ನವದೆಹಲಿ: ಬಿಜೆಪಿ (BJP) ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshappa) ಸುಪ್ರೀಂಕೋರ್ಟ್ (Supreme Court) ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ ಲೋಕಾಯುಕ್ತ (Lokayukta)ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಉತ್ತರಿಸುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದೆ.
ಭ್ರಷ್ಟಾಚಾರ, ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ನೀಡಿದೆ. ಈ ಆದೇಶ ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಸೋಮವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಅನಿರುದ್ಧ ಬೋಸ್ (Aniruddha Bose) ನೇತೃತ್ವದ ಪೀಠ ವಿರೂಪಾಕ್ಷಪ್ಪಗೆ ನೋಟಿಸ್ ಜಾರಿ ಮಾಡಿತು. ಇದನ್ನೂ ಓದಿ: ನಾಡಬಾಂಬ್ ಎಸೆದು BJP ಮುಖಂಡನ ಕೊಲೆ
ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲರು ಮಧ್ಯಂತರ ಜಾಮೀನು ರದ್ದು ಮಾಡಿ ಹೈಕೋರ್ಟ್ ವಿಚಾರಣೆಗೂ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಕೋರ್ಟ್, ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಹೊರಗಿನ ಅಭ್ಯರ್ಥಿಗಳಿಗೆ ಮಣೆ ಹಾಕುವ ಕನಕಗಿರಿ ಮತದಾರರು
ನವದೆಹಲಿ: ವಿಶ್ವಾಸ ಮತಯಾಚನೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಈ ವೇಳೆ ರಾಜೀನಾಮೆ ಅಂಗೀಕಾರಕ್ಕೆ ದಿನ ನಿಗದಿ ಪಡಿಸದ ಕೋರ್ಟ್ ನಿರ್ದಿಷ್ಟ ಸಮಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ ನಿರ್ಧಾರ ಮಾಡಿ ಎಂದು ಸ್ಪೀಕರ್ ಅವರಿಗೆ ಆದೇಶ ನೀಡಿದೆ.
ನಾಳೆ ವಿಶ್ವಾಸಮತಯಾಚನೆ ಮಾಡಬಹುದು. ಆದ್ರೆ ರಾಜೀನಾಮೆ ನೀಡಿರುವ 15 ಶಾಸಕರು ಭಾಗವಹಿಸುವುದು ಕಡ್ಡಾಯವಲ್ಲ. ಹಾಜರಾಗಬೇಕೋ ಬೇಡವೋ ಎನ್ನುವುದು ಶಾಸಕರ ವಿವೇಚನೆಗೆ ಬಿಟ್ಟ ವಿಚಾರ. ಅತೃಪ್ತ ಶಾಸಕರನ್ನು ಒತ್ತಾಯಪೂರ್ವಕವಾಗಿ ಕರೆತರುವ ಹಾಗಿಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ರಾಜೀನಾಮೆ ಅಂಗೀಕರಿಸಿಲ್ಲ ಅಂತ ಸ್ಪೀಕರ್ ವಿರುದ್ಧ 15 ಅತೃಪ್ತ ಶಾಸಕರು ಸಲ್ಲಿಸಿರೋ ಅರ್ಜಿಯ ಬಗ್ಗೆ ಮಂಗಳವಾರ ಸುಮಾರು 212 ನಿಮಿಷ ವಿಚಾರಣೆ ನಡೆದರೂ, ತೀರ್ಪು ಪ್ರಕಟವಾಗಿರಲಿಲ್ಲ. ಅರ್ಜಿದಾರರು, ಸಿಎಂ, ಸ್ಪೀಕರ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ವಕೀಲರು ಸುದೀರ್ಘವಾಗಿ ತಮ್ಮ ಕಕ್ಷಿದಾರರ ಪರವಾಗಿ ವಾದ ಮಂಡಿಸಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ಜಸ್ಟೀಸ್ ದೀಪಕ್ ಗುಪ್ತಾ ಹಾಗೂ ಜಸ್ಟೀಸ್ ಅನಿರುದ್ಧ್ ಬೋಸ್ ಅವರಿದ್ದ ತ್ರಿಸದಸ್ಯ ಪೀಠದ ಎದುರು ಮುಕುಲ್ ರೋಹಟಗಿ – ಅಭಿಷೇಕ್ ಸಿಂಘ್ವಿ – ರಾಜೀವ್ ಧವನ್ ನಡುವೆ ಅಕ್ಷರಶಃ ವಾಗ್ಯುದ್ಧವೇ ನಡೆದಿತ್ತು. ಸುಮಾರು 3 ಗಂಟೆ 45 ನಿಮಿಷಗಳ ವಾದ ವಿವಾದಗಳನ್ನು ಆಲಿಸಿದ ತ್ರಿಸದಸ್ಯ ಪೀಠ ತೀರ್ಪನ್ನು ಬುಧವಾರ ಬೆಳಗ್ಗೆ 10.30ಕ್ಕೆ ಕಾಯ್ದಿರಿಸಿತ್ತು.
ಮಂಗಳವಾರ ಸುಪ್ರೀಂಕೋರ್ಟ್ ನಲ್ಲಿ ಏನಾಗಿತ್ತು: ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹಟಗಿ:
10 ಶಾಸಕರು ಜುಲೈ 10ರಂದೇ ರಾಜೀನಾಮೆ ನೀಡಿದ್ದಾರೆ. ಆರ್ಟಿಕಲ್ 190 ಮತ್ತು ಶೆಡ್ಯೂಲ್ 10ರ ನಡುವೆ ವ್ಯತ್ಯಾಸ ಇದ್ದು ಸ್ಪೀಕರ್ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸಬಹುದು. ಅನರ್ಹತೆ ಬಾಕಿ ಇರೋದು ರಾಜೀನಾಮೆ ಸ್ವೀಕಾರಕ್ಕೆ ಅಡ್ಡಿಯಾಗಬಾರದು. ಉಮೇಶ್ ಜಾಧವ್ ಮೇಲೆ ಅನರ್ಹತೆ ದೂರು ಇದ್ದರೂ ರಾಜೀನಾಮೆ ಅಂಗೀಕರಿಸಲಾಗಿತ್ತು. ಅದೇ ರೀತಿ ಎಲ್ಲ ಶಾಸಕರು ರಾಜೀನಾಮೆಯನ್ನು ಅಂಗೀಕರಿಸಬೇಕು. ಈ ವಿಚಾರದಲ್ಲಿ ಸ್ಪೀಕರ್ ದ್ವಂದ್ವ ನೀತಿಯನ್ನು ಹೊಂದಿದ್ದಾರೆ. ಶಾಸಕರು ಅನರ್ಹ ಮಾಡುವಂತಹ ತಪ್ಪು ಏನು ಮಾಡಿದ್ದಾರೆ? ಅನರ್ಹತೆಗೊಳಿಸಲು ಯಾವುದೇ ಕಾರಣ ಇಲ್ಲ. ನಮ್ಮ ಕಕ್ಷಿದಾರರ ಮೇಲೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಆರೋಪವನ್ನು ಹೊರಿಸಲಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ಸದನದ ಹೊರಗಿನ ಸಭೆಯಲ್ಲಿ ಭಾಗಿಯಾಗುತ್ತಿಲ್ಲ. ವಿಧಾನಸಭಾ ಕಲಾಪಕ್ಕೆ ಹಾಜರಾಗುವಂತೆ ಒತ್ತಡ ಹಾಕುವುದು ಸರಿಯೇ?
