Tag: ಅನಂತ ಕುಮಾರ್

  • ಅನಂತ ಪ್ರೇರಣಾ ಕೇಂದ್ರ ನಾಳೆ ಲೋಕಾರ್ಪಣೆ

    ಅನಂತ ಪ್ರೇರಣಾ ಕೇಂದ್ರ ನಾಳೆ ಲೋಕಾರ್ಪಣೆ

    – ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಆದರ್ಶಗಳನ್ನು ಯುವಪೀಳಿಗೆಗೆ ಪರಿಚಯಿಸುವ ಉದ್ದೇಶ
    – ಸೌತ್ ಎಂಡ್ ವೃತ್ತದಲ್ಲಿದ್ದ ಅನಂತಕುಮಾರ್ ಕಚೇರಿಯನ್ನು ‘ಅನಂತ ಪ್ರೇರಣಾ ಕೇಂದ್ರ’ ವನ್ನಾಗಿ ಪರಿವರ್ತನೆ
    – ಮೇ6 ರಂದು ಬೆಳಿಗ್ಗೆ 10.30 ಕ್ಕೆ ಉದ್ಘಾಟನೆ – ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಭಾಗಿ

    ಬೆಂಗಳೂರು: ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ್ ಅವರ ಆದರ್ಶಗಳನ್ನು ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಚಿಸಲಾಗಿರುವ ಅನಂತ ಪ್ರೇರಣಾ ಹೆಸರಿನ ಮಾಹಿತಿ ಕೇಂದ್ರ ಮೇ 6, 2022 ರಂದು ಬೆಳಿಗ್ಗೆ 10.30 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ. ತೇಜಸ್ವಿನಿ ಅನಂತಕುಮಾರ್ ತಿಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ನಾಡಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವ ಶಕ್ತಿಗಳಿಗೆ ದಾರಿದೀಪವಾಗಲೆಂಬ ಸದುದ್ದೇಶದಿಂದ ಸೌತ್ ಎಂಡ್ ವೃತ್ತದಲ್ಲಿ ಈ ಹಿಂದೆ ಇದ್ದ ಅನಂತಕುಮಾರ್ ಅವರ ಕಚೇರಿಯನ್ನು ‘ಅನಂತ ಪ್ರೇರಣಾ ಕೇಂದ್ರ’ ವನ್ನಾಗಿಸಲಾಗಿದೆ. ಅನಂತಕುಮಾರರ ಬದುಕಿನ ಸಾರ್ಥಕತೆಯನ್ನು ಅರಿತವರಿಗೂ, ನಾಯಕತ್ವದ ಬೆಳವಣಿಗೆಯ ರೂಪರೇಷೆಯನ್ನು ಗುರುತಿಸಲೆಳಸುವವರಿಗೂ, ನಾಡ ಸೇವೆಯಲ್ಲಿ ತೊಡಗಿಕೊಳ್ಳಬಯಸುವ ಯುವಶಕ್ತಿಗಳಿಗೂ ದಾರಿದೀಪವಾಗಲೆಂಬ ಮಹದುದ್ದೇಶದಿಂದ ಅನಂತಕುಮಾರರ ಜೀವನ, ವ್ಯಕ್ತಿತ್ವ, ಸಾಧನೆಗಳನ್ನು ಪರಿಚಯಿಸುವ ಮಾಹಿತಿ ಕೇಂದ್ರವೊಂದನ್ನು ತೆರೆಯಲಾಗಿದೆ. ಅನಂತಕುಮಾರರ ಆಶೋತ್ತರಗಳನ್ನು ಮುಂದುವರಿಸಿ ನಿರ್ವಹಿಸುವ ಹೊಣೆ ಹೊತ್ತ ಅದಮ್ಯ ಚೇತನ ಸಂಸ್ಥೆಯ ಸಹಯೋಗದಲ್ಲಿ ಈ ಕೇಂದ್ರವು ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಕಲಿ ಅಧಿಕಾರಿಗಳಿಂದ ಹಣ ವಸೂಲಿ – ಕರೆ ಬಂದರೆ ದೂರು ದಾಖಲಿಸುವಂತೆ ಎಸಿಬಿ ಪ್ರಕಟಣ

    ಅನಂತ ಪ್ರೇರಣಾ ಕೇಂದ್ರದ ಅಂಶಗಳು:
    ಛಾಯಾಚಿತ್ರ ಪ್ರದರ್ಶಿನಿ:
    ಈ ಪ್ರೇರಣಾ ಕೇಂದ್ರದಲ್ಲಿ ಅನಂತಕುಮಾರ್ ಅವರ ಬಾಲ್ಯದಿಂದ ಮೊದಲುಗೊಂಡು ಎಬಿವಿಪಿ ಕಾರ್ಯಕರ್ತರಾಗಿ ಅವರು ಗಳಿಸಿಕೊಂಡ ಅನುಭವ. ಕರ್ನಾಟಕದಲ್ಲಿ ಬಿಜೆಪಿ ಪಕ್ಷವು ಬೆಳೆಯಲು ಅವರು ದುಡಿದ ಪರಿ, ಆರು ಬಾರಿ ಸಂಸದರಾಗಿ, ಕೇಂದ್ರದಲ್ಲಿ ವಿವಿಧ ಖಾತೆಗಳ ಸಚಿವರಾಗಿ ಅನಂತಕುಮಾರ್ ಸಾಧಿಸಿದ ಕಾರ್ಯಗಳು, ಅಚ್ಚರಿ ಮೂಡಿಸುವಂತೆ ಅವರು ನಾಯಕತ್ವದ ಸೋಪಾನಗಳನ್ನು ಏರಿ ನಿಂತ ರೀತಿ ಎಲ್ಲವನ್ನೂ ಛಾಯಾಚಿತ್ರಗಳ ಮೂಲಕ ಪ್ರದರ್ಶನದ ಮೂಲಕ ಪರಿಚಯಿಸಲಾಗುತ್ತಿದೆ. ಈ ಚಿತ್ರಗಳನ್ನು ಸವಿವರ ಅರ್ಥಮಾಡಿಕೊಳ್ಳಲು ಧ್ವನಿರೂಪದ ವ್ಯಾಖ್ಯಾನವುಳ್ಳ ಮೊಬೈಲ್ ಆಪ್ ಸೌಕರ್ಯವನ್ನೂ ವ್ಯವಸ್ಥೆಮಾಡಲಾಗುತ್ತಿದೆ.

