ತಾರೀಕಿನ ನಂತರ ಕುಂಬಳಕಾಯಿ, ನಿಂಬೆಹಣ್ಣುಗಳು ಬರುತ್ತವೆ ಎಂದು ಕುಮಾರಸ್ವಾಮಿ, ರೇವಣ್ಣರವರನ್ನು ಕೇಂದ್ರ ಸಚಿವ ಬಿಜೆಪಿ ಅಭ್ಯರ್ಥಿ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.

    ಮಂಗಳವಾರ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆನಂದ್ ಆಸ್ನೋಟಿಕರ್ ನಾನು ಕುಲದೇವರು ಎಂದು ಒಂದು ಸಾರಿ ಹೇಳುತ್ತಾರೆ. ದೇಶಪಾಂಡೆ ಕುಲದೇವರು ಎಂದು ಹೇಳುತ್ತಾರೆ. ಅವರಿಗೆ ಎಷ್ಟು ಕುಲದೇವರಿದ್ದಾರೆ ಎಂದು ಗೊತ್ತಿಲ್ಲ ಎಂದರು.

    ಪ್ರತಿ ವರ್ಷ ಕುಲದೇವರು ಬದಲಾಗುತ್ತೆ. ಇಂತವರು ಇಂದು ಬಂದು ವೋಟನ್ನು ಕೇಳುತ್ತಾರೆ. ಗೋಸುಂಬೆ ಹೇಗೆ ಬದಲಾಯಿಸುತ್ತದೆ ಹಾಗೆ ಬದಲಾಯಿಸುತ್ತಾರೆ. ಇಂದು ಒಂದು ಪಾರ್ಟಿ, ನಾಳೆ ಒಂದು ಪಾರ್ಟಿ. ಮುಂದಿನ ವರ್ಷ ಸೋತರೂ ಈ ಪಕ್ಷದಲ್ಲಿ ಇರುವುದಿಲ್ಲ ಎಂದು ಆನಂದ್ ಆಸ್ನೋಟಿಕರ್‍ಗೆ ಟಾಂಗ್ ನೀಡಿದರು.

    ಬಿಜೆಪಿ ಮುಖಂಡರ ಮನೆಗಳಿಗೆ ಐಟಿ ದಾಳಿಯಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು ಎಲ್ಲೆಲ್ಲಿ ದಾಳಿ ಮಾಡಬೇಕೋ ಅಲ್ಲಲ್ಲಿ ದಾಳಿ ಮಾಡಲು ಅಧಿಕಾರವಿದೆ. ಇದಕ್ಕೆ ನಮ್ಮ ಸ್ವಾಗತ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಹುಡುಕಲಿ. ತಪ್ಪಿದ್ದರೇ ಯಾವುದನ್ನೂ ನಾವು ಸಮರ್ಥನೆ ಮಾಡಿಕೊಳ್ಳುವುದಿಲ್ಲ ಎಂದರು.

  • ಇಂದು ಮೂರು ನಾಮಪತ್ರ ಸಲ್ಲಿಸಿದ ಹೆಗಡೆ

    ಇಂದು ಮೂರು ನಾಮಪತ್ರ ಸಲ್ಲಿಸಿದ ಹೆಗಡೆ

    ಕಾರವಾರ: ಮಂಗಳವಾರ ಸಲ್ಲಿಸಿದ್ದ ನಾಮಪತ್ರದಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು ಪುನಃ ಮೂರು ನಾಮಪತ್ರವನ್ನು ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಅನಂತಕುಮಾರ್ ಹೆಗಡೆ ಸಲ್ಲಿಕೆ ಮಾಡಿದ್ದಾರೆ.