ನನ್ನ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ಭಾಗಿಯಾಗಿಲ್ಲ. ರಾಜೀನಾಮೆ ನೀಡಿದ ಬಳಿಕ ವಿಪ್ ಜಾರಿಯಾದ್ರೆ ಅನರ್ಹಗೊಳಿಸಲು ಹೇಗೆ ಸಾಧ್ಯ? ಪಕ್ಷಾಂತರ ನಮ್ಮ ಉದ್ದೇಶ ಅಲ್ಲ, ಸರ್ಕಾರದಿಂದ ಹೊರಬರುವುದು ನಮ್ಮ ಉದ್ದೇಶವಾಗಿದೆ. ಶಾಸಕರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಟ್ ಮೂಲಕವೇ ಹೇಳಿದ್ದಾರೆ. ಹೀಗಿರುವಾಗ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಮಾಡುವುದು ಸರಿಯೇ?
ನಾನು ಅನರ್ಹತೆ ಪ್ರಕರಣ ಕೈ ಬಿಡುವಂತೆ ಹೇಳಿಲ್ಲ. ಇಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಅನಹರ್ತತೆಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಆರ್ಟಿಕಲ್ 191/2 ರಾಜೀನಾಮೆ ನೀಡುವುದು ಶಾಸಕರ ಹಕ್ಕು. ಈ ಹಕ್ಕನ್ನು ತಡೆಯಲು ಸ್ಪೀಕರ್ ಅವರಿಗೆ ಸಾಧ್ಯವಿಲ್ಲ. ಶಾಸಕರು ಇಷ್ಟಪಟ್ಟಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ವ ಸ್ವತಂತ್ರರು. ಎಲ್ಲ ಶಾಸಕರು ನಿಯಮಬದ್ಧವಾಗಿಯೇ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಈ ಕೂಡಲೇ ಸ್ಪೀಕರ್ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಮುಕುಲ್ ರೋಹಟಗಿ ವಾದ ಮಂಡಿಸಿದ್ದರು.
ಸ್ಪೀಕರ್ ಪರ ವಕೀಲ ಅಭಿಷೇಕ್ ಮನುಸಿಂಘ್ವಿ:
ಸ್ಪೀಕರ್ ರಾಜೀನಾಮೆ ಅಂಗೀಕಾರ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಕೆಲವರನ್ನು ವಿಚಾರಣೆಗೂ ಕೂಡ ಕರೆದಿದ್ದಾರೆ. ಆದರೆ ಅವರು ವಿಚಾರಣೆಗೆ ಬಂದಿಲ್ಲ. ಅನರ್ಹತೆ ಮತ್ತು ರಾಜೀನಾಮೆ ಅಂಗೀಕಾರಕ್ಕೆ ಸಂಬಂಧ ಇಲ್ಲ ಎನ್ನುವುದು ತಪ್ಪು. ಅನರ್ಹತೆ ಮತ್ತು ರಾಜೀನಾಮೆಗೆ ಸಂಬಂಧವಿದೆ. ರಾಜೀನಾಮೆಗಿಂತ ಮುಂಚೆಯೇ ಅನರ್ಹತೆಯ ದೂರು ಸಲ್ಲಿಕೆಯಾಗಿದೆ. ವಿಪ್ ಉಲ್ಲಂಘಿಸಿದರೆ ಅದು ಅನರ್ಹತೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ರಾಜೀನಾಮೆ ಅನರ್ಹತೆ ಬಗ್ಗೆ ನಿರ್ಧಾರಕೈಗೊಳ್ಳುವ ಅಧಿಕಾರ ಸ್ವೀಕರ್ ಅವರಿಗೆ ಇದೆ. ವಿಪ್ ಉಲ್ಲಂಘನೆ ಮಾಡಿದರೆ ಶಾಸಕರನ್ನು ಅನರ್ಹತೆ ಮಾಡುವ ಅಧಿಕಾರವನ್ನು ಸ್ಪೀಕರ್ ಹೊಂದಿದ್ದಾರೆ.
ನಿಯಮದ ಪ್ರಕಾರ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಬೇಕು. ಖುದ್ದು ಹಾಜರಾಗದೇ ರಾಜೀನಾಮೆ ನೀಡಿದರೆ ಆರ್ಟಿಕಲ್ 190ರ ಅನ್ವಯ ಆಗಲ್ಲ. ವಿಚಾರಣೆಗೂ ಕೂಡ ಶಾಸಕರು ಖುದ್ದು ಹಾಜರಾಗಬೇಕು. ಕೆಲವೊಂದು ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಬೇಕಾಗಿರುವ ಕಾರಣ ಒಂದೇ ರಾತ್ರಿಯಲ್ಲಿ ವಿಚಾರಣೆ ಮುಗಿಸಲು ಸಾಧ್ಯವಿಲ್ಲ. ಅನರ್ಹತೆಯಿಂದ ತಪ್ಪಿಸಿಕೊಳ್ಳಲು ಶಾಸಕರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ. ಸ್ಪೀಕರ್ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಜುಲೈ 11ರಂದು 15 ಶಾಸಕರಲ್ಲಿ 11 ಮಂದಿ ಖುದ್ದು ಹಾಜರಾಗಿ ರಾಜೀನಾಮೆ ನೀಡಿದ್ದಾರೆ. ಉಳಿದ ನಾಲ್ವರು ಇದೂವರೆಗೂ ಬಂದಿಲ್ಲ.
ಫೆಬ್ರವರಿಯಲ್ಲಿ ಇಬ್ಬರು ಶಾಸಕರ ಅನರ್ಹತೆ ವಿಚಾರಣೆ ಪ್ರಕ್ರಿಯೆ ಶುರುವಾಗಿದೆ. ಜುಲೈ 6ರಂದು ಶಾಸಕರು ರಾಜೀನಾಮೆ ನೀಡಲು ಹೋದಾಗ ಸ್ಪೀಕರ್ ಕಚೇರಿಯಲ್ಲಿ ಇರಲಿಲ್ಲ. ಶಾಸಕರು ಮೊದಲು ಸ್ಪೀಕರ್ ಬಳಿ ಸಮಯ ಕೇಳಿರಲಿಲ್ಲ. ಅನರ್ಹತೆ ಪ್ರಕರಣ ವಿಚಾರಣೆ ಹಂತದಲ್ಲಿರುವಾಗ ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಹಲವು ಅನರ್ಹತೆ ಪ್ರಕರಣಗಳನ್ನು ಪರಿಶೀಲಿಸಿ ತೀರ್ಪು ನೀಡಬೇಕಿದೆ. ಹಾಗಾಗಿ ತಡವಾಗ್ತಿದೆ. ನಾನು ಬಹಳ ಗಟ್ಟಿಯಾಗಿ ಶಾಸಕರು ಅನರ್ಹರಾಗುತ್ತಾರೆಂದು ಹೇಳುತ್ತೇನೆ. ಇವತ್ತಲ್ಲ ನಾಳೆ ಅನರ್ಹತೆ ಆಗಲೇಬೇಕು. ಅನರ್ಹತೆ ತಪ್ಪಿಸಿಕೊಳ್ಳಲು ರಾಜೀನಾಮೆ ಮಾರ್ಗ ಆಗಬಾರದು. ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣವನ್ನು ಸ್ಪೀಕರ್ ಇತ್ಯರ್ಥ ಮಾಡುತ್ತಾರೆ. ಶುಕ್ರವಾರ ನೀಡಿದ್ದ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದರು.
ಸಿಎಂ ಪರ ವಕೀಲ ರಾಜೀವ್ ಧವನ್ ಅವರ ವಾದ:
ಸ್ಪೀಕರ್ ಕಣ್ಣುಮುಚ್ಚಿಕೊಂಡು ಕುಳಿತಿಲ್ಲ. ಶಾಸಕರು ಆಸೆ, ಆಮಿಷಗಳಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸ್ಪೀಕರ್ ಅವರಿಗೆ ನೀಡಲಾಗಿದೆ. 11 ಮಂದಿ ಶಾಸಕರು ಮುಂಬೈಗೆ ತೆರಳುವ ಬದಲು ಸ್ಪೀಕರ್ ಬಳಿ ಹೋಗಬೇಕಿತ್ತು. ಇದೊಂದು 11 ಜನರ ಬೇಟೆಯ ತಂಡವಾಗಿದೆ. ಗುಂಪು ರಾಜೀನಾಮೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ರಾಜೀನಾಮೆ ಬಳಿಕ 10 ಶಾಸಕರು ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೀಘ್ರ ರಾಜೀನಾಮೆ ಅಂಗೀಕಾರವಾದರೆ ಸಂವಿಧಾನ ವಿರೋಧಿ ಆಗುತ್ತದೆ. ಹಾಗಾಗಿ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಸುಪ್ರೀಂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಸ್ಪೀಕರ್ ಪ್ರಶ್ನೆ ಮಾಡುವ ಅಧಿಕಾರ ನ್ಯಾಯಾಲಯಕ್ಕೆ ಇರಲಿಲ್ಲ. ಈಗಲೂ ಇಲ್ಲ.
ಸ್ಪೀಕರ್ ಅಧಿಕಾರವನ್ನು 10ನೇ ಶೆಡ್ಯೂಲ್ ಜೊತೆಗೆ ಓದಬೇಕು. ಸಂವಿಧಾನದ 190ನೇ ವಿಧಿಯನ್ನು 10ನೇ ಶೆಡ್ಯೂಲ್ ಪ್ರಕಾರ ಅರ್ಥೈಸಿಕೊಳ್ಳಬೇಕಿದೆ. ಸ್ಪೀಕರ್ ಅವರಿಗೆ ವಿಚಾರಣೆ ನಡೆಸಲು ಸಮಯಾವಕಾಶದ ಅಗತ್ಯವಿದೆ. ಇದೆಲ್ಲವೂ ರಾಜಕೀಯ ಪ್ರೇರಿತವಾಗಿದ್ದು, ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ. ಹೀಗಾಗಿ ವಿಧಿ 190 ಮತ್ತು ಶೆಡ್ಯೂಲ್ 10ನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕಕ್ಕೆ ಮಾರಕ. ಇಂತಹ ಬೆಳವಣಿಗೆಯಿಂದ ಪ್ರಜಾಪ್ರಭುತ್ವದ ಬುಡ ಅಲುಗಾಡುತ್ತಿದೆ.
ಶಾಸಕರ ರಾಜೀನಾಮೆಗಳಿಗೆ ಕಾರಣಗಳೇ ಇಲ್ಲ. ಶಾಸಕರು ನೀಡುವ ಕಾರಣಗಳು ಸ್ಪೀಕರ್ ಅವರಿಗೆ ತೃಪ್ತಿಯಾದ್ರೆ ಮಾತ್ರ ರಾಜೀನಾಮೆ ಸಾಂವಿಧಾನಿಕವಾಗಲಿದೆ. 10 ರಿಂದ 13 ಶಾಸಕರು ರಾಜೀನಾಮೆ ನೀಡಲು ಸರ್ಕಾರ ಕೆಡವಲು ಬೇಟೆಗೆ ಹೊರಟಿದ್ದಾರೆ. ರಾಜಕೀಯ ಆಟದಲ್ಲಿ ಕೋರ್ಟ್ ಮಧ್ಯಪ್ರವೇಶಕ್ಕೆ ಶಾಸಕರು ಬಯಸಿದ್ದಾರೆ ಎಂದು ತಮ್ಮ ವಾದದಲ್ಲಿ ಮಂಡಿಸಿದ್ದರು.
ರಾಜೀನಾಮೆ ಇದೊಂದು ರಾಜಕೀಯ ಕುತಂತ್ರವಾಗಿದ್ದು, ಅಧಿವೇಶನಕ್ಕೂ ಮುನ್ನ ಸರ್ಕಾರಕ್ಕೆ ಸಂಖ್ಯಾಬಲ ಇಲ್ಲದಂತೆ ಮಾಡುವ ಪ್ಲಾನ್ ಇದಾಗಿದೆ. ಇಂತಹ ಬೆಳವಣಿಗೆಗಳನ್ನು ಪರಿಗಣಿಸಬಾರದು. ಬಜೆಟ್ ಅಂಗೀಕಾರಕ್ಕೂ ಮೊದಲೇ ಸರ್ಕಾರ ಬೀಳಿಸುವುದು ಇವರೆಲ್ಲರ ಉದ್ದೇಶವಾಗಿದೆ. ಗುರುವಾರಕ್ಕೆ ಪೂರ್ಣ ಪ್ರಮಾಣದ ಚರ್ಚೆ ಆಗಲಿ. ಅಂದು ಎಲ್ಲ ಶಾಸಕರು ಹಾಜರಾಗಲಿ ಎಂದು ವಾದಿಸಿದ್ದರು.
Supreme Court says, "Karnataka MLAs not compelled to participate in the trust vote tomorrow." https://t.co/qSfPf8oQ2x
ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಬುಧವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.
ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಬಂದಾಗ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅರಿಯಲೆಂದು ತ್ರಿಸದಸ್ಯ ಪೀಠದಲ್ಲಿ ಮಂಗಳವಾರ 10:40ಕ್ಕೆ ಆರಂಭಗೊಂಡ ವಿಚಾರಣೆ ಮಧ್ಯಾಹ್ನ 3:24ರವರೆಗೆ ನಡೆಯಿತು.
ಬೆಳಗ್ಗೆಯಿಂದ ಮಧ್ಯಾಹ್ನ ಭೋಜನ ಅವಧಿಯವರೆಗೆ ರಾಜೀನಾಮೆ ಸಲ್ಲಿಸಿದ ಶಾಸಕರ ಪರವಾಗಿ ಮುಕುಲ್ ರೋಹಟಗಿ, ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ಮಧ್ಯಾಹ್ನದ ನಂತರ ಸಿಎಂ ಪರವಾಗಿ ರಾಜೀವ್ ಧವನ್ ವಾದ ಮಂಡಿಸಿದರು. ಇದನ್ನೂ ಓದಿ: ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣ ಇತ್ಯರ್ಥ
ಇಡೀ ದಿನ ಮೂರು ಕಡೆಯ ವಾದ, ಪ್ರತಿವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠ ಬುಧವಾರ ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸುವುದಾಗಿ ಹೇಳಿತು. ಆದೇಶ ಪ್ರಕಟವಾಗೋವರೆಗೂ ಯಥಾ ಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದೆ. ಇದನ್ನೂ ಓದಿ: ಹಿಂದೆ ವಿಶ್ವಾಸಮತಯಾಚನೆಗೆ ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ಪ್ರಕಟಿಸಿ: ರೋಹಟಗಿ
Supreme Court to pass order in Karnataka rebel MLAs case tomorrow at 10:30 am. pic.twitter.com/eEX0oqpAJO
ರಾಜೀವ್ ಧವನ್ ವಾದ ಹೀಗಿತ್ತು:
ಸ್ಪೀಕರ್ ಕಣ್ಣುಮುಚ್ಚಿಕೊಂಡು ಕುಳಿತಿಲ್ಲ. ಶಾಸಕರು ಆಸೆ, ಆಮಿಷಗಳಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿಯನ್ನು ಸ್ಪೀಕರ್ ಅವರಿಗೆ ನೀಡಲಾಗಿದೆ. 11 ಮಂದಿ ಶಾಸಕರು ಮುಂಬೈಗೆ ತೆರಳುವ ಬದಲು ಸ್ಪೀಕರ್ ಬಳಿ ಹೋಗಬೇಕಿತ್ತು. ಇದೊಂದು 11 ಜನರ ಬೇಟೆಯ ತಂಡವಾಗಿದೆ. ಗುಂಪು ರಾಜೀನಾಮೆಗಳನ್ನು ಪ್ರತ್ಯೇಕವಾಗಿ ಪರಿಗಣಿಸಬೇಕು. ರಾಜೀನಾಮೆ ಬಳಿಕ 10 ಶಾಸಕರು ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ. ಇಂತಹ ಪ್ರಕರಣಗಳಲ್ಲಿ ಶೀಘ್ರ ರಾಜೀನಾಮೆ ಅಂಗೀಕಾರವಾದರೆ ಸಂವಿಧಾನ ವಿರೋಧಿ ಆಗುತ್ತದೆ. ಹಾಗಾಗಿ ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಸುಪ್ರೀಂ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅತೃಪ್ತ ಶಾಸಕರ ವಿಚಾರ ಮಾತ್ರ ಅಲ್ಲ ಇದು. ಸರ್ಕಾರವನ್ನು ಕೆಡವಲು ಹೊರಟಿದ್ದಾರೆ. ಸಿಎಂ ಮತ್ತು ಸಿಎಂ ಆಗಲು ಸಾಧ್ಯವಿಲ್ಲದವರ ನಡುವಿನ ಪ್ರಕರಣ ಇದಾಗಿದೆ.
ಈ ವಿಚಾರದಲ್ಲಿ ಸ್ಪೀಕರ್ ಪ್ರಶ್ನೆ ಮಾಡುವ ಅಧಿಕಾರ ನ್ಯಾಯಾಲಯಕ್ಕೆ ಇರಲಿಲ್ಲ. ಈಗಲೂ ಇಲ್ಲ. ಈ ತರಹದ ಪ್ರಕರಣಗಳನ್ನು ಸುಪ್ರೀಂಕೋರ್ಟ್ ಪರಿಗಣಿಸಬಾರದು. ಇಲ್ಲಿ ಯಾವುದೇ ಮೂಲಭೂತ ಹಕ್ಕುಗಳ ಉಲ್ಲಂಘನೆ ಹೊರತುಪಡಿಸಿ, ಸುಪ್ರೀಂಗೆ ಮಧ್ಯಪ್ರವೇಶದ ಅಧಿಕಾರವೇ ಇಲ್ಲ. ಶಾಸಕರು ಆಮಿಷಗಳನ್ನು ಬೆನ್ನತ್ತಿ ಹೋಗಿದ್ದು, ವೈಯಕ್ತಿಕ ಹಿತಾಸಕ್ತಿಗಳಿಗಾಗಿ ರಾಜೀನಾಮೆ ನೀಡಿದ್ದಾರೆ. ಶಾಸಕರು ರಾಜೀನಾಮೆಗೆ ಭ್ರಷ್ಟಾಚಾರ, ದುರಾಡಳಿತದ ಆರೋಪ ಮಾಡುತ್ತಿದ್ದಾರೆ. ಅಲ್ಪಮತದ ಸರ್ಕಾರ ಉಳಿಸಲು ಸ್ಪೀಕರ್ ಯತ್ನಿಸುತ್ತಿಲ್ಲ. ಸರ್ಕಾರಕ್ಕೂ ಮತ್ತು ಸ್ಪೀಕರ್ ಅವರಿಗೂ ಯಾವುದೇ ಸಂಬಂಧವಿಲ್ಲ. ಸ್ಪೀಕರ್ ಮೇಲೆ ಅತೃಪ್ತ ಶಾಸಕರು ಮಾಡಿರುವ ಆರೋಪ ಸರಿಯಲ್ಲ.
ಎರಡೂ ತರಹದ ಅನರ್ಹತೆ ಪ್ರಕ್ರಿಯೆಗಳಿದ್ದು, ಭಿನ್ನವಾಗಿವೆ. ಶಾಸಕರ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಬೇಕು. ಸ್ಪೀಕರ್ ಹಾಗೂ ಸುಪ್ರೀಂಕೋರ್ಟ್ ನಡುವಿನ ವಾದ ಅಲ್ಲ. ಸ್ಪೀಕರ್ ಅಧಿಕಾರವನ್ನು 10ನೇ ಶೆಡ್ಯೂಲ್ ಜೊತೆಗೆ ಓದಬೇಕು. ಸಂವಿಧಾನದ 190ನೇ ವಿಧಿಯನ್ನು 10ನೇ ಶೆಡ್ಯೂಲ್ ಪ್ರಕಾರ ಅರ್ಥೈಸಿಕೊಳ್ಳಬೇಕಿದೆ. ಸ್ಪೀಕರ್ ಅವರಿಗೆ ವಿಚಾರಣೆ ನಡೆಸಲು ಸಮಯಾವಕಾಶದ ಅಗತ್ಯವಿದೆ. ಇದೆಲ್ಲವೂ ರಾಜಕೀಯ ಪ್ರೇರಿತವಾಗಿದ್ದು, ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕ್ಕೆ ಸಂಬಂಧಿಸಿದೆ. ಹೀಗಾಗಿ ವಿಧಿ 190 ಮತ್ತು ಶೆಡ್ಯೂಲ್ 10ನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಶಾಸಕರ ರಾಜೀನಾಮೆ ಪ್ರಜಾಪ್ರಭುತ್ವಕಕ್ಕೆ ಮಾರಕ. ಇಂತಹ ಬೆಳವಣಿಗೆಯಿಂದ ಪ್ರಜಾಪ್ರಭುತ್ವದ ಬುಡ ಅಲುಗಾಡುತ್ತಿದೆ.
ಶಾಸಕರ ರಾಜೀನಾಮೆಗಳಿಗೆ ಕಾರಣಗಳೇ ಇಲ್ಲ. ಶಾಸಕರು ನೀಡುವ ಕಾರಣಗಳು ಸ್ಪೀಕರ್ ಅವರಿಗೆ ತೃಪ್ತಿಯಾದ್ರೆ ಮಾತ್ರ ರಾಜೀನಾಮೆ ಸಾಂವಿಧಾನಿಕವಾಗಲಿದೆ. 10 ರಿಂದ 13 ಶಾಸಕರು ರಾಜೀನಾಮೆ ನೀಡಲು ಸರ್ಕಾರ ಕೆಡವಲು ಬೇಟೆಗೆ ಹೊರಟಿದ್ದಾರೆ. ರಾಜಕೀಯ ಆಟದಲ್ಲಿ ಕೋರ್ಟ್ ಮಧ್ಯಪ್ರವೇಶಕ್ಕೆ ಶಾಸಕರು ಬಯಸಿದ್ದಾರೆ.
ಸರ್ಕಾರ ಬೀಳಿಸಲು ಅತೃಪ್ತರು ಕೋರ್ಟಿಗೆ ಬಂದಿದ್ದಾರೆ. ಯಾವುದೇ ಕಾರಣಕ್ಕೂ ಅವರಿಗೆ ಅವಕಾಶ ಮಾಡಿಕೊಡಬೇಡಿ. ಸುಪ್ರೀಂಕೋರ್ಟ್ನ ನ್ಯಾಯಾಂಗ ವಿಮರ್ಶೆ ಆಧಿಕಾರದ ಬಗ್ಗೆ ಪ್ರಶ್ನೆ ಎತ್ತುತ್ತಿಲ್ಲ. ಸ್ಪೀಕರ್ ಹುದ್ದೆ ಸಾಂವಿಧಾನಿಕವಾದ್ದು, ಸುಪ್ರೀಂಕೋರ್ಟ್ ಸ್ಪೀಕರ್ ಮೇಲೆ ನಂಬಿಕೆ ಇಡಬೇಕು. ಸ್ಪೀಕರ್ ತಪ್ಪು ನಿರ್ಧಾರ ತೆಗೆದುಕೊಂಡರೆ ಸುಪ್ರೀಂಕೋರ್ಟ್ ಮಧ್ಯ ಪ್ರವೇಶಿಸಲಿ. ಜುಲೈ 6 ಮತ್ತು 11ರ ನಡುವೆ ಸ್ಪೀಕರ್ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ಮಾಡುತ್ತಿದ್ದರು. ಅದ್ರೆ ಅತೃಪ್ತರು ಬಿರುಗಾಳಿ ವೇಗದಲ್ಲಿ ಕೆಲಸ ಮಾಡಲಿ ಎಂದು ಹೇಳುತ್ತಿದ್ದಾರೆ. ಅರ್ಜಿಯ ವಿಚಾರಣೆಗೆ ಸ್ಪೀಕರ್ ಅವರಿಗೆ ಕಾಲಾವಕಾಶ ಬೇಕಿದೆ. ಸ್ಪೀಕರ್ ಈಗಾಗಲೇ ವಿಚಾರಣೆ ಆರಂಭಿಸಿದ್ದು, ಈ ಹಂತದಲ್ಲಿ ಸುಪ್ರೀಂಕೋಟ್ ಮಧ್ಯಪ್ರವೇಶಿಸುವಂತಿಲ್ಲ. ಸ್ಪೀಕರ್ ಅಧಿಕಾರದ ಬಗ್ಗೆ ಪೂರ್ಣ ಪ್ರಮಾಣದ ಚರ್ಚೆ ಆಗಬೇಕು. ಈ ಬಗ್ಗೆ ತರಾತುರಿ ಆದೇಶ ನೀಡುವುದು ಬೇಡ.
ರಾಜೀನಾಮೆ ಇದೊಂದು ರಾಜಕೀಯ ಕುತಂತ್ರವಾಗಿದ್ದು, ಅಧಿವೇಶನಕ್ಕೂ ಮುನ್ನ ಸರ್ಕಾರಕ್ಕೆ ಸಂಖ್ಯಾಬಲ ಇಲ್ಲದಂತೆ ಮಾಡುವ ಪ್ಲಾನ್ ಇದಾಗಿದೆ. ಇಂತಹ ಬೆಳವಣಿಗೆಗಳನ್ನು ಪರಿಗಣಿಸಬಾರದು. ಬಜೆಟ್ ಅಂಗೀಕಾರಕ್ಕೂ ಮೊದಲೇ ಸರ್ಕಾರ ಬೀಳಿಸುವುದು ಇವರೆಲ್ಲರ ಉದ್ದೇಶವಾಗಿದೆ. ಗುರುವಾರಕ್ಕೆ ಪೂರ್ಣ ಪ್ರಮಾಣದ ಚರ್ಚೆ ಆಗಲಿ. ಅಂದು ಎಲ್ಲ ಶಾಸಕರು ಹಾಜರಾಗಲಿ.
ನವದೆಹಲಿ: ವಿಶ್ವಾಸ ಮತ ಯಾಚನೆಯ ಮುನ್ನದಿನವಾದ ಬುಧವಾರ ಶಾಸಕರ ರಾಜೀನಾಮೆ ಮತ್ತು ಅನಹರ್ತತೆ ವಿಚಾರವನ್ನು ಸ್ಪೀಕರ್ ರಮೇಶ್ ಕುಮಾರ್ ಇತ್ಯರ್ಥ ಮಾಡಲಿದ್ದಾರೆ.
ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ವೇಳೆ ಸ್ಪೀಕರ್ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ಬುಧವಾರ ಅನಹರ್ತತೆ ಮತ್ತು ರಾಜೀನಾಮೆಯನ್ನು ಇತ್ಯರ್ಥ ಮಾಡಲಿದ್ದಾರೆ ಎಂದು ತಿಳಿಸಿದರು.
ಅಭಿಷೇಕ್ ಮನು ಸಿಂಘ್ವಿ ವಾದ ಹೀಗಿತ್ತು:
ಸ್ಪೀಕರ್ ರಾಜೀನಾಮೆ ಅಂಗೀಕಾರ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ. ಕೆಲವರನ್ನು ವಿಚಾರಣೆಗೂ ಕೂಡ ಕರೆದಿದ್ದಾರೆ. ಆದರೆ ಅವರು ವಿಚಾರಣೆಗೆ ಬಂದಿಲ್ಲ. ಅನರ್ಹತೆ ಮತ್ತು ರಾಜೀನಾಮೆ ಅಂಗೀಕಾರಕ್ಕೆ ಸಂಬಂಧ ಇಲ್ಲ ಎನ್ನುವುದು ತಪ್ಪು. ಅನರ್ಹತೆ ಮತ್ತು ರಾಜೀನಾಮೆಗೆ ಸಂಬಂಧವಿದೆ.
Senior Advocate AM Singhvi said 'all cases of presentation of resignation only happened on 11th July. 4 MLAs who have moved a petition to resign haven't even presented themselves before the Speaker.' CJI Gogoi asked, 'if the letters were given on July 6, what did Speaker do?' https://t.co/RZPFswXSzb
ರಾಜೀನಾಮೆಗಿಂತ ಮುಂಚೆಯೇ ಅನರ್ಹತೆಯ ದೂರು ಸಲ್ಲಿಕೆಯಾಗಿದೆ. ವಿಪ್ ಉಲ್ಲಂಘಿಸಿದರೆ ಅದು ಅನರ್ಹತೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ರಾಜೀನಾಮೆ ಅನರ್ಹತೆ ಬಗ್ಗೆ ನಿರ್ಧಾರಕೈಗೊಳ್ಳುವ ಅಧಿಕಾರ ಸ್ವೀಕರ್ ಅವರಿಗೆ ಇದೆ. ವಿಪ್ ಉಲ್ಲಂಘನೆ ಮಾಡಿದರೆ ಶಾಸಕರನ್ನು ಅನರ್ಹತೆ ಮಾಡುವ ಅಧಿಕಾರವನ್ನು ಸ್ಪೀಕರ್ ಹೊಂದಿದ್ದಾರೆ. ಪಕ್ಷ ವಿರೋಧ ಚಟುವಟಿಕೆ ಆಧಾರದ ಮೇಲೆ ಅನರ್ಹತೆ ಮಾಡಬೇಕು. ಪಕ್ಷ ವಿರೋಧಿ ಚಟುವಟಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಒಂದೇ ರಾತ್ರಿಯಲ್ಲಿ ರಾಜೀನಾಮೆ ಅಂಗೀಕಾರ ಮಾಡಲು ಸಾಧ್ಯವಿಲ್ಲ. ಮುಕುಲ್ ರೋಹಟಗಿ ಅವರ ವಾದದಲ್ಲಿ ಹುರುಳಿಲ್ಲ. ತ್ವರಿತವಾಗಿ ರಾಜೀನಾಮೆ ಅಂಗೀಕರಿಸುವುದು ಸೂಕ್ತ ತೀರ್ಮಾನವಲ್ಲ.
