Tag: ಅನಿವಾಸಿ ಕನ್ನಡಿಗರು

  • ಮತದಾನ ಮಾಡಲು ಅವಕಾಶ ನೀಡಿ – ಅನಿವಾಸಿ ಕನ್ನಡಿಗರಿಂದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ

    ಮತದಾನ ಮಾಡಲು ಅವಕಾಶ ನೀಡಿ – ಅನಿವಾಸಿ ಕನ್ನಡಿಗರಿಂದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ

    ಬೆಂಗಳೂರು: ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಯನ್ನು (Election) ಘೋಷಿಸಿದ್ದು, ಅನಿವಾಸಿ ಕನ್ನಡಿಗರು (Non Resident Kannadigas) ತಾವಿರುವ ಸ್ಥಳದಲ್ಲಿಯೇ ಮತದಾನ (Voting) ಮಾಡಲು ಅವಕಾಶ ಕಲ್ಪಿಸಿ ಕೊಡುವಂತೆ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (Chief Electoral Officer) ಮನವಿ ಮಾಡಿದ್ದಾರೆ.

    ಕರ್ನಾಟಕದ (Karnataka) ಅನೇಕ ಕನ್ನಡಿಗರು ಕೆಲಸದ ಸಲುವಾಗಿ ದೇಶ- ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅನಿವಾಸಿ ಕನ್ನಡಿಗರಿಗೆ ಬರಲು ಅಸಾಧ್ಯ. ಆದ್ದರಿಂದ ಅಂಚೆ ಮತದಾನ (Postal Voting) ಅಥವಾ ಭಾರತೀಯ ರಾಯಭಾರಿ ಕಚೇರಿಯಲ್ಲಿ (Indian Embassy) ಮತಗಟ್ಟೆ (Polling Booth) ತೆರೆಯುವ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ಸಾಗರೋತ್ತರ ಕನ್ನಡಿಗರು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದು, ಡಿಕೆಶಿ ಫೈಟ್‌ನಲ್ಲಿ ಗೆದ್ದ ಪರಮೇಶ್ವರ್‌! 

    ಅಲ್ಲದೇ ಚುನಾವಣಾ ಆಯೋಗವು ಧ್ವಜಾಧಾರಿ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಗಳ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಪ್ರಜಾಸತ್ತಾತ್ಮಕ ಪ್ರಗತಿಯನ್ನು ಬಲಪಡಿಸುವ ನಿಮ್ಮ ಕೆಲಸವನ್ನು ಶ್ಲಾಘಿಸುತ್ತೇವೆ ಎಂದು ಮನವಿ ಪತ್ರದ ಮೂಲಕ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ – ಈಶ್ವರಪ್ಪಗೆ ಹೈಕಮಾಂಡ್‌ ಶಾಕ್‌ 

    ಸುಮಾರು 60 ಲಕ್ಷ ಭಾರತೀಯರು ವಿದೇಶದಲ್ಲಿ ವಾಸಿಸುತ್ತಿದ್ದು, ಇವರ ಮತದಾನದಿಂದ ಪ್ರಜಾಪ್ರಭುತ್ವದಲ್ಲಿ (Democracy) ಮಹತ್ವದ ಬದಲಾವಣೆ ತರಬಹುದು. ಅಲ್ಲದೇ 5 ಲಕ್ಷ ಅನಿವಾಸಿ ಕನ್ನಡಿಗರು ಮತದಾನ ಮಾಡಲು ಅರ್ಹರಾಗಿದ್ದಾರೆ. ಈ ಕುರಿತು ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಮತದಾನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗಿಂತ ಪತ್ನಿಯೇ ಹೆಚ್ಚು ಶ್ರೀಮಂತೆ – ಆಸ್ತಿ ಎಷ್ಟಿದೆ ಗೊತ್ತಾ?

