Tag: ಅನಂತ್ ಅಂಬಾನಿ

  • ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿಯ `ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

    ಪ್ರಾಣಿ ರಕ್ಷಣೆಯಲ್ಲಿನ ಉತ್ಕೃಷ್ಟ ಸೇವೆಗೆ ಅನಂತ್ ಅಂಬಾನಿಯ `ವಂತಾರ’ಗೆ ರಾಷ್ಟ್ರೀಯ ಪ್ರಾಣಿ ಮಿತ್ರ ಪ್ರಶಸ್ತಿ

    ಗಾಂಧೀನಗರ: ಅನಂತ್ ಅಂಬಾನಿ (Anant Ambani) ಅವರ `ವಂತಾರ’ (Vantara) ಸಂಸ್ಥೆಗೆ ಭಾರತ ಸರ್ಕಾರವು `ಕಾರ್ಪೊರೇಟ್’ ವಿಭಾಗದ ಅಡಿಯಲ್ಲಿ ಪ್ರಾಣಿ ರಕ್ಷಣೆಗೆ ದೇಶದ ಅತ್ಯುನ್ನತ ಗೌರವವಾದ ಪ್ರತಿಷ್ಠಿತ `ಪ್ರಾಣಿ ಮಿತ್ರ’ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದೆ.

    ವಂತಾರ ಅಡಿಯಲ್ಲಿ ಆನೆಗಳ ರಕ್ಷಣೆ, ಚಿಕಿತ್ಸೆ ಮತ್ತು ಜೀವಿತಾವಧಿಯ ಆರೈಕೆಗೆ ಮೀಸಲಾಗಿರುವ ರಾಧೆ ಕೃಷ್ಣ ಟೆಂಪಲ್ ಎಲೆಫೆಂಟ್ ವೆಲ್ ಫೇರ್ ಟ್ರಸ್ಟ್ನ ಅಸಾಧಾರಣ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.ಇದನ್ನೂ ಓದಿ: ಕಾರವಾರ| ಪ್ರೀತಿಸಿ ಮದುವೆಯಾಗಿದ್ದ ಮಗಳು-ಅಳಿಯನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ

    ವಂತಾರದ ಅತ್ಯಾಧುನಿಕ ಆನೆ ಆರೈಕೆ ಕೇಂದ್ರದಲ್ಲಿ ರಕ್ಷಿಸಲಾದ 240ಕ್ಕೂ ಹೆಚ್ಚು ಆನೆಗಳಿಗೆ ಸರಪಳಿ-ಮುಕ್ತ, ಸುರಕ್ಷಿತ ಮತ್ತು ಸಮೃದ್ಧ ವಾತಾವರಣವನ್ನು ಒದಗಿಸುತ್ತದೆ. ಇದರಲ್ಲಿ ಸರ್ಕಸ್‌ಗಳಿಂದ 30 ಆನೆಗಳು, ಮರ ಕಡಿಯುವ ಉದ್ಯಮದಿಂದ 100ಕ್ಕೂ ಹೆಚ್ಚು ಆನೆಗಳು, ಸವಾರಿ ಹಾಗೂ ಬೀದಿ ಭಿಕ್ಷಾಟನೆಯಿಂದ ರಕ್ಷಿಸಲಾದ ಇತರ ಆನೆಗಳೂ ಸೇರಿವೆ. ಹಲವು ವರ್ಷಗಳ ಕಾಲ ನಿರ್ಲಕ್ಷ್ಯ ಮತ್ತು ದೌರ್ಜನ್ಯವನ್ನು ಸಹಿಸಿಕೊಂಡಂತಹ ಅನೇಕ ಆನೆಗಳು ಇಲ್ಲಿವೆ. ಆದರೆ ವಂತಾರದಲ್ಲಿ ಅವುಗಳಿಗೆ ವಿಶ್ವ ದರ್ಜೆಯ ಪಶುವೈದ್ಯಕೀಯ ಚಿಕಿತ್ಸೆ ಮತ್ತು ಸಹಾನುಭೂತಿಯ ಆರೈಕೆ ಸಿಗುತ್ತದೆ.

    998 ಎಕರೆಗಳಷ್ಟು ವಿಶೇಷವಾಗಿ ರೂಪಿಸಲಾದ ಕಾಡಿನಲ್ಲಿ ಮುಕ್ತವಾಗಿ ಸುತ್ತಾಡಲು, ಸಾಮಾಜಿಕವಾಗಿ ಮತ್ತು ನೈಸರ್ಗಿಕ ನಡವಳಿಕೆಗಳಲ್ಲಿ ತೊಡಗಿಸಿಕೊಳ್ಳಲು ಈ ಕೇಂದ್ರದಲ್ಲಿ ಆನೆಗಳಿಗೆ ಅನುವು ಮಾಡಿಕೊಡುತ್ತದೆ. ಅಲ್ಲಿ ಅವು ಮೇವು ಹುಡುಕಿಕೊಳ್ಳಬಹುದು, ಮಣ್ಣು ಮತ್ತು ಧೂಳಿನ ಸ್ನಾನ ಮಾಡಬಹುದು ಹಾಗೂ ನೈಸರ್ಗಿಕ ಕೊಳಗಳಲ್ಲಿಯೂ ಸ್ನಾನ ಮಾಡಬಹುದು.

    ನವದೆಹಲಿಯ ವಿಜ್ಞಾನ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಭಾರತ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ವಂತಾರದ ಸಿಇಒ ವಿವಾನ್ ಕರಣಿ ಅವರು ಈ ಗೌರವವನ್ನು ಸ್ವೀಕರಿಸಿದರು.