    ಮಂಗಳವಾರ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ‘ನಾಟ್ ಅಪ್ಲಿಕೇಬಲ್’ ಎಂದು ಬರೆಯುವ ಬದಲು ‘NA’ ಎಂದು ನಮೂದಿಸಲಾಗಿತ್ತು. ಈ ಕಾರಣದಿಂದ ಜಿಲ್ಲಾ ಚುನಾವಣಾಧಿಕಾರಿ ಡಾ. ಹರೀಶ್ ಕುಮಾರ್ ಅವರು ಅನಂತಕುಮಾರ್ ಹೆಗಡೆಗೆ ನಾಮಪತ್ರ ಪರಿಶೀಲನೆ ವೇಳೆ ಇದನ್ನು ಗಮನಕ್ಕೆ ತಂದಿದ್ದಾರೆ.

    ಈ ಕಾರಣದಿಂದ ಇಂದು ಕಾರವಾರದ ಶಾಸಕಿ ರೂಪಾಲಿ ನಾಯ್ಕ್ ಹಾಗೂ ಪತ್ನಿ ಶ್ರೀರೂಪ ಅವರೊಂದಿಗೆ ತೆರಳಿ ಅನಂತ್‍ಕುಮಾರ್ ಹೆಗಡೆ ಪುನಃ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗುರುವಾರ ಜಿಲ್ಲೆಗೆ ಆಗಮಿಸುತ್ತಿರುವುದಕ್ಕೆ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಜಿಲ್ಲೆಗೆ ಬರಬಹುದು. ಆದರೆ ನೈತಿಕವಾಗಿ ಬರುವ ಹಕ್ಕಿಲ್ಲ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

    ಮುಖ್ಯಮಂತ್ರಿಯಾಗಿ ಒಂದು ವಾರದೊಳಗೆ ಜಿಲ್ಲೆಗೆ ಆಗಮಿಸಿ ಅರಣ್ಯ ಅತಿಕ್ರಮಣದಾರರ ಸಮಸ್ಯೆ ಬಗೆಹರಿಸುತ್ತೇನೆ ಎಂದಿದ್ದರು. ಈ ಹಿಂದೆ ಪ್ರಚಾರಕ್ಕೆ ಬಂದ ವೇಳೆಯಲ್ಲಿ ಆಶ್ವಾಸನೆ ನೀಡಿದ್ದರು. ಆದರೆ ಇಂದಿಗೂ ಸಮಸ್ಯೆ ಬಗೆಹರಿಸಿಲ್ಲ. ರೈತರ ಸಾಲವನ್ನು ಇನ್ನೂ ಮನ್ನಾ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಬರುವ ನೈತಿಕ ಹಕ್ಕು ಅವರಿಗಿಲ್ಲ ಎಂದು ಟೀಕಿಸಿದರು.

  • ಟಿಪ್ಪು ಜಯಂತಿಯಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರು ಬಳಸಬೇಡಿ: ಅನಂತಕುಮಾರ್ ಹೆಗಡೆ

    ಟಿಪ್ಪು ಜಯಂತಿಯಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರು ಬಳಸಬೇಡಿ: ಅನಂತಕುಮಾರ್ ಹೆಗಡೆ

    ಕಾರವಾರ: ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಯ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರನ್ನು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ.

    ಹೌದು, ಇದೇ ತಿಂಗಳ 10 ರಂದು ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಗೆ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸರ್ಕಾರಿ ಕಚೇರಿಗಳಲ್ಲಿ ನಡೆಯುವ ಟಿಪ್ಪು ಜಯಂತಿಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಗಳ ಪಟ್ಟಿಯಲ್ಲಿ ಶಿಷ್ಟಾಚಾರಕ್ಕೂ ತಮ್ಮ ಹೆಸರನ್ನು ನಮೂದಿಸದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ಮತ್ತು ಉತ್ತರಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

