Tag: ಅನಂದ್ ಸಿಂಗ್

  • ಹೊಸಪೇಟೆ ಜಿಲ್ಲೆ ಆಗ್ಬೇಕು- ಎರಡು ವಿಶೇಷ ವಿಮಾನದಲ್ಲಿ ಬರಲಿದೆ ನಿಯೋಗ

    ಹೊಸಪೇಟೆ ಜಿಲ್ಲೆ ಆಗ್ಬೇಕು- ಎರಡು ವಿಶೇಷ ವಿಮಾನದಲ್ಲಿ ಬರಲಿದೆ ನಿಯೋಗ

    ಬಳ್ಳಾರಿ: ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಅನರ್ಹ ಶಾಸಕ ಆನಂದ್ ಸಿಂಗ್, ಎರಡು ವಿಶೇಷ ವಿಮಾನದ ಮೂಲಕ ನಿಯೋಗವನ್ನು ಬೆಂಗಳೂರಿಗೆ ಕರೆ ತರಲಿದ್ದಾರೆ.

    ವಿಜಯನಗರ ವಿಧಾನಸಭಾ ಕ್ಷೇತ್ರವನ್ನು ಜಿಲ್ಲೆ ಮಾಡಲು ಸಿಎಂ ಯಡಿಯೂರಪ್ಪ ಮೇಲೆ ಒತ್ತಡ ಹಾಕಲು ಆನಂದ್ ಸಿಂಗ್ ಸಿದ್ಧತೆ ನಡೆಸುತ್ತಿದ್ದಾರೆ. ಹೊಸಪೇಟೆ ವ್ಯಾಪ್ತಿಯ ಸ್ವಾಮೀಜಿ, ಸಂಘ ಸಂಸ್ಥೆ, ಮುಖಂಡರನ್ನು ಎಂಎಲ್‍ಸಿಗಳನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಕರೆತರಲಿದ್ದಾರೆ.

    ಎರಡು ವಿಶೇಷ ವಿಮಾನಗಳಲ್ಲಿ ಹೊರಟಿರುವ ನಿಯೋಗದಲ್ಲಿ ಉಜ್ಜೈನಿ ಶ್ರೀ, ಸಂಗನ ಬಸವ ಶ್ರೀಗಳು ಸೇರಿದಂತೆ ಮಾಜಿ ಶಾಸಕ ಸಿರಾಜ್ ಶೇಖ್, ನೇಮಿರಾಜ ನಾಯ್ಕ ಮತ್ತು ಕಾಂಗ್ರೆಸ್ ಎಂಎಲ್‍ಸಿ ಅಲ್ಲಂ ವೀರಭದ್ರಪ್ಪ ಮತ್ತು ಕೆ.ಸಿ. ಕೊಂಡಯ್ಯ ಇರಲಿದ್ದಾರೆ. ಈ ನಿಯೋಗವು ಇಂದು ಹತ್ತು ಗಂಟೆಗೆ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹೊಸಪೇಟೆಯನ್ನು ಜಿಲ್ಲೆ ಮಾಡಲೇಬೇಕೆಂದು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಲಿದೆ ಎನ್ನಲಾಗಿದೆ.

  • ಈಗ ಆನಂದ್ ಸಿಂಗ್ ಸರದಿ, ಸರ್ಕಾರ ಯಾವುದೇ ಸಮಯದಲ್ಲಿ ಪತನ – ಶೆಟ್ಟರ್ ಭವಿಷ್ಯ

    ಈಗ ಆನಂದ್ ಸಿಂಗ್ ಸರದಿ, ಸರ್ಕಾರ ಯಾವುದೇ ಸಮಯದಲ್ಲಿ ಪತನ – ಶೆಟ್ಟರ್ ಭವಿಷ್ಯ

    ಹುಬ್ಬಳ್ಳಿ: ಈಗ ಅನಂದ್ ಸಿಂಗ್ ಸರದಿ, ಎಷ್ಟು ಜನ ಶಾಸಕರು ಬರುತ್ತಾರೆ ಎಂಬುವುದನ್ನು ಕಾದು ನೋಡಬೇಕಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರ ನನಗೂ ಈಗ ಮಾಹಿತಿ ಬಂದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್‍ನಲ್ಲಿ ಬಹಳಷ್ಟು ಶಾಸಕರಿಗೆ ಅಸಮಾಧಾನ ಇದೆ ಎಂದು ಹೇಳಿದರು.

    ಎರಡೂ ಪಕ್ಷದ ಧುರೀಣರ ನಡುವೆ ಒಳಜಗಳ ಇದ್ದು ಆರೋಪ ನಡೆದಿದೆ. ದೊಡ್ಡ ಪ್ರಮಾಣದ ಸಮಸ್ಯೆ ಈ ಸರ್ಕಾರದಲ್ಲಿ ಉಲ್ಬಣವಾಗುತ್ತಿದೆ. ಈ ಸರ್ಕಾರ ಯಾವುದೇ ಸಮಯದಲ್ಲಿ ಪತನವಾಗಬಹುದು. ಬಹಳಷ್ಟು ಜನ ಶಾಸಕರಲ್ಲಿ ಭಿನ್ನಾಭಿಪ್ರಾಯ ಇದೆ. ಕೇವಲ ಕಾಂಗ್ರೆಸ್ ಶಾಸಕರಲ್ಲಿ ಅಷ್ಟೇ ಅಲ್ಲದೆ ಜೆಡಿಎಸ್‍ನ ಹಲವು ಶಾಸಕರು ಅಸಮಾಧಾನಗೊಂಡಿದ್ದಾರೆ. ಇನ್ನೂ ಎಷ್ಟು ಜನ ಶಾಸಕರು ಬರುತ್ತಾರೆ ಎನ್ನುವುದನ್ನು ಇನ್ನು ಕಾದು ನೋಡಬೇಕಾಗಿದೆ ಎಂದು ಶೆಟ್ಟರ್ ಹೇಳಿದ್ದಾರೆ.

    ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕಿತ್ತು. ಸಿಎಂ ಮತ್ತು ಮಾಜಿ ಸಿಎಂಗೆ ಕಾಮನ್‍ಸೆನ್ಸ್ ಇಲ್ಲ. ಈ ಇಬ್ಬರು ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಈ ಸಮ್ಮಿಶ್ರ ಸರ್ಕಾರ ತನ್ನಿಂದ ತಾನೇ ಪತನ ಆಗುವವರೆಗೂ ನಾವು ಕಾದು ನೋಡುವ ತಂತ್ರವನ್ನು ಅನುಸರಿಸುತ್ತೆವೆ. ನಾವು ಸದ್ಯಕ್ಕೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು.