Tag: ಅನರ್ಹ ಶಾಸಕರು

  • ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ

    ಅನರ್ಹರು ಸೋತರೆ ಸಚಿವ ಸ್ಥಾನ ಇಲ್ಲ: ಈಶ್ವರಪ್ಪ

    – ಡಿಸಿಎಂ ಆಸೆ ಹೊಂದಿರುವ ಅನರ್ಹ ಶಾಸಕರಿಗೆ ಈಶ್ವರಪ್ಪ ಟಾಂಗ್

    ಬೆಂಗಳೂರು: ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಡಿ.9 ರಂದು ಪ್ರಕಟವಾಗಲಿದ್ದು, ಆ ಬಳಿಕ ರಾಜ್ಯದಲ್ಲಿರುವ ಅತಂತ್ರ ರಾಜಕಾರಣ ಪರಿಸ್ಥಿತಿ ದೂರವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.

    ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಮೂರುವರೇ ವರ್ಷ ಬಿಜೆಪಿ ಸರ್ಕಾರ ಇರುತ್ತೆ. ಇದು ಜನರ ಅಭಿಪ್ರಾಯ ಕೂಡ ಆಗಿತ್ತು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರಲಿದೆ. ಉಪಚುನಾವಣೆಯ ನಡೆದ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಪಡೆಯುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಅನರ್ಹರ ಶಾಸಕರು ರಾಜೀನಾಮೆ ಕೊಡಲಿಲ್ಲ ಎಂದಿದ್ದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿರಲಿಲ್ಲ. ಹೀಗಾಗಿ ಅವರ ಋಣ ತೀರಿಸಬೇಕಾಗಿದ್ದು, ಯಾವುದೇ ಕಾರಣಕ್ಕೂ ಅವರಿಗೆ ನಾವು ಅನ್ಯಾಯ ಮಾಡುವುದಿಲ್ಲ. ಗೆದ್ದ ಎಲ್ಲರನ್ನು ಮಂತ್ರಿ ಮಾಡುತ್ತೇವೆ. ಆದರೆ ಸೋತವರಿಗೆ ಏನು ಇಲ್ಲ. ಈಗಾಗಲೇ ಈ ಬಗ್ಗೆ ಶಾಸಕರೊಂದಿಗೆ ಮಾತನಾಡಿದ್ದು, ಎಂಎಲ್‍ಸಿ ಮಾಡಿ ಮಂತ್ರಿ ಮಾಡುತ್ತೇವೆ ಎಂದು ಹೇಳಿದ್ದೇವು. ಆದರೆ ಅವರು ಚುನಾವಣೆ ಎದುರಿಸಿ ಮಂತ್ರಿಯಾಗುತ್ತೇವೆ ಎಂದರು. ಹೀಗಾಗಿ ಗೆದ್ದರೆ ಮಾತ್ರ ಅವರನ್ನು ಮಂತ್ರಿ ಮಾಡುತ್ತೇವೆ ಎಂದರು.

    ಬೆಳಗಾವಿಯ ಎಲ್ಲಾ ಅನರ್ಹರನ್ನು ಮಂತ್ರಿ ಮಾಡುತ್ತೇವೆ. ಈಗಾಗಲೇ ಲಕ್ಷ್ಮಣ್ ಸವದಿ ಅವರ ವಿಚಾರ ಸ್ಪಷ್ಟವಾಗಿದ್ದು, ಅವರು ಡಿಸಿಎಂ ಆಗಿಯೇ ಮುಂದುವರಿಯುತ್ತಾರೆ. ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್ ಅವರನ್ನು ಮಂತ್ರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಇದೇ ವೇಳೆ ಅನರ್ಹ ಶಾಸಕರನ್ನು ಡಿಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಆಗಲು ರಾಜಕಾರಣದಲ್ಲಿ ಯಾರಿಗೆ ಇಷ್ಟ ಇರಲ್ಲ ಹೇಳಿ? ವಯಸ್ಸಿಗೆ ಬಂದಂತವರು ಇದ್ದಕ್ಕಿದ್ದಂತೆ ಐಶ್ವರ್ಯ ರೈ ಬೇಕು ಎಂದು ಕೇಳುತ್ತಾರೆ. ಆದರೆ ಐಶ್ವರ್ಯ ರೈ ಇರುವುದು ಒಬ್ಬರೇ ತಾನೇ. ಇದರಂತೆ ಡಿಸಿಎಂ ಸ್ಥಾನಕ್ಕೆ ಹಲವರು ಅಪೇಕ್ಷೆ ಪಡುತ್ತಾರೆ, ಆದರೆ ಅವರಿಗೆ ಅವಕಾಶ ಆಗಬೇಕಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿರುವ ಅನರ್ಹರಿಗೆ ಏನೇನು ಹುದ್ದೆ ಕೊಡುತ್ತಾರೆ ನನಗೆ ಗೊತ್ತಿಲ್ಲ. ಅದನ್ನು ಸಿಎಂ ಬಿಎಸ್‍ವೈ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಕನಸ್ಸು ಕಾಣುತ್ತಿರುವ ಗೋಕಾಕ್ ಸಾಹುಕಾರ ಹಾಗೂ ಹಳ್ಳಿ ಹಕ್ಕಿ ವಿಶ್ವನಾಥ್ ಅವರಿಗೆ ಈಶ್ವರಪ್ಪ ಅವರು ಪರೋಕ್ಷ ಟಾಂಗ್ ನೀಡಿದರು.

    ಇದೇ ವೇಳೆ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ಕೈಗೊಂಡ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಸಚಿವರು, ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ವಿಶೇಷವಾದ ಯೋಜನೆ ರೂಪಿಸಲಾಗಿದೆ. ಪ್ರತಿ ಪಂಚಾಯಿತಿಗೂ ಈಗಾಗಲೇ ಕೇಂದ್ರ ಸರ್ಕಾರದಿಂದ 20 ಲಕ್ಷ ಬಿಡುಗಡೆ ಮಾಡಿದ್ದಾರೆ. 6,021 ಗ್ರಾಮ ಪಂಚಾಯತಿಗಳಲ್ಲಿ ಈ ಯೋಜನೆ ಜಾರಿಗೆ ತಂದು, ಕಸ ಇಲ್ಲದೆ ರೀತಿ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದರು. ಅಲ್ಲದೇ ಮತ್ತೊಂದು ಯೋಜನೆ ಮೂಳಕ ಗ್ರಾಮ ಪಂಚಾಯತಿ ಕಟ್ಟಡಗಳಿಗೆ ಸೋಲಾರ್ ಅಳವಡಿಕೆ ಕಾರ್ಯಕ್ಕೆ ಒತ್ತು ನೀಡುತ್ತಿದ್ದೇವೆ ಎಂದು ವಿವರಿಸಿದರು.

