Tag: ಅನೂಪ್ ಭಂಡಾರಿ

  • ಅಳಿಯನ ಚಿತ್ರಕ್ಕೆ ‘ಜಿಮ್ಮಿ’ ಟೈಟಲ್ ಕೊಟ್ಟವರ ಹೆಸರು ಬಹಿರಂಗ ಪಡಿಸಿದ ಕಿಚ್ಚ

    ಅಳಿಯನ ಚಿತ್ರಕ್ಕೆ ‘ಜಿಮ್ಮಿ’ ಟೈಟಲ್ ಕೊಟ್ಟವರ ಹೆಸರು ಬಹಿರಂಗ ಪಡಿಸಿದ ಕಿಚ್ಚ

    ಕಿಚ್ಚ ಸುದೀಪ್ ಅವರ ಸಹೋದರಿ ಮಗ ಸಂಚಿತ್ ಸಂಜೀವ್ (Sanchit Sanjeev)  ಅವರ ಹೊಸ ಸಿನಿಮಾದ ಟೈಟಲ್ (Title) ಲಾಂಚ್ ಕಾರ್ಯಕ್ರಮ ನಿನ್ನೆಯಷ್ಟೇ ನಡೆದಿದೆ. ‘ಜಿಮ್ಮಿ’ ಎನ್ನುವ ಟೈಟಲ್ ಬಗ್ಗೆ ಎಲ್ಲರೂ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಷ್ಟಕ್ಕೂ ಜಿಮ್ಮಿ ಎಂದರೇನು? ಇಂಥದ್ದೊಂದು ಟೈಟಲ್ ಇಡುವುದಕ್ಕೆ ಕಾರಣವೇನು? ಯಾರು ಈ ಟೈಟಲ್ ಅನ್ನು ಸಜೆಸ್ಟ್ ಮಾಡಿದ್ದು ಎನ್ನುವ ಕುರಿತು ಕುತೂಹಲ ಮೂಡಿತ್ತು. ಅದೆಲ್ಲದಕ್ಕೂ ಉತ್ತರ ನೀಡಿದ್ದಾರೆ ಕಿಚ್ಚ ಸುದೀಪ್.

    ಸಂಚಿತ್ ಸಂಜೀವ್ ನಿರ್ದೇಶಿಸಿ, ನಟಿಸುತ್ತಿರುವ ಜಿಮ್ಮಿ ಚಿತ್ರದ ಟೈಟಲ್ ಅನ್ನು ಕೊಟ್ಟಿದ್ದು ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಎನ್ನುವುದನ್ನು ಸ್ವತಃ ಸುದೀಪ್ ಅವರೇ ಬಹಿರಂಗ ಪಡಿಸಿದ್ದಾರೆ. ಕಥೆಗೂ, ಚಿತ್ರದ ಹೀರೋಗೂ ಮತ್ತು ಜಿಮ್ಮಿ ಟೈಟಲ್ ಗೂ ಒಂದಕ್ಕೊಂದು ಸಂಬಂಧವಿದೆಯಂತೆ. ಅದೇನು ಅನ್ನುವುದನ್ನು ಸಿನಿಮಾದಲ್ಲೇ ನೋಡಬೇಕು. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

    ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿರುವ ಅಳಿಯನಿಗೆ ನಟ ಕಿಚ್ಚ ಸುದೀಪ್ (Kichcha Sudeep) ಕಿವಿಮಾತು ಹೇಳಿದ್ದಾರೆ. ಹಿರಿಯರು ನಡೆಸಿಕೊಂಡು ಬಂದ ದೊಡ್ಡ ಕೋಟೆ ಸ್ಯಾಂಡಲ್‍ವುಡ್ (Sandalwood) ಅದಕ್ಕೆ ನೀವು ಕಾಲಿಡುತ್ತಿದ್ದೀರಿ. ಬೆಳೆಸಲಾಗದಿದ್ರೂ ಕಾಪಾಡಿಕೊಂಡು ಹೋಗಿ ಎಂದು ಅಳಿಯ ಸಂಚಿತ್‌ಗೆ ಹೇಳಿದ್ದಾರೆ.

    ಸುದೀಪ್ ಸಹೋದರಿಯ ಮಗ ಸಂಚಿತ್ ಸಂಜೀವ್ ‘ಜಿಮ್ಮಿ’ (Jimmy) ಯಾಗಿ ಚಂದನವನದ ಅಡ್ಡಾಗೆ ಎಂಟ್ರಿ ಕೊಡುತ್ತಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಭಾನುವಾರ ಸಂಜೆ ಟೈಟಲ್ ಲಾಂಚ್ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಈ ವೇಳೆ ಮಾತನಾಡಿದ ಸುದೀಪ್, ಚಿತ್ರರಂಗದ ನಿಮ್ಮ ಸಮಕಾಲೀನ ನಟರೆಲ್ಲರ ಜೊತೆ ಚೆನ್ನಾಗಿರಿ, ಸ್ನೇಹ ಬೆಳೆಸಿಕೊಳ್ಳಿ ಎಂದು ಸಲಹೆ ಕೊಟ್ಟಿದ್ದಾರೆ.

