Tag: ಅನೂಪ್ ಭಂಡಾರಿ

  • ಸುದೀಪ್ ಚಿತ್ರಕ್ಕೆ ಟೈಟ್ ಸೆಕ್ಯೂರಿಟಿ- ಸ್ಪೆಷಲ್ ವಿಡಿಯೋ ಹಂಚಿಕೊಂಡ ಅನೂಪ್ ಭಂಡಾರಿ

    ಸುದೀಪ್ ಚಿತ್ರಕ್ಕೆ ಟೈಟ್ ಸೆಕ್ಯೂರಿಟಿ- ಸ್ಪೆಷಲ್ ವಿಡಿಯೋ ಹಂಚಿಕೊಂಡ ಅನೂಪ್ ಭಂಡಾರಿ

    ‘ಬಿಲ್ಲ ರಂಗ ಬಾಷಾ’ ಸಿನಿಮಾದ (Billa Ranga Basha) ಚಿತ್ರೀಕರಣದಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್  ಟೈಟ್ ಸೆಕ್ಯೂರಿಟಿಯೊಂದಿಗೆ ಸಿನಿಮಾ ಮಾಡ್ತಿದ್ದಾರೆ. ಈ ಬಗ್ಗೆ ಡೈರೆಕ್ಟರ್ ಅನೂಪ್ ಭಂಡಾರಿ (Anup Bhandari) ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ. ಇದನ್ನೂ ಓದಿ:ಧರ್ಮ, ರಾಗಿಣಿ ನಟನೆಯ ‘ಸಿಂಧೂರಿ’ ಚಿತ್ರಕ್ಕೆ ಅದ್ಧೂರಿ ಚಾಲನೆ

    ಏ.16ರಿಂದ ‘ಬಿಲ್ಲ ರಂಗ ಬಾಷಾ’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಈ ಬಗ್ಗೆ ಸುದೀಪ್ (Sudeep) ಅವರೇ ಮಾಹಿತಿ ತಿಳಿಸಿದ್ದಾರೆ. ಈ ಚಿತ್ರದ ಶೂಟಿಂಗ್ ಅದೆಷ್ಟು ವ್ಯವಸ್ಥಿತವಾಗಿ ನಡೆಯುತ್ತಿದೆ. ಪ್ರತಿಯೊಬ್ಬ ಸಿಬ್ಬಂದಿಗೂ ಇಲ್ಲಿ ಐಡಿ ಕಾರ್ಡ್ ಇದೆ. ಅದನ್ನ ಚೆಕ್ ಮಾಡೋಕೆ ಸೆಕ್ಯೂರಿಟಿಗಳೂ ಇದ್ದಾರೆ. ಹಾಗೆಲ್ಲಾ ಸುಮ್ಮನೆ ಚಿತ್ರದ ಸೆಟ್ ಒಳಗೆ ಹೋಗೋಕೆ ಆಗಲ್ಲ ಎಂಬುದು ಅನೂಪ್ ಹಂಚಿಕೊಂಡ ವಿಡಿಯೋ ಮೂಲಕ ಸ್ಪಷ್ಟವಾಗಿದೆ. ಇದನ್ನೂ ಓದಿ:ಪತಿಯೊಂದಿಗೆ ಗರ್ಭಿಣಿ ಕಿಯಾರಾ ಅಡ್ವಾಣಿ ವೆಕೇಷನ್

    ಚಿತ್ರದಲ್ಲಿ ಸುದೀಪ್ ಲುಕ್ ಹೇಗಿರಲಿದೆ ಎಂಬ ಸುಳಿವು ವಿಡಿಯೋದಲ್ಲಿ ಬಿಟ್ಟು ಕೊಟ್ಟಿಲ್ಲ. ಆದರೆ ಚಿತ್ರದ ಸೆಟ್‌ಗೆ ಕೂಲಿಂಗ್ ಗ್ಲ್ಯಾಸ್ ಧರಿಸಿ ಸುದೀಪ್ ಸ್ಟೈಲೀಶ್ ಎಂಟ್ರಿ ಕೊಟ್ಟಿದ್ದಾರೆ. ಟೈಟ್ ಸೆಕ್ಯೂರಿಟಿಯೊಂದಿಗೆ ಚಿತ್ರದ ಶೂಟಿಂಗ್ ಮಾಡಲಾಗ್ತಿದೆ. ಇಡೀ ಶೂಟಿಂಗ್ ಸ್ಪಾಟ್ ಕವರ್ ಮಾಡಲಾಗಿದೆ. ಸದ್ಯ ಈ ಝಲಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸಿನಿಮಾಗಾಗಿ ಕಿಚ್ಚನ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

     

    View this post on Instagram

     

    A post shared by Anup Bhandari (@anupsbhandari)

    ‘ವಿಕ್ರಾಂತ್ ರೋಣ’ ಚಿತ್ರದ ಬಳಿಕ ಮತ್ತೊಮ್ಮೆ ಅನೂಪ್ ಭಂಡಾರಿ ಜೊತೆ ಸುದೀಪ್ ಕೈಜೋಡಿಸಿದ್ದಾರೆ. ‘ಬಿಲ್ಲ ರಂಗ ಬಾಷಾ’ ಸಿನಿಮಾ ಮೂಲಕ ವಿಭಿನ್ನ ಕಥೆ ಹೇಳಲು ಸುದೀಪ್ ಸಜ್ಜಾಗಿದ್ದಾರೆ.

  • ಏ.16ರಿಂದ ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭ- ಅಪ್‌ಡೇಟ್ ಕೊಟ್ರು ಕಿಚ್ಚ

    ಏ.16ರಿಂದ ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭ- ಅಪ್‌ಡೇಟ್ ಕೊಟ್ರು ಕಿಚ್ಚ

    ‘ಮಾಕ್ಸ್’ (Max) ಸಿನಿಮಾದ ಸಕ್ಸಸ್ ಬಳಿಕ ಸುದೀಪ್ ‘ಬಿಲ್ಲ ರಂಗ ಭಾಷಾ’ (Billa Ranga Baashaa) ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ತಿದ್ದಾರೆ. ಹೀಗಿರುವಾಗ ಈ ಸಿನಿಮಾದ ಶೂಟಿಂಗ್ ಆರಂಭ ಆಗೋದು ಯಾವಾಗ ಎಂಬುದರ ಬಗ್ಗೆ ಖುದ್ದು ಸುದೀಪ್ (Sudeep) ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಕೊಲೆ ಕೇಸ್ ಸಾಕ್ಷ್ಯಿಧಾರನ ಜೊತೆ ಪ್ರಭಾವ ಬೀರುತ್ತಿದ್ದಾರಾ ದರ್ಶನ್?

