Tag: ಅನರ್ಹತೆ

  • ಗೌರಿ ಶಂಕರ್ ಅನರ್ಹತೆ ಪ್ರಕರಣ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಇಬ್ರಾಹಿಂ

    ಗೌರಿ ಶಂಕರ್ ಅನರ್ಹತೆ ಪ್ರಕರಣ – ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಇಬ್ರಾಹಿಂ

    ಬೆಂಗಳೂರು: ತುಮಕೂರು ಗ್ರಾಮಾಂತರ (Tumkauru Rural) ಶಾಸಕ ಗೌರಿ ಶಂಕರ್ (Gourishankar) ಅನರ್ಹತೆ ವಿರುದ್ದ ಹೈಕೋರ್ಟ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ(CM Ibrahim) ತಿಳಿಸಿದ್ದಾರೆ.

    ಕಲಬುರಗಿ ಹೈಕೋರ್ಟ್‌ನ (Kalaburagi Highcourt) ಏಕ ಸದಸ್ಯ ಪೀಠದ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಏಕ ಸದಸ್ಯ ಪೀಠದ ಆದೇಶ. ಈ ಆದೇಶವನ್ನು ಪ್ರಶ್ನೆ ಮಾಡಿ ಮೇಲ್ಮನವಿ ಸಲ್ಲಿಸುತ್ತೇವೆ. ಅಲ್ಲಿ ಈ ಕೇಸ್‌ ನಿಲ್ಲುವುದಿಲ್ಲ ಎಂದು ಆಶಾವಾದ ವ್ಯಕ್ತಪಡಿಸಿದರು ಇದನ್ನೂ ಓದಿ: ಹಳೇ ಮೈಸೂರು ಭಾಗದಲ್ಲಿ ಪ್ರಾಬಲ್ಯ ಉಳಿಸಿಕೊಳ್ಳಲು ಜೆಡಿಎಸ್ ಸರ್ಕಸ್


    5 ವರ್ಷದ ಹಳೆ ಕೇಸ್ ಇದು.‌ ಈಗ ಬಹಿರಂಗವಾಗಿ ಹಣ ಹಂಚಿದರೂ ಏನು ಮಾಡುತ್ತಿಲ್ಲ. ನಮಗೆ ಈ ಬಗ್ಗೆ ಆತಂಕ ಇಲ್ಲ.ಗೌರಿ ಶಂಕರ್ ಗೆಲ್ಲುತ್ತಾರೆ. ಅದಕ್ಕೆ ಹೀಗೆಲ್ಲ ಮಾಡ್ತಿದ್ದಾರೆ. ರೋಡ್ ‌ನಲ್ಲಿ ಹೋಗೋವಾಗ ರಸ್ತೆ ಉಬ್ಬು ಇರುತ್ತದೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಬಾರದು. ಆ ಸೀಟು ಚೆನ್ನಿಗಪ್ಪನ ಮನೆ ಸೀಟು, ಅವರು ಗೆಲ್ಲುತ್ತಾರೆ. ತೀರ್ಪಿನ ವಿರುದ್ದ ಮೇಲ್ಮನವಿ ಸಲ್ಲಿಸುತ್ತೇವೆ ಎಂದರು.

    ಗೌರಿ ಶಂಕರ್ ಶಾಸಕರಾಗಿ ಒಳ್ಳೆ ಸೇವೆ ಮಾಡಿದ್ದಾರೆ. ಮೊನ್ನೆ 50 ಸಾವಿರ ಜನ ಸೇರಿ ಸಭೆ ಮಾಡಿದ್ದೇವೆ. ಅ ಸೀಟು ಜೆಡಿಎಸ್ ಸೀಟು ಅಲ್ಲಿ ಜೆಡಿಎಸ್ ಗೆಲುವು ಶತಸಿದ್ದ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಗೌರಿ ಶಂಕರ್ ಅನರ್ಹವಾದರೆ ಅವರ ಪತ್ನಿಗೆ ಸೀಟು ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,‌ ಅದನ್ನ ಗೌರಿ ಶಂಕರ್ ತೀರ್ಮಾನ ಮಾಡ್ತಾರೆ. ಗೌರಿ ಶಂಕರ್ ಪತ್ನಿ ನಿಂತರೇ ಇನ್ನು ಹೆಚ್ಚು ಮತ ಬರುತ್ತೆ ಎಂದರು.

  • ತಾಕತ್ ಪ್ರಶ್ನಿಸಿ ಸಿದ್ದರಾಮಯ್ಯನವರಿಗೆ ಸವಾಲು ಎಸೆದ ಸುಧಾಕರ್

    ತಾಕತ್ ಪ್ರಶ್ನಿಸಿ ಸಿದ್ದರಾಮಯ್ಯನವರಿಗೆ ಸವಾಲು ಎಸೆದ ಸುಧಾಕರ್

    ಚಿಕ್ಕಬಳ್ಳಾಪುರ: ಸಿದ್ದರಾಮಯ್ಯನವರೇ ನಿಮಗೆ ಹೃದಯ ಮನಸ್ಸು ಇದ್ಯಾ? ನಿಮಗೆ ತಾಕತ್ ಇದ್ದರೆ ನಮ್ಮ ಮೇಲೆ ಹಗೆತನ ಸಾಧಿಸುವುದಲ್ಲ. ನಿಮ್ಮನ್ನು ಮುಗಿಸೋದವರು ಬೇರೆ ಇದ್ದಾರೆ. ತಾಕತ್ ಇದ್ದರೆ ಅವರ ಮೇಲೆ ಹಗೆತನ ಸಾಧಿಸಿ ಎಂದು ಮಾಜಿ ಸಿಎಂಗೆ ಅನರ್ಹ ಶಾಸಕ ಸುಧಾಕರ್ ಸವಾಲು ಹಾಕಿದ್ದಾರೆ.

    ಚಿಕ್ಕಬಳ್ಳಾಪುರ ನಗರದಲ್ಲಿ ಮಾತನಾಡಿದ ಸುಧಾಕರ್, ತಂದೆ ಸ್ಥಾನದಲ್ಲಿ ಇದ್ದ ನೀವು ಎಲ್ಲರನ್ನು ಸಮಾನಾಗಿ ಕಾಣಲಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ಬೀಳಲು ಸ್ವತಃ ನೀವೇ ಕಾರಣ ಹೊರತು ನಾವಲ್ಲ. ಹೀಗಾಗಿ ನಮ್ಮ ಮೇಲೆ ಹಗೆತನ ಸಾಧನೆ ಮಾಡುವುದಲ್ಲ ಎಂದು ಅಸಮಾಧಾನ ಹೊರ ಹಾಕಿದರು.

    ಅಂದಿನ ಸಿಎಂ ಎಚ್‌ಡಿಕೆ ನನಗೆ ಕೆಲಸಗಳನ್ನ ಮಾಡಿಕೊಡುತ್ತೇನೆ ಎಂದರೂ ಕೆಲ ಕಾಂಗ್ರೆಸ್ ನಾಯಕರೇ ಅಡ್ಡಿ ಮಾಡಿದರು. ಅವರ ಮೇಲೆ ಏನು ಕ್ರಮ ಕೈಗೊಂಡಿರಿ ಸಿದ್ದರಾಮಯ್ಯನವರೇ? ಪಕ್ಷದ ನಾಯಕತ್ವವನ್ನ ವಹಿಸಿಕೊಂಡು ತಂದೆಯ ಸ್ಥಾನದಲ್ಲಿದ್ದವರೂ ಎಲ್ಲರೂ ಒಂದೇ ಅಂತ ಕಾಣಬೇಕಿತ್ತು. ಆದರೆ ನೀವು ಅದರಲ್ಲಿ ವಿಫಲ ಅಗಿದ್ದಕ್ಕೆ ಸಮ್ಮಿಶ್ರ ಸರ್ಕಾರ ಬಿತ್ತು. ಹೀಗಾಗಿ ನಮ್ಮ ಮೇಲೆ ಹಗೆ ಸಾಧಿಸದೇ ನಿಮ್ಮ ವಿರುದ್ಧ ಕೆಲಸ ಮಾಡಿದವರ ವಿರುದ್ಧ ಹಗೆ ಸಾಧಿಸಿ ಎಂದು ಸವಾಲು ಎಸೆದರು.

