Tag: ಅನುರಾಗ್ ಠಾಕೂರ್

  • ‘ಬಿಗ್ ಬಾಸ್’ ಮನೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿ : ಕೇಂದ್ರ ಸಚಿವರಿಗೆ ಪತ್ರ ಬರೆದ ಮಹಿಳಾ ಆಯೋಗ

    ‘ಬಿಗ್ ಬಾಸ್’ ಮನೆಯಲ್ಲಿ ಲೈಂಗಿಕ ದೌರ್ಜನ್ಯದ ಆರೋಪಿ : ಕೇಂದ್ರ ಸಚಿವರಿಗೆ ಪತ್ರ ಬರೆದ ಮಹಿಳಾ ಆಯೋಗ

    ಹಿಂದಿ ಬಿಗ್ ಬಾಸ್ (Bigg Boss) ಮನೆಯಲ್ಲಿ ನೆಮ್ಮದಿಯಾಗಿ ಆಟ ಆಡುತ್ತಿರುವ ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ (Sajid Khan) ಅವರನ್ನು ಬಿಗ್ ಬಾಸ್ ಮನೆ ಒಳಗೆ ಕಳುಹಿಸಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಬಿಗ್ ಬಾಸ್ ಸೀಸನ್ 16  ಶುರುವಾಗಿದ್ದು, ಈ ಬಾರಿ ದೊಡ್ಮನೆ ಸೇರಿರುವವರ ಪಟ್ಟಿಯಲ್ಲಿ ಸಾಜಿದ್ ಖಾನ್ ಕೂಡ ಇದ್ದಾರೆ. ಇವರ ಮೇಲೆ ಹತ್ತಕ್ಕೂ ಹೆಚ್ಚು ನಟಿಯರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದಾರೆ. ಇಂತಹ ವ್ಯಕ್ತಿಯನ್ನು ಕೂಡ ಬಿಗ್ ಬಾಸ್ ಮನೆಯಿಂದ ಹೊರಗಿಡಬೇಕು ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ (Swati Maliwal) ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.

    ಬಾಲಿವುಡ್ ನಿರ್ದೇಶಕ ಸಾಜಿದ್ ಖಾನ್ ವಿರುದ್ಧ ಈಗಾಗಲೇ ಅನೇಕ ನಟಿಯರು ಲೈಂಗಿಕ ಆರೋಪ (Sexual Assault) ಮಾಡಿದ್ದಾರೆ. ಮೀಟೂ ಅಭಿಯಾನದಲ್ಲಿ ಅತೀ ಹೆಚ್ಚು ಕೇಳಿ ಬಂದ ಹೆಸರು ಇವರದ್ದೆ. ಅಲ್ಲದೇ, ನಾನಾ ನಟಿಯರು ತಮಗಾದ ನೋವುಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ ಮತ್ತು ಕೆಲವರು ದೂರು ಕೂಡ ನೀಡಿದ್ದಾರೆ. ಇಂತಹ ವ್ಯಕ್ತಿಯನ್ನು ಬಿಗ್ ಬಾಸ್ ಮನೆ ಒಳಗೆ ಕಳುಹಿಸುವುದು ಸರಿಯಲ್ಲ. ಅವರನ್ನು ಮನೆಯಿಂದ ಆಚೆ ಕಳುಹಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಅವರಿಗೆ ಸ್ವಾತಿ ಮಲಿವಾಲ್ ಪತ್ರ ಬರೆದಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಮಾಧ್ಯಮಗಳ ಜೊತೆಯೂ ಮಾತನಾಡಿರುವ ಮಹಿಳಾ ಆಯೋಗದೆ ಮುಖ್ಯಸ್ಥೆ ಸ್ವಾತಿ ಮಲಿವಾಲ್, ಹೌಸ್ ಫುಲ್ 4 ಸಿನಿಮಾ ಆಡಿಷನ್ ವೇಳೆ 17 ವರ್ಷದ ನಟಿಗೆ ಪೂರ್ಣ ಬಟ್ಟೆ ಬಿಚ್ಚಿದರೆ ಮಾತ್ರ ಅವಕಾಶ ಕೊಡುವುದಾಗಿ ಸಾಜಿಸ್ ಹೇಳಿದ್ದರಂತೆ. ಅಲ್ಲದೇ, ಹಮ್ ಶಕಲ್ ಸಿನಿಮಾದ ವೇಳೆಯೂ ಮತ್ತೋರ್ವ ನಟಿಗೆ ಇಂತಹದ್ದೇ ಬೇಡಿಕೆಯನ್ನು ಇಟ್ಟಿದ್ದರಂತೆ. ಈ ರೀತಿಯಾಗಿ ಹಲವು ನಟಿಯರು ಈಗಾಗಲೇ ಹೇಳಿಕೊಂಡಿದ್ದಾರೆ. ಅವರಿಗೆ ನ್ಯಾಯವೂ ಸಿಕ್ಕಿಲ್ಲ. ಇಂತಹ ವ್ಯಕ್ತಿಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸುವ ಮೂಲಕ ಯಾವ ಸಂದೇಶವನ್ನು ಸಾರುತ್ತಿದ್ದೀರಿ ಎಂದು ಚಾನೆಲ್ ನವರಿಗೂ ಅವರು ಪ್ರಶ್ನೆ ಮಾಡಿದ್ದಾರೆ.