    ಕೇಂದ್ರ ಸಚಿವರು ಪತ್ರವನ್ನು ತಮ್ಮ ವಿಶೇಷ ಕರ್ತವ್ಯಾಧಿಕಾರಿ ವಿಜಯ್‍ಕುಮಾರ್ ತೋರ್ ಗಲ್ ಮೂಲಕ ರವಾನಿಸಿದ್ದಾರೆ. ಪತ್ರದಲ್ಲಿ ಕರ್ನಾಟಕದ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ರಾಜ್ಯ ಜನತೆಯ ತೀವ್ರ ವಿರೋಧದ ನಡುವೆಯೂ ನವೆಂಬರ್ 10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಟಿಪ್ಪು ಕನ್ನಡ ವಿರೋಧಿ ಮತ್ತು ಹಿಂದೂ ವಿರೋಧಿಯಾಗಿರುವುದು ಇತಿಹಾಸದಿಂದ ತಿಳಿಯುತ್ತದೆ. ಇದಲ್ಲದೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇದರ ವಿರುದ್ಧ ಪ್ರತಿಭಟನೆಗಳು ನಡೆದು ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಒಬ್ಬ ಸಮಾಜಘಾತುಕ ವ್ಯಕ್ತಿಯನ್ನು ವೈಭವೀಕರಿಸಿ ಆತನ ಜಯಂತಿ ಮಾಡ ಹೊರಟಿರುವುದು ನಿಜಕ್ಕೂ ಖಂಡನೀಯ. ಇದನ್ನು ಸಚಿವ ಅನಂತಕುಮಾರ್ ಹೆಗಡೆ ನಿಷ್ಟುರವಾಗಿ ಖಂಡಿಸಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

    ನಿವೃತ್ತ ಐಎಎಸ್ ಅಧಿಕಾರಿ ರತ್ನಾಪ್ರಭಾರಿಗೆ ಪಕ್ಷಕ್ಕೆ ಆಹ್ವಾನಿಸಿದ ಅನಂತಕುಮಾರ್ ಹೆಗಡೆ

    ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾರವರಿಗೆ ಬಿಜೆಪಿಗೆ ಸೇರುವಂತೆ ಟ್ವಿಟ್ಟರ್ ಮೂಲಕ ಕೇಂದ್ರ ಕೌಶಾಲ್ಯಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಆಹ್ವಾನ ನೀಡಿದ್ದಾರೆ.

    ಈ ಕುರಿತು ತಮ್ಮ ಟ್ವಿಟ್ಟರಿನಲ್ಲಿ, ನಿವೃತ್ತ ಐಎಎಸ್ ಅಧಿಕಾರಿಯಾದ ರತ್ನಪ್ರಭಾವರವರು ಬಿಜೆಪಿಗೆ ಸೇರ್ಪಡೆಗೊಳ್ಳುವುದುನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಅಲ್ಲದೇ ಅವರು ಐಎಎಸ್ ಅಧಿಕಾರಿಯಾಗಿದ್ದಾಗ ಮಾಡಿದ ಹಲವು ಕಾರ್ಯಗಳ ಅನುಭವವನ್ನು ರಾಜಕೀಯದಲ್ಲಿ ಮುಂದುವರಿಸಿ, ಜನರ ಏಳಿಗೆಗೆ ದುಡಿಯುವಂತಾಗಬೇಕು ಎಂದು ಬರೆದುಕೊಂಡಿದ್ದಾರೆ.

    ಕಳೆದ ಎರಡು-ಮೂರು ದಿನಗಳಿಂದ ಬಿಜೆಪಿ ವಲಯದಲ್ಲಿ ರತ್ನಪ್ರಭಾ ಹೆಸರು ಭಾರೀ ಕೇಳಿಬರುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಅವರನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಊಹಾಪೋಹಗಳು ಕೇಳಿಬರುತ್ತಿವೆ. ಅಲ್ಲದೇ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ರತ್ನಪ್ರಭಾರವರನ್ನು ಅಭ್ಯರ್ಥಿಯನ್ನಾಗಿ ಮಾಡಿದರೇ, ಎಡ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತ ಮತದಾರರನ್ನು ಸೆಳೆಯಬಹುದು ಎಂಬುದು ಬಿಜೆಪಿಯ ಲೆಕ್ಕಚಾರವಾಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಖರ್ಗೆ ವಿರುದ್ಧ ನಿವೃತ್ತ ಐಎಎಸ್ ಅಧಿಕಾರಿ ರತ್ನಪ್ರಭಾ ಸ್ಪರ್ಧೆ?