    ಜಿಮ್ಮಿ ಚಿತ್ರದಲ್ಲಿ ಪುತ್ರಿ ಸಾನ್ವಿ ಹಿನ್ನೆಲೆ ಗಾಯನ ಮಾಡಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಿಚ್ಚ, ಮಗಳು ಹಾಡಿದ್ದು ಖುಷಿಯಾಯ್ತು. ನನ್ನ ಮಗಳು ಚೆನ್ನಾಗಿ ಹಾಡ್ತಾಳೆ ಅಂತ ಗೊತ್ತಿತ್ತು. ಇಷ್ಟು ಚೆನ್ನಾಗಿ ಅಂತ ಇವತ್ತೇ ಗೊತ್ತಾಗಿದ್ದು. ವಾಸುಕಿ ವೈಭವ್ ಧ್ವನಿಯನ್ನ ಇನ್ನೂ ತಿದ್ದಿ ಇಂಪಾಗಿ ಹಾಡುವಂತಾಯ್ತು ಎಂದರು.

     

    ಇದೇ ವೇಳೆ ನಟ ಸಂಚಿತ್ ಸಂಜೀವ್ ಮಾತನಾಡಿ, ಮಾತು ಬರ್ತಿಲ್ಲ. ಒಂದ್ಕಡೆ ಭಯ, ನರ್ವಸ್ ಇದೆ. ಹಾಗೆಯೇ ಎಕ್ಸೈಟ್ಮೆಂಟ್ ಕೂಡ ಇದೆ. ಒಂದು ಮಾತು ಹೇಳಬೇಕಂದರೆ ನಿಮ್ಮ ನಂಬಿಕೆ ಉಳಿಸಿಕೊಳ್ತೀನಿ. ಸುದೀಪ್ ಮಾಮರಿಂದ ಬಹಳ ಕಲಿತಿದ್ದೇನೆ. ಅವರ ಶ್ರಮ, ಪ್ರೀತಿ ನೋಡಿದ್ದೀನಿ. ಏನೇ ಮಾಡಿದ್ರೂ 100% ಎಫರ್ಟ್ ಹಾಕಬೇಕು ಅನ್ನೋದನ್ನು ಮಾಮ ಹೇಳುತ್ತಿರುತ್ತಾರೆ. ಜಿಮ್ಮಿ ಯಾರಿಗೂ ಇಲ್ಲ ಕಮ್ಮಿ ಎಂದು ಹೇಳಿದರು.

  • Breaking- ಸುದೀಪ್ ಹೊಸ ಅಪ್ ಡೇಟ್ : ತಮಿಳು ನಿರ್ಮಾಪಕರ ಜೊತೆ ಕೈ ಜೋಡಿಸಿದ ಕಿಚ್ಚ

    Breaking- ಸುದೀಪ್ ಹೊಸ ಅಪ್ ಡೇಟ್ : ತಮಿಳು ನಿರ್ಮಾಪಕರ ಜೊತೆ ಕೈ ಜೋಡಿಸಿದ ಕಿಚ್ಚ

    ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದ್ದರು ಕಿಚ್ಚ ಸುದೀಪ್. ಜೂನ್ 1ನೇ ತಾರೀಖಿನಂದು ಹೊಸ ಸಿನಿಮಾದ ಅಪ್ ಡೇಟ್ ನೀಡುವುದಾಗಿ ತಿಳಿಸಿದ್ದರು. ಹೊಸ ಸಿನಿಮಾದ ಟೀಸರ್ ಅನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದರು. ಅದಕ್ಕೂ ಆರು ದಿನ ಮುಂಚೆಯೇ ಇಂದು ಆ ಸಿನಿಮಾದ ಸಣ್ಣ ಸುಳಿವು ಕೊಟ್ಟಿದ್ದಾರೆ. ಆ ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕ್ ರಿಲೀಸ್ ಮಾಡುವ ಮೂಲಕ ತಿಳಿಸಿದ್ದಾರೆ.

    ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು (Tamil) ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ಸುದೀಪ್ ಟೀಸರ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸಣ್ಣದೊಂದು ವಿಡಿಯೋ ರಿಲೀಸ್ ಮಾಡಿದೆ ತಮಿಳಿನ ಕಲೈಪುಲಿ ಎಸ್ ತನು (Kalaipuli S Tanu) ನಿರ್ಮಾಣ  ಸಂಸ್ಥೆ. ಕಿಚ್ಚ ಕಾರಿನಿಂದ ಇಳಿಯುವುದರ ಜೊತೆಗೆ ಮೇಕಪ್ ನಲ್ಲಿ ಭಾಗಿಯಾಗುವ ಸಣ್ಣದೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸುದೀಪ್ ಅವರ ಗೆಟಪ್ ಜಭರದಸ್ತಾಗಿ ಇರಲಿದೆ ಎನ್ನುವ ಸುಳಿವನ್ನೂ ನೀಡಿದ್ದಾರೆ.

    ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅದಕ್ಕೂ ಒಂದಷ್ಟು ಮಾಹಿತಿ ಸಿಕ್ಕಿದೆ. ಕೈಯಲ್ಲಿರುವ ಮೂರು ಸಿನಿಮಾಗಳಲ್ಲಿ ಮೊದಲ ಶುರುವಾಗುವ ಚಿತ್ರದ ಬಗ್ಗೆ ಅವರು ಆಪ್ತರು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಹೃದಯಾಘಾತದಿಂದ ಫೇಮಸ್ ನಟ ನಿತೇಶ್ ಪಾಂಡೆ ನಿಧನ

    ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಟೀಸರ್ ಮೇ 22ರಿಂದ ಶೂಟಿಂಗ್ ಆಗಿದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ.