    ಅನರ್ಹತೆ ಪ್ರಕರಣದಲ್ಲಿ ಸ್ಪೀಕರ್ ಆ್ಯಕ್ಟರ್ ಆಗಿದ್ದಾರೆ. ಇದರ ಡೈರೆಕ್ಟರ್ ಯಾರು? ಸ್ಕ್ರಿಪ್ಟ್ ರೈಟರ್ ಹಾಗೂ ಪ್ರೂಡ್ಯೂಸರ್ ಯಾರು ಅಂತ ಸುಪ್ರೀಂಕೋರ್ಟ್ ತೀರ್ಪು ಬಂದ ನಂತರ ಹೇಳುವೆ. ರಮೇಶ್ ಕುಮಾರ್ ಸಹ ಒಂದು ಬಾರಿ ಗೆಲ್ಲುತ್ತಾರೆ. ಒಂದು ಬಾರಿ ಸೋಲುತ್ತಾರೆ. ಗೆಲ್ಲುವಾಗ ಎಷ್ಟು ಪರಿಶ್ರಮ ಹಾಕಬೇಕು ಅವರಿಗೆ ಗೊತ್ತಾಗಬೇಕಲ್ವಾ? ನಾನು ಹುಟ್ಟುವ ಮೊದಲೇ ಶಾಸಕರಾಗಿ ವಿಧಾನಸೌಧ ಪ್ರವೇಶ ಮಾಡಿದ್ದಾರೆ. ಹೀಗಾಗಿ ಅವರು ಕೂಡ ಯಾರು ಎಷ್ಟೇ ಒತ್ತಡ ಹಾಕಿದರೂ ಅವರಿಗಿರುವ ಕಾನೂನಿನ ಇತಿಮಿತಿ ಓಳಗೆ ಅರಿವಿನ ಮೂಲಕ ವಸ್ತು ಸ್ಥಿತಿ ಅರ್ಥ ಮಾಡಿಕೊಂಡು ಪ್ರಕರಣ ಇತ್ಯರ್ಥ ಮಾಡಬೇಕಿತ್ತು. ಆಗ ನಿಮ್ಮ ವ್ಯಕ್ತಿತ್ವ ಇನ್ನೂ ಮೇಲೆ ಹೋಗಿರೋದು. ಆದರೆ ಆತ್ಮಸಾಕ್ಷಿಗೆ ಅನುಗುಣವಾಗಿ ಅಂತ ನಮ್ಮನ್ನ ಅನರ್ಹ ಮಾಡಿ ಎರಡು ವಿಧಾನಸಭೆಯನ್ನು ಕಗ್ಗೊಲೆ ಮಾಡಿಬಿಟ್ರಿ ಅಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅಸಮಾಧಾನ ಹೊರಹಾಕಿದರು.

  • ಅನರ್ಹಗೊಳಿಸಿದ್ದೇ ಕಾನೂನು ಬಾಹಿರ, ಆತುರದ ನಿರ್ಧಾರ – ಬುಧವಾರಕ್ಕೆ ಮುಂದೂಡಿಕೆ

    ಅನರ್ಹಗೊಳಿಸಿದ್ದೇ ಕಾನೂನು ಬಾಹಿರ, ಆತುರದ ನಿರ್ಧಾರ – ಬುಧವಾರಕ್ಕೆ ಮುಂದೂಡಿಕೆ

    – 7 ದಿನ ಅವಕಾಶ ನೀಡಲಿಲ್ಲ
    – ಸ್ಪೀಕರ್ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ
    – ಉಪ ಚುನಾವಣೆಗೆ ಸುಪ್ರೀಂ ತಡೆ ನೀಡಬೇಕು

    ನವದೆಹಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.

    ಇಂದು ನ್ಯಾ. ಎನ್‍ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಅನರ್ಹ ಶಾಸಕರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಹಾಗೂ ಕಾಂಗ್ರೆಸ್ ಪರ ಕಪಿಲ್ ಸಿಬಲ್ ವಾದ ಮಂಡಿಸಿದರು.

    ಆರಂಭದಲ್ಲಿ ವಾದ ಆಲಿಸಿದ ಸುಪ್ರೀಂಕೋರ್ಟ್ ಕೆಲ ಹೊತ್ತು ವಿಚಾರಣೆ ಮುಂದೂಡಿತು. ಬಳಿಕ ಮಧ್ಯಾಹ್ನ 12:30 ಬಳಿಕ ಒಂದೂವರೆ ಗಂಟೆಗಳ ಕಾಲ ಸುದೀರ್ಘ ವಿಚಾರಣೆ ನಡೆಯಿತು. ಮೊದಲು ವಾದ ಆರಂಭಿಸಿದ ಅನರ್ಹ ಶಾಸಕರ ವಕೀಲ ಮುಕುಲ್ ರೋಹ್ಟಗಿ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇರುವಾಗ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆ ಮಾಡಿದೆ. ಸೆಪ್ಟೆಂಬರ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಹಾಗಾಗಿ ಮಧ್ಯಂತರ ಚುನಾವಣೆಗೆ ತಡೆಯಾಜ್ಞೆ ನೀಡಬೇಕು. ಇಲ್ಲದಿದ್ದರೆ ಎಲ್ಲ ಅನರ್ಹ ಶಾಸಕರಿಗೂ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.

    ಕಾಂಗ್ರೆಸ್ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಸುದೀರ್ಘ ವಿಚಾರಣೆ ಅವಕಾಶ ಕೊಡಬೇಕು ಮತ್ತು ಚುನಾವಣೆಗೆ ತಡೆ ನೀಡಬಾರದು. ಅನರ್ಹ ಶಾಸಕರು ಚುನಾವಣೆ ಸ್ಪರ್ಧೆಗೆ ಅವಕಾಶ ಕೊಡಬಾರದು ಎಂದರು. ಈ ಬಗ್ಗೆ ಸುಧೀರ್ಘ ವಿಚಾರಣೆ ನಡೆಸುವುದಾಗಿ ಹೇಳಿದ ಪೀಠ ಬುಧವಾರ ಮುಕುಲ್ ರೋಹ್ಟಗಿ ಹಾಗೂ ಗುರುವಾರ ಕಪಿಲ್ ಸಿಬಲ್ ವಾದ ಮಂಡನೆಗೆ ಅವಕಾಶ ನೀಡುವುದಾಗಿ ಹೇಳಿತು. ಮಧ್ಯಂತರ ಆದೇಶಕ್ಕೆ ಸೀಮಿತವಾಗಿರುವಂತೆ ವಾದ ಮಂಡಿಸಲು ಸೂಚನೆ ನೀಡಿತು.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಪೀಕರ್ ಕಚೇರಿಗೆ, ಜೆಡಿಎಸ್ ರಾಜ್ಯಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ರೋಹ್ಟಗಿ ವಾದ ಹೀಗಿತ್ತು:
    ಶಾಸಕರ ರಾಜೀನಾಮೆ ವಿಚಾರದಲ್ಲಿ ಅಂದಿನ ಸ್ಪೀಕರ್ ಅವರು ನ್ಯಾಯಬದ್ಧವಾಗಿ ನಡೆದುಕೊಂಡಿಲ್ಲ. ರಾಜೀನಾಮೆ ಅಂಗೀಕಾರ ಮಾಡದೇ ಅನರ್ಹ ಮಾಡಿದ್ದಾರೆ. ಸುಪ್ರೀಂಕೋರ್ಟಿಗೆ ಮೊದಲು ರಾಜೀನಾಮೆ ಅಂಗಿಕರಿಸಲು ಹೇಳಿತ್ತು. ಅದಾಗ್ಯೂ ಅನರ್ಹ ಮಾಡಿದ್ದಕ್ಕೆ ಶಾಸಕರೆಲ್ಲ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯುಕ್ತರು ಹೇಳಿದ್ದಾರೆ. ಈ ಮೂಲಕ ಅನರ್ಹ ಶಾಸಕರ ಹಕ್ಕನ್ನೇ ಕಸಿಯಲಾಗಿದೆ. ಹೀಗಾಗೀ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡಲೇಬೇಕು.