    ‘ಬಿಲ್ಲ ರಂಗ ಭಾಷಾ’ ಸಿನಿಮಾ ಕುರಿತ ಅಪ್‌ಡೇಟ್‌ಗಾಗಿ ಕಾಯುತ್ತಿದ್ದ ಫ್ಯಾನ್ಸ್‌ಗೆ ಸುದೀಪ್ (Sudeep) ಸಿಹಿಸುದ್ದಿ ಕೊಟ್ಟಿದ್ದಾರೆ. ಏ.16ರಂದು ಏನು ನಡೆಯಲಿದೆ ಗೊತ್ತೆ? ‘ಬಿಲ್ಲ ರಂಗ ಭಾಷಾ’ ಚಿತ್ರದ ಶೂಟಿಂಗ್ ಆರಂಭವಾಗಲಿದೆ. ಸಿನಿಮಾದ ಸೆಟ್, ತಾರಾಗಣ ಮತ್ತು ಇತರೆ ವಿಚಾರಗಳನ್ನು ನಂತರ ತಿಳಿಸಲಾಗುವುದು ಎಂದು ಸುದೀಪ್ ಪೋಸ್ಟ್ ಮಾಡಿದ್ದಾರೆ. ನಟನ ಅಪ್‌ಡೇಟ್ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇದನ್ನೂ ಓದಿ:ಏ.16ಕ್ಕೆ ಕಾದಿದೆ ಕಿಚ್ಚನಿಂದ ಬಿಗ್‌ ಸರ್ಪ್ರೈಸ್-‌ ಸುದೀಪ್‌ ಕಟ್ಟು ಮಸ್ತಾದ ಬಾಡಿ ನೋಡಿ ಫ್ಯಾನ್ಸ್‌ ಫಿದಾ

    ಇತ್ತೀಚೆಗೆ ಸುದೀಪ್ ಕಟ್ಟು ಮಸ್ತಾದ ವರ್ಕೌಟ್ ಫೋಟೋವನ್ನು ಹಂಚಿಕೊಂಡು ಏ.16ಕ್ಕೆ ಅಪ್‌ಡೇಟ್ ಸಿಗಲಿದೆ ಎಂದು ನಟ ಸೋಷಿಯಲ್ ಮೀಡಿಯಾದಲ್ಲಿ ಸುಳಿವು ನೀಡಿದ್ದರು. ಇದೀಗ ಒಂದು ವಾರದ ಮುಂಚಿತವಾಗಿಯೇ ನಟ ಮಾಹಿತಿ ಹಂಚಿಕೊಂಡಿದ್ದಾರೆ. ಏ.16ರಿಂದ ಶೂಟಿಂಗ್‌ ಶುರು ಎಂದಿದ್ದಾರೆ. ಆದರೀಗ ಏ.16ರಂದು ಶೂಟಿಂಗ್‌ನಲ್ಲಿ ಭಾಗಿಯಾಗಲಿರೋ ಸುದೀಪ್ ಲುಕ್ ಹೇಗಿರಲಿದೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ.

    ಅಂದಹಾಗೆ, ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಡೈರೆಕ್ಟರ್ ಅನೂಪ್ ಭಂಡಾರಿ ಜೊತೆ ಸುದೀಪ್ ಕೈಜೋಡಿಸಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದ ಬಳಿಕ ಮತ್ತೆ ಈ ಕಾಂಬಿನೇಷನ್ ಒಂದಾಗಿದೆ.

  • ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಫಿಟ್ ಆದ ಕಿಚ್ಚ- ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟ

    ‘ಬಿಲ್ಲ ರಂಗ ಭಾಷಾ’ ಚಿತ್ರಕ್ಕಾಗಿ ಫಿಟ್ ಆದ ಕಿಚ್ಚ- ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟ

    ಕಿಚ್ಚ ಸುದೀಪ್ (Sudeep) ನಟನೆಯ ‘ಮ್ಯಾಕ್ಸ್’ (Max Film) ಸಿನಿಮಾ ರಿಲೀಸ್‌ಗೆ ಫ್ಯಾನ್ಸ್ ಎದುರು ನೋಡುತ್ತಿದ್ದಾರೆ. ಇದರ ನಡುವೆ ಸುದೀಪ್ ನಟಿಸಲಿರುವ ಮುಂದಿನ ಚಿತ್ರಕ್ಕಾಗಿ ಹೇಗೆ ತಯಾರಿ ಆಗುತ್ತಿದ್ದಾರೆ ಎಂಬುದನ್ನು ಫೋಟೋಶೂಟ್ ಮೂಲಕ ತಿಳಿಸಿದ್ದಾರೆ.

    ರಗಡ್ ಲುಕ್‌ನಲ್ಲಿ ಪೋಸ್ ಕೊಟ್ಟಿರುವ ಸುದೀಪ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಿಲ್ಲ ರಂಗ ಭಾಷಾ ಚಿತ್ರಕ್ಕಾಗಿ ತಯಾರಿಯಾಗುತ್ತಿರುವ ಬಗ್ಗೆ ನಟ ತಿಳಿಸಿದ್ದಾರೆ. ಅಂದಹಾಗೆ, ಈ ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ:Thalapathy 69: ವಿಜಯ್‌ ಜೊತೆ ಕನ್ನಡದ ನಟಿ ಪ್ರಿಯಾಮಣಿ ಹೊಸ ಸಿನಿಮಾ

     

    View this post on Instagram

     

    A post shared by KicchaSudeepa (@kichchasudeepa)

    ಸಿನಿಮಾ ಮಾಡುವ ಬಗ್ಗೆ ಅಧಿಕೃತ ಘೋಷಣೆ ಆಗಿದೆ ಬಿಟ್ಟರೆ ಹೆಚ್ಚೆನೂ ಮಾಹಿತಿಯನ್ನು ಅನೂಪ್ ಭಂಡಾರಿ ಎಲ್ಲೂ ಬಿಟ್ಟು ಕೊಟ್ಟಿಲ್ಲ. ವಿಜಯದಶಮಿ ಹಬ್ಬದ ಸಂದರ್ಭದಲ್ಲಿ ಚಿತ್ರದ ಬಗ್ಗೆ ಏನಾದರೂ ಗುಡ್ ನ್ಯೂಸ್ ಸಿಗುತ್ತಾ? ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

    ಈ ಸಿನಿಮಾದ ತಯಾರಿಯ ನಡುವೆ ಸುದೀಪ್ ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ನಿರೂಪಣೆ ಕೂಡ ಮಾಡುತ್ತಿದ್ದಾರೆ. ಶೋ ಜೊತೆ ಸಿನಿಮಾ ಕೆಲಸಗಳಿಗೂ ಸಮಯ ನೀಡುತ್ತಿದ್ದಾರೆ.