    ಗ್ರಂಥಭಂಡಾರ ಮತ್ತು ವಾಚನಾಲಯ:
    ಅನಂತಪ್ರೇರಣಾ ಕೇಂದ್ರದ ಒಂದು ಭಾಗದಲ್ಲಿ ಸುಸಜ್ಜಿತ ಗ್ರಂಥಭಂಡಾರ ಮತ್ತು ಉಚಿತ ವಾಚನಾಲಯವನ್ನು ವ್ಯವಸ್ಥೆಮಾಡಲಾಗಿದೆ. ಸಾರ್ವಜನಿಕರೂ ವಿದ್ಯಾರ್ಥಿಗಳೂ ಇವುಗಳ ಪ್ರಯೋಜನ ಪಡೆದುಕೊಳ್ಳಬಹುದು. ಇಲ್ಲಿ ಅನಂತಕುಮಾರರ ಸ್ವಂತ ಸಂಗ್ರಹದಿಂದಲೂ ಇತರ ಮೂಲಗಳಿಂದಲೂ ಸಂಗ್ರಹಿಸಿದ ಉಪಯುಕ್ತ ಪುಸ್ತಕಗಳನ್ನು ಇಲ್ಲಿಯೇ ಉಚಿತವಾಗಿ ಅಧ್ಯಯನ ಮಾಡಲು ಅವಕಾಶವಿದೆ. ಮುಂದೆ, ಉದ್ಯೋಗಾಪೇಕ್ಷಿ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳ ಪ್ರತ್ಯೇಕ ವಿಭಾಗವನ್ನು ತೆರೆಯುವ ಉದ್ದೇಶವೂ ಇದೆ. ಇದನ್ನೂ ಓದಿ: ವಿದ್ಯುತ್ ಸಮಸ್ಯೆ – 1,100 ರೈಲುಗಳು ರದ್ದು

    ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ:
    ಸೌತ್ ಎಂಡ್ ವೃತ್ತದ ಪರಿಸರದಲ್ಲಿ ಅನೇಕ ಶಿಕ್ಷಣಸಂಸ್ಥೆಗಳಿದ್ದು ದೂರದೂರದಿಂದ ಇಲ್ಲಿಗೆ ಪ್ರತಿನಿತ್ಯ ಅನೇಕ ವಿದ್ಯಾರ್ಥಿಗಳು ಬರುತ್ತಾರೆ. ಇವರಲ್ಲಿ ಅನೇಕರಿಗೆ ಮಧ್ಯಾಹ್ನದ ಊಟಕ್ಕೆ ಬೇಕಾದ ಅನುಕೂಲವಿರುವುದಿಲ್ಲ. ಅಂತಹ ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಅದಮ್ಯ ಚೇತನದ ಸಹಯೋಗದೊಡನೆ ಪ್ರತಿನಿತ್ಯ ಮಧ್ಯಾಹ್ನದ ಭೋಜನವನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರೇರಣಾ ಕೇಂದ್ರದ ಮೇಲುಮಹಡಿಯ ಆವರಣದಲ್ಲಿ ಊಟದ ವಿತರಣೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.

    ಗಿಡ ವಿತರಣೆ:
    ಸಸ್ಯಾಗ್ರಹ ಎಂಬ ಪರಿಕಲ್ಪನೆಯನ್ನು ಮುಂದಿಟ್ಟು ಅನಂತಕುಮಾರ್ ಬೆಂಗಳೂರು ಹಸಿರು ಪರಿಸರದ ಸ್ವಚ್ಛ ನಗರವಾಗಬೇಕೆಂಬ ಕನಸು ಕಂಡಿದ್ದವರು. ಅವರು ಪ್ರಾರಂಭಿಸಿದ ಹಸಿರು ಭಾನುವಾರ ಎಂಬ ಗಿಡ ನೆಡುವ ಕಾರ್ಯಕ್ರಮ 350 ಕ್ಕೂ ಹೆಚ್ಚು ವಾರಗಳಿಂದ ನಿರಂತರವಾಗಿ ನಡೆದುಬರುತ್ತಿದೆ. ತಮ್ಮ ಆವರಣದಲ್ಲಿ ಗಿಡ ನೆಟ್ಟು ಬೆಳೆಸಲು ಆಸಕ್ತಿಯುಳ್ಳ ಸಾರ್ವಜನಿಕರಿಗೆ ಗಿಡಗಳನ್ನು ಉಚಿತವಾಗಿ ವಿತರಿಸಲು ಪ್ರೇರಣಾ ಕೇಂದ್ರದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

    ಪ್ಲೇಟ್ ಬ್ಯಾಂಕ್:
    ಹಸಿರು ಜೀವನ ಶೈಲಿಯ ಪ್ರತಿಪಾದಕರಾದ ಅನಂತಕುಮಾರ್ ಸಭೆ ಸಮಾರಂಭಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಖರೀದಿಯನ್ನು ವಿರೋಧಿಸಿ, ಮರುಬಳಸಬಹುದಾದ ಸ್ಟೀಲ್ ಲೋಟ ತಟ್ಟೆ ಚಮಚಗಳ ಬಳಕೆಗೆ ಪ್ರೇರಣೆ ನೀಡಿದ ಫಲವಾಗಿ ಅದಮ್ಯ ಚೇತನದಲ್ಲಿ ಪ್ಲೇಟ್ ಬ್ಯಾಂಕ್ ಯೋಜನೆ ಪ್ರಾರಂಭವಾಗಿದೆ. ಸಾರ್ವಜನಿಕರು ತಾವು ಏರ್ಪಡಿಸುವ ಸಮಾರಂಭಗಳಲ್ಲಿ ಬಳಕೆಗೆ ಇಲ್ಲಿಂದ ಲೋಟ ತಟ್ಟೆಗಳನ್ನು ಉಚಿತವಾಗಿ ಒಯ್ದು ಉಪಯೋಗಿಸಿ ಹಿಂತಿರುಗಿಸಬಹುದಾದ ಷರತ್ತು ಬದ್ಧ ಯೋಜನೆ ಇದಾಗಿದೆ. ಪ್ಲೇಟ್ ಬ್ಯಾಂಕಿನ ಒಂದು ಶಾಖೆಯನ್ನು ಪ್ರೇರಣಾ ಕೇಂದ್ರದ ಆವರಣದಲ್ಲಿ ತೆರೆಯಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

    ಸಂಸ್ಕೃತಿ-ಪರಂಪರೆ ಪ್ರಸಾರ:
    ಭಾರತೀಯ ಪರಂಪರೆ, ಸಂಸ್ಕೃತಿ, ಕಲೆ ಮೊದಲಾದವುಗಳ ಬಗ್ಗೆ ಅಪಾರ ಆಸಕ್ತಿಯುಳ್ಳವರಾಗಿದ್ದ ಅನಂತಕುಮಾರರ ಆಶಯಕ್ಕನುಗುಣವಾಗಿ ಈ ಪ್ರೇರಣಾ ಕೇಂದ್ರದಲ್ಲಿ ಮುಂಬರುವ ದಿನಗಳಲ್ಲಿ ಸಂಸ್ಕೃತಿ ಘಟಕವೊಂದನ್ನು ಪ್ರಾರಂಭಿಸಲು ಯೋಚಿಸಲಾಗುತ್ತಿದೆ. ಈ ಘಟಕವು ಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು.

