Tag: ಅನೀಶ್

  • ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

    ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

    ಸಿನಿಮಾ ಅನ್ನೋದೇ ಒಂದು ಸವಾಲು. ಈ ಸವಾಲನ್ನು ಸ್ವೀಕರಿಸಿ ಅಖಾಡಕ್ಕೆ ಇಳಿದ್ಮೇಲೆ ಪ್ರೇಕ್ಷಕರಿಗೆ ಸಿನಿಮಾ ತಲುಪಿಸುವುದು ಮಗದೊಂದು ಸವಾಲು. ತಮ್ಮ ಚಿತ್ರವನ್ನು ಚಿತ್ರಪ್ರೇಮಿಗಳಿಗೆ ತಲುಪಿಸಲು ಪ್ರಚಾರ ಬಹಳ ಮುಖ್ಯ. ಈ ವಿಚಾರದಲ್ಲಿ ‘ಆರಾಮ್ ಅರವಿಂದ ಸ್ವಾಮಿ’ (Aram Aravinda Swamy) ಬಳಗದ ಕ್ರಿಯೇಟಿವಿಟಿಗೆ ರಾಯಲ್ ಸೆಲ್ಯೂಟ್ ಹೇಳಲೇಬೇಕು. ಸದ್ಯ ಗಣೇಶನ ಹಬ್ಬದ ಸಂದರ್ಭದಲ್ಲಿ ಸಿನಿಮಾದ ವಿಶೇಷ ಪೋಸ್ಟರ್‌ವೊಂದನ್ನು ರಿಲೀಸ್ ಮಾಡಿದ್ದಾರೆ. ಈ ಪೋಸ್ಟರ್‌ ಪ್ರೇಕ್ಷಕರ ಗಮನ ಸೆಳೆದಿದೆ.

    ಮಿಲನಾ ಮತ್ತು ಹೃತಿಕ ಇಬ್ಬರ ನಡುವೆ ಮದುವೆ ಮಂಟಪದಲ್ಲಿ ಅನೀಶ್‌ ಕುಳಿತಿರುವ ಪೋಸ್ಟರ್‌ ಇದೀಗ ಸದ್ದು ಮಾಡುತ್ತಿದೆ.  ಈ ಮೂಲಕ ಆರಾಮ್‌ ಅರವಿಂದನ ಕಥೆ ಹೇಳೋಕೆ ಅನೀಶ್‌ ಸಜ್ಜಾಗಿದ್ದಾರೆ. ಮಾಸ್ ಸಿನಿಮಾಗಳಲ್ಲಿಯೇ ಹೆಚ್ಚಾಗಿ ನಟಿಸಿರೋ ಅನೀಶ್ ‘ಆರಾಮ್ ಅರವಿಂದ ಸ್ವಾಮಿ’ ಸಿನಿಮಾ ಮೂಲಕ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರವನ್ನು ಪ್ರೇಕ್ಷಕರಿಗೆ ಉಣಬಡಿಸಲಿದ್ದಾರೆ. ‘ನಮ್ ಗಣಿ ಬಿಕಾಂ ಪಾಸ್’ ಮತ್ತೆ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ಇದನ್ನೂ ಓದಿ:ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ‘ಕಲ್ಕಿ’ ಥೀಮ್‌ನಲ್ಲಿ ಗಣೇಶ ಪ್ರತಿಷ್ಠಾಪನೆ

    ಅನೀಶ್‌ಗೆ ಮಿಲನಾ ನಾಗರಾಜ್ (Milana Nagaraj) ಹಾಗೂ ಹೃತಿಕ ಶ್ರೀನಿವಾಸ್ ಇಬ್ಬರು ನಾಯಕಿಯರು. ‘ಆರಾಮ್ ಅರವಿಂದ್ ಸ್ವಾಮಿ’ (Aram Aravinda Swamy) ಸಿನಿಮಾಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯಾ ಟ್ಯೂನ್ ಹಾಕಿದ್ದಾರೆ. ಹೀಗಾಗಿ ಸಂಗೀತ ಪ್ರಿಯರ ಕಿವಿಗಳಿಗಂತೂ ಒಳ್ಳೊಳ್ಳೆ ಹಾಡುಗಳನ್ನು ನಿರೀಕ್ಷೆ ಮಾಡಬಹುದು. ‘ಅಕಿರ’ ಸಿನಿಮಾ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ‘ಗುಳ್ಟು’ ಸಿನಿಮಾ ನಿರ್ಮಾಪಕ ಪ್ರಶಾಂತ್ ರೆಡ್ಡಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವೈವಿಬಿ ಶಿವಸಾಗರ್ ಛಾಯಾಗ್ರಹಣ, ಉಮೇಶ್ ಆರ್. ಬಿ. ಸಂಕಲನ ಈ ಸಿನಿಮಾಗಿದೆ.

  • ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’  ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’ ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ನ್ನಡದಲ್ಲಿ ‌ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್,  ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ಜನ ತಾರೆಯರನ್ನು ಒಂದೇ ಫ್ರೇಮ್ ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ಡಬ್ಬಲ್ ಇಂಜಿನ್, ಬ್ರಹ್ಮಚಾರಿ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.

    ಚಂದ್ರ ಮೋಹನ್ (Chandra Mohan) ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್  (Forrest) ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.

    ಚಿಕ್ಕಣ್ಣ, ಅನೀಶ್ , ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ಫಾರೆಸ್ಟ್ ಸಿನಿಮಾದ ಆಧಾರ ಸ್ತಂಭಗಳು. ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್  ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

  • ರವಿಚಂದ್ರನ್ ಸಿನಿಮಾದ ಹೆಸರು ಮತ್ತು ನಾಯಕಿ ಬದಲು

    ರವಿಚಂದ್ರನ್ ಸಿನಿಮಾದ ಹೆಸರು ಮತ್ತು ನಾಯಕಿ ಬದಲು

    ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಹೊಸ ಸಿನಿಮಾ ಮೊನ್ನೆಯಷ್ಟೇ ಮುಹೂರ್ತವಾಗಿತ್ತು. ಈ ಸಿನಿಮಾಗೆ ಗೌರಿ ಎಂದು ಹೆಸರಿಡಲಾಗಿತ್ತು. ಅಲ್ಲದೇ, ಈ ಸಿನಿಮಾದ ಮೂಲಕ ರೂಪದರ್ಶಿ, ನಟಿ ಬರ್ಖಾ ಸೇನ್ ಗುಪ್ತಾ ಸ್ಯಾಂಡಲ್ ವುಡ್ ಗೆ ಪ್ರವೇಶ ಕೂಡ ಮಾಡಿದ್ದರು. ಇದೀಗ ಈ ಸಿನಿಮಾದಲ್ಲಿ ಭಾರೀ ಬದಲಾವಣೆಯನ್ನು ಮಾಡಿಕೊಂಡಿದ್ದಾರೆ ನಿರ್ದೇಶಕ ಅನೀಸ್. ಚಿತ್ರಕ್ಕೆ ಹೆಸರು ಹಾಗೂ ನಾಯಕಿಯನ್ನೇ ಬದಲಾಯಿಸಿದ್ದಾರೆ.

    ಈ ಬದಲಾವಣೆಗೆ ಕಾರಣವನ್ನು ಅವರು ತಿಳಿಸದೇ ಇದ್ದರೂ, ಗೌರಿ ಅಂತಿಟ್ಟಿದ್ದ ಹೆಸರನ್ನು ಗೌರಿ ಶಂಕರ ಎಂದು ಬದಲಾಯಿಸಿದ್ದಾರೆ. ಬರ್ಖಾ ಸೇನ್ ಗುಪ್ತಾ ಜಾಗಕ್ಕೆ ಕನ್ನಡದ್ದೇ ಹುಡುಗಿ ಅಪೂರ್ವ ಅವರನ್ನು ಕರೆತಂದಿದ್ದಾರೆ. ಈ ಹಿಂದೆ ರವಿಚಂದ್ರನ್ ನಟನೆಯ ಅಪೂರ್ವ ಸಿನಿಮಾಗೆ ನಾಯಕಿಯಾಗಿದ್ದ ಈ ಹುಡುಗಿಯೇ ಮತ್ತೊಮ್ಮೆ ರವಿಚಂದ್ರನ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅಪೂರ್ವ ಅಂತ ಈ ನಟಿಗೆ ಹೆಸರಿಟ್ಟಿದ್ದೇ ರವಿಚಂದ್ರನ್ ಎನ್ನುವುದು ಮತ್ತೊಂದು ವಿಶೇಷ. ಇದನ್ನೂ ಓದಿ: ತಂದೆಯ ಹುಟ್ಟುಹಬ್ಬಕ್ಕೆ ವಿಶೇಷ ಫೋಟೋ ಹಂಚಿಕೊಂಡ ನಟಿ ರಾಧಿಕಾ ಪಂಡಿತ್

    ಅಪೂರ್ವ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಪರಿಚಯವಾಗಿದ್ದ ಈ ನಟಿ ಶರಣ್ ಜೊತೆ ವಿಕ್ಟರಿ 2 ಸಿನಿಮಾದಲ್ಲೂ ನಟಿಸಿದ್ದರು. ಈಗ ಮತ್ತೆ ರವಿಚಂದ್ರನ್ ಅವರಿಗೆ ಜೊತೆಯಾಗಿದ್ದಾರೆ. ಇದೇ ಜನವರಿ 22 ರಿಂದ ನಡೆಯಲಿರುವ ಚಿತ್ರೀಕರಣದಲ್ಲಿ ನಟಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ಜ.22 ರಂದು ದಾಂಡೇಲಿಯಲ್ಲಿ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ರವಿಚಂದ್ರನ್, ಅಪೂರ್ವ ಜೊತೆ ಕ್ಯಾಡಬೊಮ್ ಹೇಡರ್ ಹೆಸರಿನ ನಾಯಿ ಕೂಡ ಪ್ರಧಾನ ಪಾತ್ರ ನಿರ್ವಹಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅನೀಶ್ ಹೊಸ ಚಿತ್ರಕ್ಕೆ ನಾಯಕಿಯಾದ ಮಿಲನ ನಾಗರಾಜ್

    ಅನೀಶ್ ಹೊಸ ಚಿತ್ರಕ್ಕೆ ನಾಯಕಿಯಾದ ಮಿಲನ ನಾಗರಾಜ್

    ನಾಯಕ ನಟ ಅನೀಶ್ (Anish) ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾ ಖ್ಯಾತಿಯ ನಿರ್ದೇಶಕ ಅಭಿಷೇಕ್ ಶೆಟ್ಟಿ (Abhishek Shetty) ಕಾಂಬಿನೇಶನ್ ನಲ್ಲಿ ಮೂಡಿ ಬರ್ತಿರೋ ಸಿನಿಮಾ ‘ಆರಾಮ್ ಅರವಿಂದ್ ಸ್ವಾಮಿ’. ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ನಾಯಕ ನಟಿ ಯಾರೆಂಬುದನ್ನು ಚಿತ್ರತಂಡ ರಿವೀಲ್ ಮಾಡಿದೆ.

    ಲವ್ ಮಾಕ್ಟೇಲ್ ಸಿನಿಮಾ ನಂತರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಮಿಲನ ನಾಗರಾಜ್ (Milan Nagaraj) ‘ಆರಾಮ್ ಅರವಿಂದ್ ಸ್ವಾಮಿ’ (Aram Arvind Swamy) ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ನಾಯಕ ಅನೀಶ್  ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಮಿಲನ ನಾಗರಾಜ್ ಬಹಳ ವಿಭಿನ್ನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದಲ್ಲಿ ಎರಡು ಶೇಡ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲಯಾಳಿ ಹುಡುಗಿ ಹಾಗೂ ಟೀಚರ್ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಈಗಾಗಲೇ ಮಿಲನ ನಾಗರಾಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು ಸದ್ಯದಲ್ಲೇ ಇಬ್ಬರ ಪೋಸ್ಟರ್ ರಿಲೀಸ್ ಮಾಡುವುದಾಗಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

    ‘ಆರಾಮ್ ಅರವಿಂದ್ ಸ್ವಾಮಿ’ ಚಿತ್ರಕ್ಕೆ ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುತ್ತಿದ್ದು, ಅಕಿರ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ಗುಳ್ಟು ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಅನೀಶ್  ಇಲ್ಲಿವರೆಗಿನ ಸಿನಿಮಾಗಳಿಗಿಂತ ಭಿನ್ನವಾಗಿ  ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಶೀಘ್ರದಲ್ಲೇ ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಗೌರಿ’ ಚಿತ್ರದಲ್ಲಿರೋದು ಮೂರೇ ಪಾತ್ರಗಳು

    ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ‘ಗೌರಿ’ ಚಿತ್ರದಲ್ಲಿರೋದು ಮೂರೇ ಪಾತ್ರಗಳು

    ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಎನ್.ಎಸ್.ರಾಜಕುಮಾರ್ – ವಿ.ಎಸ್ ರಾಜಕುಮಾರ್ ನಿರ್ಮಾಣದ “ಗೌರಿ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಶೇಷಾದ್ರಿಪುರದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭ ಕೋರಿದರು. ಮೂವತ್ತಕ್ಕೂ ಅಧಿಕ ವರ್ಷಗಳ ಕಾಲ ರಾಜಕುಮಾರ್ ಅವರ ಬಳಿ ಸಹಾಯಕರಾಗಿ ಕಾರ್ಯ ನಿರ್ವಹಿಸಿರುವ ಚನ್ನ ಅವರು  ಕ್ಯಾಮೆರಾ ಚಾಲನೆ ಮಾಡಿದರು.

    ಕನ್ನಡ ಚಿತ್ರರಂಗಕ್ಕೆ ಈಗ ಒಳ್ಳೆಯ ಕಾಲ. ವಿಶ್ವದಾದ್ಯಂತ ಕನ್ನಡ ಸಿನಿಮಾಗಳು ಹೆಸರು ಮಾಡುತ್ತಿದೆ. ಅದರಲ್ಲೂ ವಿಭಿನ್ನ ಕಥೆಯಿರುವ ಚಿತ್ರಗಳನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. “ಗೌರಿ” ಸಹ ವಿಭಿನ್ನ ಕಥೆಯ ಚಿತ್ರ. ಇಡೀ ಸಿನಿಮಾ ಪೂರ್ತಿ ಕೇವಲ ಮೂರೇ ಪಾತ್ರಗಳಿರುತ್ತದೆ. ಕೆಲವು ಪ್ರಾಣಿಗಳನ್ನು ಸಹ ಬಳಸಿಕೊಳ್ಳುತ್ತಿರುವುದಾಗಿ ನಿರ್ದೇಶಕರು ಹೇಳಿದ್ದಾರೆ. ದಾಂಡೇಲಿಯಲ್ಲಿ ಬಹುಭಾಗದ ಚಿತ್ರೀಕರಣ ನಡೆಯಲಿದೆ. ಹೊಸವರ್ಷಕ್ಕೆ ಹೊಸತರಹದ ಸಿನಿಮಾವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಇನ್ನು  ರಾಜಕುಮಾರ್ ಎಂಬ ಹೆಸರು ಸದಾ ನನ್ನ ಜೊತೆ ಇರುತ್ತದೆ ಎಂಬುದಕ್ಕೆ ಈ ಚಿತ್ರದ ನಿರ್ಮಾಪಕರು ಸಹ ರಾಜಕುಮಾರ್ ಅವರೆ ಎಂದು ನಾಯಕ ರವಿಚಂದ್ರನ್ ಚಿತ್ರದ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಹನ್ಸಿಕಾ ಟ್ರೋಲ್‌: ಮದುವೆಗೆ ಎಲ್ಲಾ ಹೊಸದು, ಗಂಡ ಯಾಕೆ ಸೆಕೆಂಡ್ ಹ್ಯಾಂಡ್ ಎಂದ ನೆಟ್ಟಿಗರು