    ಕೇಂದ್ರ ಸಚಿವರಿಗೆ ಸ್ವಾತಿ ಅವರು ಪತ್ರ ಬರೆಯುತ್ತಿದ್ದಂತೆಯೇ ಅವರಿಗೂ ಕೂಡ ಬೆದರಿಕೆ ಪತ್ರಗಳು ಬಂದಿವೆಯಂತೆ. ಸಾಜಿದ್ ಕುರಿತು ಮಾತನಾಡಿದ್ದಕ್ಕಾಗಿ ತಮಗೆ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾಗಿ ತಿಳಿಸಿದ್ದಾರೆ. ಈ ಕುರಿತು ಅವರು ದೆಹಲಿ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಸಾಜಿದ್ ವಿರುದ್ಧದ ಹೋರಾಟದಲ್ಲಿ ಏನೇ ಕಷ್ಟ ಬಂದರೂ ಎದುರಿಸುವುದಾಗಿ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಖ್ಯಾತ ನಟಿ ಆಶಾ ಪರೇಖ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ದೆಹಲಿಯ ವಿಗ್ಯಾನ್ ಭವನದಲ್ಲಿ ಇಂದು ನಡೆಯುತ್ತಿರುವ 68ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಾಲಿವುಡ್ ನ ಖ್ಯಾತ ನಟಿ ಆಶಾ ಪರೇಖ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ (Dada Saheb Phalke) ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಆಶಾ ಪ್ರಶಸ್ತಿ ಸ್ವೀಕರಿಸಿ ಸಂಭ್ರಮವನ್ನು ಹಂಚಿಕೊಂಡರು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟಿ, ಒಂದು ಕಾಲದಲ್ಲಿ ಬಾಲಿವುಡ್ ಕ್ವೀನ್ ಎಂದೇ ಖ್ಯಾತರಾಗಿದ್ದ ಆಶಾ ಪರೇಖ್ (Asha Parekh) ಭಾರತೀಯ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಈ ಅತ್ಯುನ್ನತ ಗೌರವವನ್ನು ‘ದಾದಾ ಸಾಹೇಬ್ ಫಾಲ್ಕೆ’ ಹೆಸರಿನಲ್ಲಿ ಕೊಡಲಾಗಿದೆ. ಕಳೆದ ಬಾರಿ ಈ ಗೌರವವು ರಜನಿಕಾಂತ್ ಅವರಿಗೆ ಸಂದಿತ್ತು. ಈ ಬಾರಿ ಆಶಾ ಅವರಿಗೆ ದೊರೆತಿದೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿಕೆಯನ್ನು ಎಎನ್ಐ ಸಂಸ್ಥೆಯು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ವೇದಿಕೆಯಲ್ಲಿ ಹಂಚಿಕೊಂಡಿದ್ದರು. ಇದನ್ನೂ ಓದಿ:ಐಶ್ವರ್ಯ ಪಿಸ್ಸೆಗೆ ಐ ಲವ್‌ ಯೂ ಎಂದ ಸೈಕ್‌ ನವಾಜ್

    1952ರಲ್ಲಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಆಶಾ ಪರೇಖ್, ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ದಿಲ್ ದೇಕೆ ದೇಖೋ ಇವರು ನಾಯಕಿಯಾಗಿ ನಟಿಸಿದ್ದ ಮೊದಲ ಸಿನಿಮಾ. ಆಂದೋಲನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ನಟಿಸಿ, ಅಲ್ಲಿಂದ ಸಿನಿಮಾ ರಂಗದಿಂದಲೇ ದೂರವಾದವರು. 79ರ ವಯಸ್ಸಿನ ಈ ನಟಿ ಇವತ್ತಿಗೂ ಸಿನಿಮಾ ರಂಗದ ಬಗ್ಗೆ ಅಷ್ಟೇ ಪ್ರೀತಿ, ಒಲವು ಇಟ್ಟುಕೊಂಡಿದ್ದಾರೆ.

    ಭಾರತದ ಅತ್ಯುನ್ನತ ಸಿನಿಮಾ ಪ್ರಶಸ್ತಿಯಾಗಿರುವ ಈ ಗೌರವವು ಕನ್ನಡದ ಡಾ.ರಾಜ್ ಕುಮಾರ್ (Raj Kumar) ಅವರಿಗೂ ದೊರೆತಿದೆ. ಅಲ್ಲದೇ, ವಿನೋದ್ ಖನ್ನಾ, ಲತಾ ಮಂಗೇಶ್ಕರ್, ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ದಿಗ್ಗಜರು ಈ ಗೌರವವಕ್ಕೆ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಖ್ಯಾತ ನಟಿ ಆಶಾ ಪರೇಖ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

    ಖ್ಯಾತ ನಟಿ ಆಶಾ ಪರೇಖ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

    ಭಾರತೀಯ ಸಿನಿಮಾ ರಂಗದ ಹೆಸರಾಂತ ನಟಿ, ಒಂದು ಕಾಲದಲ್ಲಿ ಬಾಲಿವುಡ್ ಕ್ವೀನ್ ಎಂದೇ ಖ್ಯಾತರಾಗಿದ್ದ ಆಶಾ ಪರೇಖ್ ಅವರಿಗೆ 52ನೇ ದಾದಾ ಸಾಹೇಬ್ ಫಾಲ್ಕೆ (Dada Saheb Phalke) ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಸಿನಿಮಾ ರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಆಶಾ ಅವರನ್ನು ಈ ಪ್ರಶಸ್ತಿ ಹುಡುಕಿಕೊಂಡು ಬಂದಿದೆ.