  • 15 ಕ್ಷೇತ್ರಗಳಿಗೆ ಇಂದು ಮತದಾನ- ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ

    15 ಕ್ಷೇತ್ರಗಳಿಗೆ ಇಂದು ಮತದಾನ- ತಪ್ಪದೇ ನಿಮ್ಮ ಹಕ್ಕನ್ನು ಚಲಾಯಿಸಿ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅಳಿವು-ಉಳಿವು, ಕಾಂಗ್ರೆಸ್-ಜೆಡಿಎಸ್ ನಾಯಕರ ಮರು ಮೈತ್ರಿ, ಅನರ್ಹರ ಅರ್ಹತೆಯ ಸವಾಲು ಎಲ್ಲವನ್ನೂ ನಿರ್ಣಯಿಸಲಿರೋ ದಿನ ಬಂದೇ ಬಿಟ್ಟಿದೆ. 15 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ. ಹೊಸಕೋಟೆ, ಚಿಕ್ಕಬಳ್ಳಾಪುರ, ಕೆಆರ್ ಪುರ, ಶಿವಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಕೆ.ಆರ್ ಪೇಟೆ, ಹುಣಸೂರು, ಹಿರೇಕೆರೂರು, ರಾಣೆಬೆನ್ನೂರು, ಹೊಸಪೇಟೆ, ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಲಿದೆ.

    ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಹಾಗೂ ಪಕ್ಷೇತರ 165 ಅಭ್ಯರ್ಥಿಗಳ ಹಣೆಬರಹ ಇವಿಎಂಗಳಲ್ಲಿ ಅಡಕವಾಗುತ್ತಾ ಹೋಗುತ್ತದೆ. ಶಾಂತಿಯುತ ಮತದಾನಕ್ಕೆ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ.

    15 ಕ್ಷೇತ್ರಗಳಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಒಟ್ಟು 165 ಮಂದಿ ಕಣದಲ್ಲಿದ್ದಾರೆ. ಬೆಂಗಳೂರಿನ ಶಿವಾಜಿನಗರದಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 37,82,681 ಮಂದಿ ಮತದಾರರಿದ್ದು, ಇದರಲ್ಲಿ ಪುರುಷ ಮತದಾರರು 18,52,027 ಮಹಿಳಾ ಮತದಾರರು 19,25,529 ಮಂದಿ ಇದ್ದಾರೆ. 4,185 ಕಡೆಗಳಲ್ಲಿ ಮತಗಟ್ಟೆಗಳನ್ನು ತೆರೆಯಲಾಗಿದೆ. ಸೂಕ್ತ ಭದ್ರತೆಗಾಗಿ 42,509 ಭದ್ರತಾ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. 11,241 ಮಂದಿ ಪೊಲೀಸ್ ಸಿಬ್ಬಂದಿ, 2,511,900 ಸಿಆರ್‍ಪಿಎಫ್ ಸಿಬ್ಬಂದಿ ಹಾಗೂ ಸೂಕ್ಷ್ಮ ವೀಕ್ಷಕರನ್ನು ನಿಯೋಜಿಸಲಾಗಿದೆ.

    ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಾಲ್ಕು ಕ್ಷೇತ್ರಗಳಲ್ಲಿ 5,988 ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆ.ಆರ್.ಪುರ ಕ್ಷೇತ್ರಕ್ಕೆ ಐಟಿಐ ವಿದ್ಯಾಮಂದಿರ, ಯಶವಂತಪುರ ಕ್ಷೇತ್ರಕ್ಕೆ ಆರ್.ವಿ. ಎಂಜಿನಿಯರಿಂಗ್ ಕಾಲೇಜು, ಮಹಾಲಕ್ಷ್ಮಿ ಲೇಔಟ್‍ಗೆ ವಿದ್ಯಾವರ್ಧಕ ಸಂಘದ ಹೈಸ್ಕೂಲ್, ಶಿವಾಜಿನಗರ ಕ್ಷೇತ್ರಕ್ಕೆ ಮೌಂಟ್ ಕಾರ್ಮೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ಕೇಂದ್ರಗಳನ್ನು ತೆರೆಯಲಾಗಿದೆ.

    ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,361 ಮತಗಟ್ಟೆಗಳಿವೆ. ಈ ಪೈಕಿ 12 `ಸಖಿ’ ಮತಗಟ್ಟೆ, 4 ಮಾದರಿ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಯಲ್ಲೂ ಮೆಡಿಕಲ್ ಕಿಟ್ ನೀಡಲಾಗಿದೆ. 15 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನಕ್ಕೆ ಅನುಕೂಲವಾಗುವಂತೆ ರಜೆ ಕೂಡ ಘೋಷಣೆ ಮಾಡಲಾಗಿದೆ.

    ಒಟ್ಟಾರೆ ಸಿಎಂ ಯಡಿಯೂರಪ್ಪ ಅವರಿಗೆ ಈ ಉಪಚುನಾವಣೆ ಅಗ್ನಿ ಪರೀಕ್ಷೆಯಾಗಿದ್ದು, ಅನರ್ಹರ ಪರ ತಾವೇ ಖುದ್ದಾಗಿ ಪ್ರಚಾರ ನಡೆಸಿದ್ದಾರೆ. 15 ಕ್ಷೇತ್ರಗಳ ಪೈಕಿ ಸರ್ಕಾರ ಉಳಿಸಿಕೊಳ್ಳಲು 7 ಸ್ಥಾನಗಳಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಇತ್ತ ಪ್ರತಿಪಕ್ಷಗಳು ಸರ್ಕಾರ ಪತನವಾಗಲಿದೆ ಎಂದು ಮೈತ್ರಿ ಮಾತುಕತೆಗೆ ನಾಂದಿ ಹಾಡಿವೆ. ಎಲ್ಲಾ ಅನರ್ಹರನ್ನು ಸೋಲಿಸಬೇಕೆಂದು ಕಾಂಗ್ರೆಸ್ ಶಪಥ ಮಾಡಿದೆ. 3 ಕ್ಷೇತ್ರಗಳಲ್ಲಿ ಜೆಡಿಎಸ್ ಉಳಿಸಿಕೊಳ್ಳಲು ದಳಪತಿಗಳು ಹೋರಾಟ ಮಾಡಿದ್ದಾರೆ. ಈ ಎಲ್ಲದಕ್ಕೂ ತೆರೆಬಿದ್ದಿದ್ದು, ಮತದಾರರು ಇಂದು ಅಂತಿಮ ತೀರ್ಪು ನೀಡಲಿದ್ದಾರೆ. ಡಿಸೆಂಬರ್ 9 ರಂದು 15 ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಢವಢವ ಶುರುವಾಗಿದೆ.

