Tag: ಅನಿಲ್ ಲಾಡ್

  • ಕನಕಪುರದಲ್ಲಿ ನಾನು ಅಭ್ಯರ್ಥಿಯಲ್ಲ: ಡಿಕೆ ಶಿವಕುಮಾರ್

    ಕನಕಪುರದಲ್ಲಿ ನಾನು ಅಭ್ಯರ್ಥಿಯಲ್ಲ: ಡಿಕೆ ಶಿವಕುಮಾರ್

    ಬೆಂಗಳೂರು: ಕನಕಪುರದಲ್ಲಿ (Kanakapura) ನಾನು ಅಭ್ಯರ್ಥಿ ಅಲ್ಲ. ಇಲ್ಲಿ ಪ್ರತಿಯೊಂದು ಮನೆಯವರೂ ಅಭ್ಯರ್ಥಿಗಳೇ. 40 ವರ್ಷಗಳಿಂದ ನನ್ನನ್ನು ಸಾಕಿದ್ದಾರೆ. 8 ಚುನಾವಣೆಗಳಲ್ಲಿ (Election) ನನಗೆ ಮತಗಳನ್ನು ನೀಡಿದ್ದಾರೆ. ಪ್ರತಿಯೊಂದು ಮನೆಯವರೂ ಅಭ್ಯರ್ಥಿಗಳಾಗಿದ್ದು, ಅವರೇ ಚುನಾವಣೆಯನ್ನು ಮಾಡುತ್ತಾರೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ.

    ನಾಮಪತ್ರ (Nomination Papers) ಸಲ್ಲಿಕೆಗೆ ಇನ್ನೆರಡು ದಿನ ಬಾಕಿಯಿದೆ. ಕಾಂಗ್ರೆಸ್ (Congress) ಅಂತಿಮ ಪಟ್ಟಿ ರಿಲೀಸ್ ಕುರಿತು ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಐದು ಬೆರಳಿದೆ. ಹಾಗಾಗಿ ನಾವು ಐದು ಪಟ್ಟಿ ರಿಲೀಸ್ ಮಾಡುತ್ತೇವೆ. ಬುಧವಾರ ಅಂತಿಮ ಪಟ್ಟಿ ಬಿಡುಗಡೆಯಾಗಲಿದೆ. ಉಳಿದ ಎಂಟು ಕ್ಷೇತ್ರಕ್ಕೂ ಅಂದೇ ಘೋಷಣೆಯಾಗುತ್ತದೆ. ನಾನು ಹುಟ್ಟಿರೋದೆ ಅಮವಾಸ್ಯೆಯಲ್ಲಿ. ದಿನೇಶ್ ಗುಂಡೂರಾವ್ ಹಾಗೂ ರಾಮಕೃಷ್ಣ ಹೆಗಡೆ ಹುಟ್ಟಿದ್ದೂ ಅವಮಾಸ್ಯೆಯಂದೇ. ನಾಮಪತ್ರ ಸಲ್ಲಿಸಲು ಅದೆಲ್ಲಾ ನಮಗೆ ಮ್ಯಾಟರ್ ಆಗಲ್ಲ ಎಂದರು. ಇದನ್ನೂ ಓದಿ: ಕೃಷ್ಣನೂರು ಉಡುಪಿಗೆ ಯಾರು ಅಧಿಪತಿ? ಅಖಾಡ ಹೇಗಿದೆ? ಬಲಾಬಲ ಏನು? 

    ಪುಲಕೇಶಿನಗರದಲ್ಲಿ (Pulakeshinagar) ಟಿಕೆಟ್ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪುಲಕೇಶಿನಗರದಲ್ಲಿ ಹೊಸ ಮುಖಕ್ಕೆ ಪ್ರಾಮುಖ್ಯತೆ ಕೊಡುತ್ತೇವೆ. ಕನಕಪುರದಲ್ಲಿ ಆರ್.ಅಶೋಕ್ (R.Ashok) ನಾಮಪತ್ರ ಸಲ್ಲಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭಹಾರೈಸಿದರು. ಇದನ್ನೂ ಓದಿ: ಯುವ ಕಾಂಗ್ರೆಸ್ ಮುಖ್ಯಸ್ಥ ಬಿವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ – ರಾಹುಲ್ ವಿರುದ್ಧವು ಕಿಡಿಕಾರಿದ ಯುವ ನಾಯಕಿ 

    ಅನಿಲ್ ಲಾಡ್ (Anil Lad) ಪಕ್ಷ ಬಿಡುವ ವಿಚಾರವಾಗಿ ಮಾತನಾಡಿದ ಅವರು, ಗಾಳಿ, ನೀರು, ಬೆಳಕು, ಸೂರ್ಯ ಉದಯಿಸುವುದು ಹಾಗೂ ಕತ್ತಲಾಗುವುದು, ರಾಜಕಾರಣಿಗಳು ಪಕ್ಷ ಬದಲಿಸುವುದು ಎಲ್ಲಾ ಇದ್ದೇ ಇರುತ್ತದೆ. ಇದನ್ನು ಯಾರೂ ತಡೆಯಲಾಗುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ರಾಜ್ಯಕ್ಕೆ ಬರಲಿದ್ದಾರೆ ಮೋದಿ, ಯೋಗಿ – ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಲ್ಲಿ ಯಾರಿದ್ದಾರೆ? 

    ಮಂಡ್ಯದಲ್ಲಿ ಕುಮಾರಸ್ವಾಮಿ (H.D.Kumaraswamy) ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರೇ ಸ್ಪರ್ಧೆ ಮಾಡಿದರೂ ನಾವು ಈಗಾಗಲೇ ನಮ್ಮ ಅಭ್ಯರ್ಥಿಗೆ ಬಿ ಫಾರಂ ಕೊಟ್ಟಿದ್ದೇವೆ. ಅವರೇ ಸ್ಪರ್ಧೆ ಮಾಡಲಿದ್ದಾರೆ. ಕುಮಾರಸ್ವಾಮಿ ಎದುರು ಅಭ್ಯರ್ಥಿ ಬದಲಾವಣೆ ಊಹಾಪೋಹ. ಈಗಿರುವ ಅಭ್ಯರ್ಥಿಯೇ ಮುಂದುವರೆಯಲಿದ್ದಾರೆ. ಅಲ್ಲದೇ ಚಿಕ್ಕಮಗಳೂರಿನಲ್ಲಿ (Chikkamagaluru) ಬಿಜೆಪಿಯವರೇ (BJP) ಹೆಚ್‌.ಡಿ.ತಮ್ಮಯ್ಯನವರಿಗೆ (H.D.Thammaiah) ಟಿಕೆಟ್ ಕೊಡಬೇಕು ಎಂದು ಒತ್ತಾಯ ಮಾಡಿದರು. ಅವರೆಲ್ಲರ ಒತ್ತಾಯದ ಮೇರೆಗೆ ತಮ್ಮಯ್ಯನವರಿಗೆ ಟಿಕೆಟ್ ನೀಡಲಾಗಿದೆ ಎಂದರು. ಇದನ್ನೂ ಓದಿ: ಟಿವಿಯವರು ಮುಖ, ಲೋಗೋ ತೋರ್ಸೋವರ್ಗೂ ಕೆಳಗಿಳಿಯಲ್ಲ – ಟಿಕೆಟ್ ಸಿಗದ್ದಕ್ಕೆ ಟವರ್ ಏರಿ ವೀಡಿಯೋ ಮಾಡಿದ ಬಿಜೆಪಿ ಕಾರ್ಯಕರ್ತ

  • ಸಿದ್ದರಾಮಯ್ಯ, ಅನಿಲ್ ಲಾಡ್ ವಿರುದ್ಧ ದೂರು ದಾಖಲು

    ಸಿದ್ದರಾಮಯ್ಯ, ಅನಿಲ್ ಲಾಡ್ ವಿರುದ್ಧ ದೂರು ದಾಖಲು

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ರಾಜ್ಯ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ.

    ಇತ್ತೀಚೆಗೆ ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್, ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಹೇಳಿದ್ದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಲ್ಲದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಲವು ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.

    ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಮತ್ತು ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • ಅಧ್ಯಕ್ಷರೇ ಮಿಸ್ಡ್ ಕಾಲ್ ಮಾಡಿ ಪಕ್ಷಕ್ಕೆ ಸೇರಿ ಎಂದಿದ್ದಾರೆ, ಯಾರು ಬೇಕಾದ್ರೂ ಸೇರಬಹುದು – ಮಾಧುಸ್ವಾಮಿ

    ಅಧ್ಯಕ್ಷರೇ ಮಿಸ್ಡ್ ಕಾಲ್ ಮಾಡಿ ಪಕ್ಷಕ್ಕೆ ಸೇರಿ ಎಂದಿದ್ದಾರೆ, ಯಾರು ಬೇಕಾದ್ರೂ ಸೇರಬಹುದು – ಮಾಧುಸ್ವಾಮಿ

