ತುಮಕೂರು: ಶಿವೈಕ್ಯ ಶಿವಕುಮಾರ ಶ್ರೀಗಳ (Shivakumar Swamiji) ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಸಿದ್ದಗಂಗಾ ಮಠಕ್ಕೆ (Siddaganga Mutt) ಭೇಟಿ ಕೊಟ್ಟು ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಶಿವಕುಮಾರ ಶ್ರೀಗಳ ಸಮಾಜ ಸೇವೆಯನ್ನು ಸ್ಮರಿಸಿದರು.
ಇದೇ ವೇಳೆ ಮಾತನಾಡಿದ ಪರಮೇಶ್ವರ್, ಶಿವಕುಮಾರ ಶ್ರೀಗಳ ಹೆಸರಿನಲ್ಲಿ ಆಚರಿಸಲು ಉದ್ದೇಶಿಸಿರುವ ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದರು. ಅಲ್ಲದೇ ವೀರಾಪುರದಲ್ಲಿ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಈ ಬಾರಿಯ ಬಜೆಟ್ನಲ್ಲಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ – ಫಾರೆಸ್ಟ್ ವಾಚರ್, ಸಂಬಂಧಿ ಬಂಧನ
ಇದೇ ವೇಳೆ ಕೆಲ ರಾಜಕೀಯ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಂಗಳವಾರ ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ತ್ಯಾಗದ ಬಗ್ಗೆ ಮಾತನಾಡಿರೋದು ಯಾವ ಅರ್ಥದಲ್ಲಿ ಅನ್ನೋದು ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟದಿಂದಲೂ ತ್ಯಾಗ ಮಾಡುತ್ತಾ ಬಂದಿದೆ. ಆದರೆ ಈಗಿನ ಆಧುನಿಕ ಸಮಾಜಕ್ಕೆ ತ್ಯಾಗದ ಮನೋಭಾವ ಕಡಿಮೆಯಾಗಿದೆ ಎಂಬ ಅರ್ಥದಲ್ಲಿ ಹೇಳಿರಬಹುದು. ಅದರಂತೆ ಸ್ವಾಭಾವಿಕವಾಗಿ ಕಾಂಗ್ರೆಸ್ನಲ್ಲೂ ತ್ಯಾಗದ ಮನೋಭಾವ ಕಡಿಮೆ ಆಗಿದೆ ಎಂದು ಹೇಳಿರಬಹುದು ಎಂದರು. ಇದನ್ನೂ ಓದಿ: ವ್ಹೀಲ್ ಚೇರ್ನಲ್ಲಿ ರಶ್ಮಿಕಾ ಮಂದಣ್ಣ- ವಿಡಿಯೋ ವೈರಲ್
ಮೈಕ್ರೋಫೈನಾನ್ಸ್ನವರು ಗೈಡ್ಲೈನ್ಸ್ ಉಲ್ಲಂಘಿಸಿ ಸಾಲಗಾರರಿಗೆ ತೊಂದರೆ ಕೊಡುತ್ತಿದ್ದಾರೆ. ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಹಲವು ಜನರ ಮೇಲೆ ಕ್ರಮ ಕೈಗೊಂಡಿದ್ದೇವೆ. ಹಾಗೆಯೇ ಲೈಸೆನ್ಸ್ ಇಲ್ಲದ ಫೈನಾನ್ಸ್ನವರ ಸರ್ವೆಯನ್ನು ಹಣಕಾಸು ಇಲಾಖೆ ಮಾಡಬೇಕು ಎಂದು ನುಣುಚಿಕೊಂಡರು. ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಲು ನಾಲಾಯಕ್: ಜೆಡಿಎಸ್ ಕಿಡಿ
ಬೆಂಗಳೂರು: ಹೆಚ್ಚುವರಿ ಅನುದಾನಕ್ಕೆ ಬೇಡಿಕೆ ಇಡುತ್ತಿದ್ದ ಶಾಸಕರನ್ನ ಸಮಾಧಾನ ಪಡಿಸಲು ಮುಂದಾದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗ್ರಾಮೀಣ ಭಾಗದ ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.
ಕಲಬುರಗಿ: ನಗರಕ್ಕೆ ಆಗಮಿಸಿದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಬೈರತಿ ಸುರೇಶ್ (Byrathi suresh) ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ (Kalaburagi Municipal Corporation) ಮೇಯರ್, ಉಪಮೇಯರ್ ಸೇರಿದಂತೆ ಹಾಗೂ ಸ್ಥಾಯಿ ಸಮಿತಿ ಸದಸ್ಯರು ಪುಷ್ಫಗುಚ್ಛ ನೀಡಿ ಸ್ವಾಗತಿಸಿದರು.