  • ಅನರ್ಹ ಶಾಸಕರ ವಿರುದ್ಧ ದೇಶದ್ರೋಹ ಆರೋಪ- ನಾಳೆಗೆ ವಿಚಾರಣೆ ಮುಂದೂಡಿಕೆ

    ಅನರ್ಹ ಶಾಸಕರ ವಿರುದ್ಧ ದೇಶದ್ರೋಹ ಆರೋಪ- ನಾಳೆಗೆ ವಿಚಾರಣೆ ಮುಂದೂಡಿಕೆ

    ಬೆಂಗಳೂರು: ಅನರ್ಹ ಶಾಸಕರ ವಿರುದ್ಧ ವಕೀಲ ಎಸ್.ಬಾಲಕೃಷ್ಣನ್ ದಾಖಲಿಸಿದ್ದ ಅರ್ಜಿಯ ವಿಚಾರಣೆಯನ್ನು ಎನ್‍ಐಎ (ರಾಷ್ಟ್ರೀಯ ತನಿಖಾ ದಳ) ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಅರ್ಜಿಯ ವಿಚಾರಣೆ ನಡೆಯಲಿದೆ. ಇಂದು ಬಾಲಕೃಷ್ಣನ್ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ ಮಧ್ಯಾಹ್ನ 4 ಗಂಟೆಗೆ ವಿಚಾರಣೆ ನಡೆಸುವುದಾಗಿ ಹೇಳಿತ್ತು.

    17 ಅನರ್ಹ ಶಾಸಕರು ಮತ್ತು ಇನ್ನಿತರರ ವಿರುದ್ಧ ಬಾಲನ್ ದೂರು ದಾಖಲು ಮಾಡಿದ್ದಾರೆ. ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿ ಸೇರಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಅಕ್ರಮ ಹಣ ಬಳಕೆ ಮಾಡಿದ್ದು, ದುಡ್ಡಿನ ಮೂಲ ಯಾವುದು ಅಂತಾ ಗೊತ್ತಾಗಬೇಕಿದೆ. ರಾಜಕೀಯ ಪಕ್ಷಗಳಿಗೆ ಭಯೋತ್ಪಾದಕ ಸಂಘಟನೆಗಳಿಂದ ಹಣ ಬರುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಹಾಗಾಗಿ ಅನರ್ಹ ಶಾಸಕರ ಪಡೆದಿದ್ದಾರೆ ಎನ್ನಲಾದ ಹಣದ ಬಗ್ಗೆ ತನಿಖೆ ಆಗಬೇಕು ಎಂದು ಬಾಲಕೃಷ್ಣನ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

    ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಅನರ್ಹರಿಂದಾಗಿಯೇ ಬಿಜೆಪಿ ಸರ್ಕಾರ ರಚನೆ ಮಾಡಿದ್ದೇವೆ. ಚುನಾವಣೆಯಲ್ಲಿ ಗೆದ್ದ ಬಳಿಕ ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇವೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ. ಅನರ್ಹ ಶಾಸಕರು ಪಡೆದಿರುವ ಹಣದ ಬಗ್ಗೆ ತನಿಖೆಯಾಗಬೇಕಿದೆ. ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ರೂ. ಅಕ್ರಮ ಹಣ ಬಳಕೆಯಾಗಿದಿದೆ. ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರ ಆಡಿಯೋಗಳು ಸಹ ಲೀಕ್ ಆಗಿದೆ ಎಂದು ಬಾಲಕೃಷ್ಣನ್ ಆರೋಪಿಸಿದ್ದಾರೆ.

  • ಅನರ್ಹ ಶಾಸಕರಿಗೆ ಮತ್ತೆ ಢವ ಢವ

    ಅನರ್ಹ ಶಾಸಕರಿಗೆ ಮತ್ತೆ ಢವ ಢವ

    ಬೆಂಗಳೂರು: ಅನರ್ಹ ಶಾಸಕರ ವಿರುದ್ಧ 52ನೇ ಎನ್‍ಐಎ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

    ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿ ಸೇರ್ಪಡೆಯಾಗಿದ್ದಾರೆಂದು ಆರೋಪಿಸಿ ವಕೀಲ ಎಸ್.ಬಾಲಕೃಷ್ಣನ್ ಎಂಬವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಬಾಲಕೃಷ್ಣನ್ ಅರ್ಜಿ ಪರಿಗಣಿಸಿರುವ ನ್ಯಾಯಾಲಯ ಇಂದು ಸಂಜೆ 4 ಗಂಟೆಗೆ ಸಾಕ್ಷಿ ಸಮೇತ ವಾದ ಮಂಡಿಸಲು ಅವಕಾಶ ನೀಡಿದೆ.

    17 ಅನರ್ಹ ಶಾಸಕರು ಮತ್ತು ಇನ್ನಿತರರ ವಿರುದ್ಧ ಬಾಲನ್ ದೂರು ದಾಖಲು ಮಾಡಿದ್ದಾರೆ. ಅನರ್ಹ ಶಾಸಕರು ಅಕ್ರಮ ಹಣ ಪಡೆದು ಬಿಜೆಪಿ ಸೇರಿದ್ದಾರೆ. ಆಪರೇಷನ್ ಕಮಲಕ್ಕೆ ಬಿಜೆಪಿ ಅಕ್ರಮ ಹಣ ಬಳಕೆ ಮಾಡಿದ್ದು, ದುಡ್ಡಿನ ಮೂಲ ಯಾವುದು ಅಂತಾ ಗೊತ್ತಾಗಬೇಕಿದೆ. ಇತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಅನರ್ಹರಿಂದಾಗಿಯೇ ಬಿಜೆಪಿ ಸರ್ಕಾರ ರಚನೆ ಮಾಡಿದ್ದೇವೆ. ಚುನಾವಣೆಯಲ್ಲಿ ಗೆದ್ದ ಬಳಿಕ ಅನರ್ಹ ಶಾಸಕರನ್ನು ಮಂತ್ರಿ ಮಾಡುತ್ತೇವೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.

