Tag: ಅನಾಮದೇಯ ಕರೆ

  • ನಿಮ್ಮ ಮನೆ ಮೇಲೆ ಎಸಿಬಿ ದಾಳಿ ನಡೆಯುತ್ತೆ – ಬೋಪಯ್ಯಗೆ ಕರೆ ಮಾಡಿ ಬೆದರಿಕೆ

    ನಿಮ್ಮ ಮನೆ ಮೇಲೆ ಎಸಿಬಿ ದಾಳಿ ನಡೆಯುತ್ತೆ – ಬೋಪಯ್ಯಗೆ ಕರೆ ಮಾಡಿ ಬೆದರಿಕೆ

    ಮಡಿಕೇರಿ: ನಿಮ್ಮ ಮನೆಯಲ್ಲಿ ನಾಳೆ ಎಸಿಬಿ ದಾಳಿ ನಡೆಯುತ್ತದೆ. ಇದನ್ನು ತಡೆಯಲು ಒಂದು ಕೋಟಿ ರೂ. ನೀಡುವಂತೆ ಅಪರಿಚಿತ ವ್ಯಕ್ತಿಯೋರ್ವನು ವಿರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಅವರಿಗೆ ಕರೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

    ಮಡಿಕೇರಿಯಲ್ಲಿ ಇರುವ ಶಾಸಕ ಕೆ.ಜಿ ಬೋಪಯ್ಯ ಅವರ ನಿವಾಸದಲ್ಲಿ ನಿನ್ನೆ ಸಂಜೆ 6:30ರ ಆಸುಪಾಸಿಗೆ ಕರೆ ಬಂದಿದೆ. ಅಪರಿಚಿತರೊಬ್ಬರು ಕರೆಮಾಡಿ ಎಸಿಬಿ ಕಡೆಯಿಂದ ಕರೆ ಮಾಡುತ್ತಿದ್ದೇವೆ. ತಮ್ಮ ಮೇಲೆ ಎಸಿಬಿ ದಾಳಿ ಮಾಡಲು ಸಜ್ಜಾಗುತ್ತಿದ್ದು, ಈ ಎಸಿಬಿ ದಾಳಿಯನ್ನು ತಡೆಹಿಡಿಯಲು ಒಂದು ಕೋಟಿ ರೂ. ನೀಡಬೇಕೆಂದು ಎಂದು ಕನ್ನಡದಲ್ಲೇ ಅಪರಿಚಿತ ವ್ಯಕ್ತಿ ಶಾಸಕರೊಂದಿಗೆ ಮಾತಾನಾಡಿದ್ದಾನೆ.

    ಹಣ ನೀಡಿದೆ ಇದ್ದರೇ ಎಸಿಬಿ ದಾಳಿ ನಡೆಸುವುದು ಖಚಿತ ಎಂದು ತಿಳಿಸಿದ್ದಾನೆ. ಆಗ ಶಾಸಕ ಬೋಪಯ್ಯ ಮಾತಾನಾಡಿ, ಮನೆಯನ್ನು ಎಸಿಬಿ ದಾಳಿ ನಡೆಸಬಹುದು. ತಾನು ಯಾರಿಗೂ ಹಣ ನೀಡುವುದಿಲ್ಲ ಎಂದು ಖಡಕ್ ಆಗಿ ಹೇಳಿ ಫೋನ್ ಕರೆ ಕಟ್ ಮಾಡಿದ್ದಾರೆ. ದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆಯನ್ನು ಕಿತ್ತೆಸೆಯುತ್ತೇವೆ: ಸಿದ್ದರಾಮಯ್ಯ

    ಆದರೂ ಅಪರಿಚಿತ ವ್ಯಕ್ತಿ ಮತ್ತೆ ಬೇರೆ ಫೋನ್ ಮೂಲಕ ಕರೆ ಮಾಡಿ ಹಣದ ಬಗ್ಗೆ ವಿಚಾರ ಮಾಡಿದ್ದಾನೆ. ಆಗಲೂ ಶಾಸಕ ಬೋಪಯ್ಯ ಹಣ ನೀಡುವುದಿಲ್ಲ. ಎಸಿಬಿ ಅವರು ಬರಲಿ ತೊಂದರೆ ಇಲ್ಲ ಎಂದು ಹೇಳಿ ಫೋನ್ ಕಟ್ ಮಾಡಿದ್ದಾರೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಸಂವಿಧಾನಾತ್ಮಕ ಹಾಗೂ ಜನಪರ: ಬೊಮ್ಮಾಯಿ