    – ಅನಿಲ್ ಲಾಡ್ ಸಹ ಪಕ್ಷ ಸೇರಬಹುದು

    ಹಾಸನ: ಯಾರು ಬೇಕಾದರೂ ನಮ್ಮ ಪಕ್ಷಕ್ಕೆ ಸೇರಬಹುದು, ನಮ್ಮ ಅಧ್ಯಕ್ಷರೇ ಮಿಸ್ಡ್ ಕಾಲ್ ಮಾಡಿ ಪಕ್ಷಕ್ಕೆ ಸೇರಿ ಎಂದು ಹೇಳಿದ್ದಾರೆ. ರಾಜಕೀಯ ಪಕ್ಷ ನಮಗೇನು ಮಡಿವಂತಿಕೆ ಇಲ್ಲ. ಹೀಗಾಗಿ ಅನಿಲ್ ಲಾಡ್ ಸಹ ಪಕ್ಷಕ್ಕೆ ಸೇರಬಹುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿಲ್ ಲಾಡ್ ಬಿಜೆಪಿ ಸೇರ್ಪಡೆಯಿಂದ ಬಳ್ಳಾರಿಯಲ್ಲಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ. ಅಲ್ಲದೆ, ಮಿಸ್ಡ್ ಕಾಲ್ ನೀಡುವ ಮೂಲಕ ಯಾರೂ ಬೇಕಾದರೂ ಬಿಜೆಪಿ ಸದಸ್ಯತ್ವ ಪಡೆಯಬಹುದು ಎಂದು ಈಗಾಗಲೇ ಅಧ್ಯಕ್ಷರೇ ತಿಳಿಸಿದ್ದಾರೆ. ನಮ್ಮ ನಾಯಕರು ದೊಡ್ಡ ಘೋಷಣೆ ಮಾಡಿಬಿಟ್ಟಿದ್ದಾರೆ. ಅನಿಲ್ ಲಾಡ್ ಸೇರಿದಂತೆ ಯಾರು ಬೇಕಾದರೂ ಬರಬಹುದು ಎಂದು ಆಹ್ವಾನಿಸಿದರು.

    ರಾಜಕೀಯ ಪಕ್ಷ ನಮಗೇನು ಮಡಿವಂತಿಕೆ ಇಲ್ಲ. ಬಿಜೆಪಿ ಕೇಡರ್ ಬೇಸ್ ಪಕ್ಷ, ಸಂಘಟನೆಯಿಂದ ಬೆಳೆದು ಬಂದಿರುವ ಪಕ್ಷ. ನಾವೇ ಇದ್ದರೂ ಪಕ್ಷ ಚೆನ್ನಾಗಿರುತ್ತೆ, ಯಾರು ಬಂದರೂ ಪಕ್ಷ ಚೆನ್ನಾಗಿರುತ್ತದೆ. ಬರುವುದರಿಂದ, ಹೋಗುವುದರಿಂದ ಸಂಘಟನೆಯಲ್ಲಿ ವ್ಯತ್ಯಾಸ ಆಗುತ್ತದೆ ಎಂದು ನಾನು ಭಾವಿಸಿಲ್ಲ ಎಂದು ವಿವರಿಸಿದರು.

    ಆಯೋಗ ಘೋಷಣೆ ಮಾಡಿದಾಗ ಉಪಚುನಾವಣೆ ನಡೆಯುತ್ತವೆ. ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎನ್ನುವ ಭರವಸೆ ಇದೆ. ಹಾಸನ ನೂತನ ಕೋರ್ಟ್ ಕಟ್ಟಡದ ಉಳಿದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ಉದ್ಘಾಟನೆ ಮಾಡುತ್ತೇವೆ. ಕೋರ್ಟ್ ಉದ್ಘಾಟನೆ ರಾಜಕೀಯ ಕಾರಣಕ್ಕೆ ನಿಂತಿಲ್ಲ. ಬಿಜೆಪಿ ವರ್ಸಸ್ ಜೆಡಿಎಸ್ ರಾಜಕೀಯ ಏನಿಲ್ಲ ಎಂದು ಸ್ಪಷ್ಟಪಡಿಸಿದರು.

    ಫೋನ್ ಟ್ಯಾಪಿಂಗ್ ಕುರಿತು ಪ್ರತಿಕ್ರಿಯಿಸಿದ ಅವರು, ತನಿಖೆ ನಡೆಯುತ್ತಿರುವಾಗ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಅಲೋಕ್ ಕುಮಾರ್ ವಿಚಾರಣೆ ಇನ್ನೂ ಮುಗಿದಿಲ್ಲ. ಈ ಮಧ್ಯೆ ನಾವು ಕಾಲ್ಪನಿಕವಾಗಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಹೇಳಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

  • ‘ಕೈ’ ಬಿಟ್ಟು ‘ಕಮಲ’ ಹಿಡಿಯಲು ಅನಿಲ್ ಲಾಡ್ ಸಿದ್ಧ?

    ‘ಕೈ’ ಬಿಟ್ಟು ‘ಕಮಲ’ ಹಿಡಿಯಲು ಅನಿಲ್ ಲಾಡ್ ಸಿದ್ಧ?