    ಅನರ್ಹ ಶಾಸಕರು ಪಡೆದಿರುವ ಹಣದ ಬಗ್ಗೆ ತನಿಖೆಯಾಗಬೇಕಿದೆ. ಆಪರೇಷನ್ ಕಮಲಕ್ಕೆ ಸಾವಿರ ಕೋಟಿ ರೂ. ಅಕ್ರಮ ಹಣ ಬಳಕೆಯಾಗಿದಿದೆ. ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರ ಆಡಿಯೋಗಳು ಸಹ ಲೀಕ್ ಆಗಿದೆ ಎಂದು ಬಾಲಕೃಷ್ಣನ್ ಆರೋಪಿಸಿದ್ದಾರೆ.

  • ಅನರ್ಹರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರೀತಾರೆ: ಡಿಕೆಶಿ ಲೇವಡಿ

    ಅನರ್ಹರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು ಹರೀತಾರೆ: ಡಿಕೆಶಿ ಲೇವಡಿ

    – ಉಪ್ಪು ತಿಂದವರು ನೀರು ಕುಡೀಬೇಕು ಅಂದವರಿಗೆ ನೀರು ಕುಡಿಸುತ್ತೇನೆ
    – ಕಡಿಮೆ ಮಾತನಾಡುವಂತೆ ಗುರುಗಳು ಸಲಹೆ ನೀಡಿದ್ದಾರೆ

    ಹುಬ್ಬಳ್ಳಿ: ಅನರ್ಹ ಶಾಸಕರು ಬಿಜೆಪಿ ನಾಯಕರ ಚಡ್ಡಿ, ಪ್ಯಾಂಟು, ಜೇಜು ಎಲ್ಲಾ ಹರಿಯುತ್ತಾರೆ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

    ನಗರದಲ್ಲಿ ನಡೆದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಅವರು, ಕಡಿಮೆ ಮಾತನಾಡಿ ಅಂತ ನಮ್ಮ ಗುರುಗಳು ಹೇಳಿದ್ದಾರೆ. ಮೌನಕ್ಕೆ ಶರಣಾಗಬೇಕೆಂಬ ಆಸೆ ನನಗಿದೆ. ಆದರೆ ನನ್ನ ಸ್ನೇಹಿತರು, 17 ಜನ ಅನರ್ಹ ಶಾಸಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗಿಫ್ಟ್ ನೀಡಿದ್ದಾರೆ. ಅವರು ನಮ್ಮನ್ನೇ ಬಿಟ್ಟಿಲ್ಲ, ಇನ್ನು ಬಿಜೆಪಿ ನಾಯಕರನ್ನ ಬಿಡುತ್ತಾರಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು. ಇದನ್ನೂ ಓದಿ: ಉಪ್ಪು ತಿಂದವರು ನೀರು ಕುಡಿಯಬೇಕು, ಇದು ಈ ನೆಲದ ಸಂಸ್ಕೃತಿ: ಸಿಟಿ ರವಿ

    ನಾನು ತಪ್ಪು ಮಾಡಿಲ್ಲ. ನನಗೆ ಅಗ್ನಿ ಪರೀಕ್ಷೆ ಬಂದಾಗ ನನ್ನ ಜೊತೆ ನೀವು ಇದ್ರಿ. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಯಾರು ಗೂಟ ಹೊಡೆದುಕೊಂಡು ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಹಾಲಿ ಸಿಎಂ ಜೈಲಿಗೆ ಹೋಗಿದ್ರಲ್ಲ, ಅವರು ಉಪ್ಪು ಅಥವಾ ಸಕ್ಕರೆ ತಿಂದಿದ್ರಾ- ಡಿಸಿಎಂಗಳಿಗೆ ಉಗ್ರಪ್ಪ ತಿರುಗೇಟು

    ನಾನು ಬಂಧನಕ್ಕೆ ಒಳಗಾಗುವ ಮುನ್ನ ನನ್ನ ತಂದೆಯ ಪೂಜೆಗೆ ಅವಕಾಶ ನೀಡಲಿಲ್ಲ. ಹೀಗಾಗಿ ಕಣ್ಣೀರು ಹಾಕಿದ್ದೆ. ಈ ವಿಚಾರವಾಗಿ ಅನೇಕರು ಸಾಕಷ್ಟು ಟೀಕೆ, ವ್ಯಾಖ್ಯಾನ ಮಾಡಿದರು. ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದು ಹೇಳಿದ್ದರು. ಅವರಿಗೆ ಮುಂದಿನ ದಿನಗಳಲ್ಲಿ ನೀರು ಕುಡಿಸುತ್ತೇನೆ ಎಂದು ಗುಡುಗಿದರು.

    ಉಪ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುತ್ತೇನೆ. ಆದರೆ ಮೇಲಿಂದ ಮೇಲೆ ನೋಟಿಸ್‍ಗಳು ಬರುತ್ತಿವೆ. ಹೀಗಾಗಿ ಕೋರ್ಟು, ಕಚೇರಿಗೆ ಅಲೆದಾಡುತ್ತಿದ್ದೇನೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿಯಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಪಕ್ಷದ ಕೆಲಸವನ್ನು ಮಾಡಬೇಕಿದೆ. ನನ್ನ ರಕ್ಷಣೆಯನ್ನು ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

    ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರಿಗೆ ಒಂದು ನೋಟಿಫಿಕೇಷನ್ ಮಾಡಿಸಲು ಆಗಲಿಲ್ಲ. ಮತಗಳು ಎನ್ನುವುದು ಒಂದು ವ್ಯಾಪಾರವಾಗಿದೆ. ಮಹದಾಯಿ ವಿಚಾರದಲ್ಲಿ ಬಿಜೆಪಿಯವರಿಗೆ ನ್ಯಾಯ ಒದಗಿಸಿಕೊಡಲು ಆಗಲಿಲ್ಲ. ಹೀಗಾಗಿ ಅವರಿಗೆ ಮತದ ಮೂಲಕ ಉತ್ತರ ನೀಡಬೇಕು ಎಂದು ಕಿಡಿಕಾರಿದರು.

