Tag: ಅನರ್ಹ ಶಾಸಕ

  • ದೊಡ್ಡಣ್ಣನಾಗಿ ಸ್ಪರ್ಧೆ ಮಾಡದಂತೆ ಹೇಳುವುದು ನನ್ನ ಕರ್ತವ್ಯ: ಲಖನ್‍ಗೆ ರಮೇಶ್ ಟಾಂಗ್

    ದೊಡ್ಡಣ್ಣನಾಗಿ ಸ್ಪರ್ಧೆ ಮಾಡದಂತೆ ಹೇಳುವುದು ನನ್ನ ಕರ್ತವ್ಯ: ಲಖನ್‍ಗೆ ರಮೇಶ್ ಟಾಂಗ್

    ಬೆಳಗಾವಿ: ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಅವರಿಗೆ ಹೇಳಿದ್ದೇನೆ. ದೊಡ್ಡಣ್ಣನಾಗಿ ನನ್ನ ಕರ್ತವ್ಯ ಮಾಡಿದ್ದೇನೆ. ಇನ್ನು ಸ್ಪರ್ಧೆ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

    ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ. ಯಾವುದೇ ಕಾರಣಕ್ಕೂ ಸಹೋದರ ರಮೇಶ್ ಕುಮಾರ್ ಅವರನ್ನು ಭೇಟಿಯಾಗಲ್ಲ ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಅನರ್ಹ ಶಾಸಕರು, ದೊಡ್ಡವನಾಗಿ ತಿಳುವಳಿಕೆ ಹೇಳಿದ್ದೇನೆ. ನಾಮಪತ್ರ ಸಲ್ಲಿಸಿದ ಬಳಿಕ ಸ್ಪರ್ಧೆಯನ್ನ ಎದುರಿಸಲೇ ಬೇಕು. ಅದು ಯಾರೇ ಆಗಿದ್ದರೂ ಸರಿ ಎಂದರು.

    ಸುಪ್ರೀಂಕೋರ್ಟ್ ಅನುಮತಿ ನೀಡಿದರೆ ನಾವು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ಸೋಮವಾರ ಸ್ಪರ್ಧೆಯ ಬಗ್ಗೆ ಸ್ಪಷ್ಟನೆ ನೀಡುತ್ತೇವೆ. ತೀರ್ಪು ನಮ್ಮ ಪರವಾಗಿ ಬರುತ್ತದೆ ಎಂಬ ವಿಶ್ವಾಸವಿದೆ. ಉಪ ಚುನಾವಣೆ ಸಂಬಂಧ ಗುರುವಾರ ಕ್ಷೇತ್ರದ ಜನರು ಹಾಗೂ ಬೆಂಬಲಿಗರ ಜೊತೆಗೆ ಸಭೆ ನಡೆಸುತ್ತೇನೆ ಎಂದು ತಿಳಿಸಿದರು.

    ಮಾಜಿ ಸಚಿವ ಸತೀಶ್ ಜಾರಕಿಹೊಳಿ ಎಂದು ಮಾಧ್ಯಮಗಳು ಪ್ರಶ್ನೆ ಕೇಳಲು ಮುಂದಾಗುತ್ತಿದ್ದಂತೆ, ಈಗ ಎನೂ ಹೇಳುವುದಿಲ್ಲ. ಮುಂದೆ ಮಾತನಾಡುತ್ತೇನೆ ಎಂದು ಜಾರಿಕೊಂಡರು.

  • ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡ ಶಿವರಾಮ್ ಹೆಬ್ಬಾರ್

    ಬಿಜೆಪಿ ಸಭೆಯಲ್ಲಿ ಕಾಣಿಸಿಕೊಂಡ ಶಿವರಾಮ್ ಹೆಬ್ಬಾರ್

    – ಉಪ ಚುನಾವಣೆಗೆ ನಿಲ್ತೀನಿ, ಗೆಲ್ತೀನಿ ಎಂದ ಅನರ್ಹ ಶಾಸಕ

    ಕಾರವಾರ: ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮುಂಡಗೋಡಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾಣಿಸಿಕೊಂಡಿದ್ದಾರೆ.

    ಬೆಂಗಳೂರಿನಿಂದ ಯಲ್ಲಾಪುರಕ್ಕೆ ಇಂದು ಆಗಮಿಸಿದ ಶಿವರಾಮ್ ಹೆಬ್ಬಾರ್, ಮುಂಡಗೋಡದಲ್ಲಿ ಬಿಜೆಪಿ ಸಭೆ ನಡೆಯುತ್ತಿದೆ ಎಂಬ ಸುದ್ದಿ ಸಿಗುತ್ತಿದ್ದಂತೆ ಅತ್ತ ಪ್ರಯಾಣ ಬೆಳೆಸಿದರು. ಸಭೆಗೆ ಹಾಜರಾದ ಅವರು ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಜೊತೆ ಮಾತುಕತೆ ನಡೆಸಿ, ಅಸಮಾಧಾನವನ್ನು ತಣಿಸುವ ಪ್ರಯತ್ನಿಸಿದ್ದಾರೆ.

    ಇದಕ್ಕೂ ಮುನ್ನ ಯಲ್ಲಾಪುರದಲ್ಲಿ ಮಾತನಾಡಿದ ಅನರ್ಹ ಶಾಸಕರು, ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 30 ಕೊನೆ ದಿನ. ಅದು ನಮಗೆ ರಾಜಕೀಯ ನಿರ್ಣಯ ಕೈಗೊಳ್ಳಲೂ ಕೊನೆ ದಿನ. ನೂರಕ್ಕೆ ನೂರರಷ್ಟು ನ್ಯಾಯಾಲಯ ಅವಕಾಶ ಮಾಡಿಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

    ಅನರ್ಹರಾಗುವುದಕ್ಕೂ ಚುನಾವಣೆಗೆ ನಿಲ್ಲುವುದಕ್ಕೂ ಸಂಬಂಧವಿಲ್ಲ. ಅನರ್ಹತೆ ಆ ದಿನಕ್ಕೆ ಅಷ್ಟೇ. ಪಿ.ದಿನಕರನ್ ಕೇಸ್‍ನಲ್ಲಿ 19 ಜನರಿಗೆ ಇದೇ ನಿರ್ಣಯವನ್ನು ನ್ಯಾಯಾಲಯ ನೀಡಿದೆ ಎಂದು ತಿಳಿಸಿದರು.

    ಮಾಜಿ ಸ್ಪೀಕರ್ ವಿರುದ್ಧ ಗರಂ!
    ಉದ್ದೇಶಪೂರ್ವಕವಾಗಿ, ರಾಜಕೀಯದ ಹಿತಾಸಕ್ತಿಗಾಗಿ, ಒಂದು ಪಕ್ಷದ ಕಾರ್ಯಕರ್ತರಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಶಾಸಕರ ಅನರ್ಹತೆ ನಿರ್ಣಯ ತೆಗೆದುಕೊಂಡರು. ನ್ಯಾಯಾಧೀಶರಾಗಿ ಅವರು ನಿರ್ಣಯ ತೆಗೆದುಕೊಂಡಿಲ್ಲ. ಸ್ಪೀಕರ್ ಸ್ಥಾನದಲ್ಲಿರುವವರು ಮನಸ್ಸಿಗೆ ಬಂದಂತೆ ಅನರ್ಹತೆ ಮಾಡುವಂತಿಲ್ಲ. 2023ರ ವೆರಗೂ ಅನರ್ಹತೆಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇಂತಹ ನಿರ್ಣಯ ದೇಶದ ಇತಿಹಾಸದಲ್ಲಿ ಇದೇ ಮೊದಲು. ರಮೇಶ್ ಕುಮಾರ್ ಅವರ ಈ ನಿರ್ಧಾರ ಸಂವಿಧಾನ ವಿರೋಧಿ ಕ್ರಮ ಎಂದು ಹೇಳಿದರು.