    ಬಳ್ಳಾರಿ: ಮಾಜಿ ಕಾಂಗ್ರೆಸ್ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರಲು ಚಿಂತನೆ ನಡೆಸಿದ್ದಾರೆ. ಈ ಕುರಿತು ತಮ್ಮ ಕಾರ್ಯಕರ್ತರಿಗೆ ಮೆಸೇಜ್ ಕಳುಹಿಸಿ ಅನಿಲ್ ಲಾಡ್ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದ್ದಾರೆ.

    ಬಳ್ಳಾರಿ ಬ್ರೂಸ್ ಪೇಟರ್ ಬ್ಲಾಕ್ ಕಾಂಗ್ರೆಸ್ ಎಂಬ ವಾಟ್ಸಪ್ ಗ್ರೂಪ್ ಗೆ ಅನಿಲ್ ಲಾಡ್ ಸಂದೇಶ ಕಳುಹಿಸಿ ಕಾರ್ಯಕರ್ತರ ಅಭಿಪ್ರಾಯ ಕೇಳಿದ್ದಾರೆ. ಹಲೋ ಗೆಳೆಯರೇ, ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಕುರಿತು ಚಿಂತಿಸುತ್ತಿದ್ದೇನೆ. ನಿಮ್ಮ ಅಭಿಪ್ರಾಯವನ್ನು ಕಮೆಂಟ್ ಮೂಲಕ ತಿಳಿಸಿ ಎಂಬ ಸಂದೇಶ ಕಳುಹಿಸಿದ್ದಾರೆ. ಬಹುತೇಕ ಕಾರ್ಯಕರ್ತರು ಬಿಜೆಪಿ ಸೇರೋದು ಬೇಡ ಎಂದ್ರೆ ಬಳ್ಳಾರಿಯ ಹಿತದೃಷ್ಟಿಯಿಂದ ಸೇರಬಹುದು. ಆಯ್ಕೆಗಳು ನಿಮ್ಮ ಮುಂದಿವೆ ಎಂದು ಪ್ರತಿಕ್ರಿಯಿಸಿದ್ದಾರೆ. ಅನಿಲ್ ಲಾಡ್ ಅವರದ್ದು ಎನ್ನಲಾದ ಸಂದೇಶದ ಸ್ಕ್ರೀನ್ ಶಾಟ್ ಗಳು ಬಳ್ಳಾರಿ ಕೈ ಅಂಗಳದಲ್ಲಿ ಮಿಂಚಿನಂತೆ ಹರಿದಾಡುತ್ತಿವೆ.

    ಅಕ್ಟೋಬರ್ 6ರಂದು ಅನಿಲ್ ಲಾಡ್ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದ್ದು, ಇದೂವರೆಗೂ ಮಾಜಿ ಶಾಸಕರು ಅಧಿಕೃತವಾಗಿ ವಿಷಯವನ್ನು ತಿಳಿಸಿಲ್ಲ. ಹೊಸಪೇಟೆಯ ಅನರ್ಹ ಶಾಸಕ ಆನಂದ್ ಸಿಂಗ್ ಮೂಲಕ ಸ್ಥಳೀಯ ಕೈ ಶಾಸಕರನ್ನು ಸೆಳೆಯಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

  • 15 ಕೋಟಿ ರೂ. ವಾಪಸ್ ಕೇಳಿದ್ದಕ್ಕೆ ಉದ್ಯಮಿಯಿಂದ ಅನಿಲ್ ಲಾಡ್‍ಗೆ ಜೀವ ಬೆದರಿಕೆ

    15 ಕೋಟಿ ರೂ. ವಾಪಸ್ ಕೇಳಿದ್ದಕ್ಕೆ ಉದ್ಯಮಿಯಿಂದ ಅನಿಲ್ ಲಾಡ್‍ಗೆ ಜೀವ ಬೆದರಿಕೆ

    ಬೆಂಗಳೂರು: ಬಳ್ಳಾರಿಯಲ್ಲಿ ಗಣಿಗಾರಿಕೆ ವಿಚಾರಕ್ಕೆ ನೀಡಿದ್ದ ಹಣವನ್ನು ಕೇಳಿದ್ದಕ್ಕೆ ಉದ್ಯಮಿಯೊಬ್ಬರು ಮಾಜಿ ಶಾಸಕ ಅನಿಲ್ ಲಾಡ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ.

    ಉದ್ಯಮಿ ಆರ್.ಶಿವಕುಮಾರ್ ನಿಂದ ಮಾಜಿ ಶಾಸಕ ಅನಿಲ್ ಲಾಡ್ ಗೆ ಜೀವ ಬೆದರಿಕೆ ಬಂದಿದೆ. ಹಣ ನೀಡದೆ ಸತಾಯಿಸಿ ಮತ್ತೊಮ್ಮೆ ಬಂದರೆ ಮರ್ಡರ್ ಮಾಡುವುದಾಗಿ ಶಿವಕುಮಾರ್ ಬೆದರಿಕೆ ಹಾಕಿದ್ದಾರೆ. ಈ ಕುರಿತು ಶಾಸಕರು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಏನಿದು ಪ್ರಕರಣ?:
    ಬಳ್ಳಾರಿ ಗಣಿಗಾರಿಕೆ ವಿಚಾರವಾಗಿ ಅನಿಲ್ ಲಾಡ್ ಮತ್ತು ಉದ್ಯಮಿ ಶಿವಕುಮಾರ್ ನಡುವೆ ಒಪ್ಪಂದವಾಗಿತ್ತು. ಅದರಂತೆ ಗಣಿಗಾರಿಕೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅನುಮತಿ ಸಿಕ್ಕ ಬಳಿಕ ಮಾರಾಟ ಮಾಡಲು ನಿರ್ಧರಿಸಲಾಗಿತ್ತು. ಹೀಗಾಗಿ ಅನಿಲ್ ಲಾಡ್ ಅವರು ಗಣಿಗಾರಿಕೆ ಕೆಲಸಕ್ಕೆ ಸುಮಾರು 15 ಕೋಟಿ ರೂ. ಮುಂಗಡವಾಗಿ ನೀಡಿದ್ದರು. ಒಂದು ವೇಳೆ ಗಣಿಗಾರಿಕೆಗೆ ಅನುಮತಿ ಸಿಗದಿದ್ದರೆ ಹಣ ವಾಪಾಸ್ ಕೊಡಬೇಕೆಂದು ಇಬ್ಬರು ಒಪ್ಪಂದ ಮಾಡಿಕೊಂಡಿದ್ದರು.

    ಈ ನಡುವೆ ನನ್ನ ಹಣ ಮರಳಿ ಕೊಡಿ ಅಂತ ಅನಿಲ್ ಲಾಡ್ ಅವರು ಶಿವಕುಮಾರ್ ನನ್ನು ಕೇಳಿದ್ದಾರೆ. ಆದರೆ ಇದಕ್ಕೆ ಒಪ್ಪದ ಶಿವಕುಮಾರ್ ಹಣ ನೀಡದೆ ಸತಾಯಿಸಿ ಮತ್ತೊಮ್ಮೆ ಬಂದರೆ ಮರ್ಡರ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಷ್ಟೇ ಅಲ್ಲದೇ ಬಾಂಬೆಯಿಂದ ಸುಪಾರಿ ಕೊಟ್ಟು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಒಡ್ಡಿದ್ದಾರೆ. ಇದರಿಂದಾಗಿ ಶಾಸಕ ಅನಿಲ್ ಲಾಡ್, ಉದ್ಯಮಿ ಶಿವಕುಮಾರ್ ವಿರುದ್ಧ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಸೋಲಿಗೆ ಕೈ ನಾಯಕರೇ ಕಾರಣ- ಅನಿಲ್ ಲಾಡ್

    ಕಾಂಗ್ರೆಸ್ ಸೋಲಿಗೆ ಕೈ ನಾಯಕರೇ ಕಾರಣ- ಅನಿಲ್ ಲಾಡ್

    – ಸಿದ್ದರಾಮಯ್ಯ ವಿರಾಟ್ ಕೊಹ್ಲಿ ಇದ್ದಂಗೆ: ಉಗ್ರಪ್ಪ

    ಬಳ್ಳಾರಿ: ಕಾಂಗ್ರೆಸ್ ಭದ್ರಕೋಟೆ ಬಳ್ಳಾರಿ ಕ್ಷೇತ್ರದಲ್ಲಿ ಉಪಚುನಾವಣೆ ಭಾರೀ ರಂಗೇರುತ್ತಿದ್ದು, ಮಾಜಿ ಶಾಸಕ ಅನಿಲ್ ಲಾಡ್ ಸ್ವಪಕ್ಷೀಯರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ನಾನು ಸೋತಿರಬಹುದು, ನನ್ನ ಸೋಲಿಗೆ ಬೇರೆ ಯಾರು ಕಾರಣರಲ್ಲ ಸ್ವ ಪಕ್ಷದವರೇ ಕಾರಣ ಎಂದು ಅನಿಲ್ ಲಾಡ್ ಆರೋಪಿಸಿದ್ದಾರೆ.

    ಸಂಡೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವ ಬೃಹತ್ ಸಮಾವೇಶ ಮಾತನಾಡಿದ ಅವರು, ಕರುಣಾಕರ ರೆಡ್ಡಿ ಹಾಗೂ ಶಾಸಕ ಶ್ರೀರಾಮುಲು ಅವರು ಬಳ್ಳಾರಿಯ ಪ್ರದೇಶವನ್ನು ಕಬಳಿಸಿದ್ದಾರೆ. ಕೊನೆಗೆ ಇಬ್ಬರೂ ಪರಸ್ಪರ ದೂರು ದಾಖಲಿಸಿ, ಅರೆಸ್ಟ್ ವಾರೆಂಟ್ ಕೊಟ್ಟುಕೊಂಡಿದ್ದಾರೆ ಎಂದು ಹೇಳಿದರು.

    ನಮ್ಮ ಕುಟುಂಬ ಸುಮಾರು 50 ವರ್ಷದಿಂದ ಮೈನಿಂಗ್ ಮಾಡಿಕೊಂಡು ಬಂದಿದೆ. ರೆಡ್ಡಿ ಹಾಗೂ ಶ್ರೀರಾಮುಲು ಅವರಿಗೆ ಮೈನಿಂಗ್ ಮಾಡುವುದನ್ನು ಹೇಳಿದ್ದೇ ನಾನು. ಒಂದು ವೇಳೆ ನಾನಿಲ್ಲದಿದ್ದರೆ ಓಬಳಾಪುರಂ ಸೇರಿದಂತೆ ಯಾವುದೇ ಮೈನಿಂಗ್ ಪ್ರದೇಶ ಇರುತ್ತಿರಲಿಲ್ಲ. ಜನಾರ್ದನ ರೆಡ್ಡಿ ಬಂದರೆ ಏನಾಗುತ್ತದೆ? ಭೂಕಂಪ ಆಗುತ್ತದಾ ಎಂದು ಪ್ರಶ್ನಿಸಿ ವ್ಯಂಗ್ಯವಾಡಿದರು.

    ಜನಾರ್ದನ ರೆಡ್ಡಿ ಬಂದರೆ ಯಾವುದೇ ಪರಿಣಾಮ ಬೀರಲ್ಲ. ಅವರು ಮನೆ ಮಾಡಿಕೊಂಡು ಇದ್ದ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡಿ ಬಂದಿರುವೆ. ಅವರು ನನ್ನ ಏನು ಪ್ರಾಣ ತೆಗೆದರಾ? ಇಲ್ಲಾ ತಾನೇ, ಯಾರು ಬಂದರು ಏನು ಆಗಲ್ಲ ಎಂದು ಲೇವಡಿ ಮಾಡಿದರು.

    ವಿರಾಟ್ ಕೊಹ್ಲಿಯಂತೆ ಸಿದ್ದರಾಮಯ್ಯ ಒಳ್ಳೆ ಬ್ಯಾಟ್ಸ್‍ಮನ್. ಅವರು ಚೆನ್ನಾಗಿ ಬ್ಯಾಟ್ ಮಾಡುತ್ತಾರೆ ಎಂದು ಬಳ್ಳಾರಿ ಉಪಚುನಾವಣೆ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಮಾಜಿ ಸಿಎಂ ಅವರನ್ನು ಹೊಗಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಖಾಸಗಿ ಹೋಟೆಲ್‍ನಲ್ಲಿ ಸಚಿವ ಸಂತೋಷ್ ಲಾಡ್-ಜನಾರ್ದನ ರೆಡ್ಡಿ ಭೇಟಿಗೆ ಅನಿಲ್ ಲಾಡ್ ಸ್ಪಷ್ಟನೆ

    ಖಾಸಗಿ ಹೋಟೆಲ್‍ನಲ್ಲಿ ಸಚಿವ ಸಂತೋಷ್ ಲಾಡ್-ಜನಾರ್ದನ ರೆಡ್ಡಿ ಭೇಟಿಗೆ ಅನಿಲ್ ಲಾಡ್ ಸ್ಪಷ್ಟನೆ

    ನವದೆಹಲಿ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಸ್ಪಷ್ಟನೆ ನಿಡಿದ್ದಾರೆ.

    ನಗರದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅನಿಲ್ ಲಾಡ್, ಸಂತೋಷ್ ಲಾಡ್ ಹಾಗೂ ಜನಾರ್ದನ ರೆಡ್ಡಿ ಭೇಟಿಯಾಗಿದ್ದು ನಿಜ ಅಂತ ಹೇಳಿದ್ದಾರೆ. ಅವರಿಬ್ಬರೂ ಹೋಟೆಲ್ ತಾಜ್ ನಲ್ಲಿ ಅಕಸ್ಮಾತ್ ಆಗಿ ಭೇಟಿಯಾಗಿದ್ದಾರೆ. ಹೀಗಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಅದು ಬಿಟ್ಟು ಜನಾರ್ದನ ರೆಡ್ಡಿ ಕಾಂಗ್ರೆಸ್ ಸೇರೋದು ಊಹಾಪೋಹದ ಸುದ್ದಿಯಾಗಿದೆ ಅಂತ ಹೇಳಿದ್ರು.