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

  • ಇಂದು ಚಿತ್ರೀಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಇಂದು ಚಿತ್ರೀಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಚುನಾವಣೆ ಪ್ರಚಾರ ಮುಗಿಸಿಕೊಂಡು ಅಭಿಮಾನಿಗಳಿಗೆ ಮೊನ್ನೆಯಷ್ಟೇ ಗುಡ್ ನ್ಯೂಸ್ ನೀಡಿದ್ದರು ಕಿಚ್ಚ ಸುದೀಪ್. ಮೇ 22ರಂದು ಹೊಸ ಸಿನಿಮಾದ ಪ್ರೊಮೋ ಶೂಟ್ ನಲ್ಲಿ ಭಾಗಿಯಾಗುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಗೆ ತಿಳಿಸಿದ್ದರು. ಇಂದು ಕಿಚ್ಚ ಸುದೀಪ್ ಹೊಸ ಸಿನಿಮಾದ ಪ್ರೋಮೋ ಶೂಟ್ ನಲ್ಲಿ ಭಾಗಿಯಾಗಿದ್ದಾರೆ. ಈ ಸಿನಿಮಾದ ಕುರಿತಂತೆ ಜೂನ್ 1 ರಂದು ಮಾಹಿತಿ ಹಂಚಿಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.

    ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅದಕ್ಕೂ ಒಂದಷ್ಟು ಮಾಹಿತಿ ಸಿಕ್ಕಿದೆ. ಕೈಯಲ್ಲಿರುವ ಮೂರು ಸಿನಿಮಾಗಳಲ್ಲಿ ಮೊದಲ ಶುರುವಾಗುವ ಚಿತ್ರದ ಬಗ್ಗೆ ಅವರು ಆಪ್ತರು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪವಿತ್ರಾ ಜೊತೆಗಿನ ಸಂಬಂಧಕ್ಕೆ ಗ್ರೀನ್ ಸಿಗ್ನಲ್ ಕೊಟ್ರಿದ್ರಾ ಕೃಷ್ಣ, ಮಹೇಶ್ ಬಾಬು- ನರೇಶ್ ಹೇಳೋದೇನು?

    ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ.

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

  • Exclusive- ಸುದೀಪ್ ಮುಂದಿನ ಸಿನಿಮಾ ‘ಬಿಲ್ಲ ರಂಗ ಬಾಷಾ’: ಜೂನ್ 1 ರಿಂದ ಶೂಟಿಂಗ್

    Exclusive- ಸುದೀಪ್ ಮುಂದಿನ ಸಿನಿಮಾ ‘ಬಿಲ್ಲ ರಂಗ ಬಾಷಾ’: ಜೂನ್ 1 ರಿಂದ ಶೂಟಿಂಗ್

    ಕೆಲ ವಾರಗಳ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಇದೀಗ ಮತ್ತೆ ಸುದೀಪ್ ಟ್ವೀಟ್ ಮಾಡಿದ್ದು ಮೇ 22ರಂದು ಮೊದಲ ಸಿನಿಮಾದ ಪ್ರೊಮೋ (Promo) ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ.

    ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

    ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆದಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ.

  • ಕಿಚ್ಚ ಸುದೀಪ್ ಸಿನಿಮಾ ಮೂಲಕ ಕನ್ನಡಕ್ಕೆ ಬರಲಿದ್ದಾರಾ ನಿರ್ದೇಶಕ ಚರಣ್

    ಕಿಚ್ಚ ಸುದೀಪ್ ಸಿನಿಮಾ ಮೂಲಕ ಕನ್ನಡಕ್ಕೆ ಬರಲಿದ್ದಾರಾ ನಿರ್ದೇಶಕ ಚರಣ್

    ಮೂರು ಕಥೆಗಳನ್ನು ಒಪ್ಪಿಕೊಂಡಿರುವುದಾಗಿ ಮೊನ್ನೆಯಷ್ಟೇ ಕಿಚ್ಚ ಸುದೀಪ್ (Kichcha Sudeep) ಹೇಳಿದ್ದರು. ಈ ಮಾತಿನ ಬೆನ್ನಲ್ಲೇ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ಕಿಚ್ಚನಿಗಾಗಿ ಸಿನಿಮಾ ಮಾಡಲು ಕನ್ನಡದ ಇಬ್ಬರು ನಿರ್ದೇಶಕರು ರೆಡಿಯಾಗಿದ್ದಾರೆ. ಅವರು ಹೆಸರು ಕೂಡ ಬಹಿರಂಗವಾಗಿದೆ ಮತ್ತು ಅವರು ಸಿನಿಮಾ ಮಾಡುವ ಕುರಿತು ಹೇಳಿಕೊಂಡಿದ್ದಾರೆ. ಇದೀಗ ಮತ್ತೊಂದು ಅಚ್ಚರಿಯ ಹೆಸರು ಕೇಳಿ ಬಂದಿದೆ.

    ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದಾರೆ. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದೀಗ ಚರಣ್ ಹೆಸರು ಕೇಳಿ ಬಂದಿದೆ.  ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

    ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆಯಲಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

  • ‘ನನಗೆ ಅವಕಾಶ ಕೊಡಿ’ ಎಂದು ಪೋಸ್ಟ್ ಹಾಕಿದ ರಂಗಿತರಂಗ ಖ್ಯಾತಿಯ ನಟಿ

    ‘ನನಗೆ ಅವಕಾಶ ಕೊಡಿ’ ಎಂದು ಪೋಸ್ಟ್ ಹಾಕಿದ ರಂಗಿತರಂಗ ಖ್ಯಾತಿಯ ನಟಿ

    ನ್ನಡ ಸಿನಿಮಾ ರಂಗದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿದ್ದ ‘ರಂಗಿತರಂಗ’ (Rangitaranga) ಚಿತ್ರವು ಕೇವಲ ಕನ್ನಡದಲ್ಲಿ ಮಾತ್ರವಲ್ಲ, ಆನಂತರ ದೇಶ ವಿದೇಶಗಳಲ್ಲೂ ತನ್ನ ಗೆಲುವಿನ ಪತಾಕೆಯನ್ನು ಹಾರಿಸಿತ್ತು. ರಾತ್ರೋರಾತ್ರಿ ಅನೂಪ್ ಭಂಡಾರಿ (Anoop Bhandari)ಎಂಬ ನಿರ್ದೇಶಕ, ನಿರೂಪ ಭಂಡಾರಿ ಎನ್ನುವ ನಟ ಹಾಗೂ  ಆವಂತಿಕಾ ಶೆಟ್ಟಿ (Avantika Shetty) ಎನ್ನುವ ನಟಿ ಫೇಮಸ್ ಆಗಿ ಬಿಟ್ಟರು. ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಈ ಚಿತ್ರದ ಬಗ್ಗೆ ಮಾತನಾಡಿದರು. ಆನಂತರ ಅನೂಪ್ ನಡೆದದ್ದು ಹಾದಿ ಆಯಿತು.

    ರಂಗಿತರಂಗದ ನಂತರ ಅನೂಪ್ ‘ರಾಜರಥ’ ಚಿತ್ರ ಮಾಡಿದರೂ, ಅದು ಹೇಳಿಕೊಳ್ಳುವಂತಹ ಗೆಲುವನ್ನು ತಂದುಕೊಡಲಿಲ್ಲ. ಆದರೂ, ಅವರು ಛಲ ಬಿಡದೇ ಭಾರೀ ಬಜೆಟ್ ಚಿತ್ರಕ್ಕೆ ಕೈ ಹಾಕಿ ಗೆಲುವು ಕಂಡರು. ಆದರೆ, ಆವಂತಿಕಾ ಶೆಟ್ಟಿಗೆ ಮಾತ್ರ ನಂತರದ ಸಿನಿಮಾಗಳಲ್ಲಿ ಅಷ್ಟೇನೂ ಯಶಸ್ಸು ಮತ್ತು ಬೇಡಿಕೆ ಬರಲಿಲ್ಲ. ಎರಡ್ಮೂರು ಚಿತ್ರಗಳನ್ನು ಮಾಡಿ, ತೆರೆಮರೆಗೆ ಸರಿದುಬಿಟ್ಟರು ಆವಂತಿಕಾ. ಈಗ ಮತ್ತೆ ಸಿನಿಮಾ ಮಾಡುವ ಆಸೆಯನ್ನು ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ: ಹೊಸ ಫೋಟೋಶೂಟ್‌ನಲ್ಲಿ ಮಹಾಲಕ್ಷ್ಮಿಯಂತೆ ಕಂಗೊಳಿಸಿದ ನಟಿ ಅಮೂಲ್ಯ

    ಕುಟುಂಬದ ಸಮಸ್ಯೆಯ ಕಾರಣದಿಂದಾಗಿ ಆವಂತಿಕಾ ಸಿನಿಮಾ ರಂಗದಿಂದಲೇ ದೂರ ಸರಿದರಂತೆ. ನೆಮ್ಮದಿಗಾಗಿ ಆಧ್ಯಾತ್ಮದತ್ತ ಒಲವು ಬೆಳೆಸಿಕೊಂಡರಂತೆ. ಕೋವಿಡ್ ಮತ್ತಿತರ ಕಾರಣದಿಂದಾಗಿ ಬರೋಬ್ಬರಿ ಐದು ವರ್ಷಗಳಿಂದ ಅವರು ಯಾವುದೇ ಸಿನಿಮಾ ಮಾಡಿಲ್ಲ. ಮುಂಬೈನಲ್ಲೇ ಬೀಡುಬಿಟ್ಟಿದ್ದರಿಂದ ಕನ್ನಡ ಮಾತನಾಡಲು ಕೂಡ ಕಷ್ಟವಾಗುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಆವಂತಿಕಾ, ‘ನನಗೆ ಸಿನಿಮಾದಲ್ಲಿ ನಟಿಸುವ ಆಸಕ್ತಿಯಿದೆ. ಯಾರಾದರೂ ಅವಕಾಶ ಕೊಡಬೇಕು ಅಷ್ಟೆ. ಅವಕಾಶ ಕೊಟ್ಟರೆ ಖಂಡಿತವಾಗಿಯೂ ನಟಿಸುತ್ತೇನೆ. ಈ ಮೂಲಕ ಅವಕಾಶಕ್ಕಾಗಿ ಕೇಳುತ್ತಿದ್ದೇನೆ’ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ತಮ್ಮ ವೈಯಕ್ತಿಕ ಬದುಕಿನ ಬಗ್ಗೆಯೂ ಅವರು ಕೆಲ ವಿಷಯಗಳನ್ನು ಹಂಚಿಕೊಂಡಿದ್ದಾರೆ.

  • ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ಕಿಚ್ಚ ಸುದೀಪ್ ನಟನೆಯ ಹೊಸ ಸಿನಿಮಾ ಏಪ್ರಿಲ್ ನಲ್ಲಿ ಘೋಷಣೆ

    ವಿಕ್ರಾಂತ್ ರೋಣ (Vikrant Rona) ಸಿನಿಮಾದ ನಂತರ ಈವರೆಗೂ ಹೊಸ ಸಿನಿಮಾದ (New Cinema) ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ ಕಿಚ್ಚ ಸುದೀಪ್ (Sudeep). ವಿಕ್ರಾಂತ್ ರೋಣ ಚಿತ್ರ ರಿಲೀಸ್ ಆಗಿ ಹಲವು ತಿಂಗಳು ಕಳೆದರೂ, ಹೊಸ ಚಿತ್ರದ ಬಗ್ಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಲೇ ಇದ್ದಾರೆ. ಈ ನಡುವೆ ಮೂರ್ನಾಲ್ಕು ನಿರ್ದೇಶಕರ ಹೆಸರೂ ಕೇಳಿ ಬಂದಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಸುದೀಪ್ ನಟನೆಯ ಹೊಸ ಸಿನಿಮಾದ ಘೋಷಣೆ ಏಪ್ರಿಲ್ ನಲ್ಲಿ ನಡೆಯಲಿದೆ. ಅದು ಹಲವು ಭಾಷೆಗಳಲ್ಲಿ ಮೂಡಿ ಬರುವ ಚಿತ್ರವಾಗಲಿದೆ.

    ಕನ್ನಡದ ನಿರ್ದೇಶಕರಾದ ನಂದಕಿಶೋರ್ (Nandakishor), ಅನೂಪ್ ಭಂಡಾರಿ (Anoop Bhandari) ಸೇರಿದಂತೆ ಕೆಲ ನಿರ್ದೇಶಕರು ಈಗಾಗಲೇ ಸುದೀಪ್ ಗಾಗಿ ಕಥೆ ಬರೆದುಕೊಂಡು ಕೂತಿದ್ದಾರೆ. ಜೊತೆಗೆ  ಕಬಾಲಿ ಅಂತಹ ಭಾರೀ ಬಜೆಟ್ ಸಿನಿಮಾ ಮಾಡಿರುವ ಕಲೈಪುಲಿ ಎಸ್ ಥಾನು ಕೂಡ ಸುದೀಪ್ ಗಾಗಿ ಸಿನಿಮಾ ಮಾಡಲು ಮುಂದೆ ಬಂದಿದ್ದಾರೆ. ಈ ಸಿನಿಮಾವನ್ನು ವಿಜಯ್ ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾವೇ ಏಪ್ರಿಲ್ ನಲ್ಲಿ ಘೋಷಣೆ ಆಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬರ್ತ್‌ಡೇ ಸಂಭ್ರಮದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ವಿಜಯ್ (Vijay) ನಿರ್ದೇಶನದಲ್ಲಿ ಮೂಡಿ ಬರಲಿರುವ ಆ ಸಿನಿಮಾ ಕನ್ನಡ ಹಾಗೂ ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸವನ್ನೂ ಶುರು ಮಾಡಿದ್ದಾರಂತೆ ನಿರ್ದೇಶಕರು. ಈ ಸಿನಿಮಾದ ಮಾಹಿತಿಯನ್ನೂ ನಿರ್ಮಾಣ ತಂಡ ಶೀಘ್ರದಲ್ಲೇ ಹಂಚಿಕೊಳ್ಳಲಿದೆ ಎಂದೂ ಹೇಳಲಾಗುತ್ತಿದೆ. ಈ ಸಿನಿಮಾ ಕೂಡ ಭಾರೀ ಬಜೆಟ್ ನಲ್ಲಿ ನಿರ್ಮಾಣವಾಗಲಿದ್ದು, ನೂರು ಕೋಟಿ ಬಜೆಟ್ ಚಿತ್ರ ಇದಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ.

    ವಿಜಯ್ ನಿರ್ದೇಶನದ ಸಿನಿಮಾ ನಂತರ ಅನೂಪ್ ಭಂಡಾರಿ ನಿರ್ದೇಶನದ ಬಿಲ್ಲಾ ರಂಗ ಬಾಷಾ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿದೆ. ಆ ನಂತರ ನಂದಕಿಶೋರ್ ಅವರಿಗೆ ಕಿಚ್ಚ ಡೇಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಟ್ಟಿನಲ್ಲಿ ಸುದೀಪ್ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ.