    ಭಾರತೀಯ ಸಿನಿಮಾ ರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಈ ಅತ್ಯುನ್ನತ ಗೌರವವನ್ನು ‘ದಾದಾ ಸಾಹೇಬ್ ಫಾಲ್ಕೆ’ ಹೆಸರಿನಲ್ಲಿ ಕೊಡಲಾಗುತ್ತದೆ. ಕಳೆದ ಬಾರಿ ಈ ಗೌರವವು ರಜನಿಕಾಂತ್ (Rajinikanth) ಅವರಿಗೆ ಸಂದಿತ್ತು. ಈ ಬಾರಿ ಆಶಾ ಅವರಿಗೆ ದೊರೆತಿದೆ. ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಹೇಳಿಕೆಯನ್ನು ಎಎನ್ಐ ಸಂಸ್ಥೆಯು ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ವೇದಿಕೆಯಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ

    1952ರಲ್ಲಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟ ಆಶಾ ಪರೇಖ್ (Asha Parekh), ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ದಿಲ್ ದೇಕೆ ದೇಖೋ ಇವರು ನಾಯಕಿಯಾಗಿ ನಟಿಸಿದ್ದ ಮೊದಲ ಸಿನಿಮಾ. ಆಂದೋಲನ್ ಸಿನಿಮಾದಲ್ಲಿ ಕೊನೆಯ ಬಾರಿಗೆ ನಟಿಸಿ, ಅಲ್ಲಿಂದ ಸಿನಿಮಾ ರಂಗದಿಂದಲೇ ದೂರವಾದವರು. 79ರ ವಯಸ್ಸಿನ ಈ ನಟಿ ಇವತ್ತಿಗೂ ಸಿನಿಮಾ ರಂಗದ ಬಗ್ಗೆ ಅಷ್ಟೇ ಪ್ರೀತಿ, ಒಲವು ಇಟ್ಟುಕೊಂಡಿದ್ದಾರೆ.

    ಭಾರತದ ಅತ್ಯುನ್ನತ ಸಿನಿಮಾ ಪ್ರಶಸ್ತಿಯಾಗಿರುವ ಈ ಗೌರವವು ಕನ್ನಡದ ಡಾ.ರಾಜ್ ಕುಮಾರ್ (Raj Kumar) ಅವರಿಗೂ ದೊರೆತಿದೆ. ಅಲ್ಲದೇ, ವಿನೋದ್ ಖನ್ನಾ, ಲತಾ ಮಂಗೇಶ್ಕರ್, ಅಮಿತಾಭ್ ಬಚ್ಚನ್ ಸೇರಿದಂತೆ ಹಲವು ದಿಗ್ಗಜರು ಈ ಗೌರವವಕ್ಕೆ ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 10 YouTube ಚಾನೆಲ್‌ನ ವೀಡಿಯೋಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

    10 YouTube ಚಾನೆಲ್‌ನ ವೀಡಿಯೋಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

    ನವದೆಹಲಿ: ಸಮುದಾಯಗಳ (Religious Communities) ನಡುವೆ ದ್ವೇಷ ಹರಡಲು ನಕಲಿ ಸುದ್ದಿ ಪ್ರಸಾರ ಮಾಡುತ್ತಿದ್ದ 10 ಚಾನಲ್‌ಗಳ (YouTube Channels) 45 ಯುಟ್ಯೂಬ್ ವೀಡಿಯೋ (YouTube Videos) ಗಳನ್ನ ಕೇಂದ್ರ ಸರ್ಕಾರ (Central Government) ನಿಷೇಧಿಸಿದೆ.

    ಉದಾಹರಣೆಗೆ ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಸರ್ಕಾರ ಕಸಿದುಕೊಳ್ಳುವುದು, ಸಮುದಾಯದ ವಿರುದ್ಧ ಹಿಂಸಾತ್ಮಕ ಬೆದರಿಕೆ ಹಾಕುವುದು ಅಥವಾ ದೇಶದಲ್ಲಿ ಅಂತರ್ಯುದ್ಧ ಘೋಷಣೆಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡುತ್ತಿದ್ದ ವೀಡಿಯೋಗಳನ್ನ ನಿರ್ಬಂಧಿಸುವಂತೆ ಆದೇಶಿಸಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ (Anurag Thakur) ಇಂದು ಆದೇಶಿಸಿದ್ದಾರೆ. ಇದನ್ನೂ ಓದಿ: ಸುಳ್ಳು ಮತ್ತು ದೇಶದ್ರೋಹ ಸುದ್ದಿಗಳ ಪ್ರಕಟ – 8 ಯೂಟ್ಯೂಬ್ ಚಾನಲ್‍ಗಳು ನಿಷೇಧ

    10 ಚಾನೆಲ್‌ಗಳಲ್ಲಿ ಪ್ರಸಾರವಾಗಿದ್ದ ಈ 45 ವೀಡಿಯೋಗಳು ಸಮಯದಾಯಗಳ ನಡುವೆ ದ್ವೇಷ ಹುಟ್ಟಿಸುವಂತವಾಗಿದ್ದವು, ತಪ್ಪು ಕಲ್ಪನೆಯನ್ನು ಹೊಂದಿದ್ದವು. ಒಟ್ಟಾರೆ 1.30 ಕೋಟಿಗೂ ಅಧಿಕ ಮಂದಿ ಈ ವೀಡಿಯೋಗಳನ್ನ ವೀಕ್ಷಿಸಿದ್ದರು. ಕೆಲವು ಸಮುದಾಯಗಳ ಧಾರ್ಮಿಕ ಹಕ್ಕುಗಳನ್ನು ಗೌರವಿಸುವ ಉದ್ದೇಶದಿಂದ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್‍ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