    ಶಾಸಕರ ರಾಜೀನಾಮೆ ಸ್ವಯಂಪ್ರೇರಿತ ಹಾಗೂ ವೈಯಕ್ತಿಕ. ಆದರೆ ಅಂದಿನ ಸ್ಪೀಕರ್ ಅದನ್ನು ಕ್ರಮಬದ್ಧವಾಗಿ ತೆಗೆದುಕೊಂಡು ಹೋಗಲಿಲ್ಲ. ಶಾಸಕರನ್ನು ಅನರ್ಹಗೊಳಿಸಿದ್ದೇ ಕಾನೂನು ಬಾಹಿರ ಮತ್ತು ಆತುರದ ನಿರ್ಧಾರ. ಸ್ಪೀಕರ್ ನೋಟಿಸ್ ನೀಡಿದ ಬಳಿಕ ಅದಕ್ಕೆ ಉತ್ತರಿಸಲು ಏಳು ದಿನ ಕಾಲಾವಕಾಶ ನೀಡಬೇಕು. ಆದರೆ ಮೂರು ದಿನ ಮಾತ್ರ ನೀಡಲಾಗಿತ್ತು. ಸ್ಪೀಕರ್ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಬಂಡಾಯ ಎದ್ದಿದ್ದ ಈ ಶಾಸಕರ ಮನವಿಯನ್ನು ಪುರಸ್ಕಾರ ಮಾಡಲಿಲ್ಲ. ಇದು ವಿಪ್ ಉಲ್ಲಂಘನೆಯ ಪ್ರಕರಣ ಅಲ್ಲವೇ ಅಲ್ಲ.

    ಅರ್ಜಿ ಸಲ್ಲಿಸಿ ಎಂಟು ವಾರಗಳಾಗಿದ್ದು ಈಗ ಉಪ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ನಾಮಪತ್ರ ಸಲ್ಲಿಕೆ ಗೆ ಸೆಪ್ಟೆಂಬರ್ 30 ಕೊನೆಯ ದಿನ ಹಾಗಾಗಿ ಪ್ರಕರಣದ ತುರ್ತು ವಿಚಾರಣೆ ನಡೆಯಬೇಕು. ಉಪಚುನಾವಣೆ ಅಧಿಸೂಚನೆ ತಡೆ ನೀಡಬೇಕು, ಇಲ್ಲ ಉಪ ಚುನಾವಣೆ ನಿಲ್ಲಲು ಅವಕಾಶ ನೀಡಬೇಕು ಅಥವಾ ಸ್ಪೀಕರ್ ಆದೇಶ ರದ್ದು ಮಾಡಬೇಕು. ಸಂವಿಧಾನದ ಪ್ರಕಾರ ಅನರ್ಹ ಶಾಸಕರಿಗೆ ಸ್ಪರ್ಧಿಸುವ ಅವಕಾಶ ಇದೆ. ಸ್ಪೀಕರ್ 2023ರವರೆಗೆ ಸ್ಪರ್ಧೆಗೆ ನಿಷೇಧ ಹೇರಿದ್ದು ಅಪ್ರಸ್ತುತ. ಈಗ ಪ್ರಕರಣ ಇತ್ಯರ್ಥ ಆಗದಿದ್ದರೆ 2023 ರವರೆಗೂ ಸ್ಪರ್ಧೆ ಸಾಧ್ಯವಿಲ್ಲ. ಅನರ್ಹ ಶಾಸಕರು ತಮ್ಮ ಅವಕಾಶ ಕಳೆದುಕೊಳ್ಳುತ್ತಾರೆ.

    ಚುನಾವಣಾ ಆಯೋಗ ಕೂಡಾ ಸ್ಪರ್ಧೆ ಮಾಡುವಂತಿಲ್ಲ ಎಂದಿದೆ. ಹೀಗಾಗಿ ಕೋರ್ಟ್ ಮಧ್ಯಪ್ರವೇಶ ಮಾಡಲೇಬೇಕು. ಅನರ್ಹ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ಮಾಡಿದ ಉದಾಹರಣೆ ಇಲ್ಲ, ಯಾವುದೇ ಆಧಾರ ಇಲ್ಲದೇ ಪಕ್ಷ ವಿರೋಧಿ ಚಟುವಟಿಕೆ ಆರೋಪ ಮಾಡಿ ಅನರ್ಹ ಮಾಡಿರುವ ಸ್ಪೀಕರ್ ನಿರ್ಧಾರ ಕಾನೂನುಬಾಹಿರ. ಈ ಹಿಂದೆ ಅಪರೂಪದ ಪ್ರಕರಣದಲ್ಲಿ ಚುನಾವಣೆಗೆ ತಡೆ ನೀಡಿದ ಉದಾಹರಣೆಗಳಿವೆ. 2015 ರಲ್ಲಿ ಅಲಹಾಬಾದ್ ಹೈಕೋರ್ಟ್ ಅನರ್ಹತೆ ಪ್ರಕರಣದಲ್ಲಿ ಇಂತದೊಂದು ಆದೇಶ ನೀಡಿತ್ತು. ಈ ಆಧಾರದ ಮೇಲೆ ಚುನಾವಣೆಗೆ ತಡೆ ನೀಡಬಹದು.

    ಸಂವಿಧಾನದಲ್ಲಿ ಎರಡು ರೀತಿಯಲ್ಲಿ ಶಾಸಕರನ್ನು ಅನರ್ಹತೆ ಮಾಡಲು ಅವಕಾಶವಿದೆ. ವಿಧಿ 191/1 ಪ್ರಕಾರ ಎರಡು ಸದ್ಯ ಇರುವ ಶಾಸಕತ್ವದಿಂದ ಅನರ್ಹತೆ ಮಾಡಬಹುದು. ಮುಂದೆ ಅವಧಿ ಮುಗಿಯುವವರೆಗೂ ಶಾಸಕರಾಗುವಂತಿಲ್ಲ ಎಂದು ಅನರ್ಹ ಮಾಡಬಹುದು. ಶಾಸಕ ಕ್ರಿಮಿನಲ್ ಪ್ರಕರಣದ ಅಡಿ ಜೈಲು ಸೇರಿರಬೇಕು ಅಥವಾ ಆರೋಗ್ಯದ ಸಮಸ್ಯೆ, ಬುದ್ಧಿ ಭ್ರಮಣೆ ಮುಂತಾದ ಸಂದರ್ಭದಲ್ಲಿ ಇದು ಅನ್ವಯವಾಗುತ್ತದೆ.