    ಜನಾರ್ದನ ರೆಡ್ಡಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬ ಅಮಿತ್ ಶಾ ಹೇಳಿಕೆಯಿಂದ ಬೇಸರವಾಗಿರಬಹುದು. ರಾಮುಲು ಅವರಿಗೂ ಕ್ಷೇತ್ರ ಬದಲಾಯಿಸಿದ್ದು ಬೇಸರವಿದೆ. 2ನೇ ಲಿಸ್ಟ್ ನಲ್ಲಿ ಗೊಂದಲವಾಗಿರಬೇಕು. ಹೀಗಾಗಿ ರೆಡ್ಡಿಯವರು ಕಾಂಗ್ರೆಸ್ ಗೆ ಹೋಗ್ತೀನಿ ಅಂತ ಬಿಜೆಪಿಯವರನ್ನು ಹೆದರಿಸುತ್ತಿದ್ದಾರೋ ಗೊತ್ತಿಲ್ಲ. ರೆಡ್ಡಿ ಕಾಂಗ್ರೆಸ್ ಸೇರ್ಪಡೆ ಹೈಕಮಾಂಡ್ ಗೆ ಬಿಟ್ಟಿದ್ದು. ಹಾಗೆಯೇ ಕಾಂಗ್ರೆಸ್ ಹಿರಿಯರು ನಿರ್ಧರಿಸುತ್ತಾರೆ ಅಂತ ಅವರು ಹೇಳಿದ್ದಾರೆ.

    ನಮಗೂ ರೆಡ್ಡಿಗೂ ಸಂಬಂಧವಿಲ್ಲ. ನಾವು ರೆಡ್ಡಿ ಹಾಗೂ ಶ್ರೀರಾಮುಲು ವಿರುದ್ಧ ಪಾದಯಾತ್ರೆಯಿಂದ ಹಿಡಿದು ಇದೂವರೆಗೂ ಅವರ ವಿರುದ್ಧವೇ ಇದ್ದೀವಿ. ಆದ್ರೆ ಬಿಜೆಪಿ ಒಬ್ರು ನಾಯಕರು ಕೂಡ ರೆಡ್ಡಿ ಬಗ್ಗೆ ಚಕಾರವೇ ಎತ್ತಿಲ್ಲ. ಅಮಿತ್ ಶಾ ಹೇಳಿದ್ರು ರೆಡ್ಡಿಗೂ ನಮಗೂ ಸಂಬಂಧವಿಲ್ಲ ಅಂತ. ಆದ್ರೆ ಅದೇ ವೇದಿಕೆಯಲ್ಲಿ ಕುಳಿತ ಅನಂತ್ ಕುಮಾರ್ ಅವರು ನಮಗೂ ಅವರಿಗೂ ಸಂಬಂಧವಿಲ್ಲ ಅಂತ ಹೇಳಿಲ್ಲ. ಹೀಗಾಗಿ ರೆಡ್ಡಿಯವರು ಪಕ್ಷದಲ್ಲಿದ್ದಾರಾ ಇಲ್ವಾ ಎಂಬುದಕ್ಕೆ ಅವರು ಉತ್ತರ ನೀಡಬೇಕು. ರೆಡ್ಡಿಯವರು 6 ಜಿಲ್ಲೆಯ ಉಸ್ತುವಾರಿಯನ್ನು ನಮಗೆ ನೀಡ್ತಾರೆ ಅಂತ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಇದೀಗ ಅವರಿಗೇ ಟಿಕೆಟ್ ಸಿಗುತ್ತಾ ಇಲ್ವಾ ಎಂಬುದನ್ನು ಕಾದುನೋಡಬೇಕು ಅಂತ ಅವರು ಹೇಳಿದ್ರು.

    ಸಚಿವ ಸಂತೋಷ್ ಲಾಡ್ ಅವರನ್ನು ಶ್ರೀರಾಮುಲು ಮತ್ತು ಜನಾರ್ದನ್ ರೆಡ್ಡಿ ಅವರು ಸೋಮವಾರ ಮಧ್ಯಾಹ್ನ ಹೋಟೆಲ್ ತಾಜ್‍ನಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ವದಂತಿಗಳು ಹರಡಿದ್ದು, ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ.

    ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಒಂದು ಕಾಲದ ಆಪ್ತ ಗೆಳೆಯಾಗಿದ್ದು, ಹೀಗಾಗಿ ಈ ಹಿಂದೆ ಅನಿಲ್ ಲಾಡ್ ಜೆಡಿಎಸ್ ಗೆ ಸೇರುತ್ತಾರೆ ಎಂಬ ವದಂತಿಯೂ ಹಬ್ಬಿತ್ತು.