  • ಅನೂಪ್ ಭಂಡಾರಿ ಮುಂದಿನ ಸಿನಿಮಾ ‘ಬಿಲ್ಲ ರಂಗಾ ಬಾಷಾ’ ಫಿಕ್ಸ್: ಸುದೀಪ್ ಹೀರೋ

    ಅನೂಪ್ ಭಂಡಾರಿ ಮುಂದಿನ ಸಿನಿಮಾ ‘ಬಿಲ್ಲ ರಂಗಾ ಬಾಷಾ’ ಫಿಕ್ಸ್: ಸುದೀಪ್ ಹೀರೋ

    ವಿಕ್ರಾಂತ್ ರೋಣ ಸಿನಿಮಾದ ನಂತರ ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಯಾವ ಸಿನಿಮಾವನ್ನು ಕೈಗೆತ್ತಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಎಲ್ಲರಲ್ಲೂ ಇದೆ. ಅದರಲ್ಲೂ ಅನೂಪ್ ಮತ್ತು ಸುದೀಪ್ (Sudeep) ಮತ್ತೆ ಒಂದಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೂ ಇದೆ. ಈ ಹಿಂದೆ ಮಾಡಬೇಕಿದ್ದ ಬಿಲ್ಲ ರಂಗಾ ಬಾಷಾ ರಂಗಾ ಬಾಷಾ (Billa Ranga Basha) ಸಿನಿಮಾವನ್ನು ಮತ್ತೆ ಅವರು ಶುರು ಮಾಡಲಿದ್ದಾರೆ ಎನ್ನುವ ಚರ್ಚೆ ಕೂಡ ನಡೆದಿದೆ. ಈ ಎಲ್ಲದಕ್ಕೂ ಉತ್ತರ ನೀಡುವಂತೆ ಅನೂಪ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದಾರೆ.

    ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್ ನ ‘ವಿಕ್ರಾಂತ್ ರೋಣ’ ದೊಡ್ಡ ಮಟ್ಟದಲ್ಲೇ ಹಿಟ್ ಆಗಲಿದೆ ಎಂದು ಸಿನಿಪಂಡಿತರ ಲೆಕ್ಕಾಚಾರವಾಗಿತ್ತು. ಬಾಕ್ಸ್ ಆಫೀಸಿಗೆ 500 ಕೋಟಿ ಹರಿದು ಬರಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಅದು ಸಾಧ್ಯವಾಗಲಿಲ್ಲ. ಹಾಗಂತ ಸಿನಿಮಾ ಸೋಲಲಿಲ್ಲ. ನಿರೀಕ್ಷಿತ ಮಟ್ಟಕ್ಕೆ ಗೆಲ್ಲಲಿಲ್ಲವಷ್ಟೇ. ಹಾಗಾಗಿ ಹಿಂದಿನ ಎಲ್ಲ ನೋವನ್ನು ಹೊಸ ಸಿನಿಮಾದ ಮೂಲಕ ನಿವಾರಿಸಿಕೊಳ್ಳಲು ಅನೂಪ್ ಸಿದ್ಧವಾದಂತೆ ಕಾಣುತ್ತಿದೆ. ಇದನ್ನೂ ಓದಿ ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

    ವಿಕ್ರಾಂತ್ ರೋಣ ಸಿನಿಮಾಗೂ ಮುನ್ನ ಅನೂಪ್ ‘ಬಿಲ್ಲ ರಂಗ ಬಾಷಾ’ ಚಿತ್ರವನ್ನು ಮಾಡಬೇಕಿತ್ತು. ಪೋಸ್ಟರ್ ಕೂಡ ರಿಲೀಸ್ ಆಗಿತ್ತು. ಆದರೆ, ಅದನ್ನು ಪಕ್ಕಕ್ಕಿಟ್ಟು ‘ವಿಕ್ರಾಂತ್ ರೋಣ’ ಚಿತ್ರ ಮಾಡಿದರು. ಕಿಚ್ಚನ ಪಾತ್ರದ ಆಯ್ಕೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಯಿತು. ಸಾಕಷ್ಟು ಸದ್ದು ಕೂಡ ಮಾಡಿತು. ಕನ್ನಡ ಸಿನಿಮಾವೊಂದು ದುಬೈನಲ್ಲಿ ಭಾರತದ ಬಾವುಟವನ್ನು ಹಾರಿಸುವ ಮೂಲಕ ದಾಖಲೆ ಮಾಡಿತು. ಈಗ ಈ ಜೋಡಿಯ ಮತ್ತೊಂದು ಸಿನಿಮಾದ ಸುಳಿವನ್ನು ಸ್ವತಃ ನಿರ್ದೇಶಕರೇ ನೀಡಿದ್ದಾರೆ.

    ಅನೂಪ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದು, ‘ಬಿ’ ಗಿಯಾಗ್ ಕೂತ್ಕೋಳಿ, ‘ರಂ’ ಪಾಟ ಶುರುವಾಗೋಕ್ ಸ್ವಲ್ಪ ಸಮಯ ಬೇಕು. ‘ಬಾ’ ಡೂಟದ್ ಜೊತೆ ಬರ್ತೀವಿ. ಅಲ್ಲಿವರ್ಗೂ ಎಂದಿನ ಹಾಗೆ ತಾಳ್ಮೆ ಇರ್ಲಿ’ ಎಂದು ಬರೆದುಕೊಂಡಿದ್ದಾರೆ. ಕೆಲವು ಅಕ್ಷರಗಳಿಗೆ ಗ್ಯಾಪ್ ನೀಡುವ ಮೂಲಕ ತಮ್ಮ ಮುಂದಿನ ಸಿನಿಮಾ ಯಾವುದು ಎನ್ನುವುದರ ಸುಳಿವು ಬಿಟ್ಟು ಕೊಟ್ಟಿದ್ದಾರೆ.