    ದೇಶೀಯ ಪರಿಸರಸ್ನೇಹಿ ವಸ್ತುಬಳಕೆಗೆ ಪ್ರೋತ್ಸಾಹ:
    ದೇಶೀಯವೂ ಪರಿಸರಕ್ಕೆ ಪೂರಕವೂ ಮರುಬಳಕೆಗೆ ಅವಕಾಶವೂ ಇರುವಂತಹ ಕಚ್ಚಾವಸ್ತುಗಳಿಂದ ತಯಾರಾದ ಬಟ್ಟೆ ಚೀಲಗಳು ಮತ್ತಿತರ ದಿನನಿತ್ಯದ ಬಳಕೆಯ ಸಾಮಗ್ರಿಗಳ ತಯಾರಿಕೆ ಮತ್ತು ಖರೀದಿಯನ್ನು ಪ್ರೋತ್ಸಾಹಿಸಲು ಅನಂತಪ್ರೇರಣಾಕೇಂದ್ರದ ಆವರಣದಲ್ಲಿ ವಾರಕ್ಕೊಮ್ಮೆ ಅಂತಹ ವಸ್ತುಗಳ ಮಾರಾಟಕೇಂದ್ರವನ್ನು ತೆರೆಯಲು ನಿರ್ಧರಿಸಲಾಗಿದೆ.

    ಈ ಪ್ರೇರಣಾ ಕೇಂದ್ರದ ಉದ್ಘಾಟನೆಯು ಶುಕ್ರವಾರ(ಮೇ 6, 2022 ರಂದು) ಬೆಳಿಗ್ಗೆ 10.30 ಕ್ಕೆ ನಡೆಯಲಿದ್ದು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳು ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.

  • ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯ: ಎಚ್.ಕೆ ಪಾಟೀಲ್

    ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯ: ಎಚ್.ಕೆ ಪಾಟೀಲ್

    ಗದಗ: ಅನಂತ ಕುಮಾರ್ ಕರ್ನಾಟಕದ ಒಬ್ಬ ಎತ್ತರದ ನಾಯಕ. ಕರ್ನಾಟಕ ಹಿತ ಕಾಪಾಡುವಲ್ಲಿ ಮುತ್ಸದ್ದಿ ನಾಯಕರಾಗಿ ಪಕ್ಷಾತಿತವಾಗಿ ದಿಟ್ಟ ನಿಲುವು ತಾಳುತ್ತಿದ್ದ ಗೆಳೆಯನ ಅಗಲುವಿಕೆ ಸಾಕಷ್ಟು ನೋವುಂಟಾಗಿದೆ ಎಂದು ಮಾಜಿ ಸಚಿವ ಎಚ್.ಕೆ ಪಾಟೀಲ್ ಅನಂತ್ ಕುಮಾರ ನಿಧನಕ್ಕೆ ಕಂಬನಿ ಮಿಡಿದರು.

    ಅನಂತ ಕುಮಾರ್ ವಿದ್ಯಾರ್ಥಿ ದೆಸೆಯಿಂದಲೇ ನಾಯಕತ್ವ ಜೊತೆಗೆ ಸಂಘಟನೆಗೆ ಧುಮುಕಿದವರು. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ, ವಿದ್ಯಾರ್ಥಿಗಳ ಒಳಿತಿಗೆ, ವಿದ್ಯಾರ್ಥಿಗಳ ಶಕ್ತಿಗೆ ಚಿಂತನೆ ಮಾಡಿದ ಒಬ್ಬ ಯುವನಾಯಕ. ನನ್ನ ಅವರ ಸಂಪರ್ಕ ಬಹಳ ಗಾಢವಾಗಿತ್ತು. ಸೆನೆಟ್ ಸದಸ್ಯನಾಗುವ ಚುನಾವಣೆಯಲ್ಲಿ ಜೊತೆಗೂಡಿ ಕೆಲಸ ಮಾಡಿದ ನೆನಪು ಅಚ್ಚಳಿಯದಂತಿವೆ. ನಾನು ವಿಧಾನ ಪರಿಷತ್ ಸದಸ್ಯನಿದ್ದಾಗಲೂ ಹಲವಾರು ಸಲಹೆ ಸೂಚನೆಗಳನ್ನು ನೀಡುತ್ತಿದ್ದರು. ಹುಬ್ಬಳ್ಳಿಯಲ್ಲಿ ಒಟ್ಟಿಗೆ ಬಹಳಷ್ಟು ಕಾಲ ಕಳೆದಿದ್ದೇವೆ. ಅನಂತ ಕುಮಾರ್ ನಾವು ಉತ್ತಮ ಗೆಳೆಯರಾಗಿದ್ದೇವು ಎಂದು ಎಚ್.ಕೆ ಪಾಟೀಲ್ ಸ್ಮರಿಸಿಕೊಂಡರು.