  • ಬಳ್ಳಾರಿ ರಾಜಕಾರಣದಲ್ಲಿ ಶುರುವಾಗುತ್ತಾ ಜೆಡಿಎಸ್ ಪರ್ವ?

    ಬಳ್ಳಾರಿ ರಾಜಕಾರಣದಲ್ಲಿ ಶುರುವಾಗುತ್ತಾ ಜೆಡಿಎಸ್ ಪರ್ವ?

    ಬಳ್ಳಾರಿ: ಗಡಿನಾಡು ಬಳ್ಳಾರಿ ರಾಜಕಾರಣದಲ್ಲಿ ಮತ್ತೆ ಜೆಡಿಎಸ್ ಪರ್ವ ಆರಂಭವಾಗುತ್ತಿದೆ ಎಂಬ ಮಾತುಗಳು ರಾಜಕೀಯ ಪಾಳಯದಿಂದ ಕೇಳಿ ಬರುತ್ತಿವೆ.

    ಬಿಜೆಪಿಯಿಂದ ದಿನೇ ದಿನೇ ದೂರವಾಗುತ್ತಿರುವ ಶಾಸಕ ಆನಂದ್ ಸಿಂಗ್ ಹಾಗು ಕಾಂಗ್ರೆಸ್‍ನಿಂದ ಕಾಣೆಯಾಗುತ್ತಿರುವ ಅನಿಲ್ ಲಾಡ್ ಇಬ್ಬರು ಕೂಡ ಜೆಡಿಎಸ್‍ನತ್ತ ಮುಖ ಮಾಡಿದ್ದಾರೆ. ಆನಂದ್ ಸಿಂಗ್ ಮತ್ತು ಅನಿಲ್ ಲಾಡ್ ಈಗಾಗಲೇ ಜೆಡಿಎಸ್ ವರಿಷ್ಠರೊಂದಿಗೆ ಒಂದು ಸುತ್ತಿನ ಮಾತುಕತೆಯನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಾತುಕತೆಯ ಬಳಿಕ ಜೆಡಿಎಸ್ ವರಿಷ್ಠರು ಸದ್ಯದಲ್ಲೇ ತಮ್ಮ ತೀರ್ಮಾನ ಪ್ರಕಟಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನ ಅನಿಲ್ ಲಾಡ್ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಒಂದು ಕಾಲದ ಆಪ್ತಗೆಳೆಯರು ಎಂಬುದನ್ನು ಮರೆಯುವಂತಿಲ್ಲ.

  • ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ !

    ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ !

    ಬಳ್ಳಾರಿ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಳ್ಳಾರಿ ನಗರ ಶಾಸಕ ಅನಿಲ್ ಲಾಡ್ ಗೆ ಎಸ್‍ಐಟಿ ಶಾಕ್ ನೀಡಿದೆ.

    ಅಕ್ರಮವಾಗಿ ಅದಿರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಭದಿಸಿದಂತೆ ಎಸ್‍ಐಟಿ, ಶಾಸಕ ಅನಿಲ್ ಲಾಡ್ ವಿರುದ್ಧ ಎಫ್ ಐಆರ್ ದಾಖಲಿಸಿದೆ. 2010ರಿಂದ 2 ವರ್ಷಗಳ ಕಾಲ ಪರವಾನಿಗೆ ಪಡಿಯದೇ 82 ಸಾವಿರ ಮೆಟ್ರಿಕ್ ಟನ್ ಅದಿರು ಸಾಗಾಟ ಮಾಡಿದ ಪ್ರಕರಣಕ್ಕೆ ಸಂಭದಿಸಿದಂತೆ ಎಫ್‍ಐಆರ್ ದಾಖಲಿಸಲಾಗಿದೆ.

    ಶಾಸಕ ಅನಿಲ್ ಲಾಡ್ ಕೆನರಾ ಮಿನರಲ್ಸ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೇಳೆ 82,275 ಮೆಟ್ರಿಕ್ ಟನ್ ಅದಿರನ್ನು ಅಕ್ರಮವಾಗಿ ಸಾಗಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ 12.30 ಕೋಟಿ ರೂ, ನಷ್ಟವುಂಟು ಮಾಡಿದ ಆರೋಪದ ಮೇರೆಗೆ ಎಫ್‍ಐಆರ್ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.

    ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಕಾಂಗ್ರೆಸ್ ಶಾಸಕರ ವಿರುದ್ಧವೇ ಇದೀಗ ಎಸ್‍ಐಟಿ ಎಫ್‍ಐಆರ್ ದಾಖಲಿಸಿರುವುದು ಸರ್ಕಾರಕ್ಕೆ ಮುಜುಗರ ತಂದಿಟ್ಟಿದೆ.