Tag: ಅನಂತಪದ್ಮನಾಭ ದೇವಾಲಯ

  • ನಾಗರ ಪಂಚಮಿ ಸಂಭ್ರಮ – ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ಭಕ್ತಸಾಗರ

    ನಾಗರ ಪಂಚಮಿ ಸಂಭ್ರಮ – ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ಭಕ್ತಸಾಗರ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಇತಿಹಾಸ ಪ್ರಸಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನ, ಮಂಗಳೂರಿನ ಕುಡುಪು (Kudupu) ಶ್ರೀ ಅನಂತಪದ್ಮನಾಭ ದೇವಸ್ಥಾನ (Ananthapadmanabha Temple) ಸೇರಿದಂತೆ ಸೋಮವಾರ ಎಲ್ಲಾ ನಾಗಾಲಯಗಳಲ್ಲಿ ಶ್ರದ್ಧಾ ಭಕ್ತಿಯ ನಾಗರಪಂಚಮಿಯನ್ನು (Nagara Panchami) ಆಚರಿಸಲಾಯಿತು.

    ತುಳುನಾಡಿನಲ್ಲಿ (Tulu Nadu) ನಾಗರ ಪಂಚಮಿಯ ಸಡಗರ ಸಂಭ್ರಮ ಮನೆ ಮಾಡಿದೆ. ಪರಶುರಾಮನ ಸೃಷ್ಟಿಯಾದ ತುಳುನಾಡಿನಲ್ಲಿ ನಾಗಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಈ ಹಬ್ಬ ಪ್ರಕೃತಿ ಪೂಜೆಯ ಸಂಕೇತವಾಗಿದ್ದು, ಸಂತಾನ ಅಭಿವೃದ್ಧಿ, ಕೌಟುಂಬಿಕ ನೆಮ್ಮದಿಗಾಗಿ ಲಕ್ಷಾಂತರ ಭಕ್ತರು ಪೂಜೆ ಸಲ್ಲಿಸುತ್ತಾರೆ. ಬೃಹತ್ ಮರಗಳ ನಡುವೆ, ದಟ್ಟ ಕಾನನದಲ್ಲಿ ಬನಗಳಲ್ಲಿರುವ ನಾಗರ ಕಲ್ಲಿಗೆ ಪೂಜೆ ಮಾಡುವುದು ತುಳುನಾಡಿನ ಸಂಪ್ರದಾಯ. ಇದನ್ನೂ ಓದಿ: Nagara Panchami: ಕರ್ನಾಟಕದ 10 ಪುಣ್ಯ ನಾಗಕ್ಷೇತ್ರ

    ಹಾಲು ಮತ್ತು ಎಳನೀರಿನ ಅಭಿಷೇಕದ ಮೂಲಕ ತನು ಅರ್ಪಿಸುವುದರಿಂದ ನಾಗಬ್ರಹ್ಮ ತೃಪ್ತನಾಗುತ್ತಾನೆ ಎಂಬುದು ಧಾರ್ಮಿಕ ನಂಬಿಕೆ. ಮಕ್ಕಳಾಗದವರು ವಿಶೇಷವಾಗಿ ಪೂಜೆ ಸಲ್ಲಿಸುತ್ತಾರೆ. ನಾಗ ಪೂಜೆಯಿಂದಾಗಿ ಕುಟುಂಬದ ನೆಮ್ಮದಿ ಮತ್ತು ಐಶ್ವರ್ಯ ವೃದ್ಧಿಯೂ ಆಗುತ್ತದೆ ಎನ್ನುವುದು ನಂಬಿಕೆ. ಇದನ್ನೂ ಓದಿ: ನಾಗರ ಪಂಚಮಿ – ಹಬ್ಬದ ಸಂಭ್ರಮದ ನಡುವೆ ಹೂ, ಹಣ್ಣು ಬೆಲೆ ಏರಿಕೆ ಬಿಸಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಪ್ರವಚನದ ವೇಳೆ ಮೊಸಳೆ ಪ್ರತ್ಯಕ್ಷ

    ಅನಂತಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಪ್ರವಚನದ ವೇಳೆ ಮೊಸಳೆ ಪ್ರತ್ಯಕ್ಷ

    ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಕೇರಳದ ಗಡಿಯಲ್ಲಿರುವ ಕುಂಬಳೆಯ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರವಚನದ ವೇಳೆ ಕ್ಷೇತ್ರದಲ್ಲಿ ವಿರಳವಾಗಿ ಕಂಡು ಬರುವ ಮೊಸಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಅಚ್ಚರಿ ಮೂಡಿಸಿದೆ.