    ಅನಂತ ಕುಮಾರ್ ವಾಜಪೇಯಿ, ಎಲ್.ಕೆ ಆಡ್ವಾಣಿ ಅವರಿಂದ ಬಹಳ ಪ್ರೀತಿ, ವಿಶ್ವಾಸ ಗಳಿಸಿಕೊಂಡಿದ್ದರು. ಅನಂತ ಕುಮಾರ್ ಕರ್ನಾಟಕದಲ್ಲಿ ಎಬಿವಿಪಿ ಹಾಗೂ ಬಿಜೆಪಿ ಸಂಘಟನೆ ಮಾಡಲು ಬಹಳ ಯಶಸ್ವಿಯಾದರು. ಕೇಂದ್ರ ಸಚಿವರಾದ ವೇಳೆ ಕರ್ನಾಟಕ ವಿಷಯ ವಿಚಾರಗಳು ಬಂದಾಗ ಪಕ್ಷಾತೀತವಾಗಿ ಕೆಲಸ ಮಾಡುತ್ತಿದ್ದರು. ಕೃಷ್ಣ, ಕಾವೇರಿ ವಿವಾದಗಳು, ಸಮಸ್ಯೆಗಳು ಬಂದಾಗ ಸಲೀಸಾಗಿ ಬಗೆಹರಿಸುತ್ತಿದ್ದರು. ಒಗ್ಗಟ್ಟಿನ ನಿಲುವು ಅವರಲ್ಲಿತ್ತು ಕರ್ನಾಟಕ ವಿಷಯದಲ್ಲಿ ಬಹಳ ಮುತುವರ್ಜಿ ತೋರಿಸುತ್ತಿದ್ದರು ಎಂದು ಹೇಳಿದರು.

    ಕಳಸಾ ಬಂಡೂರಿಗೆ ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟ ಮೇಲೆ ಒಪ್ಪಿಗೆ ರದ್ದಾಗುವ ಪ್ರಸಂಗ ನಿರ್ಮಾಣವಾಗಿತ್ತು. ಆ ವೇಳೆ ಒಪ್ಪಿಗೆ ನೀಡಿದ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿದ ರಾಜಕೀಯ ನಿರ್ಣಯ ತೆಗೆದುಕೊಂಡರು. ಪ್ರತ್ಯತ್ತರವಾಗಿ ಎಸ್.ಎಂ ಕೃಷ್ಣ, ವಾಜಪೇಯಿ ಅವರಿಗೆ ಪತ್ರ ಬರೆದರು. ಕಳಸಾ ಬಂಡೂರಿ ನೀರಿನ ತೀರ್ಪಿನ ವಿಷಯದಲ್ಲಿ ಅನಂತ ಕುಮಾರ್ ಕೊಡುಗೆ ಅನನ್ಯವಾಗಿದೆ. ಅನಂತ ಕುಮಾರ್ ಅವರ ಬಹಳ ಉಜ್ವಲ ಭವಿಷ್ಯ ನೋಡಬೇಕಾಗಿತ್ತು. ಅವರ ಅಕಾಲಿಕೆಯ ಅಗಲುವಿಕೆ ಕರ್ನಾಟಕಕ್ಕೆ ತುಂಬಲಾರದ ಹಾನಿಯಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಎಚ್.ಕೆ ಪಾಟೀಲ್ ಕಂಬನಿ ಮಿಡಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

    ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

    ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ.

    ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ನಿಧನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಪೇಜ್ ನಲ್ಲಿ `ಜಾತಿ ರಾಜಕಾರಣ ಕುತಂತ್ರಿ ಬ್ರಾಹ್ಮಣ ಅನಂತ ಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬೀಜ ಬಿತ್ತಬೇಡ’ ಎಂದು ಬರೆದು ಪೋಸ್ಟ್ ಮಾಡಲಾಗಿದೆ.

    ಅಲ್ಲದೇ ಅನಂತ್ ಕುಮಾರ್ ಅವರ ಫೋಟೋ ಹಾಕಿ ಅದರ ಮೇಲೆ `ಜಾತಿ ಜಾತಿ ರಾಮ ರಾಮ ಅನ್ನುತ್ತಲೇ ಹೊಗೆ ಹಾಕಿಕೊಂಡ ಕೋಮುವಾದಿ ಅನಂತ್ ಕುಮಾರ್ ದೇಶ ಹಾಳು ಮಾಡಲು ಇನ್ನೊಮ್ಮೆ ಹುಟ್ಟಿ ಬರಬೇಡ’ ಎಂದು ಬರೆದುಕೊಳ್ಳುವ ಮೂಲಕ ತಮ್ಮ ವಿಕೃತ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

    ಪೇಜ್ ನಲ್ಲಿ ಪೋಸ್ಟ್ ಹಾಕುತ್ತಿದ್ದಂತೆಯೇ ಸಾವಿನಲ್ಲೂ ವಿಕೃತಿ ಮೆರೆದ ಮನಸ್ಥಿತಿಗಳ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಪೇಜ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತ್ ಕುಮಾರ್ (59) ಅವರು ಇಂದು ನಸುಕಿನ ಜಾವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸದ್ಯ ಅನಂತ ಕುಮಾರ್ ಅವರ ಮೃತದೇಹವನ್ನು ಸಚಿವರ ಬೆಂಗಳೂರು ನಿವಾಸದಲ್ಲಿ ಇಡಲಾಗಿದ್ದು, ಸಾರ್ವಜನಿಕರು ಮೃತರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

    ಮಂಗಳವಾರ ನಗರದ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

    https://www.youtube.com/watch?v=uK_SiBW5Ly0

    https://www.youtube.com/watch?v=Xe5uJiq9Y18

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮಂಗ್ಳೂರಲ್ಲಿ ಅತಿ ಹೆಚ್ಚು ಎಂಜಿನಿಯರಿಂಗ್ ಕಾಲೇಜು ಬರಲು ಅನಂತ್ ಕುಮಾರ್ ಕಾರಣ: ಸಂಸದ ಕಟೀಲ್

    ಮಂಗ್ಳೂರಲ್ಲಿ ಅತಿ ಹೆಚ್ಚು ಎಂಜಿನಿಯರಿಂಗ್ ಕಾಲೇಜು ಬರಲು ಅನಂತ್ ಕುಮಾರ್ ಕಾರಣ: ಸಂಸದ ಕಟೀಲ್

    ಮಂಗಳೂರು: ಮಂಗಳೂರನ್ನು ಪ್ರೀತಿಸುತ್ತಿದ್ದ ಅನಂತ್ ಕುಮಾರ್ ಅವರು ಇಂದು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲಾಗುತ್ತಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕಂಬನಿ ಮಿಡಿದಿದ್ದಾರೆ.