    ಇದು ನನ್ನ ಮೊದಲ ನಿರ್ದೇಶನದ ಚಿತ್ರ.  ಖ್ಯಾತ ನಟರಾದ ರವಿಚಂದ್ರನ್ ಅವರು ನನ್ನ ಮೊದಲ ನಿರ್ದೇಶನದ ಚಿತ್ರದಲ್ಲಿ ನಾಯಕರಾಗಿರುವುದು ಸಂತೋಷವಾಗಿದೆ. ಮುಂಬೈನ ಬರ್ಕಾ ಬಿಷ್ಟ್ ಈ ಚಿತ್ರದ ನಾಯಕಿ. ಗ್ರೀಷ್ಮಾ ಎಂಬ ಬಾಲ ಕಲಾವಿದೆ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಒಟ್ಟು ಮೂರೇ ಪಾತ್ರಗಳು.ಇದೊಂದು ಕೌಟುಂಬಿಕ ಚಿತ್ರ. ಇದುವರೆಗೂ ಸಾಕಷ್ಟು ಫ್ಯಾಮಿಲಿ ಚಿತ್ರಗಳು ಬಂದಿವೆ. ಈ ಚಿತ್ರದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ಯಾಕೆ ಸಮಸ್ಯೆಗಳು ಬರುತ್ತವೆ ಎಂಬುದನ್ನು ತೋರಿಸುತ್ತಿದ್ದೇವೆ. ಅವರಿಬ್ಬರ ನಡುವಿನ ಪ್ರೀತಿಗೆ ಯಾಕೆ ಸಮಸ್ಯೆ ಎದುರಾಗುತ್ತವೆ ಮತ್ತು ಅವರು ಅದನ್ನು ಹೇಗೆ ಪರಿಹರಿಸಿಕೊಳ್ಳುತ್ತಾರೆ ಎಂದು ಹೇಳುವುದಕ್ಕೆ ಹೊರಟಿದ್ದೇವೆ. “ಗೌರಿ” ಚಿತ್ರಕ್ಕೆ “ಶಂಕರ B/H ” ಎಂಬ ಅಡಿಬರಹವಿದೆ.  ಇದೊಂದು ವಿಭಿನ್ನವಾದ ಚಿತ್ರಕಥೆ ಎನ್ನಬಹುದು.  ಕೌಟುಂಬಿಕ ಚಿತ್ರವಾದರೂ, ಕಥೆ ಕಾಡಿನಲ್ಲಿ ನಡೆಯುತ್ತದೆ. ದಾಂಡೇಲಿ, ಯಲ್ಲಾಪುರದಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶಕ ಅನೀಸ್.

    ನನಗೆ ಕನ್ನಡದಲ್ಲಿ‌ ಇದು ಮೊದಲನೆಯ ಚಿತ್ರ. ಅದರಲ್ಲೂ ದಕ್ಷಿಣ ಭಾರತದಲ್ಲೇ ಮೊದಲು ಎನ್ನಬಹುದು. ರವಿಚಂದ್ರನ್ ಸರ್ ಜೊತೆ ನಟಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ ನಾಯಕಿ ಬರ್ಕಾ ಬಿಷ್ಟ್. ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಹದಿನೈದನೇ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎನ್ ಎಸ್ ರಾಜಕುಮಾರ್.

    Live Tv
    [brid partner=56869869 player=32851 video=960834 autoplay=true]