    ಗೌರವ ಸ್ವೀಕರಿಸಿ ಮಾತನಾಡಿದ ಅವರು, ಈ ಪ್ರಶಸ್ತಿಯು ಭಾರತದ ಪ್ರಾಣಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ನೋಡಿಕೊಳ್ಳಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಅಸಂಖ್ಯಾತ ವ್ಯಕ್ತಿಗಳಿಗೆ ಗೌರವವಾಗಿದೆ. ವಂತಾರದಲ್ಲಿ ಪ್ರಾಣಿಗಳಿಗೆ ಸೇವೆ ಸಲ್ಲಿಸುವುದು ಕೇವಲ ಕರ್ತವ್ಯವಲ್ಲ – ಇದು ನಮ್ಮ ಧರ್ಮ ಮತ್ತು ಸೇವೆ, ಸಹಾನುಭೂತಿ ಮತ್ತು ಜವಾಬ್ದಾರಿಯಲ್ಲಿ ಆಳವಾಗಿ ಬೇರೂರಿರುವಂಥ ಬದ್ಧತೆಯಾಗಿದೆ. ಪ್ರಾಣಿ ರಕ್ಷಣೆಯ ಮಾನದಂಡಗಳನ್ನು ಹೆಚ್ಚಿಸುವ, ಪರಿಣಾಮಕಾರಿ ಉಪಕ್ರಮಗಳನ್ನು ನಡೆಸುವ ಮತ್ತು ಮುಂದಿನ ಪೀಳಿಗೆಗೆ ಭಾರತದ ಶ್ರೀಮಂತ ಜೀವವೈವಿಧ್ಯತೆಯನ್ನು ರಕ್ಷಿಸುವ ನಮ್ಮ ಧ್ಯೇಯದಲ್ಲಿ ನಾವು ಸದಾ ತೊಡಗಿಸಿಕೊಂಡಿದ್ದೇವೆ ಎಂದರು.

    ಕಳೆದ ಐದು ವರ್ಷಗಳಿಂದ ಪ್ರಾಣಿಗಳ ಕಲ್ಯಾಣಕ್ಕೆ ನೀಡಿದ ನಿರಂತರ ಕೊಡುಗೆಗಾಗಿ ನಿಗಮಗಳು, ಸಾರ್ವಜನಿಕ ಉದ್ದಿಮೆಗಳು, ಸರ್ಕಾರಿ ಸಂಸ್ಥೆಗಳು ಮತ್ತು ಸಹಕಾರಿ ಸಂಸ್ಥೆಗಳಿಗೆ ಕಾರ್ಪೊರೇಟ್ ವಿಭಾಗದಲ್ಲಿ ಪ್ರಾಣಿ ಮಿತ್ರ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದರಲ್ಲಿ ಪ್ರಾಣಿ ಕಲ್ಯಾಣ ಉಪಕ್ರಮಗಳಿಗೆ ಮೀಸಲಾಗಿರುವ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯೂ ಸೇರಿದೆ.ಇದನ್ನೂ ಓದಿ: ಉಂಡ ಮನೆಗೆ ಕನ್ನ – ಪರಿಚಯಸ್ಥ ಮಹಿಳೆಯಿಂದಲೇ ವೃದ್ಧೆ ಮನೆಯಲ್ಲಿ ಚಿನ್ನ ಕಳವು

     

  • ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ

    ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ

    ಅಂಬಾನಿ ಪುತ್ರ ಅನಂತ್ (Anant Ambani) ಮತ್ತು ರಾಧಿಕಾ ಮರ್ಚೆಂಟ್ (Radhika Merchant) ಮದುವೆ ಅದ್ಧೂರಿಯಾಗಿ ನೆರವೇರಿದೆ. ಮದುವೆಗೆ ಸಂಬಂಧಿಸಿದ ವಿಡಿಯೋಗಳು, ಗೆಸ್ಟ್ ಲಿಸ್ಟ್, ಅದ್ಧೂರಿತನ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಮಗನ ಮದುವೆ ಬೆನ್ನಲ್ಲೇ ನೀತಾ ಅಂಬಾನಿ ಮಾಧ್ಯಮಕ್ಕೆ ಕ್ಷಮೆಯಾಚಿಸಿದ್ದಾರೆ. ಇದನ್ನೂ ಓದಿ:‘ಬ್ಯಾಚುಲರ್ ಪಾರ್ಟಿ’ ಕಾಪಿರೈಟ್ ಉಲ್ಲಂಘನೆ ಕೇಸ್ – ನೋಟಿಸ್ ನೀಡಿರೋದಾಗಿ ಡಿಸಿಪಿ ಸ್ಪಷ್ಟನೆ

    ಮದುವೆ ಬಂದು ಹಾರೈಸಿದಕ್ಕೆ, ತುಂಬಾ ತಾಳ್ಮೆಯಿಂದ ಕಾರ್ಯಕ್ರಮಕ್ಕೆ ಹಾಜರಿ ಹಾಕಿರುವುದಕ್ಕೆ ಧನ್ಯವಾದ ಎಂದಿದ್ದಾರೆ. ಈ ಮದುವೆ ಸಂದರ್ಭದಲ್ಲಿ ಏನಾದರೂ, ಯಾರಿಗಾದರೂ ಕಷ್ಟ ಆಗಿದ್ದರೆ ಕ್ಷಮೆ ಕೋರುತ್ತೇನೆ. ಇದು ಮದುವೆ ಮನೆ, ಏನಾದರೂ ತೊಂದರೆ ಆಗಿರಬಹುದು. ಹೀಗೆ ಏನಾದರೂ ಆಗಿದ್ರೆ ಕ್ಷಮಿಸಿಬಿಡಿ ಎಂದು ನೀತಾ ಅಂಬಾನಿ ಹೇಳಿದ್ದಾರೆ. ಈಗಾಗಲೇ ನೀವು ಮದುವೆಗೆ ಬಂದು ಕಳೆ ಹೆಚ್ಚಿಸಿದ್ದೀರಿ. ವಿವಾಹೋತ್ತರ ಕಾರ್ಯಕ್ರಮಗಳು ಇನ್ನೂ ಜಾರಿಯಲ್ಲಿದೆ. ಅವುಗಳಿಗೂ ನೀವು ಬಂದು ಶುಭಹಾರೈಸಬೇಕು ಎಂದು ನೀತಾ ಅಂಬಾನಿ (Nita Ambani) ಹೇಳಿದ್ದಾರೆ. ಇದನ್ನೂ ಓದಿ:ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