    ಸುಪ್ರೀಂಕೋರ್ಟ್ ಗುರುವಾರ ಮಧ್ಯಾಹ್ನದೊಳಗೆ ಯಾವುದಾದರೂ ಒಂದು ತೀರ್ಪು ನೀಡಲಿದೆ. ನ್ಯಾಯಾಂಗದ ಮೇಲೆ ವಿಶ್ವಾಸವಿದೆ. ಇಲ್ಲದಿದ್ದಲ್ಲಿ ಅದು ಸಾಂವಿಧಾನಿಕ ಬಿಕ್ಕಟ್ಟಾಗಲಿದೆ. ಅನರ್ಹತೆ ನಿರ್ಣಯ ಮಾಡದಿದ್ದರೇ ಕ್ಷೇತ್ರಕ್ಕೆ ಎರಡು ಶಾಸಕರಾಗಲಿದ್ದಾರೆ ಎಂದರು.

    ಮಾಜಿ ಸ್ಪೀಕರ್ ನಡೆಯ ಬಗ್ಗೆ ಯೋಚಿಸಿಯೇ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವು. ಕೋರ್ಟ್ ನಮಗೆ ಮಧ್ಯಕಾಲಿಕ ತೀರ್ಪು ನೀಡಿತ್ತು. ವಿಧಾನಸಭೆಗೆ ಹೋಗುವುದು ಬಿಡೋದು ಶಾಸಕರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿತ್ತು. ಮುಂದುವರಿದ ಭಾಗವಾಗಿ ಕಳೆದ ಕೆಲವು ದಿನಗಳಿಂದ ವಾದ ಪ್ರತಿವಾದಗಳು ನಡೆದಿವೆ. ನಾನು ಬಿಜೆಪಿ ಪಕ್ಷಕ್ಕೆ ಸೇರಿಕೊಂಡಿಲ್ಲ. ತೀರ್ಪು ಬಂದ ಬಳಿಕ ಅನರ್ಹ ಶಾಸಕರೆಲ್ಲರೂ ಒಟ್ಟಾಗಿ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

    ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ. ನಾಮಪತ್ರ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದರೂ ಈವರೆಗೂ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ. ಜೊತೆಗೆ ಯಾವುದೇ ಪಕ್ಷವೂ ತನ್ನ ಅಭ್ಯರ್ಥಿಯ ಹೆಸರನ್ನು ಹೆಸರನ್ನು ಘೋಷಿಸಿಲ್ಲ.

  • ನನ್ನನ್ನು ಅನರ್ಹಗೊಳಿಸಿರುವುದು ಸರಿಯಲ್ಲ- ಆರ್. ಶಂಕರ್

    ನನ್ನನ್ನು ಅನರ್ಹಗೊಳಿಸಿರುವುದು ಸರಿಯಲ್ಲ- ಆರ್. ಶಂಕರ್

    ನವದೆಹಲಿ: ನನ್ನನ್ನು ಅನರ್ಹಗೊಳಿಸಿರುವುದು ಸರಿಯಲ್ಲ. ಆದುದರಿಂದ ಸುಪ್ರೀಂ ಕೋರ್ಟಿನಲ್ಲಿ ನನ್ನ ಪರ ತೀರ್ಪು ಬರುತ್ತದೆ ಎಂದು ಆರ್ ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಸುಪ್ರೀಂಕೋರ್ಟಿನಲ್ಲಿ ಇಂದು ಅನರ್ಹ ಶಾಸಕರ ಅರ್ಜಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಕ್ಕೆ ನೂರು ಅನರ್ಹರ ಪರವಾದ ತೀರ್ಪು ಬರುತ್ತದೆ. ನಾನು ನೇರವಾಗಿ ಸ್ಪೀಕರ್‍ಗೆ ಪತ್ರ ಬರೆದಿರಲಿಲ್ಲ. ನಾನು ಸ್ಪೀಕರ್‍ಗೆ ಕೊಟ್ಟಿದ್ದು ಸಿದ್ದರಾಮಯ್ಯ ಬರೆದಿದ್ದ ಪತ್ರವಾಗಿದೆ. ಇದಾದ ಮೇಲೆ ನನಗೆ ಸ್ಪೀಕರ್ ಪತ್ರ ಬರೆದು ಪ್ರತಿಕ್ರಿಯೆ ಕೇಳಿದ್ದರು. ಅದು ಇಂಗ್ಲೀಷ್ ನಲ್ಲಿದೆ, ನಿಮ್ಮ ಪ್ರತಿಕ್ರಿಯೆ ಏನು ಎಂದು ಕೇಳಿದ್ದರು. ದಾಖಲೆ ಇದ್ದರೆ ಕೊಡು ಅಂತನೂ ಕೇಳಿದ್ದರು. ಆಮೇಲೆ ನಾನು ಸ್ಪೀಕರ್ ಗೆ ಯಾವುದೇ ಪತ್ರ ಬರೆದಿಲ್ಲ. ಅಲ್ಲದೆ ಸ್ಪೀಕರ್ ಭೇಟಿಯಾಗಿ ಕೂಡ ಏನನ್ನೂ ತಿಳಿಸಿಲ್ಲ. ಹಾಗಾಗಿ ನಾನು ಕಾಂಗ್ರೆಸ್ ಸೇರುವ ಪ್ರಕ್ರಿಯೆಯೇ ಪೂರ್ಣ ಆಗಿಲ್ಲ ಎಂದರು.

    ನನ್ನನ್ನು ಅನರ್ಹಗೋಳಿಸಿರುವುದು ಸರಿಯಲ್ಲ. ಆದ್ದರಿಂದ ಸುಪ್ರೀಂ ಕೋರ್ಟಿನಲ್ಲಿ ನನ್ನ ಪರ ತೀರ್ಪು ಬರುತ್ತದೆ. ನನ್ನ ಪ್ರಕರಣದ ವಾದಕ್ಕೆ ಪ್ರತ್ಯೇಕ ವಕೀಲರನ್ನು ನಿಯೋಜಿಸಿದ್ದೇವೆ. ನನ್ನ ಕ್ಷೇತ್ರದಲ್ಲಿ ಚುನಾವಣೆ ಬರಲ್ಲ ಎಂಬುದು ನನ್ನ ವಾದ. ಆದುದರಿಂದ ಟಿಕೆಟ್ ಕೊಡುವುದು ಬಿಡುವುದು ಮುಂದಿನ ವಿಚಾರವಾಗಿದೆ. ಬಿಜೆಪಿಯಲ್ಲಿ ಪೈಪೋಟಿ ಇದೆ. ಆಕಾಂಕ್ಷಿಗಳಿರುತ್ತಾರೆ ಅದಕ್ಕೆ ಏನೂ ಮಾಡೋಕಾಗಲ್ಲ ಎಂದು ತಿಳಿಸಿದ್ದಾರೆ.