    ಬ್ಲಾಕ್ ಮಾಡಲಾಗಿರುವ ವೀಡಿಯೋಗಳ ಪೈಕಿ ಕೆಲವು ವೀಡಿಯೋಗಳು ಅಗ್ನಿಪಥ್ ಯೋಜನೆ, ಭಾರತೀಯ ಸೇನೆ ಬಗ್ಗೆ ತಪ್ಪು ಮಾಹಿತಿ ಪ್ರಸಾರ ಮಾಡುವಂತವಾಗಿದ್ದವು. ಜಮ್ಮು ಮತ್ತು ಕಾಶ್ಮೀರ (Jammu and Kashmir)  ಹಾಗೂ ಲಡಾಖ್ (Ladakh) ನಡುವಿನ ಗಡಿ ರೇಖೆಯನ್ನು ತಪ್ಪಾಗಿ ಬಿಂಬಿಸಿದ ರೀತಿಯಲ್ಲಿ ವೀಡಿಯೋ ಪ್ರಸಾರ ಮಾಡಲಾಗಿತ್ತು. ಈ ವಿಷಯಗಳು ಅತಿಸೂಕ್ಷ್ಮ ಹಾಗೂ ಸುಳ್ಳು ಎಂಬುದು ಗೊತ್ತಾಗಿತ್ತು ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

    ಮಾಹಿತಿ ತಂತ್ರಜ್ಞಾನ ನಿಯಮ-2021ರ ಅಡಿಯಲ್ಲಿ ಈ ವೀಡಿಯೊಗಳನ್ನು ಬ್ಲಾಕ್ ಮಾಡಲು ಸೆಪ್ಟೆಂಬರ್ 23ರಂದು ಆದೇಶ ಹೊರಡಿಸಲಾಗಿತ್ತು ಎಂದೂ ಪ್ರಕಟಣೆ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯ ನೀತಿ ಹಗರಣದಲ್ಲಿ ಸಿಸೋಡಿಯಾ ನಂ.1 ಆರೋಪಿ, ಕೇಜ್ರಿವಾಲ್‌ ಕಿಂಗ್‌ಪಿನ್‌ – ಕೇಂದ್ರ ಸಚಿವ ಆರೋಪ

    ಮದ್ಯ ನೀತಿ ಹಗರಣದಲ್ಲಿ ಸಿಸೋಡಿಯಾ ನಂ.1 ಆರೋಪಿ, ಕೇಜ್ರಿವಾಲ್‌ ಕಿಂಗ್‌ಪಿನ್‌ – ಕೇಂದ್ರ ಸಚಿವ ಆರೋಪ

    ನವದೆಹಲಿ: ಮದ್ಯ ನೀತಿ ಹಗರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ನಂಬರ್‌ 1 ಆರೋಪಿ. ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಈ ಹಗರಣದ ಕಿಂಗ್‌ಪಿನ್‌ ಆಗಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಗಂಭೀರ ಆರೋಪ ಮಾಡಿದ್ದಾರೆ.

    ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ ಠಾಕೂರ್‌, ಇಂದಿನ ಪತ್ರಿಕಾಗೋಷ್ಠಿಯಲ್ಲಿ ಮನೀಶ್ ಸಿಸೋಡಿಯಾ ಅವರ ಹಗರಣದ ಬಣ್ಣ ಬಯಲಾಗಿದೆ. ಅವರು ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲು ಸಹ ಸಾಧ್ಯವಾಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 3-4 ದಿನಗಳಲ್ಲಿ ಸಿಬಿಐ-ಇಡಿ ನನ್ನ ಬಂಧಿಸಬಹುದು, ಯಾವುದಕ್ಕೂ ಹೆದರಲ್ಲ: ಮನೀಶ್ ಸಿಸೋಡಿಯಾ

    ARVIND KEJRIWAL

    ಎಎಪಿ ಇತರ ವಿಷಯಗಳನ್ನು ಮುಂದಿಟ್ಟುಕೊಂಡು ಅಬಕಾರಿ ಹಗರಣವನ್ನು ಮರೆಮಾಡಲು ಪ್ರಯತ್ನಿಸುತ್ತಿದೆ. ಅವರು ಹಣ ಗಳಿಸುತ್ತಾರೆ. ನಂತರ ಮೌನವಹಿಸುತ್ತಾರೆ. ಅವರು ಮನೀಶ್‌ ಅಲ್ಲ, ʼಮನಿ ಶ್‌ʼ ಎಂದು ಕುಟುಕಿದ್ದಾರೆ.

    ಮನೀಶ್ ಜೀ, ನಿಮ್ಮ ಮದ್ಯದ ನೀತಿ ಸರಿಯಾಗಿದ್ದರೆ, ಅದನ್ನು ಏಕೆ ವಾಪಸ್ ತೆಗೆದುಕೊಂಡಿದ್ದೀರಿ? ಮದ್ಯದ ಉದ್ಯಮಿಗಳಿಗೆ ಸಾಫ್ಟ್ ಕಾರ್ನರ್ ಏಕೆ? ಅರವಿಂದ್ ಕೇಜ್ರಿವಾಲ್ ಅವರು ಜನತೆ ಮುಂದೆ ಬಂದು 24 ಗಂಟೆಗಳ ಒಳಗೆ ಉತ್ತರಿಸಲಿ ಎಂದು ನಾನು ಸವಾಲು ಹಾಕುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: Liquor Policy Scam – ಸಿಸೋಡಿಯಾ ಮೇಲೆ ಸಿಬಿಐ ದಾಳಿ ಮಾಡಿದ್ದು ಯಾಕೆ?