    ಅಂದಹಾಗೆ, ಹಲವು ವರ್ಷಗಳ ಪ್ರೀತಿಗೆ ಅನಂತ್ ಮತ್ತು ರಾಧಿಕಾ ಜು.12ರಂದು ಮದುವೆಯ ಮುದ್ರೆ ಒತ್ತಿದ್ದಾರೆ. ಈ ವಿವಾಹದಲ್ಲಿ ಯಶ್ ದಂಪತಿ, ರಶ್ಮಿಕಾ ಮಂದಣ್ಣ, ದೀಪಿಕಾ ಪಡುಕೋಣೆ ದಂಪತಿ, ರಜನಿಕಾಂತ್, ಬಿಗ್ ಬಿ ಫ್ಯಾಮಿಲಿ, ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

  • AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌!

    AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌!

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ಅದ್ಧೂರಿ ವಿವಾಹ ಮಹೋತ್ಸವ ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.

    ಮುಂಬೈನ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ʻಶುಭ ಆಶೀರ್ವಾದʼ ಕಾರ್ಯಕ್ರಮ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯಿಲ್ಲದೇ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದು, ಕೇಸ್‌ ದಾಖಲಿಸಿದ್ದಾರೆ. ಇದನ್ನೂ ಓದಿ: ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಆಹ್ವಾನವಿಲ್ಲದೇ ಪ್ರವೇಶಿಸಿದ್ದ ಆಂಧ್ರಪ್ರದೇಶ ಮೂಲದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬರು ಯೂಟ್ಯೂಬರ್ ವೆಂಕಟೇಶ್ ನರಸಯ್ಯ ಅಲ್ಲೂರಿ (26), ಮತ್ತೊಬ್ಬ ವ್ಯಕ್ತಿ ಲುಕ್ಮಾನ್ ಮೊಹಮ್ಮದ್ ಶಫಿ ಶೇಖ್ (28) ಎಂದು ಗುರುತಿಸಲಾಗಿದೆ. ಶಫಿ ತನ್ನನ್ನು ಉದ್ಯಮಿ ಅಂತ ಹೇಳಿಕೊಂಡು ಜಿಯೋ ವರ್ಲ್ಡ್‌ ಸೆಂಟರ್‌ಗೆ ಪ್ರವೇಶಿಸಿದ್ದ. ಕೂಡಲೇ ಇಬ್ಬರನ್ನು ವಶಕ್ಕೆ ಪಡೆದ ಮುಂಬೈನ ಬಿಕೆಸಿ ಪೊಲೀಸರು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: 4 ವರ್ಷಗಳಲ್ಲಿ 8 ಕೋಟಿ ಉದ್ಯೋಗ ಸೃಷ್ಟಿ – ಲೆಕ್ಕಕೊಟ್ಟ ಮೋದಿ ವಿರುದ್ಧ ಖರ್ಗೆ ಕಿಡಿ!

    ನವದಂಪತಿಗೆ ನಮೋ ಆಶೀರ್ವಾದ:
    ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ (Shubh Ashirwad Ceremony) ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಭಾಗಿಯಾಗಿ ನವದಂಪತಿಗಳಿಗೆ ಆಶೀರ್ವದಿಸಿದರು. ಇದನ್ನೂ ಓದಿ: ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ರಾಜಕೀಯ ನಾಯಕರ ದಂಡು:
    ಅನಂತ್-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: 

  • AR Wedding: ಪುಷ್ಪರಾಜ್ ಸ್ಟೈಲಿನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ

    AR Wedding: ಪುಷ್ಪರಾಜ್ ಸ್ಟೈಲಿನಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಅಂಬಾನಿ ಮನೆ ಮಗನ ಮದುವೆಯಲ್ಲಿ ಪುಷ್ಪರಾಜ್ ಸ್ಟೈಲಿನಲ್ಲಿ ಮಿಂಚಿದ್ದಾರೆ. ನಗು ನಗುತ್ತಲೇ ರೆಡ್ ಕಾರ್ಪೆಟ್‌ಗೆ ಶ್ರೀವಲ್ಲಿ ಎಂಟ್ರಿ ಕೊಟ್ಟಿದ್ದಾರೆ. ನಟಿಯ ಸುಂದರ ಫೋಟೋಗಳು ಇದೀಗ ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಅನಂತ್ (Anant Ambani) ಮತ್ತು ರಾಧಿಕಾ ಮದುವೆ ಜು.12ರಂದು ಅದ್ಧೂರಿಯಾಗಿ ನಡೆದಿದೆ. ಬಳಿಕ ಜು.13ರಂದು ಸಂಜೆ ನಡೆದ ಶುಭ ಅಶೀರ್ವಾದ್ ಕಾರ್ಯಕ್ರಮದಲ್ಲಿ ಬಾಲಿವುಡ್ ತಾರೆಯರ ದಂಡೇ ಭಾಗಿಯಾಗಿದೆ. ಇದರಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಹಾಜರಿ ಹಾಕಿದ್ದಾರೆ.