Hearing in the matter of rebel Karnataka MLAs: Mukul Rohatgi, representing 10 rebel MLAs says, The Speaker can't hold the resignation for so many days. The rule states it has to be decided soon." https://t.co/sAtuuF2Hs5
ಅನರ್ಹತೆ ಪ್ರಶ್ನೆಯೂ ಅನರ್ಹತೆಗೆ ದೂರು ನೀಡಲು ಕಾರಣವಾದ ಘಟನೆ ಮತ್ತು ಸಮಯವನ್ನು ಆಧರಿಸಿರುತ್ತದೆ. ನಿಯಮದ ಪ್ರಕಾರ ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ನೀಡಬೇಕು. ಖುದ್ದು ಹಾಜರಾಗದೇ ರಾಜೀನಾಮೆ ನೀಡಿದರೆ ಆರ್ಟಿಕಲ್ 190ರ ಅನ್ವಯ ಆಗಲ್ಲ. ವಿಚಾರಣೆಗೂ ಕೂಡ ಶಾಸಕರು ಖುದ್ದು ಹಾಜರಾಗಬೇಕು. ಕೆಲವೊಂದು ಕಾನೂನು ಪ್ರಕ್ರಿಯೆಗಳನ್ನು ಪೂರ್ಣ ಮಾಡಬೇಕಾಗಿರುವ ಕಾರಣ ಒಂದೇ ರಾತ್ರಿಯಲ್ಲಿ ವಿಚಾರಣೆ ಮುಗಿಸಲು ಸಾಧ್ಯವಿಲ್ಲ. ಅನರ್ಹತೆಯಿಂದ ತಪ್ಪಿಸಿಕೊಳ್ಳಲು ಶಾಸಕರು ರಾಜೀನಾಮೆಯ ನಾಟಕ ಆಡುತ್ತಿದ್ದಾರೆ. ಸ್ಪೀಕರ್ ಎಲ್ಲ ದಾಖಲೆಗಳನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಜುಲೈ 11ರಂದು 15 ಶಾಸಕರಲ್ಲಿ 11 ಮಂದಿ ಖುದ್ದು ಹಾಜರಾಗಿ ರಾಜೀನಾಮೆ ನೀಡಿದ್ದಾರೆ. ಉಳಿದ ನಾಲ್ವರು ಇದೂವರೆಗೂ ಬಂದಿಲ್ಲ.
#KarnatakaPoliticalCrisis: Singhvi reiterating that all resignations happened only on July 11 and all disqualification proceedings pre-date resignations.
ಆರಂಭದಲ್ಲಿ ಶಾಸಕರು ಸಲ್ಲಿಸಿದ್ದ ರಾಜೀನಾಮೆ ಕ್ರಮಬದ್ಧವಾಗಿರಲಿಲ್ಲ. ತದನಂತರ ಸಲ್ಲಿಸಿದ ರಾಜೀನಾಮೆ ಕ್ರಮಬದ್ಧವಾಗಿದೆ. ಫೆಬ್ರವರಿಯಲ್ಲಿ ಇಬ್ಬರು ಶಾಸಕರ ಅನರ್ಹತೆ ವಿಚಾರಣೆ ಪ್ರಕ್ರಿಯೆ ಶುರುವಾಗಿದೆ. ಜುಲೈ 6ರಂದು ಶಾಸಕರು ರಾಜೀನಾಮೆ ನೀಡಲು ಹೋದಾಗ ಸ್ಪೀಕರ್ ಕಚೇರಿಯಲ್ಲಿ ಇರಲಿಲ್ಲ. ಶಾಸಕರು ಮೊದಲು ಸ್ಪೀಕರ್ ಬಳಿ ಸಮಯ ಕೇಳಿರಲಿಲ್ಲ. ಅನರ್ಹತೆ ಪ್ರಕರಣ ವಿಚಾರಣೆ ಹಂತದಲ್ಲಿರುವಾಗ ರಾಜೀನಾಮೆ ನೀಡುವುದು ಹೇಗೆ ಸಾಧ್ಯ? ಹಲವು ಅನರ್ಹತೆ ಪ್ರಕರಣಗಳನ್ನು ಪರಿಶೀಲಿಸಿ ತೀರ್ಪು ನೀಡಬೇಕಿದೆ. ಹಾಗಾಗಿ ತಡವಾಗ್ತಿದೆ. ನಾನು ಬಹಳ ಗಟ್ಟಿಯಾಗಿ ಶಾಸಕರು ಅನರ್ಹರಾಗುತ್ತಾರೆಂದು ಹೇಳುತ್ತೇನೆ. ಇವತ್ತಲ್ಲ ನಾಳೆ ಅನರ್ಹತೆ ಆಗಲೇಬೇಕು. ಅನರ್ಹತೆ ತಪ್ಪಿಸಿಕೊಳ್ಳಲು ರಾಜೀನಾಮೆ ಮಾರ್ಗ ಆಗಬಾರದು. ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣವನ್ನು ಸ್ಪೀಕರ್ ಇತ್ಯರ್ಥ ಮಾಡುತ್ತಾರೆ. ಶುಕ್ರವಾರ ನೀಡಿದ್ದ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ವಾಪಸ್ ಪಡೆಯಿರಿ ಎಂದು ಮನವಿ ಮಾಡಿಕೊಂಡರು.
#KarnatakaPolitics: Dr. Singhvi places reliance on Kihoto Hollohan and asks, 'whether all of it should be ignored'.
ಶಾಸಕರ ರಾಜೀನಾಮೆ ಅಂಗೀಕರಿಸುವಂತೆ ಗಡುವು ನೀಡುವಂತಿಲ್ಲ. ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಸುಪ್ರೀಂಕೋರ್ಟ್ ಮಧ್ಯಪ್ರವೇಶ ಮಾಡುವಂತಿಲ್ಲ. 2018 ಮೇ ತಿಂಗಳಲ್ಲಿ ಸರ್ಕಾರ ರಚನೆಯಾದಾಗ ಸ್ಪೀಕರ್ ಗೆ ಸುಪ್ರೀಂ ಯಾವುದೇ ನಿರ್ದೇಶನ ನೀಡಿರಲಿಲ್ಲ. ರಾಜೀನಾಮೆ ವಿಚಾರದಲ್ಲಿ ಬಿಜೆಪಿ ನಾಯಕರ ಪಾತ್ರ ಇದೆ. ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್, ಮಲ್ಲೇಶ್ವರಂ ಶಾಸಕ ಅಶ್ವಥ್ ನಾರಾಯಣ್ ಹೆಸರನ್ನು ಪ್ರಸ್ತಾಪಿಸಿ, ರಾಜೀನಾಮೆ ನೀಡಿರುವ ಶಾಸಕರು ಬಿಜೆಪಿ ನಾಯಕರೊಂದಿಗೆ ಒಡನಾಟ ಹೊಂದಿದ್ದಾರೆ ಎಂದು ಸಿಂಘ್ವಿ ವಾದಿಸಿದರು.