  • ‘ವಿಕ್ರಾಂತ್ ರೋಣ’ ಪಾರ್ಟ್ 2 ಮಾಡುವ ಬಗ್ಗೆ ಸುಳಿವು ಕೊಟ್ಟ ಅನೂಪ್ ಭಂಡಾರಿ

    ‘ವಿಕ್ರಾಂತ್ ರೋಣ’ ಪಾರ್ಟ್ 2 ಮಾಡುವ ಬಗ್ಗೆ ಸುಳಿವು ಕೊಟ್ಟ ಅನೂಪ್ ಭಂಡಾರಿ

    ‘ವಿಕ್ರಾಂತ್ ರೋಣ’ (Vikrant Rona) ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಅನೂಪ್ ಭಂಡಾರಿ ಮತ್ತೊಮ್ಮೆ ಸುದೀಪ್ (Sudeep) ಜೊತೆ ಕೈಜೋಡಿಸಿದ್ದಾರೆ. ‘ಬಿಲ್ಲಾ ರಂಗ ಭಾಷಾ’ ಸಿನಿಮಾಗಾಗಿ ಜೊತೆಯಾಗುತ್ತಿದ್ದಾರೆ. ‘ವಿಕ್ರಾಂತ್ ರೋಣ 2’ ಬರುವ ಬಗ್ಗೆ ನಿರ್ದೇಶಕ ಸೀಕ್ರೆಟ್ ಬಿಚ್ಚಿಟ್ಟಿದ್ದಾರೆ. ಜೊತೆಗೆ ಈ ಹಿಂದೆ ಸುದೀಪ್ ಜೊತೆ ‘ಅಶ್ವತ್ಥಾಮ’ ಚಿತ್ರಕ್ಕೆ ಅನೂಪ್‌ ನಿರ್ದೇಶನ ಮಾಡಬೇಕಿತ್ತು. ಆ ಪ್ರಾಜೆಕ್ಟ್ ಏನಾಯ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:‌’ವೆಟ್ಟೈಯಾನ್’ ಚಿತ್ರದ ಸಾಂಗ್ ರಿಲೀಸ್- ಮಂಜು ವಾರಿಯರ್ ಜೊತೆ ತಲೈವಾ ಸಖತ್ ಸ್ಟೆಪ್ಸ್

    ‘ಅಶ್ವತ್ಥಾಮ’ ಸಿನಿಮಾ ಸುದೀಪ್ ಅವರ ಜೊತೆ ಮಾಡಬೇಕಿತ್ತು. ಅದು ವಿಕ್ರಾಂತ್ ರೋಣ ನಂತರ ಚಿತ್ರ ಮಾಡಲು ಪ್ಲ್ಯಾನ್ ಆಗಿತ್ತು. 2020ರಲ್ಲಿ ‘ವಿಕ್ರಾಂತ್ ರೋಣ’ ನನ್ನ ಹುಟ್ಟುಹಬ್ಬದ ದಿನವೇ ಶೂಟಿಂಗ್ ಶುರುವಾಗಿತ್ತು. ಎರಡೆರಡು ಬಾರಿ ಕೊವೀಡ್‌ನಿಂದ ಲಾಕ್‌ಡೌನ್ ಆಯ್ತು. ಶೂಟಿಂಗ್ ನಿಂತು ನಿಂತು ಒಂದೂವರೆ ವರ್ಷ ಪ್ಲ್ಯಾನ್ ಮಾಡಿದ ಪ್ರಾಜೆಕ್ಟ್ 4 ವರ್ಷ ತೆಗೆದುಕೊಂಡಿತ್ತು. ಚಿತ್ರೀಕರಣ ಬೇಗ ಮುಗಿದಿದ್ರೆ, ವಿಕ್ರಾಂತ್ ರೋಣ ಬಳಿಕ ‘ಅಶ್ವತ್ಥಾಮ’ ಸಿನಿಮಾ ಮಾಡುತ್ತಿದ್ವಿ ಎಂದು ನಿರ್ದೇಶಕ ಅನೂಪ್ ಭಂಡಾರಿ (Anup Bhandari) ಮಾತನಾಡಿದ್ದಾರೆ.

    ಅಷ್ಟರಲ್ಲಿ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಬಂತು ಅದರಲ್ಲಿ ಅಶ್ವತ್ಥಾಮ ಪಾತ್ರ ಹೈಲೆಟ್ ಆಯ್ತು. ಮತ್ತೊಂದು ‘ಅಶ್ವತ್ಥಾಮ’ ಸಿನಿಮಾ ಅನೌನ್ಸ್ ಆಯಿತು. ಅದಕ್ಕೆ ಮುಂದೆ ನೋಡೋಣ ಎಂದು ಹೋಲ್ಡ್ ಮಾಡಿದ್ವಿ. ಈಗ ನಮ್ಮ ಹತ್ತಿರ ‘ಬಿಲ್ಲಾ ರಂಗ ಭಾಷಾ’ (Billa Ranga Basha) ಇದೆ. ‘ವಿಕ್ರಾಂತ್ ರೋಣ 2’ ಮಾಡಬೇಕು ಅಂದ್ರು ಅದಕ್ಕೂ ಅವಕಾಶ ಇದೆ ಎಂದು ಸೀಕ್ವೆಲ್ ಬರುವ ಬಗ್ಗೆ ಸುಳಿವು ನೀಡಿದ್ದಾರೆ ಅನೂಪ್. ಹಾಗಾದ್ರೆ ಈ ಸಿನಿಮಾ ಬಗ್ಗೆಯೂ ಅಧಿಕೃತವಾಗಿ ಅನೌನ್ಸ್ ಆಗುತ್ತಾ? ಕಾದುನೋಡಬೇಕಿದೆ.

  • ‘ಬಿಲ್ಲ ರಂಗ ಭಾಷಾ’ ಸಿನಿಮಾದಲ್ಲಿ ಸುದೀಪ್ ತ್ರಿಬಲ್ ರೋಲ್?

    ‘ಬಿಲ್ಲ ರಂಗ ಭಾಷಾ’ ಸಿನಿಮಾದಲ್ಲಿ ಸುದೀಪ್ ತ್ರಿಬಲ್ ರೋಲ್?