  • ರವಿಚಂದ್ರನ್ ಸಿನಿಮಾಗಾಗಿ ಮತ್ತೋರ್ವ ಬಾಲಿವುಡ್ ಹೀರೋಯಿನ್ ಎಂಟ್ರಿ

    ರವಿಚಂದ್ರನ್ ಸಿನಿಮಾಗಾಗಿ ಮತ್ತೋರ್ವ ಬಾಲಿವುಡ್ ಹೀರೋಯಿನ್ ಎಂಟ್ರಿ

    ನ್ನಡ ಸಿನಿಮಾ ರಂಗಕ್ಕೆ ಅತೀ ಹೆಚ್ಚು ಬಾಲಿವುಡ್ ನಟಿಯರನ್ನು ಪರಿಚಯಿಸಿದ ಕೀರ್ತಿ ಕ್ರೇಜಿಸ್ಟಾರ್ ರವಿಚಂದ್ರನ್‌ಗೆ ಸಲ್ಲುತ್ತದೆ. ಇದೀಗ ಮತ್ತೆ ರವಿಚಂದ್ರನ್ ಸಿನಿಮಾದಲ್ಲಿ ಹಿಂದಿ ನಟಿಯು ಕಾಣಿಸಿಕೊಂಡಿದ್ದು, ಇಂದು ನಡೆದ ಮುಹೂರ್ತ ಸಮಾರಂಭದಲ್ಲೂ ಅವರು ಹಾಜರಿದ್ದರು. ರವಿಚಂದ್ರನ್ ನಟನೆಯ ಗೌರಿ ಹೆಸರಿನ ಸಿನಿಮಾಗೆ ಇಂದು ಬೆಂಗಳೂರಿನಲ್ಲಿ ಮುಹೂರ್ತ ನಡೆದಿದ್ದು, ನಟಿ ಬರ್ಖಾ ಸೇನ್ ಗುಪ್ತಾ ಕೂಡ ಆಗಮಿಸಿದ್ದಾರೆ.

    ಅನೀಶ್ ಅನ್ನುವವರು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಕಡಿಮೆ ಪಾತ್ರಗಳ ಮೂಲಕ ಕಥೆಯನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಕೇವಲ ಮೂರೇ ಮೂರು ಪ್ರಮುಖ ಪಾತ್ರಗಳು ಸಿನಿಮಾದಲ್ಲಿದ್ದು, ಪ್ರಾಣಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಹಾಗಾಗಿ ದಾಂಡೇಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಮುಹೂರ್ತದ ನಂತರ ಮಾತನಾಡಿದ ರವಿಚಂದ್ರನ್, ‘ಇದು ಹೊಸ ಕಾಲಘಟ್ಟ. ಹೊಸ ಹೊಸ ಕಥೆಗಳು ಬರುತ್ತಿವೆ. ಒಂದೊಳ್ಳೆ ಕಥೆ ಸಿಕ್ಕಾಗ ಇಲ್ಲ ಅನ್ನುವುದಕ್ಕೆ ಆಗಲಿಲ್ಲ. ಹೊಸ ವರ್ಷದ ಶುರುವಿನಲ್ಲೇ ಹೊಸ ರೀತಿಯ ಸಿನಿಮಾ ಸಿಕ್ಕಿದೆ. ಖುಷಿ ಆಗುತ್ತಿದೆ’ ಎಂದಿದ್ದಾರೆ. ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಶಿವರಾಜ್ ಕುಮಾರ್ ಚಾಲನೆ ನೀಡಿದ್ದಾರೆ. ಮುಂದಿನ ವಾರದಿಂದ ಚಿತ್ರತಂಡ ಶೂಟಿಂಗ್ ಪ್ರಾರಂಭ ಮಾಡಲಿದೆ.

    Live Tv
    [brid partner=56869869 player=32851 video=960834 autoplay=true]

  • ನಟ ಅನೀಶ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ ಅಭಿಷೇಕ್ ಶೆಟ್ಟಿ

    ನಟ ಅನೀಶ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆ ಅಭಿಷೇಕ್ ಶೆಟ್ಟಿ

    ‘ನಮ್ ಗಣಿ ಬಿಕಾಂ ಪಾಸ್’, ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ಪ್ರತಿಭಾನ್ವಿತ ನಿರ್ದೇಶಕ ಅಭಿಷೇಕ್ ಶೆಟ್ಟಿ. ಗಜಾನನ ಅಂಡ್ ಗ್ಯಾಂಗ್ ನಂತರ ಸದ್ದಿಲ್ಲದೆ ಹೊಸ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದು ಅದರ ಲೇಟೆಸ್ಟ್ ಸುದ್ದಿ ಹೊರಬಿದ್ದಿದೆ.

    ‘ಅಕಿರಾ’, ‘ವಾಸು ನಾನ್ ಪಕ್ಕಾ ಕಮರ್ಶಿಯಲ್’, ಸಿನಿಮಾ ಖ್ಯಾತಿಯ ನಟ ಅನೀಶ್  ಮುಂದಿನ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳಲ್ಲಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಕೆಲಸ ನೋಡಿ ಇಂಪ್ರೆಸ್ ಆಗಿರುವ ಅನೀಶ್ ಅಭಿಷೇಕ್ ಶೆಟ್ಟಿ ಜೊತೆ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ‘ಅಕಿರಾ’ ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, ‘ಗುಳ್ಟು’ ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ಬಿಗ್‌ ಬಾಸ್‌ ಮನೆಯಲ್ಲಿ ಮತ್ತೆ ರೂಪೇಶ್ ರಾಜಣ್ಣ ಕಿರಿಕ್

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಅಭಿಷೇಕ್ ಶೆಟ್ಟಿ ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಅನೀಶ್ ಹೊಸ ಅವತಾರದಲ್ಲಿ ಕಾಣಸಿಗಲಿದ್ದಾರೆ. ಈವರೆಗೆ ಅನೀಶ್ ಮಾಡಿರುವ ಸಿನಿಮಾಗಳಿಗಿಂತ ಈ ಸಿನಿಮಾ ಖಂಡಿತ ಭಿನ್ನವಾಗಿರುತ್ತೆ. ಸದ್ಯ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಸದ್ಯದಲ್ಲೇ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳೋದಾಗಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಮನ್ ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಭಾರತದ ಪರ ದಾಖಲೆ ಬರೆದ 15 ವರ್ಷದ ಅನೀಶ್

    ಕಾಮನ್ ವೆಲ್ತ್ ಗೇಮ್ಸ್ ಇತಿಹಾಸದಲ್ಲಿ ಭಾರತದ ಪರ ದಾಖಲೆ ಬರೆದ 15 ವರ್ಷದ ಅನೀಶ್

    ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 15 ವರ್ಷದ ಶೂಟರ್ ಅನೀಶ್ ಬನ್ವಾಲಾ ಚಿನ್ನ ಗೆಲ್ಲುವ ಮೂಲಕ ಭಾರತ ಪರ ಚಿನ್ನ ಪದಕ ಗೆದ್ದ ಕಿರಿಯ ಎಂಬ ದಾಖಲೆ ನಿರ್ಮಿಸಿದ್ದಾರೆ.

    25 ಎಮ್ ರ‍್ಯಾಪಿಡ್  ಫೈರ್ ಪಿಸ್ತೂಲ್ ನಲ್ಲಿ ಅನೀಶ್ ಚಿನ್ನವನ್ನು ಗೆದ್ದುಕೊಂಡಿದ್ದು, ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 16 ನೇ ಚಿನ್ನದ ಪದಕವಾಗಿದೆ. ತಮ್ಮ ಮೊದಲ ಕಾಮನ್ ವೆಲ್ತ್ ಗೇಮ್ಸ್ ಪ್ರಯತ್ನದಲೇ ಚಿನ್ನ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದರೊಂದಿಗೆ ಶೂಟಿಂಗ್‍ನ ಮಹಿಳೆಯರ 50 ಮೀಟರ್ ರೈಫಲ್ ಪ್ರೋನ್ ಸ್ಪರ್ಧೆಯಲ್ಲಿ ಭಾರತದ ತೇಜಸ್ವಿನಿ ಬೆಳ್ಳಿ ಪದಕ ಪಡೆದಿದ್ದಾರೆ.

    ಪದಕ ಪಟ್ಟಿಯಲ್ಲಿ ಭಾರತ ಒಟ್ಟು 16 ಚಿನ್ನ, 8 ಬೆಳ್ಳಿ, 10 ಕಂಚಿನ ಪದಕಗಳೊಂದಿಗೆ 3ನೇ ಸ್ಥಾನದಲ್ಲಿ ಮುಂದುವರಿದಿದೆ. ಭಾರತ ಈ ಹಿಂದೆ ಕಾ 2002 ಮ್ಯಾಂಚೆಸ್ಟರ್, 2006 ಮೆಲ್ಬರ್ನ್ ಹಾಗೂ 2010ರ ದೆಹಲಿ ಗೇಮ್ಸ್ ನಲ್ಲಿ ಕ್ರಮವಾಗಿ 30, 22, 38 ಚಿನ್ನದ ಪದಕಗಳನ್ನು ಜಯಿಸಿತ್ತು.