  • ದುಬೈ ಅನಿವಾಸಿ ಕನ್ನಡಿಗರ ಪರಿಶ್ರಮ – ಉತ್ತರ ಪ್ರದೇಶದ ಪ್ರಸಾದ್ ತಾಯ್ನಾಡಿಗೆ

    ದುಬೈ ಅನಿವಾಸಿ ಕನ್ನಡಿಗರ ಪರಿಶ್ರಮ – ಉತ್ತರ ಪ್ರದೇಶದ ಪ್ರಸಾದ್ ತಾಯ್ನಾಡಿಗೆ

    ದುಬೈ: ಯುಎಇಯಲ್ಲಿ ಸಂಕಷ್ಟದಲ್ಲಿದ್ದ ಉತ್ತರ ಪ್ರದೇಶದ ಗೋರಕ್ ಪುರದ ನಿವಾಸಿ ಚಂಗೂರ್ ಪ್ರಸಾದ್ ನನ್ನು ಭಾರತೀಯ ರಾಯಭಾರಿ ಕಚೇರಿ ಸಹಕಾರದಿಂದ ಸುರಕ್ಷಿತವಾಗಿ ತಾಯ್ನಾಡಿಗೆ ತಲುಪಿಸುವಲ್ಲಿ ಕನ್ನಡಿಗಾಸ್ ಫೆಡರೇಷನ್ ಮತ್ತು ಏಮ್ ಇಂಡಿಯಾ ಫೌಂಡೇಶನ್ ಯಶಸ್ವಿಯಾಗಿದೆ.

    ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್, ‘ದುಬೈನಲ್ಲಿ ಉದ್ಯೋಗ ಸಿಗುವುದಾಗಿ ಏಜೆಂಟ್ ನನ್ನು ನಂಬಿಕೊಂಡು ಬಂದು ಮೋಸ ಹೋದ ಬಡ ಕಾರ್ಮಿಕ, ಅನಕ್ಷರಸ್ಥ ಚಂಗೂರ್ ಪ್ರಸಾದ್ ತಿನ್ನಲು ಆಹಾರವಿಲ್ಲದೆ ದಿಕ್ಕು ತೋಚದೇ ತಿರುಗಾಡುತ್ತಿದ್ದಾಗ ಹಠಾತ್ತಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟನು. ಅಲ್ಲಿ ಪರೀಕ್ಷಿಸಿದಾಗ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದಾನೆಂದು ತಿಳಿದು ಬಂತು.

    ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಷಯ ತಿಳಿದು ಭೇಟಿ ನೀಡಿದ ಏಮ್ ಇಂಡಿಯಾ ಫೌಂಡೇಶನ್ ನ ಶೇಕ್ ಮುಝಫ್ಫರ್, ಚಂಗೂರ್ ಪ್ರಸಾದ್ ಗೆ ಧೈರ್ಯ ತುಂಬಿ, ನನ್ನನ್ನು ಸಂಪರ್ಕಿಸಿದರು. ನಾವು ಚಂಗೂರ್ ಪ್ರಸಾದ್ ನಿಗೆ ಪ್ರಥಮ ಹಂತದಲ್ಲಿ ಬೇಕಾದ ಚಿಕಿತ್ಸೆಯನ್ನು ಶಾರ್ಜಾ ಖಾಸ್ಮಿಯಾ ಆಸ್ಪತ್ರೆಯಲ್ಲಿ ನೀಡಿ, ವೈದ್ಯರ ಸಲಹೆಯಂತೆ ಡಿಸ್ಚಾರ್ಜ್ ಮಾಡಿದೆವು. ಆಸ್ಪತ್ರೆಯಲ್ಲಿ ಇನ್ಶುರೆನ್ಸ್ ಮೂಲಕ ಸ್ವಲ್ಪ ರಿಯಾಯಿತಿ ಸಿಕ್ಕಿದರೂ 1ಲಕ್ಷ? ನಾವು ಪಾವತಿಸಿದೆವು. ಚಂಗೂರ್ ಪ್ರಸಾದನನ್ನು ಸುರಕ್ಷಿತವಾಗಿ ಊರಿಗೆ ಕಳುಹಿಸಲು ಸಹಪ್ರಯಾಣಿಕ ಬೇಕಾದ ಕಾರಣ ಆತನ ಮನೆಯವರನ್ನು ಸಂಪರ್ಕಿಸಿ, ಆತನ ಅಳಿಯನನ್ನು ದುಬೈಗೆ ಕರೆಸಿಕೊಂಡೆವು.

    ಚಂಗೂರ್ ಪ್ರಸಾದ್ ಆಸ್ಪತ್ರೆಗೆ ದಾಖಲಾಗುವ ಮುನ್ನವೇ ಪಾಸ್ಪೋರ್ಟ್ ಕಳೆದುಕೊಂಡಿದ್ದ ಕಾರಣ, ಭಾರತಕ್ಕೆ ಕಳುಹಿಸಲು ಹೊಸದಾಗಿ ‘ವೈಟ್ ಪಾಸ್ಪೋರ್ಟ್’ ಎಮರ್ಜೆನ್ಸಿ ಸರ್ಟಿಫಿಕೇಟ್ ತಯಾರಾಗುವ ವರೆಗೂ ತಂಗಲು ಉತ್ತಮ ವಾತಾವರಣದ ಆವಶ್ಯಕತೆ ಇದ್ದ ಕಾರಣ, ಫಾರ್ಚೂನ್ ಗ್ರೂಪ್ ಆಫ್ ಹೋಟೇಲ್ಸ್ ನ ಛೇರ್ಮನ್ ಹಾಗೂ ಕೆಎನ್‍ಆರೈ ಯುಎಇ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ತಕ್ಷಣವೇ ಸ್ಪಂದಿಸಿ, ‘ಎಲ್ಲಾ ಪೇಪರ್ ವರ್ಕ್ ಆಗುವ ವರೆಗೆ ನಮ್ಮ ಹೋಟೆಲ್ ನಲ್ಲಿಯೇ ತಂಗಲು ವ್ಯವಸ್ಥೆ, ಊಟ ತಿಂಡಿಯ ವ್ಯವಸ್ಥೆ ನಾನು ಮಾಡುವೆ’ ಎಂದು ಜವಾಬ್ದಾರಿ ಹೊತ್ತು 12 ದಿನ ನೆರವಾದರು.

    ಎಮರ್ಜೆನ್ಸಿ ಸರ್ಟಿಫಿಕೇಟ್ ಮಾಡಲು ಹಲವು ಅಡಚಣೆಗಳು ಬಂದಾಗ ನೆರವಿಗೆ ಬಂದ ದುಬೈನ ಭಾರತೀಯ ರಾಯಭಾರಿ ಕಚೇರಿಯ ಕೌನ್ಸಲ್ ಜಿತೇಂದ್ರ ಸಿಂಗ್ ನೇಗಿ ಎಲ್ಲವನ್ನೂ ಸುಸೂತ್ರವಾಗಿ ನಿವಾರಿಸಿದರು ಮತ್ತು ಸಾಮಾಜಿಕ ಕಾರ್ಯಕರ್ತ ಗಿರೀಶ್ ಪಂಥ್ ಸಹಕರಿಸಿದರು. ಪೊಲೀಸ್ ರಿಪೋರ್ಟ್, ಇಮಿಗ್ರೇಷನ್ ಕೆಲಸವನ್ನು ಮುಝಫ್ಫರ್ ಮತ್ತು ಇಮ್ರಾನ್ ಎರ್ಮಾಳ್ ಪೂರ್ಣಗೊಳಿಸಿದರು. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದಿನದಿಂದ ಭಾರತದಲ್ಲಿ ಹೆಚ್ಚಿನ ಶಸ್ತ್ರಚಿಕಿತ್ಸೆ ಪಡೆಯುವ ವರೆಗೂ ದೈನಂದಿನವಾಗಿ ಬೇಕಾದ ದುಬಾರಿ ಔಷಧ ಹಾಗೂ ತಾಯ್ನಾಡಿಗೆ ತಲುಪಿಸಲು ಬೇಕಾದ ಎಲ್ಲಾ ವ್ಯವಸ್ಥೆಗೆ ಸುಮಾರು 2.5 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ ನಮ್ಮ ತಂಡ ಕೊನೆಗೂ ದುಬೈನಿಂದ ಉತ್ತರ ಪ್ರದೇಶದ ಲಕ್ನೋಗೆ ತಲುಪಿ ಅಲ್ಲಿಂದ ಗೋರಕ್’ಪುರದ ಆತನ ಕುಟುಂಬದ ಮನೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.

    ಪಾಸ್ಪೋರ್ಟ್ ಕಳೆದುಕೊಂಡು, ಹಣವೂ ಇಲ್ಲದೇ, ಭಾರತಕ್ಕೆ ಮರಳುವ ಆಸೆಯನ್ನೇ ಕೈಬಿಟ್ಟು ಆಸ್ಪತ್ರೆಯಲ್ಲಿ ಏಕಾಂಗಿಯಾಗಿ ಮಲಗಿದ್ದ ಚಂಗೂರ್ ಪ್ರಸಾದ್ ಆರೋಗ್ಯದಲ್ಲಿ ಸ್ವಲ್ಪ ಸುಧಾರಣೆ ಕಂಡು ತಾಯ್ನಾಡಿಗೆ ತಲುಪಿ ತನ್ನ ಪತ್ನಿ ಮಕ್ಕಳೊಂದಿಗೆ ನಗುತ್ತಾ ಸಂತಸದಿಂದಿರುವ ಪೋಟೋ ಕಳುಹಿಸಿದ್ದಾನೆ. ಅವನ ಮುಂದಿನ ಚಿಕಿತ್ಸೆ ಕುರಿತು ಉತ್ತರ ಪ್ರದೇಶದ ಆಸ್ಪತ್ರೆಯಲ್ಲೂ ನಾವು ಮಾತುಕತೆ ನಡೆಸುತ್ತಿದ್ದೇವೆ.’ ಎಂದು ಹಿದಾಯತ್ ಅಡ್ಡೂರ್ ಮಾಹಿತಿ ನೀಡಿದರು.

  • 30ಕ್ಕೂ ಹೆಚ್ಚು ದೇಶಗಳ ಅನಿವಾಸಿ ಕನ್ನಡಿಗರ ಟ್ವಿಟ್ಟರ್ ಅಭಿಯಾನ

    30ಕ್ಕೂ ಹೆಚ್ಚು ದೇಶಗಳ ಅನಿವಾಸಿ ಕನ್ನಡಿಗರ ಟ್ವಿಟ್ಟರ್ ಅಭಿಯಾನ

    ಬೆಂಗಳೂರು: ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ, ಒಂದೇ ಧ್ವನಿಯೊಂದಿಗೆ ಟ್ವಿಟ್ಟರ್ ಮತ್ತು ಇಮೇಲ್ ಮೂಲಕ ಕರ್ನಾಟಕ ಸರಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸಿ ಇಂದು ಅಭಿಯಾನ ನಡೆಸಲಾಯಿತು.

    ‘ಎನ್‍ಆರ್‍ಐ ಅಪೀಲ್ ಡೇ’ #NRIappealDay ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಜನವರಿ 2ನ್ನು ಅಂತರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲಾಯಿತು. ಅಭಿಯಾನದಲ್ಲಿ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜಲ್ರ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದಲ್ರ್ಯಾಂಡ್, ಸೌತ್ ಕೊರಿಯಾ ಸೇರಿದಂತೆ ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಭಾಗವಹಿಸಿದ್ದವು.

    ಕರ್ನಾಟಕ ಅನಿವಾಸಿ ಭಾರತೀಯ ಸಮಿತಿಗೆ ಕೂಡಲೇ ಉಪಾಧ್ಯಕ್ಷರನ್ನ ನೇಮಿಸಬೇಕು, ಉಪಾಧ್ಯಕ್ಷ ಸ್ಥಾನಕ್ಕೆ ಅನಿವಾಸಿಗಳ ಕಷ್ಟ ಬಲ್ಲ ಒಬ್ಬ ಅನಿವಾಸಿ ಕನ್ನಡಿಗರನ್ನೇ ನೇಮಿಸಬೇಕು. ನೆನೆಗುದಿಗೆ ಬಿದ್ದಿರುವ ಎನ್‍ಆರ್‍ಕೆ ಕಾರ್ಡ್ ಯೋಜನೆಯನ್ನು ತ್ವರಿತವಾಗಿ ಜಾರಿಗೆಗೊಳಿಸಬೇಕು. ಹೆಚ್ಚು ಅನಿವಾಸಿ ಕನ್ನಡಿಗರ ಸಾಂದ್ರತೆ ಇರುವ ದೇಶಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡ ಪಾಠಶಾಲೆ ನಡೆಸಲು ವ್ಯವಸ್ಥೆ ಮಾಡಬೇಕು ಎಂಬ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರವನ್ನು ಆಗ್ರಹಿಸಲಾಯಿತು.