    ‘ವಿಕ್ರಾಂತ್ ರೋಣ’ ಸಿನಿಮಾ ಡೈರೆಕ್ಟರ್ ಅನೂಪ್ ಭಂಡಾರಿ (Anup Bhandari) ಜೊತೆ ಮತ್ತೊಮ್ಮೆ ಕಿಚ್ಚ ಸುದೀಪ್ (Kichcha Sudeep) ಕೈಜೋಡಿಸಿದ್ದಾರೆ. ‘ಬಿಲ್ಲ ರಂಗ ಭಾಷಾ’ ಸಿನಿಮಾ ಮಾಡುವ ಬಗ್ಗೆ ಸೆ.2ರಂದೇ ಅಧಿಕೃತ ಘೋಷಣೆ ಆಗಿದೆ. ಸದ್ಯ ಈ ಚಿತ್ರದಲ್ಲಿ ಸುದೀಪ್ ‘ಬಿಲ್ಲ ರಂಗ ಭಾಷಾ’ನಾಗಿ ತ್ರಿಬಲ್ ರೋಲ್‌ನಲ್ಲಿ ನಟಿಸುತ್ತಾರಾ ಎಂಬ ಪ್ರಶ್ನೆಗೆ ಡೈರೆಕ್ಟರ್ ಅನೂಪ್ ಗುಟ್ಟು ಬಿಟ್ಟು ಕೊಟ್ಟಿದ್ದಾರೆ.

     

    View this post on Instagram

     

    A post shared by Anup Bhandari (@anupsbhandari)

    ಈ ಚಿತ್ರದಲ್ಲಿ ‘ಬಿಲ್ಲ ರಂಗ ಭಾಷಾ’ (Billa Ranga Basha) ಅಂದರೆ ಸುದೀಪ್ ಅವರೇ ಆದರೆ ಅದು ಒಬ್ಬರೇ ಅಥವಾ ತ್ರಿಬಲ್ ರೋಲಾ ಎಂದು ಮುಂದಿನ ದಿನಗಳಲ್ಲಿ ತಿಳಿಸೋದಾಗಿ ಅನೂಪ್ ಭಂಡಾರಿ ಹೇಳಿಕೆ ನೀಡುವ ಮೂಲಕ ಫ್ಯಾನ್ಸ್‌ಗೆ ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದ್ದಾರೆ. ಇದನ್ನೂ ಓದಿ:ರಣ್‌ವೀರ್ ಸಿಂಗ್ ನಟನೆಯ ‘ಡಾನ್ 3’ ಸಿನಿಮಾ ಮುಂದೂಡಿದ ಫರ್ಹಾನ್ ಅಖ್ತರ್

    ಚಿತ್ರದಲ್ಲಿ 200 ವರ್ಷದ ಭವಿಷ್ಯದ ಕಥೆ ಹೇಳೋಕೆ ಹೊರಟಿದ್ದಾರೆ ಸುದೀಪ್. ‘ವಿಕ್ರಾಂತ್ ರೋಣ’ ಸಿನಿಮಾಗಿಂತ ಮುಂಚೆ ‌’ಬಿಲ್ಲ ರಂಗ ಭಾಷಾ’ ಸಿನಿಮಾ ಮಾಡುವ ಬಗ್ಗೆ ಪ್ಲ್ಯಾನ್ ಆಗಿತ್ತು. ಸಿನಿಮಾ ತಯಾರಿಗೂ ಹಾಗೇ ಸಮಯ ಬೇಕಾದರಿಂದ ಮುಂದೂಡಲಾಗಿತ್ತು. ವಿಎಫ್‌ಎಕ್ಸ್ ಮತ್ತು ಟೆಕ್‌ನಿಕಲಿ ಕೂಡ ವ್ಯವಸ್ಥೆ ಆಗಬೇಕಾಗಿತ್ತು. ಈ ಅದಕ್ಕೆಲ್ಲಾ ಸಮಯ ಕೂಡಿ ಬಂದಿದೆ ಎಂದು‌ ಅನೂಪ್ ಮಾತನಾಡಿದ್ದಾರೆ.

  • ಕಿಚ್ಚೋತ್ಸವ: ‘ಬಿಲ್ಲ ರಂಗ ಬಾಷಾ’ ಟೈಟಲ್, ಕಾನ್ಸೆಪ್ಟ್ ವಿಡಿಯೋ ಗಿಫ್ಟ್

    ಕಿಚ್ಚೋತ್ಸವ: ‘ಬಿಲ್ಲ ರಂಗ ಬಾಷಾ’ ಟೈಟಲ್, ಕಾನ್ಸೆಪ್ಟ್ ವಿಡಿಯೋ ಗಿಫ್ಟ್

    ಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Sudeep) ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಬಾಷಾ (Billa Ranga Basha) ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ ನೀಡಲಾಗಿದೆ. ನಿರೀಕ್ಷೆಗೆ ತಕ್ಕಂತೆ ಮೂಡಿಬಂದಿರುವ ಫಸ್ಟ್ ಝಲಕ್ ನಲ್ಲಿ ನಾನಾ ವಿಷಯಗಳನ್ನು ಅನೂಪ್ ಭಂಡಾರಿ ಕಟ್ಟಿಕೊಟ್ಟಿದ್ದಾರೆ. ಲಿಬರ್ಟಿ ಪ್ರತಿಮೆ, ಐಫೆಲ್ ಟವರ್ ಮತ್ತು ತಾಜ್ ಮಹಲ್ ನ್ನು ಬಿಲ್ಲ ರಂಗ ಭಾಷಾ ಗ್ಲಿಂಪ್ಸ್ ನಲ್ಲಿ ತೋರಿಸಿರುವ ಅವರು ಭವಿಷ್ಯದ ಕಥೆ ಹೇಳೋದಿಕ್ಕೆ ಹೊರಟ್ಟಿದ್ದಾರೆ. Once Upon A Time in  2209 AD ಎಂದು ಶುರುವಾಗುವ ಝಲಕ್ ಬಹಳ ಕುತೂಹಲ ಹೆಚ್ಚಿಸಿದ್ದು, ಬಿಲ್ಲ ರಂಗ ಬಾಷಾ ಫಸ್ಟ್ ಬ್ಲಂಡ್ ಏನಿರಬಹುದು ? ಅನೂಪ್ (Anoop Bhandari)  ಹೇಳೋದಿಕ್ಕೆ ಹೊರಟಿರುವ ಭವಿಷ್ಯದ ಕಥಾಹಂದರ ಏನು? ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