ಮೇಯರ್ ಯಲ್ಲಪ್ಪ ಎಸ್.ನಾಯಕೋಡಿ, ಮಾಜಿ ಮೇಯರ್ ಸಯ್ಯದ್ ಅಹ್ಮದ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪರವೀನ್ ಬೇಗಂ, ಶ. ಸಚಿನ ಶಿರವಾಳ, ಮುಹಮ್ಮದ್ ಅಜೀಮೊದ್ದಿನ್, ಇರ್ಫಾನಾ ಪರವೀನ್, ಲತಾ ರವೀಂದ್ರ ಕುಮಾರ, ಪಾಲಿಕೆಯ ಸದಸ್ಯರು ಸಚಿವರನ್ನು ಸ್ವಾಗತಿಸಿ, ಮನವಿ ಸಲ್ಲಿಸಿದರು. ಇದನ್ನೂ ಓದಿ: ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಮಧುಗಿರಿ ಡಿವೈಎಸ್ಪಿ ಅಮಾನತು, ಬಂಧನ
ಕಲಬುರಗಿ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನದ ಬೇಡಿಕೆ ಇದ್ದು, ರಸ್ತೆಗಳು ಮತ್ತು ಒಳಚರಂಡಿಗಳಿಗೆ 70 ಕೋಟಿ ರೂ. ಅನುದಾನದ ಅಗತ್ಯವಿದೆ. ಅಲ್ಲದೇ ಕಲಬುರಗಿ ನಗರದ ಹೊರವಲಯದಲ್ಲಿ 4 ದಿಕ್ಕಿನಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ಸಲುವಾಗಿ ಭೂಮಿ ಖರೀದಿಸುವುದಕ್ಕಾಗಿ 100 ಕೋಟಿ ರೂ., ಮಹಾನಗರ ಪಾಲಿಕೆಯ ಸಭಾಭವನ ಕಟ್ಟಡಕ್ಕಾಗಿ 20 ಕೋಟಿ ರೂ., ರಸ್ತೆ ಅಗಲೀಕರಣಕ್ಕಾಗಿ 20 ಕೋಟಿ ರೂ., ಸರಡಗಿ ನಾಲಾ ಡೈವರ್ಶನ ಕಾಮಗಾರಿಗಾಗಿ 10 ಕೋಟಿ ರೂ., ನೀರು ಸರಬರಾಜು ಯೋಜನೆಗಾಗಿ 190.4 ಕೋಟಿ ರೂ., ಒಳಚರಂಡಿ ವ್ಯವಸ್ಥೆಗಾಗಿ 350 ಕೋಟಿ ರೂ. ಅನುದಾನ, ಉದ್ಯಾನವನ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಕಲಬುರಗಿ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಯಿತು.
ಅಲ್ಲದೇ ಕಲಬುರಗಿ ಸ್ಥಳೀಯ ಪ್ರದೇಶದಲ್ಲಿ ಮಂಡಲ/ಗ್ರಾಮ ಪಂಚಾಯಿತಿಯಿಂದ ಹಸ್ತಾಂತರಗೊಂಡ ಮತ್ತು ಅನುಮೋದನೆಗೊಂಡ ವಿನ್ಯಾಸಗಳಲ್ಲಿಯ ನಿವೇಶನಗಳ ಕರವಸೂಲಿ, ಕಟ್ಟಡ ಪರವಾನಿಗೆ ಹಾಗೂ ಇನ್ನಿತರ ಎಲ್ಲಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಸೂಕ್ತ ಮಾರ್ಗದರ್ಶನ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅನುಮತಿ ನೀಡುವಂತೆ ಕೋರಲಾಯಿತು.
ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ ನೀಡಲು ಪ್ರಸ್ತುತ ಇರುವ ವಲಯ ನಿಯಮಾವಳಿಗಳನ್ನು ಪರಿಷ್ಕರಿಸಿ ಕಲಬುರಗಿ ನಗರದ ಬೆಳವಣಿಗೆಗಾಗಿ ಕಟ್ಟಡದ ಎತ್ತರ 15 ಮೀಟರ್ ವರೆಗೆ ಹಾಗೂ ಎಫ್ಎಆರ್ 4 (ಗರಿಷ್ಠ) ವರೆಗೆ ಹೆಚ್ಚಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು. ಇದನ್ನೂ ಓದಿ: ಮಂಗಳೂರಿನಲ್ಲಿ NIA ಘಟಕ ಸ್ಥಾಪಿಸಿ – ದ.ಕ. ಸಮಗ್ರ ಅಭಿವೃದ್ಧಿಗೆ ಶಾಗೆ ಚೌಟ ಮನವಿ
ಬೆಳಗಾವಿ: ನಮ್ಮದೇ ಸರ್ಕಾರ ಇದ್ದರೂ ನಮಗೆ ಅನುದಾನ (Grant) ಸಿಗುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದ ಕಾಂಗ್ರೆಸ್ ಶಾಸಕರಿಗೆ (Congress MLA’s) ಸಿಎಂ ಸಿದ್ದರಾಮಯ್ಯ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಕಾಂಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಸದನದಲ್ಲೇ ಈ ಬಗ್ಗೆ ಘೋಷಣೆ ಮಾಡಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ತಿಳಿಸಿದ್ದಾರೆ.
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ದೃಷ್ಟಿಯಿಂದ ಎರಡು ಇಲಾಖೆಯಿಂದ ಒಟ್ಟು 6 ಸಾವಿರ ರೂ. ಹಣವನ್ನು ಬಿಡುಗಡೆ ಮಾಡಲಾಗುವುದು. ಕನಿಷ್ಟ 26 ಕೋಟಿ ರೂ.ಗೂ ಹೆಚ್ಚು ಹಣ ಒಂದೊಂದು ಕ್ಷೇತ್ರಕ್ಕೆ ಸಿಗಲಿದೆ. ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಸಿಎಂ ಭರವಸೆ ನೀಡಿದ್ದಾರೆ.