  • ಸದ್ಯದಲ್ಲೇ ಗುಡ್ ನ್ಯೂಸ್ ಕೊಡಲಿದ್ದಾರೆ ಕಿಚ್ಚ ಸುದೀಪ್

    ಸದ್ಯದಲ್ಲೇ ಗುಡ್ ನ್ಯೂಸ್ ಕೊಡಲಿದ್ದಾರೆ ಕಿಚ್ಚ ಸುದೀಪ್

    ವಿಕ್ರಾಂತ್ ರೋಣ ಸಿನಿಮಾದ ನಂತರ ಕಿಚ್ಚ ಸುದೀಪ್ ಯಾವ ಮತ್ತು ಯಾರ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳಲ್ಲಿದೆ. ಈವರೆಗೂ ಸುದೀಪ್ ಈ ವಿಷಯದ ಕುರಿತು ಮಾತೂ ಆಡಿಲ್ಲ. ಹಾಗಾಗಿ ಯಾರ ಸಿನಿಮಾದಲ್ಲಿ ಅವರು ನಟಿಸಲಿದ್ದಾರೆ ಎನ್ನುವ ಪ್ರಶ್ನೆ ಮೂಡಿತ್ತು. ಅಲ್ಲದೇ, ಹೊಸ ಸಿನಿಮಾವನ್ನು ಯಾವಾಗ ಅನೌನ್ಸ್ ಮಾಡುತ್ತಾರೆ ಎಂದು ಕಾಯುವಿಕೆಯೇ ಹೆಚ್ಚಾಗಿತ್ತು. ಕೊನೆಗೂ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ವಿಕ್ರಾಂತ್ ರೋಣ ಸಿನಿಮಾದ ನಂತರ ಮತ್ತೆ ಅನೂಪ್ ಭಂಡಾರಿ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಅಲ್ಲದೇ, ನಂದಕಿಶೋರ್ ಕೂಡ ಸುದೀಪ್ ಗಾಗಿ ಒಂದು ಸಿನಿಮಾ ಮಾಡಬೇಕಿದೆ. ರಕ್ಷಿತ್ ಶೆಟ್ಟಿ ಜೊತೆಯೂ ಸುದೀಪ್ ಒಂದು ಚಿತ್ರವನ್ನು ಮಾಡಬೇಕಿದೆ. ಈ ನಡುವೆ ಸ್ವತಃ ಸುದೀಪ್ ಅವರೇ ಸಲ್ಮಾನ್ ಖಾನ್ ಗಾಗಿ ಒಂದು ಚಿತ್ರವನ್ನು ಮಾಡಲಿದ್ದಾರೆ ಎಂದೂ ಹೇಳಲಾಗಿತ್ತು. ಇವುಗಳಲ್ಲಿ ಮೊದಲು ಯಾವುದು ಆಗಲಿದೆ ಎನ್ನುವುದು ಅಭಿಮಾನಿಗಳ ಮುಂದಿರುವ ಪ್ರಶ್ನೆ. ಇದನ್ನೂ ಓದಿ: ಸತತ ಸೋಲಿನಿಂದ ಬೇಸತ್ತ ಪೂಜಾಗೆ ನಿರ್ದೇಶಕ ತ್ರಿವಿಕ್ರಮ್ ಸಲಹೆ

    ತಮ್ಮ ಹೊಸ ಸಿನಿಮಾದ ಬಗ್ಗೆ ಮಾತನಾಡಿರುವ ಸುದೀಪ್, ಸದ್ಯದಲ್ಲೇ ಹೊಸ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ‘ನಾನು ವಿಶ್ರಾಂತಿಯಲ್ಲಿ ಇದ್ದೇನೆ ಎಂದು ಭಾವಿಸಬೇಕಿಲ್ಲ. ಹಲವಾರು ಕಥೆಗಳನ್ನು ಕೇಳುತ್ತಿದ್ದೇನೆ. ನನಗೆ ಎಕ್ಸೈಟ್ ಕೊಡುವಂಥ, ಈ ಪಾತ್ರವನ್ನು ನಾನು ಮಾಡಬಲ್ಲೆ ಎಂದು ಕಿಕ್ ಕೊಡುವಂತಹ ಸ್ಕ್ರಿಪ್ಟ್ ಆಯ್ಕೆಯಾದ ತಕ್ಷಣವೇ ಅಭಿಮಾನಿಗಳ ಜೊತೆ ಅದನ್ನು ಹಂಚಿಕೊಳ್ಳುತ್ತೇನೆ’ ಎಂದಿದ್ದಾರೆ ಸುದೀಪ್.

    ಸುದೀಪ್ ಅವರ ಆಪ್ತರು ಹೇಳುವಂತೆ, ಮೂರ್ನಾಲ್ಕು ಕಥೆಗಳನ್ನು ಸುದೀಪ್ ಆಯ್ಕೆ ಮಾಡಿಕೊಂಡಿದ್ದಾರಂತೆ. ಆದರೆ, ಯಾವ ಕಥೆಯನ್ನು ಮೊದಲು ಮಾಡಬೇಕು ಎನ್ನುವ ಕುರಿತು ಚರ್ಚೆ ನಡೆದಿದೆ. ಈ ಸಲ ಅಭಿಮಾನಿಗಳ ಮುಂದೆ ನಿರ್ದೇಶಕನಾಗಿ ನಿಲ್ಲಬೇಕಾ? ಅಥವಾ ನಟನಾಗಿ ಸಿಹಿ ಸುದ್ದಿ ಕೊಡಬೇಕಾ ಎನ್ನುವ ಗೊಂದಲ ಕೂಡ ಇದೆಯಂತೆ. ಏನೇ ಇರಲಿ, ಸದ್ಯದಲ್ಲೇ ಸುದೀಪ್ ಭರ್ಜರಿ ಸುದ್ದಿಯನ್ನೇ ಕೊಡಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎರಡನೇ ಸಲ ‘ಆಸ್ಕರ್’ ಅಂಗಳದಲ್ಲಿ ಕನ್ನಡದ ನಿರ್ದೇಶಕ ಅನೂಪ್ ಭಂಡಾರಿ