    ಈ ಕಾರ್ಯಕ್ರಮದ ರೆಡ್ ಕಾರ್ಪೆಟ್‌ನಲ್ಲಿ ನೀಲಿ ಬಣ್ಣದ ಸೀರೆಯುಟ್ಟು ರಶ್ಮಿಕಾ ಕಂಗೊಳಿಸಿದ್ದಾರೆ. ಪಾಪರಾಜಿಗಳ ಮನವಿ ಮೇರೆಗೆ ಪುಷ್ಪರಾಜ್ ಸ್ಟೈಲ್ ಮಾಡಿ ಮುದ್ದಾದ ನಗು ಬೀರಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ಇದನ್ನೂ ಓದಿ:ಕಾಲಿಗೆ ನಮಸ್ಕರಿಸಲು ಬಂದ ತಲೈವಾಗೆ ಅಮಿತಾಭ್ ಪ್ರತಿಕ್ರಿಯಿಸಿದ್ದು ಹೇಗೆ ಗೊತ್ತಾ?

    ಅಂದಹಾಗೆ, ಪುಷ್ಪ 2 (Pushpa 2), ಅನಿಮಲ್ ಪಾರ್ಕ್, ಕುಬೇರ, ರೈನ್‌ಬೋ, ದಿ ಗರ್ಲ್‌ಫ್ರೆಂಡ್, ಸಿಖಂದರ್ ಸಿನಿಮಾ ಸೇರಿದಂತೆ ಹಲವು ಚಿತ್ರಗಳು ರಶ್ಮಿಕಾ ಮಂದಣ್ಣ ಕೈಯಲ್ಲಿವೆ.

  • ಮದುವೆಗೆ ಬಂದಿದ್ದ ಸ್ಟಾರ್ಸ್‌ಗೆ 2 ಕೋಟಿ ಮೌಲ್ಯದ ವಾಚ್ ಗಿಫ್ಟ್ ಮಾಡಿದ ಅಂಬಾನಿ

    ಮದುವೆಗೆ ಬಂದಿದ್ದ ಸ್ಟಾರ್ಸ್‌ಗೆ 2 ಕೋಟಿ ಮೌಲ್ಯದ ವಾಚ್ ಗಿಫ್ಟ್ ಮಾಡಿದ ಅಂಬಾನಿ

    ಅಂಬಾನಿ ಮನೆ ಮಗನ ಮದುವೆ ಅದ್ಧೂರಿಯಾಗಿ ಜು.12ರಂದು ನಡೆದಿದೆ. ಸಂಭ್ರಮದಿಂದ ಅನಂತ್ (Anant Ambani) ಮತ್ತು ರಾಧಿಕಾ (Radhika Merchant) ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ದಂಡೇ ಹಾಜರಿ ಹಾಕಿದೆ. ಅನಂತ್‌ ಮದುವೆಗೆ ಬಂದ ಸ್ಟಾರ್ಸ್‌ಗೆ ಅಂಬಾನಿ ದುಬಾರಿ ವಾಚ್ ಅನ್ನು ರಿಟರ್ನ್ ಗಿಫ್ಟ್ ಮಾಡಿದ್ದಾರೆ.

    ಮದುವೆಗೆ ಬಂದವರು ನವಜೋಡಿಗೆ ಉಡುಗೊರೆ ಕೊಡುವುದು ಪದ್ಧತಿ. ಆದರೆ ತಮ್ಮ ಮನೆಯ ಮದುವೆಗೆ ಅತಿಥಿಗಳಾಗಿ ಬಂದಿದ್ದ ಸಿನಿಮಾ ತಾರೆಯರಿಗೆ ದುಬಾರಿ ಉಡುಗೊರೆ ಕೊಟ್ಟು ಕಳುಹಿಸಿದ್ದಾರೆ ಅಂಬಾನಿ ಕುಟುಂಬಸ್ಥರು. ಇದು ಈಗ ನೆಟ್ಟಿಗರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ಅನಂತ್‌ ಅಂಬಾನಿ ಮದುವೆಯಲ್ಲಿ 160 ವರ್ಷದ ಹಿಂದಿನ ಸೀರೆಯುಟ್ಟು ಕಂಗೊಳಿಸಿದ ಆಲಿಯಾ ಭಟ್

     

    View this post on Instagram

     

    A post shared by dia (@ltwt2497)


    ಈ ವಿವಾಹದಲ್ಲಿ ಭಾಗಿಯಾದ ಸಿನಿಮಾ ಮಂದಿಗೆ ಅನಂತ್ ಅಂಬಾನಿ ಐಷಾರಾಮಿ ವಾಚ್‌ಗಳನ್ನು ನೀಡಿದ್ದಾರೆ. ಬಾಲಿವುಡ್ ನಟರಾದ ಶಾರುಖ್ ಖಾನ್ (Sharukh Khan) ಮತ್ತು ರಣವೀರ್ ಸಿಂಗ್‌ಗೆ (Ranveer Singh) ಸೇರಿದಂತೆ ಅನೇಕರಿಗೆ ಈ ದುಬಾರಿ ವಾಚ್‌ಗಳು ಸಿಕ್ಕಿದೆ. ಈ ವಾಚ್‌ಗಳು ತಲಾ 2 ಕೋಟಿ ರೂ. ಮೌಲ್ಯದ್ದಾಗಿದೆ.

    ಅಂಬಾನಿಯಿಂದ ಉಡುಗೊರೆಯಾಗಿ ಪಡೆದ ವಾಚ್‌ಗಳು ಆಡೆಮರ್ಸ್ ಪಿಗುಯೆಟ್ ಕಂಪನಿಯದ್ದಾಗಿದೆ. 9.5 ಮಿಮೀ ದಪ್ಪವಿರುವ ಕೈಗಡಿಯಾರ ಇದಾಗಿದೆ. 41 ಎಂಎಂ 18 ಕ್ಯಾರಟ್‌ನ ಚಿನ್ನದ ವಾಚ್‌ಗಳಾಗಿವೆ. ವಾಚ್‌ನಲ್ಲಿ ವಾರ, ದಿನ, ದಿನಾಂಕ ಇನ್ನೀತರ ಮಾಹಿತಿಯನ್ನು ನೀಡುತ್ತದೆ.