    ಕೇಂದ್ರ ಸಚಿವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ಜಾಲತಾಣಿಗರು, ನೀವೊಬ್ಬ ಕೇಂದ್ರ ಸಚಿವರು, ಪಕ್ಷದೊಳಗೆ ಏನು ನಡೆಯುತ್ತಿದೆ ಎಂಬುದು ನಿಮಗಲ್ಲದೇ ಬೇರೆ ಇನ್ನಾರಿಗೆ ತಿಳಿಯುತ್ತದೆ ಎಂದು ಕಿಚಾಯಿಸಿದ್ದಾರೆ. ಅಲ್ಲದೇ ರತ್ನಾಪ್ರಭಾರವರನ್ನು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸುವ ಕುರಿತು ಹಲವರು ತಮ್ಮ ಅಭಿಪ್ರಾಯಗಳನ್ನು ಸಚಿವರಿಗೆ ರೀ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್‍ಗಾಗಿ ಬಿಎಸ್‍ವೈ ಎದುರೇ ಕಿತ್ತಾಡಿಕೊಂಡ ಸ್ಥಳೀಯ ನಾಯಕರು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅನಂತಕುಮಾರ್ ಹೆಗಡೆಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಭೀತಿ!

    ಅನಂತಕುಮಾರ್ ಹೆಗಡೆಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಭೀತಿ!

    ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರಿಗೆ 2019ರ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪುವ ಭೀತಿ ಉಂಟಾಗಿದ್ದು, ತಮ್ಮ ಆತಂಕವನ್ನು ಶುಕ್ರವಾರ ಎಂ.ಕೆ.ಹುಬ್ಬಳ್ಳಿಯಲ್ಲಿ ಹೊರ ಹಾಕಿದ್ದಾರೆ.

    ಕಿತ್ತೂರು ಶಾಸಕ ಮಹಾಂತೇಶ್ ದೊಡ್ಡನಗೌಡರ ಅಭಿನಂದನಾ ಕಾರ್ಯಕ್ರಮದಲ್ಲಿ ಅನಂತಕುಮಾರ್ ಹೆಗಡೆ ಭಾಗಿಯಾಗಿದ್ದರು. ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ನನ್ನ ಯೋಗ್ಯತೆ ನೋಡಿ ಜನರು ವೋಟ್ ಕೊಟ್ಟಿಲ್ಲ. ಬದಲಿಗೆ ಪ್ರೀತಿ, ವಿಶ್ವಾಸದ ಮೇಲೆ ಮತ ಕೊಟ್ಟಿದ್ದಿರಿ. ಪಾರ್ಟಿ ಮೇಲಿನ ಬದ್ಧತೆ ಇಲ್ಲಿಯ ತನಕ ತಂದು ನಿಲ್ಲಿಸಿದೆ. 5 ಭಾರೀ ಎಂಪಿ ಮಾಡಿದ್ದಿರಿ ಇದಕ್ಕಿಂತ ಹೆಚ್ಚೆನು ಬೇಕು. 5 ಬಾರಿ ವೋಟಿನ ಗೌರವ ಕಡಿಮೆ ಆಗದಂತೆ ನೋಡಿಕೊಂಡಿದ್ದೇನೆ ಎಂದರು. ಇದನ್ನೂ ಓದಿ: ಲೋಕಾಸಭಾ ಚುನಾವಣೆ – ಬಿಜೆಪಿಯ ಹಾಲಿ 150 ಎಂಪಿಗಳಿಗೆ ಟಿಕೆಟ್ ಇಲ್ಲ!