    ಅನಂತ್ ಕುಮಾರ್ ಅವರು ನಮ್ಮಂತಹ ಹತ್ತಾರು ಕಾರ್ಯಕರ್ತರಿಗೆ ಗುರುಸ್ವರೂಪಿಯಾಗಿದ್ದರು. ಸಂಘಟನಾ ಕಾರ್ಯದರ್ಶಿಯಾಗಿದ್ದ ಅವರು ನಿರಂತರವಾಗಿ ಸಂಪರ್ಕದಲ್ಲಿದ್ದರು. ಯಾವುದೇ ಸಂದರ್ಭದಲ್ಲಿ ಅವರು ನಮಗೆ ಧೈರ್ಯ ತುಂಬುತ್ತಿದ್ದರು. ಸಂಘಟನೆ ಹೇಗೆ ಮಾಡುವುದು ಅಂತ ತಿಳಿಸುವಂತಹ ಕಾರ್ಯ ಮಾಡುತ್ತಿದ್ದರು. 2009ರಲ್ಲಿ ಪ್ರಥಮ ಬಾರಿಗೆ ಲೋಕಸಭಾ ಸದಸ್ಯನಾಗಿದ್ದೆ. ಆ ಸಂದರ್ಭದಲ್ಲಿ ಅನಂತ್ ಜೀ ನನ್ನನ್ನು ಕರೆದು ಒಬ್ಬ ಲೋಕಸಭಾ ಸದಸ್ಯ ಹೇಗಿರಬೇಕು, ಏನ್ ಕೆಲಸ ಮಾಡಬೇಕು ಅನ್ನೋದರ ಬಗ್ಗೆ ನಿರಂತರವಾಗಿ ಮಾರ್ಗದರ್ಶನ ಮಾಡುತ್ತಿದ್ದರು ಅಂತ ವಿಡಿಯೋ ಮೂಲಕ ಸಚಿವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

    ಯಾವುದೇ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳನ್ನು ತೆಗೆದುಕೊಂಡು ಅವರ ಬಳಿ ಹೋದರೆ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಶಕ್ತಿ ಅವರಲ್ಲಿತ್ತು. 2014ರಲ್ಲಿ ಬಿಜೆಪಿ ಸರ್ಕಾರ ದೇಶದಲ್ಲಿ ಬಂದು ಸಚಿವರಾಗಿ ಜವಾಬ್ದಾರಿ ತೆಗೆದುಕೊಂಡ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಸಮಸ್ಯೆಗಳನ್ನು ಹೇಳಿದರೂ, ಅದಕ್ಕೆ ಸಂಬಂಧಿಸಿದ ಸಚಿವರುಗಳಿಗೆ ಹೇಳಿ ಈತ ನಮ್ಮ ಶಿಷ್ಯ ಮಾಡಿಕೊಡಿ ಅಂತ ಹೇಳುತ್ತಿದ್ದರು ಅಂದ್ರು.

    ಜಿಲ್ಲೆಗೆ ಅನುದಾನ, ಎಂಸಿಎಫ್‍ನಂತಹ ಕಾರ್ಖಾನೆಗಳು ಮುಚ್ಚುವ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಅವರ ಇಲಾಖೆಯಡಿಯಲ್ಲಿ ಬರುತ್ತೆ ಅನ್ನೋ ಕಾರಣಕ್ಕಾಗಿ ಪೂರಕವಾದಂತಹ ಎಲ್ಲಾ ವ್ಯವಸ್ಥೆಗಳನ್ನು ಮಾಡಿ ಕಾರ್ಖಾನೆ ಬಂದ್ ಆಗದ ರೀತಿಯಲ್ಲಿ ನೋಡಿಕೊಂಡರು. ಕಾರ್ಖಾನೆಗೆ ವ್ಯವಸ್ಥಿತವಾಗುವಂತಹ ಶಾಶ್ವತ ಪರಿಹಾರವನ್ನು ಕಂಡುಕೊಟ್ಟರು. ಒಟ್ಟಿನಲ್ಲಿ ಜಿಲ್ಲೆಗೆ ಅದ್ಭುತ ಕೊಡುಗೆಯನ್ನು ನೀಡಿದ್ದಾರೆ ಅಂತ ಹೇಳಿದ್ರು.

    ಮಂಗಳೂರಿನಲ್ಲಿ ಹೊಸದಾಗಿ ಇರುವ ವಿಮಾನ ನಿಲ್ದಾಣ ಆಗೋದಕ್ಕೆ ಅವರು ಎನ್ ಡಿಎ ಸರ್ಕಾರದಲ್ಲಿ ವಿಮಾನಯಾನ ಸಚಿವರಾಗಿದ್ದ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರವೇ ಕಾರಣವಾಗಿದೆ. ನಗರದಲ್ಲಿ ಎಲೆಕ್ಟ್ರಾನಿಕ್ಸ್ ಗೆ ಸಂಬಂಧಿಸಿದ ಇಲಾಖೆ ಬರಲು ಕಾರಣ ಅನಂತ ಕುಮಾರ್. ಆಗ ಇದ್ದಂತಹ ಪ್ರಮೋದ್ ಮಹಾಜನ್ ಅವರನ್ನು ಹಿಡಿದು ಮಂಗಳೂರಿನಲ್ಲಿ ಅತೀ ಹೆಚ್ಚು ಎಂಜಿನಿಯರಿಂಗ್ ಕಾಲೇಜ್ ಇರುವುದರಿಂದ ಅಲ್ಲಿಗೆ ಎಲೆಕ್ಟ್ರಾನಿಕ್ಸ್ ಇಲಾಖೆ ಬರುವಲ್ಲಿ ಕಾರಣರಾಗಿದ್ದಾರೆ ಅವರು ಅಂತ ಹೇಳಿದ್ರು.

    ಅನಂತ ಕುಮಾರ್ ಅವರಿಗೆ ಮಂಗಳೂರಿನ ಮೇಲೆ ಬಹಳಷ್ಟು ಪ್ರೀತಿಯಿತ್ತು. ವಿಶೇಷವಾಗಿ ಕಳೆದ 4-5 ವರ್ಷಗಳಲ್ಲಿ ನಾನು ಲೋಕಸಭಾ ಸದಸ್ಯನಾಗಿ ಅವರ ಜೊತೆ ಹೋದಂತಹ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ತೆಗೆದುಕೊಂಡು ಅವರ ಬಳಿ ಹೋದರೂ ಅವರು ಅದಕ್ಕೆ ಪರಿಹಾರ ಕೊಡುತ್ತಿದ್ದರು. ಅಲ್ಲದೇ ಸಮಸ್ಯೆ ಬಗ್ಗೆ ಕುಳಿತು ಚರ್ಚೆ ಮಾಡುತ್ತಿದ್ದರು ಅಂತ ತಿಳಿಸಿದ್ರು.