  • ಅನಂತ್‌ ಅಂಬಾನಿ ಮದುವೆಯಲ್ಲಿ 160 ವರ್ಷದ ಹಿಂದಿನ ಸೀರೆಯುಟ್ಟು ಕಂಗೊಳಿಸಿದ ಆಲಿಯಾ ಭಟ್

    ಅನಂತ್‌ ಅಂಬಾನಿ ಮದುವೆಯಲ್ಲಿ 160 ವರ್ಷದ ಹಿಂದಿನ ಸೀರೆಯುಟ್ಟು ಕಂಗೊಳಿಸಿದ ಆಲಿಯಾ ಭಟ್

    ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚೆಂಟ್ ಜು.12ರಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಬಾಲಿವುಡ್ ನಟ, ನಟಿಯರು ಭಾಗಿಯಾಗಿದ್ದಾರೆ. ಇದರ ನಡುವೆ ಈಗ 160 ವರ್ಷದ ಹಿಂದಿನ ಸೀರೆಯುಟ್ಟು ಮಿಂಚಿದ ಆಲಿಯಾ ಭಟ್ (Alia Bhatt) ಲುಕ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಅನಂತ್, ರಾಧಿಕಾ ಮದುವೆಗೆ ಯಶ್ (Yash) ಮತ್ತು ರಾಧಿಕಾ ಪಂಡಿತ್, ರಶ್ಮಿಕಾ ಮಂದಣ್ಣ (Rashmika Mandanna), ದೀಪಿಕಾ ಪಡುಕೋಣೆ, ಶಾರುಖ್, ಸಲ್ಮಾನ್ ಖಾನ್, ಬಿಗ್ ಬಿ ಫ್ಯಾಮಿಲಿ ಸೇರಿದಂತೆ ಹೀಗೆ ಅನೇಕರು ಭಾಗಿಯಾಗಿ ಸಂಭ್ರಮಿಸಿದ್ದರು. ಆಲಿಯಾ ಮತ್ತು ರಣ್‌ಬೀರ್ ಕಪೂರ್ ದಂಪತಿ ಕೂಡ ಮದುವೆಯಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದರು. ಇದನ್ನೂ ಓದಿ:‘ನೈಸ್ ರೋಡ್’ನಲ್ಲಿ ಕಾಣಿಸಿಕೊಂಡ ಧರ್ಮ : ಟ್ರೈಲರ್ ರಿಲೀಸ್

    ಇನ್ನೂ ಮದುವೆಯಲ್ಲಿ ಆಲಿಯಾ ಭಟ್, 160 ವರ್ಷದ ಹಳೆಯ ಆಶಾವಲಿ ಸೀರೆಯನ್ನು ಧರಿಸಿ ಮಿಂಚಿದ್ದು ಎಲ್ಲರ ಗಮನ ಸೆಳೆದಿದೆ. ನಟಿ ಧರಿಸಿದ ಪಿಂಕ್ ಸೀರೆಯನ್ನು ಗುಜರಾತ್‌ನಲ್ಲಿ ತಯಾರಿಸಲಾಗಿದೆ. ಶುದ್ಧ ರೇಷ್ಮೆ, ಝರಿಯನ್ನು ಬಳಸಿದ್ದಾರೆ. ಜೊತೆಗೆ 6 ಗ್ರಾಂ ಶುದ್ಧ ಚಿನ್ನವನ್ನು ಹಾಕಿ ಸೀರೆಯನ್ನು ತಯಾರಿಸಲಾಗಿದೆ.

    ಶುದ್ಧ ರೇಷ್ಮೆ ಮತ್ತು 99%ರಷ್ಟು ಶುದ್ಧ ಬೆಳ್ಳಿಯಿಂದ ಮಾಡಿದ ಝರಿ ಬಾರ್ಡರ್ ಕೂಡ ಇದು ಹೊಂದಿದೆ. ಗುಜರಾತ್‌ನಲ್ಲಿ ತಯಾರಿಸಿದ ಈ ಸೀರೆಗೆ ಖ್ಯಾತ ಫ್ಯಾಷನ್ ಡಿಸೈನರ್ ಮನೀಷ್ ಮಲ್ಹೋತ್ರಾ ಹೊಸದಾಗಿ ಡಿಸೈನ್ ಮಾಡಿದ್ದಾರೆ. ಈ ಸೀರೆಯ ಬೆಲೆ 2 ಕೋಟಿ ರೂ. ಮೌಲ್ಯದಾಗಿದೆ. ಸದ್ಯ ಆಲಿಯಾ ಭಟ್ ಲುಕ್ ಮತ್ತು ಸೀರೆಯ ಬೆಲೆ ಕೇಳಿ ಫ್ಯಾನ್ಸ್ ದಂಗಾಗಿದ್ದಾರೆ.

  • ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚೆಂಟ್‌ (Radhika Merchant) ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಪಾಲ್ಗೊಂಡರು.

    ವಿವಾಹಮಹೋತ್ಸವದ ಭಾಗವಾಗಿ ಶನಿವಾರ ನಡೆದ ʻಶುಭ ಆಶೀರ್ವಾದʼ ಕಾರ್ಯಕ್ರಮದಲ್ಲಿ (Shubh Ashirwad Ceremony) ದೇಶ-ವಿದೇಶಗಳ ಗಣ್ಯರು, ಸೆಲೆಬ್ರಿಟಿಗಳು, ರಾಜಕಾರಣಿಗಳು ಪಾಲ್ಗೊಂಡಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗೆ ಆಶೀರ್ವದಿಸಿದರು. ಇದನ್ನೂ ಓದಿ: ಇನ್ನು ಮುಂದೆ ಕ್ರೆಡಿಟ್‌ ಕಾರ್ಡ್‌ನಂತೆ ಯುಪಿಐ ಬಳಸಬಹುದು – ಇದು ಹೇಗೆ ಕೆಲಸ ಮಾಡುತ್ತೆ?

