Tag: ಅನಾಮಿಕ

  • Exclusive | ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಒಂದೂವರೆ ಲಕ್ಷ ಸಾಲ ಪಡೆದು ಎಸ್ಕೇಪ್‌ ಆಗಿದ್ದ ಮಾಸ್ಕ್‌ ಮ್ಯಾನ್‌

    Exclusive | ಧರ್ಮಸ್ಥಳ ಪ್ರಕರಣದ‌ ಅನಾಮಿಕನ ಹುಟ್ಟೂರಲ್ಲಿ ʻಪಬ್ಲಿಕ್‌ ಟಿವಿʼ – ಒಂದೂವರೆ ಲಕ್ಷ ಸಾಲ ಪಡೆದು ಎಸ್ಕೇಪ್‌ ಆಗಿದ್ದ ಮಾಸ್ಕ್‌ ಮ್ಯಾನ್‌

    – ಮಂಡ್ಯದ ಈ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೂ ಕಿರಿಕ್‌ ಮಾಡ್ಕೊಂಡಿದ್ದ ಮಾಸ್ಕ್‌ ಮ್ಯಾನ್‌
    – ಚಿಕ್ಕ ವಯಸ್ಸಿನಲ್ಲೇ ಮದ್ವೆ, ಕೆಲಸವಿಲ್ಲದೇ ಉಂಡಾಣಿ ಗುಂಡನಂತಿದ್ದ ದೂರುದಾರ

    ಮಂಡ್ಯ: ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಸ್ಫೋಟಕ ವಿಚಾರಗಳನ್ನು ಬಯಲಿಗೆಳೆಯುತ್ತಿರುವ ನಿಮ್ಮ ʻಪಬ್ಲಿಕ್‌ ಟಿವಿʼ ಬುರುಡೆ ಪ್ರಕರಣದ ಮಾಸ್ಕ್‌ ಮ್ಯಾನ್‌ ಕುರಿತು ಇನ್ನಷ್ಟು ಎಕ್ಸ್‌ಕ್ಲೂಸಿವ್‌ ಮಾಹಿತಿಗಳನ್ನ ಬಯಲಿಗೆಳೆದಿದೆ. ಮಾಸ್ಕ್‌ ಮ್ಯಾನ್‌ನ ಹುಟ್ಟೂರು ಯಾವುದು? ಆತ ಓದಿದ್ದೇನು? ಊರಲ್ಲಿ ಏನು ಕೆಲಸ ಮಾಡಿಕೊಂಡಿದ್ದ? ಎಂಬೆಲ್ಲ ಮಾಹಿತಿಗಳನ್ನ ಬಹಿರಂಗಪಡಿಸಿದೆ.