    ಎರಡನೇ ಸಲ ‘ಆಸ್ಕರ್’ ಅಂಗಳದಲ್ಲಿ ಕನ್ನಡದ ನಿರ್ದೇಶಕ ಅನೂಪ್ ಭಂಡಾರಿ

    ನ್ನಡದ ಹೆಸರಾಂತ ನಿರ್ದೇಶಕ ಅನೂಪ್ ಭಂಡಾರಿ ಎರಡನೇ ಬಾರಿ ಆಸ್ಕರ್ ಅಂಗಳದಲ್ಲಿ ಇದ್ದಾರೆ. ಎರಡು ಬಾರಿ ಇಂಥದ್ದೊಂದು ಅವಕಾಶ ಪಡೆದ ದಕ್ಷಿಣದ ನಿರ್ದೇಶಕ ಎನ್ನುವ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರ ‘ರಂಗಿತರಂಗ’ ಸಿನಿಮಾ ಕೂಡ ಆಸ್ಕರ್ ಗೆ ಅರ್ಹತೆಯ ಯಾದಿಯಲ್ಲಿತ್ತು. ಇದೀಗ ಸುದೀಪ್ ನಟನೆಯ ವಿಕ್ರಾಂತ್ ರೋಣ ಕೂಡ ಅರ್ಹತೆಯ ಯಾದಿಯಲ್ಲಿ ಸ್ಥಾನ ಪಡೆದುಕೊಂಡಿದೆ.

    ರಂಗಿತರಂಗ ಅನೂಪ್ ಭಂಡಾರಿ ಅವರ ಚೊಚ್ಚಲು ನಿರ್ದೇಶನದ ಸಿನಿಮಾ. ಬಾಕ್ಸ್ ಆಫೀಸಿನಲ್ಲಿ ಹೊಸ ದಾಖಲೆ ಬರೆದಿದ್ದ ಈ ಸಿನಿಮಾ ಆಸ್ಕರ್ ಪ್ರಶಸ್ತಿಯ ಲಿಸ್ಟ್ ನಲ್ಲಿ ಕಾಣಿಸಿಕೊಳ್ಳುವುದರ ಮೂಲಕ ಸಾಕಷ್ಟು ಸದ್ದು ಮಾಡಿತ್ತು. ಈ ಸಿನಿಮಾದಲ್ಲಿ ಬಹುತೇಕ ಹೊಸಬರೇ ಕೆಲಸ ಮಾಡಿದ್ದರೂ, ಜನಪ್ರಿಯತೆಯಲ್ಲಿ ಅದು ಯಾವತ್ತೂ ಹಿಂದೆ ಬೀಳಲಿಲ್ಲ. ಆಸ್ಕರ್ ನಲ್ಲೂ ಸರಿಯಾದ ಫೈಟ್ ಅನ್ನೇ ಅದು ಮಾಡಿತ್ತು. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ `ವಜ್ರಕಾಯ’ ನಟಿ ಶುಭ್ರಾ ಅಯ್ಯಪ್ಪ

    ಪ್ರತಿಷ್ಠಿತ 95ನೇ ಆಸ್ಕರ್ ಅಕಾಡಮಿ ಪ್ರಶಸ್ತಿಯ ಅರ್ಹತೆ ವಿಭಾಗದಲ್ಲಿ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಕೂಡ ಕಾಣಿಸಿಕೊಂಡಿದೆ. ನಟನಾ ವಿಭಾಗದಲ್ಲಿ ಈ ಸಿನಿಮಾ ಆಯ್ಕೆಯಾಗಿದ್ದು, ಕನ್ನಡದ ಎರಡು ಚಿತ್ರಗಳು ಈ ಬಾರಿ ಆಸ್ಕರ್ ಅಂಗಳದಲ್ಲಿವೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ನಿರೂಪ್ ಭಂಡಾರಿ ಸೇರಿದಂತೆ ಹಲವು ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.

    ವಿಕ್ರಾಂತ್ ರೋಣ ಜೊತೆ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದಿದೆ. ಅತ್ಯುತ್ತಮ ಚಿತ್ರ ಹಾಗೂ ಅತ್ಯುತ್ತಮ ನಟ ಎರಡು ವಿಭಾಗದಲ್ಲಿ ಅದು ಅರ್ಹತೆ ಸುತ್ತನ್ನು ಪಾಸು ಮಾಡಿದ್ದು, ಮುಂದಿನ ಹಂತಕ್ಕೆ ಸಿನಿಮಾ ಹೋಗಬೇಕಾದರೆ, ಆಸ್ಕರ್ ಸದಸ್ಯರು ಮತ ಚಲಾಯಿಸುವುದು ಕಡ್ಡಾಯವಾಗಿದೆ. ವಿಶ್ವದಾದ್ಯಂತ ಒಟ್ಟು 301 ಸಿನಿಮಾಗಳು ಅರ್ಹತೆ ಸುತ್ತಿನಲ್ಲಿ ಪಾಸಾಗಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k