    191/2 ವಿಧಿ ಪ್ರಕಾರ ಶಾಸಕ ಸ್ಥಾನದಿಂದ ಮಾತ್ರ ಅನರ್ಹಗೊಳಿಸಲು ಸಾಧ್ಯ, ಅನರ್ಹರ ಮರು ಆಯ್ಕೆ ಬಗ್ಗೆ ಯಾವುದೇ ಆದೇಶ ಮಾಡುವಂತಿಲ್ಲ. ವಿಧಿ 361/ಬಿ ಪ್ರಕಾರ ಅನರ್ಹರಾದವರು ಅವಧಿ ಮುಗಿಯುವರೆಗೂ ಲಾಭದಾಯಕ ಹುದ್ದೆ ಹೊಂದುವಂತಿಲ್ಲ, ಮರು ಆಯ್ಕೆ ಆಗುವ ವಿಷಯದ ಬಗ್ಗೆ ಯಾವುದೇ ಉಲ್ಲೇಖ ಇಲ್ಲ.

    ಸಿಬಲ್ ಆಕ್ಷೇಪ
    ರಮೇಶ್ ಜಾರಕಿಹೋಳಿಗೆ ಕಾಲಾವಕಾಶ ನೀಡಲಾಗಿತ್ತು. ಫೆಬ್ರವರಿಯಲ್ಲಿ ನೋಟಿಸ್ ನೀಡಲಾಗಿತ್ತು, ಸಂವಿಧಾನಿಕ ಕ್ರಮಗಳನ್ನು ಅನುಸರಿಸಿ ಅನರ್ಹ ಮಾಡಲಾಗಿದೆ. ಪ್ರಕರಣದ ಸುದೀರ್ಘ ವಿಚಾರಣೆ ಅವಶ್ಯಕತೆ ಇದೆ. ಮುಂದಿನ ವಾರಕ್ಕೆ ವಿಚಾರಣೆ ಮುಂದೂಡಬೇಕು ಎಂದು ಕೆಪಿಸಿಸಿ ಪರ ಕಪಿಲ್ ಸಿಬಲ್ ವಾದಿಸಿದರು. ಈ ವಾದಕ್ಕೆ ರೋಹ್ಟಗಿ ಆಕ್ಷೇಪಿಸಿ ಪ್ರತಿಕ್ರಿಯೆ ಇಬ್ಬರಿಗೆ ಮಾತ್ರ ಮೊದಲು ನೋಟಿಸ್ ನೀಡಲಾಗಿದೆ. ಮಿಕ್ಕವರು ರಾಜೀನಾಮೆ ಸಲ್ಲಿಸಿದ ನಂತರವೇ ನೋಟಿಸ್ ನೀಡಲಾಗಿದೆ ಎಂದು ಪ್ರತಿಕ್ರಿಯಿಸಿದರು.

    ಈ ವೇಳೆ ಮಧ್ಯ ಪ್ರವೇಶ ಮಾಡಿದ ನ್ಯಾಯಪೀಠ ಬುಧವಾರ ರೊಹ್ಟಗಿ ವಾದ ಮಂಡಿಸಲಿ, ನೀವೂ ಗುರುವಾರ ವಾದ ಮಾಡಿ ಎಂದು ಕಪಿಲ್ ಸಿಬಲ್ ಅವರಿಗೆ ಸೂಚನೆ ನೀಡಿತು. ಬಳಿಕ ಬುಧುವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತು. ಕೋರ್ಟ್ ಹಾಲ್ ನಲ್ಲಿ ಉಪಸ್ಥಿತಿ ಇದ್ದ ಚುನಾವಣೆ ಆಯೋಗ ಪರ ವಕೀಲ ರಾಕೇಶ್ ದ್ವಿವೇದಿ ಅನರ್ಹ ಶಾಸಕರು ಸ್ಪರ್ಧೆ ಮಾಡುವ ಬಗ್ಗೆ ಆಕ್ಷೇಪಣೆ ಇಲ್ಲ ಅವರು ಸ್ಪರ್ಧೆ ಮಾಡಲಿ, ಚುನಾವಣೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕೆಪಿಸಿಸಿ ಪರ ವಕೀಲ ಕಪಿಲ್ ಸಿಬಲ್ ವಿರೋಧ ವ್ಯಕ್ತಪಡಿಸಿದರು, ನೀವು ಇನ್ನೂ ಪ್ರಕರಣದಲ್ಲಿ ಪಾರ್ಟಿ ಆಗಿಲ್ಲ. ಹೀಗಾಗಿ ನೀವೂ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ವಿರೋಧಿಸಿದ್ರು. ಈ ವೇಳೆ ಕೋರ್ಟ್ ಪ್ರಕರಣದಲ್ಲಿ ಪಾರ್ಟಿ ಮಾಡುವಂತೆ ಮುಕುಲ್ ರೊಹ್ಟಗಿಗೆ ಸೂಚನೆ ನೀಡಿತು. ಪಾರ್ಟಿ ಆಗಿರದ ಕಾರಣ ಕೋರ್ಟ್ ಕೂಡಾ ಚುನಾವಣೆ ಆಯೋಗದ ಅಭಿಪ್ರಾಯ ಪರಿಗಣಿಸಲಿಲ್ಲ.

  • ಬಿಜೆಪಿ ಫ್ಲೆಕ್ಸ್‌ನಲ್ಲಿ ರಮೇಶ್ ಜಾರಕಿಹೊಳಿ ಚಿತ್ರ

    ಬಿಜೆಪಿ ಫ್ಲೆಕ್ಸ್‌ನಲ್ಲಿ ರಮೇಶ್ ಜಾರಕಿಹೊಳಿ ಚಿತ್ರ

    ಕೊಪ್ಪಳ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯವರ ಫೋಟೋ ಆಗಲೇ ಬಿಜೆಪಿ ಫ್ಲೆಕ್ಸ್, ಬ್ಯಾನರ್ ಗಳಲ್ಲಿ ಭಾವಚಿತ್ರ ರಾರಾಜಿಸುತ್ತಿದೆ.

    ಕೊಪ್ಪಳದಲ್ಲಿ ಬಿಜೆಪಿ ನಾಯಕರು ಹಾಕಿರುವ ಫ್ಲೆಕ್ಸ್ ನಲ್ಲಿ ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಭಾವಚಿತ್ರವಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಜಾರಕಿಹೊಳಿ ಅವರ ಮೇಲೆ ಇನ್ನೂ ಅನರ್ಹತೆ ತೂಗುಗತ್ತಿ ನೇತಾಡುತ್ತಿದೆ. ಅಲ್ಲದೆ, ಜಾರಕಿಹೊಳಿ ಪಕ್ಷಕ್ಕೆ ಸೇರುವ ಕುರಿತು ಬಿಜೆಪಿ ನಾಯಕರು ಇನ್ನೂ ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ. ಆಗಲೇ ಫ್ಲೆಕ್ಸ್ ನಲ್ಲಿ ರಮೇಶ್ ಜಾರಕಿಹೊಳಿ ಭಾವಚಿತ್ರವನ್ನು ಹಾಕಲಾಗಿದೆ.

    ನಗರದ ಅಶೋಕ ವೃತ್ತದಲ್ಲಿ ಬಿಜೆಪಿ ಯುವ ಮುಖಂಡ ಹಾಲೇಶ್ ಕಂದಾರಿ, ಯಡಿಯೂರಪ್ಪನವರು ಮುಖ್ಯಮಂತ್ರಿ ಆದ ಹಿನ್ನಲೆಯಲ್ಲಿ ಅಭಿನಂದನೆ ಸಲ್ಲಿಸಲು ಹಾಕಿರುವ ಫ್ಲೆಕ್ಸ್ ನಲ್ಲಿ ರಮೇಶ್ ಜಾರಕಿಹೊಳಿ ಫೋಟೋ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರನ್ನು ಇತ್ತೀಚಿಗಷ್ಟೇ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

    ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಬಿಜೆಪಿ ಸೇರುವುದಕ್ಕೂ ಮೊದಲೇ ರಮೇಶ್ ಜಾರಕಿಹೊಳಿ ಅವರ ಭಾವಚಿತ್ರವನ್ನು ಬಿಜೆಪಿ ನಾಯಕರು ತಮ್ಮ ಫ್ಲೆಕ್ಸ್‌ನಲ್ಲಿ ಹಾಕಿಕೊಂಡಿರುವುದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

  • ಸ್ಪೀಕರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ – ಅನರ್ಹ ಶಾಸಕರ ಅರ್ಜಿಯಲ್ಲಿ ಏನಿದೆ?