ಸಿಜೆಐ ಪ್ರಶ್ನೆ:
ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ತಡವಾಗಲು ಕಾರಣವೇನು? ರಾಜೀನಾಮೆಯನ್ನು ಸರ್ಕಾರ ತಡೆಯುತ್ತಿದ್ಯಾ? ಮೊದಲು ರಾಜೀನಾಮೆ ಇತ್ಯರ್ಥಪಡಿಸಿ ನಂತರ ಅನರ್ಹತೆಯನ್ನು ತೆಗೆದುಕೊಳ್ಳಿ ಎಂದು ನಮ್ಮ ಕಾರ್ಯವ್ಯಾಪ್ತಿಯನ್ನು ಪ್ರಶ್ನೆ ಮಾಡಬೇಡಿ ಎಂದು ಸಿಜೆಐ ಪ್ರಶ್ನೆ ಮಾಡಿದರು. ಈ ಹಿಂದೆ 24 ಗಂಟೆಯ ಒಳಗಡೆ ವಿಶ್ವಾಸ ಮತಯಾಚನೆ ನಡೆಸಲು ಸೂಚನೆ ನೀಡಿ ಎಂದು ನಾವು ರಾಜ್ಯಪಾಲರಿಗೆ ನೀಡಿದ ಆದೇಶವನ್ನು ನೀವು ಒಪ್ಪಿಕೊಂಡಿದ್ದರೆ ಈಗ ಯಾಕೆ ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಪ್ರಶ್ನೆ ಮಾಡಿದರು.
#KarnatakaPoliticalCrisis: CJI Gogoi asks about Speaker being unavailable for an appointment and eventually MLAs having to come to court.@DrAMSinghvi says that it is factually wrong and Speaker has filed an affidavit to that effect that an appointment was not sought.
ಬೆಳಗ್ಗೆ 10.52ಕ್ಕೆ ವಿಚಾರಣೆ ಆರಂಭಗೊಂಡಿದ್ದು, ಮೊದಲು ರಾಜೀನಾಮೆ ಸಲ್ಲಿಸಿದ ಶಾಸಕರ ಪರವಾಗಿ ಮುಕುಲ್ ರೋಹಟಗಿ ವಾದ ಮಂಡಿಸಿದರು. ಇದಾದ ಬಳಿಕ ಸ್ಪೀಕರ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ವಾದಿಸಿದರು. ದೀರ್ಘ ವಿಚಾರಣೆ ನಡೆಸಿದ ಪೀಠ ಭೋಜನ ವಿರಾಮದ ನಂತರವೂ ವಾದವನ್ನು ಆಲಿಸಲಿದೆ.
ನವದೆಹಲಿ: ಈ ಹಿಂದೆ ವಿಶ್ವಾಸಮತಯಾಚನೆ ನಡೆಸಲು ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ಆದೇಶ ನೀಡಬೇಕೆಂದು ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹಟಗಿ ಸುಪ್ರೀಂ ಕೋರ್ಟಿನಲ್ಲಿ ಮನವಿ ಮಾಡಿದರು.
ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್, ನ್ಯಾ.ದೀಪಕ್ ಗುಪ್ತಾ, ಅನಿರುದ್ಧ ಬೋಸ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು.
ಮೊದಲ ವಾದ ಆರಂಭಿಸಿದ ಮುಕುಲ್ ರೋಹಟಗಿ ಶಾಸಕರು ತಮ್ಮ ಕೈ ಬರಹದಲ್ಲಿ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಉಮೇಶ್ ಜಾಧವ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆ ಅಂಗೀಕಾರಕೊಂಡಿತ್ತು. ಆದರೆ ಈಗ ಸ್ಪೀಕರ್ ರಾಜೀನಾಮೆ ಅಂಗೀಕಾರಕ್ಕೆ ತಡ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.
ರೋಹಟಗಿ ವಾದ ಹೀಗಿತ್ತು:
10 ಶಾಸಕರು ಜುಲೈ 10ರಂದೇ ರಾಜೀನಾಮೆ ನೀಡಿದ್ದಾರೆ. ಆರ್ಟಿಕಲ್ 190 ಮತ್ತು ಶೆಡ್ಯೂಲ್ 10ರ ನಡುವೆ ವ್ಯತ್ಯಾಸ ಇದ್ದು ಸ್ಪೀಕರ್ ನಿರ್ಧಾರವನ್ನು ಕೋರ್ಟ್ ಪ್ರಶ್ನಿಸಬಹುದು. ಅನರ್ಹತೆ ಬಾಕಿ ಇರೋದು ರಾಜೀನಾಮೆ ಸ್ವೀಕಾರಕ್ಕೆ ಅಡ್ಡಿಯಾಗಬಾರದು. ಉಮೇಶ್ ಜಾಧವ್ ಮೇಲೆ ಅನರ್ಹತೆ ದೂರು ಇದ್ದರೂ ರಾಜೀನಾಮೆ ಅಂಗೀಕರಿಸಲಾಗಿತ್ತು. ಅದೇ ರೀತಿ ಎಲ್ಲ ಶಾಸಕರು ರಾಜೀನಾಮೆಯನ್ನು ಅಂಗೀಕರಿಸಬೇಕು. ಈ ವಿಚಾರದಲ್ಲಿ ಸ್ಪೀಕರ್ ದ್ವಂದ್ವ ನೀತಿಯನ್ನು ಹೊಂದಿದ್ದಾರೆ. ಶಾಸಕರು ಅನರ್ಹ ಮಾಡುವಂತಹ ತಪ್ಪು ಏನು ಮಾಡಿದ್ದಾರೆ?
ನನ್ನ ಶಾಸಕರು ಪಕ್ಷ ವಿರೋಧಿ ಚಟುವಟಿಕೆ ಭಾಗಿಯಾಗಿಲ್ಲ. ರಾಜೀನಾಮೆ ನೀಡಿದ ಬಳಿಕ ವಿಪ್ ಜಾರಿಯಾದ್ರೆ ಅನರ್ಹಗೊಳಿಸಲು ಹೇಗೆ ಸಾಧ್ಯ? ಪಕ್ಷಾಂತರ ನಮ್ಮ ಉದ್ದೇಶ ಅಲ್ಲ, ಸರ್ಕಾರದಿಂದ ಹೊರಬರುವುದು ನಮ್ಮ ಉದ್ದೇಶವಾಗಿದೆ. ಶಾಸಕರು ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದೇವೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಡವಿಟ್ ಮೂಲಕವೇ ಹೇಳಿದ್ದಾರೆ. ಹೀಗಿರುವಾಗ ರಾಜೀನಾಮೆ ಅಂಗೀಕಾರಕ್ಕೆ ವಿಳಂಬ ಮಾಡುವುದು ಸರಿಯೇ?