  • ಜೊತೆಗಿದ್ದು ಹೊಗಳಿದ್ದವ್ರು ಈಗ ನನ್ನ ವಿರುದ್ಧವೇ ಮಾತ್ನಾಡುತ್ತಿದ್ದಾರೆ: ಸಿದ್ದರಾಮಯ್ಯ

    ಜೊತೆಗಿದ್ದು ಹೊಗಳಿದ್ದವ್ರು ಈಗ ನನ್ನ ವಿರುದ್ಧವೇ ಮಾತ್ನಾಡುತ್ತಿದ್ದಾರೆ: ಸಿದ್ದರಾಮಯ್ಯ

    -ಶಿವಸೇನೆ ಈಗ ಕೋಮುವಾದಿಯಲ್ಲ

    ಮೈಸೂರು: ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ ಆಪ್ತರ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಜೊತೆಗಿದ್ದು ನನ್ನ ಬಗ್ಗೆ ಹೊಗಳುತ್ತಿದ್ದವರು ಇದೀಗ ನನ್ನ ವಿರುದ್ಧವೇ ಮಾತನಾಡುತ್ತಿದ್ದಾರೆ. ನೀವು ನನ್ನ ವಿರುದ್ಧ ಬಿದ್ದರೆ ಕಷ್ಟ ಆಗುತ್ತದೆ. ಮುಂದೆ ನಿಮ್ಮ ಪರವಾಗಿ ಯಾರು ಮಾತನಾಡುತ್ತಾರೆ. ಇದಕ್ಕೆ ಯಾರು ಬರಬೇಕು ಅಂತ ನೀವು ಯೋಚನೆ ಮಾಡಿ ಎಂದು ಕಾಂಗ್ರೆಸ್ ಕಾರ್ಯಕರ್ತರನ್ನು ಪ್ರಶ್ನಿಸಿದ್ದಾರೆ.

    ನಾನು ಸಾಮಾಜಿಕ ನ್ಯಾಯದ ಪರವಾಗಿ ಇದ್ದೇನೆ. ಅದಕ್ಕೆ ನನ್ನ ಮೇಲೆ ಎಲ್ಲರೂ ಮುಗಿ ಬೀಳುತ್ತಿದ್ದಾರೆ. ಜೆಡಿಎಸ್ ಹಾಗೂ ಬಿಜೆಪಿಯವರು ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ ಎಂದರು.

    ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಉಪ ಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದು ನಮ್ಮ ಉದ್ದೇಶ. ಅವರನ್ನ ಅನರ್ಹಗೊಳಿಸಲು ಹೋರಾಟ ಮಾಡಿದ್ದೆ. ಹೀಗಾಗಿ ಅವರಿಗೆ ನಾನೇ ಟಾರ್ಗೆಟ್ ಆಗಿದ್ದೇನೆ. ಎಲ್ಲ 15 ಕ್ಷೇತ್ರದ ಅಭ್ಯರ್ಥಿಗಳು ಫೈನಲ್ ಆಗಿದ್ದಾರೆ. ಈಗಾಗಲೇ ಕೆಲವರು ನಾಮಪತ್ರ ಸಲ್ಲಿಸಿದ್ದು, ಉಳಿದವರು ನಾಳೆ ಸಲ್ಲಿಸುತ್ತಾರೆ. ಉಪ ಚುನಾವಣೆಯಲ್ಲಿ 15 ಆಗದಿದ್ದರೂ 12 ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯ ಬಂಡವಾಳ ಬಿಚ್ಚುತ್ತೇನೆ ಎಂಬ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, 30 ವರ್ಷದಿಂದ ಬಿಚ್ಚದ ಬಂಡವಾಳವನ್ನು ಈಗ ಬಿಚ್ಚುತ್ತಾರಂತಾ? ಅಂದಿನಿಂದ ಆಗದ್ದು ಈಗ ಆಗುತ್ತಾ? ಅವರೇಲ್ಲ ಅನರ್ಹರಾಗಿ ಹತಾಶರಾಗಿದ್ದಾರೆ. ಅವರ ಮಾತಿಗೆ ಕಿಮ್ಮತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಮಾನ ಮರ್ಯಾದೆ ಇದ್ದಿದ್ದರೆ ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳುತ್ತಿದ್ರಾ? ಕೋರ್ಟ್ ನಲ್ಲೇ ಅನರ್ಹರು ಅಂತ ಹಣೆಪಟ್ಟಿ ಕಟ್ಟುಕೊಂಡು ಬಂದಿದ್ದಾರೆ. ಈಗ ಗೆದ್ದು ಮಂತ್ರಿಯಾಗಿ ಕ್ಷೇತ್ರ ಅಭಿವೃದ್ಧಿ ಮಾಡುತ್ತಾರಾ? ಇದೇಲ್ಲ ಚುನಾವಣೆಗೆ ಮಾತ್ರ ಮಾತನಾಡುವ ಮಾತುಗಳು. ಎಚ್.ವಿಶ್ವನಾಥ್ ಅವರು ಸಹ ಚುನಾವಣೆಗೋಸ್ಕರ ಜಿಲ್ಲೆಯನ್ನು ಇಬ್ಭಾಗ ಮಾಡುವ ಮಾತು ಆಡುತ್ತಿದ್ದಾರೆ. 30 ವರ್ಷ ಕಾಂಗ್ರೆಸ್‍ನಲ್ಲಿ ಇದ್ದಾಗ ಹಾಗೂ ಕಳೆದ ವರ್ಷ ಜೆಡಿಎಸ್‍ನಲ್ಲಿ ಇದ್ದಾಗ ಯಾಕೆ ಜಿಲ್ಲೆಯ ವಿಭಜಣೆ ಬಗ್ಗೆ ಮಾತನಾಡಲಿಲ್ಲ. ಅನರ್ಹರಾಗಿ ಗೆಲ್ಲುವುದಕ್ಕೆ ಆಗುವುದಿಲ್ಲ ಅಂತ ಹುಣಸೂರನ್ನು ಜಿಲ್ಲೆ ಮಾಡುತ್ತೇನೆ ಅಂತ ಹೇಳಿದ್ದಾರೆ. ಇದು ಚುನಾವಣೆ ಗಿಮಿಕ್. ಇದು ವರ್ಕ್ ಆಗುವುದಿಲ್ಲ ಎಂದರು.