    ಸುದೀಪ್ ಅವರೇ ಹೇಳಿಕೊಂಡಿರುವಂತೆ ಅವರ ಸಿನಿಕರಿಯರ್ ನ ಬಹುದೊಡ್ಡ ಬಜೆಟ್ ಚಿತ್ರ ಇದಾಗಿದೆ. ಟಾಲಿವುಡ್ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ಹನುಮಾನ್ ನಿರ್ಮಾಪಕರಾದ ನಿರಂಜನ್ ರೆಡ್ಡಿ ಹಾಗೂ‌ ಚೈತನ್ಯ ರೆಡ್ಡಿ ಬಿಲ್ಲ ರಂಗ ಬಾಷಾ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ತಮ್ಮದೇ ಪ್ರೈಮ್ ಶೋ ಎಂಟರ್ ಟೈನ್ಮೆಂಟ್ ಬ್ಯಾನರ್ ನಡಿ ಈ ಚಿತ್ರವನ್ನು ಅವರು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅಭಿಮಾನಿಗಳು “ಅಪ್‌ಡೇಟ್‌ ಬೇಕು ಬಾಸ್‌” ಎಂದು ಹೇಳುತ್ತಿದ್ದಾರೆ. “ಬಾಸ್‌ ಅಪ್‌ಡೇಟ್‌ ಬಾಸ್‌” “ಅಪ್‌ಡೇಟ್‌ ಬೇಕು ಬಾಸ್‌” ಎಂದೆಲ್ಲ ಧ್ವನಿ ಕೇಳುತ್ತಾರೆ. ತಕ್ಷಣ ವಿಡಿಯೋದಲ್ಲಿ ಅನೂಪ್‌ ಭಂಡಾರಿ ಅವರು ಪುಸ್ತಕ ಓದುವಂತೆ ಆ ಪುಸ್ತಕದಲ್ಲಿ ಬಿಲ್ಲ ರಂಗ ಬಾಷಾದ ಟೀಮ್‌ ಕುರಿತು ವಿವರವೂ ದೊರಕುತ್ತದೆ. “ಹನುಮಾನ್‌ ನಿರ್ಮಾಪಕರಿಂದ, ರಂಗಿತರಂಗ, ರಾಜರಥ ವಿಕ್ರಾಂತ್‌ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ” ಎಂಬ ಅಪ್‌ಡೇಟ್‌ ಅನ್ನು ಹಂಚಿಕೊಳ್ಳಲಾಗಿದೆ.

    ಬಿಲ್ಲ ರಂಗ ಬಾಷಾ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ದೇಶಕ ಅನೂಪ್ ಭಂಡಾರಿ, ವಿಕ್ರಾಂತ್ ರೋಣ ಸಿನಿಮಾ ನಂತರ ಹನುಮಾನ್ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದ ಸಮಯದಲ್ಲಿ ನಿರ್ಮಾಪಕರಾದ ನಿರಂಜನ್ ರೆಡ್ಡಿ ನನ್ನನ್ನು ಭೇಟಿಯಾದರು. ನಾನು ಸುದೀಪ್ ಸರ್ ಗೆ ಸಿನಿಮಾ ಮಾಡುತ್ತಿರುವುದಾಗಿ ಹಾಗೂ ಬಿಲ್ಲ ರಂಗ ಭಾಷಾ ಕಥೆ ಹೇಳಿದಾಗ ಅವರು ಎಕ್ಸೈಟ್ ಆದರು. ಅದ್ಧೂರಿಯಾಗಿ ಚಿತ್ರ ನಿರ್ಮಾಣ ಮಾಡುವುದಾಗಿ ತಿಳಿಸಿದರು. ಸುದೀಪ್ ಸರ್ ಜೊತೆ ಕೆಲಸ ಮಾಡುವುದು ಅದ್ಭುತ ಅನುಭವವಾಗಿದೆ. ಜನ ವಿಕ್ರಾಂತ್ ರೋಣ ಚಿತ್ರ ಇಷ್ಟಪಟ್ಟಿದ್ದಾರೆ. ಸುದೀಪ್ ಸರ್ ಈ ಚಿತ್ರವನ್ನು ದೊಡ್ಡ ಚಿತ್ರ ಎಂದಿರುವುದು ನನಗೆ ಜವಾಬ್ದಾರಿಯನ್ನು ಜಾಸ್ತಿ ಮಾಡಿದೆ ಎಂದರು.

    ನಿರ್ಮಾಪಕರಾದ ನಿರಂಜನ್ ರೆಡ್ಡಿ ಮಾತನಾಡಿ, ಸುದೀಪ್ ಸರ್ ಜೊತೆ ಅನೂಪ್ ಕೈ ಜೋಡಿಸಿದ್ದಾರೆ ಎಂದಾಗ ನಾವು ಉತ್ಸುಕರಾದೆವು. ತೆಲುಗಿನಲ್ಲಿ ವಿಕ್ರಾಂತ್ ರೋಣ ಅದ್ಭುತ ಯಶಸ್ಸು ಕಂಡಿದೆ. ಬಿಲ್ಲ ರಂಗ ಬಾಷಾ ಕಥೆ ಕೇಳಿದಾಗ ನಾವೇ ಚಿತ್ರ ನಿರ್ಮಾಣ ಮಾಡಬೇಕು ಎಂದುಕೊಂಡೆವು. ಕಿಚ್ಚ ಸುದೀಪ್ ಸರ್ ಜೊತೆ ಕೈ ಜೋಡಿಸಿರುವುದು ಒಂದೊಳ್ಳೆ ಅವಕಾಶವಾಗಿದ್ದು, ಬಿಲ್ಲ ರಂಗ ಬಾಷಾ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಅದ್ಭುತ ಪ್ರಪಂಚ ಪರಿಚಯಿಸುತ್ತೇವೆ ಎಂದರು. ಬಿಲ್ಲ ರಂಗ ಬಾಷಾ ಬಹುಭಾಷಾಯಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲೇ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ ಚಿತ್ರತಂಡ

  • ‘ಬಿಲ್ಲಾ ರಂಗ ಭಾಷಾ’ ಚಿತ್ರಕ್ಕೆ ಸುದೀಪ್ ಸಖತ್ ಫಿಟ್ ಆಗಬೇಕು- ನಿರ್ದೇಶಕ ಅನೂಪ್ ಭಂಡಾರಿ

    ‘ಬಿಲ್ಲಾ ರಂಗ ಭಾಷಾ’ ಚಿತ್ರಕ್ಕೆ ಸುದೀಪ್ ಸಖತ್ ಫಿಟ್ ಆಗಬೇಕು- ನಿರ್ದೇಶಕ ಅನೂಪ್ ಭಂಡಾರಿ

    ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kiccha Sudeep) ಸದ್ಯ ‘ಮ್ಯಾಕ್ಸ್’ (Max Film) ಸಿನಿಮಾ ಮುಗಿಸಿದ್ದಾರೆ. ಈ ಬೆನ್ನಲ್ಲೇ ಅನೂಪ್ ಭಂಡಾರಿ ಜೊತೆಗಿನ ಚಿತ್ರಕ್ಕೆ ಸುದೀಪ್ ತಯಾರಿ ಮಾಡಿಕೊಳ್ತಿದ್ದಾರೆ. ಈ ಚಿತ್ರದ ಬಗ್ಗೆ ಡೈರೆಕ್ಟರ್ ಅನೂಪ್ ಮಾಹಿತಿ ನೀಡಿದ್ದಾರೆ.