    ಮುಂದಿನ ಬಾರಿ ಉತ್ತರ ಕನ್ನಡ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುವುದು ಗೊತ್ತಿಲ್ಲ. ಆದರೆ ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರೂ ಗೆಲ್ಲಬೇಕು. ದೇಶಕ್ಕೆ ಬಿಜೆಪಿ ಅನಿವಾರ್ಯವಾಗಿದೆ ಎಂದು ಅನಂತಕುಮಾರ್ ಹೆಗಡೆ ತಮಗೆ ಟಿಕೆಟ್ ಸಿಗುತ್ತೋ, ಇಲ್ಲವೋ ಎಂಬ ಆತಂಕವನ್ನು ಹೊರಹಾಕಿದರು.

  • ಕುಮಾರಸ್ವಾಮಿ ಅಪ್ರಬುದ್ಧ ಮುಖ್ಯಮಂತ್ರಿ: ಅನಂತಕುಮಾರ್ ಹೆಗಡೆ ವ್ಯಂಗ್ಯ!

    ಕುಮಾರಸ್ವಾಮಿ ಅಪ್ರಬುದ್ಧ ಮುಖ್ಯಮಂತ್ರಿ: ಅನಂತಕುಮಾರ್ ಹೆಗಡೆ ವ್ಯಂಗ್ಯ!

    ಬೆಂಗಳೂರು: ರಾಜ್ಯದ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುತ್ತೇನೆ ಎಂದು ಹೇಳಿಕೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು `ಅಪ್ರಬುದ್ಧ ಮುಖ್ಯಮಂತ್ರಿ’ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗಡೆ ವ್ಯಂಗ್ಯವಾಡಿದ್ದಾರೆ.

    ಮುಖ್ಯಮಂತ್ರಿಗಳ ಹೇಳಿಕೆಗೆ ತಮ್ಮ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿಕಾರ ಸಿಗದ್ದಿದ್ದರೆ ನನಗೆ ಜಾಸ್ತಿ ಆಯುಷ್ಯವಿಲ್ಲ, ಸತ್ತೇ ಹೋಗುತ್ತೇನೆ ಎಂದು ಗೋಳಾಡಿಕೊಂಡ ಅಪ್ರಬುದ್ಧ ಮುಖ್ಯಮಂತ್ರಿಗೆ ಫಿಟ್‍ನೆಸ್ ಸವಾಲ್ ಚಾಲೆಂಜ್ ಅನ್ನು ಪ್ರಧಾನಿಯವರು ಸೂಕ್ತವಾಗಿಯೇ ನೀಡಿರುತ್ತಾರೆ. ದೇಹ ಹಾಗು ಮಾನಸಿಕ ಫಿಟ್‍ನೆಸ್ ಇಲ್ಲದವರು ರಾಜ್ಯದ ಕಾಳಜಿ ಬಗ್ಗೆ ಮಾತನಾಡುವುದು ಶುದ್ಧ ಹಾಸ್ಯಾಸ್ಪದ ಎಂದು ಬರೆದು ಟಾಂಗ್ ನೀಡಿದ್ದಾರೆ.

    ರಾಜ್ಯದ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸುವ ಮುಖ್ಯಮಂತ್ರಿಗಳು, ಬೆಂಗಳೂರಿನ ಗುಂಡಿ ಭಾಗ್ಯ ನೀಡಿದ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ಮಾಡುವ ಸಾಹಸಕ್ಕೆ ಕೈ ಹಾಕುತ್ತೀರಾ? ಎಂದು ಬಿಜೆಪಿಯ ಮಲ್ಲೇಶ್ವರಂ ಶಾಸಕ ಅಶ್ವತ್ ನಾರಾಯಣ್ ರವರು ಮುಖ್ಯಮಂತ್ರಿಗೆ ಹಾಕಿದ್ದ ಟ್ವೀಟ್ ಅನ್ನು ಅನಂತಕುಮಾರ್ ಹೆಗಡೆಯವರು ರೀ ಟ್ವೀಟ್ ಮಾಡಿ ಈ ರೀತಿಯಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಸವಾಲಿಗೆ ಟಾಂಗ್ ನೀಡಿ ಉತ್ತರ ಕೊಟ್ಟ ಎಚ್‍ಡಿಕೆ

    ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಫಿಟ್ ನೆಸ್ ವಿಡಿಯೋವನ್ನು ಟ್ವೀಟ್ ಮಾಡಿ ಕುಮಾರಸ್ವಾಮಿಯವರಿಗೆ ಚಾಲೆಂಜ್ ಹಾಕಿದ್ದರು.

  • ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

    ನಾನು ಮುಸ್ಲಿಂ ದ್ವೇಷಿಯಲ್ಲ, ಕಾಂಗ್ರೆಸ್ಸನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ: ಸಚಿವ ಅನಂತ್ ಕುಮಾರ್ ಹೆಗ್ಡೆ

    ಕಾರವಾರ: ಕಾಂಗ್ರೆಸ್ ಅನ್ನು ಅಟ್ಟಾಡಿಸಿಕೊಂಡು ಬಡಿಯುತ್ತೇವೆ. ಕಾಂಗ್ರೆಸ್ ಇದ್ದರೆ ರೋಗವಿದ್ದಂತೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.

    ಇಂದು ಕಾರವಾರದ ಶೇಜಾವಾಡದ ಸದಾನಂದ ಸಭಾ ಭವನದಲ್ಲಿ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಲ್ಲಿ ನೀವು ಹಿಂದುಳಿದವರು, ದಲಿತರು ಎಂದು ಬೇರ್ಪಡಿಸಿ ಹಿಂದುಳಿದ ರೋಗವನ್ನು ಕೊಟ್ಟವರು ಕಾಂಗ್ರೆಸ್ಸಿನವರು ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಅನ್ನು ಶಾಶ್ವತವಾಗಿ ಮನೆಗೆ ಕಳುಹಿಸಬೇಕು, 70 ವರ್ಷಗಳಿಂದ ಕಾಂಗ್ರೆಸ್ ನಮ್ಮ ಧರ್ಮವನ್ನು ಅವಹೇಳನ ಮಾಡಿದೆ. ನಮ್ಮ ದೇಶಕ್ಕೆ ಸ್ವಾತಂತ್ರ ಬಂದಾಗ ದೇಶದಲ್ಲಿ ನಾಲ್ಕೂ ಐದೋ ಶೇಕಡಾ ಮುಸ್ಲಿಮರಿದ್ದರು. ಆದರೆ ಅನಧಿಕೃತವಾಗಿ 30% ಮುಸ್ಲೀಮರಾಗಿದ್ದಾರೆ. ಎಲ್ಲಿ 30% ಮುಸಲ್ಮಾನರಾಗುತ್ತಾರೋ ಆ ದೇಶ ಮುಸ್ಲಿಂ ರಾಷ್ಟ್ರವಾಗುತ್ತೆ ಇದಕ್ಕೆ ಇತಿಹಾಸ ಸಾಕ್ಷಿ ಎಂದರು.

    ನಾನು ಮುಸ್ಲಿಂ ದ್ವೇಷಿಯಲ್ಲ. ಇನ್ನೂಂದು ಧರ್ಮವನ್ನು ತುಳಿದು ನಾಶಮಾಡಿ ಬದುಕುವ ಸಂಸ್ಕøತಿ ನಮ್ಮದಲ್ಲ. ಆದರೆ ಈ ಕಾಂಗ್ರೇಸ್ ಅಲ್ಪಸಂಖ್ಯಾತರ ತುಷ್ಟೀಕರಣದ ಹೆಸರಿನಲ್ಲಿ ಭಯೋತ್ಪಾದಕರ ಜೊತೆ ರಾಜಿ ಮಾಡಿಕೊಳ್ಳುತ್ತಿದೆ. ದೇಶಭಕ್ತರನ್ನು ಧಮನಿಸುತ್ತಿದೆ. ಯಾರು ಭಯೋತ್ಪಾದಕರು ಕೊಲೆಗಡುಕರು ಇದ್ದಾರೋ ಅವರು ಮುಖ್ಯಮಂತ್ರಿ ಜೊತೆ ಕುಳಿತು ಮೀಟಿಂಗ್ ಮಾಡುತಿದ್ದಾರೆ ಎಂದು ಕಿಡಿಕಾರಿದರು.

