ಬೆಂಗಳೂರು: ರಾಷ್ಟ್ರೀಯ ಯುವ ಜನೋತ್ಸವದ (Youth Festival) ಲೋಗೋ, ಮಸ್ಕಟ್ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ (Narayana Gowda) ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್ನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Singh Thakur) ಅವರು ವರ್ಚುವಲ್ ಮೂಲಕ ಭಾಗಿಯಾಗಿದ್ದರು.
ಲೋಗೋ ಬಿಡುಗಡೆ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಸಲಾಯಿತು. ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸುವ ಸಂಬಂಧಿಸಿದಂತೆ ಉದ್ಘಾಟನೆ, ಸಿದ್ಧತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಇದನ್ನೂ ಓದಿ:13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ
ಬೆಂಗಳೂರು: ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2ನೇ ಆವೃತ್ತಿ ಮುನ್ನಡೆಸಲು ಬೆಂಗಳೂರು ಸಜ್ಜಾಗಿದೆ. 2ನೇ ಅವೃತ್ತಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ನೆರವೇರಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ಪ್ರತಿ ಕ್ರೀಡಾಪಟುವಿಗೂ ಕೆಎಮ್ಎಫ್ ತಿನಿಸುಗಳ ಕಿಟ್ ನೀಡಿ ಸ್ವಾಗತಿಸಲಾಗುತ್ತಿದೆ. ಮೇ 3ರ ವರೆಗೆ ನಡೆಯಲಿರುವ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗಾಗಿ ಈಗಾಗಲೇ ಜೈನ್ ಗ್ಲೋಬಲ್ ವಿಶ್ವವಿದ್ಯಾನಿಲಯದಲ್ಲಿ 2800, ಶ್ರೀ ಶ್ರೀರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ನಲ್ಲಿ 1500 ಹಾಗೂ ವಿವಿಧ ಹೋಟೆಲ್ಗಳಲ್ಲಿ 1556 ಪ್ರತಿನಿಧಿಗಳಿಗೆ ವಸತಿ ಸೌಲಭ್ಯ ಸಜ್ಜುಗೊಳಿಸಲಾಗಿದೆ. ಕ್ರೀಡಾಕೂಟಕ್ಕಾಗಿ ಬಿಎಂಟಿಸಿ 160 ಬಸ್ಸುಗಳನ್ನು ಒದಗಿಸಿದೆ. 2800 ಕಾರುಗಳನ್ನು ಕ್ರೀಡಾಕೂಟದಲ್ಲಿನ ವಿವಿಧ ಹಂತಗಳ ಪ್ರತಿನಿಧಿಗಳ ಪ್ರಯಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: IPL ಶತಕ ಸಿಡಿಸಿ ಮೆರೆದವರು ಯಾರು – ಇಲ್ಲಿದೆ ಟಾಪ್ 10 ಸಿಕ್ಸರ್ ವೀರರ ಪಟ್ಟಿ
ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಪರಿಚಯಿಸಲಾದ ಯೋಗಾಸನ ಮತ್ತು ಮಲ್ಲಕಂಬದಂತಹ ದೇಶೀ ಕ್ರೀಡೆಗಳೊಂದಿಗೆ 20 ಕ್ರೀಡಾ ವಿಭಾಗಗಳಿವೆ. ವೇಯ್ಟ್ ಲಿಫ್ಟಿಂಗ್, ಜೂಡೋ, ಕುಸ್ತಿ, ಕಬ್ಬಡಿ, ವಾಲಿಬಾಲ್, ಈಜು, ಯೋಗಾಸನ, ಆರ್ಚರಿ, ಫೆನ್ಸಿಂಗ್, ಕರಾಟೆ, ಬಾಕ್ಸಿಂಗ್ ಹಾಗೂ ಫುಟ್ಬಾಲ್ ಸೇರಿದಂತೆ 13 ವಿಭಾಗಗಳ ಕ್ರೀಡೆಗಳು ಜೈನ್ ಯೂನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್ ಪ್ರದರ್ಶನಗೊಳ್ಳಲಿವೆ. ಉಳಿದ ಕ್ರೀಡೆಗಳು ಶ್ರೀ ಕಂಠೀರವ ಸ್ಟೇಡಿಯಂ, ದಿ ಜೈನ್ ಸ್ಪೋರ್ಟ್ಸ್ ಸ್ಕೂಲ್, ಸಾಯಿ ನೇತಾಜಿ ಸುಭಾಷ್ ಸದರ್ನ್ ಸೆಂಟರ್ ಮತ್ತು ಕೆ.ಎಂ.ಕಾರಿಯಪ್ಪ ಹಾಕಿ ಸ್ಟೇಡಿಯಂ ಈ ಸ್ಥಳಗಳಲ್ಲಿ ನಡೆಯಲಿವೆ ಎಂದು ವಿವರಿಸಿದರು. ಇದನ್ನೂ ಓದಿ: ಪಠಾಣ್ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…
ಪತ್ರಕರ್ತರಿಗೆ ಸೌಲಭ್ಯ: ಎಲ್ಲಾ ಕ್ರೀಡಾಂಗಣಗಳಲ್ಲಿ ಮಾಧ್ಯಮ ಪ್ರತಿನಿಧಿಗಳು ಹಾಗೂ ಪತ್ರಕರ್ತರಿಗೆ ಅನುಕೂಲವಾಗಲು ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ಕ್ರೀಡಾಂಗಣದಲ್ಲಿಯೂ ಉಚಿತ ವೈಫೈ ಸೌಲಭ್ಯವಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ಕೇಂದ್ರದ ಕ್ರೀಡಾ ಸಚಿವಾಲಯದ ರಾಜ್ಯ ನಿಶಿತ್ ಪ್ರಮಾಣಿಕ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಎಸ್.ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸುವರು. ಆಹ್ವಾನಿತರನ್ನು ಹೊರತುಪಡಿಸಿ, ಉಳಿದೆಲ್ಲರಿಗೂ ಕ್ರೀಡಾಂಗಣದ ಹಿರಗೆ ಬೃಹತ್ ಪರದೆಯ ಮೇಲೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆ, ಆಕಾಶವಾಣಿ, ರೇಡಿಯೋ ಸಿಟಿ, ಡಿಡಿ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ ಎಂದು ನಾರಾಯಣಗೌಡ ಮಾಹಿತಿ ನೀಡಿದರು.