    ದೆಹಲಿಯ ಅಬಕಾರಿ ಹಗರಣ ಪ್ರಕರಣದಲ್ಲಿ ಸಿಸೋಡಿಯಾ ಸೇರಿದಂತೆ 15 ಮಂದಿಯನ್ನು ಆರೋಪಿಗಳೆಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಹೆಸರಿಸಿದೆ. ಸಿಸೋಡಿಯಾ ಅವರ ಮನೆ ಮತ್ತು ದೆಹಲಿ-ಎನ್‌ಸಿಆರ್‌ನ ಇತರ 20 ಸ್ಥಳಗಳ ಮೇಲೆ ಕೇಂದ್ರೀಯ ಏಜೆನ್ಸಿ ನಡೆಸಿದ ದಾಳಿಗಳ ಮಧ್ಯೆ ಎಫ್‌ಐಆರ್ ಬಂದಿದೆ. ನಿವಾಸದ ಜತೆಗೆ ಉಪ ಮುಖ್ಯಮಂತ್ರಿ ಕಾರಿನಲ್ಲೂ ಅಧಿಕಾರಿಗಳು ತಪಾಸಣೆ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • 747 ವೆಬ್‌ಸೈಟ್, 94 ಯುಟ್ಯೂಬ್ ಚಾನೆಲ್‌ಗಳು ಬಂದ್

    747 ವೆಬ್‌ಸೈಟ್, 94 ಯುಟ್ಯೂಬ್ ಚಾನೆಲ್‌ಗಳು ಬಂದ್

    ನವದೆಹಲಿ: ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ 747 ವೆಬ್‌ಸೈಟ್‌ಗಳು, 94 ಯೂಟ್ಯೂಬ್ ಚಾನೆಲ್ ಹಾಗೂ 19 ಸಾಮಾಜಿಕ ಮಾಧ್ಯಮದ ಖಾತೆಗಳ ಮೇಲೆ ಕೇಂದ್ರ ಸರ್ಕಾರವು 2021-22ನೇ ಸಾಲಿನಲ್ಲಿ ನಿರ್ಬಂಧ ಹೇರಿದೆ ಎಂದು ಮಾಹಿತಿ ಹಾಗೂ ಪ್ರಸಾರ ಸಚಿವ ಅನುರಾಗ್ ಠಾಕೂರ್ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

    ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕೋವಿಡ್ ಸಂಬಂಧಿತ ಸುಳ್ಳುಸುದ್ದಿ ಹರಡುವುದನ್ನು ತಡೆಯಲು ಸತ್ಯ ಶೋಧನಾ ಘಟಕವನ್ನು 2020ರ ಮಾರ್ಚ್ 31 ರಂದು ಸ್ಥಾಪಿಸಲಾಗಿದೆ. ಇದು 875 ಸುಳ್ಳು ಸುದ್ದಿ ಹರಡುವ ಪೋಸ್ಟ್‌ಗಳ ಸತ್ಯಾಂಶ ಬಯಲಿಗೆಳೆದಿದೆ ಎಂದು ಅವರು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜಕೀಯ ಪ್ರವೇಶದ ಸುಳಿವು ಕೊಟ್ಟ ಸೋನಿಯಾ ಅಳಿಯ ರಾಬರ್ಟ್ ವಾದ್ರಾ

    ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 69A ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೇಪ್‌ಗೆ ಉತ್ತೇಜನ ನೀಡುವ ಪರ್ಫ್ಯೂಮ್ ಜಾಹೀರಾತು ತೆಗೆಯುವಂತೆ ಕೇಂದ್ರ ಸೂಚನೆ

    ರೇಪ್‌ಗೆ ಉತ್ತೇಜನ ನೀಡುವ ಪರ್ಫ್ಯೂಮ್ ಜಾಹೀರಾತು ತೆಗೆಯುವಂತೆ ಕೇಂದ್ರ ಸೂಚನೆ

    ನವದೆಹಲಿ: ಅತ್ಯಾಚಾರ ಸಂಸ್ಕೃತಿಯನ್ನು ಉತ್ತೇಜಿಸುವ ಸುಗಂಧ ದ್ರವ್ಯ (ಪರ್ಫ್ಯೂಮ್) ಬ್ರಾಂಡ್ ಜಾಹೀರಾತುಗಳನ್ನು ತೆಗೆದುಹಾಕುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಟ್ವಿಟ್ಟರ್, ಯುಟ್ಯೂಬ್ ಹಾಗೂ ಟಿವಿ ಚಾನೆಲ್‌ಗಳಿಗೆ ಹೇಳಿದೆ.