    ಇಂದು ಕೇಸ್ ಇದ್ದರೂ ನಿನ್ನೆಯೇ ಎಸ್.ಟಿ ಸೋಮಶೇಖರ್, ಬೈರತಿ ಬಸವರಾಜ್, ಶಿವರಾಂ ಹೆಬ್ಬಾರ್, ಪ್ರತಾಪಗೌಡ ಪಾಟೀಲ್, ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಬಂದಿದ್ದಾರೆ. ಏರ್‍ಪೋರ್ಟಿನಲ್ಲಿ ಮಾತನಾಡಿದ ಬೈರತಿ ಬಸವರಾಜ್, ನಾವೇನೂ ತಪ್ಪು ಮಾಡಿಲ್ಲ. ಚುನಾವಣೆಗೆ ನಿಲ್ಲುತ್ತೇವೆ. ತೀರ್ಪು ನಮ್ಮ ಪರವಾಗಿಯೇ ಬರಲಿದೆ. ಬಿಜೆಪಿಯವರು ಟಿಕೆಟ್ ಕೊಡಲ್ಲ ಅಂತ ಹೇಳಿಲ್ಲ ಅಂದರು. ಇತ್ತ ಎಲೆಕ್ಷನ್‍ಗೆ ಹೋಗುವುದೇ ನಮ್ಮ ನಡೆ ಅಂತ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ. ಈ ಮಧ್ಯೆ, ನಾವು ಕಳೆದುಕೊಂಡಿದ್ದು ಏನೂ ಇಲ್ಲ. ಪಡೆದದ್ದೂ ಏನೂ ಇಲ್ಲ. ಹಿರೇಕೆರೂರಿಗೆ 270 ಕೋಟಿ ಅಭಿವೃದ್ಧಿ ಹಣ ಬಂದಿದೆ. ನಮ್ಮ ತ್ಯಾಗ ಸಾರ್ಥಕ ಆಗಿದೆ ಅಂತ ಅನರ್ಹ ಶಾಸಕ ಬಿ.ಸಿ ಪಾಟೀಲ್ ಹೇಳಿದ್ದಾರೆ.

    ಇಂದು ಸ್ಪೀಕರ್ ಆದೇಶ ಪ್ರಶ್ನಿಸಿ 17 ಮಂದಿ ಅನರ್ಹ ಶಾಸಕರು ಸುಪ್ರೀಂಕೋರ್ಟ್ ಸಲ್ಲಿಸಿದ್ದ ಅರ್ಜಿ ಇಂದು ಸುಧೀರ್ಘ ವಿಚಾರಣೆಗೆ ಬರಲಿದೆ. ನ್ಯಾ. ಎನ್.ವಿ ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ ಕೃಷ್ಣ ಮುರಾರಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಅನರ್ಹ ಶಾಸಕರ ಪರ ಘಟಾನುಘಟಿ ವಕೀಲರಾದ ಮುಕುಲ್ ರೊಹ್ಟಗಿ, ಹರೀಶ್ ಸಾಳ್ವೆ, ಗಿರಿ ಸೇರಿದಂತೆ ಮೂರ್ನಾಲ್ಕು ಮಂದಿ ವಕೀಲರು ವಾದ ಮಂಡಿಸಲಿದ್ದಾರೆ. ಸೋಮವಾರ ನಡೆದ ವಿಚಾರಣೆಗೆ ವೇಳೆ ರೋಹಟಗಿ ವಾದ ಆಲಿಸಿದ್ದ ಕೋರ್ಟ್ ಸುದೀರ್ಘ ವಿಚಾರಣೆಗಾಗಿ ಇಂದಿಗೆ ಮುಂದೂಡಿದೆ. ಇಂದು ಕೇವಲ ಅನರ್ಹ ಶಾಸಕರ ಪರ ವಕೀಲರು ವಾದ ಮಾಡಲಿದ್ದು, ಅನರ್ಹರ ಮನವಿಯನ್ನಷ್ಟೇ ಸುಪ್ರೀಂಕೋರ್ಟ್ ಆಲಿಸಲಿದೆ.

  • ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತ್ರೂ ಕ್ಷೇತ್ರದ ಜನ ಗೆಲ್ಲಿಸ್ತಾರೆ- ರಮೇಶ್ ಜಾರಕಿಹೊಳಿ

    ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತ್ರೂ ಕ್ಷೇತ್ರದ ಜನ ಗೆಲ್ಲಿಸ್ತಾರೆ- ರಮೇಶ್ ಜಾರಕಿಹೊಳಿ

    – ತಂದೆ-ತಾಯಿ ನೆನೆದು ರಮೇಶ್ ಭಾವುಕ

    ಬೆಳಗಾವಿ: ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದ್ದು ಇದೀಗ ಗೋಕಾಕ್ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರು, ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತರೂ ಜನ ನನ್ನನ್ನು ಗೆಲ್ಲಿಸುತ್ತಾರೆ. ಕ್ಷೇತ್ರದ ಜನ ನನ್ನ ಮೇಲೆ ಪ್ರೀತಿ ಇಟ್ಟಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜೀನಾಮೆ ಕೊಟ್ಟ ದಿನವೇ ಚುನಾವಣೆಗೆ ಸ್ಪರ್ಧೆ ಮಾಡಲು ಮಾನಸಿಕವಾಗಿ ಸಿದ್ಧನಾಗಿದ್ದೇನೆ. ಕಾನೂನು ಅಡಚಣೆ, ತಾಂತ್ರಿಕ ಸಮಸ್ಯೆ ಬಗ್ಗೆ ವಕೀಲರೊಂದಿಗೆ ಚರ್ಚೆ ಮಾಡುತ್ತೇವೆ. ಅನರ್ಹರು ಚುನಾವಣೆಗೆ ಸ್ಪರ್ಧಿಸಲು ಬರುವುದಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ, ಸ್ಪೀಕರ್ ಅವರ ಆದೇಶ ಓದಿ ಹೇಳಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಸುಪ್ರೀಂಕೋರ್ಟಿನಲ್ಲಿ ಒಂದು ತಾಸು ನಿಲ್ಲುವುದಿಲ್ಲ. ರಮೇಶ್ ಕುಮಾರ್ ಕಾನೂನು ಬಾಹಿರವಾಗಿ ಆದೇಶ ನೀಡಿದ್ದಾರೆ. ನೂರಕ್ಕೆ ನೂರರಷ್ಟು ಸುಪ್ರೀಂಕೋರ್ಟಿನಲ್ಲಿ ನಮಗೆ ಜಯ ಸಿಗುತ್ತದೆ. ನಾವೇ ನಮ್ಮ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧೆ ಮಾಡಬೇಕು ಎಂಬುದು ತೀರ್ಮಾನ ಮಾಡಿಲ್ಲ. ಆದರೆ ಎಲ್ಲ ಅನರ್ಹ ಶಾಸಕರು ಕೂಡ ನಿರ್ಧಾರ ಮಾಡಿದ್ದಾರೆ ಎಂದರು.