    POLICE JEEP

    ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಜಿ. ಬೋಪಯ್ಯ ಇಂದು ಬೆಂಗಳೂರಿನ ಐಜಿ ಹಾಗೂ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಅಪರಿಚಿತ ಮೊಬೈಲ್ ಸಂಖ್ಯೆಯಲ್ಲಿ ಆಂಧ್ರದ ಝಹೀಬ್ ಖಾನ್ ಹೆಸರಿನಲ್ಲಿ ಖರೀದಿಯಾಗಿರುವ ವಿಚಾರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

  • ಅನಾಮಧೇಯ ಕರೆಯಿಂದ ಮುರಿದು ಬಿದ್ದ ಮದುವೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ವರ

    ಅನಾಮಧೇಯ ಕರೆಯಿಂದ ಮುರಿದು ಬಿದ್ದ ಮದುವೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ವರ

    ರಾಮನಗರ: ಅನಾಮಧೇಯ ಫೋನ್ ಕರೆಯಿಂದ ಆರತಕ್ಷತೆಗೂ ಮುನ್ನವೇ ಮದುವೆಯೊಂದು ಮುರಿದು ಬಿದ್ದಿರುವ ಘಟನೆ ರಾಮನಗರದ ಚನ್ನಪಟ್ಟಣದ ತಿಟ್ಟಮಾರನಹಳ್ಳಿಯಲ್ಲಿ ನಡೆದಿದೆ.

    ನಗರದ ಎಲೆಕೇರಿ ಬಡಾವಣೆಯ ಮಧುಶ್ರೀ (ಹೆಸರನ್ನು ಬದಲಾಯಿಸಲಾಗಿದೆ) ಮತ್ತು ಎಲೀಯೂರು ಗ್ರಾಮದ ಬಸವರಾಜುಗೂ ಆರು ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿ ಮದುವೆ ನಿಶ್ಚಯ ಮಾಡಲಾಗಿತ್ತು. ಅದರಂತೆ ಇಂದು ಚನ್ನಪಟ್ಟಣದ ತಿಟ್ಟಮಾರನಹಳ್ಳಿಯ ಚೇತನ ಸಮುದಾಯ ಭವನದಲ್ಲಿ ಮದುವೆ ನಡೆಯಬೇಕಿತ್ತು.

    ಆದರೆ ಸಾಯಂಕಾಲ ಆರತಕ್ಷತೆಗೂ ಮುನ್ನವೇ ವಧುವಿನ ಸಂಬಂಧಿಕರಿಗೆ ಅನಾಮಧೇಯ ಫೋನ್ ಕರೆಯೊಂದು ಬಂದಿದ್ದು, ನಿಮ್ಮ ಮಗಳನ್ನು ಮದುವೆಯಾಗುತ್ತಿರುವ ವರನಿಗೆ ಮೊದಲೇ ಮದುವೆಯಾಗಿದೆ ಮತ್ತು ಮಕ್ಕಳು ಇವೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡ ವಧುವಿನ ಕುಟುಂಬಸ್ಥರು ಆರತಕ್ಷತೆಗೂ ಮುನ್ನವೇ ಮದುವೆಯನ್ನು ನಿಲ್ಲಿಸಿದ್ದಾರೆ. ಅಲ್ಲದೆ ಅದೇ ವಧುವಿಗೆ ಬೇರೆ ಹುಡುಗನ ಜೊತೆ ಮದುವೆ ಮಾಡಲು ತೀರ್ಮಾನಿಸಿದ್ದಾರೆ.

    ಇದರಿಂದ ಗಾಬರಿಗೊಂಡ ವರ ಬಸವರಾಜು ಆರೋಪ ಸಾಬೀತು ಮಾಡುವಂತೆ ಪಟ್ಟುಹಿಡಿದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ. ಈ ವಿಚಾರವಾಗಿ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮಧ್ಯ ರಾತ್ರಿಯವರೆಗೆ ಠಾಣೆಯಲ್ಲಿ ಹೈಡ್ರಾಮ ನಡೆದಿದೆ. ಅಂತಿಮವಾಗಿ ಮದುವೆಗೆ ನಿರಾಕರಿಸಿದ ಹೆಣ್ಣಿನ ಮನೆಯವರು, ಬೇರೆ ವರನೊಂದಿಗೆ ಮದುವೆ ಮಾಡಲು ತೀರ್ಮಾನ ಮಾಡಿದ್ದಾರೆ.