    ಸ್ಪೀಕರ್ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ – ಅನರ್ಹ ಶಾಸಕರ ಅರ್ಜಿಯಲ್ಲಿ ಏನಿದೆ?

    ನವದೆಹಲಿ: ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಅನರ್ಹತೆ ಆದೇಶವನ್ನು ಪ್ರಶ್ನಿಸಿ 15 ಜನ ಅನರ್ಹಗೊಂಡ ಶಾಸಕರು ಸುಪ್ರೀಂ ಮೆಟ್ಟಿಲೇರಿದ್ದಾರೆ.

    ಕಳೆದ ಸೋಮವಾರ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್‍ ಕುಮಟಳ್ಳಿ ಅರ್ಜಿ ಸಲ್ಲಿಸಿದ್ದರು. ಇದೀಗ ಮತ್ತೆ 15 ಅನರ್ಹ ಶಾಸಕರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಸ್ಪೀಕರ್ ಆದೇಶವನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಇಲ್ಲವೇ ಮಂಗಳವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.

    ಅರ್ಜಿಯಲ್ಲಿ ಏನಿದೆ?
    ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ಆದೇಶ ಅಸಂವಿಧಾನಿಕವಾಗಿದ್ದು, ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ. ಮೊದಲು ರಾಜೀನಾಮೆ ಅಂಗಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ಇದನ್ನು ಮಾನ್ಯ ಮಾಡದೇ ಸ್ಪೀಕರ್ ಶಾಸಕರನ್ನು ಅನರ್ಹ ಮಾಡಿ ನ್ಯಾಯಾಂಗ ನಿಂದನೆ ಮಾಡಿದ್ದಾರೆ.

    ವಿಶ್ವಾಸಮತ ಯಾಚನೆಗೆ ಹಾಜರಾಗುವ ಸಂಬಂಧ ಸುಪ್ರೀಂ ಕೋರ್ಟ್ ಶಾಸಕರಿಗೆ ವಿನಾಯಿತಿ ನೀಡಿತ್ತು. ಆದರೆ ವಿಶ್ವಾಸಮತದ ವೇಳೆ ವಿಪ್ ಉಲ್ಲಂಘನೆ ಮಾಡಿದ ಕಾರಣ ನೀಡಿ ಅನರ್ಹ ಮಾಡಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾಗಿರುವುದು ಪಕ್ಷಾಂತರ ನಿಷೇಧ ಕಾಯಿದೆಯ ಉಲ್ಲಂಘನೆ ಆಗುವುದಿಲ್ಲ. ಸ್ಪೀಕರ್ ಈ ಅಂಶಗಳನ್ನು ಪರಿಗಣಿಸದೆ, ಉದ್ದೇಶ ಪೂರ್ವಕವಾಗಿ ಅನರ್ಹಗೊಳಿಸಿದ್ದಾರೆ.

    ಅನರ್ಹತೆ ನಿಯಮದಡಿ ನೋಟಿಸ್ ಕೊಟ್ಟ ಬಳಿಕ ಶಾಸಕರಿಗೆ ಪ್ರತಿಕ್ರಿಯೆ ನೀಡಲು ಏಳು ದಿನ ಅವಕಾಶ ನೀಡಬೇಕಿತ್ತು. ಆದರೆ ಕೇವಲ 3 ದಿನ ಸಮಯಾವಕಾಶ ಕೊಟ್ಟಿದ್ದಾರೆ. ಪಕ್ಷೇತರ ಶಾಸಕ ಆರ್.ಶಂಕರ್ ವಿಚಾರದಲ್ಲೂ ಸ್ಪೀಕರ್ ನೋಟಿಸ್‍ ನೀಡದೇ ಕ್ರಮ ಕೈಗೊಂಡಿದ್ದಾರೆ. ಕೆಪಿಜೆಪಿ ಕಾಂಗ್ರೆಸ್ ಜೊತೆಗೆ ಇನ್ನೂ ವಿಲೀನಗೊಂಡಿಲ್ಲ, ಪ್ರಕ್ರಿಯೆ ನಡೆಯುತ್ತಿದ್ದವು. ಈ ನಡುವೆಯೇ ಆರ್.ಶಂಕರ್ ಅವರನ್ನು ಅನರ್ಹಗೊಳಿಸಲಾಗಿದೆ. ಅನರ್ಹತೆ ವಿಚಾರವನ್ನು ನಮಗೆ ಮೊದಲೇ ತಿಳಿಸಬೇಕಿತ್ತು. ಆದರೆ, ಸ್ಪೀಕರ್ ನೇರವಾಗಿ ಸುದ್ದಿಗೋಷ್ಠಿ ಮೂಲಕ ಅನರ್ಹತೆ ಆದೇಶ ಹೊರಡಿಸಿದ್ದಾರೆ. ನಿಯಮದಂತೆ 24 ಗಂಟೆಯೊಳಗೆ ಅನರ್ಹತೆಯ ಆದೇಶವನ್ನು ಶಾಸಕರಿಗೆ ತಲುಪಿಸಬೇಕು. ಉದ್ದೇಶ ಪೂರ್ವಕವಾಗಿ ಶಾಸಕರಿಗೆ ಅನರ್ಹತೆ ಆದೇಶ ತಲುಪಿಸಿಲ್ಲ. ಸ್ಪೀಕರ್ ಈ ಪ್ರಕರಣದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ. ಹೀಗಾಗಿ ಸ್ಪೀಕರ್ ನೀಡಿರುವ ಅನರ್ಹತೆವನ್ನು ವಜಾ ಮಾಡಿ, ಸ್ಪೀಕರ್ ಮುಂದೆ ಮರು ವಿಚಾರಣೆಗೆ ಹಾಜರಾಗಲು ಸೂಚಿಸಲು ಅನುಮತಿ ನೀಡಿ.

  • ನಮ್ಮನ್ನು ಸ್ಪೀಕರ್ ಅನರ್ಹ ಮಾಡುತ್ತಾರೆ ಅಂತ ಮೊದಲೇ ಗೊತ್ತಿತ್ತು: ಎಂಟಿಬಿ

    ನಮ್ಮನ್ನು ಸ್ಪೀಕರ್ ಅನರ್ಹ ಮಾಡುತ್ತಾರೆ ಅಂತ ಮೊದಲೇ ಗೊತ್ತಿತ್ತು: ಎಂಟಿಬಿ

    – ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

    ಬೆಂಗಳೂರು: ನಾವು ಅನರ್ಹತೆ ಆಗಲು ಯಾರು ಕಾರಣ ಎನ್ನುವುದನ್ನು ಸದ್ಯದಲ್ಲೇ ಬಹಿರಂಗ ಮಾಡುತ್ತೇನೆ. ಮುಂಬರುವ ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ನೀಡುತ್ತೇನೆ ಎಂದು ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಶಾಸಕ ಎಂಟಿಬಿ ನಾಗರಾಜು ಹೇಳಿಕೆ ನೀಡಿದ್ದಾರೆ.