    ಸುದೀಪ್ ನಟಿಸಿಲಿರುವ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಸದ್ಯ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಐದಾರು ತಿಂಗಳ ತಯಾರಿ ನಂತರ ಶೂಟಿಂಗ್ ಶುರುವಾಗಲಿದೆ. ಸುದೀಪ್ ಹೊಸ ಪಾತ್ರಕ್ಕೆ ಸ್ಟ್ರಾಂಗ್ ಫಿಸಿಕ್ ಬೇಕಾಗಿದೆ. ಶೀಘ್ರದಲ್ಲೇ ಸಿನಿಮಾ ಘೋಷಣೆ ಮಾಡುತ್ತೇವೆ. ಯಾರು ನಿರ್ಮಾಣ ಮಾಡ್ತಾರೆ. ಇನ್ನೀತರ ವಿಚಾರಗಳನ್ನು ಸದ್ಯದಲ್ಲೇ ಹೇಳುತ್ತೇವೆ ಎಂದು ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ತಿಳಿಸಿದ್ದಾರೆ.

    ಇನ್ನೂ ‘ಮ್ಯಾಕ್ಸ್’ (Max) ಚಿತ್ರ ಮುಗಿಯುತ್ತಿದ್ದಂತೆ ಸುದೀಪ್ ಅನೂಪ್ ಸಿನಿಮಾಗೆ ದೇಹ ದಂಡಿಸುತ್ತಿದ್ದಾರೆ. ವರ್ಕೌಟ್‌ನಲ್ಲಿ ಬ್ಯುಸಿಯಾಗಿದ್ದಾರೆ. ಈ ಹಿಂದೆ ‘ವಿಕ್ರಾಂತ್‌ ರೋಣ’ ಸಿನಿಮಾಗಾಗಿ ಜೊತೆಯಾಗಿ ಕೆಲಸ ಮಾಡಿದ್ರು. ಈಗ ಬಿಲ್ಲಾ ರಂಗ ಭಾಷಾ ಚಿತ್ರದ ಮೇಲೆ ಫ್ಯಾನ್ಸ್‌ಗೆ ನಿರೀಕ್ಷೆಯಿದೆ. ಇದನ್ನೂ ಓದಿ:ಬೀದಿಯಲ್ಲಿ ಕುಡಿದು ತೂರಾಡಿದ ಉರ್ಫಿ ಜಾವೇದ್

    ಇದರ ಜೊತೆಗೆ ಚೇರನ್ ಸಿನಿಮಾ, ಆರ್. ಚಂದ್ರು ನಿರ್ಮಾಣದ ಚಿತ್ರ, ಸುದೀಪ್ ನಿರ್ದೇಶನದ ಸಿನಿಮಾಗಳಿವೆ.

  • ಅನೂಪ್ ಭಂಡಾರಿ ಜೊತೆ ಇದೇ ವರ್ಷ ಸಿನಿಮಾ: ಕಿಚ್ಚ ಸುದೀಪ್

    ಅನೂಪ್ ಭಂಡಾರಿ ಜೊತೆ ಇದೇ ವರ್ಷ ಸಿನಿಮಾ: ಕಿಚ್ಚ ಸುದೀಪ್

    ದ್ಯ ಮ್ಯಾಕ್ಸ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಕಿಚ್ಚ ಸುದೀಪ್, ಈ ನಡುವೆ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮ್ಯಾಕ್ಸ್ ಮುಗಿಯುತ್ತಿದ್ದಂತೆಯೇ ಅನೂಪ್ ಭಂಡಾರಿ (Anoop Bhandari) ಜೊತೆ ಸಿನಿಮಾ ಮಾಡುವುದಾಗಿ ತಿಳಿಸಿದ್ದಾರೆ. ಇತ್ತ ಅನೂಪ್ ಕೂಡ ಫೆಬ್ರವರಿಯಲ್ಲಿ ಹೊಸ ಚಿತ್ರದ ಅಪ್ ಡೇಟ್ ನೀಡುವುದಾಗಿ ಹೇಳಿದ್ದಾರೆ.

    ‘ಮ್ಯಾಕ್ಸ್’ (Max Film) ಸಿನಿಮಾ ಮತ್ತು ಬಿಗ್ ಬಾಸ್ ಶೋ ನಿರೂಪಣೆಯಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ. ‘ಮ್ಯಾಕ್ಸ್’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿದ ಮೇಲೆ ಸಿನಿಮಾ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ಇದೀಗ ಚಿತ್ರದ ಕೆಲಸ ಎಲ್ಲಿಯವರೆಗೂ ಬಂತು ಎಂದು ಸುದೀಪ್ (Sudeep) ಮಾಹಿತಿ ನೀಡಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ಬೆಳ್ಳಂಬೆಳಿಗ್ಗೆ ಬಹುನಿರೀಕ್ಷಿತ ಮ್ಯಾಕ್ಸ್ ಬಗ್ಗೆ ಸುದೀಪ್ ಮಾಹಿತಿ ನೀಡುವ ಮೂಲಕ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ‘ಸಂಕ್ರಾಂತಿ’ ನಂತರ ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭ ಮಾಡುತ್ತಿದ್ದೇನೆ. ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ. ಚಿತ್ರದ ಉಳಿದ ಭಾಗಗಳ ಚಿತ್ರೀಕರಣ ಪ್ರಗತಿಯಲ್ಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

     

    ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಭಿಮಾನಿಗಳು ಪದೇ ಪದೇ ಅಪ್‌ಡೇಟ್ ಕೇಳುತ್ತಿದ್ದರು. ನಿಮ್ಮ ಪ್ರೀತಿ, ಕ್ಯೂರಿಯಾಸಿಟಿ ನನಗೆ ಅರ್ಥವಾಗುತ್ತದೆ. ಆದರೆ, ಸಿನಿಮಾ ಶೂಟ್ ಪೂರ್ಣಗೊಳ್ಳದೆ ಆ ಬಗ್ಗೆ ಅಪ್‌ಡೇಟ್ ನೀಡೋದು ಹೇಗೆ ಅನ್ನೋದು ಸುದೀಪ್ ಅವರ ಪ್ರಶ್ನೆ. ನವೆಂಬರ್‌ನಲ್ಲಿ ಮಳೆಯಿಂದ ಶೂಟ್ ಮಾಡಲು ಸಾಧ್ಯವಾಗಿರಲಿಲ್ಲ. ಡಿಸೆಂಬರ್‌ನಲ್ಲಿ ಕೆಲವು ಅಡೆತಡೆಗಳು ಎದುರಾದವು. ಈಗ ಸಂಕ್ರಾಂತಿ ಬಳಿಕ ಮತ್ತೆ ‘ಮ್ಯಾಕ್ಸ್’ ಶೂಟಿಂಗ್ ಶುರು ಆಗಿದೆ ಎಂದು ತಿಳಿಸಿದ್ದಾರೆ.

  • ಬಾಹುಬಲಿ ಚಿತ್ರಕ್ಕೆ ಎದುರಾಗಿ ನಿಂತ ರಂಗಿತರಂಗಕ್ಕೆ ಎಂಟು ವರ್ಷ

    ಬಾಹುಬಲಿ ಚಿತ್ರಕ್ಕೆ ಎದುರಾಗಿ ನಿಂತ ರಂಗಿತರಂಗಕ್ಕೆ ಎಂಟು ವರ್ಷ

    ನೂಪ್ ಭಂಡಾರಿ ನಿರ್ದೇಶನದ ‘ರಂಗಿತರಂಗ’ (Rangitaranga) ಸಿನಿಮಾ ಅಂದು ‘ಬಾಹುಬಲಿ’ ಚಿತ್ರದ ಎದುರು ಬಿಡುಗಡೆ ಆಗುತ್ತಿದೆ ಎಂದಾಗ ನಕ್ಕವರೇ ಹೆಚ್ಚು. ಬಹುಕೋಟಿ ವೆಚ್ಚದಲ್ಲಿ ತಯಾರಾದ ಬಾಹುಬಲಿ ಸಿನಿಮಾ ಎದುರು, ಹೆಸರೇ ಇಲ್ಲದ ಹುಡುಗರ ಟೀಮ್ ವೊಂದು ಹುಚ್ಚಾಟ ಮಾಡುತ್ತಿದೆ ಎಂದು ಹೇಳಿದ್ದೂ ಇದೆ. ಅನೂಪ್ ಭಂಡಾರಿ (Anoop Bhandari), ನಿರೂಪ್ ಭಂಡಾರಿ (Nirup Bhandari), ರಾಧಿಕಾ ನಾರಾಯಣ್, ಆವಂತಿಕಾ ಶೆಟ್ಟಿ ಹೀಗೆ ಎಲ್ಲ ಹೊಸ ಹೆಸರುಗಳೆ.

    ರಾಜಮೌಳಿ ಎಂಬ ಅದ್ಭುತ ನಿರ್ದೇಶಕನ ಚಿತ್ರ ಬಾಹುಬಲಿ (Baahubali). ಪ್ರಭಾಸ್, ರಾಣಾ ದಗ್ಗುಬಾಟಿ, ತಮನ್ನಾ, ಅನುಷ್ಕಾ ಶೆಟ್ಟಿ, ರಮ್ಯಾ ಕೃಷ್ಣ ಹೀಗೆ ಸ್ಟಾರ್ ಗಳ ಪಟ್ಟಿಯೇ ಹೊಂದಿರುವ ಸಿನಿಮಾದ ಎದುರು ಕನ್ನಡದ ರಂಗಿತರಂಗ ಬಿಡುಗಡೆ ಆಯಿತು. ಬಾಹುಬಲಿ ಅಬ್ಬರಕ್ಕೆ ಸಿನಿಮಾ ಬಲಿಯೇ ಆಗಲಿದೆ ಎಂದು ಆಡಿಕೊಂಡವರ ಬಾಯಿಗೆ ಬೀಗ ಹಾಕಿತ್ತು ರಂಗಿತರಂಗ. ಬಾಹುಬಲಿಯ ಯಶಸ್ಸಿನ ನಡುವೆಯೂ ಬರೋಬ್ಬರಿ ಒಂದು ವರ್ಷಗಳ ಕಾಲ ರಂಗಿತರಂಗ ಪ್ರದರ್ಶನ ಕಂಡಿತು. ಇದನ್ನೂ ಓದಿ:ನೀನು ಆಂಟಿಯಾಗಿ 1 ವರ್ಷದ ಅನುಭವವಿದೆ- ಬರ್ತ್‌ಡೇಯಂದು ಪತ್ನಿ ಕಾಲೆಳೆದ ನಟ ಸುದರ್ಶನ್

    ಯಾವೆಲ್ಲವೂ ಸ್ಯಾಂಡಲ್ ವುಡ್ ನಲ್ಲಿ ಹೊಸ ಹೆಸರುಗಳು ಎಂದು ಕಾಣುತ್ತಿದ್ದವೋ, ಅವೆಲ್ಲವೂ ಕನ್ನಡ ಚಿತ್ರೋದ್ಯಮದಲ್ಲಿ ಚಿರಪರಿಚಿತ ಹೆಸರುಗಳಾದವು. ಮುಂದೆ ಆ ಎಲ್ಲ ಹೆಸರುಗಳೂ ಸ್ಟಾರ್ ನಟರ ಪಟ್ಟಿಯಲ್ಲೂ ಕಾಣಿಸಿಕೊಂಡವು. ಅಂತಹ ರಂಗಿತರಂಗ ಸಿನಿಮಾ ರಿಲೀಸ್ ಆಗಿ ಬರೋಬ್ಬರಿ ಎಂಟು ವರ್ಷಗಳಾಗಿವೆ. ಆ ದಿನವನ್ನು ಚಿತ್ರತಂಡ ನೆನಪಿಸಿಕೊಂಡಿದೆ.