  • ಇಂದು 4 ಪ್ರಮುಖ ಬೇಡಿಕೆಗಳೊಂದಿಗೆ 30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರ ಟ್ವಿಟ್ಟರ್ ಅಭಿಯಾನ!

    ಇಂದು 4 ಪ್ರಮುಖ ಬೇಡಿಕೆಗಳೊಂದಿಗೆ 30ಕ್ಕೂ ಹೆಚ್ಚಿನ ದೇಶಗಳ ಅನಿವಾಸಿ ಕನ್ನಡಿಗರ ಟ್ವಿಟ್ಟರ್ ಅಭಿಯಾನ!

    ಬೆಂಗಳೂರು: ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇ-ಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಟ್ವಿಟರ್ ಅಭಿಯಾನವನ್ನು ಇಂದು ಜನವರಿ 2 ರಂದು ಮಧ್ಯಾಹ್ನ 4ಗಂಟೆಗೆ ನಡೆಸಲು ತೀರ್ಮಾನಿಸಿದ್ದೇವೆ.

    ‘ಎನ್‍ಆರೈ ಅಪೀಲ್ ಡೇ’ #NRIappealDay ಎಂಬ ಹ್ಯಾಷ್’ಟ್ಯಾಗ್ ನೊಂದಿಗೆ ಜನವರಿ 2ನೇ ದಿನವನ್ನು ಅಂತರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ತೀರ್ಮಾನಿಸಿದ್ದು, ನಾವು ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜಲ್ರ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದಲ್ರ್ಯಾಂಡ್, ಸೌತ್ ಕೊರಿಯಾ ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಈಗಾಗಲೇ ಬೆಂಬಲ ಘೋಷಿಸಿದ್ದಾರೆ’ ಎಂದು ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಇದರ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.

    ಅನಿವಾಸಿ ಕನ್ನಡಿಗರ ನಾಲ್ಕು ಪ್ರಮುಖ ಬೇಡಿಕೆಗಳು:
    1) ಕರ್ನಾಟಕ ಅನಿವಾಸಿ ಭಾರತೀಯ ಸಮಿತಿ ಗೆ ಉಪಾಧ್ಯಕ್ಷರನ್ನ ಕೂಡಲೇ ನೇಮಿಸಬೇಕು.
    2) ಉಪಾಧ್ಯಕ್ಷ ಸ್ಥಾನಕ್ಕೆ ಅನಿವಾಸಿಗಳ ಕಷ್ಟ ಬಲ್ಲ ಒಬ್ಬ ಅನಿವಾಸಿ ಕನ್ನಡಿಗರನ್ನೇ ನೇಮಿಸಬೇಕು.
    3) ನೆನೆಗುದಿಗೆ ಬಿದ್ದಿರುವ ಎನ್.ಆರ್.ಕೆ ಕಾರ್ಡ್ ಯೋಜನೆಯನ್ನು ತ್ವರಿತವಾಗಿ ಜಾರಿಗೆಗೊಳಿಸುವುದು.
    4) ಹೆಚ್ಚು ಅನಿವಾಸಿ ಕನ್ನಡಿಗರ ಸಾಂದ್ರತೆ ಇರುವ ದೇಶಗಳಲ್ಲಿ ಕನ್ನಡ ಭವನ ನಿರ್ಮಾಣ ಮಾಡಿ ಕನ್ನಡ ಪಾಠಶಾಲೆ ನಡೆಸಲು ವ್ಯವಸ್ಥೆ ಮಾಡಬೇಕು.