    ಮುಂಬೈನಿಂದ ಬೆಂಗಳೂರಿಗೆ ವಾಪಸ್ ಬಂದಿರುವ ಕಾಂಗ್ರೆಸ್ ನಾಯಕ ಎಂಟಿಬಿ ನಾಗರಾಜ್ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಮ್ಮ ಮುಖಂಡರೇ ನಮಗೆ ದ್ರೋಹ ಮಾಡಿದರು. ಎಲ್ಲವನ್ನ ಸುದ್ದಿಗೋಷ್ಠಿಯಲ್ಲಿ ತಿಳಿಸುತ್ತೇನೆ. ಅನರ್ಹತೆ ಬಗ್ಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದರು.

    ನನ್ನ ಕ್ಷೇತ್ರದ ಜನರ ಹಾಗೂ ಮುಖಂಡರ ತೀರ್ಮಾನದಂತೆ ನನ್ನ ಮುಂದಿನ ನಡೆ ತೆಗೆದುಕೊಳ್ಳುತ್ತೇನೆ. ನಾವು ಅನರ್ಹತೆ ಆಗಲು ಯಾರು ಕಾರಣ ಹಾಗೂ ಇತರೇ ವಿಚಾರಗಳ ಬಗ್ಗೆ ಮುಂಬರುವ ಮೂರು ದಿನಗಳಲ್ಲಿ ಸ್ಫೋಟಕ ಮಾಹಿತಿ ನೀಡುತ್ತೇನೆ ಎಂದು ಕಿಡಿಕಾರಿದರು.

    ರಾಜೀನಾಮೆಗೆ ಕಾರಣ ಏನು ಎಂಬುದನ್ನು ಕೂಡ ಹೇಳುತ್ತಾನೆ. ನಾನು ಜನಸೇವೆ ಮಾಡಲು ರಾಜಕೀಯಕ್ಕೆ ಬಂದಿದ್ದೇನೆ. ಬೇಕಾದಷ್ಟು ಹಣವನ್ನು ಆ ಭಗವಂತನ ಕೊಟ್ಟಿದ್ದಾನೆ. ಅಧಿಕಾರ, ಹಣದ ಆಸೆಗೆ ನಾನು ಪಕ್ಷ ಬಿಟ್ಟಿಲ್ಲ. ನಮ್ಮನ್ನು ಸ್ಪೀಕರ್ ಅನರ್ಹ ಮಾಡುತ್ತಾರೆ ಅಂತ ಮೊದಲೇ ಗೊತ್ತಿತ್ತು. ಈವರೆಗೂ ನಾನು ಯಾವ ಪಕ್ಷವನ್ನೂ ಸೇರಲು ನಿರ್ಧಾರ ಮಾಡಿಲ್ಲ. ಸಮ್ಮಿಶ್ರ ಸರ್ಕಾರದ ಆಡಳಿತಕ್ಕೆ ಬೇಸತ್ತು ರಾಜೀನಾಮೆ ಕೊಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದರು.

  • ಸ್ಪೀಕರ್ ನಿರ್ಧಾರ ಸಂವಿಧಾನಕ್ಕೆ ಅಪಚಾರ – ಪಿ.ರಾಜೀವ್

    ಸ್ಪೀಕರ್ ನಿರ್ಧಾರ ಸಂವಿಧಾನಕ್ಕೆ ಅಪಚಾರ – ಪಿ.ರಾಜೀವ್

    ಬೆಂಗಳೂರು: ವಂಶಪಾರಂಪರ್ಯದ ರಾಜಕೀಯ ಪಕ್ಷದಲ್ಲಿ ಜನಪ್ರತಿನಿಧಿಗಳಿಗೆ ಸ್ವಾತಂತ್ರ್ಯವಿಲ್ಲ. ಅತೃಪ್ತ ಶಾಸಕರನ್ನು ಹೋಲ್ ಸೇಲ್ ಆಗಿ ಅನರ್ಹಗೊಳಿಸಿರೋದನ್ನ ನಾವು ಸ್ಪೀಕರ್ ಅವರಿಂದ ನಿರೀಕ್ಷಿಸಿರಲಿಲ್ಲ ಎಂದು ಬಿಜೆಪಿ ಶಾಸಕ ಪಿ. ರಾಜೀವ್ ಕಿಡಿಕಾರಿದ್ದಾರೆ.

    ಬಿಎಸ್‍ವೈ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅತೃಪ್ತ ಶಾಸಕರನ್ನ ಸ್ಪೀಕರ್ ರಮೇಶ್ ಕುಮಾರ್ ಹೋಲ್ ಸೇಲ್ ಆಗಿ ಅನರ್ಹ ಮಾಡಿರೋದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ. ಇದು ಸಂವಿಧಾನಕ್ಕೆ ಮಾಡಿರೋ ಅಪಚಾರ. ಸ್ಪೀಕರ್ ಸುಪ್ರೀಂ ಆದೇಶವನ್ನ ಸಂಪೂರ್ಣವಾಗಿ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಯಾವ ಕಾನೂನಿನಡಿಯಲ್ಲಿ ಅನರ್ಹ ಮಾಡಿದ್ರಿ: ಶೋಭಾ ಕರಂದ್ಲಾಜೆ ಪ್ರಶ್ನೆ

    ಪ್ರಜಾತಂತ್ರ ವ್ಯವಸ್ತೆಯಲ್ಲಿ ಸ್ಪೀಕರ್ ಹುದ್ದೆಯನ್ನ ಇನ್ನೊಬ್ಬರ ಅನುಕೂಲಕ್ಕೆ ಬಳಸಿಕೊಂಡ ದೊಡ್ಡ ಕಪ್ಪು ಚುಕ್ಕೆಯನ್ನ ರಮೇಶ್ ಕುಮಾರ್ ಅವರು ಹೊತ್ತುಕೊಳ್ಳಬೇಕಾಗಿದೆ. ಅತೃಪ್ತ ಶಾಸಕರ ರಾಜೀನಾಮೆಯ ಬಗ್ಗೆ ಇತ್ಯರ್ಥ ಪಡಿಸಿ, ಆ ವರದಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಸುಪ್ರೀಂ ಆದೇಶಿಸಿತ್ತೇ ವಿನಾಃ ಅನರ್ಹಗೊಳಿಸಿ ಎಂದಿರಲಿಲ್ಲ. ಕಾಂಗ್ರೆಸ್, ಜನತಾದಳ ಪಕ್ಷ ಕೆಲವೇ ಕೆಲವು ವ್ಯಕ್ತಿಗಳ ಕಪಿಮುಷ್ಟಿಯಲ್ಲಿದೆ. ಸ್ಪೀಕರ್ ತೀರ್ಪನ್ನು ಸುಪ್ರೀಂ ನಿರಾಕರಿಸಿ, ಈ ವಿಚಾರದಲ್ಲಿ ಅವರಿಗೆ ಎಚ್ಚರಿಕೆ ನೀಡುತ್ತೆ ಎಂದು ನಾನು ಭಾವಿಸಿದ್ದೇನೆ ಎಂದು ರಾಜೀವ್ ಸ್ಪೀಕರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದರು.

    ವಂಶಪಾರಂಪರ್ಯದ ರಾಜಕೀಯ ಪಕ್ಷದಲ್ಲಿ ಆಯ್ಕೆ ಆಗುವ ಬೇರೆ ಜನಪ್ರತಿನಿಧಿಗಳಿಗೆ ಅವಕಾಶವಿಲ್ಲ, ಸ್ವಾತಂತ್ರ್ಯವಿಲ್ಲ. ಜನರಿಂದ ಆಯ್ಕೆಯಾದರೂ ಅವರ ಅಣತಿಗೆ ಕುಣಿಯುವಂತವರಿಗೆ ಕಾಲ ಎನ್ನುವುದು ಮತ್ತೆ ಸಾಬೀತಾಗಿದೆ. ಈ ತೀರ್ಪು ಸಂವಿಧಾನಕ್ಕೆ, ಕಾನೂನಿಗೆ ಮಾಡದ ಅಪಚಾರವಾಗಿದೆ ಎಂದು ಸ್ಪೀಕರ್ ಹಾಗೂ ಕೈ-ದಳದ ವಿರುದ್ಧ ವಾಗ್ದಾಳಿ ನಡೆಸಿದರು.

  • ಸ್ಪೀಕರ್ ಮಾತು, ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ತಿದ್ದಾರೆ – ಸಿಟಿ ರವಿ ಅಸಮಾಧಾನ

    ಸ್ಪೀಕರ್ ಮಾತು, ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ತಿದ್ದಾರೆ – ಸಿಟಿ ರವಿ ಅಸಮಾಧಾನ

    ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಬಂಡಾಯ ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ನಿರ್ಧಾರಕ್ಕೆ ಬಿಜೆಪಿ ಶಾಸಕ ಸಿಟಿ ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಬಿಎಸ್‍ ಯಡಿಯೂರಪ್ಪ ಅವರು ಸಿಎಂ ಆಗುತ್ತಿರುವ ಕುರಿತು ಸಂತಸ ವ್ಯಕ್ತಪಡಿಸಿ ಮಲ್ಲೇಶ್ವರದಲ್ಲಿರುವ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ವಿಧಾನ ಸಭಾಧ್ಯಕ್ಷರು ನಿನ್ನೆ ತೆಗೆದುಕೊಂಡ ನಿರ್ಣಯ ಸರಿಯಿಲ್ಲ. ಕೆಲ ತಿಂಗಳ ಹಿಂದೆ ಕೊಟ್ಟಿರುವ ಶಾಸಕರ ಅನರ್ಹ ದೂರಿಗೆ ಈಗ ಅವರನ್ನು ಅನರ್ಹ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ರಾಜೀನಾಮೆ ವಿಚಾರವಾಗಿ ತೀರ್ಮಾನ ಮಾಡಿ ಎಂದು ಹೇಳಿದ್ದರು ಕೂಡ ಅವರು ಅನರ್ಹ ಮಾಡಿದ್ದಾರೆ. ಆ ಮೂಲಕ ಸ್ಪೀಕರ್ ಮಾತು ಮತ್ತು ಕೃತಿಗೆ ಸಂಬಂಧವೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ ಎಂದರು.

    ಪತ್ರಿಕಾಗೋಷ್ಠಿ ನಡೆಸುವ ಸಂದರ್ಭದಲ್ಲಿ ಸ್ಪೀಕರ್ ಅವರಿಗೆ ನಾನು ತಪ್ಪು ಮಾಡುತ್ತಿದ್ದೇನೆ ಎನ್ನುವಂತೆ ಕಂಡು ಬಂದರು. ಆದ್ದರಿಂದಲೇ ಅವರು ಒಂದೂವರೆ ಗಂಟೆಗಳ ಕಾಲ ವಿವರಣೆ ನೀಡಿದ್ದಾರೆ. ಸಭಾಧ್ಯಕ್ಷರ ಸ್ಥಾನದಲ್ಲಿ ಇರುವ ಅವರು, ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ. ಅವರಿಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ಕಳೆದ 14 ತಿಂಗಳಿಂದ ಪಂಚ ತಾರಾ ಹೋಟೆಲ್‍ನಲ್ಲಿದ್ದುಕೊಂಡೇ ಆಡಳಿತ ಮಾಡುತ್ತಿದ್ದ ಕುಮಾರಸ್ವಾಮಿ ಅವರ ವಾಸ್ತವ್ಯದಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ರೆಸಾರ್ಟ್ ವಾಸ್ತವ್ಯದ ಬಗ್ಗೆಯೂ ಮಾತನಾಡಬೇಕಿತ್ತು. ಅಲ್ಲದೇ ಎಲ್ಲೋ ಒಂದು ಕಡೆ ಸ್ಪೀಕರ್ ಅವರ ನಡೆ ಅನುಮಾನ ಹುಟ್ಟಿಸಿದೆ. ಸಭಾಧ್ಯಕ್ಷರೇ ಸುಪ್ರೀಂ ಅಲ್ಲ, ಅಂತಿಮವಾಗಿ ನ್ಯಾಯಾಲಯ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂಬ ವಿಶ್ವಾಸ ಇದೆ ಎಂದರು.

    ಬಿಎಸ್‍ವೈ ಅವರು ಬಹುಮತ ಸಾಬೀತು ಪಡಿಸುವ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಬಹುಮತ ಸಾಬೀತು ಪಡೆಸಬೇಕಾಗಿರುವುದು ವಿಧಾನ ಸೌಧದಲ್ಲಿ ವಿನಃ, ರಾಜಭವನದಲ್ಲಿ ಅಲ್ಲ. ಎಲ್ಲರೂ ಕಾದು ನೋಡಿ. ಸದನದಲ್ಲೇ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಡೆದಿದ್ದು, ಅಲ್ಲಿ ಅವರು ವಿಫಲರಾದರು. ಆದರೆ ಬಿಎಸ್‍ವೈ ಅವರು ಖಂಡಿತ ಬಹುಮತ ಸಾಬೀತು ಪಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • 4 ವಾರಗಳ ಸಮಯ ನೀಡಿ – ಸ್ಪೀಕರ್ ಗೆ ಅತೃಪ್ತರ ಪತ್ರ

    4 ವಾರಗಳ ಸಮಯ ನೀಡಿ – ಸ್ಪೀಕರ್ ಗೆ ಅತೃಪ್ತರ ಪತ್ರ

    ಬೆಂಗಳೂರು: ಇಂದು ವಿಚಾರಣೆಗೆ ಹಾಜರಾಗಿ ಎಂದು ಸೂಚಿಸಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದು ಹಾಜರಾಗಲು 4 ವಾರಗಳ ಸಮಯ ನೀಡಿ ಎಂದು ಕೇಳಿಕೊಂಡಿದ್ದಾರೆ.

    ಪತ್ರದಲ್ಲಿ ನಾವು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆಯನ್ನು ಶೀಘ್ರವೇ ಅಂಗೀಕರಿಸಬೇಕೆಂದು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಇದರ ನಡುವೆ ನಮ್ಮ ಪಕ್ಷದ ಕಡೆಯಿಂದ ಅನರ್ಹತೆ ಅರ್ಜಿ ನಿಮ್ಮ ಬಳಿ ಬಂದಿದೆ ಅಂತ ಗೊತ್ತಾಗಿದೆ ಎಂದು ಉಲ್ಲೇಖಿಸಿದ್ದಾರೆ.

    ಅನರ್ಹತೆ ವಿಚಾರ ಸಂಬಂಧ ಪಕ್ಷದ ಕಡೆಯಿಂದ ಯಾವುದೇ ನೋಟಿಸ್ ಬಂದಿಲ್ಲ. ಆದರೆ ಇಂದು ನೀವು ಹಾಜರಾಗಿ ಎಂದು ನೋಟಿಸ್ ನೀಡಿದ್ದೀರಿ. ಕೆಲ ಅನಿವಾರ್ಯ ಕಾರಣಗಳಿಂದ ನಾವು ಹೊರಗಡೆ ಇದ್ದು ನಿಮ್ಮ ಪ್ರಶ್ನೆಗೆ ಉತ್ತರಿಸಲು ನಮಗೆ 4 ವಾರಗಳ ಸಮಯ ಬೇಕು ಎಂದು ಸ್ಪೀಕರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದಿದ್ದಾರೆ.