ನಾನು ಅನರ್ಹತೆ ಪ್ರಕರಣ ಕೈ ಬಿಡುವಂತೆ ಹೇಳಿಲ್ಲ. ಇಲ್ಲಿ ರಾಜೀನಾಮೆ ಸಲ್ಲಿಸಿದ ಬಳಿಕ ಅನಹರ್ತತೆಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಆರ್ಟಿಕಲ್ 191/2 ರಾಜೀನಾಮೆ ನೀಡುವುದು ಶಾಸಕರ ಹಕ್ಕು. ಈ ಹಕ್ಕನ್ನು ತಡೆಯಲು ಸ್ಪೀಕರ್ ಅವರಿಗೆ ಸಾಧ್ಯವಿಲ್ಲ. ಶಾಸಕರು ಇಷ್ಟಪಟ್ಟಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ವ ಸ್ವತಂತ್ರರು. ಎಲ್ಲ ಶಾಸಕರು ನಿಯಮಬದ್ಧವಾಗಿಯೇ ರಾಜೀನಾಮೆ ನೀಡಿದ್ದಾರೆ. ಹಾಗಾಗಿ ಈ ಕೂಡಲೇ ಸ್ಪೀಕರ್ ರಾಜೀನಾಮೆಯನ್ನು ಅಂಗೀಕರಿಸಬೇಕು.
ಅನರ್ಹತೆಗೊಳಿಸಲು ಯಾವುದೇ ಕಾರಣ ಇಲ್ಲ. ನಮ್ಮ ಕಕ್ಷಿದಾರರ ಮೇಲೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಆರೋಪವನ್ನು ಹೊರಿಸಲಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೂ ಸದನದ ಹೊರಗಿನ ಸಭೆಯಲ್ಲಿ ಭಾಗಿಯಾಗುತ್ತಿಲ್ಲ. ವಿಧಾನಸಭಾ ಕಲಾಪಕ್ಕೆ ಹಾಜರಾಗುವಂತೆ ಒತ್ತಡ ಹಾಕುವುದು ಸರಿಯೇ?
ಒಂದು ವೇಳೆ ವಿರೋಧ ಪಕ್ಷಗಳ ಜೊತೆ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಕಾಣಿಸಿಕೊಂಡರೆ ಅನರ್ಹತೆ ಪ್ರಶ್ನೆ ಬರುತ್ತದೆ. ಶಾಸಕಾಂಗ ಸಭೆಯಲ್ಲಿ ಭಾಗಿಯಾಗದ ಕಾರಣ ಅನರ್ಹತೆ ದೂರನ್ನು ನೀಡಲಾಗಿದೆ. ಅನರ್ಹತೆ ಮೂಲಕ ನಮ್ಮ ಶಾಸಕರನ್ನು ಬೆದರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರ ಜೊತೆ ವಿಪ್ ಬಳಸಿಕೊಂಡು ನಮ್ಮ ಶಾಸಕರನ್ನು ಸದನಕ್ಕೆ ಬಲವಂತವಾಗಿ ಕರೆತರುವ ಪ್ರಯತ್ನ ಮಾಡಲಾಗುತ್ತಿದೆ. ಅನರ್ಹತೆಯ ಅಸ್ತ್ರದಿಂದ ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತಿದೆ.
Hearing in the matter of rebel Karnataka MLAs: Mukul Rohatgi submitted before SC, "Umesh Jadhav had resigned and his resignation was accepted." pic.twitter.com/aJO3kAX0Qb
ಆರ್ಟಿಕಲ್ 90ರ ಪ್ರಕಾರ ಶಾಸಕರು ಕೈಬರಹದ ರಾಜೀನಾಮೆ ಪತ್ರ ನೀಡಿದಾಗ ಬೇರೆ ವಿಚಾರ ಪ್ರಸ್ತುತವಾಗುವುದಿಲ್ಲ. ಎಲ್ಲರೂ ನಿಯಮಬದ್ಧವಾಗಿಯೇ, ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಒಬ್ಬ ವ್ಯಕ್ತಿಗೆ ರಾಜೀನಾಮೆ ನೀಡಲು ಮಿಲಿಯನ್ ಕಾರಣಗಳಿರುತ್ತವೆ. ಕೆಲವರು ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳಬಹುದು. ಇನ್ನೂ ಕೆಲವರು ಬೇರೆ ವೃತ್ತಿಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಮಧ್ಯಪ್ರದೇಶ, ಗೋವಾ ಸೇರಿ ಹಲವು ರಾಜ್ಯಗಳಲ್ಲಿ ರಾಜೀನಾಮೆ ಶೀಘ್ರ ಅಂಗೀಕಾರವಾಗಿದೆ. ಅನರ್ಹತೆ ಕಾರಣ ನೀಡಿ ಕೇರಳದ ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡಿರಲಿಲ್ಲ. ಕೇರಳ ಮತ್ತು ಕರ್ನಾಟಕ ಪ್ರಕರಣಕ್ಕೂ ಬಹಳಷ್ಟು ಸಾಮ್ಯತೆ ಇದೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ ಎಂಬುದಕ್ಕೆ ಸ್ಪೀಕರ್ ಬಳಿ ಸಾಕ್ಷಿ ಏನಿದೆ? ಕೂಡಲೇ ರಾಜೀನಾಮೆ ಅಂಗೀಕಾರ ಪ್ರಕರಣವನ್ನು ಇತ್ಯರ್ಥಪಡಿಸಬೇಕು. ಅನರ್ಹತೆಯ ಭೀತಿಯ ಕಾರಣದಿಂದ ರಾಜೀನಾಮೆಯನ್ನು ನೀಡಿಲ್ಲ. ನಾವು ನಿಗದಿತ ಸಮಯದಲ್ಲಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ. ಮೈತ್ರಿ ಸರ್ಕಾರ ರಚನೆ ವೇಳೆ ರಾಜ್ಯಪಾಲರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ಅದೇ ರೀತಿ ಸ್ಪೀಕರ್ ಅವರಿಗೂ ಆದೇಶದ ಮೂಲಕ ಸೂಚನೆಯನ್ನು ರವಾನಿಸಬೇಕು.
ರೋಹಟಗಿ ವಾದ ಮಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಮುಖ್ಯ ನ್ಯಾಯಾಮೂರ್ತಿಗಳು, ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ನಾವು ಹಸ್ತಕ್ಷೇಪ ಮಾಡಲು ಬರುವುದಿಲ್ಲ. ರಾಜೀನಾಮೆ ಅಥವಾ ಅನರ್ಹತೆ ಪ್ರಕರಣ ಇತ್ಯರ್ಥ ಮಾಡುವಂತೆ ಸೂಚಿಸಲು ಆಗುವುದಿಲ್ಲ. ಇಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿರಬಹುದು. ಸ್ಪೀಕರ್ ಅವರಿಗೆ ಹೀಗೆ ನಿರ್ಧಾರ ತೆಗೆದುಕೊಳ್ಳಿ ಎಂದು ಹೇಳಲು ನಮಗೆ ಸಾಧ್ಯವಿಲ್ಲ. ಇದು ನನ್ನ ಅಭಿಪ್ರಾಯ ಎಂದು ಹೇಳಿ ವಾದಕ್ಕೆ ಅನುವು ಮಾಡಿಕೊಟ್ಟರು.