    ನಾನು ನಾಮಪತ್ರ ಕೊಟ್ಟು ಎಲ್ಲಿ ಕುಳಿತರು ಕ್ಷೇತ್ರದ ಜನ ಗೆಲ್ಲಿಸುತ್ತಾರೆ. ಕ್ಷೇತ್ರದ ಜನ ನನ್ನ ಮೇಲೆ ಪ್ರೀತಿ ಇಟ್ಟಿದ್ದಾರೆ. ಅವರು ಕೈಬಿಟ್ಟ ದಿನವೇ ನಾನು ಝೀರೋ, ಜನ ಇರೋವರೆಗೂ ಯಾರೂ ಏನೂ ಮಾಡಲು ಆಗಲ್ಲ. ಪ್ರವಾಹದ ಸಂದರ್ಭದಲ್ಲಿ ಬಹಳಷ್ಟು ಕೆಲಸ ಮಾಡಿದ್ದೇನೆ. ಸತೀಶ್ ಗೋಕಾಕ್ ನಲ್ಲಿ ಟೋಪಿ ಹಾಕಿಕೊಂಡು ಫೋಟೋ ಹಾಕಿಸಿಕೊಂಡು ಪ್ರಚಾರ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ನಾನು ಅನರ್ಹ ಅನಿಸಿಲ್ಲ. ಜನರು ಮತ್ತು ಅಧಿಕಾರಿಗಳು ನನ್ನ ಅಷ್ಟು ಪ್ರೀತಿ ಮಾಡುತ್ತಾರೆ ಎಂದು ತಿಳಿಸಿದರು.

    ವಸ್ತು ಕಳೆದುಕೊಂಡ ಕುರಿತು ಗೋಕಾಕ್ ಸಮಾವೇಶದಲ್ಲಿ ಬಹಿರಂಗ ಪಡಿಸುವ ಕುರಿತು ಸತೀಶ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸತೀಶ್ ಎಲ್ಲಿ ಕಾರ್ಯಕ್ರಮ ಮಾಡುತ್ತಾರೆ ಅದೇ ವೇದಿಕೆ ಮೇಲೆ ನಾನು ಹೋಗಿ ಏನು ಎಂದು ಕೇಳುತ್ತೇನೆ. ಯಾವ ವಸ್ತು ಎಂದು ನನಗೆ ಗೊತ್ತಿಲ್ಲ. ಅವನೇ ಹೇಳಬೇಕು. ಸತೀಶ್ ಜಾರಕಿಹೊಳಿನೇ ಆ ವಸ್ತು ಹುಡುಕಿಕೊಡಲಿ. ಸತೀಶ್ ಹಗರಣ ಏನಿದ್ದಾವೆ ಎಂದು ನನಗೆ ಗೊತ್ತು. ನಾನು ಹೇಳಿದರೆ ನಮ್ಮ ಮನೆತನದ ಗೌರವ ಕಮ್ಮಿ ಆಗುತ್ತದೆ. ಈ ಕಾರಣಕ್ಕೆ ನಾನು ಬಾಯಿ ಮುಚ್ಚಿಕೊಂಡಿದ್ದೇನೆ. ನಮ್ಮ ತಂದೆ ಲಕ್ಷ್ಮಣ ಜಾರಕಿಹೊಳಿ ದೊಡ್ಡ ಪ್ರಮಾಣದಲ್ಲಿ ಹೋರಾಡಿ ಸಾಮ್ರಾಜ್ಯ ಕಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಸಾಮ್ರಾಜ್ಯ ಕಟ್ಟಿಲ್ಲ ಎಂದು ಟಾಂಗ್ ನೀಡಿದರು.

    ಇದೇ ವೇಳೆ ನಮ್ಮ ತಂದೆ ಆದರ್ಶ ನಡಿಗೆಯಿಂದ ಈ ಮಟ್ಟಿಗೆ ನಾನು ಬಂದಿದ್ದೇನೆ. ನಮ್ಮ ತಂದೆ ಅಗರ್ಭ ಶ್ರೀಮಂತರಲ್ಲ ಕೂಲಿ ಮಾಡಿ ಈ ಮಟ್ಟಿಗೆ ಬಂದಿದ್ದೇವೆ ಎಂದು ತಂದೆ-ತಾಯಿ ನೆನೆದು ಭಾವುಕರಾದರು.

    ಅಂಬಿರಾವ್ ಪಾಟೀಲ್ ವಿರುದ್ಧ ಸತೀಶ್ ಜಾರಕಿಹೊಳಿ ಆರೋಪ ವಿಚಾರದ ಕುರಿತು ಮಾತನಾಡಿದ ರಮೇಶ್, ಅಂಬಿರಾವ್ ಪಾಟೀಲ್ ಬಗ್ಗೆ ಸತೀಶ್ ಹತಾಶೆಯಿಂದ ಹೇಳುತ್ತಿದ್ದಾನೆ. ಅಂಬಿರಾವ್ ಕ್ಷೇತ್ರದ ಜನರ ಪ್ರೀತಿ ವಿಶ್ವಾಸ ಗಳಸಿಕೊಂಡು ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಯಾರಾದರೂ ತಪ್ಪಾಗಿ ಹೇಳಿದರೆ ಇಂದೇ ಆತನ ತೆಗೆಯುತ್ತೇನೆ. ಇಂತಹ ಮಾತುಗಳಿಗೆ ಕ್ಷೇತ್ರದ ಜನರು ಕಿವಿಗೊಡದಂತೆ ರಮೇಶ್ ಮನವಿ ಮಾಡಿಕೊಂಡರು.

    ಸತೀಶ್ ನಮ್ಮ ಕ್ಷೇತ್ರ ಸುತ್ತಿ ಮುಜುಗರವಾಗಿ ಮಾತನಾಡುತ್ತಿದ್ದಾರೆ. ಚುನಾವಣೆ ಬಂದಾಗ ನಾವು ಸಿದ್ಧರಾಗಿರೋಣ ಎಂದು ಸಹೋದರ ಲಖನ್ ಗೆ ಶುಭಹಾರೈಸಿದರು. ಲಖನ್ ಶಾಸಕ ಆದರೆ ಮೊದಲು ಸಂತೋಷ ನಾನು ಪಡುತ್ತೇನೆ. ಲಖನ್ ಜಾರಕಿಹೊಳಿಗೆ ಒಳ್ಳೆಯದಾಗಲಿ. ಗೋಕಾಕ್ ಕ್ಷೇತ್ರದ ಜನರಿಗೆ ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಮಾಡುತ್ತಿದ್ದಾರೆ ಎಂದು ಗೊತ್ತು. ಜನರು ಸತೀಶ್ ಗೆ ಯಾವಾಗ ಬುದ್ಧಿ ಕಲಿಸಬೇಕೋ ಆವಾಗ ಕಲಿಸುತ್ತಾರೆ. ಸತೀಶ್ ವಿರೋಧ ಮಾಡಿದಷ್ಟು ನನಗೆ ಒಳ್ಳೆಯದಾಗುತ್ತದೆ. ಅತೀ ಶೀಘ್ರದಲ್ಲಿ ನನ್ನ ಮುಂದಿನ ನಡೆ ಬಗ್ಗೆ ತಿಳಿಸುತ್ತೇನೆ. ಮತದಾರರು ಯಾರೂ ಸಂಶಯ ಮತ್ತು ಡೈವರ್ಟ್ ಆಗೊದು ಬೇಡ. ಅಂಬಿರಾವ್ ಪಾಟೀಲ್ ಕಳೆದ ಮೂವತ್ತು ವರ್ಷಗಳಿಂದ ಗೋಕಾಕ್ ನಲ್ಲಿ ಬಂದುಳಿದಿದ್ದಾನೆ. ಯಾವುದೇ ಕೇಸ್ ಬಂದರೂ ಕೋರ್ಟ್ ಕಳುಹಿಸದೆ ಇಲ್ಲೇ ಮುಗಿಸಿ ಕಳುಹಿಸುತ್ತಾರೆ. ಬಡ ಜನರಿಗೆ ಈ ಮೂಲಕ ಅನುಕೂಲ ಮಾಡುತ್ತಿದ್ದಾನೆ. ಸತೀಶ್ ಕ್ಷೇತ್ರದಲ್ಲಿ ಪಿಎಗಳ ಹಾವಳಿ ಇದೆ ಎಂದು ಕಿಡಿಕಾರಿದರು.