    ಸೋಮವಾರ ಶಾಸಕಾಂಗ ಪಕ್ಷದ ಅಧ್ಯಕ್ಷರಿಗೆ ವಿಪ್ ನೀಡುವ ಜವಾಬ್ದಾರಿ ಇದೆ ಎಂದು ಸ್ಪೀಕರ್ ರಮೇಶ್ ಕುಮಾರ್ ರೂಲಿಂಗ್ ನೀಡಿದ್ದಾರೆ. ವಿಪ್ ನೀಡಬಹುದೋ ಇಲ್ಲವೋ ಎನ್ನುವುದರ ಬಗ್ಗೆ ಸಿದ್ದರಾಮಯ್ಯ ಕ್ರಿಯಾ ಲೋಪ ಎತ್ತಿದ್ದಾರೆ. ಶಾಸಕಾಂಗ ಪಕ್ಷದ ನಾಯಕರು ಸದಸ್ಯರಿಗೆ ವಿಪ್ ನೀಡಬಹುದು. ಅದು ಸಂವಿಧಾನದತ್ತವಾದ ಹಕ್ಕು. ಈ ವಿಚಾರದ ಬಗ್ಗೆ ನಾನು ಕಾನೂನು ಪಂಡಿತರ ಜೊತೆ ಚರ್ಚೆ ನಡೆಸಿದ್ದೇನೆ. ಇದನ್ನು ನಾನು ಅಧಿಕಾರ ಎಂದು ಕರೆಯುವುದಿಲ್ಲ. ಇದನ್ನು ಜವಾಬ್ದಾರಿ ಎಂದು ಕರೆಯುತ್ತೇನೆ. ಹೀಗಾಗಿ ಶಾಸಕಾಂಗ ನಾಯಕರು ಸದಸ್ಯರಿಗೆ ವಿಪ್ ನೀಡಬಹುದು ಎಂದು ಸ್ಪೀಕರ್ ರೂಲಿಂಗ್ ನೀಡಿದರು.

    ವಿಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿ ಸ್ಪಷ್ಟನೆ ನೀಡುವಂತೆ ಕೋರಿದ್ದಾರೆ. ಜುಲೈ 17ರಂದು ಅತೃಪ್ತರ ಬಗ್ಗೆ ನೀಡಿರುವ ಮಧ್ಯಂತರ ಆದೇಶದಿಂದ ಗೊಂದಲ ಸೃಷ್ಟಿಯಾಗಿದೆ. ಕಲಾಪಕ್ಕೆ ಹಾಜರಾಗಬೇಕೇ? ಬೇಡವೇ ಎನ್ನುವುದನ್ನು ಶಾಸಕರ ವಿವೇಚನೆಗೆ ಬಿಡಲಾಗಿದೆ. ಈ ಆದೇಶ ರಾಜಕೀಯ ಪಕ್ಷಗಳ ವಿಪ್ ಅಧಿಕಾರವನ್ನು ಕಿತ್ತುಕೊಳ್ಳಲಿದೆ. ಶೆಡ್ಯೂಲ್ 102(1)ಬಿ ಅನ್ವಯ ರಾಜಕೀಯ ಪಕ್ಷಗಳಿಗೆ ವಿಪ್ ಅಧಿಕಾರವಿದೆ. ವಿಶ್ವಾಸಮತ ಸಾಬೀತು ವೇಳೆ ಶಾಸಕರಿಗೆ ವಿಪ್ ನೀಡುವುದು ಅನಿವಾರ್ಯವಾಗಿದೆ. ನೀವು ನೀಡಿರುವ ಆದೇಶ ಈ ವ್ಯಾಪ್ತಿಗೆ ಬರುತ್ತದೋ ಇಲ್ಲವೋ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಕೇಳಿಕೊಂಡಿದ್ದಾರೆ.

  • ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

    ಅನರ್ಹತೆಯ ಅಸ್ತ್ರದಿಂದ ಪಕ್ಷೇತರ ಶಾಸಕ ಆರ್.ಶಂಕರ್ ಬಚಾವ್?

    ಬೆಂಗಳೂರು: ಎರಡನೇ ಬಾರಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಜೂನ್ 14 ರಂದು ಪ್ರಮಾಣ ವಚನ ಸ್ವೀಕಾರ ಮಾಡಿದ್ದ ಕೆಪಿಜೆಪಿ ಪಕ್ಷದ ಶಾಸಕ ಆರ್.ಶಂಕರ್ ಅಲ್ಪ ಸಮಯದಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಇದರ ಬೆನ್ನಲ್ಲೇ ಆರ್.ಶಂಕರ್ ಅನರ್ಹತೆಯ ಅಸ್ತ್ರ ಪ್ರಯೋಗ ಆಗಲಿದೆಯಾ ಎಂಬ ಅನುಮಾನ ಮೂಡಿತ್ತು.

    ಸಚಿವ ಸ್ಥಾನ ಪಡೆಯುವ ವೇಳೆ ಶಂಕರ್ ತಮ್ಮ ಪಕ್ಷವನ್ನು ಕಾಂಗ್ರೆಸ್ ಪಕ್ಷದೊಂದಿಗೆ ವಿಲೀನ ಮಾಡಲು ಸ್ಪೀಕರ್ ಅವರಿಗೆ ಪತ್ರ ಬರೆದಿದ್ದರು. ಆದರೆ ಸ್ಪೀಕರ್ ಈ ಪತ್ರವನ್ನು ನಿರಾಕರಿಸಿ ಪಕ್ಷದಿಂದ ಪತ್ರವನ್ನು ನೀಡುವಂತೆ ತಿಳಿಸಿದ್ದರು.

    ಇತ್ತ 2ನೇ ಬಾರಿಗೆ ಮೈತ್ರಿ ಸರ್ಕಾರಕ್ಕೆ ಬೆಂಬಲ ವಾಪಸ್ ಪಡೆದು ಮುಂಬೈಗೆ ತೆರಳಿದ್ದ ಆರ್. ಶಂಕರ್ ಜುಲೈ 12 ರಂದು ಸ್ಪೀಕರ್ ಗೆ ಬರೆದು ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದು, ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದರು. ಅಲ್ಲದೇ ಪ್ರತ್ಯೇಕ ಆಸನ ವ್ಯವಸ್ಥೆ ಮಾಡುವಂತೆ ಸ್ಪೀಕರ್ ಬಳಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಶಂಕರ್ ಅವರಿಗೆ ಪ್ರತ್ಯೇಕ ಆಸನ ವ್ಯವಸ್ಥೆಗೆ ಸ್ಪೀಕರ್ ಸೂಚಿಸಿದ್ದಾರೆ.

    ಇತ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಹಳ್ಳಿ ಅವರನ್ನು ಅನರ್ಹತೆ ಮಾಡುವಂತೆ ಕಾಂಗ್ರೆಸ್ ಸ್ಪೀಕರ್ ಅವರಿಗೆ ಮನವಿ ಮಾಡಿದೆ. ಹಳೆ ಪ್ರಕರಣದಲ್ಲಿ ವಿಚಾರಣೆ ನಡೆಸಲಿರುವ ಸ್ಪೀಕರ್ ಅವರು ಈ ವಿಚಾರದ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ. ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಹಳ್ಳಿ ಅವರ ವಿರುದ್ಧ ಕಾಂಗ್ರೆಸ್ ಕೆಲ ಸಾಕ್ಷಿಗಳನ್ನು ನೀಡಿದೆ. ಈ ಅಂಶಗಳೊಂದಿಗೆ ಸ್ಪೀಕರ್ ಅವರು ವಿಚಾರಣೆ ನಡೆಲಿದ್ದಾರೆ.