Tag: ಅನುದಾನ ಹಂಚಿಕೆ

  • ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

    ಅನುದಾನ ಹಂಚಿಕೆಯಲ್ಲಿ ರಾಜ್ಯಗಳ ನಡುವೆ ತಾರತಮ್ಯ ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

    – ಹಣಕಾಸು ಆಯೋಗದ ಶಿಫಾರಸು ಆಧಾರದ ಮೇಲೆ ರಾಜ್ಯಗಳಿಗೆ ಹಣ ಬಿಡುಗಡೆ

    ನವದೆಹಲಿ: ಹಣಕಾಸು ಆಯೋಗದ (Finance Commission) ಶಿಫಾರಸು ಆಧರಿಸಿ ರಾಜ್ಯಗಳಿಗೆ ಅನುದಾನ ನೀಡಲಾಗುತ್ತಿದೆ. ಜಿಎಸ್‌ಟಿ ಅದರಲ್ಲೂ ರಾಜ್ಯಗಳ ಪಾಲಿನ ಜಿಎಸ್‌ಟಿಯನ್ನು (GST) ನೂರಕ್ಕೆ ನೂರರಷ್ಟು ರಾಜ್ಯಗಳಿಗೆ ನೀಡಲಾಗುತ್ತಿದೆ. ಆಯೋಗದ ಶಿಫಾರಸು ಉಲ್ಲಂಘಿಸಿ ರಾಜ್ಯಗಳ ನಡುವೆ ತಾರತಮ್ಯ ಮಾಡಲು ಸಾಧ್ಯವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಲೋಕಸಭೆಯಲ್ಲಿ ಹೇಳಿದ್ದಾರೆ.

    ತೆರಿಗೆ ಅನ್ಯಾಯ ಪ್ರಶ್ನಿಸಿ ಕರ್ನಾಟಕ ರಾಜ್ಯ ಸರ್ಕಾರದ ಪ್ರತಿಭಟನೆಯನ್ನು ಉಲ್ಲೇಖಿಸಿದ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವು ರಾಜ್ಯಗಳು ಮಾಡುತ್ತಿರುವ ತೆರಿಗೆ ತಾರತಮ್ಯ ರಾಜಕೀಯವಾಗಿ ದೂಷಣೆಯಾಗಿದ್ದು, ಇದು ಸತ್ಯವಲ್ಲ. ಕೇಂದ್ರ ಹಣಕಾಸು ಆಯೋಗದ ಶಿಫಾರಸು ಅನ್ವಯ ಅನುದಾನ ನೀಡುತ್ತಿದೆ ಎಂದರು. ಇದನ್ನೂ ಓದಿ: ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

    ಹಣಕಾಸು ಆಯೋಗವು ಎಲ್ಲಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಶಿಫಾರಸು ಮಾಡುತ್ತದೆ. ಇದು ರಾಜ್ಯ ಸರ್ಕಾರಗಳಿಗೂ ಗೊತ್ತು. ಈ ಸತ್ಯಾಂಶ ಬಿಟ್ಟು ರಾಜಕೀಯ ಆರೋಪ ಮಾಡಲಾಗುತ್ತಿದೆ ಎಂದರು. ಮುಂದುವರಿದು ಬೇಕಾಬಿಟ್ಟಿ ಹಣ ಖರ್ಚು ಮಾಡಿ ನಿಮ್ಮ ರಾಜ್ಯದ ಬಜೆಟ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗದೇ ಕೇಂದ್ರ ಸರ್ಕಾರವನ್ನು ದೂಷಿಸಬೇಡಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಹುನ್ನಾರ: ಹರಿಪ್ರಸಾದ್ ವಾಗ್ದಾಳಿ

    ಯಾವುದೇ ಕೇಂದ್ರ ಹಣಕಾಸು ಸಚಿವರು ಹಣಕಾಸು ಆಯೋಗದ ಶಿಫಾರಸುಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ. ನನಗೆ ಈ ರಾಜ್ಯ ಇಷ್ಟವಿಲ್ಲ. ತೆರಿಗೆ ಮರುಪಾವತಿಯನ್ನು ನಿಲ್ಲಿಸಿ ಎಂದು ಹೇಳಲು ಯಾವುದೇ ಹಣಕಾಸು ಸಚಿವರಿಗೆ ಅಧಿಕಾರ ಇಲ್ಲ. ಸಚಿವರು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ. ಈ ವ್ಯವಸ್ಥೆ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