    ಸುಗಂಧ ದ್ರವ್ಯದ ಬ್ರಾಂಡ್ (ಪರ್ಫ್ಯೂಮ್) ಜಾಹಿರಾತುಗಳು ಉದ್ದೇಶಪೂರ್ವಕವಾಗಿ ಗ್ಯಾಂಗ್ ರೇಪ್ ಸಂಸ್ಕೃತಿಗೆ ಉತ್ತೇಜನ ನೀಡುತ್ತಿವೆ. ಇದರ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಪತ್ರ ಬರೆದಿದ್ದರು. ಅಲ್ಲದೆ ಅನೇಕ ಜಾಹೀರಾತಿನ ನಿದರ್ಶನಗಳನ್ನೂ ಉಲ್ಲೇಖಿಸಿದ್ದರು. ಇದಕ್ಕೆ ಶೀಘ್ರವೇ ಸ್ಪಂದಿಸಿರುವ ಸಚಿವರು ಮಧ್ಯಾಹ್ನದ ವೇಳೆಗೆ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಐವರು ಟಾಪ್ ನಾಯಕರು ಕಾಂಗ್ರೆಸ್‌ಗೆ ಗುಡ್‌ಬೈ – ಕಮಲಕ್ಕೆ ಹಾಯ್

    ಆಯುಕ್ತರ ಪತ್ರವನ್ನಾಧರಿಸಿ ಸ್ವಯಂಪ್ರೇರಿತವಾಗಿ ಕ್ರಮ ತೆಗೆದುಕೊಂಡಿರುವ ಸಚಿವಾಲಯ ತನಿಖೆ ನಡೆಸಿ FIR ದಾಖಲಿಸಲು ಮತ್ತು ಸಮೂಹ ಮಾಧ್ಯಮದಿಂದ ಜಾಹೀರಾತನ್ನು ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದೆ. ತನಿಖೆ ಸಂಬಂಧಿತ ವರದಿಯನ್ನು ಜೂನ್ 9ರ ಒಳಗೆ ನೀಡುವಂತೆ ಹೇಳಿದೆ.

  • ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಕೇಂದ್ರ ಸಚಿವ ಅನುರಾಗ್ ಠಾಕೂರ್ ಜತೆ ಸಿನಿರಂಗದ ಸಮಸ್ಯೆ ಚರ್ಚೆ

    ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ 2021ರಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಕನ್ನಡ ಸಿನಿಮಾ ರಂಗದ ಅನೇಕ ಗಣ್ಯರು ನಿನ್ನೆ ಸಂಜೆ ಖಾಸಗಿ ಹೋಟೆಲ್ ನಲ್ಲಿ ಭೇಟಿ ಮಾಡಿದ್ದಾರೆ. ಇದನ್ನೂ ಓದಿ : ಹಿರಿಯ ರಂಗಕರ್ಮಿ, ಏಣಗಿ ಬಾಳಪ್ಪನವರ ಪತ್ನಿ ಲಕ್ಷ್ಮೀಬಾಯಿ ನಿಧನ

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ‘ಇದೊಂದು ಅನೌಪಚಾರಿಕ ಭೇಟಿ. ಆದರೆ, ಉಪಯುಕ್ತ ಚರ್ಚೆ ನಡೆಯಿತು. ಕೇಂದ್ರದಿಂದ ಸಿನಿಮಾ ರಂಗಕ್ಕೆ ಸಿಗಬೇಕಾದ ಸವಲತ್ತುಗಳ ಬಗ್ಗೆ ಕೇಂದ್ರ ಸಚಿವರು ಮಾತನಾಡಿದರು. ಕನ್ನಡ ಸಿನಿಮಾ ರಂಗದಲ್ಲಿರುವ ಸೆನ್ಸಾರ್ ಸಮಸ್ಯೆ, ಆನಿಮಲ್ ಬೋರ್ಡ್ ನಿಂದ ಆಗುತ್ತಿರುವ ತೊಂದರೆ, ಫಿಲ್ಮ್ ಸಿಟಿ ಮತ್ತು ಪೈರಸಿಯಿಂದಾಗಿ ಚಿತ್ರೋದ್ಯಮಕ್ಕೆ ಆಗುತ್ತಿರುವ ಹಾನಿಯ ಕುರಿತಾಗಿ ಅವರೊಂದಿಗೆ ಮಾತನಾಡಿದೆವು. ಅವರು ಕೂಡ ನಮ್ಮ ಮನವಿಗೆ ಸ್ಪಂದಿಸಿ, ಸೂಕ್ತ ರೀತಿಯಲ್ಲಿ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ’ ಎಂದರು. ಇದನ್ನೂ ಓದಿ : ಶಿವಣ್ಣನ ಹುಲಿ ಅವತಾರ: ಬೈರಾಗಿ ಹಾಡಿಗೆ ಭೀಮನ ಬಲ

    ಇದೊಂದು ಪೂರ್ವಯೋಜಿತ ಭೇಟಿ ಆಗದೇ ಇದ್ದರೂ, ಕೇಂದ್ರ ಸಚಿವರು ಭೇಟಿಗೆ ಅವಕಾಶ ನೀಡಿ, ಸ್ಯಾಂಡಲ್ ವುಡ್ ನ ಅನೇಕ ಸಮಸ್ಯೆಗಳನ್ನು ಆಲಿಸಿದ್ದಾರಂತೆ. ಚಿತ್ರೋದ್ಯಮದ ಬೆಳವಣಿಗೆಯ ದೃಷ್ಟಿಯಿಂದ ಸಚಿವರು ಕೂಡ ಅನೇಕ ಸಲಹೆಗಳನ್ನೂ ನೀಡಿದ್ದಾರಂತೆ. ಅಲ್ಲದೇ, ಕನ್ನಡ ಚಿತ್ರೋದ್ಯಮದ ಬೆಳವಣಿಗೆಗೆ ಸಂಪೂರ್ಣ ಸಹಕಾರ ನೀಡುವುದಾಗಿಯೂ ಅವರು ತಿಳಿಸಿದ್ದಾರಂತೆ. ಇದನ್ನೂ ಓದಿ : ಗೋವಾ ಸಿಎಂ ಭೇಟಿಯಾದ ಯಶ್, ರಾಧಿಕಾ ಪಂಡಿತ್

    ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ನಟ ರಮೇಶ್ ಅರವಿಂದ್, ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ನಾಗಣ್ಣ,  ಅನೂಪ್ ಭಂಡಾರಿ, ಇಂದ್ರಜಿತ್ ಲಂಕೇಶ್, ಸತ್ಯಪ್ರಕಾಶ್, ಪವನ್ ಒಡೆಯರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹಿರಿಯ ನಿರ್ದೇಶಕ ನಾಗಭರಣ, ನಿರ್ಮಾಪಕರಾದ ಜಾಕ್ ಮಂಜು, ಎನ್.ಎಸ್.ರಾಜ್ ಕುಮಾರ್,  ನಟಿಯರಾದ ಸುಧಾರಾಣಿ, ಅನು ಪ್ರಭಾಕರ್, ಹರ್ಷಿಕಾ ಪೂಣಚ್ಚ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭೇಟಿಯ ತಂಡದಲ್ಲಿದ್ದರು.

  • ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

    ಅಮಿತ್ ಶಾ ಐರನ್ ಮ್ಯಾನ್, ಹಿಡಿದ ಕೆಲಸ ಬಿಡೋದಿಲ್ಲ: ಅನುರಾಗ್ ಠಾಕೂರ್

    ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಐರನ್ ಮ್ಯಾನ್, ಹಿಡಿದ ಕೆಲ ಬಿಡುವುದಿಲ್ಲ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

    ಇಂದು ಕಂಠೀರವ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ 2021 ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಭಾಷಣ ಪ್ರಾರಂಭ ಮಾಡಿದರು. ಅಮಿತ್ ಶಾ ಐರನ್ ಮ್ಯಾನ್. ಅವ್ರು ಹಿಡಿದ ಕೆಲಸ ಬಿಡೋದಿಲ್ಲ. ಗುಜರಾತ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಿದ್ದಾರೆ. ನವ ಭಾರತ ನಿರ್ಮಾಣದ ಕೆಲಸ ಮೋದಿ, ಅಮಿತ್ ಶಾ ಮಾಡ್ತಿದ್ದಾರೆ ಎಂದು ತಿಳಿಸಿದರು.

    ಖೇಲೋ ಇಂಡಿಯಾ ಪ್ರಧಾನಿಗಳ ಕಲ್ಪನೆ ಕ್ರೀಡಾಕೂಟ ಆಗಿದೆ. ಕೊರೊನಾದಿಂದ ಎರಡು ವರ್ಷ ಕ್ರೀಡಾಕೂಟ ನಡೆದಿರಲಿಲ್ಲ. ಇದೀಗ ಅತ್ಯಂತ ಯಶಸ್ವಿಯಾಗಿ ಕ್ರೀಡಾಕೂಟ ಮುಗಿದಿದೆ. 209 ವಿವಿಯ 3800 ಕ್ಕೂ ಹೆಚ್ಚು ಕ್ರೀಡಾಪಟುಗಳ ಭಾಗವಹಿಸಿದ್ದಾರೆ. ಎರಡು ರಾಷ್ಟ್ರೀಯ ದಾಖಲೆ ಕ್ರೀಡಾಕೂಟದಲ್ಲಿ ದಾಖಲಾಗಿದೆ ಎಂದರು.

    ಯೋಗ ಮತ್ತು ಮಲ್ಲಕಂಬ ಈ ಬಾರಿ ಕ್ರೀಡಾಕೂಟದಲ್ಲಿ ಸೇರಿಸಲಾಗಿದೆ. ಮೋದಿ ಅವರ ಕರೆ ಮೇರೆಗೆ ಇಡೀ ವಿಶ್ವ ಯೋಗ ದಿನ ಆಚರಣೆ ಮಾಡುತ್ತದೆ. ಕಳೆದ ಕ್ರೀಡಾಕೂಟದ 76 ರೆಕಾರ್ಡ್ ಈ ಕ್ರೀಡಾಕೂಟದಲ್ಲಿ ಬ್ರೇಕ್ ಆಗಿದೆ. ಶಿವ ಶ್ರೀಧರ್ ಜೈನ್ ವಿವಿ 7 ಚಿನ್ನದ ಪದಕ ಪಡೆದಿದ್ದಾರೆ. ಇಂದು ಕಬ್ಬಡ್ಡಿ ಫೈನಲ್ ನಾನು ವೀಕ್ಷಣೆ ಮಾಡಿದೆ. ಕೆಲ ಆಟಗಾರರಿಗೆ ಪ್ರೊ ಕಬ್ಬಡ್ಡಿಯಲ್ಲಿ ಆಕ್ಷನ್ ನಲ್ಲಿ ಭಾಗವಹಿಸಲು ಸೇರಿಸಲಾಗಿದೆ. ಕರ್ನಾಟಕ ಸರ್ಕಾರ ಬೆಂಗಳೂರಿಗೆ ಕ್ರೀಡಾಕೂಟ ಯಶಸ್ವಿಯಾಗಿ ನಡೆಸಿ ಕೊಟ್ಟಿದ್ದಕ್ಕೆ ಧನ್ಯವಾದ ಹೇಳಿದರು.