    ಅಡಿಕೆಗೆ ಬೆಂಬಲ ಬೆಲೆ ಬೇಕು ಅಂತ ಅನಂತ್ ಕುಮಾರ್ ಬಳಿ ಹೋದಾಗ ಅದಕ್ಕೆ ಸಂಬಂಧಿಸಿದ ಎಲ್ಲಾ ಸಚಿವರನ್ನು ಅವರ ಮನೆಗೆ ಕರೆದು ಬೆಂಬಲ ಬೆಲೆ ಮತ್ತು ಆಮದಾಗುವಂತಹ ಅಡಿಕೆಗೆ ತೆರಿಗೆ ಹಾಕುವ ಕೆಲಸವನ್ನು ಅನಂತ್ ಕುಮಾರ್ ಅವರ ಮುಖಾಂತರವೇ ಮಾಡಿಸಿರುವುದಾಗಿ ತಿಳಿಸಿದ್ರು.

    ಒಟ್ಟಿನಲ್ಲಿ ಮಂಗಳೂರನ್ನು ಪ್ರೀತಿಸುತ್ತಿದ್ದ ಅನಂತ ಕುಮಾರ್ ಅವರು ಇಮದು ನಮ್ಮೊಂದಿಗಿಲ್ಲ. ಇದು ಕರ್ನಾಟಕಕ್ಕೆ ಮಾತ್ರವಲ್ಲದೇ ದೇಶಕ್ಕೂ ಕೂಡ ನಷ್ಟವಾಗಿದೆ. ವಿಶೇಷವಾಗಿ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ. ರಾಷ್ಟ್ರದಲ್ಲಿ ಪಕ್ಷ ಕಟ್ಟಿದ ಅಡ್ವಾಣಿ ಹಾಗೂ ವಾಜಪೇಯಿ ಜೋಡಿ ಹೇಗೆ ಇತ್ತೋ ಹಾಗೆಯೇ ಈ ರಾಜ್ಯದಲ್ಲಿ ಅನಂತ್ ಕುಮಾರ್ ಹಾಗೂ ಯಡಿಯೂರಪ್ಪ ಜೋಡಿ ಪಕ್ಷ ಕಟ್ಟಿತ್ತು ಅಂದ್ರು.

    ಅನಂತ್ ಕುಮಾರ್ ಅವರು ಇಂದು ನಮ್ಮೊಂದಿಗಿಲ್ಲ ಅನ್ನೋದು ನಂಬಲಾರದ ವಿಷಯವಾಗಿದೆ. ನಮ್ಮನ್ನು ಬಿಟ್ಟು ಅಗಲಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಸಂತಾಪ ಸೂಚಿಸಿದ್ರು.

    https://www.youtube.com/watch?v=m5F3_SqiA14

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಮಾಡು ಅಂದೋರು, ಇಂದು ಅದೇ ಕ್ಯಾನ್ಸರ್ ನಿಂದ ತೀರಿಕೊಂಡ್ರು- ಜೋಷಿ ಕಣ್ಣೀರು

    ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಮಾಡು ಅಂದೋರು, ಇಂದು ಅದೇ ಕ್ಯಾನ್ಸರ್ ನಿಂದ ತೀರಿಕೊಂಡ್ರು- ಜೋಷಿ ಕಣ್ಣೀರು

    ಹುಬ್ಬಳ್ಳಿ: ಕೇಂದ್ರ ಸಚಿವ ಅನಂತ ಕುಮಾರ್ ಅವರು ಇಂದು ನಸುಕಿನ ಜಾವ ಅನಾರೋಗ್ಯದಿಂದ ವಿಧಿವಶರಾಗಿದ್ದು, ದೇಶ ಹಾಗೂ ರಾಜ್ಯದ ಎಲ್ಲಾ ರಾಜಕೀಯ ನಾಯಕರು ಕಂಬನಿ ಮಿಡಿಯುತ್ತಿದ್ದಾರೆ.

    ಅನಂತ್ ಜೀ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ದುಃಖತಪ್ತರಾದ ಸಂಸದ ಪ್ರಹ್ಲಾದ್ ಜೋಷಿ, ಇತ್ತೀಚೆಗೆ ಸದನದಲ್ಲಿ ಕೂಡ ಅನೇಕ ಮಂತ್ರಿಗಳಿಗೆ ನಮ್ಮ ಕ್ಷೇತ್ರದ ಕೆಲಸಕ್ಕೆ ಫೋನ್ ಮಾಡಿ ಕರೆಸಿ, ಹುಬ್ಬಳ್ಳಿಯಲ್ಲಿ ಎಂತಾ ದುರ್ದೈವ ನೋಡಿ ಕ್ಯಾನ್ಸರ್ ಆಸ್ಪತ್ರೆ ಆಗಬೇಕು ಅಂತ ಹೇಳಿದಾಗ, ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ತನ್ನ ಛೇಂಬರ್ ಗೆ ಕರೆಸಿ ಮಾತನಾಡಿದ್ರು.

    ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ನಿಂದ ತಾಯಿ ತೀರಿಕೊಂಡರು. ನಡ್ಡಾ ಜೀ.. ಹುಬ್ಬಳ್ಳಿಯಲ್ಲಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿರ್ಮಾಣವಾಗಬೇಕು. ಪ್ರಹ್ಲಾದ್ ಜೋಷಿ ಹೇಳ್ತಾ ಇದ್ದಾನೆ. ಜಾಗ ಕೊಡುಸ್ತೀನಿ ಅಂತಾನೆ. ಹೀಗಾಗಿ ಅಲ್ಲೊಂದು ಕ್ಯಾನ್ಸರ್ ಆಸ್ಪತ್ರೆ ಮಾಡು ಅಂತ ಅನಂತ ಕುಮಾರ್ ಅವರು ಆರೋಗ್ಯ ಸಚಿವ ಜೆಪಿ ನಡ್ಡಾ ಅವರಿಗೆ ಸೂಚಿಸಿದ್ದರು. ನಡ್ಡಾ ಅವರು ಕರ್ನಾಟಕ ಸರ್ಕಾರಕ್ಕೆ ಪ್ರೊಪೋಸಲ್ ಕಳುಹಿಸಿ ಇನ್ ಪ್ರಿನ್ಸಿಪಲ್ ಒಪ್ಪಿಗೆ ಕೊಟ್ಟು ಕಳುಹಿಸ್ತೀನಿ ಅಂತ ಹೇಳಿದ್ದರು. ಆದ್ರೆ ಇಂದು ಅನಂತ್ ಜೀ ಅದೇ ಕ್ಯಾನ್ಸರ್ ನಿಂದ ಈ ಲೋಕವನ್ನು ತ್ಯಜಿಸುತ್ತಾರೆ ಎಂದು ಊಹಿಸಿಯೂ ಇಲ್ಲ ಅಂತ ಕಣ್ಣೀರು ಹಾಕಿದ್ರು.