    ಹೌದು. ಬುರುಡೆ ಪ್ರಕರಣದ ಮಾಸ್ಕ್‌ ಮ್ಯಾನ್‌ (Mask Man) ಮೂಲತಃ ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಗ್ರಾಮದಲ್ಲಿ ಹುಟ್ಟಿ ಬೆಳದವನಂತೆ. 1ನೇ ತರಗತಿಯಿಂದ 3ನೇ ತರಗತಿವರೆಗೆ ಇದೇ ಗ್ರಾಮದಲ್ಲಿ ವಿದ್ಯಾಭ್ಯಾಸ ಕೂಡ ಮಾಡಿಕೊಂಡಿದ್ದ. ಈತನ ತಂದೆ-ತಾಯಿಗೂ ಒಳ್ಳೆಯ ಹೆಸರಿದೆ. 1994ರ ವರೆಗೆ ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮದಲ್ಲಿಲ್ಲೇ ಇದ್ದ. ಇಲ್ಲಿದ್ದಾಗ ಉಂಡಾಣಿ ಗುಂಡನ ರೀತಿ ಇದ್ದ. ಏನು ಕೆಲಸ ಮಾಡದೇ ಬೀದಿ ಬೀದಿ ತಿರುಗುತ್ತಿದ್ದ. ಚಿಕ್ಕ ವಯಸ್ಸಿನಲ್ಲೇ ಮದುವೆಯಾಗಿದ್ದ ಅಂತ ಖುದ್ದು ಅಲ್ಲಿನ ಗ್ರಾಮಸ್ಥರೇ ಪಬ್ಲಿಕ್‌ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ಸರ್ಕಾರಿ ಜಾಗ ಬರೆದುಕೊಡುವಂತೆ ಕೇಳಿದ್ದ
    ಮೊದಲು ಮುಸುಕುದಾರಿ ಅಣ್ಣ ತನ್ಯಾಸಿ ಧರ್ಮಸ್ಥಳಕ್ಕೆ ಹೋಗಿದ್ದ. ಬಳಿಕ ಈ ಅನಾಮಿಕ ಕೂಡ 1994ರಲ್ಲಿ ಧರ್ಮಸ್ಥಳಕ್ಕೆ ಹೋದ. 2014ರಲ್ಲಿ ಇದೇ ಗ್ರಾಮಕ್ಕೆ ಅನಾಮಿಕ ಮೂರನೇ ಹೆಂಡತಿಯ ಜೊತೆ ಗ್ರಾಮಕ್ಕೆ ವಾಪಸ್ಸಾಗಿದ್ದ. ಈ ವೇಳೆ ಒಂದು ವರ್ಷ ಇದೇ ಗ್ರಾಮದಲ್ಲಿ ವಾಸವಿದ್ದ. ಈ ವೇಳೆ ಸರ್ಕಾರಿ ಜಾಗದಲ್ಲಿ ಗ್ರಾ.ಪಂ ನಿಂದ ಮಾಸ್ಕ್‌ ಮ್ಯಾನ್‌ಗೆ ಶೆಡ್‌ ಕೂಡ ಹಾಕಿಕೊಡಲಾಗಿತ್ತು. ಕೆಲ ದಿನಗಳ ನಂತರ ಗ್ರಾಮಸ್ಥರೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಶೆಡ್ ಜಾಗವನ್ನು ನನ್ನ ಹೆಸರಿಗೆ ಬರೆದುಕೊಡಿ ಎಂದು ಗಲಾಟೆ ಕೂಡ ಮಾಡಿಕೊಂಡಿದ್ದ. ಆಗ ಗ್ರಾಮಸ್ಥರೊಂದಿಗೆ ಗಲಾಟೆ ಮಾಡಿಕೊಂಡು ಊರಿಂದ ಹೋರಟುಹೋಗಿದ್ದ. ಕಳೆದ ವರ್ಷದ ಪಿತೃಪಕ್ಷದ ವೇಳೆ ಇದೇ ಗ್ರಾಮಕ್ಕೆ ಮತ್ತೆ ಬಂದಿದ್ದ. ಈಗ ಧರ್ಮಸ್ಥಳದಲ್ಲಿ ಪ್ರತ್ಯಕ್ಷವಾಗಿ ಈ ರೀತಿ ಮಾತನಾಡ್ತಿರೋದು ತಪ್ಪು ಅಂತ ಗ್ರಾಮಸ್ಥರು ಎಳೆಎಳೆಯಾಗಿ ಮಾಸ್ಕ್‌ ಮ್ಯಾನ್‌ ಬಗೆಗಿನ ರಹಸ್ಯಗಳನ್ನ ಬಿಚ್ಚಿಟ್ಟಿದ್ದಾರೆ.

    ಧರ್ಮಸ್ಥಳದ ಬಗ್ಗೆ ಸುಳ್ಳುಗಳನ್ನೇ ಆತ ಹೇಳ್ತಿದ್ದಾನೆ. ದುಡ್ಡಿಗಾಗಿ ಈ ರೀತಿಯ ಕೆಲಸ ಮಾಡ್ತಾ ಇದ್ದಾನೇನೋ ಅನಿಸ್ತಿದೆ ಅಂತ ಅನಾಮಿಕನ ವಿರುದ್ಧ ಗ್ರಾಮಸ್ಥರ ಆಕ್ರೋಶದ ನುಡಿಗಳನ್ನಾಡಿದ್ದಾರೆ. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

    ಗ್ರಾಮದ ಮುಖಂಡನಿಗೆ ಒಂದೂವರೆ ಲಕ್ಷ ಪಂಗನಾಮ
    2014ರಲ್ಲಿ ಗ್ರಾಮಕ್ಕೆ ವಾಪಸ್ಸಾದಾಗ ಹಸು ಸಾಕಬೇಕು ಎಂದಿದ್ದ. ಈ ವೇಳೆ ಬ್ಯಾಂಕ್‌ವೊಂದರಲ್ಲಿ ಗ್ರಾಮದ ಮುಖಂಡರು ಒಂದೂವರೆ ಲಕ್ಷ ಸಾಲ ಕೊಡಿಸಿದ್ದರು. ನಂತರ ಹಸುಗಳನ್ನು ಮಾರಿ ಎಸ್ಕೇಪ್‌ ಆದ. ಸಾಲಕೊಡಿಸಿದವರು ಸಾಲ ಕಟ್ಟುವ ಸ್ಥಿತಿ ಬಂತು. ಕಳೆದ ಒಂದೂವರೆ ವರ್ಷದ ಹಿಂದೆ ಮತ್ತೆ ಗ್ರಾಮದ ಒಬ್ಬರಿಗೆ ಕರೆ ಮಾಡಿ, ಲೋನ್ ತೆಗೆದುಕೊಳ್ಳಲು ಡಾಕ್ಯುಮೆಂಟ್ ಕೇಳಿದ್ದ. ನಂತರ ಡಾಕ್ಯುಮೆಂಟ್ ಕೊಡಲು ಆಗಲ್ಲ ಅಂತ ಗ್ರಾಮಸ್ಥರು ಹೇಳಿದ್ದರು ಎಂದು ಗ್ರಾಮದ ಮುಖಂಡರು ಹೇಳಿದ್ದಾರೆ.

  • ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು: ಮಾಸ್ಕ್‌ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

    – ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಮಂಡ್ಯ ಮೂಲದ ರಾಜು 
    – ಆತ ಹಣಕ್ಕಾಗಿ ಈ ರೀತಿಯ ಆರೋಪ ಮಾಡಿರುವ ಸಾಧ್ಯತೆಯಿದೆ
    – ಈಗ ಏನು ಹೇಳಿದ್ದೇನೋ ಅದನ್ನೇ ನಾನು ಎಸ್‌ಐಟಿಗೆ ತಿಳಿಸಿದ್ದೇನೆ

    ಬೆಂಗಳೂರು: ಅನಾಮಿಕ ವ್ಯಕ್ತಿ ಹಣಕ್ಕೆ ಧರ್ಮಸ್ಥಳ ದೇವಸ್ಥಾನದ ಮೇಲೆ ಆರೋಪ ಮಾಡಿರುವ ಸಾಧ್ಯತೆಯಿದೆ ಎಂದು ಈ ಹಿಂದೆ ದೇವಸ್ಥಾನದಲ್ಲಿ ಕಸ ಗುಡಿಸುತ್ತಿದ್ದ ಮಂಡ್ಯ ಮೂಲದ ರಾಜು ಹೇಳಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ನಾನು ನಾಲ್ಕು ವರ್ಷಗಳ ಕಾಲ ಧರ್ಮಸ್ಥಳದಲ್ಲಿ‌ 10 ವರ್ಷಗಳ ಹಿಂದೆ ಕೆಲಸ ಮಾಡಿದ್ದೇನೆ. ನಮಗೆ ಮಾಹಿತಿ ಕಚೇರಿಯಿಂದ ವಿಷಯ ತಿಳಿಸಲಾಗಿತ್ತು. ಆಗ ನಾವು ಹೆಣಗಳನ್ನು ಎತ್ತಿ ದಡಕ್ಕೆ ತರುತ್ತಿದ್ದೆವು. ನಂತರ ಅದನ್ನು ಅಂಬುಲೆನ್ಸ್‌ ಮೂಲಕ ಬೆಳ್ತಂಗಡಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಸಿದರು.

    ನೂರಾರು, ಸಾವಿರಾರು ಹೆಣ ಹೂತಿದ್ದೇನೆ ಎನ್ನುವುದು ಸುಳ್ಳು. ಶವ ಹೂತಿದ್ದರೆ ಮೂಳೆಗಳು ಸಿಗಬೇಕಿತ್ತು. ಜೆಸಿಬಿ ತಂದರೂ ಮೂಳೆ ಸಿಕ್ಕಿಲ್ಲ. ಕೆಲಸ ಕೊಟ್ಟ ಧಣಿಗಳ ಮೇಲೆ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಇದು ಬಹಳ ತಪ್ಪು ಎಂದು ಹೇಳಿದರು. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್

     
    ಪಬ್ಲಿಕ್‌ ಟಿವಿಗೆ ರಾಜು ತಿಳಿಸಿದ್ದೇನು?
    ಮೊದಲು ಇಲ್ಲಿ ನನ್ನ ಅತ್ತೆ, ಮಾವ ಇಲ್ಲಿ ಸಚ್ಛತಾ ಕೆಲಸ ಮಾಡುತ್ತಿದ್ದರು. ನಂತರ ಅವರಿಗೆ ಹುಷಾರಿಲ್ಲದ ಕಾರಣ ನಾನು ಹೋಗಿದ್ದೆ. ಈ ಸಂದರ್ಭದಲ್ಲಿ ನಮ್ಮ ಕುಟುಂಬ ಮತ್ತು ಮಾಸ್ಕ್‌ ಮ್ಯಾನ್‌ ಕುಟುಂಬ ಹತ್ತಿರ ಹತ್ತಿರ ನೆಲೆಸಿದ್ದೆವು.

    ನಾನು ದೇವಸ್ಥಾನ, ನೇತ್ರಾವತಿ ಸ್ನಾನಘಟ್ಟ, ಬಾಹುಬಲಿ ಬೆಟ್ಟದಲ್ಲಿ ಕೆಲಸ ಮಾಡಿದ್ದೇನೆ. ಮೂರು ತಿಂಗಳಿಗೊಮ್ಮೆ ಕೆಲಸದ ಜಾಗ ಬದಲಾವಣೆ ಆಗುತ್ತಿತ್ತು. ಧಣಿಗಳು ಯಾವತ್ತೂ ಆ ಕೆಲಸ ಮಾಡು ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ಎದುರು ಸಿಕ್ಕಿದಾಗ ನಾವು ನಮಸ್ಕಾರ ಮಾಡುತ್ತಿದ್ದೆವು.

    ಮಾಹಿತಿ ಕಚೇರಿಯಿಂದ ಬರುತ್ತಿದ್ದ ಸೂಚನೆಯ ಮೇರೆಗೆ ಕೆಲಸ ಮಾಡುತ್ತಿದ್ದೆವು. ಮಕ್ಕಳು ನಾಪತ್ತೆಯಾಗಿದ್ದರೆ ಮೈಕ್‌ ಮೂಲಕ ಪ್ರಕಟಣೆ ಹೊರಡಿಸಲಾಗುತ್ತಿತ್ತು. ಮಾಹಿತಿ ಕಚೇರಿ ಮತ್ತು ನೇತ್ರಾವತಿ ಬಳಿ ಪ್ರಕಟಣೆಯಾಗುತ್ತಿತ್ತು. ಮಕ್ಕಳು ಸಿಕ್ಕಿದರೆ ಮಾಹಿತಿ ಕಚೇರಿಗೆ ಬಿಡುತ್ತಿದ್ದರು. ನಂತರ ಪೋಷಕರ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಮಕ್ಕಳನ್ನು ಅವರಿಗೆ ಹಸ್ತಾಂತರ ಮಾಡಲಾಗುತ್ತಿತ್ತು.

    ನಾನು ನಾಲ್ಕು ವರ್ಷದ ಕೆಲಸ ಅವಧಿಯಲ್ಲ ನೇತ್ರಾವತಿ ಬಳಿ ಎರಡು ಶವ ಸಿಕ್ಕಿತ್ತು. ಸಿಕ್ಕಿದ ಕೂಡಲೇ ಹೆಣವನ್ನು ಹೂಳುತ್ತಿರಲಿಲ್ಲ. ಶವ ಎತ್ತಿದ ನಂತರ ಅಂಬುಲೆನ್ಸ್‌ ಬರುತ್ತಿತ್ತು. ವೈದ್ಯರು, ಪೊಲೀಸರು ಬರುತ್ತಿದ್ದರು. ನಂತರ ಆ ದೇಹವನ್ನು ಬೆಳ್ತಂಗಡಿಗೆ ಕಳುಹಿಸಲಾಗುತ್ತಿತ್ತು. ನಾನು ಇದ್ದಾಗ ಪುರುಷ ಮತ್ತು ಮಹಿಳೆಯ ಶವ ಸಿಕ್ಕಿತ್ತು. ಅದನ್ನು ಬೆಳ್ತಂಗಡಿಗೆ ತೆಗೆದುಕೊಂಡು ಹೋಗಲಾಗಿತ್ತು. ಸಾವಿರಾರು ಶವ ಸಿಕ್ಕಿದೆ ಎನ್ನುವುದು ಸುಳ್ಳು.

     

    ಯಾರು ನೇತ್ರಾವತಿ ಬಳಿ ಕೆಲಸ ಮಾಡುತ್ತಿದ್ದರೋ ಅವರು ಶವವನ್ನು ಎತ್ತುತ್ತಿದ್ದರು. ಶವ ಎತ್ತಿದ ದಿವಸ ನಮ್ಮ ಕೆಲಸಕ್ಕೆ ರಜೆ ಇರುತ್ತಿತ್ತು. ಒಟ್ಟು ನಾಲ್ಕು ಕುಟುಂಬಗಳು ಸ್ವಚ್ಛತಾ ಕೆಲಸ ಮಾಡುತ್ತಿದ್ದವು. ಮಾಹಿತಿ ಕಚೇರಿ ಬಿಟ್ಟರೆ ಬೇರೆ ಯಾರೂ ನಮಗೆ ಆ ಕೆಲಸ ಮಾಡು, ಈ ಕೆಲಸ ಮಾಡು ಎಂದು ಹೇಳುತ್ತಿರಲಿಲ್ಲ. ನಮಗೆ ಧಣಿಗಳು ಕೈಯಾರೆ ಸಂಬಳ ಕೊಡುತ್ತಿರಲಿಲ್ಲ.

    ನಮ್ಮ ಜೊತೆ ಕೆಲಸ ಮಾಡುವಾಗ ಮಾಸ್ಕ್‌ಮ್ಯಾನ್‌ ಚೆನ್ನಾಗಿಯೇ ಇದ್ದ. ನಾವು ಬರುವ ಮೊದಲೇ ಅವರ ಕುಟುಂಬ ಅಲ್ಲಿ ನೆಲೆಸಿತ್ತು. ನಾನು ಕೆಲಸ ಬಿಟ್ಟು ಬಂದ ನಂತರವೂ ಆತ ಅಲ್ಲಿ ಕೆಲಸ ಮಾಡುತ್ತಿದ್ದ. ಆತ ಶವದಿಂದ ಚಿನ್ನ ಕದಿಯುತ್ತಿದ್ದ ವಿಚಾರ ನನಗೆ ಗೊತ್ತಿಲ್ಲ. ನಾನು ಬಿಟ್ಟ ಬಂದ ನಂತರ ಆತ ಯಾಕೆ ಕೆಲಸ ಬಿಟ್ಟ ಅನ್ನೋದು ಗೊತ್ತಿಲ್ಲ.

    ಎಸ್‌ಐಟಿಯವರು ನನ್ನನ್ನು ವಿಚಾರಣೆ ನಡೆಸಿದ್ದರು. ನಾನು ಟಿವಿಗೆ ಈಗ ಏನು ಹೇಳುತ್ತಿದ್ದೇನೋ ಅದನ್ನೇ ಹೇಳಿದ್ದೇನೆ. ಮುಂದೆ ಕೋರ್ಟ್‌ನವರು ಏನಾದರೂ ಹೇಳಬೇಕಾದರೂ ಇದನ್ನೇ ಹೇಳುತ್ತೇನೆ. ನಮಗೆ ಉದ್ಯೋಗ, ಅನ್ನ ಕೊಟ್ಟ ಧಣಿಯ ವಿರುದ್ಧ ಈ ರೀತಿ ಸುಳ್ಳು ಹೇಳುವುದು ಸರಿಯಲ್ಲ.