    ಎಸ್‌ಪಿಜಿ ಭದ್ರತೆಯೊಂದಿಗೆ ಮೋದಿ ಅವರು ಮುಂಬೈನ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ಗೆ ಆಗಮಿಸುತ್ತಲೇ ಮುಕೇಶ್‌ ಅಂಬಾನಿ ಹಾಗೂ ನೀತಾ ಅಂಬಾನಿ ಸ್ವಾಗತ ಕೋರಿದರು, ಬಳಿಕ ಮೋದಿ ಅವರ ಕಾಲಿಗೆ ನಮಸ್ಕರಿಸಿದರು. ಇದಾದ ಬಳಿಕ ಅಂಬಾನಿ ಕುಟುಂಬವನ್ನು ಭೇಟಿಯಾದ ಮೋದಿ, ಮುಕೇಶ್‌ ಅಂಬಾನಿ ಪಕ್ಕದಲ್ಲೇ ಕುಳಿತು ಕಾರ್ಯಕ್ರಮ ವೀಕ್ಷಿಸಿದರು. ಕೆಲಕಾಲ ಸಂಗೀತ ಆಲಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸುಮಾರು 29 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಲು ಮುಂಬೈಗೆ ತೆರಳಿದ್ದರು. ಈ ವೇಳೆ ಅನಂತ್‌-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ ಭಾಗವಾಗಿ ನಡೆದ ಶುಭ ಆಶೀರ್ವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಇತರ ಗಣ್ಯರನ್ನೂ ಮೋದಿ ಭೇಟಿಯಾದರು. ಇದನ್ನೂ ಓದಿ: Assembly Bypolls: 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟ ಜಯಭೇರಿ – 2ರಲ್ಲಿ ಬಿಜೆಪಿ ಗೆಲುವು!

    ರಾಜಕೀಯ ನಾಯಕರ ದಂಡು:
    ಅನಂತ್-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

    ಕಾಂಗ್ರೆಸ್ ನಾಯಕರೂ ಭಾಗಿ:
    ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಕಾಂಗ್ರೆಸ್ ಪಕ್ಷದ ಅನೇಕ ನಾಯಕರೂ ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಂಡು ನವದಂಪತಿಗಳಿಗೆ ಆಶೀರ್ವದಿಸಿದ್ದಾರೆ. ಇದನ್ನೂ ಓದಿ: ಗ್ರಾಮೀಣ ಭಾಗಗಳಲ್ಲಿ ಟೆಲಿಕಾಂ ಸಂಪರ್ಕ ಸುಧಾರಣೆಗೆ ‘ಡಿಜಿಟಲ್‌ ಭಾರತ್‌ ನಿಧಿ’ – ಏನಿದು ಯೋಜನೆ? 

  • ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ದೀದಿ – ಹರಿದು ಬಂತು ರಾಜಕೀಯ ನಾಯಕರ ದಂಡು!

    ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್‌ ಅಂಬಾನಿ ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ (Anant Ambani – Radhika Merchant) ಅವರ ಪುತ್ರಿ ರಾಧಿಕಾ ಮರ್ಚೆಂಟ್‌ ಅವರ ಅದ್ಧೂರಿ ವಿವಾಹ ಮಹೋತ್ಸವಕ್ಕೆ ರಾಜಕೀಯ ನಾಯಕರ ದಂಡೇ ಹರಿದು ಬಂದಿದೆ.

    ದೇಶ-ವಿದೇಶಗಳಿಂದ ಬಂದಿದ್ದ ಸಾವಿರಾರು ಗಣ್ಯರು ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಶನಿವಾರವಾರ ಇಂದು ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ರಾಜಕೀಯ ನಾಯಕರು ಭಾಗಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವಜೋಡಿಗಳಿಗೆ ಆಶೀರ್ವದಿಸಿದ್ದಾರೆ. ಈ ಪೈಕಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರೂ ಸಹ ಅನಂತ್‌ ಅಂಬಾನಿ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

    ಅನಂತ್‌ ಮದುವೆಯಲ್ಲಿ ರಾಜಕೀಯ ನಾಯಕರ ದಂಡು:
    ಅನಂತ್‌-ರಾಧಿಕಾ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಸಿಎಂ ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav), ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಯಾದವ್, ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಮತ್ತು ಆರ್‌ಪಿಐ ನಾಯಕ ರಾಮದಾಸ್ ಅಠಾವಳೆ, ಮಾಜಿ ಸಿಎಂ ಉದ್ಧವ್ ಠಾಕ್ರೆ, ಎನ್‌ಸಿಪಿ ಹಿರಿಯ ನಾಯಕಿ ಸುಪ್ರಿಯಾ ಸುಳೆ ಸಹ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

    ಕಾಂಗ್ರೆಸ್‌ ನಾಯಕರೂ ಭಾಗಿ:
    ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಕಾಂಗ್ರೆಸ್‌ ಪಕ್ಷದ ಅನೇಕ ನಾಯಕರೂ ಪಾಲ್ಗೊಂಡಿದ್ದಾರೆ. ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್, ಆನಂದ್ ಶರ್ಮಾ, ಅಜಯ್ ಮಾಕನ್, ಸಲ್ಮಾನ್ ಖುರ್ಷಿದ್, ಅಭಿಷೇಕ್ ಮನು ಸಿಂಘ್ವಿ ಮತ್ತು ರಾಜೀವ್ ಶುಕ್ಲಾ ಸೇರಿದಂತೆ ಅನೇಕ ಹಿರಿಯ ನಾಯಕರು ಪಾಲ್ಗೊಂಡು ನವದಂಪತಿಗಳಿಗೆ ಆಶೀರ್ವದಿಸಿದ್ದಾರೆ.

  • AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!

    AR Wedding Celebrations Photo Gallery: ಅನಂತ್‌ ಅಂಬಾನಿ – ರಾಧಿಕಾ ಮರ್ಚೆಂಟ್‌ ವಿವಾಹಮಹೋತ್ಸವದಲ್ಲಿ ತಾರೆಗಳ ದಂಡು!