    ಶಿವಸೇನೆಯು ಅಧಿಕೃತವಾಗಿ ಎನ್‍ಡಿಎದಿಂದ ಹೊರ ಬಂದಿದೆ. ಹಾಗಾಗಿ ಶಿವಸೇನೆ ಈಗ ಕೋಮುವಾದಿಯಲ್ಲ. ಕೋಮುವಾದದಿಂದ ದೂರ ಉಳಿಯುವುದಾಗಿ ಶಿವಸೇನೆ ಹೇಳಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಸರ್ಕಾರಕ ರಚನೆಗಾಗಿ ಎನ್‍ಸಿಪಿ ಹಾಗೂ ಕಾಂಗ್ರೆಸ್ ಶಿವಸೇನೆ ಜೊತೆ ಕೈ ಜೋಡಿಸಲು ಮುಂದಾಗಿವೆ. ಮುಂದೇನಾದರು ಶಿವಸೇನೆ ಕೋಮುವಾದ ಪ್ರತಿಪಾದಿಸಿದರೆ ಅದರಿಂದ ದೂರಾಗುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

  • ಸೋಮವಾರದಿಂದ ಬಿಎಸ್‍ವೈ ಚುನಾವಣಾ ಕಣಕ್ಕೆ- ಅನರ್ಹರಿಗೆ ಅಭಯ

    ಸೋಮವಾರದಿಂದ ಬಿಎಸ್‍ವೈ ಚುನಾವಣಾ ಕಣಕ್ಕೆ- ಅನರ್ಹರಿಗೆ ಅಭಯ

    ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಅನರ್ಹ ಶಾಸಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಭಯ ನೀಡಿದ್ದು, ಎಲ್ಲಾ 14 ಅನರ್ಹ ಶಾಸಕರು ಸ್ಪರ್ಧೆ ಮಾಡಿರುವ ಕ್ಷೇತ್ರಗಳಲ್ಲಿ ಸ್ವತಃ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಉಪಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರವನ್ನು ಸೋಮವಾರದಿಂದ ಆರಂಭ ಮಾಡಲಿರುವ ಸಿಎಂ ಬಿಎಸ್‍ವೈ, ಮೊದಲು ಅನರ್ಹ ಶಾಸಕ ಎಂಟಿಬಿ ನಾಗರಾಜ್‍ರ ಹೊಸಕೋಟೆಯಿಂದಲೇ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಅಲ್ಲದೇ ಎಲ್ಲಾ ಅನರ್ಹ ಶಾಸಕರ ಕ್ಷೇತ್ರಗಳಲ್ಲಿ 1 ದಿನ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ.

    ಅನರ್ಹ ಶಾಸಕರಿಗೆ ನೀಡಿರೋ ಭರವಸೆಯಂತೆ ಸಿಎಂ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಅನರ್ಹರನ್ನು ಮತ್ತೆ ಶಾಸಕರನ್ನು ಮಾಡುತ್ತೇನೆ ಎಂಬ ಶಪಥವನ್ನು ಬಿಎಸ್‍ವೈ ಮಾಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಹಿನ್ನೆಲ್ಲೆಯಲ್ಲಿ 14 ಕ್ಷೇತ್ರಗಳಿಗೆ ಸಿಎಂ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರಕ್ಕಾಗಿ ಮಾಸ್ಟರ್ ಪ್ಲಾನ್ ಕೂಡ ಸಿದ್ಧವಾಗಿದೆ.

    ಸಿಎಂ ಬಿಎಸ್‍ವೈ ಅವರು ಪ್ರಚಾರ ನಡೆಸುವ ಸಂದರ್ಭದಲ್ಲಿ ಪಕ್ಷದ ಬೂತ್ ಮಟ್ಟದ ನಾಯಕರು, ಕಾರ್ಯಕರ್ತರು, ಮುಖಂಡರು ತಪ್ಪದೇ ಸಭೆಯಲ್ಲಿ ಭಾಗಿಯಾಗುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸ್ವತಃ ಸಿಎಂ ಅವರೇ ಪ್ರಚಾರ ಕಾರ್ಯಕ್ಕೆ ಆಗಮಿಸುವುದರಿಂದ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನ ಶಮನವಾಗುತ್ತದೆ ಎಂಬುವುದು ಇದರ ಹಿಂದಿನ ಉದ್ದೇಶವಾಗಿದೆ ಎನ್ನಲಾಗಿದೆ.

  • ಅನರ್ಹರು ನಮಗಾಗಿ ತ್ಯಾಗ ಮಾಡಿದ್ದಾರೆ, ನಂಬಿಕೆದ್ರೋಹ ಮಾಡಲ್ಲ: ಸಿಎಂ

    ಅನರ್ಹರು ನಮಗಾಗಿ ತ್ಯಾಗ ಮಾಡಿದ್ದಾರೆ, ನಂಬಿಕೆದ್ರೋಹ ಮಾಡಲ್ಲ: ಸಿಎಂ

    ಬೆಂಗಳೂರು: ಸುಪ್ರೀಂ ತೀರ್ಪಿನ ಬಳಿಕ ಇಂದು ಅನರ್ಹ ಶಾಸಕರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದು, ನೀವು ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದೀರಿ, ನಿಮಗೆ ಕೊಟ್ಟ ಮಾತನ್ನು ನಾವು ಅಕ್ಷರಶಃ ಪಾಲಿಸುತ್ತೇವೆ. ಯಾವುದೇ ನಂಬಿಕೆದ್ರೋಹ, ವಿಶ್ವಾಸದ್ರೋಹ ಮಾಡಲ್ಲ ಎಂದು ಸಿಎಂ ಯಡಿಯೂರಪ್ಪ ಭರವಸೆ ಕೊಟ್ಟಿದ್ದಾರೆ.

    ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅನರ್ಹ ಶಾಸಕರು ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮಾತನಾಡಿದ ಅವರು, ಇದೊಂದು ಐಹಿಹಾಸಿಕ ದಿನ. ಬಹುಶಃ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಈ 17 ಮಂದಿ ಜೆಡಿಎಸ್, ಕಾಂಗ್ರೆಸ್ ಶಾಸಕರು ಕಾರಣ. ಅವರು ತಮ್ಮ ಸಚಿವ ಸ್ಥಾನ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಮಗಾಗಿ ಎಲ್ಲಾ ರೀತಿಯ ತ್ಯಾಗವನ್ನ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪಿನ ನಂತರ ಅವರೆಲ್ಲರೂ ನಮ್ಮ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಸದಸ್ಯತ್ವವನ್ನು ಪಡೆದು ಬಿಜೆಪಿ ಸೇರಿದ್ದಾರೆ ಎಂದರು.

    ರಾಜೀನಾಮೆ ಕೊಟ್ಟು ನಮ್ಮ ಜೊತೆ ಬಂದಂತಹ ವೇದಿಕೆ ಮೇಲಿರುವ ಶಾಸಕರಿಗೆ, ಬೆಂಬಲಿಗರಿಗೆ ಸಿಎಂ ಆಗಿ ನಳಿನ್ ಕುಮಾರ್ ಅವರ ಪರವಾಗಿ ಭರವಸೆ ಕೊಡುತ್ತಿದ್ದೇನೆ. ನಾವೇನು ನಿಮಗೆ ಭರವಸೆ ಮಾತನ್ನು ಕೊಟ್ಟಿದ್ದೀವೋ ಅದನ್ನು ನಾವು ಅಕ್ಷರಶಃ ಪಾಲಿಸುತ್ತೇವೆ. ನಿಮಗೆ ನಂಬಿಕೆದ್ರೋಹ ಅಥವಾ ವಿಶ್ವಾಸದ್ರೋಹ ಮಾಡುವುದಿಲ್ಲ ಎಂದು ಹೇಳಿದರು.

    ಬಹುಶಃ ದೇಶದ ರಾಜಕಾರಣದಲ್ಲಿ ಈ ರೀತಿ 17 ಮಂದಿ ಶಾಸಕರು, ಮಂತ್ರಿಗಳು ರಾಜೀನಾಮೆ ಕೊಟ್ಟು ಹೊರಬಂದ ಉದಾಹರಣೆ ಇಲ್ಲ. ಇವರು ನಮಗಾಗಿ ಎಲ್ಲಾ ರೀತಿಯ ತ್ಯಾಗ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಕೈ ಜೊಡಿಸಿ ಪ್ರಾರ್ಥಿಸುತ್ತೇನೆ, ಇವರ ಗೆಲುವು ನಮ್ಮ ಜವಾಬ್ದಾರಿ. ಉಪಚುನಾವಣೆಯಲ್ಲಿ ಒಟ್ಟಿಗೆ ಕೆಲಸ ಮಾಡೋಣ ಎಂದು ಕರೆ ನೀಡಿದರು.

    ಇಂದು ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್, ಮಹೇಶ್ ಕುಮಟಳ್ಳಿ, ಶ್ರೀಮಂತ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಶಿವರಾಂ ಹೆಬ್ಬಾರ್, ಬಿಸಿ ಪಾಟೀಲ್, ಆನಂದ್ ಸಿಂಗ್, ಡಾ.ಸುಧಾಕರ್, ಬೈರತಿ ಬಸವರಾಜ್, ಎಸ್‍ಟಿ ಸೋಮಶೇಖರ್, ಮುನಿರತ್ನ ಅವರು ಬಿಎಸ್‍ವೈ, ನಳಿನ್ ಕುಮಾರ್ ಕಟೀಲ್ ಹಾಗೂ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಿದ್ದಾರೆ.

  • ಪ್ರಳಯ ಆದ್ರೂ ಅನರ್ಹ ಶಾಸಕರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಲ್ಲ- ಎಸ್.ಆರ್.ಪಾಟೀಲ್

    ಪ್ರಳಯ ಆದ್ರೂ ಅನರ್ಹ ಶಾಸಕರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳಲ್ಲ- ಎಸ್.ಆರ್.ಪಾಟೀಲ್

    ಬಾಗಲಕೋಟೆ: ಅನರ್ಹ ಶಾಸಕರನ್ನು ಮರಳಿ ಕಾಂಗ್ರೆಸ್ಸಿಗೆ ಕರೆದುಕೊಳ್ಳುವ ಪ್ರಶ್ನೆಯೇ ಇಲ್ಲ. ನನ್ನ ವೈಯಕ್ತಿಕ, ಪಕ್ಷದ ನಾಯಕರ ಅಭಿಪ್ರಾಯವೂ ಇದೇ ಆಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

    ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗತ್ತು ಪ್ರಳಯ ಆದರೂ ಅನರ್ಹ ಶಾಸಕರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಳ್ಳುವುದಿಲ್ಲ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂಬುದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಪಕ್ಷದ ನಾಯಕರ ಅಭಿಪ್ರಾಯವಾಗಿದೆ. ಜೊತೆಗೆ ನನ್ನ ವೈಯಕ್ತಿಕ ಅಭಿಪ್ರಾಯವೂ ಸಹ ಅಂತಹವರನ್ನು ಪಕ್ಷಕ್ಕೆ ಕರೆ ತರುವುದು ಸೂಕ್ತವಲ್ಲ. ಇದು ನನ್ನ ಖಡಾಖಂಡಿತ ಅಭಿಪ್ರಾಯವಾಗಿದೆ ಎಂದು ಸ್ಪಷ್ಟಪಡಿಸಿದರು.