    ಇದೇ ವೇಳೆ ಜೈನ್ ವಿವಿ 20 ಚಿನ್ನದ ಪದಕ ಪಡೆದಿದೆ. 200 ಮೀಟರ್ ಓಟದಲ್ಲಿ ಒಲಂಪಿಯನ್ ದ್ಯುತಿ ಚಾಂದ್ ಸೋಲಿಸಿ ಪ್ರಿಯಾ ಮೋಹನ್ ಚಿನ್ನದ ಪದಕ ಪಡೆದಿದ್ದಾರೆ ಎಂದು ಖೇಲೋ ಇಂಡಿಯಾದ ಸಾಧಕರ ವಿವರ ಹೇಳಿದರು. ಕಾರ್ಯಕ್ರಮದಲ್ಲಿ ಅಮಿತ್ ಶಾ, ನಟ ಸುದೀಪ್, ಸಂಸದ ತೇಜಸ್ವಿಸೂರ್ಯ, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಸಚಿವ ನಾರಾಯಣಗೌಡ, ಆರಗ ಜ್ಞಾನೇಂದ್ರ, ಸಂಸದ ಪಿಸಿ ಮೋಹನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

  • ಸುಳ್ಳು ಸುದ್ದಿ ಹಬ್ಬಿಸುವ ಆನ್‍ಲೈನ್ ಚಾನೆಲ್‍ಗಳಿಗೆ ಅನುರಾಗ್ ಠಾಕೂರ್ ವಾರ್ನಿಂಗ್

    ಸುಳ್ಳು ಸುದ್ದಿ ಹಬ್ಬಿಸುವ ಆನ್‍ಲೈನ್ ಚಾನೆಲ್‍ಗಳಿಗೆ ಅನುರಾಗ್ ಠಾಕೂರ್ ವಾರ್ನಿಂಗ್

    ನವದೆಹಲಿ: ಸುಳ್ಳು ಸುದ್ದಿಗಳನ್ನು ವರದಿ ಮಾಡುವ ಯೂಟ್ಯೂಬ್ ಚಾನೆಲ್‍ಗಳು, ಟ್ವಿಟ್ಟರ್ ಖಾತೆಗಳು ಮತ್ತು ಫೇಸ್‍ಬುಕ್ ಖಾತೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಎಚ್ಚರಿಕೆ ನೀಡಿದ್ದಾರೆ.

    ಕೇಂದ್ರ ಸರ್ಕಾರವು 22 ಯೂಟ್ಯೂಬ್ ಚಾನೆಲ್‍ಗಳನ್ನು ನಿರ್ಬಂಧಿಸಿದ್ದು, ಅದರಲ್ಲಿ 18 ಯೂಟ್ಯೂಬ್ ಚಾನೆಲ್‍ಗಳು ಭಾರತದಲ್ಲಿ ಕಾರ್ಯನಿರ್ವಹಿಸುತ್ತಿತ್ತು ಮತ್ತು 4 ಪಾಕಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿತ್ತು. ನಾವು ಈ ಹಿಂದೆಯೂ ಸುಳ್ಳು ಸುದ್ದಿಗಳನ್ನು ವರದಿ ಮಾಡುತ್ತಿದ್ದಂತಹ ಅನೇಕ ಚಾನಲ್‍ಗಳನ್ನು ನಿರ್ಬಂಧಿಸಿದ್ದೇವೆ. ಒಟ್ಟಾರೆ ಇಲ್ಲಿಯವರೆಗೂ 78 ಯೂಟ್ಯೂಬ್ ಚಾನೆಲ್‍ಗಳನ್ನು ನಿರ್ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತತ 15ನೇ ದಿನ ಏರಿಕೆ – ಪೆಟ್ರೋಲ್, ಡೀಸೆಲ್ 80 ಪೈಸೆ ಏರಿಕೆ

    ಈ ಚಾನೆಲ್‍ಗಳು ಸುಳ್ಳು ಸುದ್ದಿಗಳನ್ನು ಹರಡುವುದರಿಂದ ಇದು ಭಾರತದ ಸಾರ್ವಭೌಮತ್ವ, ರಾಷ್ಟ್ರೀಯ ಭದ್ರತೆ ಮತ್ತು ಇತರ ದೇಶಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ನಕಲಿ ಸುದ್ದಿಗಳನ್ನು ಹರಡುತ್ತಿದ್ದಾರೆ. ಹೀಗಾಗಿ ಇಂತಹ ಚಾನೆಲ್‍ಗಳ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಸರ್ಕಾರ ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ.

    ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಐಟಿ ನಿಯಮಗಳು, 2021ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು, ಭಾರತದ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸುಳ್ಳು ಸುದ್ದಿಯನ್ನು ಹಬ್ಬಿಸಿದ್ದಕ್ಕಾಗಿ 22 ಯೂಟ್ಯೂಬ್ ಆಧಾರಿತ ಸುದ್ದಿ ಚಾನೆಲ್‍ಗಳು, ಮೂರು ಟ್ವಿಟರ್ ಖಾತೆಗಳು, ಒಂದು ಫೇಸ್‍ಬುಕ್ ಖಾತೆ ಮತ್ತು ಒಂದು ಸುದ್ದಿ ವೆಬ್‍ಸೈಟ್ ಅನ್ನು ನಿರ್ಬಂಧಿಸಲು ಆದೇಶಗಳನ್ನು ಹೊರಡಿಸಿದೆ. ಇದನ್ನೂ ಓದಿ: ಇ-ಹರಾಜು ಮೂಲಕ ಸಾರಿಗೆಯೇತರ ವಾಹನಗಳಿಗೆ ‘ವಿಐಪಿ ಸಂಖ್ಯೆ’: ಹರಿಯಾಣ ಸಿಎಂ