    ಹೌದು, ರಂಗಿತರಂಗ ಸಿನಿಮಾ ರಿಲೀಸ್ ಆಗಿ ಎಂಟು ವರ್ಷಗಳಾಗಿವೆ (Eight Years). ಈ ಸಂದರ್ಭದಲ್ಲಿ ನಿರೂಪ್ ಭಂಡಾರಿ ಸಿನಿಮಾದ ಪೋಸ್ಟರ್ ವೊಂದನ್ನು ಹಂಚಿಕೊಂಡು, ಅಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಚಿತ್ರದೊಂದಿಗೆ ನಿಂತವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ರಂಗಿತರಂಗದ ಗೆಲುವನ್ನೂ ಮತ್ತೆ ನೆನಪಿಸಿಕೊಂಡು ಸಂಭ್ರಮಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಸುದೀಪ್ (Sudeep) ನಟನೆಯ ಹೊಸ ಸಿನಿಮಾದ (ಕಿಚ್ಚ46) (Kiccha 46) ಕುರಿತು ಕೆಲವು ಮಾಹಿತಿಗಳು ಹೊರ ಬಂದರೂ, ನಿರ್ದೇಶಕರ ವಿಷಯದಲ್ಲಿ ಇನ್ನೂ ಮ್ಯೂಸಿಕಲ್ ಚೇರ್ ಆಟ ನಿಂತಿಲ್ಲ. ಮೊದಲು ಕಿಚ್ಚ 46 ಸಿನಿಮಾವನ್ನು ಅನೂಪ್ ಭಂಡಾರಿ (Anoop Bhandari) ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆ ನಂತರ ನಂದಕಿಶೋರ್ ಹೆಸರು ಕೇಳಿ ಬಂತು, ಅಚ್ಚರಿ ಎನ್ನುವಂತೆ ತಮಿಳಿನ ನಿರ್ದೇಶಕ ವಿಜಯ್ (Vijay) ಅವರ ಪ್ರವೇಶ ಮಾಡಿತ್ತು. ಇದೀಗ ಮತ್ತೋರ್ವ ನಿರ್ದೇಶಕನ ಹೆಸರು ತೇಲಿ ಬಂದಿದೆ.

    ಮಲಯಾಳಂ ಖ್ಯಾತ ನಿರ್ದೇಶಕ ಆಂಟೋನಿ ಜೋಸೆಫ್ (Antony Joseph) ಕನ್ನಡ ಸಿನಿಮಾ ರಂಗಕ್ಕೆ ಪ್ರವೇಶ ಮಾಡಲಿದ್ದು, ಅವರೇ ಕಿಚ್ಚನ ಹೊಸ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗುತ್ತಿದೆ. ನಿನ್ನೆಯಷ್ಟೇ ಆಂಟೋನಿ ಜೋಸೆಫ್ ಸುದೀಪ್ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. 2018ರ ಹೆಸರಿನ ಸಿನಿಮಾ ಮೂಲಕ ಆಂಟೋನಿ ಸಖತ್ ಫೇಮಸ್ ಆದವರು. ಈಗ ಅವರ ಹೆಸರು ಕೂಡ ಕಿಚ್ಚನ ಸಿನಿಮಾಗಳ ನಿರ್ದೇಶಕರ ಯಾದಿಯಲ್ಲಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

    ಹೊಸ ಸಿನಿಮಾದ ಬಗ್ಗೆ ಅಧಿಕೃತವಾಗಿ ನಿರ್ದೇಶಕರ ಹೆಸರು ಬಹಿರಂಗಗೊಳ್ಳದೇ ಇದ್ದರೂ, ತಾಂತ್ರಿಕ ವರ್ಗದ ಕೆಲವರ ಹೆಸರನ್ನು ನಿರ್ಮಾಣ ಸಂಸ್ಥೆ ಅಧಿಕೃತಗೊಳಿಸಿದೆ. ಸಿನಿಮಾವನ್ನು ತಮಿಳು ಚಿತ್ರ ನಿರ್ಮಾಣ ಸಂಸ್ಥೆ ತಯಾರಿಸುತ್ತಿದ್ದರೆ ಸಂಗೀತ, ಸಿನಿಮಾಟೋಗ್ರಫಿ ಮತ್ತು ಕಲಾ ನಿರ್ದೇಶನವನ್ನು ಕನ್ನಡದ ತಂತ್ರಜ್ಞರೇ ಮಾಡಲಿದ್ದಾರೆ. ಅಜನೀಶ್ ಲೋಕನಾಥ (Ajanish Loknath) ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದರೆ, ಶಿವಕುಮಾರ್ ಕಲಾನಿರ್ದೇಶಕ. ಶೇಖರ್ ಚಂದ್ರ ಅವರ ಸಿನಿಮಾಟೋಗ್ರಫಿ ಚಿತ್ರಕ್ಕೆ ಇರಲಿದೆಯಂತೆ. ಆದರೆ, ಈ ಮಾಹಿತಿಯನ್ನು ಚಿತ್ರತಂಡ ಇನ್ನೂ ಖಚಿತ ಪಡಿಸಿಲ್ಲ.

    ಈ ಸಿನಿಮಾಗೆ ತಮಿಳಿನ ಕಲೈಪುಲಿ ಎಸ್ ತನು (Kalaipuli S Tanu) ನಿರ್ಮಾಣ ಸಂಸ್ಥೆ ಚಿತ್ರಕ್ಕೆ ಹಣ ಹೂಡಿದೆ. ಮೊನ್ನೆಯಷ್ಟೇ ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿತ್ತು ಚಿತ್ರತಂಡ. ಸುದೀಪ್ ಅವರ ಗೆಟಪ್ ಜಭರದಸ್ತಾಗಿ ಇರಲಿದೆ ಎನ್ನುವ ಸುಳಿವನ್ನೂ ನೀಡಿತ್ತು.

     

    ಒಂದು ದಿನದಲ್ಲಿ ನಡೆಯುವ ಕಥೆಯು ಇದಾಗಿದ್ದು, ಸಸ್ಪೆನ್ಸ್ ಮತ್ತು ಥ್ರಿಲ್ಲರ್ ಮಾದರಿಯ ಚಿತ್ರವಂತೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಭಾರೀ ಬಜೆಟ್ ನ ಚಿತ್ರ ಇದಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ಈ ಸಿನಿಮಾ ಏಕಕಾಲಕ್ಕೆ ರೆಡಿಯಾಗಲಿದೆ. ಅರ್ಜುನ್ ಜನ್ಯ ಬದಲಾಗಿ ಈ ಚಿತ್ರಕ್ಕೆ ಹ್ಯಾರೀಸ್ ಜೈರಾಜ್ ಎನ್ನುವವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಮಾಹಿತಿ ಕೊಡದೇ ಇದ್ದರೂ, ಸುದೀಪ್ ಅವರ ಆಪ್ತರಿಂದಲೇ ಇವಿಷ್ಟು ಮಾಹಿತಿ ಹೊರ ಬಂದಿವೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]