  • ಅನಿವಾಸಿ ಕನ್ನಡಿಗರ #NRIappealDay ಅಭಿಯಾನಕ್ಕೆ ಕರವೇ ಬೆಂಬಲ

    ಅನಿವಾಸಿ ಕನ್ನಡಿಗರ #NRIappealDay ಅಭಿಯಾನಕ್ಕೆ ಕರವೇ ಬೆಂಬಲ

    ಬೆಂಗಳೂರು: ಸತತ ಕೋರಿಕೆ, ಹಲವಾರು ಮನವಿಗಳ ನಂತರವೂ ಹಲವು ವರ್ಷಗಳಿಂದ ಕಡೆಗಣಿಸಲ್ಪಟ್ಟು, ಸ್ಪಂದನೆ ಸಿಗದೇ ಹೋದರೆ ಗಮನ ಸೆಳೆಯಬೇಕಾದರೆ ವಿಭಿನ್ನ ರೀತಿಯ ಪ್ರಯತ್ನ ಮಾಡಬೇಕಾಗುತ್ತದೆ ಅಂತದ್ದೇ ಒಂದು ಪ್ರಯತ್ನಕ್ಕೆ ವಿಶ್ವದಾದ್ಯಂತ ಇರುವ ಅನಿವಾಸಿ ಕನ್ನಡಿಗರು ಕೈಹಾಕಿದ್ದಾರೆ. ಇದೇ ಮೊದಲ ಬಾರಿಗೆ ವಿಶ್ವದಾದ್ಯಂತವಿರುವ ಮೂವತ್ತಕ್ಕೂ ಹೆಚ್ಚು ದೇಶಗಳ ನೂರಕ್ಕೂ ಹೆಚ್ಚು ಅನಿವಾಸಿ ಕನ್ನಡಪರ ಸಂಘಟನೆಗಳು ಒಗ್ಗಟ್ಟಾಗಿ ಒಂದೇ ದಿನ ಒಂದೇ ಧ್ವನಿಯೊಂದಿಗೆ ಟ್ವಿಟರ್ ಮತ್ತು ಇಮೇಲ್ ಮೂಲಕ ಕರ್ನಾಟಕ ಸರ್ಕಾರಕ್ಕೆ ಬೇಡಿಕೆಯನ್ನು ಈಡೇರಿಸಲು ಒತ್ತಾಯಿಸುವ ಅಭಿಯಾನವನ್ನು ಜನವರಿ 2ರಂದು ಮಧ್ಯಾಹ್ನ ನಡೆಸಲು ತೀರ್ಮಾನಿಸಿದ್ದಾರೆ. #NRIappealDay ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಜನವರಿ 2ರಂದು ಅಂತರಾಷ್ಟ್ರೀಯ ಅನಿವಾಸಿ ಕನ್ನಡಿಗರ ಮನವಿ ದಿನವಾಗಿ ಆಚರಿಸಲು ಮುಂದಾಗಿದ್ದಾರೆ.

    ಅನಿವಾಸಿ ಕನ್ನಡಿಗರಿಗಾಗಿಯೇ ಕರ್ನಾಟಕ ಸರ್ಕಾರದಲ್ಲಿ ಅನಿವಾಸಿ ಭಾರತೀಯ ಸಮಿತಿ ಇದೆ(ಕೆಎನ್‍ಆರ್‍ಐ ಫೋರಂ). ಅದರ ಅಧ್ಯಕ್ಷರು ಸ್ವತಃ ಮುಖ್ಯಮಂತ್ರಿಗಳು, ಆದರೆ ಮುಖ್ಯಮಂತ್ರಿಗಳಿಗೆ ಸರ್ಕಾರದ ಇತರ ಗಂಭೀರ ಜವಾಬ್ದಾರಿಗಳಿರುವ ಕಾರಣ ಕೆಎನ್‍ಆರ್‍ಐ ಸಮಿತಿಯಲ್ಲಿ ಉಪಾಧ್ಯಕ್ಷರಿಗೇ ಹೆಚ್ಚಿನ ಜವಾಬ್ದಾರಿ. ಆದರೆ ಕಳೆದ ಮೂರು ವರ್ಷಗಳ ಹಿಂದೆ ತೆರವುಗೊಂಡ ಉಪಾಧ್ಯಕ್ಷ ಸ್ಥಾನಕ್ಕೆ ಹೊಸದಾಗಿ ಯಾರನ್ನೂ ನೇಮಕವೇ ಮಾಡಿಲ್ಲ. ಹಲವಾರು ಕನ್ನಡಪರ ಸಂಘಟನೆಗಳು ಈ ಕುರಿತು ಸರ್ಕಾರದ ಗಮನ ಸೆಳೆದಿದ್ದರೂ ಯಾರು ಸ್ಪಂದಿಸುವ ಗೋಜಿಗೆ ಹೋಗಿರಲಿಲ್ಲ. ಇದೀಗ ಶತಾಯಗತಾಯ ಬೇಡಿಕೆಯನ್ನು ಕರ್ನಾಟಕ ಸರ್ಕಾರಕ್ಕೆ ತಲುಪಿಸಿ ಸೇರಿಸಿಕೊಳ್ಳಬೇಕೆಂದು ಈಡೇರಿಸಿ ಕೊಳ್ಳಬೇಕೆಂದು ಅನಿವಾಸಿ ಕನ್ನಡಿಗರು ತೀರ್ಮಾನಿಸಿದಂತಿದೆ. ಹಾಗಾಗಿ ಈ ವಿಭಿನ್ನ ಅಭಿಯಾನದ ಮೂಲಕ ಒಗ್ಗಟ್ಟಾಗಿ ಧ್ವನಿ ಎತ್ತಲಿದ್ದಾರೆ.

    ಅಂತರರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಕರೆಕೊಟ್ಟಿರುವ ಈ ಅಭಿಯಾನಕ್ಕೆ ಈಗಾಗಲೇ ಅಮೆರಿಕ, ಯುಎಇ, ಬ್ರಿಟನ್, ಆಸ್ಟ್ರೇಲಿಯಾ, ಕತಾರ್, ಕುವೈಟ್, ಇಟಲಿ, ಜರ್ಮನಿ, ಕೀನ್ಯಾ, ದಕ್ಷಿಣ ಆಫ್ರಿಕಾ, ಉಗಾಂಡಾ, ಇಥಿಯೋಪಿಯ, ಡೆನ್ಮಾರ್ಕ್, ನೈಜೀರಿಯಾ, ಹಾಲೆಂಡ್, ಓಮನ್, ಬಹರೈನ್, ಇಂಡೋನೇಷಿಯಾ, ಸೌದಿ ಅರೇಬಿಯಾ, ಇಸ್ರೇಲ್, ಈಜಿಪ್ಟ್, ಸ್ವಿಜಲ್ರ್ಯಾಂಡ್, ಘಾನ, ನ್ಯೂಜಿಲೆಂಡ್, ವೆಸ್ಟ್ ಇಂಡೀಸ್, ಹಾಂಕಾಂಗ್, ಸಿಂಗಪೂರ್, ಸ್ಕಾಟ್ಲ್ಯಾಂಡ್, ನಾರ್ವೆ, ನೆದಲ್ರ್ಯಾಂಡ್, ಸೌತ್ ಕೊರಿಯಾ ಇನ್ನಿತರ ದೇಶದ ನೂರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳು ಬೆಂಬಲ ಘೋಷಿಸಿವೆ.

    ‘ಅನಿವಾಸಿಗಳಿಗಾಗಿ ಒಂದು ದಿನ’ ಎಂದು ದೇಶ ವಿದೇಶಗಳಲ್ಲಿ ಇರುವ ಎಲ್ಲ ಕನ್ನಡಿಗರೊಂದಿಗೆ ಅಭಿಯಾನದಲ್ಲಿ ಭಾಗವಹಿಸಲು ವಿನಂತಿಸಿದ್ದಾರೆ. ಅನಿವಾಸಿ ಕನ್ನಡಿಗರ ಈ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಬೆಂಬಲಿಸಿದ್ದು, ಈ ಟ್ವಿಟ್ಟರ್ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರವೇ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಸರ್ಕಾರ ಅನಿವಾಸಿ ಕನ್ನಡಿಗರ ಈ ಕೂಗನ್ನು ಆಲಿಸಬೇಕು. ರಾಜ್ಯ ಸರ್ಕಾರ ಅನಿವಾಸಿ ಭಾರತೀಯ ಸಮಿತಿಗೆ ಉಪಾಧ್ಯಕ್ಷರನ್ನು ತಕ್ಷಣವೇ ನೇಮಿಸಿ, ಸರ್ಕಾರ ಮತ್ತು ಅನಿವಾಸಿ ಕನ್ನಡಿಗರ ನಡುವಿನ ಸಂಬಂಧ-ಸಂವಹನವನ್ನು ಹೆಚ್ಚು ಮಾಡಬೇಕು ಎಂದು ವಿನಂತಿಸಿದ್ದಾರೆ.