    ಶ್ರೀಮದ್ಭಾಗವತ ಸಪ್ತಾಹ ಯಜ್ಞದ ಅಂಗವಾಗಿ ಮೂರನೇ ದಿನವಾದ ಭಾನುವಾರ ಗಜೇಂದ್ರ ಮೋಕ್ಷದ ಪ್ರವಚನದ ವೇಳೆ ಸರೋವರದ ನೈಋತ್ಯ ಭಾಗದಲ್ಲಿ ಮೊಸಳೆ ಬಾಯ್ತೆರೆದು ನಿಂತಿತ್ತು. ವಿಶೇಷ ಏನೆಂದರೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮೊಸಳೆ ಹಾಗೆ ಇದ್ದಿದ್ದನ್ನು ನೋಡಿ ದೇಗುಲದ ಕಾಯಕರ್ತರು, ಭಕ್ತರು ಅಶ್ಚರ್ಯ ವ್ಯಕ್ತ ಪಡಿಸಿದ್ದಾರೆ.

    ಒಂದು ಗಂಟೆಯ ಬಳಿಕ ಮೊಸಳೆ ಅಲ್ಲಿಂದ ತೆರಳಿ ನೀರಿನ ಮೂಲಕ ಸಾಗಿ ಗುಹೆಯನ್ನು ಸೇರಿಕೊಂಡಿತ್ತು. ಯಜ್ಞಾಚಾರ್ಯ ಬ್ರಹ್ಮಶ್ರೀ ಪೆರಿಗಮನ ಶ್ರೀಧರ್ ನಂಬೂದಿರಿ ಮತ್ತು ವೇದಮೂರ್ತಿ ಕೇಕಣಾಜೆ ಕೇಶವ ಭಟ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

    ಅಚ್ಚರಿ ಯಾಕೆ?
    ಅನಂತಪುರ ಕ್ಷೇತ್ರದಲ್ಲಿರುವ ಈ ಮೊಸಳೆ ಹೆಚ್ಚಿನ ಸಂದರ್ಭದಲ್ಲಿ ದೇವಾಲಯದ ಎಡಬದಿಯಲ್ಲಿರುವ ಗುಹೆಯಲ್ಲಿ ಇರುತ್ತದೆ. ಮಧ್ಯಾಹ್ನ ದೇವಾಲಯದ ನೈವೇದ್ಯವನ್ನು ಇಟ್ಟು ಮೊಸಳೆಯನ್ನು ಕರೆಯಲಾಗುತ್ತದೆ. ಈ ವೇಳೆ ಆಹಾರ ಸ್ವೀಕರಿಸಿ ತೆರಳುವ ಮೊಸಳೆ ಬಳಿಕ ಯಾರಿಗೂ ಕಾಣಿಸುವುದಿಲ್ಲ. ಆದರೆ ಈ ಬಾರಿ ಹಗಲಿನಲ್ಲಿ ಅದರಲ್ಲೂ ಗಜೇಂದ್ರ ಮೋಕ್ಷದ ಪಾರಾಯಣ ನಡೆಯುತ್ತಿರುವ ವೇಳೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಕ್ತರ ಅಚ್ಚರಿಗೆ ಕಾರಣವಾಗಿದೆ.