  • ರಾಜ್ಯ ಉಪಚುನಾವಣೆಗೆ ತಡೆಯಾಜ್ಞೆ ಸಿಗೋ ವಿಶ್ವಾಸವಿದೆ- ಸುಧಾಕರ್

    ರಾಜ್ಯ ಉಪಚುನಾವಣೆಗೆ ತಡೆಯಾಜ್ಞೆ ಸಿಗೋ ವಿಶ್ವಾಸವಿದೆ- ಸುಧಾಕರ್

    ಚಿಕ್ಕಬಳ್ಳಾಪುರ: ರಾಜ್ಯದ 15 ಕ್ಷೇತ್ರಗಳಲ್ಲಿ ಅಕ್ಟೋಬರ್ 21ರಂದು ಬೈ ಎಲೆಕ್ಷನ್ ಘೋಷಣೆಯಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟಿನಲ್ಲಿ ತಡೆಯಾಜ್ಞೆ ಸಿಗುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಡಾ. ಕೆ ಸುಧಾಕರ್ ತಿಳಿಸಿದರು.

    ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಚುನಾವಣೆ ಘೋಷಣೆ ಅಗಿದೆ. ಮತ್ತೊಂದೆಡೆ ಅನರ್ಹ ಶಾಸಕರ ಅರ್ಜಿ ಸುಪ್ರೀಂಕೋರ್ಟಿನಲ್ಲಿ ಸೋಮವಾರ ವಿಚಾರಣೆಗೆ ಬರಲಿದೆ. ಹೀಗಾಗಿ ತರಾತರಿಯಲ್ಲಿ ಅಂದರೆ ಸುಪ್ರೀಂಕೋರ್ಟಿನಲ್ಲಿ ಅರ್ಜಿ ಇತ್ಯರ್ಥಕ್ಕೂ ಮುನ್ನವೇ ಚುನಾವಣೆ ನಡೆದರೆ ಅನರ್ಹ ಶಾಸಕರಾದ ನಮಗೆ ಅನ್ಯಾಯ ಆದಂತೆ ಆಗುತ್ತದೆ ಎಂದರು.

    ಅಲ್ಲದೆ ಅರ್ಜಿ ಇತ್ಯರ್ಥ ಆಗುವವರೆಗೂ ಚುನಾವಣೆ ಮಾಡಬಾರದು ಎಂದು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟಿಗೆ ನಮ್ಮ ಪರ ವಕೀಲರು ಮನವಿ ಮಾಡಲಿದ್ದಾರೆ. ನಮಗೆ ಅನ್ಯಾಯ ಆಗಲು ಸುಪ್ರೀಂಕೋರ್ಟ್ ನ್ಯಾಯಾಧೀಶರು ಬಿಡುವುದಿಲ್ಲ ಎಂಬ ಆತ್ಮವಿಶ್ವಾಸವಿದೆ ಎಂದು ತಿಳಿಸಿದರು.

    ಬೈ ಎಲೆಕ್ಷನ್:
    ಕರ್ನಾಟಕ ಉಪ ಚುನಾವಣೆ, ಮಹಾರಾಷ್ಟ್ರ, ಹರ್ಯಾಣ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಇಂದು ಸುದ್ದಿಗೋಷ್ಠಿ ನಡೆಸಿ ದಿನಾಂಕ ಪ್ರಕಟಿಸಿದರು. ಕರ್ನಾಟಕದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ಸೇರಿದಂತೆ ಎರಡು ರಾಜ್ಯಗಳಲ್ಲಿ ಅಕ್ಟೋಬರ್ 21 ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಮತ ಎಣಿಕೆ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.

    ಯಾವ್ಯಾವ ಕ್ಷೇತ್ರಗಳಲ್ಲಿ ಎಲೆಕ್ಷನ್:
    ಗೋಕಾಕ್, ಅಥಣಿ, ಕಾಗವಾಡ, ಹಿರೆಕೇರೂರು, ಯಲ್ಲಾಪುರ, ಯಶವಂತಪುರ್, ವಿಜಯನಗರ, ಶಿವಾಜಿನಗರ, ಹೊಸಕೋಟೆ, ಹುಣಸೂರು, ಕೆಆರ್ ಪೇಟೆ, ಮಹಾಲಕ್ಷ್ಮಿ ಲೇಔಟ್, ಕೆಆರ್ ಪುರ, ರಾಣೇಬೆನ್ನೂರು, ಚಿಕ್ಕಬಳ್ಳಾಪುರದಲ್ಲಿ ಉಪಚುನಾವಣೆ ನಡೆದರೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಮತ್ತು ರಾಯಚೂರಿನ ಮಸ್ಕಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದಿಲ್ಲ.

  • ಅನುದಾನ ಜಾಸ್ತಿಯಾಗಿ ಸಮ್ಮಿಶ್ರ ಸರ್ಕಾರದಿಂದ ಹೊರಬಂದೆ: ಸುಧಾಕರ್ ವ್ಯಂಗ್ಯ

    ಅನುದಾನ ಜಾಸ್ತಿಯಾಗಿ ಸಮ್ಮಿಶ್ರ ಸರ್ಕಾರದಿಂದ ಹೊರಬಂದೆ: ಸುಧಾಕರ್ ವ್ಯಂಗ್ಯ

    ಚಿಕ್ಕಬಳ್ಳಾಪುರ: ಅನುದಾನ ಜಾಸ್ತಿಯಾಗಿ ಸಮ್ಮಿಶ್ರ ಸರ್ಕಾರದಿಂದ ಹೊರಬಂದೆ ಎಂದು ಅನರ್ಹ ಶಾಸಕ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ನಮ್ಮ ಕ್ಷೇತ್ರಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಿಂದ ಅನುದಾನ ಎಲ್ಲಿ ಬಂದಿದೆ? ಬಹುಶಃ ಮಂತ್ರಿಯಾಗಿದ್ದ ಎನ್.ಎಚ್.ಶಿವಶಂಕರರೆಡ್ಡಿ ಅವರಿಗೆ ಕೊಟ್ಟಿದ್ದಾರೇನೋ ಗೊತ್ತಿಲ್ಲ. ನಮ್ಮ ಕ್ಷೇತ್ರಕ್ಕೆ ಯಾವುದೇ ಅನುದಾನ ನೀಡಲಿಲ್ಲ. ಇದೇ ಕಾರಣಕ್ಕೆ ಮೈತ್ರಿ ಸರ್ಕಾರದಿಂದ ಹೊರಗೆ ಬಂದೆ ಎಂದು ಅಸಮಾಧಾನ ಹೊರ ಹಾಕಿದರು.

    ಚಿಕ್ಕಬಳ್ಳಾಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ತೆಗೆದುಕೊಂಡು ಹೋದರು. ಅದು ದ್ವೇಷದ ರಾಜಕಾರಣ ಅಲ್ವಾ? ರಾಮನಗರ, ಮಂಡ್ಯದಲ್ಲಿ ಮೆಡಿಕಲ್ ಕಾಲೇಜು ಇತ್ತು. ಆದರೂ ಕನಕಪುರಕ್ಕೆ ಮೆಡಿಕಲ್ ಕಾಲೇಜು ಯಾಕೆ ಬೇಕಿತ್ತು? ಚಿಕ್ಕಬಳ್ಳಾಪುರ ಜಿಲ್ಲೆಯವರು ಜನರಲ್ಲವೇ? ಯಾವ ಕಾರಣಕ್ಕೆ ಮೆಡಿಕಲ್ ಕಾಲೇಜು ವಾಪಾಸ್ ತೆಗೆದುಕೊಂಡು ಹೋದರು ಎಂದು ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಗುಡುಗಿದರು.

    ಕನಕಪುರಕ್ಕೆ 450 ಕೋಟಿ ರೂ. ಕೊಟ್ಟಿದ್ದು ಯಾಕೆ? ಅದೇ ಅನುದಾನದಲ್ಲಿ ಕನಕಪುರಕ್ಕೆ 250 ಕೋಟಿ ರೂ., ಚಿಕ್ಕಬಳ್ಳಾಪುರಕ್ಕೆ 250 ಕೋಟಿ ರೂ. ಕೊಡಬಹುದಿತ್ತು. ಕೆಲವರ ಮೇಲೆ ವಿಶೇಷ ಪ್ರೀತಿ ತೋರಿದರು, ಇನ್ನು ಕೆಲವರನ್ನು ದ್ವೇಷಿಸಿದರು. ಒಂದು ವೇಳೆ ಎಲ್ಲರನ್ನೂ ಸಮಾನವಾಗಿ ನೋಡಿದ್ದರೆ ಸಮ್ಮಿಶ್ರ ಸರ್ಕಾರ ಉಳಿಯುತ್ತಿತ್ತು. ಸಮ್ಮಿಶ್ರ ಸರ್ಕಾರ ರಚನೆ ಮಾಡಿ ನಮ್ಮಂತ ಪ್ರಾಮಾಣಿಕರಿಗೆ ತೊಂದರೆ ಮಾಡಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ) ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಹನಲ್ಲವೆಂದು ನ್ಯಾಯಾಲಯ ಹೇಳಿಲ್ಲ. ಆದರೆ ನೇಮಕ ಸಂದರ್ಭದಲ್ಲಿ ನಿಯಮ ಪಾಲನೆಯಾಗಿಲ್ಲ ಎನ್ನುವ ಪ್ರಶ್ನೆ ಎದ್ದಿದೆ. ತಾಂತ್ರಿಕ ಅಂಶಗಳನ್ನು ಉಲ್ಲೇಖಿಸಿದ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದೆ. ಸುಪ್ರೀಂಕೋರ್ಟ್ ಆದೇಶ ಏನೇ ಇದ್ದರೂ ನನ್ನ ನೇಮಕ ಮುಂದುವರಿಸುವುದು, ಸ್ಥಗಿತಗೊಳಿಸುವುದು ಬಿಜೆಪಿ ಸರ್ಕಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.

    ಇದೇ ವೇಳೆ ಅನರ್ಹ ಶಾಸಕರ ಪ್ರಕರಣ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸುಧಾಕರ್ ಅವರು, ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ವಿರುದ್ಧ ನ್ಯಾಯ ಪಡೆಯುವುದು ನಮ್ಮ ಮೂಲಭೂತ ಹಕ್ಕು. ನಮ್ಮ ಅಳಲನ್ನು ಸುಪ್ರೀಂಕೋರ್ಟ್ ಮುಂದೆ ತೋಡಿಕೊಂಡಿದ್ದೇವೆ. ನಮಗೆ ನ್ಯಾಯ ಸಿಗುವ ನಿರೀಕ್ಷೆಯಿದೆ. ಪ್ರಕರಣದ ತೀರ್ಪು ಬಂದ ಬಳಿಕ ರಮೇಶ್ ಕುಮಾರ್ ಅವರ ಬಗ್ಗೆ ಮಾತನಾಡುತ್ತೇನೆ ಎಂದು ಪರೋಕ್ಷವಾಗಿ ಕಿಡಿಕಾರಿದರು.

    ಅನರ್ಹ ಶಾಸಕರಿಗೆ ಮಂತ್ರಿಗಿರಿ ಯಾವಾಗ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅವಧೂತರು ವಿನಯ್ ಗೂರೂಜಿ ಬಳಿ ಕೇಳಿಕೊಂಡು ಬರುತ್ತೇನೆ. ಆಮೇಲೆ ನಿಮಗೆ ಹೇಳುತ್ತೇನೆ ಎಂದು ವ್ಯಂಗ್ಯವಾಡಿದರು.

  • ರಾಜಕೀಯ ವ್ಯವಸ್ಥೆಯಲ್ಲಿ ನಾನು ನನ್ನನ್ನು ಮಾರಿಕೊಂಡಿಲ್ಲ: ಸಾರಾ ಮಹೇಶ್

    ರಾಜಕೀಯ ವ್ಯವಸ್ಥೆಯಲ್ಲಿ ನಾನು ನನ್ನನ್ನು ಮಾರಿಕೊಂಡಿಲ್ಲ: ಸಾರಾ ಮಹೇಶ್

    ಮೈಸೂರು: ಯಾರ ಮೇಲೆ ಆರೋಪ ಇತ್ತು ಅವರು ನಾನಲ್ಲ ಎಂದು ಹೇಳೋಕೆ ಇನ್ನೊಬ್ಬರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಅನರ್ಹ ಶಾಸಕ ವಿಶ್ವನಾಥ್ ವಿರುದ್ಧ ಮಾಜಿ ಸಚಿವ ಸಾ.ರಾ.ಮಹೇಶ್ ವಾಗ್ದಾಳಿ ನಡೆಸಿದರು.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ವ್ಯವಸ್ಥೆಯಲ್ಲಿ ಜನರಿಗೆ ನನ್ನ ಕೈಲಾದಷ್ಟು ಹಣ ಸಹಾಯ ಮಾಡುತ್ತಿರುವುದು ಸತ್ಯ. ಆದರೆ ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ ನಾನು ನನ್ನನ್ನ ಮಾರಿಕೊಂಡಿಲ್ಲ ಎಂದು ವಿಶ್ವನಾಥ್ ಮೇಲೆ ಕಿಡಿಕಾರಿದ್ದಾರೆ. ಇದನ್ನು ಓದಿ: ಹೆಚ್‍ಡಿಡಿ ಕುಟುಂಬದ ಕಣ್ಣೀರಿಗೆ ಸಾರಾ ಮಹೇಶ್ ಕಾರಣ: ಎಚ್. ವಿಶ್ವನಾಥ್

    ನೀವು ಮಾರಿಕೊಂಡು ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಮನಸಾಕ್ಷಿ ಆತ್ಮಗೌರವ ಇದಿಯಾ ನಿಮಗೆ? ಇಷ್ಟು ಅನ್ಯಾಯ ಮಾಡಿ ಮಾತನಾಡುತ್ತಿದ್ದೀರಲ್ಲಾ ಏನು ಅನ್ನಿಸಲ್ವಾ. ನನ್ನನ್ನು ಕರೆದುಕೊಂಡು ಹೋಗಿ ಯಾರ ಹತ್ತಿರ ಮಾತನಾಡಿಸಿದ್ರಿ? ನೀವು ಬಾಂಬೆಯಿಂದ ಕರೆಸಿ ಯಾರನ್ನು ಮಾತನಾಡಿಸಿದ್ರಿ ಗೊತ್ತಿಲ್ವಾ. ನಿಮ್ಮ ಮನೆ ದೇವರ ಬಳಿಗೆ ಕರೆಯಿರಿ, ನೀವು ಏನ್ ಏನ್ ಮಾತನಾಡಿದ್ದೀರಿ ಎಂದು ಎಲ್ಲವನ್ನೂ ಹೇಳುತ್ತೇನೆ ಎಂದು ಸವಾಲು ಹಾಕಿದ್ದಾರೆ.