    ರಿಲಯನ್ಸ್‌ ಇಂಡಸ್ಟ್ರೀಸ್‌ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರ ಕಿರಿಯ ಪುತ್ರ ಅನಂತ್‌ ಅಂಬಾನಿ‌ (Anant Ambani) ಹಾಗೂ ಕೈಗಾರಿಕೋದ್ಯಮಿ ವೀರೇನ್ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚೆಂಟ್‌ (RadhikaMerchant) ಅವರ ವಿವಾಹ ಮಹೋತ್ಸವ ವೈಭವೋಪೇತವಾಗಿ ನೆರವೇರಿದೆ. ಜುಲೈ 12ರಂದು ವಿವಾಹಮಹೋತ್ಸವ ನೆರವೇರಿದ್ದರೂ ಜು.13, 14ರಂದು ರಿಸೆಪ್ಷನ್ ಮಾದರಿಯ ಎರಡು ಸಮಾರಂಭ ಜರುಗಲಿದೆ. ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುತ್ತಿರುವ ಈ ಅದ್ಧೂರಿ ವಿವಾಹ ಮಹೋತ್ಸವಕ್ಕೆ ದೇಶ-ವಿದೇಶಗಳಿಂದ ನೂರಾರು ಗಣ್ಯರು ಆಗಮಿಸಿದ್ದಾರೆ. ಅನಂತ್-ರಾಧಿಕಾ ಮದುವೆಗೆ ಯಾರೆಲ್ಲ ಆಗಮಿಸಿದ್ದಾರೆ? ಎಂಬುದನ್ನಿಲ್ಲಿ ನೋಡಿ….

    ಎಂ.ಎಸ್‌ ಧೋನಿ ಅವರೊಂದಿಗೆ ಪತ್ನಿ ಸಾಕ್ಷಿ ಧೋನಿ ಮತ್ತು ಮಗಳು ಝಿವಾ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಅನನ್ಯಾ ಪಾಂಡೆ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಹಾಟ್‌ ಆಗಿ ಕಾಣಿಸಿಕೊಂಡ ದಿಶಾ ಪಠಾಣಿ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವ – ಕ್ರೇಜಿ ಲುಕ್‌ನಲ್ಲಿ ಅರ್ಜುನ್‌ ಕಪೂರ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖ್ಯಾತ ಗಾಯಕ ಶಂಕರ್‌ ಮಹಾದೇವನ್‌ – ಪತ್ನಿ ಸಂಗೀತಾ ಮಹಾದೇವನ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ರಾಣಾ ದಗ್ಗುಬಾಟಿ – ಮಿಹೀಕಾ ದಗ್ಗುಬಾಟಿ ದಂಪತಿ

    ಅಂಬಾನಿ ಪುತ್ರನ ಮದುವೆ ಸಮಾರಂಭದಲ್ಲಿ ಫಿಫಾ ಅಧ್ಯಕ್ಷ ಗಿಯಾನಿ ಇನ್ಫಾಂಟಿನೊ ಹಾಗೂ ಪತ್ನಿ ಲೀನಾ ಅಲ್ ಅಶ್ಕರ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಹೇಶ್‌ ಬಾಬು ಜೊತೆಗೆ ಪತ್ನಿ ನಮ್ರತಾ ಶಿರೋಡ್ಕರ್

    ನಟ ಮಹೇಶ್‌ ಬಾಬು
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್ ಮತ್ತು ಕುಟುಂಬ
    ಬಾಲಿವುಡ್‌ ನಟಿ ಮಾಧುರಿ ದೀಕ್ಷಿತ್
    ಬಾಲಿವುಡ್‌ ಚಿತ್ರ ನಿರ್ಮಾಪಕ ಕರಣ್ ಜೋಹರ್
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್‌
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕರಣ್‌ ಜೋಹರ್‌, ಸ್ನೇಹಿತ ಪ್ರಬಲ್ ಗುರುಂಗ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖುಷಿ ಕಪೂರ್‌!

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಪತ್ನಿಯೊಂದಿಗೆ ಮಿಂಚಿದ ಲೆಂಜೆಡರಿ ಕ್ರಿಕೆಟರ್‌ ಕೃಷ್ಣಮಾಚಾರಿ ಶ್ರೀಕಾಂತ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಮಿಂಚಿದ ಶನಯಾ ಕಪೂರ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಆತ್ಮೀಯ ಗೆಳೆಯ ಓರ್ರಿ ಅವತ್ರಮಣಿ
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಪತ್ನಿಯೊಂದಿಗೆ ಎ.ಆರ್‌ ರೆಹಮಾನ್‌
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ತೆಲುಗು ನಟ ದಗ್ಗುಬಾಟಿ ವೆಂಕಟೇಶ್‌
    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಇಶಾನ್‌ ಕಿಶನ್‌, ಕೃನಾಲ್‌ ಪಾಂಡ್ಯ, ಕೃನಾಲ್‌ ಪತ್ನಿ ಪಂಖೂರಿ ಶರ್ಮಾ ಹಾಗೂ ಹಾರ್ದಿಕ್‌ ಪಾಂಡ್ಯ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಖ್ಯಾತ ಸಿನಿ ನಿರ್ದೇಶಕ ಅಟ್ಲಿ ಕುಮಾರ್ – ಕೃಷ್ಣ ಪ್ರಿಯಾ ದಂಪತಿ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ನಟ ರಜನಿಕಾಂತ್‌ ಕುಟುಂಬ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ತಲೈವಾ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ನಟ ಅನಿಲ್‌ ಕಪೂರ್‌ ಖದರ್‌ ಲುಕ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕೃತಿ ಸನೋನ್