    ಅನಂತ್ ಜೀ ಇನ್ನಿಲ್ಲ ಅಂದಾಗ ನನಗೆ ಬಹಳ ದೊಡ್ಡ ಆಘಾತವೇ ಆಗಿದೆ. ಅವರೊಬ್ಬ ನನ್ನ ವೈಯಕ್ತಿಕ ಗೆಳೆಯ ಅಲ್ಲದೇ ಮಾರ್ಗದರ್ಶಕರಾಗಿಯೂ ಇದ್ದರು. ದೇವರ ಇಚ್ಛೆಗೆ ಉಪಾಯವಿಲ್ಲ ಅಂತ ಗದ್ಗದಿತರಾದ್ರು.

    ಪಾರ್ಲಿಮೆಂಟ್ ನಲ್ಲಿ ಕ್ಯಾಂಟೀನ್ ಊಟ ಮಾಡಲು ಬಿಡುತ್ತಿರಲಿಲ್ಲ. ಊಟ ನನ್ನ ಛೇಂಬರ್ ನಲ್ಲೇ ಬಂದು ಮಾಡಬೇಕು ಅಂತ ಹೇಳುತ್ತಿದ್ದರು. ಅಧಿವೇಶನದ ಸಂದರ್ಭದಲ್ಲಿ ಊಟಕ್ಕೆ ಅವರ ಮನೆಯಲ್ಲೇ ಮಾಡಲು ಬೈದು ಕರೆದುಕೊಂಡು ಹೋಗುತ್ತಿದ್ದರು. ಮತ್ತೊಂದು ಸಲ ನೀನು ಗೆಲ್ಲಬೇಕು. ನಿನ್ನ ಕ್ಷೇತ್ರದಲ್ಲಿ ಏನೇನ್ ಕೆಲ್ಸ ಇದೆ ಅದನ್ನು ಈಗ ಮುಗಿಸಿಬಿಡು ಅಂತ ಹೇಳುತ್ತಿದ್ದರು.

    ಅನಂತ್ ಜೀ ಅಧ್ಯಕ್ಷತೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸಂಘಟಿಸಿ 89+5 ಸ್ಥಾನ ಬಂದಿತ್ತು. ಅವರು ಅವತ್ತು ಅಧ್ಯಕ್ಷರಾಗಿ ರಾಜಕೀಯ ಧ್ರುವೀಕರಣ ಆಗದೇ ಇರುತ್ತಿದ್ದರೆ ಕರ್ನಾಟಕದಲ್ಲಿ ಬಿಜೆಪಿ ಈ ಸ್ಥಿತಿಗೆ ಬರುತ್ತಿರಲಿಲ್ಲ. ಯಡಿಯೂರಪ್ಪ, ಅನಂತ್ ಜೀ ಅವರನ್ನು ದುಡಿಯುವ ಎತ್ತು ಅಂತ ಕರೆಯುತ್ತಿದ್ದರು. ಬಿಎಸ್‍ವೈ ಮಾಸ್ ಲೀಡರ್, ಇವರೊಬ್ಬ ಕರ್ನಾಟಕ ರಾಜ್ಯದ ಬ್ರೈನ್. ಈ ರೀತಿಯ ಪ್ರಖ್ಯಾತಿಯನ್ನು ಅವರಿಬ್ಬರೂ ಪಡೆದಿದ್ದರು ಅಂತ ಮೆಲುಕು ಹಾಕಿದ್ರು.

    ಎಬಿವಿಪಿ ಹಾಗೂ ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವುದರಲ್ಲಿ ನಿಪುಣರಾಗಿದ್ದರು. ಇವತ್ತು ಬಹುತೇಕವಾಗಿ ಜನತಾ ಪರಿವಾರದಿಂದ ಬಂದವರು ಬಿಜೆಪಿಯಲ್ಲಿ ಇದ್ದಾರೆಯೋ ಅದರಲ್ಲಿ ಶೇ.90ರಷ್ಟು ಮಂದಿ ಅನಂತ ಕುಮಾರ್ ಅವರ ವೈಯಕ್ತಿಕ ಸಂಬಂಧ, ಚಾಕಚಕ್ಯತೆಯಿಂದ ಬಂದು ಉಳಿದುಕೊಂಡಿದ್ದಾರೆ ಅಂತ ಹೇಳಿದ್ರು.

    ಅನಂತ್ ಜೀ ತಂದೆ ಸಾಮಾನ್ಯ ವ್ಯಕ್ತಿಯಾಗಿದ್ದು, ಓರ್ವ ರೈಲ್ವೇ ನೌಕರರಾಗಿದ್ದಾರೆ. ಅವರು ಕೂಡ ಕ್ಯಾನ್ಸರ್ ನಿಂದಲೇ ತೀರಿಕೊಂಡರು. ತಾಯಿ ಕೂಡ ಕ್ಯಾನ್ಸರ್‍ನಿಂದಲೇ ಮೃತಪಟ್ಟಿದ್ದರು. ಇದೀಗ ಇವರು ಕೂಡ ಅದರಿಂದಲೇ ಮೃತಪಟ್ಟಿದ್ದಾರೆ. ಇದೇ ವಿಚಾರಕ್ಕೆ ನನಗೆ ಬಹಳ ದುಃಖವಾಗುತ್ತದೆ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • `ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ

    `ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ’ – ಸದಾ ಸಿಹಿ ಸುದ್ದಿ ಕೊಡ್ತಿದ್ದಿ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ

    ಮೈಸೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತ ಕುಮಾರ್ ಅವರು ನೀಡುತ್ತಿದ್ದ ಸಿಹಿಸುದ್ದಿಯನ್ನು ನೆನಪಿಸಿಕೊಂಡು ಮೈಸೂರಿನ ಸಂಸದ ಪ್ರತಾಪ್ ಸಿಂಹ ಕಂಬನಿ ಮಿಡಿದಿದ್ದಾರೆ.