    ಇದಕ್ಕೂ ಮುನ್ನ ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅಧೀರ್ ರಂಜನ್ ಚೌಧರಿ, ಕರ್ನಾಟಕದ ಬಗ್ಗೆ ಕೇಂದ್ರದ ವಿವೇಚನಾರಹಿತ ಮತ್ತು ನಿರಂಕುಶ ವರ್ತನೆಯ ಹಿಂದಿನ ಕಾರಣವನ್ನು ಸೀತಾರಾಮನ್ ಅವರಿಗೆ ಕೇಳಿದರು. ಕೆಲವು ತಿಂಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲವಾದ್ದರಿಂದ ಕರ್ನಾಟಕ ರಾಜ್ಯ ಸರ್ಕಾರವು ನ್ಯಾಯಸಮ್ಮತವಾದ ಬಾಕಿಯನ್ನು ಪಡೆಯುವುದರಿಂದ ವಂಚಿತವಾಗಿದೆಯೇ ಎಂದು ನಾನು ತಿಳಿಯಲು ಬಯಸುತ್ತೇನೆ ಎಂದಿದ್ದರು. ಇದನ್ನೂ ಓದಿ: ನನ್ನ ರಾಮನನ್ನು ಬಿಜೆಪಿಗೆ ಬಿಟ್ಟುಕೊಡಲ್ಲ – ಶಶಿ ತರೂರ್‌

  • ಸಿಎಂ ವಿರುದ್ಧ ಗುಡುಗು- ಮಾರ್ಚ್ 25ರ ಸಭೆಯ ರಹಸ್ಯ ಬಿಚ್ಚಿಟ್ಟ ಯತ್ನಾಳ್

    ಸಿಎಂ ವಿರುದ್ಧ ಗುಡುಗು- ಮಾರ್ಚ್ 25ರ ಸಭೆಯ ರಹಸ್ಯ ಬಿಚ್ಚಿಟ್ಟ ಯತ್ನಾಳ್

    – ಬಿಜೆಪಿಯ 40 ಶಾಸಕರಿಗೆ ಮಾತ್ರ ಅನುದಾನ
    – ಶಾಸಕರಲ್ಲಿ ಸಿಎಂ ಬಗ್ಗೆ ಅಸಮಾಧಾನ

    ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶ ಹೊರ ಹಾಕಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾರ್ಚ್ 25ರ ಸಭೆಯ ರಹಸ್ಯ ಬಿಚ್ಚಿಟ್ಟಿದ್ದಾರೆ.

    25-03-2021 ರಂದು ನಡೆದ ಸುಮಾರು 25 ಮಾನ್ಯ ಶಾಸಕರ ಹಾಗೂ ಸಚಿವರ ಸಭೆ ಮಾನ್ಯ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ನಡೆಯಿತು. ಇದರ ಉದ್ದೇಶ ಮಾನ್ಯ ಶಾಸಕರ ಕ್ಷೇತ್ರಗಳಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಿಡುಗಡೆ ಆಗದೆ ಇರುವುದು, ಸಮಾನವಾಗಿ ಹಂಚಿಕೆ ಮಾನ್ಯ ಯಡಿಯೂರಪ್ಪನವರು ಮಾಡದೆ ಇರುವುದು ಮತ್ತು ಸಚಿವರು ಮಾನ್ಯ ಶಾಸಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು, ಅದರ ಜೊತೆಗೆ ಮಾನ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಶ್ರೀ ಈಶ್ವರಪ್ಪನವರ ಗಮನಕ್ಕೆ ತರದೆ ಸನ್ಮಾನ್ಯ ಶ್ರೀ ಯಡಿಯೂರಪ್ಪನವರು ನೇರವಾಗಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಸುಮಾರು 1000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

    ಅದರಲ್ಲೂ ಭಾರತೀಯ ಜನತಾ ಪಕ್ಷದ ಎಲ್ಲಾ ಗ್ರಾಮೀಣ ಪ್ರದೇಶದ ಶಾಸಕರಿಗೆ ಸರಿ ಸಮಾನವಾಗಿ ಅಭಿವೃದ್ಧಿ ಹಣವನ್ನು ನೀಡದೆ ಇರುವ ಬಗ್ಗೆ ಮಾನ್ಯ ಯಡಿಯೂರಪ್ಪನವರ ಬಗ್ಗೆ ಶಾಸಕರಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ.

    ಮೇಲಿನ ಕಾರಣಕ್ಕೆ ಸಭೆ ನಡೆದಿದ್ದು ನನ್ನ ಬಗ್ಗೆ ಸುಮಾರು 65 ಶಾಸಕರು ನನ್ನ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸಹಿ ಸಂಗ್ರಹ ಅಭಿಯಾನ ಮಾಡಿದ್ದಾರೆ ಎಂಬುದು ಸಂಪೂರ್ಣ ಸತ್ಯಕ್ಕೆ ದೂರವಾದ ಮಾತು. ನಾನು ಭಾಗವಹಿಸಿದ ಅನೇಕ ಮಾನ್ಯ ಶಾಸಕರುಗಳಿಗೆ ವಿಚಾರಿಸಿದಾಗ ಒಬ್ಬರೂ ಸಹ ಸಹಿ ಮಾಡಿಲ್ಲ ಎಂದು ತಿಳಿಸಿದರು. ಒಂದು ವೇಳೆ ಅಭಿವೃದ್ಧಿ ಹಣ ಬಿಡುಗಡೆ ಮತ್ತು ಶಾಸಕರ ಕ್ಷೇತ್ರಗಳಿಗೆ ಅನುದಾನ ಪತ್ರದಲ್ಲಿ ನನ್ನ ಬಗ್ಗೆ ಉಲ್ಲೇಖ ಮಾಡಿದ್ದರೆ ಅದು ಮಾನ್ಯ ಶಾಸಕರ ಗಮನಕ್ಕೆ ತರದೆ ತಿರುಚಿದ್ದರೆ ಅದು ಮೋಸ ಮಾಡಿದಂತೆ.

    ಮಾನ್ಯ ಯಡಿಯೂರಪ್ಪನವರು ತಮ್ಮ ಹತ್ತಿರದ ಸಂಬಂಧಿ ಮರಿಸ್ವಾಮಿ ಅಧ್ಯಕ್ಷ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅವರಿಗೆ 82 ಕೋಟಿ ಹಣವನ್ನು ನೇರವಾಗಿ ಬಿಡುಗಡೆ ಮಾಡಿದ್ದು ಅಲ್ಲದೆ ತುಂಡು ಗುತ್ತಿಗೆ ನೀಡಲು ತೀವ್ರ ಒತ್ತಡ ಹೇರುತ್ತಿದ್ದಾರೆ. ಆದರೆ ಮಾನ್ಯ ಶಾಸಕರಿಗೆ ಸಮಾನವಾಗಿ ಅನುದಾನ ನೀಡಿಲ್ಲ ಉದಾಹರಣೆಗೆ ಒಬ್ಬ ಬಿಜೆಪಿ ಶಾಸಕರಿಗೆ ಒಂದು ಕೋಟಿ ಇನ್ನೊಬ್ಬ ಬಿಜೆಪಿ ಶಾಸಕರಿಗೆ 25 ಕೋಟಿ. 120 ಶಾಸಕರ ಬಿಜೆಪಿ ಶಾಸಕರಲ್ಲಿ ಕೇವಲ 40 ಶಾಸಕರಿಗೆ ಮಾತ್ರ ಅನುದಾನ ನೀಡಲಾಗಿದೆ.