    ಹೋಗುವುದು ಹೇಗೆ?
    ಮಂಗಳೂರಿನಿಂದ ಸುಮಾರು 39 ಕಿ.ಮೀ ದೂರವಿರುವ ಕುಂಬ್ಳೆಯಿಂದ ಬದಿಯಡ್ಕ ಮಾರ್ಗವಾಗಿ ಸುಮಾರು ನಾಲ್ಕು ಕಿಲೋಮೀಟರ್ ದೂರದಲ್ಲಿ ಅನಂತಪುರ ದೇವಾಲಯವಿದೆ. ತಿರುವಂತಪುರದ ಅನಂತಪದ್ಮನಾಭ ದೇವಳಕ್ಕೆ ಇದು ಮೂಲ ಸ್ಥಾನವೆಂಬುದು ಪುರಾಣ ಕಥೆಗಳಲ್ಲಿ ಕಾಣಬಹುದು. ಮಾತ್ರವಲ್ಲದೆ, ಕೆರೆಯ ಬದಿಯಲ್ಲಿ ಒಂದು ಸುರಂಗ ಮಾರ್ಗವೂ ಇದ್ದು, ಈ ಸುರಂಗದ ಮೂಲಕ ತಿರುವನಂತಪುರದ ದೇವಸ್ಥಾನ ತಲುಪಬಹುದು ಎಂದು ಪ್ರತೀತಿ. ದೇವಸ್ಥಾನದಲ್ಲಿ ಸಾಮಾನ್ಯವಾಗಿ ವಿಗ್ರಹವು ಕಲ್ಲಿನಿಂದಲೋ, ಲೋಹದಿಂದಲೋ ಕೆತ್ತಲ್ಪಟ್ಟಿರುತ್ತದೆ. ಆದರೆ ಇಲ್ಲಿನ ದೇವರ ಮೂರ್ತಿಯು ಸಂಪೂರ್ಣವಾಗಿ ಆಯುರ್ವೇದದ ಗಿಡಮೂಲಿಕೆಗಳಿಂದ, ವಿವಿಧ ದ್ರವ್ಯಗಳ ಲೇಪನದಿಂದ ತಯಾರಿಸಿದ್ದಾಗಿದೆ. ಇದಕ್ಕೆ ‘ಕಡುಶರ್ಕರ ಪಾಕ’ದ ವಿಗ್ರಹ ಎಂದು ಹೆಸರಿದೆ.

    ದೇವರ ಮೊಸಳೆ ಬಬಿಯಾ:
    ಹಲವಾರು ದೇವಸ್ಥಾನಗಳಲ್ಲಿ ದೇವರ ಆನೆ, ಬಸವ ಇತ್ಯಾದಿ ಪ್ರಾಣಿಗಳಿಗಳಿರುತ್ತದೆ. ಆದರೆ ಈ ದೇವಾಲದ ಕೆರೆಯ ನಡುವಿನಲ್ಲಿ ನೆಲೆಸಿರುವ ‘ಅನಂತಪದ್ಮಾನಾಭನಿಗೆ ಮೊಸಳೆ-ಬಬಿಯಾ’ ‘ಕಾವಲು ಕಾಯುವ ಕೆಲಸ’ ಮಾಡುತ್ತದೆ ಎನ್ನುವ ನಂಬಿಕೆ ಇದೆ. ವರ್ಷದ ಎಲ್ಲಾ ದಿನವೂ ಶುದ್ಧ ನೀರಿನಿಂದ ತುಂಬಿರುವ ಈ ಕೆರೆಯಲ್ಲಿ ಈ ಮೊಸಳೆಯೂ ಕೂಡ ಇಲ್ಲೇ ವಾಸವಾಗಿರುತ್ತದೆ. ದೇವರ ನೈವೇಧ್ಯವೇ ಇದಕ್ಕೆ ನಿತ್ಯ ಆಹಾರ. ಬಬಿಯಾ ಈ ಕೆರೆಯಿಂದ ದೇವಾಲಯದಲ್ಲಿರುವ ದೊಡ್ಡ ಕೆರೆಗೆ ಮನುಷ್ಯರು ನಡೆದಾಡುವ ದಾರಿಯಲ್ಲೇ ಸಾಗುತ್ತಾ ಸ್ವಚ್ಚಂದವಾಗಿ ಜೀವನ ನಡೆಸುತ್ತಿದೆ. ಹಾಗೆಂದು ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲವಂತೆ.

    ಈ ದೇವಾಲಯದ ಹತ್ತಿರದಲ್ಲಿ ಶ್ರೀ ಮಹಾಗಣಪತಿಯ ಗುಡಿಯ ಇದೆ. ಅಷ್ಟೇ ಅಲ್ಲದೇ ಪುರಾತನ ಕಾಲದ ತುಳುಶಾಸನ ಇದೆ. ಪ್ರಧಾನ ದೇವಾಲಯದ ಬದಿಯಲ್ಲಿಯೇ ಗೋಶಾಲಕೃಷ್ಣ ದೇವರು, ಸ್ವಲ್ಪ ದೂರದಲ್ಲಿ ರಕ್ತೇಶ್ವರಿ ಗುಡಿಯನ್ನೂ ಕಾಣಬಹುದು. ಹಾಗೆಯೇ ಶ್ರೀ ವನಶಾಸ್ತಾರ ಗುಡಿಯೂ ಇದೆ. ಈ ಗುಡಿ ಬಳಿಯೇ ಇನ್ನೊಂದು ಸಣ್ಣ ಕೆರೆ ಕಾಣಬಹುದು. ದೇವಾಲಯದ ವೆಬ್ ಸೈಟ್: www.ananthapuratemple.com