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟ ವರುಣ್‌ ಧವನ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಟ್ರೆಡಿಷನಲ್‌ ಲುಕ್‌ನಲ್ಲಿ ಮಿಂಚಿದ WWE ಸ್ಟಾರ್‌ ಜಾನ್‌ ಸೀನಾ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಬಾಲಿವುಡ್‌ ನಟ ಜಾಕಿ ಶ್ರಾಫ್ ಖದರ್‌

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ರಾಜಕುಮಾರ್ ರಾವ್ ಪತ್ರಲೇಖ

    ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್‌ ವಿವಾಹ ಮಹೋತ್ಸವದಲ್ಲಿ ಕುಟುಂಬದೊಂದಿಗೆ ರಾಜ್‌ಕುಮಾರ್ ಹಿರಾಣಿ
  • ಅನಂತ್ ಅಂಬಾನಿ, ರಾಧಿಕಾ ಮದುವೆಯಲ್ಲಿ ಬಾಲಿವುಡ್ ಸ್ಟಾರ್ಸ್ ದಂಡು

    ಅನಂತ್ ಅಂಬಾನಿ, ರಾಧಿಕಾ ಮದುವೆಯಲ್ಲಿ ಬಾಲಿವುಡ್ ಸ್ಟಾರ್ಸ್ ದಂಡು

    ವಿಶ್ವದ ಶ್ರೀಮಂತರಲ್ಲಿ ಒಬ್ಬರಾದ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ (Radhika) ಇಂದು (ಜು.12) ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈ ಸಂಭ್ರಮದಲ್ಲಿ ಯಶ್ ದಂಪತಿ(Yash), ಶಾರುಖ್ ಖಾನ್, ಜಾನ್ ಸೆನಾ ಸೇರಿದಂತೆ ಬಾಲಿವುಡ್ ದಂಡೇ ಹಾಜರಿ ಹಾಕಿದೆ.

    ಅಂಬಾನಿ ಮನೆ ಮಗನ ಮದುವೆಗೆ ಮುಂಬೈನಲ್ಲಿ ಸ್ವರ್ಗವೇ ಧರೆಗಿಳಿದಿದೆ. ಮುಖೇಶ್ ಅಂಬಾನಿ ಮನೆಯನ್ನು ಕಣ್ಣು ಕುಕ್ಕುವಂತೆ ಸಿಂಗರಿಸಲಾಗಿದೆ. ಭಾರತದ ನಾನಾ ಭಾಗದಲ್ಲಿರುವ ತಾರೆಯರು ಈ ಮದುವೆಯ ಕಳೆಯನ್ನ ಹೆಚ್ಚಿಸಲು ಈಗಾಗಲೇ ಮುಂಬೈಗೆ ಬಂದಿಳಿದಿದ್ದಾರೆ.

    ನ್ಯೂಯಾರ್ಕ್‌ನಲ್ಲಿದ್ದ ಶಾರುಖ್ ಖಾನ್ (Sharukh Khan), ಗ್ಲೋಬಲ್ ಸ್ಟಾರ್ ಪ್ರಿಯಾಂಕ ಚೋಪ್ರಾ (Priyanka Chopra), ಯಶ್ ದಂಪತಿ ಕೂಡ ಮುಂಬೈಗೆ ಎಂಟ್ರಿ ಕೊಟ್ಟಿದ್ದಾರೆ. ಅದಷ್ಟೇ ಅಲ್ಲ, ಅಮಿತಾಬ್ ಬಚ್ಚನ್, ಸಲ್ಮಾನ್ ಖಾನ್, ರಣಬೀರ್ ಕಪೂರ್, ಆಲಿಯಾ ಭಟ್, ಅರ್ಜುನ್ ಕಪೂರ್, ಜಾನ್ವಿ ಕಪೂರ್, ಸಿದ್ಧಾರ್ಥ್-ಕಿಯಾರಾ ಅಡ್ವಾಣಿ, ಶಾಹಿದ್ ಕಪೂರ್, ವಿಕ್ಕಿ ಕೌಶಲ್, ರಾಮ್‌ ಚರಣ್‌, ಸೋನಾಕ್ಷಿ ಸಿನ್ಹಾ ಎಂಟ್ರಿಯಿಂದ ಮದುವೆ ಸಮಾರಂಭದ ಮೆರಗು ಹೆಚ್ಚಾಗಿದೆ.

    ಭಾರತೀಯ ಸಂಸ್ಕೃತಿ ಮತ್ತು ಕಲೆಗಾರಿಕೆ, ಸಂಗೀತಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಹಿಂದೆಂದು ಯಾರೂ ಮಾಡಿರದಷ್ಟು ಅದ್ಧೂರಿಯಾಗಿ ಈ ಮದುವೆ ಕಾರ್ಯಕ್ರಮ ನಡೆಯುತ್ತಿದೆ. ಸನಾತನ ಶೈಲಿಯಲ್ಲಿ ಈ ಮದುವೆ ಜರುಗಲಿದೆ. ಇದನ್ನೂ ಓದಿ:ನಿರೂಪಣೆ ನೀವಿಲ್ಲದೇ ಅಪೂರ್ಣ ಅಪರ್ಣಾ ಅಕ್ಕ: ಅನುಶ್ರೀ ಭಾವುಕ

    ಅಂದಹಾಗೆ, ಅನಂತ್ ಮತ್ತು ರಾಧಿಕಾ ಈ ವಿವಾಹವು 3 ದಿನಗಳ ಕಾಲ ಇರುತ್ತದೆ. ಜು.12ರಂದು ಶುಭವಿವಾಹ, ಜು.13ರಂದು ಶುಭ್ ಆಶೀರ್ವಾದ್, ಜು.14ರಂದು ಆರತಕ್ಷತೆ ನಂತರ ಜು.15ರಂದು ಮತ್ತೊಂದು ಆರತಕ್ಷತೆ ಕಾರ್ಯಕ್ರಮ ಜರುಗಲಿದೆ.