– ಕರ್ನಾಟಕಕ್ಕೆ ತೆರಿಗೆ ಹಂಚಿಕೆ ಪ್ರಮಾಣದಲ್ಲಿ 239% ಏರಿಕೆ
ನವದೆಹಲಿ: ಕಾಂಗ್ರೆಸ್ (Congress) ಹಾಗೂ ಅದರ ಮಿತ್ರಪಕ್ಷಗಳು ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಅಪಪ್ರಚಾರ ಮಾಡುತ್ತಿವೆ. ಅಂಕಿ ಅಂಶಗಳನ್ನು ನೋಡಿದರೆ ಎನ್ಡಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಅನುದಾನವನ್ನು ರಾಜ್ಯಗಳಿಗೆ ನೀಡಿದೆ ಎಂದು ಗೊತ್ತಾಗುತ್ತದೆ ಎಂದು ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ (Dr K Sudhakar) ಪ್ರತಿಪಾದಿಸಿದ್ದಾರೆ.
ಲೋಕಸಭೆಯಲ್ಲಿ (Lok Sabha) ಪೂರಕ ಅನುದಾನಗಳ ಬೇಡಿಕೆ ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲೀಗ ತೆರಿಗೆ ಹಂಚಿಕೆಯಲ್ಲಿ (Tax sharing) ಅನ್ಯಾಯ ಎಂಬ ಅಪಪ್ರಚಾರ ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳು ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳುತ್ತಿವೆ. ಆದ್ರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ, ಎಲ್ಲ ರಾಜ್ಯಗಳಿಗೆ ಉತ್ತಮ ಸಹಕಾರ ನೀಡಿದೆ. ಯುಪಿಎ ಸರ್ಕಾರ ಇದ್ದಾಗ, ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ 30.5% ನಿಂದ 32% ಗೆ ಏರಿಕೆಯಾಗಿತ್ತು. ಎನ್ಡಿಎ ಅವಧಿಯಲ್ಲಿ ಇದು 40% ಗೆ ಏರಿಕೆಯಾಗಿದೆ. 2004-2014 ರ ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ 81,795 ಕೋಟಿ ರೂ. ತೆರಿಗೆ ಹಂಚಿಕೆಯಾಗಿದೆ. 2014-2024 ರ ಎನ್ಡಿಎ ಅವಧಿಯಲ್ಲಿ, 2.77 ಲಕ್ಷ ಕೋಟಿ ರೂ. ತೆರಿಗೆ ಹಂಚಿಕೆಯಾಗಿದೆ. ಅಂದರೆ ತೆರಿಗೆ ಹಂಚಿಕೆ ಪ್ರಮಾಣದಲ್ಲಿ 239% ಏರಿಕೆಯಾಗಿದೆ ಎಂದು ತಿಳಿಸಿದರು.
2004-2014 ರ ಯುಪಿಎ ಅವಧಿಯಲ್ಲಿ ಕರ್ನಾಟಕಕ್ಕೆ 60,779 ಕೋಟಿ ರೂ. ಅನುದಾನ (Grant in Aid) ದೊರೆತಿದೆ. 2014-2024 ರ ಎನ್ಡಿಎ ಅವಧಿಯಲ್ಲಿ, 2.08 ಲಕ್ಷ ಕೋಟಿ ರೂ. ಅನುದಾನ ಸಿಕ್ಕಿದೆ. ಅಂದರೆ ಅನುದಾನ 243% ರಷ್ಟು ಏರಿಕೆ ಕಂಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸಲಾಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಈ ನೀತಿಯನ್ನು ರದ್ದುಪಡಿಸಿದೆ. ಸರ್ಕಾರ ಹೊಸ ರಾಜ್ಯ ಶಿಕ್ಷಣ ನೀತಿ ತರಲಿದೆ ಎಂದು ಸ್ಪಷ್ಟನೆ ನೀಡಿದ್ದರು, ಅಂತಹ ಯಾವುದೇ ನೀತಿ ಬಂದಿಲ್ಲ. ಇದು ಯುವಜನರಿಗೆ ಕಾಂಗ್ರೆಸ್ ನೀಡುವ ನ್ಯಾಯವೇ? ಎಂದು ಪ್ರಶ್ನೆ ಮಾಡಿದರು.
ರೈತರಿಗೆ ನೆರವು:
2013-2014ರ ಯುಪಿಎ ಅವಧಿಯಲ್ಲಿ ರೈತರಿಗೆ 7 ಲಕ್ಷ ಕೋಟಿ ರೂ.ವರೆಗೆ ಸಾಲ ನೀಡಲಾಗಿತ್ತು. 2023-24 ರ ಎನ್ಡಿಎ ಅವಧಿಯಲ್ಲಿ 19 ಲಕ್ಷ ಕೋಟಿ ರೂ. ಸಾಲ ನೀಡಲಾಗಿದೆ. ಕೋವಿಡ್ ಸಮಯದಲ್ಲಿ ರಸಗೊಬ್ಬರ ದರ ದಿಢೀರನೆ ಏರಿಕೆಯಾದರೂ ಪ್ರಧಾನಿ ನರೇಂದ್ರ ಮೋದಿ ಅದರ ಹೊರೆಯನ್ನು ರೈತರ ಮೇಲೆ ಹೇರಲಿಲ್ಲ. ಇಂದಿಗೂ ರಸಗೊಬ್ಬರ ದರ ಏರಿಕೆ ಕಂಡಿಲ್ಲ. ಕನಿಷ್ಠ ಬೆಂಬಲ ಬೆಲೆಯಡಿ ಯುಪಿಎ ಸರ್ಕಾರ ಕ್ವಿಂಟಾಲ್ ಭತ್ತಕ್ಕೆ 1,310 ರೂ. ನೀಡುತ್ತಿದ್ದು, ಈಗ 3,600 ರೂ. ನೀಡಲಾಗುತ್ತಿದೆ. ಇದೇ ರೀತಿ ಎಲ್ಲ ಧಾನ್ಯಗಳಿಗೆ ಹೆಚ್ಚು ದರ ನಿಗದಿಪಡಿಸಲಾಗಿದೆ ಎಂದು ವಿವರಿಸಿದರು.