    ರಾಜ್ಯದ ಉಪ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಹೆಚ್ಚು ಸ್ಥಾನ ಗೆಲ್ಲಲು ಸಾಮೂಹಿಕ ನಾಯಕತ್ವ ಅಗತ್ಯ. ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರಿಗೂ ಇದನ್ನೇ ಹೇಳಿದ್ದೇವೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರ ಸಂಬಂಧವೂ ಚೆನ್ನಾಗಿದೆ. ಪಕ್ಷ ಶಕ್ತಿಶಾಲಿ ಆಗಲು ಐಕ್ಯತೆಯಿಂದ ಒಂದು ಮನಸ್ಸಿನಿಂದ ಕೆಲಸ ಮಾಡಬೇಕು. ಎತ್ತು ಏರಿಗೆ, ಕೋಣ ಕೆರೆಗೆ ಎಳೆದರೆ ಪಕ್ಷಕ್ಕೆ ಒಳ್ಳೆಯದಾಗುವುದಿಲ್ಲ. ವಿಚಾರ ಭಿನ್ನ ಇರಬಹುದು. ಆದರೆ ಹೈಕಮಾಂಡ್ ತೀರ್ಮಾನದಂತೆ ಎಲ್ಲರೂ ನಡೆಯುತ್ತಾರೆ. ಪಕ್ಷದ ಹಿತದೃಷ್ಟಿಯಿಂದ ಚರ್ಚೆಗಳು ನಡೆಯುತ್ತಿವೆ. ಪಕ್ಷಕ್ಕೆ ಮಾರಕವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

    ಸ್ಪೀಕರ್ ನೀಡಿದ್ದ ಶಿಕ್ಷೆಯನ್ನು ನ್ಯಾಯಾಲಯ ಎತ್ತಿ ಹಿಡಿದಿದೆ. ಶಿಕ್ಷೆಯ ಅವಧಿಯನ್ನು ಕಡಿಮೆ ಮಾಡಿದೆ ಅಷ್ಟೇ. ಜೀವಾವಧಿ ಶಿಕ್ಷೆಯನ್ನು ಕಡಿಮೆ ಮಾಡಿದೆ. ಸಾಯುವವರೆಗೂ ಜೈಲಿನಲ್ಲಿ ಇರುವ ಬದಲಿಗೆ ಅವಧಿ ಕಡಿಮೆ ಮಾಡಿದೆ. ಆದರೆ ಒಂದು ದಿನ ಜೈಲಿನಲ್ಲಿ ಇದ್ದರೂ ಅದು ಶಿಕ್ಷೆಯೇ, ಅನರ್ಹ ಶಾಸಕರಾಗಿಯೇ ಅವರು ಜನತಾ ನ್ಯಾಯಾಲಯದ ಮುಂದೆ ಹೋಗಬೇಕು ಎಂದರು.

    ಅನರ್ಹ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್‍ಗೆ ಎಷ್ಟು ದ್ರೋಹ ಮಾಡಿದ್ದಾರೋ ಅದಕ್ಕಿಂತ ಹೆಚ್ಚು ಬಿಜೆಪಿಗೆ ದ್ರೋಹ ಮಾಡುತ್ತಾರೆ. ಇಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ. ಅಲ್ಲಿ ಸಲ್ಲದವರು ಕಾಂಗ್ರೆಸಿನಲ್ಲಿ ಸಲ್ಲಬಹುದು. ಕಳೆದ ಚುನಾವಣೆಯಲ್ಲಿ ಸೋತ ಬಿಜೆಪಿ ಅಭ್ಯರ್ಥಿಗಳು ಕಾಂಗ್ರೆಸಿಗೆ ಬಂದರೆ ಸ್ವಾಗತ. ಅವರ ಸಿಟ್ಟು ಇಮ್ಮಡಿ ಆಗಿದೆ. ಅದರಿಂದಲೆ ಅನರ್ಹ ಶಾಸಕರು ಸೋಲುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

    ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡೋಣ: ಅನರ್ಹರ ವಿರುದ್ಧ ಪ್ರಕಾಶ್ ರಾಜ್ ಕಿಡಿ

    ಬೆಂಗಳೂರು: ಜನ್ಮ ಜನ್ಮಕ್ಕೂ ಮರೆಯದ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ನಟ ಪ್ರಕಾಶ್ ರಾಜ್, ಅನರ್ಹ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

    ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿದ್ದು, ಅನರ್ಹರು ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ತೀರ್ಪಿತ್ತಿದೆ. ಹೀಗಾಗಿ 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವಿಚಾರವಾಗಿ ಪ್ರಕಾಶ್ ರಾಜ್, ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು ಎನ್ನುವ ರೀತಿ ತೀರ್ಪು ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ‘ಹಾವೂ ಸಾಯ್ಬಾರ್ದು.. ಕೋಲೂ ಮುರೀಬಾರ್ದು’ ಎನ್ನುವ ತೀರ್ಪಿನ ಆಶೀರ್ವಾದ ಪಡೆದುಕೊಂಡು ‘ತೃಪ್ತ’ ಶಾಸಕರು ಕೊಂಕಣ ಸುತ್ಕೊಂಡು ಮೈಲಾರಕ್ಕೆ ಬಂದಿವೆ. ಒಳ್ಳೇದೆ ಆಯ್ತು, ಸ್ವಾಭಿಮಾನಿ ಕನ್ನಡಿಗರೇ ಇವುಗಳು ಜನ್ಮ ಜನ್ಮಕ್ಕೂ ಮರೆಯದೆ ಇರುವ ತೀರ್ಪು ಕೊಡುವುದು ಈಗ ನಮ್ಮ ಜವಾಬ್ದಾರಿ ಎಂದು ಬರೆದುಕೊಂಡಿದ್ದಾರೆ.

    ಸುಪ್ರೀಂಕೋರ್ಟ್ ನಲ್ಲಿ ಗೆದ್ದು ಬೀಗುತ್ತಿರುವ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಬೇಕು. ಈ ಮೂಲಕ ಅವರಿಗೆ ತಕ್ಕ ಪಾಠವನ್ನು ಕಲಿಸಬೇಕು ಎಂದು ಪ್ರಕಾಶ್ ರಾಜ್ ಮತದಾರರಿಗೆ ಮನವಿ ಮಾಡಿಕೊಂಡಿದ್ದಾರೆ.

    17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಆಯ್ಕೆಯಾಗದ ಹೊರತು ಸರ್ಕಾರದಲ್ಲಿ ಯಾವುದೇ ಅಧಿಕಾರ ಹೊಂದುವಂತಿಲ್ಲ. ಸ್ಪೀಕರ್ ಅವರಿಗೆ ಅನರ್ಹತೆ ಮಾಡಲು ಮಾತ್ರ ಅಧಿಕಾರ ಇರುತ್ತದೆ ಹೊರತು ನಿರ್ಧಿಷ್ಟ ಸಮಯದವರೆಗೆ ಅನರ್ಹ ಮಾಡಲು ಅವಕಾಶ ಇಲ್ಲ ಎಂದು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

    ಅನರ್ಹತೆಯಾದರೂ ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಕೆಲವರು ಸ್ಪಷ್ಟಪಡಿಸಿದ್ದಾರೆ.

    ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ.