Tag: ಅನಿತಾ ಭಟ್

  • ‘ಸಮುದ್ರಂ’ ಚಿತ್ರದ ವಿವಾದ : ನಟಿ ಅನಿತಾ ಭಟ್ ಪ್ರತಿಕ್ರಿಯೆ ಏನು?

    ‘ಸಮುದ್ರಂ’ ಚಿತ್ರದ ವಿವಾದ : ನಟಿ ಅನಿತಾ ಭಟ್ ಪ್ರತಿಕ್ರಿಯೆ ಏನು?

    ಮ್ಮ ನಿರ್ಮಾಣದ ‘ಸಮುದ್ರಂ’ (Samudram) ಸಿನಿಮಾದ ಹಾರ್ಡ್ ಡಿಸ್ಕ್ ನೀಡಿಲ್ಲವೆಂದು ಮತ್ತು ಹಾಡ್ಸ್ ಡಿಸ್ಕ್ ಕೊಡುವಂತೆ ಕೇಳಿದರೆ ಚಿತ್ರದ ಸಿನಿಮಾಟೋಗ್ರಾಫರ್ ರಿಶಿಕೇಷ್ (Rishikesh) ಎನ್ನುವವರು ಜೀವ ಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪ್ರದೇಶದ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈ ಕುರಿತಂತೆ ಸಿನಿಮಾದ ನಾಯಕಿ ಮತ್ತು ಚಿತ್ರಕ್ಕೆ ಸಹಯೋಗ ನೀಡಿರುವ ಅನಿತಾ ಭಟ್ (Anita Bhatt) ಪ್ರತಿಕ್ರಿಯೆ ನೀಡಿದ್ದಾರೆ.

    ‘ಈ ಸಿನಿಮಾ ಶುರು ಮಾಡಿದ್ದು ನಾವೇ. ನಾನೇ ಈ ಸಿನಿಮಾವನ್ನು ಮೊದಲು ನಿರ್ಮಾಣ ಮಾಡಿದ್ದು. ಆನಂತರ ಹಣಕಾಸಿನ ತೊಂದರೆ ಆದ ಕಾರಣಕ್ಕಾಗಿ ನಿರ್ದೇಶಕ ರಾಘವ ಮಹರ್ಷಿ ಅವರು ರಾಜಲಕ್ಷ್ಮಿ ಅವರನ್ನು ಕರೆತಂದರು. ಎಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೆವು. ಆದರೆ, ರಾಜಲಕ್ಷ್ಮಿ (Rajalakshmi) ನಿರ್ಮಾಪಕರು ತಾವೊಬ್ಬರೇ ನಿರ್ಮಾಣ ಮಾಡುತ್ತೇನೆ ಎಂದು ಹೇಳಿದರು. ಅದಕ್ಕೂ ಒಪ್ಪಿ, ನಾವು ಈವರೆಗೂ ಮಾಡಿರುವ ಖರ್ಚನ್ನು ಕೊಡುವಂತೆ ಕೇಳಿದಾಗ ಒಪ್ಪಿಕೊಂಡರು. ಈವರೆಗೂ ಅವರು ಹಣ ಕೊಟ್ಟಿಲ್ಲ’ ಎನ್ನುತ್ತಾರೆ ಅನಿತಾ ಭಟ್.

    ಮುಂದುವರೆದು ಮಾತನಾಡಿದ ಅನಿತಾ, ‘ಟೆಕ್ನಿಷನ್ ಗೆ ಕೊಡಬೇಕಾದ ಹಣ ಇನ್ನೂ ಬಾಕಿ ಉಳಿಸಿಕೊಂಡಿದ್ದಾರೆ. ಸಿನಿಮಾಟೋಗ್ರಾಫರ್ ರಿಶಿಕೇಷ ಅವರಿಗೂ ದುಡ್ಡು ಕೊಡಬೇಕು. ಹಾಗಾಗಿ ಇಬ್ಬರ ಮಧ್ಯ ಮನಸ್ತಾಪವಾಗಿದೆ. ಈ ದೂರು ಕೊಡುವುದು ಇವತ್ತಿನದ್ದೇನೂ ಅಲ್ಲ. ಈ ಹಿಂದೆ ಎರಡ್ಮೂರು ಬಾರಿ ಹೀಗೆ ಮಾಡಿ ತೊಂದರೆ ಕೊಟ್ಟಿದ್ದಾರೆ. ಇದರಲ್ಲಿ ರಿಶಿಕೇಷ್ ಅವರದ್ದು ಯಾವುದೇ ತಪ್ಪಿಲ್ಲ’ ಅಂತಾರೆ ಅನಿತಾ ಭಟ್.

    ‘ರಾಜಲಕ್ಷ್ಮಿ ಅವರ ವಿರುದ್ಧ ನಾವೂ ಕೂಡ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೆವು. ಸಿನಿಮಾ ರಿಲೀಸ್ ಆದ ನಂತರ ಹಣ ಕೊಡುವುದಾಗಿ ಅವರು ಹೇಳಿದರು. ಆದರೆ, ಈಗ ಅವರ ವರ್ತನೆಯೇ ಬೇರೆಯಾಗಿದೆ. ಆ ಸಿನಿಮಾಗಾಗಿ ಈಗಲೂ ಎಲ್ಲರೂ ಕೆಲಸ ಮಾಡುತ್ತಾರೆ. ಆದರೆ, ಕೊಡಬೇಕಾದ ಹಣವನ್ನು ಕೊಡಬೇಕು’ ಎನ್ನುವುದು ಅನಿತಾ ಭಟ್ ಮಾತು.

    ‘ಸಿನಿಮಾಗಳಿಗೆ ಸುಪ್ರೀಂ ಅಂದರೆ ಅದು ನಿರ್ದೇಶಕರು. ಸಿನಿಮಾಟೋಗ್ರಾಫರ್ ಹೇಗೆ ಹಾರ್ಡ್ ಡಿಸ್ಕ್ ಇಟ್ಟುಕೊಳ್ಳಲು ಸಾಧ್ಯ? ಹಣಕಾಸಿನ ವಿಷಯದಲ್ಲಿ ಮನಸ್ತಾಪ ಆಗಿರುವುದು ನಿಜ. ಅದನ್ನು ಹೇಳದೇ ಸುಖಾಸುಮ್ಮನೆ ಯಾರಿಗೂ ತೊಂದರೆ ಕೊಡಬಾರದು. ಆ ಸಿನಿಮಾದಲ್ಲಿ ನಾನ ನಟಿಸಿದ್ದೇನೆ. ನಿರ್ಮಾಪಕಿಯೂ ಆಗಿದ್ದೇನೆ. ಆ ಸಿನಿಮಾದ ಬಿಡುಗಡೆಗೆ ಬೇಕಾದ ಎಲ್ಲ ಸಹಾಯವನ್ನು ಈಗಲೂ ನಾನು ಮಾಡಲು ಸಿದ್ದಳಿದ್ದೇನೆ. ಆದರೆ, ತಂಡವನ್ನು ಒಡೆಯುವುದು ಸರಿಯಾದದ್ದು ಅಲ್ಲ’ ಅಂತಾರೆ ಅನಿತಾ ಭಟ್.ಇದನ್ನೂ ಓದಿ:ವಿಜಯ್ ದೇವರಕೊಂಡ ಬಳಿ ‘ಸಮಂತಾ ಎಲ್ಲಿ’ ಎಂದು ಪ್ರಶ್ನಿಸಿದ ನಾಗಾರ್ಜುನ

    ಏನಿದು ವಿವಾದ?

    ಅನಿತಾ ಭಟ್ ಮತ್ತು ಶಿವಧ್ವಜ ಕಾಂಬಿನೇಷನ್ ‘ಸಮುದ್ರಂ’ ಸಿನಿಮಾದ ಸಿನಿಮಾಟೋಗ್ರಾಫರ್ ರಿಶಿಕೇಷ್ ವಿರುದ್ಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾಟೋಗ್ರಫರ್ ರಿಶಿಕೇಷ್ ಸಮುದ್ರಂ ಚಿತ್ರದ ಹಾರ್ಡ್ ಡಿಸ್ಕ್ ಕೊಡದೆ ನಿರ್ಮಾಪಕರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಚಿತ್ರತಂಡ ದೂರು ನೀಡಿದೆ.

    ರಾಜಲಕ್ಷ್ಮಿ ಸಿನಿ ಕ್ರಿಯೇಷನ್ ನಿರ್ಮಾಣ  ಮತ್ತು ಅನಿತಾ ಭಟ್ ಕ್ರಿಯೇಷನ್ ಹಾಗೂ ಡಾಟ್ ಟಾಕೀಸ್ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಚಿತ್ರದ ಸಂಗೀತ, ಡಬ್ಬಿಂಗ್, ರೀ ರೆಕಾರ್ಡಿಂಗ್, ಎಡಿಟಿಂಗ್ ಸೇರಿ ಡಿಐ ಜವಾಬ್ದಾರಿಯನ್ನು ರಿಶಿಕೇಷ್ ವಹಿಸಿಕೊಂಡಿದ್ದರಂತೆ. ಇದಕ್ಕೆ ಹಂತಹಂತವಾಗಿ 19 ಲಕ್ಷ ಹಣವನ್ನೂ ನಿರ್ಮಾಪಕರಿಂದ ಪಡೆದುಕೊಂಡಿದ್ದರಂತೆ ರಿಶಿಕೇಷ್. ಇಲ್ಲಿಯವರೆಗೂ ಶೂಟ್ ಮಾಡಿರುವ ಹಾರ್ಡ್ ಡಿಸ್ಕ್ ಕೊಡದೆ ಪರಾರಿ’ ಆಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ನಿರ್ಮಾಪಕರು ಕರೆ ಮಾಡಿ ಕೇಳಿದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ಆರೋಪ ಮಾಡಿದ್ದಾರೆ. ಈ ಸಂಬಂಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಮುದ್ರಂ’ ಚಿತ್ರದ ಛಾಯಾಗ್ರಾಹಕನ ಮೇಲೆ ದೂರು

    ‘ಸಮುದ್ರಂ’ ಚಿತ್ರದ ಛಾಯಾಗ್ರಾಹಕನ ಮೇಲೆ ದೂರು

    ನಿತಾ ಭಟ್ ಮತ್ತು ಶಿವಧ್ವಜ ಕಾಂಬಿನೇಷನ್ ‘ಸಮುದ್ರಂ’ (Samudram) ಸಿನಿಮಾದ ಸಿನಿಮಾಟೋಗ್ರಾಫರ್ ರಿಶಿಕೇಷ್ (Rishikesh) ವಿರುದ್ಧ ಬೆಂಗಳೂರಿನ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿನಿಮಾಟೋಗ್ರಫರ್ ರಿಶಿಕೇಷ್ ಸಮುದ್ರಂ ಚಿತ್ರದ ಹಾರ್ಡ್ ಡಿಸ್ಕ್ ಕೊಡದೆ ನಿರ್ಮಾಪಕರಿಗೆ ಜೀವಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಚಿತ್ರತಂಡ ದೂರು ನೀಡಿದೆ.

    ರಾಜಲಕ್ಷ್ಮಿ ಸಿನಿ ಕ್ರಿಯೇಷನ್ ನಿರ್ಮಾಣ  ಮತ್ತು ಅನಿತಾ ಭಟ್ (Anita Bhatt) ಕ್ರಿಯೇಷನ್ ಹಾಗೂ ಡಾಟ್ ಟಾಕೀಸ್ ಸಹಯೋಗದಲ್ಲಿ ಈ ಸಿನಿಮಾ ನಿರ್ಮಾಣವಾಗಿದೆ. ಚಿತ್ರದ ಸಂಗೀತ, ಡಬ್ಬಿಂಗ್, ರೀ ರೆಕಾರ್ಡಿಂಗ್, ಎಡಿಟಿಂಗ್ ಸೇರಿ ಡಿಐ ಜವಾಬ್ದಾರಿಯನ್ನು ರಿಶಿಕೇಷ್ ವಹಿಸಿಕೊಂಡಿದ್ದರಂತೆ. ಇದಕ್ಕೆ ಹಂತಹಂತವಾಗಿ 19 ಲಕ್ಷ ಹಣವನ್ನೂ ನಿರ್ಮಾಪಕರಿಂದ ಪಡೆದುಕೊಂಡಿದ್ದರಂತೆ ರಿಶಿಕೇಷ್. ಇಲ್ಲಿಯವರೆಗೂ ಶೂಟ್ ಮಾಡಿರುವ ಹಾರ್ಡ್ ಡಿಸ್ಕ್ ಕೊಡದೆ ಪರಾರಿ’ ಆಗಿದ್ದಾರೆ ಎಂದು ದೂರಿನಲ್ಲಿ (Complainant) ಉಲ್ಲೇಖಿಸಲಾಗಿದೆ.

     

    ನಿರ್ಮಾಪಕರು ಕರೆ ಮಾಡಿ ಕೇಳಿದರೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆ ಹಾಕಿದ್ದಾರೆ ಎಂದು ನಿರ್ಮಾಪಕರು ಆರೋಪ ಮಾಡಿದ್ದಾರೆ. ಈ ಸಂಬಂಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಅನಿತಾ ಭಟ್ ಸಹೋದರ ನಿಧನ

    ನಟಿ ಅನಿತಾ ಭಟ್ ಸಹೋದರ ನಿಧನ

    ಸ್ಯಾಂಡಲ್‌ವುಡ್ (Sandalwood) ನಟಿ ಅನಿತಾ ಭಟ್ (Anita Bhat) ಸಹೋದರ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಈ ಕುರಿತು ನಟಿಯೇ ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ಸಹೋದರನ ಸಾವಿನ ನೋವಿನ ಬಗ್ಗೆ ನಟಿ ಭಾವುಕರಾಗಿದ್ದಾರೆ. ಈ ಪೋಸ್ಟ್ ಸದ್ಯ ಸದ್ದು ಮಾಡ್ತಿದೆ. ಇದನ್ನೂ ಓದಿ: ಬಾಯ್‌ಫ್ರೆಂಡ್ ಜೊತೆಗಿನ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ದಿವ್ಯಾ ಸುರೇಶ್

    ಸೈಕೋ, ಕನ್ನೇರಿ, ಬೆಂಗಳೂರು 69 ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅನಿತಾ ಭಟ್ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ನಟಿ ಟ್ವೀಟ್ ಮಾಡಿದ್ದಾರೆ.

    ನಿನ್ನೆ ನನ್ನ ಹೃದಯ ತುಂಡಾಗಿದೆ. ನನ್ನ ಸಹೋದರ ಹೃದಯ ಸ್ತಂಭನದಿಂದ (Cardiac Arrest) ನಮ್ಮನ್ನು ಅಗಲಿದ್ದಾರೆ. ನಾವು ಅನುಭವಿಸುತ್ತಿರುವ ನೋವು ಯಾವುದೇ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ನಾನು ಒಪ್ಪಿಕೊಳ್ಳಬೇಕಾದ ಕಹಿ ಸತ್ಯವೆಂದರೆ ಅವನು ಎಂದಿಗೂ ಹಿಂತಿರುಗುವುದಿಲ್ಲ. ಆತನಿಗೆ ಸದ್ಗತಿ ಸಿಗುವಂತೆ ಅನುಗ್ರಹಿಸಿ. ಈಗ ನಿಮ್ಮ ಆಶೀರ್ವಾದ ಬೇಕು ಎಂದು ನಟಿ ಬರೆದುಕೊಂಡಿದ್ದಾರೆ. ನಟಿಯ ಪೋಸ್ಟ್‌ಗೆ ಅಭಿಮಾನಿಗಳು, ಆಪ್ತರು, ಚಿತ್ರರಂಗದ ಸ್ನೇಹಿತರು ಕಂಬನಿ ಮಿಡಿದಿದ್ದಾರೆ.

  • ಪ್ರಭುತ್ವದ ಮೂಲಕ ಹೊಸ ಕಥೆ ಹೇಳಲಿದ್ದಾರೆ ಚೇತನ್ ಚಂದ್ರ

    ಪ್ರಭುತ್ವದ ಮೂಲಕ ಹೊಸ ಕಥೆ ಹೇಳಲಿದ್ದಾರೆ ಚೇತನ್ ಚಂದ್ರ

    ತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳೇ ಹೆಚ್ಚು ಗೆಲುತ್ತಿದೆ. ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಉತ್ತಮ ಕಥಾಹಂದರ ಹೊಂದಿರುವ ‘ಪ್ರಭುತ್ವ’ (Prabhutva) ಚಿತ್ರದ ಟ್ರೈಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚೇತನ್ ಚಂದ್ರ (Chetan Chandra) ನಾಯಕರಾಗಿ ನಟಿಸಿರುವ ಈ ಚಿತ್ರದ ಟ್ರೈಲರನ್ನು ರಾಜಕೀಯ ಮುಖಂಡರಾದ ರವೀಂದ್ರ ಅನಾವರಣ ಮಾಡಿದರು. ಈ ಚಿತ್ರದ ಟ್ರೈಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

    ಪ್ರತಿಯೊಬ್ಬ ಪ್ರಜೆ ಈ ಚಿತ್ರವನ್ನು ನೋಡಬೇಕು. ಮತದಾನ ಅಮೂಲ್ಯವಾದ್ದದ್ದು. ಹಾಗಾಗಿ ಮತದಾನವನ್ನು ಮಾರಾಟ ಮಾಡಿಕೊಳ್ಳಬಾರದು. ಈ ರೀತಿ ಮತದಾನದ ಮಹತ್ವ ಸಾರುವ ಈ ಸಿನಿಮಾಗೆ ನಾನೇ ಕಥೆ ಬರೆದಿದ್ದೇನೆ. ನನ್ನ ಮಗ ರವಿರಾಜ್ ಎಸ್ ಕುಮಾರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಮೇಘಡಹಳ್ಳಿ ಶಿವಕುಮಾರ್. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ಕೂಡ ತೆರೆಗೆ ಬರಲಿದೆ. ಚುನಾವಣೆ ಮುಂಚೆಯೇ ಚಿತ್ರವನ್ನು ಬಿಡುಗಡೆ ‌ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಮಾಪಕ ರವಿರಾಜ್ ಎಸ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ `ಸತ್ಯ’ ಸೀರಿಯಲ್ ನಟ ಸೀರುಂಡೆ ರಘು

    ಚಿತ್ರದ ಕಥಾಹಂದರದ ಬಗ್ಗೆ ಪರಿಚಯ ನೀಡಿದ್ದ, ನಿರ್ದೇಶಕ ಆರ್ ರಂಗನಾಥ್, ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ತಮ್ಮ ತಂಡಕ್ಕೆ ಧನ್ಯವಾದ ಹೇಳಿದರು. ಇದು ನನ್ನ ಹನ್ನೆರಡನೇ ಸಿನಿಮಾ. ಮೇಘಡಹಳ್ಳಿ ಶಿವಕುಮಾರ್ ಅವರು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಒಳ್ಳೆಯ ಕಥೆ ಬರೆದಿದ್ದಾರೆ. ರಂಗನಾಥ್ ಅಷ್ಟೇ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಹಾಗೂ ಎಲ್ಲಾ ಕಲಾವಿದರ ಅಭಿನಯ ಅದ್ಭುತವಾಗಿದೆ ಎಂದರು ನಾಯಕ ಚೇತನ್ ಚಂದ್ರ.

    ಅನು ಎಂಬ ಪಾತ್ರದಲ್ಲಿ ನಟಿಸಿರುವುದಾಗಿ ನಾಯಕಿ ಪಾವನ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸಿರುವ ಅರವಿಂದ್ ರಾವ್, ಹರೀಶ್ ರಾಯ್, ಆದಿ ಲೋಕೇಶ್, ವಿಜಯ್ ಚೆಂಡೂರ್, ವೀಣಾ ಸುಂದರ್, ಅನಿತಾ‌ ಭಟ್ ಮುಂತಾದ ಕಲಾವಿದರು ಹಾಗೂ ಸಂಭಾಷಣೆ ಬರೆದಿರುವ ವಿನಯ್ ‘ಪ್ರಭುತ್ವ’  ಚಿತ್ರದ ಕುರಿತು ‌ಮಾತನಾಡಿದರು.  ಎಮಿಲ್ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ಚೇತನ್ ಚಂದ್ರ, ಪಾವನ, ನಾಸರ್, ಶರತ್ ಲೋಹಿತಾಶ್ವ, ಆದಿ ಲೋಕೇಶ್, ಅರವಿಂದ್ ರಾವ್, ಹರೀಶ್ ರಾಯ್, ವಿಜಯ್ ಚೆಂಡೂರ್, ವೀಣಾ ಸುಂದರ್, ರಾಜೇಶ್ ನಟರಂಗ, ಅನಿತಾ ಭಟ್ ಮುಂತಾದವರಿದ್ದಾರೆ.

  • ತಮ್ಮನ್ನು ಪೋರ್ನ್ ನಟಿ ಎಂದವರ ವಿರುದ್ಧ ಗರಂ ಆದ ಅನಿತಾ ಭಟ್

    ತಮ್ಮನ್ನು ಪೋರ್ನ್ ನಟಿ ಎಂದವರ ವಿರುದ್ಧ ಗರಂ ಆದ ಅನಿತಾ ಭಟ್

    ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಅನಿತಾ ಭಟ್ (Anita Bhatt), ಈ ವಿಷಯವಾಗಿ ಸಾಕಷ್ಟು ಕಿರಿಕಿರಿಯನ್ನು ಅವರು ಎದುರಿಸಿದ್ದಾರೆ. ಅನಿತಾ ಭಟ್ ಹಾಕಿರುವ ಕಾಸ್ಟ್ಯೂಮ್, ಮಾಡಿರುವ ಪಾತ್ರಗಳನ್ನು ಕೆಲವರು ಹುಡುಕಿ ಹುಡುಕಿ ಇವರನ್ನು ರೇಗಿಸುತ್ತಾರೆ. ಅನಿತಾ ಅವುಗಳಿಗೆ ತನ್ನದೇ ಆದ ರೀತಿಯಲ್ಲಿ ಉತ್ತರ ಕೊಡುತ್ತಾರೆ. ಅದರಲ್ಲೂ ಎಡ ಮತ್ತು ಬಲಗಳ ಚರ್ಚೆ ಇವರ ಖಾತೆಯಲ್ಲಿ ಅನೇಕ ಬಾರಿ ಆಗಿದೆ. ಈ ಬಾರಿ ಬೇರೆ ಕಾರಣಕ್ಕಾಗಿ ಅನಿತಾ ಗರಂ ಆಗಿದ್ದಾರೆ.

    ಕೆಲವು ಖಾತೆಗಳಿಂದ ತಮಗೆ ನಿರಂತರವಾಗಿ ಅವಹೇಳನಕಾರಿ ಮಸೇಜ್ ಗಳು ಬರುತ್ತಿವೆ ಎಂದು ಸ್ವತಃ ಅನಿತಾ ಬರೆದುಕೊಂಡಿದ್ದಾರೆ. ಅದರಲ್ಲಿ ಒಬ್ಬ ತಮ್ಮನ್ನು ಅಶ್ಲೀಲ (Porn) ಚಿತ್ರಗಳ ನಟಿ (Actress) ಎಂದು ಕರೆದಿರುವ ಕುರಿತು ಹೇಳಿಕೊಂಡಿದ್ದಾರೆ. ಯಾವ ಅಶ್ಲೀಲ ಚಿತ್ರದಲ್ಲಿ ನಟಿಸಿದ್ದೇನೆ ಎಂದು ಬಹಿರಂಗ ಪಡಿಸಿ ಎಂದು ಅನಿತಾ ಸವಾಲು ಹಾಕಿದ್ದಾರೆ. ಇಂತಹ ಬೆದರಿಕೆಗೆ ಜಗ್ಗುವುದಿಲ್ಲ ಎಂದೂ ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: 150 ಕೋಟಿ ಮೌಲ್ಯದ ಹೊಸ ಮನೆಯನ್ನು ಪೋಷಕರಿಗೆ ಗಿಫ್ಟ್ ನೀಡಿದ ಧನುಷ್

    ತಮ್ಮ ಬಗ್ಗೆ ಕೆಟ್ಟದ್ದಾಗಿ ಕಾಮೆಂಟ್ ಮಾಡುವವರು ಹೆಸರಿನ ಸಮೇತ ಟ್ವಿಟರ್ ಖಾತೆಯಿಂದಲೇ ಅನಿತಾ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದಕ್ಕೆ ಪೊಲೀಸರು ಕೂಡ ಉತ್ತರಿಸಿದ್ದು, ಹತ್ತಿರದ ಪೊಲೀಸ್ ಠಾಣೆಗೆ ದೂರು ಕೊಡುವಂತೆ ಸಲಹೆ ನೀಡಿದ್ದಾರೆ. ಲಿಖಿತ ದೂರು ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ದಾಖಲಿಸಿದ ಅನಿತಾ ಭಟ್

    ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ದಾಖಲಿಸಿದ ಅನಿತಾ ಭಟ್

    ಬೆಂಗಳೂರು: ಟ್ರೋಲಿಗರ ವಿರುದ್ಧವಾಗಿ ಸ್ಯಾಂಡಲ್‍ವುಡ್ ನಟಿ ಅನಿತಾ ಭಟ್ ಸೈಬರ್ ಕ್ರೈಂ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ.

    ನಟಿ ಮಾಡುವ ಟ್ವೀಟ್‍ಗೆ ಬ್ಯಾಡ್ ಕಮೆಂಟ್ ಮತ್ತು ಟ್ರೋಲ್ ಮಾಡುವ ಹಲವರ ವಿರುದ್ಧವಾಗಿ ಸೈಬರ್ ಕ್ರೈಂಗೆ ನಟಿ ದೂರು ನೀಡಿದ್ದಾರೆ. ಟ್ರೋಲರ್ಸ್ ಸೆಲೆಬ್ರಿಟಿಗಳನ್ನು ಟಾರ್ಗೆಟ್ ಮಾಡುತ್ತಾರೆ. ಅದರಲ್ಲೂ ನಟಿಯರು ಅಂದ್ರೆ ಟಾರ್ಗೆಟ್ ಮಾಡುತ್ತಾರೆ. ಈ ಬಗ್ಗೆ ಅನಿತಾ ಭಟ್ ಯಲಹಂಕ ಸೈಬರ್ ಠಾಣೆಗೆ ದೂರು ನೀಡಿದ್ದಾರೆ ಈ ಕುರಿತಾಗಿ ಕಂಪ್ಲೆಂಟ್ ಕಾಫಿಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

    ಏನಿದೆ?
    ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್‌ನಲ್ಲಿ anitha bhat ಎಂಬ ಖಾತೆಯನ್ನು ಹೊಂದಿದ್ದು, ಸದರಿ ಖಾತೆಯಿಂದ ಹಲವು ಟ್ವೀಟ್ ಗಳನ್ನು ಮಾಡಲಾಗಿದೆ. ಟ್ವೀಟ್‍ಗಳಿಗೆ ಯಾರೋ ಅಪರಿಚಿತ ಅಸಾಮಿ ಕೆಟ್ಟದಾಗಿ ಟ್ವೀಟ್ ಮಾಡುತ್ತಿದ್ದು, ಈ ರೀತಿಯಾಗಿ ಮಾಡುತ್ತಿರುವ ಸದರ ಆಸಾಮಿಯನ್ನು ಪತ್ತೆ ಮಾಡಿ ಠಾಣೆಗೆ ಕರೆಯಿಸಿ ಸೂಕ್ತ ತಿಳುವಳಿಕೆಯನ್ನು ನೀಡಿ ಇನ್ನೊಮಮ್ಮೆ ಹೀಗೆ ಮಾಡದ ಹಾಗೆ ಬಂದೋಬಸ್ತ್ ಮಾಡಿಕೊಡಬೇಕೆಂದು ದೂರಿನಲ್ಲಿದೆ. ಇದನ್ನೂ ಓದಿ: ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಈ ಹಿಂದೆ ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಶಿರಸಿ ಮಾರಿಕಾಂಬಾ ದೇವಿ ಸೇವೆಗೆ ದುಬಾರಿ ಶುಲ್ಕ-ಭಕ್ತರ ಆಕ್ರೋಶ

    ನಟಿ ಮುಂದುವರಿದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಘೋಲ್ ಮೀನು ಹಿಡಿದು ಒಂದೇ ದಿನದಲ್ಲಿ ಕೋಟ್ಯಧಿಪತಿಯಾದ ಮೀನುಗಾರ

    ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದರು. ಇದೀಗ ಟ್ರೋಲ್ ಮಾಡುವ ಮತ್ತು ಕೆಟ್ಟದಾಗಿ ಕಮೆಂಟ್ ಮಾಡುವರ ವಿರುದ್ಧ ದೂರು ದಾಖಲಿಸಿದ್ದಾರೆ.

  • ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಗೋಡ್ಸೆಯ ದೇಶಪ್ರೇಮಕ್ಕೆ ಜೈ, ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ: ಅನಿತಾ ಭಟ್

    ಬೆಂಗಳೂರು: ನಾಥೂರಾಮ್ ಗೋಡ್ಸೆ ಮತ್ತು ಬ್ರಾಹ್ಮಣರ ಬಗ್ಗೆ ಚಂದನವನದ ನಟಿ ಅನಿತಾ ಭಟ್ ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿದ್ದು, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಬಿಗ್‍ಬಾಸ್ ಕನ್ನಡ ಸ್ಪರ್ಧಿ ಅನಿತಾ ಭಟ್ ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ಬ್ರಾಹ್ಮಣ್ಯ ಮತ್ತು ಗಾಂಧೀಜಿಯನ್ನು ಕೊಂದ ಗೋಡ್ಸೆಗೆ ಜೈ ಎಂದು ಟ್ವೀಟ್ ಮಾಡಿದ್ದಾರೆ. ಈಗ ಈ ವಿಚಾರ ಪರ, ವಿರೋಧ ಚರ್ಚೆ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?
    ಅನಿತಾ ಭಟ್ ಟ್ವೀಟ್‍ನಲ್ಲಿ, ಗಾಂಧಿಯನ್ನು ಕೊಂದು ಎಂತ ದುರಂತಕ್ಕೆ ಸಿಕ್ಕಿ ಹಾಕಿಕೊಳ್ಳಬಹುದು ಎಂದು ಗೊತ್ತಿದ್ರೂ, ಅದನ್ನ ಮಾಡಿದ ಗೋಡ್ಸೆಯ ದೇಶಪ್ರೇಮಕ್ಕೆ ಜೈ. ದೇಶಕ್ಕಿಂತ ಏನೂ ದೊಡ್ಡದಲ್ಲ. ಇನ್ನೆಷ್ಟು ಚೂರಾಗ್ತಾ ಇತ್ತೋ ನಮ್ಮ ಭಾರತ ಎಂದು ಪೋಸ್ಟ್ ಮಾಡಿದ್ದು, ಅದಕ್ಕೆ ವೀಕ್ಷಕರು ಗೋಡ್ಸೆ ಜಿಂದಾಬಾದ್ ಎಂದು ಕಾಮೆಂಟ್ ಮಾಡಿದ್ದಾರೆ.

    ನಟಿ ಮುಂದುವರೆದು, ಸ್ವಾತಂತ್ರ್ಯ ಹೋರಾಟದಲ್ಲಿ ಪಾಲುಗೊಂಡಿದ್ದ ಗೋಡ್ಸೆ ಅವರು ದೇಶಭಕ್ತನೇ. ಅವರನ್ನ ಭಯೋತ್ಪಾದಕ ಅಂತ ಕರೆಯೋದು ನಿಮ್ಮಗಳ ಅಜ್ಞಾನ. ಯಾರೋ ಒಬ್ಬರಿಂದ ದೇಶಕ್ಕೆ ಸ್ವಂತಂತ್ರ ಬಂದಿಲ್ಲ. ಕೋಟಿಗಟ್ಟಲೆ ವೀರರು ನಮ್ಮ ದೇಶಕ್ಕಾಗಿ ಬಲಿದಾನ ಮಾಡಿದಾರೆ ಅನ್ನೋದು ಅರಿತುಕೊಂಡರೆ ಸಾಕು ಎಂದು ಅನಿತಾ ಭಟ್ ಹೇಳಿದ್ದಾರೆ. ಇದನ್ನೂ ಓದಿ: ಅಫ್ಘಾನ್ ನಿರಾಶ್ರಿತರಿಗೆ ಭಾರತದ ಆಶ್ರಯ – ಏನಿದು ವೀಸಾ? ವಿಶೇಷತೆ ಏನು? 

    ಮುಂದೆ ನೆಗೆಟಿವ್ ಕಾಮೆಂಟ್ ಬರುತ್ತಿರುವುದನ್ನು ಗಮನಿಸಿದ ಅವರು, ನನ್ನ ಟ್ವಿಟ್ಟರ್, ಪೋಸ್ಟ್ ಮಾಡುವುದು ನನ್ನ ಆಯ್ಕೆ. ನನ್ನ ಅಭಿಪ್ರಾಯವನ್ನು ನಿಮ್ಮ ಕೆಟ್ಟ ಕಾಮೆಂಟ್‍ಗಳು ಬದಲಾಯಿಸುವುದಿಲ್ಲ. ಇಷ್ಟಕ್ಕೆಲ್ಲ ಹೆದರೋ ಹಾಗಿದ್ರೆ ಭೂಮಿಯಿಂದಾನೆ ಹೋಗಿ ಬಿಡ್ತಿದ್ದೆ ಇಷ್ಟೊತ್ತಿಗೆ. ಎಷ್ಟು ಬೇಕಾದ್ರೂ ಗಂಟಲು ಹರ್ಕೊಳಿ ಹೋಗಿ ಎಂದು ಗರಂ ಆಗಿ ಉತ್ತರಿಸಿದ್ದಾರೆ.

    ಬ್ರಾಹ್ಮಣರು ಮೂಗು ಮುಚ್ಚಿಕೊಂಡು ಕೂತಿದ್ದಾರೆ
    ಸೋಶಿಯಲ್ ಮೀಡಿಯಾದಲ್ಲಿ ಬ್ರಾಹ್ಮಣ್ಯದ ಕುರಿತು ಮಾತನಾಡಿದ ಅವರು, ಇವರುಗಳು ತಮ್ಮ ಪದವಿ ಮುಂದೆ ಜಾತಿ ಹೆಸರು ಹಾಕಿದ ಹಾಗೆ ನಾನೇನಾದ್ರೂ ಬ್ರಾಹ್ಮಣ ನಟಿ ಅಂತ ಹಾಕಿದ್ದೇನಾ? ಜಾತಿ ಹೆಸರು ಹೇಳಿ ಕೆಲಸ ಗಿಟ್ಟಿಸೋ ಗತಿ ಇನ್ನು ನನಗೆ ಬಂದಿಲ್ಲ. ದೇವಸ್ಥಾನದ ಪ್ರಸಾದ ತಿಂದು ಬದುಕಿದ್ರೂ ಸರಿ. ಅದಕ್ಕೆ ಬ್ರಾಹ್ಮಣ್ಯ ಅನ್ನೋ ಹೆಸರು ಯಾಕ್ರೀ? ಬೇರೆ ಜಾತಿಯವರೂ ಮಾಡ್ತಾರೆ ಅಂದ್ರೆ ಅವರವರ ಜಾತಿ ಹೆಸರು ಹಾಕಿ. ಬಡಪಾಯಿ ಬ್ರಾಹ್ಮಣರು ಮೂಗು ಮುಚ್ಕೊಂಡು ಕೂತಿದ್ದಾರೆ, ಅದಕ್ಕೆ ಬೇಕಾಬಿಟ್ಟಿ ಮಾತಾಡ್ತಾರೆ. ಅಷ್ಟೇ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

    ಅದಕ್ಕೆ ಒಬ್ಬ ನೆಟ್ಟಿಗ, ತಾವೇ ಸರ್ವಶ್ರೇಷ್ಠರು ಅನ್ನೋ ವಾದ, ಮಡಿವಂತಿಕೆ ಆಚರಣೆಗಳು ಇದೆಯಲ್ಲ ಅದೇ ಬ್ರಾಹ್ಮಣ್ಯ. ಅದಕ್ಕೆ ಎಲ್ಲರ ವಿರೋಧ ಅಷ್ಟೇ. ಅದು ಬಿಟ್ಟರೆ ಎಲ್ಲರೂ ಒಂದೇ ಯಾರು ಸಹ ಮೇಲಿಲ್ಲ ಕೀಳಿಲ್ಲ. ಎಂದು ಕಾಮೆಂಟ್ ಮಾಡಿದ್ದಾರೆ.

    ನನ್ನ ಅಮ್ಮ ಎಷ್ಟೋ ವರ್ಷಗಳ ಹಿಂದೇನೆ ಜಾತಿ ಪದ್ದತಿಯನ್ನ ದೂರ ಇಟ್ಟಿದ್ದಾರೆ. ಒಂದು ಲಂಬಾಣಿ ಹುಡುಗಿ ನಮ್ಮ ಮನೆಯಲ್ಲಿ ಓದೋಕೆ ಅಂತ 4 ವರ್ಷ ಇದ್ದಳು. ನಮ್ಮನೇ ದೇವರ ಪೂಜೆ ಕೂಡ ಮಾಡಿದ್ದಾಳೆ. ನನಗೆ ಇದರಲ್ಲಿ ವಿಶೇಷತೆ ಏನು ಕಂಡಿಲ್ಲ. ಸಂದರ್ಭ ಬಂದಿದ್ದರಿಂದ ಹೇಳಿದೆ ಅಷ್ಟೇ ಎಂದು ಅದಕ್ಕೆ ಉತ್ತರಿಸಿದ್ದಾರೆ.

    ಅನಿತಾ ಭಟ್, 2008ರಲ್ಲಿ ಬಿಡುಗಡೆ ಆದ ‘ಸೈಕೊ’ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟದ್ದಾರೆ. ನಂತರ ‘ಡರ್ಟಿ ಪಿಕ್ಚರ್; ಸಿಲ್ಕ್ ಸಖತ್ ಹಾಟ್ ಮಗಾ’, ‘ದೊಡ್ಮನೆ ಹುಡ್ಗಾ’, ‘ಟಗರು'(ಡಾಲಿ ಗರ್ಲ್‍ಫ್ರೆಂಡ್ ಪಾತ್ರ), ‘ಹೊಸ ಕ್ಲೈಮ್ಯಾಕ್ಸ್’, ‘ಡಿಎನ್‍ಎ’, ‘ಕನ್ನೇರಿ’, ‘ಕಲಿವೀರ’, ‘ಬೆಂಗಳೂರು-69’, ‘ಬಳೆಪೇಟೆ’, ‘ಜೂಟಾಟ’, ತೆಲುಗಿನ ‘ಕೃಷ್ಣ ಲಂಕಾ’ ಸಿನಿಮಾ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ‘ಅ’ ಕಾರಕ್ಕೂ, ‘ಹ’ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಅನಿತಾ ಭಟ್

    ‘ಅ’ ಕಾರಕ್ಕೂ, ‘ಹ’ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಅನಿತಾ ಭಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹಾಗೂ ಬಿಗ್‍ಬಾಸ್ ಸೀಸನ್-2 ರ ಸ್ಪರ್ಧಿ ಅನಿತಾ ಭಟ್‍ರವರು ಕನ್ನಡವನ್ನು ತಪ್ಪಾಗಿ ಬಳಸಿದ ನೆಟ್ಟಿಗರೊಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಕೊರೊನಾ ಲಾಕ್‍ಡೌನ್ ಸಂಕಷ್ಟದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದ ಟ್ವೀಟ್‍ವೊಂದಕ್ಕೆ ಅನಿತಾ ಭಟ್‍ರವರು ಹೌದು, ನಾನು ಕೂಡ ಓದಿದ್ದು ಸರ್ಕಾರಿ ಶಾಲೆಯಲ್ಲಿಯೇ ಎಂದು ಪ್ರತಿಕ್ರಿಯಿಸಿದ್ದರು.

    ಇದಕ್ಕೆ ನೆಟ್ಟಿಗರೊಬ್ಬರು ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ. ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ, ನನ್ನ ಮಕ್ಕಳನ್ನು ಸಹ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಿದ್ದೇನೆ. ಈ ಮಾತನ್ನು ಹೇಳುವ ಹೆದೆಗಾರಿಕೆ ಇರಬೇಕಲ್ಲವೇ? ನನ್ನ ರಕ್ತದ, ನನ್ನಿಂದ ಜನ್ಮ ಪಡೆದವರ ರಕ್ತದ ಕಣ ಕಣವೂ ಕನ್ನಡವೇ ಎಂದು ಹೇಳಿದ್ದಾರೆ.

    ಇದರಿಂದ ರೊಚ್ಚಿಗೆದ್ದ ಅನಿತಾ ಭಟ್‍ರವರು, ಹೆದಗಾರಿಕೆ ಅಲ್ಲ. ಎದೆಗಾರಿಕೆ, ಕನ್ನಡ ಶಾಲೆಯಲ್ಲಿ ಓದಿದರೆ ಸಾಕಾಗೋದಿಲ್ಲ. ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ, ಆಮೇಲೆ ಬೇರೆಯವರನ್ನ ಆಡಿಕೊಳ್ಳಬಹುದಂತೆ ನಮಸ್ಕಾರ.

    ಅ ಕಾರಕ್ಕೆ ಅ ಕಾರವನ್ನೇ ಉಪಯೋಗಿಸೋದು ಗ್ರಾಂಥಿಕ ಕನ್ನಡ ಅಲ್ಲ. ಯಾವುದೇ ಪ್ರದೇಶಕ್ಕೆ ಹೋದರು ಸ್ಲಾಗ್ ಹಾಗೂ ಅಸೆಟ್ ಬದಲಾಗುತ್ತೆಯೇ ಹೊರತು ವ್ಯಾಕರಣವಾಗಲಿ, ಲಿಪಿಯಾಗಲಿ, ಅಕ್ಷರಗಳಾಗಲಿ ಬದಲಾಗುವುದಿಲ್ಲ. ಇದರ ಬಗ್ಗೆ ಸ್ಪೇಸ್ ಮಾಡೋಣ ಎಂದು ಮರು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ : ಬಿಗ್‍ಬಾಸ್ ಮನೆಗೆ ಪಿಕ್‍ನಿಕ್‍ಗೆ ಬಂದಂತೆ ವರ್ತನೆ- ರೊಚ್ಚಿಗೆದ್ದ ನಿಧಿ

  • ಬಳೆಪೇಟೆ ಟೀಸರ್ ಸೌಂಡ್ ಬಲು ಜೋರು

    ಬಳೆಪೇಟೆ ಟೀಸರ್ ಸೌಂಡ್ ಬಲು ಜೋರು

    ‘ಬಳೆಪೇಟೆ’ ಚಿತ್ರದ ಟೀಸರ್ ಬಿಡುಗಡೆಯಾಗಿ ಸ್ಯಾಂಡಲ್​ವುಡ್​​ ಅಂಗಳದಲ್ಲಿ ಸಖತ್ ಟಾಕ್ ಕ್ರಿಯೇಟ್ ಮಾಡಿದೆ. ಟೀಸರ್ ತುಣುಕು ಇಂಟ್ರಸ್ಟಿಂಗ್ ಆಗಿ ಮೂಡಿ ಬಂದಿದ್ದು ಚಿತ್ರತಂಡದ ಕುಸುರಿ ಕೆಲಸ ಸಿನಿ ಪ್ರಿಯರ ಮನಸೆಳೆದಿದೆ.