ಯುಪಿಎ ಅವಧಿಯಲ್ಲಿ ರೈತರಿಗೆ ಬಜೆಟ್ನಲ್ಲಿ 22,000 ಕೋಟಿ ರೂ. ನೀಡುತ್ತಿದ್ದರೆ, ಮೋದಿ ಸರ್ಕಾರ ಆ ಮೊತ್ತವನ್ನು 2023-24 ರಲ್ಲಿ 1,22,000 ಕೋಟಿ ರೂ.ಗೆ ಹೆಚ್ಚಳ ಮಾಡಿದೆ. 2013-2014 ರಲ್ಲಿ ರಸಗೊಬ್ಬರ ಸಹಾಯಧನ 73,000 ಕೋಟಿ ರೂ. ಆಗಿತ್ತು. ಅದನ್ನು 2023-24 ರಲ್ಲಿ ಮೋದಿ ಸರ್ಕಾರ 2.55 ಲಕ್ಷ ಕೋಟಿ ರೂ. ಗೆ ಏರಿಸಿದೆ. ಕೃಷಿ ಕ್ಷೇತ್ರದಲ್ಲಿ ಉತ್ತಮ ಯೋಜನೆಗಳ ಜಾರಿ ಮೂಲಕ ಮಾತ್ರ ಸುಧಾರಣೆ ಸಾಧ್ಯವಾಗುತ್ತದೆ. ಎನ್ಡಿಎ ಅವಧಿಯಲ್ಲಿ ಕೃಷಿ ಬೆಳವಣಿಗೆ ದರ 3.4% ಗೆ ಏರಿದೆ. 9,000 ಕೃಷಿ ಸಂಘಗಳನ್ನು ಆರಂಭಿಸಲಾಗಿದೆ. ಈ ಕ್ರಮಗಳು ರೈತ ಸಮುದಾಯವನ್ನು ಸಬಲೀಕರಣಗೊಳಿಸಿದೆ ಎಂದು ಹೇಳಿದರು.
ಕಳೆದ 60 ವರ್ಷಗಳಲ್ಲಿ ಕಾಂಗ್ರೆಸ್ ಬಡವರಿಗೆ ಅನ್ಯಾಯ ಮಾಡಿ, ಶ್ರೀಮಂತರಿಗೆ ನೆರವಾಗಿದೆ. ಆದರೆ ಬಿಜೆಪಿ ಅವಧಿಯಲ್ಲಿ ಆಡಳಿತವನ್ನು ಬೃಹತ್ ಭ್ರಷ್ಟಾಚಾರದಿಂದ ಬೃಹತ್ ಯೋಜನೆಗಳ ಕಡೆಗೆ ತಿರುಗಿಸಲಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಮೋದಿ ಸರ್ಕಾರ ಭದ್ರ ಅಡಿಪಾಯ ಹಾಕಿದೆ ಎಂದರು.
ಇದು ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಕುರಿತು ಹೊಂದಿರುವ ಬದ್ಧತೆ. ಬಜೆಟ್ ಅವಧಿಯನ್ನು 2017-18 ರಿಂದ ಫೆಬ್ರವರಿ ಮೊದಲ ದಿನಕ್ಕೆ ಬದಲಾಯಿಸಿರುವುದರಿಂದ ರಾಜ್ಯಗಳು ಇದಕ್ಕೆ ಪೂರಕವಾಗಿ ಬಜೆಟ್ ರೂಪಿಸಬಹುದು. ಈ ಸುಧಾರಣೆಯಿಂದಾಗಿ ಯೋಜನೆಗಳಿಗೆ ಅನುದಾನ ನಿಗದಿ, ಕೇಂದ್ರ ಸರ್ಕಾರಿ ಯೋಜನೆಗಳ ಜಾರಿ, ಅಗತ್ಯತೆಗಳ ಗುರುತಿಸುವಿಕೆ, ಮೊದಲಾದ ಸಂಗತಿಗಳಲ್ಲಿ ರಾಜ್ಯ ಸರ್ಕಾರಗಳು ಸೂಕ್ತ ನಿರ್ಧಾರ ಕೈಗೊಳ್ಳಬಹುದು ಎಂದರು.
ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಜಾಗತಿಕ ಸವಾಲುಗಳಿದ್ದರೂ ಅವರು ಸಮರ್ಥ ಸಚಿವರು ಎಂದು ತೋರಿಸಿಕೊಟ್ಟಿದ್ದಾರೆ. ಉತ್ತಮ ಆರ್ಥಿಕ ಸಚಿವರಾಗಲು ಹೃದಯ ಮತ್ತು ಬುದ್ಧಿ ಬೇಕಿದ್ದು, ಅಂತಹ ಸಾಮರ್ಥ್ಯವನ್ನು ನಿರ್ಮಲಾ ಹೊಂದಿದ್ದಾರೆ ಎಂದು ಶ್ಲಾಘಿಸಿದರು.
ಸಮಾಧಾನ್ ಪೋರ್ಟಲ್ ಬಗ್ಗೆ ಪ್ರಶ್ನೆ :
ಕೈಗಾರಿಕಾ ವಿವಾದ ಮತ್ತು ದೂರುಗಳ ವಿಲೇವಾರಿಗಾಗಿ ಸ್ಥಾಪಿಸಲಾಗಿರುವ ಸಮಾಧಾನ್ ಪೋರ್ಟಲ್ ಅನ್ನು ರಾಜ್ಯ/ಪ್ರಾದೇಶಿಕ ಮಟ್ಟದ ವ್ಯವಸ್ಥೆಗಳೊಂದಿಗೆ ಸಮನ್ವಯಗೊಳಿಸಿ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಸಮಾಧಾನ್ ಪೋರ್ಟಲ್ ಸೇವೆ ಸಿಗುವಂತೆ ಮಾಡುವ ಕುರಿತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನಸುಖ್ ಮಾಂಡವೀಯ ಅವರಿಗೆ ಸಂಸದ ಡಾ.ಕೆ.ಸುಧಾಕರ್ ಪ್ರಶ್ನೆ ಕೇಳಿದರು.
ದೇಶದ ಒಟ್ಟು ಕಾರ್ಮಿಕರಲ್ಲಿ, ಅಸಂಘಟಿತ ವಲಯದ ಕಾರ್ಮಿಕರ ಪ್ರಮಾಣ 80% ರಷ್ಟಿದೆ. ಈ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಲು ಸಮಾಧಾನ್ ಪೋರ್ಟಲ್ ಬಳಸುವ ಹೊಸ ವ್ಯವಸ್ಥೆ ತರಬಹುದೇ? ಜೊತೆಗೆ ಇ-ಶ್ರಮ ಹಾಗೂ ಸಮಾಧಾನ್ ಪೋರ್ಟಲ್ ಒಂದಾಗಿ ಕೆಲಸ ಮಾಡುವಂತೆ ನವೀಕರಣ ಮಾಡಬಹುದೇ ಎಂದು ಅವರು ಪ್ರಶ್ನೆ ಮಾಡಿದರು.
ಅಸಂಘಟಿತ ವಲಯದ 30 ಕೋಟಿಗೂ ಅಧಿಕ ಕಾರ್ಮಿಕರು ಇ-ಶ್ರಮ ಪೋರ್ಟಲ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದು, ಅವರು ಕೂಡ ಸಮಾಧಾನ್ ಪೋರ್ಟಲ್ನಲ್ಲಿ ಅಹವಾಲು ಸಲ್ಲಿಸಬಹುದು ಎಂದು ಸಚಿವರು ಉತ್ತರಿಸಿದರು.
ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ 80% ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ. ಮತ್ತು ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ, ಸರ್ಕಾರ ಇದ್ದನ್ನು ಗಮನದಲ್ಲಿಟ್ಟು ಅವರಿಗೆ ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು…
ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi), ಶೋಭಾ ಕರಂದ್ಲಾಜೆ (Shobha Karandlaje) ಎಕ್ಸ್ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ. ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ. ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.
ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ (Bhadra Upper Bank Project) ಕೇಂದ್ರದಿಂದ ಬರುವ ಅನುದಾನ (Grant) ಪಡೆಯಲು ರಾಜ್ಯ ಸರ್ಕಾರ ಸರಿಯಾದ ಮಾದರಿಯಲ್ಲಿ ಮನವಿ ಸಲ್ಲಿಸದೇ, ರಾಜಕೀಯಕ್ಕಾಗಿ ಕೇಂದ್ರದ ವಿರುದ್ಧ ಆರೋಪ ಮಾಡಿ ರಾಜ್ಯದ ಜನತೆಗೆ ಪಂಗನಾಮ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಾಜ್ಯ ಸರ್ಕಾರಕ್ಕೆ ಠಕ್ಕರ್ ನೀಡಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಉತ್ತರ ನೀಡುತ್ತಿರುವಾಗ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿದ ಅವರು, ಬಜೆಟ್ (Budget) ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳಲ್ಲಿ ಬಂದಿರುವ ಹೊಗಳಿಕೆಗಳನ್ನು ಪ್ರಸ್ತಾಪ ಮಾಡಿ ಸಮರ್ಥನೆ ಮಾಡಿಕೊಂಡಿರುವುದಕ್ಕೆ ವ್ಯಂಗ್ಯವಾಡಿದರು. ನೀವು ಮುಖ್ಯಮಂತ್ರಿ ಆಗಿದ್ದೀರ, ಹಿಂದೆ ವಿಪಕ್ಷ ನಾಯಕರೂ ಆಗಿದ್ದೀರ. ಆದರೆ, ನಿಮ್ಮ ಸಾಮರ್ಥ್ಯ ಬಗ್ಗೆ ಪತ್ರಿಕೆಗಳ ಸಂಪಾದಕೀಯಗಳ ಸಹಾಯ ತೆಗೆದುಕೊಂಡು ಮಾತಾಡುವಷ್ಟರ ಮಟ್ಟಿಗೆ ಅಸಹಾಯಕರಾಗಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪರಿಷತ್ ಉಪಚುನಾವಣೆಯಲ್ಲಿ ‘ಕೈ’ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು; ಬಿಜೆಪಿ-ಜೆಡಿಎಸ್ ಮೈತ್ರಿಗೆ ಮುಖಭಂಗ
15ನೇ ಹಣಕಾಸು ಆಯೋಗ ಶಿಫಾರಸು ಮಾಡಿದ್ದ 5,495 ಕೋಟಿ, ಪೆರಿಫೆರಲ್ ರಸ್ತೆಗಳ 6,300 ಕೋಟಿ ರೂ. ಹಣ ಕೊಟ್ಟಿಲ್ಲ. ನಮ್ಮ ರಾಜ್ಯದಿಂದ ಗೆದ್ದು ಹೋದ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಅನುದಾನಗಳನ್ನು ನಿರಾಕರಿಸಿದರು ಎಂದು ಸಿಎಂ ಸತ್ಯ ಮರೆಮಾಚಿ ಕಾನೂನು ತಿರುಚಿ ಹೇಳುತ್ತಿದಾರೆ ಎಂದು ಬೊಮ್ಮಾಯಿ ಆಕ್ಷೇಪ ವ್ಯಕ್ತಪಡಿಸಿದರು. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5,495 ಕೋಟಿ ಶಿಫಾರಸು ಮಾಡಿದ್ದು ನಿಜ. ಆದರೆ ಅಂತಿಮ ವರದಿಯಲ್ಲಿ ಅದು ಇರಲಿಲ್ಲ. ಇರದ ಮೇಲೆ ಕೇಳುವುದು ಹೇಗೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಅವಿರೋಧ ಆಯ್ಕೆ
ಇನ್ನು ಪೆರಿಫರಲ್ ರಸ್ತೆಗೆ 6,000 ಕೋಟಿ ಈಗಲೂ ಇದೆ. ಆದರೆ ಇಲ್ಲಿ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯೇ ಶುರು ಮಾಡಿಲ್ಲ. ಭೂಸ್ವಾಧೀನವೇ ಆಗಿಲ್ಲ. ಯೋಜನೆ ಆರಂಭ ಮಾಡಿದರೆ ಕೇಂದ್ರದ ಅನುದಾನ ಬರುತ್ತದೆ. ಕೇಂದ್ರದಿಂದ ಅನುದಾನ ಕೇಳಬೇಕು ಅಂದರೆ ನಿರ್ದಿಷ್ಟ ರೀತಿಯಲ್ಲಿ ಪ್ರಸ್ತಾವನೆ ಕಳುಹಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಮಾನ್ಯತೆಯೂ ಸಿಗುತ್ತದೆ ಎಂದರು. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರ? – ಕಾಂಗ್ರೆಸ್ ನಿಯೋಗದಿಂದ ಕಮಿಷನರ್ಗೆ ದೂರು
ಈ ವಿಚಾರದಲ್ಲಿ ನಮ್ಮ ಸರ್ಕಾರ ಯೋಜನೆಗೆ ಅಗತ್ಯ ಅನುಮತಿಗಳನ್ನು ಕೊಟ್ಟಿತ್ತು. ಈಗಲೂ ಕೇಂದ್ರದಿಂದ ಹಣ ಬರುತ್ತದೆ. ಅದಕ್ಕೆ ಹೋಗಿ ಕೇಳಬೇಕು. ಸರಿಯಾದ ಪ್ರಯತ್ನ ಮಾಡದೇ ಅನುದಾನ ಬಂದಿಲ್ಲ ಎನ್ನುವುದು ಸರಿಯಲ್ಲ. ಭದ್ರಾ ಮೇಲ್ದಂಡೆ ಯೋಜನೆ ಹೊಸ ಯೋಜನೆ ಆಗಿರುವುದರಿಂದ ಎನ್ ಫಾರ್ಮ್ನಡಿ ಪ್ರಸ್ತಾವನೆ ಸಲ್ಲಿಸಬೇಕು. ಅನುದಾನ ಕೇಳುವುದು ಹೇಗೆ ಎಂದು ಕಾಂಗ್ರೆಸ್ಗೆ ಗೊತ್ತಿಲ್ಲ ಆರೋಪಿಸಿದರು. ಇದನ್ನೂ ಓದಿ: ವಕೀಲರು Vs ಪೊಲೀಸರು – ಫೇಸ್ಬುಕ್ ಪೋಸ್ಟ್ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?