  • ಕೂಲಿ ಮಾಡೋರು ತೆರಿಗೆ ಕಟ್ತಾರೆ, ದೊಡ್ಡ ಮಂದಿಗೆ ಆಗಲ್ವಾ: ಡಿಕೆಶಿಗೆ ಎಂಟಿಬಿ ನಾಗರಾಜ್ ಟಾಂಗ್

    ಕೂಲಿ ಮಾಡೋರು ತೆರಿಗೆ ಕಟ್ತಾರೆ, ದೊಡ್ಡ ಮಂದಿಗೆ ಆಗಲ್ವಾ: ಡಿಕೆಶಿಗೆ ಎಂಟಿಬಿ ನಾಗರಾಜ್ ಟಾಂಗ್

    – ನನ್ನ ಮೇಲೆ ಮೂರು ಬಾರಿ ಐಟಿ ದಾಳಿ ನಡೆದಿದೆ

    ಬೆಂಗಳೂರು: ಮದ್ಯ ಕುಡಿಯುವವರು, ಕೂಲಿ ಮಾಡುವವರು ತೆರಿಗೆ ಕಟ್ಟುತ್ತಾರೆ. ದೊಡ್ಡ ದೊಡ್ಡ ಮಂದಿಗೆ ತೆರಿಗೆ ಕಟ್ಟುವುದಕ್ಕೆ ಆಗಲ್ವಾ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಡಿ.ಕೆ.ಶಿವಕುಮಾರ್ ಅವರ ಬಂಧನ ವಿಚಾರವಾಗಿ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಮಾತನಾಡಿದ ಅವರು, ನ್ಯಾಯಕ್ಕಿಂತ ಈ ಜಗತ್ತಿನಲ್ಲಿ ಯಾರೂ ದೊಡ್ಡವರಿಲ್ಲ. ದೇಶದ 120 ಕೋಟಿ ಜನಸಂಖ್ಯೆಗೂ ಒಂದೇ ಕಾನೂನು ಇದೆ. ಸರ್ಕಾರಕ್ಕೆ ಸಕಾಲದಲ್ಲಿ ತೆರಿಗೆ ಹಣ ಪಾವತಿಸಬೇಕು. ಸಾರ್ವಜನಿಕರಿಂದ ಸರ್ಕಾರವೇ ಹೊರತು ಸರ್ಕಾರದಿಂದ ಸಾರ್ವಜನಿಕರಲ್ಲ. ಪ್ರಜಾತಂತ್ರದ ವ್ಯವಸ್ಥೆಯಲ್ಲಿ ತೆರಿಗೆ ಹಣದಿಂದ ಅಭಿವೃದ್ಧಿ ಮಾಡಲಾಗುತ್ತದೆ. ಎಷ್ಟೇ ದೊಡ್ಡವರು ಆಗಿದ್ದರೂ ತೆರಿಗೆ ವಂಚನೆ ಮಾಡಬಾರದು ಎಂದು ಹೇಳಿದರು.

    ಆದಾಯ ತೆರಿಗೆ ಅಧಿಕಾರಿಗಳು ನನ್ನ ಮೇಲೂ ಮೂರು ಬಾರಿ ದಾಳಿ ಮಾಡಿದ್ದಾರೆ. ನನ್ನ ಮನೆ ಮೇಲೆ ಐಟಿ ದಾಳಿಯಾದ 20 ದಿನಗಳ ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲೆ ಆಗಿದೆ. ಡಿ.ಕೆ,ಶಿವಕುಮಾರ್ ಅವರಿಂದ ತೆರಿಗೆ ಕಟ್ಟುವುದರಲ್ಲಿ ವ್ಯತ್ಯಾಸ ಆಗಿರಬಹುದು. ಅದಕ್ಕೆ ಅವರು ನ್ಯಾಯಾಲಯಕ್ಕೆ ಹೋಗಿದ್ದಾರೆ. ಅವರಿಗೆ ಅಲ್ಲಿ ನ್ಯಾಯ ಸಿಗಬಹುದು ಎಂದು ತಿಳಿಸಿದರು.

    ನಾವು ಪಾವತಿಸುವ ಹಣದಿಂದ ಸರ್ಕಾರವು ಸೈನಿಕರು, ಸರ್ಕಾರಿ ನೌಕರರಿಗೆ ವೇತನ, ದೇಶದ ರಕ್ಷಣೆ, ಮಕ್ಕಳಿಗೆ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಕ್ಕೆ ಬಳಸಿಕೊಳ್ಳುತ್ತದೆ. ಹೀಗಾಗಿ ಯಾರೂ ತೆರಿಗೆ ವಂಚನೆ ಆಗಬಾರದು. ತೆರಿಗೆ ಪಾವತಿಸಿ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಡಿ.ಕೆ.ಶಿವಕುಮಾರ್ ಅವರ ಬಂಧನ ಖಂಡಿಸಿ ಬುಧವಾರ ನಡೆದ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಎಂಟಿಬಿ ನಾಗರಾಜ್ ಅವರು, ಜಾತಿ ಹೆಸರಿನಲ್ಲಿ ಪ್ರತಿಭಟನೆ ಅಗತ್ಯವಿರಲಿಲ್ಲ. ಡಿ.ಕೆ.ಶಿವಕುಮಾರ್ ಅವರಿಗೆ ಆತ್ಮ ಸ್ಥೈರ್ಯ ತುಂಬಲು ಪ್ರತಿಭಟನೆ ಮಾಡಿದ್ದಾರೆ. ಅದಕ್ಕೆ ನನ್ನ ಆಕ್ಷೇಪಣೆ ಇಲ್ಲ ಎಂದು ತಿಳಿಸಿದರು.

  • ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ, ಅವರಿಗಾಗಿ ಹೋರಾಡುತ್ತೇನೆ: ರಮೇಶ್ ಜಾರಕಿಹೊಳಿ

    ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ, ಅವರಿಗಾಗಿ ಹೋರಾಡುತ್ತೇನೆ: ರಮೇಶ್ ಜಾರಕಿಹೊಳಿ

    -ಇನ್ನೂ 10 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ

    ಬೆಳಗಾವಿ: ನನ್ನ ನಂಬಿ 20 ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅವರ ಪರವಾಗಿ ಕಾನೂನು ಹೋರಾಟ ಮಾಡಲು ನಾನು ದಿಲ್ಲಿಗೆ ಹೋಗಿದ್ದೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

    ಇಂದು ನಡೆದ ಸಮಾವೇಷದಲ್ಲಿ ಮಾತನಾಡಿದ ಅವರು, ನಾನು ಪ್ರವಾಹ ಪಿಡಿತ ಪ್ರದೇಶಗಳಿಗೆ ಹೋಗಿ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತೇನೆ. ಮೈತ್ರಿ ಸರ್ಕಾರದಲ್ಲಿ ಇದ್ದಂತಹ ವ್ಯವಸ್ಥೆ ನೋಡಿ ನನಗೆ ಅಲ್ಲಿ ಇರಲಿಕ್ಕೆ ಮನಸ್ಸು ಆಗಲಿಲ್ಲ. ಗೋಕಾಕ್ ಮತಕ್ಷೇತ್ರಕ್ಕೆ ಮೈತ್ರಿ ಸರ್ಕಾರದಲ್ಲಿ ಸ್ಪಂದನೆ ಸಿಗಲಿಲ್ಲ. ಮೈತ್ರಿ ಸರ್ಕಾರದಲ್ಲಿರಲು ನನಗೆ ಒಂದು ಕ್ಷಣನೂ ಮನಸ್ಸು ಇರಲಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಚಮಚಾಗಿರಿ ಜನರ ಮಾತುಗಳನ್ನು ಕೇಳಿದ್ದಾರೆ. ನನ್ನ ಜೊತೆ ಸದ್ಯ 20 ಶಾಸಕರು ಇದ್ದಾರೆ, ಜೊತೆಗೆ ಕೋರ್ಟ್ ನಲ್ಲಿ ನ್ಯಾಯ ಸಿಕ್ಕ ಮೆಲೆ ನಮ್ಮ ಹೋರಾಟದ ರೂಪುರೇಷಗಳು ಬೇರೆ ಇರುತ್ತೆ ಎಂದು ಹೇಳಿದರು.

    ಇನ್ನೂ 10 ಶಾಸಕರು ನನ್ನ ಜೊತೆ ಸಂಪರ್ಕದಲ್ಲಿ ಇದ್ದಾರೆ. ಇವತ್ತೆ ಚುನಾವಣೆ ಆದರೂ ನಾನು ಗೋಕಾಕ್ ನಲ್ಲಿ ಸ್ಪರ್ಧೆ ಮಾಡಬಹುದು. ಈ ಅಪರೇಷನ್ ಆಗಬೇಕೆಂದರೆ ಸತೀಶ್ ಜಾರಕಿಹೊಳಿ, ಮತ್ತು ಎಂ.ಬಿ.ಪಾಟೀಲ್ ಕಾರಣ. ನಾನು ಲಕ್ಷ್ಮಿ ದೇವರ ಮುಟ್ಟಿ ಹೇಳುತ್ತೇನೆ ಸತೀಶ್ ಮೋಸಗಾರ, ಆತನಿಂದಲೇ ಅಪರೇಷನ್ ನಡೆದಿದೆ. ಲಖನ್ ಜಾರಕಿಹೊಳಿ ಮತ್ತು ನನ್ನ ಮಧ್ಯೆ ಜಗಳ ಹಚ್ಚುವ ಕೆಲಸ ಸತೀಶ್ ಮಾಡುತ್ತಿದ್ದಾನೆ. ಮುಂದಿನ ದಿನದಲ್ಲಿ ಸತೀಶ್‍ಗೆ ಯಮಕನಮರಡಿ ಜನ ಒದ್ದು ಓಡಿಸುತ್ತಾರೆ. ನಮ್ಮ ಕುಟುಂಬದಲ್ಲಿ ಸತೀಶ್ ಸತ್ಯಹರಿಶ್ಚಂದ್ರ ಅಲ್ಲ ಎಂದು ಗುಡುಗಿದರು.

    ಡಿಕೆಶಿ ಕಾನೂನು ಹೋರಾಟ ಮಾಡಿ ಹೊರಬರಲಿ. ಆತ ನನ್ನ ಆತ್ಮೀಯ ಗೆಳೆಯ ಎಂದ ರಮೇಶ್ ಜಾರಕಿಹೊಳಿ, ಗೋಕಾಕ್‍ನಲ್ಲಿ ಏನೇ ಕುತಂತ್ರ ಮಾಡಿದರೂ ಸತೀಶನದ್ದು ನಡೆಯಲ್ಲ. ಕಾನೂನಿನ ಹೋರಾಟದ ಬಳಿಕ ನಾನು ಮುಂದಿನ ರಾಜಕೀಯ ನಿರ್ಧಾರದ ಬಗ್ಗೆ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

  • ಅನರ್ಹ ಶಾಸಕ ಸುಧಾಕರ್‌ರಿಂದ ಕ್ಷೇತ್ರದ ಜನತೆಗೆ ಗಿಫ್ಟ್ ಮೇಲೆ ಗಿಫ್ಟ್

    ಅನರ್ಹ ಶಾಸಕ ಸುಧಾಕರ್‌ರಿಂದ ಕ್ಷೇತ್ರದ ಜನತೆಗೆ ಗಿಫ್ಟ್ ಮೇಲೆ ಗಿಫ್ಟ್

    ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಡಾ.ಸುಧಾಕರ್ ಅವರು ಕ್ಷೇತ್ರದ ಜನತೆಗೆ ಗಿಫ್ಟ್ ಮೇಲೆ ಗಿಫ್ಟ್ ನೀಡುತ್ತಿದ್ದಾರೆ.

    ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಲಿ ಅಧ್ಯಕ್ಷ ಡಾ.ಕೆ.ಸುಧಾಕರ್ ಅವರು ಗೌರಿ ಹಬ್ಬದ ನಿಮಿತ್ತ ಗುರುವಾರವಷ್ಟೇ ಮಹಿಳೆಯರಿಗೆ ಅರಿಶಿಣ, ಕುಂಕುಮ, ಬಳೆ ಸಮೇತ ಸೀರೆ ನೀಡಿದ್ದರು. ಈ ಬೆನ್ನಲ್ಲೇ ಇಂದು ಕ್ಷೇತ್ರದ ಯುವಕರಿಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶನ ಮೂರ್ತಿಗಳನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ: ಅನರ್ಹ ಶಾಸಕ ಸುಧಾಕರಿಂದಲೂ ಮಹಿಳೆಯರಿಗೆ ಸೀರೆ, ಕುಂಕುಮ, ಬಳೆ ವಿತರಣೆ

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳ ಹಾಗೂ ನಗರದಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲು ಮುಂದಾಗಿರುವ ಯುವಕರಿಗೆ ಗಣೇಶ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಸುಧಾಕರ್ ಅವರು ಕಳೆದ 2 ವರ್ಷಗಳಿಂದಲೂ ಮಣ್ಣಿನ ಗಣಪಗಳನ್ನು ಉಡುಗೊರೆಯಾಗಿ ನೀಡುತ್ತಾ ಬಂದಿದ್ದಾರೆ. ಅದರಂತೆ ಈ ಬಾರಿಯೂ ಗಣೇಶನ ಮೂರ್ತಿಗಳನ್ನು ವಿತರಣೆ ಮಾಡಿದ್ದಾರೆ.

    ಈ ವೇಳೆ ಮಾತನಾಡಿದ ಸುಧಾಕರ್, ಪ್ರತಿ ವರ್ಷದಂತೆ ಈ ಬಾರಿಯೂ ಕ್ಷೇತ್ರದ ಯುವಕರಿಗೆ ಪರಿಸರ ಸ್ನೇಹಿ ಗಣೇಶ್ ಮೂರ್ತಿಗಳನ್ನು ಉಡಗೊರೆಯಾಗಿ ನೀಡುತ್ತಿದ್ದೇನೆ. ರಾಜ್ಯದ ಎಲ್ಲಾ ಜನರು ಸಹ ಮಣ್ಣಿನ ಗಣಪನನ್ನೇ ಪ್ರತಿಷ್ಠಾಪನೆ ಮಾಡಿ ಪರಿಸರದ ಜೊತೆಗೆ ನದಿ-ಜಲಮೂಲಗನ್ನ ಉಳಿಸಿಬೇಕು. ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶನ ಮೂರ್ತಿಗಳನ್ನು ಕೂರಿಸಬಾರದರು. ಅಂತಹ ಗಣೇಶ ಮೂರ್ತಿಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಮನವಿ ಮಾಡಿದರು.