    ಕನ್ನಡದ ಹೊಸ ಮುಖಗಳು, ಕ್ರಿಯಾಶೀಲ ಪ್ರತಿಭೆಗಳು ಸೇರಿ ತುಂಬಾ ಕಾಳಜಿ, ಪ್ರೀತಿಯಿಂದ ತೆಗೆದಿರುವ ಸಿನಿಮಾ ‘ಬಳೆಪೇಟೆ’. ‘ಬಳೆಪೇಟೆ’ ಬೆಂಗಳೂರಿನಲ್ಲಿ ಕೇಳಿ ಬರುವ ಏರಿಯಾವೊಂದರ ಹೆಸರು. ಇದೀಗ ಈ ಹೆಸರು ಸಿನಿಮಾ ಟೈಟಲ್​ ಆಗಿ ಬಿಡುಗಡೆಗೂ ಸಜ್ಜಾಗಿದೆ.

    ಟೀಸರ್ ಝಲಕ್ ಮೂಲಕ ಎಲ್ಲರ ಗಮನ ತಮ್ಮ ಸಿನಿಮಾದತ್ತ ಸೆಳೆದಿರುವ ಈ ಚಿತ್ರದ ಸೂತ್ರದಾರ ರಿಷಿಕೇಶ್. ಇದು ರಿಷಿಕೇಶ್ ಚೊಚ್ಚಲ ಚಿತ್ರ ಎನ್ನುವ ಮಾತೇ ಬಾರದಂತೆ ಟೀಸರ್ ತುಣುಕು ಮೂಡಿಬಂದಿದೆ. ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಮಾತ್ರವಲ್ಲದೆ ಕ್ಯಾಮೆರಾ ನಿರ್ದೇಶಕನಾಗಿ, ಎಡಿಟರ್, ಕಲರಿಸ್ಟ್ ಆಗಿಯೂ ರಿಷಿಕೇಶ್ ಬಹುಮುಖ ಪ್ರತಿಭೆಯನ್ನ ಇಲ್ಲಿ ಪ್ರದರ್ಶಿಸಿದ್ದಾರೆ.

    ಚಿತ್ರತಂಡ ಮೊದಲೇ ಹೇಳಿದಂತೆ ಇದೊಂದು ಸಿನಿಮಾವಲ್ಲ ಅದಕ್ಕಿಂತ ಹೆಚ್ಚು ಎನ್ನುವ ಮಾತಿನಂತೆ ಟೀಸರ್ ಮೂಡಿಬಂದಿದ್ದು ಟೀಸರ್ ನೋಡಿದವರು ವಾವ್ ಎನ್ನುತ್ತಿದ್ದಾರೆ. ಕರೊನಾ ಲಾಕ್​ಡೌನ್ ಸಮಯದಲ್ಲೂ ಜಗ್ಗದೇ ಬಳೆಪೇಟೆಯಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮಾಡಿ ಸೈ ಎನಿಸಿಕೊಂಡು ಸಿನಿಮಾ ಪ್ರೀತಿ ಮೆರೆದಿದೆ ಚಿತ್ರತಂಡ.

    ಸೈಕೋ ಸಿನಿಮಾ ಖ್ಯಾತಿಯ ಗ್ಲಾಮರ್ ಗೊಂಬೆ ಅನಿತಾ ಭಟ್, ಯುವ ನಟ ಪ್ರಮೋದ್ ಬೋಪಣ್ಣ ಬಳೆಪೇಟೆ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಮಯೂರ್ ಪಟೇಲ್, ಉಮೇಶ್ ಬಣಕಾರ್, ಅಭಿಷೇಕ್ ಮಠದ್, ಚೇತನ್, ಲೋಕೇಶ್ ರೇವಣ್ಣ, ಅಪೂರ್ವ, ಉಗ್ರಂ ರವಿ ಸೇರಿದಂತೆ ಹಲವು ನುರಿತ ಕಲಾವಿದರ ಬಳಗ ‘ಬಳೆಪೇಟೆ’ ಅಂಗಳದಲ್ಲಿ ಬಣ್ಣಹಚ್ಚಿದ್ದಾರೆ.

    ಆರ್ ವಿ ಎಸ್ ಪ್ರೊಡಕ್ಷನ್ಸ್ ಬ್ಯಾನರ್ ಮುಖಾಂತರ ಬನಾನ ಶಿವರಾಂ ಬಳೆಪೇಟೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಉತ್ತಮ್, ಲೋಹಿತ್ ಸಂಗೀತ ನಿರ್ದೇಶನ ಬಳೆಪೇಟೆ ಚಿತ್ರಕ್ಕಿದೆ.

     

  • ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್

    ಬಟ್ಟೆಯಿಂದ ವ್ಯಕ್ತಿ ಅಳೆಯೋ ಸಮಾಜ ನಮ್ಮದು ಎಂದ ಅನಿತಾ ಭಟ್

    ಬೆಂಗಳೂರು: ಕನ್ನಡ, ತೆಲುಗು ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿರುವ ಹಾಟ್ ಬೆಡಗಿ ಅನಿತಾ ಭಟ್ ಬಟ್ಟೆ ಬಗ್ಗೆ ಚರ್ಚೆಗೆ ಇಳಿದಿದ್ದು, ನೆಟ್ಟಿಗರ ಪ್ರಶ್ನೆಗೆ ತಕ್ಕ ಉತ್ತರ ನೀಡಿದ್ದಾರೆ. ಅದೇನಪ್ಪಾ ಬಟ್ಟೆ ವಿಚಾರ ಅಂತೀರಾ ಈ ವಿಡಿಯೋ ನೀಡಿ.

    ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿರುವ ಹಾಟ್ ಬೆಡಗಿ ಅನಿತಾ ಭಟ್, ತಮ್ಮ ಹಾಟ್ ಫೋಟೋಗಳಿಂದಲೇ ಕಿಕ್ಕೇರಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಫೋಟೋ ವಿವಾದಕ್ಕೆ ಕಾರಣವಾಗಿದ್ದು, ಈ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ವಿಶೇಷವೆಂದರೆ ಸ್ವತಃ ಅನಿತಾ ಭಟ್ ನೆಟ್ಟಿಗರ ಪ್ರಶ್ನೆಗಳಿಗೆ ಅಷ್ಟೇ ಸಮರ್ಥವಾಗಿ ಉತ್ತರಿಸುತ್ತಿದ್ದಾರೆ. ಹೀಗಾಗಿ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

    ಇಷ್ಟೆಲ್ಲ ವಿವಾದಕ್ಕೆ ಕಾರಣವಾಗಿದ್ದು, ಮಳೆ ಬಂದ ಸಂದರ್ಭದಲ್ಲಿ ಅನಿತಾ ಹಾಕಿದ ಒಂದು ಫೋಟೋ. ಹೌದು ಇತ್ತೀಚೆಗೆ ಮಳೆ ಬಂದ ಸಂದರ್ಭದಲ್ಲಿ ಅನಿತಾ ಅವರು ರೇನ್ ಎಂದು ಬರೆದು ಬೋಲ್ಡ್ ಫೋಟೋ ಹಾಕಿದ್ದರು. ಇದಕ್ಕೆ ನೆಟ್ಟಿಗರು ಹಲವು ರೀತಿಯ ಕಮೆಂಟ್‍ಗಳನ್ನು ಮಾಡಿದ್ದರು. ಇದನ್ನು ಗಮನಿಸಿದ ಅನಿತಾ ಭಟ್, ಕಮೆಂಟ್ ಮಾಡುವುದು ಮುಗೀತಾ? ಇಲ್ಲಾ ಇನ್ನೂ ಚರ್ಚೆ ಮುಂದುವರಿಸ್ತೀರಾ ಮಳೆ ಬಗ್ಗೆ ಎಂದು ಪ್ರಶ್ನಿಸಿದ್ದರು.

    ಇದಾದ ಬಳಿಕ ಲೆಗ್ಸ್ ಫಾರ್ ದಿ ಡೇ ಎಂದು ಬರೆದು ಕಾಲಿನ ಸೌಂದರ್ಯ ತೋರಿಸುವ ಎರಡು ಫೋಟೋಗಳನ್ನು ಹಾಕಿದ್ದರು. ಅಲ್ಲದೆ ಹೆದ್ರಕೊಂಡು ಬದುಕೋದಾದ್ರೆ ಭೂಮಿಯಿಂದಾನೇ ಹೋಗಿ ಬಿಡ್ತಿದ್ದೆ. ಬಟ್ಟೆಯಿಂದ ವ್ಯಕ್ತಿಯನ್ನು ಅಳೆಯೋ ಸಮಾಜ ನಮ್ಮದು. ಹ್ಯಾವ್ ಎ ಗ್ರೇಟ್ ಡೇ ಎಂದು ಪೋಸ್ಟ್ ಮಾಡಿದ್ದರು. ಇದಕ್ಕೆ ನೆಟ್ಟಿಗನೊಬ್ಬ ಕಮೆಂಟ್ ಮಾಡಿದ್ದು, ನಮ್ಮ ಸಮಾಜ ಬಟ್ಟೆಯಿಂದ ವ್ಯಕ್ತಿ ಅಳೆದೇ ಹಿಂಗಾಗಿದ್ದೀರ ನೀವು. ಇನ್ನು ಅಳೆಯದೆ, ಟ್ರೋಲ್ ಮಾಡ್ದೆ ಇದ್ದಿದ್ರೆ ಹೆಂಗ್ ಇರ್ತಿದ್ರೋ ನೀವು ದೇವ್ರೇ ಬಲ್ಲ. ಈ ನಿಮ್ಮ ಟ್ವೀಟ್‍ನಲ್ಲಿ ಅದೆಂಥಾ ನೀತಿ ಪಾಠ ಇದೆಯೋ ಸಮಾಜಕ್ಕೆ ನಾ ಕಾಣೆ ಎಂದು ಕಮೆಂಟ್ ಮಾಡಿದ್ದಾನೆ.

    ಇದಕ್ಕೆ ಅಷ್ಟೇ ಸಮರ್ಥವಾಗಿ ಉತ್ತರಿಸಿರುವ ಅನಿತಾ ಭಟ್, ನೀವು ನೀತಿ ಪಾಠ ಮಾಡಿ ಏನೇನು ಸಾಧನೆ ಮಾಡಿದ್ದೀರಾ ಅಂತ ಹೇಳಿ. ನಾವೆಲ್ಲ ತಿಳ್ಕೊಂಡು ಉದ್ಧಾರ ಆಗೋಣ. ಹೆಸರಿಗೆ ತಕ್ಕ ಹಾಗೆ ಅಲ್ಲ ಅಲ್ವಾ ಎಂದು ತಿರುಗೇಟು ನೀಡಿದ್ದಾರೆ.

    ಅಲ್ಲದೆ ಮತ್ತೊಂದು ಟ್ವೀಟ್‍ನಲ್ಲಿ ಕ್ವಾರಂಟೈನ್ ನಿಜವಾಗಿಯೂ ನನ್ನನ್ನು ನಿರುದ್ಯೋಗಿಯನ್ನಾಗಿ ಮಾಡಿದೆ. ಹೀಗಾಗಿ ಎಲ್ಲ ಕಮೆಂಟ್‍ಗಳಿಗೆ ಪ್ರತಿಕ್ರಿಯಿಸಲು ಪ್ರಾರಂಭಿಸಿದ್ದೇನೆ. ಕಿಂಡಲ್‍ನಲ್ಲಿ ಯಾವ ಉತ್ತಮ ಪುಸ್ತಕ ಡೌನ್‍ಲೋಡ್ ಮಾಡಿಕೊಳ್ಳಬಹುದು ಸಲಹೆ ನೀಡಿ. ಈ ಮೂಲಕ ನನ್ನಷ್ಟಕ್ಕೆ ನಾನು ಬ್ಯುಸಿಯಾಗುತ್ತೇನೆ. ಕನ್ನಡ ಪುಸ್ತಕಗಳು, ಆದರೆ ಸಾಮಾಜಿಕ ಕಾದಂಬರಿಗಳು ಬೇಡ ಎಂದು ಕೇಳಿದ್ದಾರೆ.

    ಕ್ವಾರಂಟೈನ್ ದಿನಗಳನ್ನು ಎಂಜಾಯ್ ಮಾಡುತ್ತಿರುವ ಅನಿತಾ ಭಟ್, ಪುಸ್ತಕ ಓದುತ್ತಿರುವ ಫೋಟೋಗಳು, ನಾಯಿ ಜೊತೆ ಕಾಲ ಕಳೆಯುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದೇ ರೀತಿ ಒಂದು ಫೋಟೋ ವಿವಾದಕ್ಕೆ ಕಾರಣವಾಗಿದೆ.

    ಸದ್ಯ ‘ಬೆಂಗಳೂರು-69’ ಸಿನಿಮಾದಲ್ಲಿ ನಟಿಸುತ್ತಿದ್ದು, ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಲಾಕ್‍ಡೌನ್ ಹಿನ್ನೆಲೆ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಅಂದಹಾಗೆ ಈ ಸಿನಿಮಾ ಕನ್ನಡ ಹಾಗೂ ತೆಲುಗಿನಲ್ಲಿ ಬಿಡುಗಡೆಯಾಗುತ್ತಿದ್ದು, ಚಿತ್ರದ ಪೋಸ್ಟರ್ ಹಾಗೂ ಟೀಸರ್‍ನಲ್ಲಿ ಅನಿತಾ ಭಟ್ ಅವರ ಹಾಟ್ ಲುಕ್ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.