ಈ ಸಂದರ್ಭದಲ್ಲಿ ಯಾವ ಮಾದರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ತರಬೇತಿ ಕೊಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ಸರಿಯಾದ ರೀತಿಯಲ್ಲಿ ಅರ್ಜಿ ಸಲ್ಲಿಸಿದರೆ ರಾಜ್ಯದ ಹಿತದೃಷ್ಟಿಯಿಂದ ನಾವು ನಿಮ್ಮ ಜೊತೆಗೆ ಬರುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತವರಲ್ಲಿ ಅನುದಾನದ ಪಾಲಿಟಿಕ್ಸ್ ಶುರುವಾಗಿದೆ. ಬಿಜೆಪಿ ಶಾಸಕನ ಅನುದಾನವನ್ನು ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಏನಿದು ಅನುದಾನ ಪಾಲಿಟಿಕ್ಸ್?: ಕಳೆದ ಬಿಜೆಪಿ ಸರ್ಕಾರದಲ್ಲಿ ಕೃಷ್ಣರಾಜ ಕ್ಷೇತ್ರಕ್ಕೆ 45 ಕೋಟಿ ರೂ. ವಿಶೇಷ ಅನುದಾನ ಮಂಜೂರಾಗಿತ್ತು. ಅಂದಿನ ಶಾಸಕರಾಗಿದ್ದ ಎಸ್.ಎ ರಾಮದಾಸ್ ಅವಧಿಯಲ್ಲಿ ಕೆ.ಆರ್ ಕ್ಷೇತ್ರದ ಅಭಿವೃದ್ಧಿಗೆ ಮಂಜೂರಾಗಿದ್ದ 45 ಕೋಟಿ ರೂ. ಅನುದಾನ ನೀಡಲಾಗಿತ್ತು. ಸದ್ಯ ಈ ಅನುದಾನವನ್ನು ಚಾಮರಾಜ, ಎನ್.ಆರ್ ಕ್ಷೇತ್ರಗಳಿಗೆ ಮರು ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಚಾಮರಾಜ ಕ್ಷೇತ್ರಕ್ಕೆ (Chamarajanagar Constituency) 20 ಕೋಟಿ, ಎನ್.ಆರ್ ಕ್ಷೇತ್ರಕ್ಕೆ 25 ಕೋಟಿ ಹಣ ಹಂಚಿಕೆ ಮಾಡಲಾಗಿದೆ. ಬಿಜೆಪಿ ಶಾಸಕರಿದ್ದಾರೆ ಎನ್ನುವ ಕಾರಣಕ್ಕೆ ಕೆ.ಆರ್ ಕ್ಷೇತ್ರದ ಅನುದಾನ ಬೇರೆಡೆ ಹಂಚಿಕೆ ಮಾಡಲಾಗಿದೆ ಎಂದು ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆ (Lok Sabah Election) ಸನಿಹದಲ್ಲಿ ಅನುದಾನ ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ (Union Government) ಮತ್ತು ಕರ್ನಾಟಕದ ಸರ್ಕಾರದ (Karnataka Government) ನಡುವಣ ಸಂಘರ್ಷ ಅಂತಿಮ ಘಟ್ಟ ತಲುಪಿದೆ.
ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಸೇರಿ ಎಲ್ಲಾ ಸಂಸದರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಅಜಿತ್ ಪವಾರ್ ನೇತೃತ್ವದ NCP ನಿಜವಾದ ಪಕ್ಷ: ಚುನಾವಣಾ ಆಯೋಗ
ಕಾಂಗ್ರೆಸ್ (Congress) ಶಾಸಕರೆಲ್ಲಾ ತಮ್ಮ ಸ್ವಂತ ಖರ್ಚಿನಲ್ಲಿ ದೆಹಲಿ ಕಡೆ ಮುಖ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಗಳವಾರ ಸಂಜೆ ಭೋಪಾಲ್ಗೆ ತೆರಳಿದ್ದು, ರಾತ್ರಿಯೇ ದೆಹಲಿ ತಲುಪಿದ್ದಾರೆ. ಈ ಧರಣಿಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿರುವ ಬಿಜೆಪಿಗರನ್ನು ಕಾಂಗ್ರೆಸ್ಸಿಗರು ಕೆಣಕಲು ನೋಡಿದ್ದಾರೆ.
15ನೇ ಹಣಕಾಸು ಆಯೋಗದ `ಅನುದಾನ’ ಲೆಕ್ಕ
* 2020-2026ರ ಅವಧಿಗೆ ಅನ್ವಯವಾಗುವ ಹಣ ಹಂಚಿಕೆ ಶಿಫಾರಸು
* ಜನಸಂಖ್ಯೆ, ಭೂಪ್ರದೇಶ, ಅರಣ್ಯ, ಆದಾಯ ಅಂತರ, ತೆರಿಗೆ ಪರಿಗಣಿಸಿ ಅನುದಾನ ಹಂಚಿಕೆ
* 2011ರ ಜನಗಣತಿಯನ್ನು ಮೂಲ ವರ್ಷವಾಗಿ ಪರಿಗಣಿಸಿ ತೆರಿಗೆ ಪಾಲು ಹಂಚಿಕೆ
(ಈ ಹಿಂದಿನ ಎಲ್ಲಾ ಹಣಕಾಸು ಆಯೋಗಗಳಿಗೆ ತೆರಿಗೆ ಹಣ ಹಂಚಿಕೆಯಲ್ಲಿ 1972ನೇ ಇಸವಿಯನ್ನು ಮೂಲ ವರ್ಷವಾಗಿ ಪರಿಗಣಿಸಿದ್ದವು)
ಕರ್ನಾಟಕಕ್ಕೆ ತೆರಿಗೆ ಪಾಲು ಕಡಿತ ಆಗಿದ್ಯಾಕೆ?
* ಜನಸಂಖ್ಯೆ ನಿಯಂತ್ರಣ ಇರುವ ಕಾರಣ ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳಿಗೆ ಕಡಿಮೆ ಪಾಲು
* ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ 3.6%, ಕೇರಳಕ್ಕೆ 1.93%, ತಮಿಳುನಾಡಿಗೆ 4% ಪಾಲು
* ಇದು 14ನೇ ಹಣಕಾಸು ಆಯೋಗದ ಶಿಫಾರಸುಗಳಿಗಿಂತ ರಾಜ್ಯಕ್ಕೆ 13,633 ಕೋಟಿಯಷ್ಟು ಕಡಿಮೆ
(ರಾಜ್ಯದಿಂದ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹೋಗುವ ಹಣ 4 ಲಕ್ಷ ಕೋಟಿ ರೂಪಾಯಿ)
* ಜನಸಂಖ್ಯೆ ಹೆಚ್ಚಿರುವ ಕಾರಣ ಉತ್ತರ ಪ್ರದೇಶಕ್ಕೆ 18%, ಬಿಹಾರಕ್ಕೆ 10% ತೆರಿಗೆ ಹಣದ ಪಾಲು
ಬೆಂಗಳೂರು: ನಮಗೆ ಬರಬೇಕಾದ ಹಕ್ಕನ್ನು ಕೇಳಲು ನಾಳೆ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವುದಾಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿ ಪ್ರತಿಭಟನೆಯನ್ನು (Delhi Protest) ಸಮರ್ಥನೆ ಮಾಡಿಕೊಂಡು ಬಿಜೆಪಿ ವಿರುದ್ಧ ಕಿಡಿಕಾರಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ನಮಗೆ ಬರಬೇಕಾದ ಹಕ್ಕನ್ನು ಕೇಳುತ್ತಿದ್ದೇವೆ. ಬೇರೆ ಬೇರೆ ಸಚಿವರು ಹೋಗಿ ಭೇಟಿ ಮಾಡುವ ಪ್ರಯತ್ನ ಮಾಡಿದರು. ಕೃಷ್ಣ ಭೈರೇಗೌಡ ಸೇರಿ ಹಲವು ಸಚಿವರು ಹೋದರೂ ಪ್ರಯೋಜನ ಆಗಿಲ್ಲ. ಬಿಜೆಪಿಯವರು (BJP) ರಾಜಕೀಯ ಮಾಡುತ್ತಿದ್ದಾರೆ. ಹೀಗಾಗಿ ನಾಳೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು. ಇದನ್ನೂ ಓದಿ: ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ
ಸಿಎಂ ಸಿದ್ದರಾಮಯ್ಯ ನಿನ್ನೆ ಸವಿಸ್ತಾರವಾಗಿ ಹೇಳಿದ್ದಾರೆ. ಯಾಕೆ ಹೋಗ್ತಾ ಇದ್ದೀವಿ? ಏನು ಕಾರಣ? ಎಷ್ಟು ದುಡ್ಡು ಬರಬೇಕು ಅಂತ ಹೇಳಿದ್ದಾರೆ. ನಮ್ಮ ಹಕ್ಕು ಪಡೆಯಲು ನಾಳೆ ಕೇಂದ್ರ ಸರ್ಕಾರದ ಗಮನ ಸೆಳೆಯೋಕೆ ಪ್ರತಿಭಟನೆ ಮಾಡುತ್ತಿದ್ದೇವೆ. ಬರ ಪರಿಹಾರ ಇಲ್ಲಿಯವರೆಗೆ ಸಿಕ್ಕಿಲ್ಲ. ಸಿಎಂ, ಕೃಷ್ಣ ಭೈರೇಗೌಡ ಹೋದರೂ ಪರಿಹಾರ ಸಿಕ್ಕಿಲ್ಲ. ಅಂತಿಮವಾಗಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಆಭ್ಯರ್ಥಿಯಾಗಿ ಸ್ಪರ್ಧಿಸಲು ವಿಶ್ವನಾಥ್ ಸಿದ್ಧತೆ
ನಾಳೆ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಕೌಂಟರ್ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ರಾಜಕೀಯವಾಗಿ ಹೇಳಬೇಕು. ರಿಯಾಲಿಟಿಗೆ ಬಿಜೆಪಿಯವರು ಬರಬೇಕು. ಬಿಜೆಪಿಯವರು ಅಧಿಕಾರದಲ್ಲಿ ಇದ್ದಾಗ ಸಾಕಷ್ಟು ಪ್ರಯತ್ನ ಮಾಡಿದರೂ ಪರಿಹಾರ ಸಿಕ್ಕಿಲ್ಲ. ಕಾಂಗ್ರೆಸ್ ಸರ್ಕಾರ ಅಲ್ಲ ಕರ್ನಾಟಕ ನಾಡಿಗೆ ಬರಬೇಕು. 10 ವರ್ಷಗಳಲ್ಲಿ ಬಹಳಷ್ಟು ಆಗಿದೆ. ಬರಗಾಲ, ಪ್ರವಾಹದ ಸಂದರ್ಭದಲ್ಲಿ ಆಗಿದೆ. ಪ್ರತಿಭಟನೆ ಮಾಡುತ್ತೇವೆ ಕಾದು ನೋಡೋಣ ಎಂದು ಹೇಳಿದರು. ಇದನ್ನೂ ಓದಿ: ಉತ್ತರಾಖಂಡ ವಿಧಾನಸಭೆಯಲ್ಲಿ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