  • ಕ್ಲೀನ್ ಆದ ಜಾಗದಲ್ಲಿ ನೆಲಕೆರೆದು ಕ್ಲೀನಿಂಗ್-ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಹೊಸ ಅವತಾರ

    ಕ್ಲೀನ್ ಆದ ಜಾಗದಲ್ಲಿ ನೆಲಕೆರೆದು ಕ್ಲೀನಿಂಗ್-ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರ ಹೊಸ ಅವತಾರ

    ಹುಬ್ಬಳ್ಳಿ: ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ದಿನದ ಆಚರಣೆಯ ಆಸಲಿಯತ್ತು ಬಯಲಾಗಿದೆ. ಪೌರ ಕಾರ್ಮಿಕರಿಂದ ಕ್ಲೀನ್ ಮಾಡಿಸಿ ಅದನ್ನ ಬಿಜೆಪಿ ಸೇವಾ ದಿನ ಅಂತ ಹೇಳಿಕೊಳುತ್ತಿದೆ.

    ಹಳೇ ಹುಬ್ಬಳ್ಳಿಯ ಸದರ್‍ಸುಪಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬಿಜೆಪಿ ಸೇವಾ ದಿನಕ್ಕೆ ಚಾಲನೆ ನೀಡಬೇಕಿತ್ತು. ಆದರೆ ಅದಕ್ಕೂ ಮುಂಚೆ ಸುಮಾರು 20 ಪೌರ ಕಾರ್ಮಿಕರು ಬೆಳಂಬೆಳಗ್ಗೆ ಸ್ವಚ್ಛತೆ ಮಾಡಿದ್ದರು. ನಂತರ 7.45ರ ಸುಮಾರಿಗೆ ಸಚಿವರು ಸ್ಥಳಕ್ಕಾಗಮಿಸಿದ್ದಾರೆ. ಸಚಿವರು ಬರುವ ಮುಂಚೆ ಮಾಧ್ಯಮಗಳನ್ನು ಕಂಡ ಬಿಜೆಪಿ ಕಾರ್ಯಕರ್ತರು ದಿಢೀರ್ ಅಂತ ಸೇವಾ ದಿನದ ಕಾರ್ಯಕ್ರಮದ ಸ್ಥಳವನ್ನು ನಗರದ ಹುಬ್ಬಳ್ಳಿ ಸರ್ಕಾರಿ ಹೆರಿಗೆ ಆಸ್ಪತ್ರೆ ಆವರಣಕ್ಕೆ ಬದಲಾಯಿಸಿದರು.

    ಆಸ್ಪತ್ರೆಯ ಬಳಿ ಬಂದ ಸಚಿವರು ಕೇವಲ ಎರಡು ನಿಮಿಷಗಳಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಇನ್ನೂ ಮೇಲಾಧಿಕಾರಿಗಳ ಆದೇಶದಂತೆ ಕ್ಲೀನ್ ಮಾಡಿದ್ದ ಪೌರಕಾರ್ಮಿಕರಿಗೆ ನಿಮಗೆ ಯಾರು ಇಲ್ಲಿ ಬಂದು ಕ್ಲೀನ್ ಮಾಡಿ ಅಂತ ಹೇಳಿದ್ದು, ಇವತ್ತು ಸ್ವಚ್ಛತೆ ಮಾಡಲು ನಿನಗೆ ಸೂಚನೆ ಕೊಟ್ಟವರ್ಯಾರೆಂದು ಎಂದು ಬಿಜೆಪಿಯ ಪಾಲಿಕೆ ಸದಸ್ಯ ಶಿವುಮೆಣಸಿನಕಾಯಿ ಕಾರ್ಮಿಕರಿಗೆ ಅವಾಜ್ ಹಾಕಿದ್ದಾರೆ.