    ಕೆಲವು ಸುದ್ದಿಮಾಧ್ಯಮಗಳಲ್ಲಿ “ಯತ್ನಾಳ ವಿರುದ್ಧ ಶಾಸಕರ ಅಕ್ರೋಶ” ಎಂದು ಕಪೋಲ ಕಲ್ಪಿತ ಸುದ್ದಿ ಮಾಡಿಸಿದ ಯುವರಾಜ್ ಮತ್ತು ಕಂಪನಿ ತಮ್ಮ ವ್ಯಾಪಕ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣದಿಂದ ಪಕ್ಷ ಹಾಗೂ ಶಾಸಕರು ಸಂಪೂರ್ಣ ಬೇಸತ್ತು ಹೋಗಿದ್ದಾರೆ ಅಲ್ಲದೆ ನಿಷ್ಠಾವಂತ ಕಾರ್ಯಕರ್ತರನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿದೆ. ಹೊಗಳು ಭಟ್ಟರು ದಲ್ಲಾಳಿಗಳು ರಾಜ್ಯವನ್ನು ಹಗಲು ದರೋಡೆ ಮಾಡುತ್ತಿದ್ದಾರೆ. ಮಾನ್ಯ ಯಡಿಯೂರಪ್ಪನವರು ಇತ್ತೀಚಿನ ದಿನಗಳಲ್ಲಿ ತಮ್ಮ ಕುಹಕತನ ಮತ್ತು ಯುವರಾಜನ ಅಧಿಕಾರ ಹಣದಾಹಕ್ಕಾಗಿ ತಮ್ಮ ಅತ್ಯಂತ ಆತ್ಮೀಯ ಕು. ಶೋಭಾ. ಕರಂದ್ಲಾಜೆ, ಶ್ರೀ ರಮೇಶ್. ಜಾರಕಿಹೊಳಿ ಶ್ರೀ ಈಶ್ವರಪ್ಪನವರು. ಪ್ರಾಮಾಣಿಕ ಪತ್ರಕರ್ತರುಗಳಾದ ಎಂ.ಬಿ.ಮರಮ್ಕಲ್ ಹಾಗೂ ಮಹಾದೇವ ಪ್ರಕಾಶ್ ಮತ್ತು ಅನೇಕ ಪ್ರಾಮಾಣಿಕ ದಕ್ಷ ಅಧಿಕಾರಿಗಳು ಬಲಿಪಶುಗಳಾಗಿದ್ದು ಅವರ ಅಧಿಕಾರ ದಾಹ ಕುಟುಂಬದ ಹಣದದಾಹ ಅತ್ಯಂತ ಅಸಹ್ಯ. ಸಾರ್ವಜನಿಕ ಸಭೆಗಳಲ್ಲಿ ಮತ್ತು ಗ್ರಹ ಕಚೇರಿಗಳಿಗೆ ಬರುವ ಮಹಿಳೆಯರ ಜೊತೆ ಅವರ ವರ್ತನೆ ಅವರ ವ್ಯಕ್ತಿತ್ವಕ್ಕೆ ಮತ್ತು ವಯಸ್ಸಿಗೆ ಅತ್ಯಂತ ಅವಮಾನ.

    ಕಳೆದ ವರ್ಷದ ಅವಧಿಯಲ್ಲಿ ಒಂದೂ ಶಾಸಕಾಂಗ ಪಕ್ಷದ ಸಭೆ ಕರೆಯದೆ ಶಾಸಕರ ಭಾವನೆ ಮತ್ತು ಅವರ ಸಮಸ್ಯೆಗಳನ್ನು ಹೇಳಿಕೊಳ್ಳಲು ಮುಕ್ತ ಅವಕಾಶ ಇಲ್ಲದೆ ಇರುವುದು ಶಾಸಕರಲ್ಲಿ ತೀವ್ರ ಅಸಮಾಧಾನ ಇದೆ. ಶಾಸಕಾಂಗ ಸಭೆ ಕರೆದರೆ ಭಿನ್ನಮತ ಸ್ಪೊಟ ಆಗುವ ಭಯದಿಂದ ಒಂದೂ ಶಾಸಕಾಂಗ ಪಕ್ಷದ ಸಭೆ ಕರೆಯದೆ ಈ ಅಧೀವೇಶನ ಮುಕ್ತಾಯ ಗೊಳಿಸಿದ್ದು ದುರದೃಷ್ಟಕರ.