  • ಭಾರತ ಗುಪ್ತಚರ ಇಲಾಖೆ ಸೇರಿಕೊಂಡ ಸನ್ನಿ ಲಿಯೋನ್

    ಭಾರತ ಗುಪ್ತಚರ ಇಲಾಖೆ ಸೇರಿಕೊಂಡ ಸನ್ನಿ ಲಿಯೋನ್

    ಬಾಲಿವುಡ್ ನಟಿ ಸನ್ನಿ ಲಿಯೋನ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒಂದೊಂದು ಹಾಡಿಗೆ, ಅತಿಥಿ ಪಾತ್ರದಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಈ ನೀಲಿತಾರೆ, ಇದೀಗ ಅಚ್ಚರಿ ಎನ್ನುವಂತಹ ಸುದ್ದಿಯನ್ನು ಕೊಟ್ಟಿದ್ದಾರೆ. ಭಾರತ ಗುಪ್ತಚರ ಇಲಾಖೆ ರಾ ಏಜೆಂಟ್ ಆಗಿ ಅಭಿಮಾನಿಗಳ ಮುಂದೆ ನಿಲ್ಲಲಿದ್ದಾರೆ. ಇದನ್ನೂ ಓದಿ : ಸ್ಯಾಂಡಲ್ ವುಡ್ ಸಿಂಡ್ರೆಲಾ ಹೊಸ ನ್ಯೂಸ್ ಕೊಡ್ತಾರಾ?

    ಹಾಗಂತ ಅವರು ಭಾರತ ಗುಪ್ತಚರ ಇಲಾಖೆಗೆ ಸೇರಿಕೊಂಡರು ಅಂತ ಕನ್ ಫ್ಯೂಸ್ ಆಗಬೇಡಿ, ಅಂಥದ್ದೊಂದು ಪಾತ್ರವನ್ನು ಸನ್ನಿ, ವೆಬ್ ಸಿರೀಸ್ ನಲ್ಲಿ ನಟಿಸುತ್ತಿದ್ದಾರೆ. ಈ ಮೂಲಕ ಅವರು ಹೊಸ ಜಗತ್ತಿಗೆ ಕಾಲಿಡುತ್ತಿದ್ದಾರೆ. ಇದನ್ನೂ ಓದಿ :  ಜಗ್ಗೇಶ್ ಗೆ ಕೈ ಕೊಟ್ಟ ಮಠದ ಗುರುಪ್ರಸಾದ್

    ಈಗಾಗಲೇ ಅನಾಮಿಕ ಹೆಸರಿನಲ್ಲಿ ಈ ವೆಬ್ ಸಿರೀಸ್ ಶೂಟಿಂಗ್ ಶುರುವಾಗಿದ್ದು, ಅಲ್ಲಿ ಸನ್ನಿಯದ್ದು ರಾ ಏಜೆಂಟ್ ಪಾತ್ರ. ಹಲವು ಕೇಸ್ ಗಳನ್ನು ಬೆನ್ನಹತ್ತಿ ರೋಚಕ ವಿಷಯಗಳನ್ನು ಜನರ ಮುಂದೆ ಇಡುವ ಪ್ರಯತ್ನ ಈ ಸಿರೀಸ್ ಮಾಡಲಿದೆಯಂತೆ. ಇದನ್ನೂ ಓದಿ : ಹಿರಣ್ಯ ಸಿನಿಮಾದ ಸ್ಪೆಷಲ್ ಪಾತ್ರದಲ್ಲಿ ಬಿಗ್ ಬಾಸ್ ದಿವ್ಯಾ

    ಅನಾಮಿಕ ವೆಬ್ ಸಿರೀಸ್ ನಲ್ಲಿ ಇವರ ಪಾತ್ರದ ಹೆಸರು ಏಜೆಂಟ್ ‘ಎಂ’ ಎಂದು. ಈಗಾಗಲೇ ಇದರ ಟ್ರೇಲರ್ ಕೂಡ ರಿಲೀಸ್ ಆಗಿದ್ದು, ಸನ್ನಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಇಂತಹ ಸಾಕಷ್ಟು ಪಾತ್ರಗಳಲ್ಲಿ ಈ ತಾರೆ ಅಭಿನಯಿಸಲಿ ಎಂದು ಹಾರೈಸಿದ್ದಾರೆ.