    “ಪ್ರತಾಪಾ… ಪಾಸ್ಪೋರ್ಟ್ ಸೇವಾ ಕೇಂದ್ರ ಅಪ್ರೂವ್ ಮಾಡ್ಸಿದೀನಿ, ಮೈಸೂರು-ಬೆಂಗಳೂರು ಹೈವೇನ ಮೋದಿಜಿ ನಾಳೆ ಮಹಾರಾಜಾ ಗ್ರೌಂಡ್ ನಲ್ಲಿ ಘೋಷಣೆ ಮಾಡ್ತಾರೆ, ಏರ್ ಪೋರ್ಟ್ ಗೆ ಮರುಜೀವ ಕೊಡೋದಕ್ಕೆ ಜಯಂತ್ ಸಿನ್ಹಾಗೆ ಸೂಚಿಸಿದ್ದೇನೆ ಅಂತ ಸದಾ ಸಿಹಿ ಸುದ್ದಿ ಕೊಡುತ್ತಿದ್ದ ಆ ಧ್ವನಿಯನ್ನೇ ಕಿತ್ತುಕೊಂಡನಲ್ಲಾ ದೇವರೇ” ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

    ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಂತಕುಮಾರ್ ನಿಧನ – ಶಾಲಾ-ಕಾಲೇಜಿಗೆ ಸರ್ಕಾರಿ ರಜೆ

    ಅನಂತಕುಮಾರ್ ನಿಧನ – ಶಾಲಾ-ಕಾಲೇಜಿಗೆ ಸರ್ಕಾರಿ ರಜೆ

    ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಇಂದು ಶಾಲಾ-ಕಾಲೇಜಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ.

    ರಾಜ್ಯಾದ್ಯಂತ ಶಾಲಾ-ಕಾಲೇಜಿಗೆ ಮತ್ತು ಕಚೇರಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಸಕಲ ಗೌರವದೊಂದಿಗೆ ಅನಂತ ಕುಮಾರ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತಿದೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಯ ಮುಖಂಡ ಎಚ್.ಎನ್. ಅನಂತಕುಮಾರ್ (59) ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಆದರೆ ಇಂದು ನಸುಕಿನ ಜಾವ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಇಂದು ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ. ಬೆಳಗ್ಗೆ 9 ಗಂಟೆಯ ನಂತರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

     

  • ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

    ನಾನು 23 ದಿನಗಳ ಸಂಸದರ ಸಂಬಳವನ್ನು ಪಡೆಯುತ್ತೇನೆ: ಸುಬ್ರಮಣಿಯನ್ ಸ್ವಾಮಿ

    ನವದೆಹಲಿ: 23 ದಿನಗಳ ಕಲಾಪ ನಡೆಯದಿರುವುದಕ್ಕೆ ನಾನು ಕಾರಣ ಅಲ್ಲ. ಹೀಗಾಗಿ ನಾನು ಸಂಸದರ ಸಂಬಳವನ್ನು ಪಡೆಯುತ್ತೇನೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

    ಅಧಿವೇಶನದ ಎಲ್ಲಾ ದಿನಗಳೂ ಹಾಜರಿದ್ದೇನೆ. 23 ದಿನಗಳೂ ಕಲಾಪ ನಡೆದಿಲ್ಲ ಇದರಲ್ಲಿ ನನ್ನ ತಪ್ಪೇನು ಇಲ್ಲ. ನಾನು ರಾಷ್ಟ್ರಪತಿಗಳ ಪ್ರತಿನಿಧಿ. ಅವರು ಹೇಳೋ ತನಕ ನಾನು ಹೇಗೆ ಸಂಬಳ ಬೇಡವೆಂದು ಹೇಗೆ ಹೇಳಲಿ ಎಂದು ಸ್ವಾಮಿ ಪ್ರಶ್ನಿಸಿದ್ದಾರೆ.

    ಈ ಬಾರಿ ಅಧಿವೇಶನದ ಎಲ್ಲಾ ದಿನಗಳೂ ವ್ಯರ್ಥವಾಗಿದೆ. ಕಾಂಗ್ರೆಸ್‍ನ ಅಸಂವಿಧಾನಿಕ ರಾಜಕಾರಣದಿಂದಾಗಿ ಲೋಕಸಭೆ ಮತ್ತು ರಾಜ್ಯಸಭಾ ಕಲಾಪಗಳಿಗೆ ಅಡ್ಡಿಯಾಗಿದೆ. ಇದರಿಂದಾಗಿ ಬಹಳಷ್ಟು ಮಸೂದೆಗಳು ಅಂಗೀಕಾರ ಆಗಿಲ್ಲ. ಸಾರ್ವಜನಿಕ ಹಿತಾಸಕ್ತಿಯ ಯಾವ ವಿಚಾರಗಳನ್ನು ಚರ್ಚಿಸಿಲ್ಲ. ಸಾರ್ವಜನಿಕರ ಕೆಲಸಗಳನ್ನು ಮಾಡಿದಾಗ ಮಾತ್ರ ಸಂಬಳವನ್ನು ತೆಗೆದುಕೊಳ್ಳಬೇಕು. ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಸಂಸದರು ಅಧಿವೇಶನದ ಸಂಬಳ ಮತ್ತು ಭತ್ಯೆಗಳನ್ನು ತೆಗೆದುಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಮಿತ್ರ ಪಕ್ಷಗಳೊಂದಿಗೆ ಚರ್ಚೆ ಮಾಡಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ನಿನ್ನೆ ತಿಳಿಸಿದ್ದರು.

    ನಾವು ಜನರ ಹಣವನ್ನು ಪಡೆದು ಪ್ರಜೆಗಳ ಸೇವೆ ಮಾಡುತ್ತೇವೆ. ಜನರ ಸೇವೆ ಮಾಡಲು ಸಾಧ್ಯವಾಗದೇ ಇದ್ದರೆ ಅವರ ಹಣವನ್ನು ಪಡೆಯಲು ನಮಗೆ ಯಾವುದೇ ಹಕ್ಕಿಲ್ಲ ಎಂದು ಅನಂತ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

    ಸಂಬಳ ಮತ್ತು ಭತ್ಯೆ ತೆಗೆದುಕೊಳ್ಳುವುದಿಲ್ಲ ಅನ್ನುವುದು ಸಚಿವ ಸಂಪುಟದ ನಿರ್ಣಯವಾಗಿದೆ. ಅಧಿವೇಶನದ ಎಲ್ಲಾ ದಿನಗಳು ವ್ಯರ್ಥವಾಗಿದ್ದಕ್ಕೆ ವಿರೋಧ ಪಕ್ಷಗಳೇ ಕಾರಣ ಎನ್ನುವ ಸಂದೇಶವನ್ನು ಜನರಿಗೆ ತಿಳಿಸಲು ಎನ್‍ಡಿಎ ಸದಸ್ಯರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.