    ಆಶ್ಚರ್ಯಕರ ಏನೆಂದರೆ ನನ್ನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕಾಂಗ ಸಭೆ ಕರೆಯಲು ಒಬ್ಬ ಶಾಸಕರು ನನ್ನನ್ನು ಏಕವಚನದಲ್ಲಿ ನಿಂದಿಸಿ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರು. ಆದರೆ ಆ ಸಭೆ ಕರೆಯುವ ಧೈರ್ಯ ಮಾನ್ಯ ಶ್ರೀ ಯಡಿಯೂರಪ್ಪನವರು ಮಾಡಲಿಲ್ಲ ಏಕೆ ಎಂದು ನನ್ನ ಪ್ರಶ್ನೆ? ತಮ್ಮ ಶಕ್ತಿ ಪ್ರದರ್ಶನ ಮಾಡಲಿಕ್ಕೆ ಕೇಂದ್ರಿಯ ಪಕ್ಷ ಅಂಜಿಸಲಿಕ್ಕೆ ತಮ್ಮ ಜೊತೆ 65 ಶಾಸಕರ ಇದ್ದಾರೆ ಎಂದು ತೋರಿಸಲು ಈ ಸಭೆ ಹೊರತು ಶಾಸಕರ ಸಮಸ್ಯೆಗಳನ್ನು ಪರಿಹರಿಸಲು ಕರೆದ ಸಭೆ ಅಲ್ಲ. ಇಂತಹ ಎಷ್ಟೋ ಸಭೆಗಳು ಕರೆದಿದ್ದಾರೆ ಅದರ ಫಲಶ್ರುತಿ ಶೂನ್ಯ.

    ನಮ್ಮ ಪಕ್ಷದ ಮೂಲ ಸಿದ್ಧಾಂತ ರಾಷ್ಟ್ರೀಯತೆ, ಹಿಂದೂತ್ವ. ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ವಿರುದ್ಧ ಹೋರಾಟ ಮಾಡಿರುವ ಪಕ್ಷ ನಮ್ಮ ರಾಷ್ಟೀಯ ಉನ್ನತ ನಾಯಕರಾದ ಶ್ರೀ ಅಟಲ್ ಬಿಹಾರಿ ವಾಜಪೇಯಿ, ಶ್ರೀ ಲಾಲ್ ಕೃಷ್ಣ ಅಡ್ವಾಣಿ ಮತ್ತು ನಮ್ಮ ಹೆಮ್ಮೆಯ ವಿಶ್ವ ನಾಯಕರಾದ ಕಳಂಕ ರಹಿತ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರು ನಮ್ಮ ಆದರ್ಶ ಇವರೆಲ್ಲ ಭ್ರಷ್ಟಾಚಾರ. ಕುಟುಂಬ ರಾಜಕಾರಣ ಮಾಡಲೇ ಇಲ್ಲ. ಅವರೆಲ್ಲರ ಕನಸುಗಳಿಗೆ ಕಳಂಕ ತರುವ ಕೆಲಸ ಯಡಿಯೂರಪ್ಪನವರು ಮತ್ತು ಅವರ ಕುಟುಂಬ ಮಾಡುತ್ತಿದೆ.

    ಇಂದು ವಿಶ್ವದ ನಮ್ಮ ಹೆಮ್ಮೆಯ ನಾಯಕ ಹಾಗೂ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಜೀ ಅವರು ಆದರ್ಶ ನನಗೆ ಸಂಪೂರ್ಣ ವಿಶ್ವಾಸವಿದೆ ನಾನು ಎತ್ತಿದ ಪ್ರಶ್ನೆಗಳಿಗೆ ನ್ಯಾಯ ಸಿಕ್ಕೆ ಸಿಗುತ್ತದೆ. ನಾನು ತೆಗೆದುಕೊಂಡ ಹೋರಾಟ ಯಶಸ್ವಿಯಾಗುತ್ತದೆ.