Tag: ಅನೂಪ್ ಭಂಡಾರಿ

  • ಗನ್ ಹಿಡಿದು ಕೋಟೆಯ ರಾಜನಾದ ವಿಕ್ರಾಂತ್ ರೋಣ

    ಗನ್ ಹಿಡಿದು ಕೋಟೆಯ ರಾಜನಾದ ವಿಕ್ರಾಂತ್ ರೋಣ

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾದ ಮೊದಲ ಫಸ್ಟ್‌ಲುಕ್ ಪೋಸ್ಟರ್ ರಿಲೀಸ್ ಆಗಿದೆ.

    ಚಿತ್ರತಂಡ ಸಣ್ಣ ಸಣ್ಣ ವಿಡಿಯೋ ರಿಲೀಸ್ ಮಾಡುವ ಮೂಲಕ ಸದ್ದು ಮಾಡುತ್ತಿತ್ತು. ಇದೀಗ ಚಿತ್ರದ ನಾಯಕನ ಫಸ್ಟ್‌ಲುಕ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.

    ನಿರ್ದೇಶಕ ಅನೂಪ್ ಭಂಡಾರಿ ಅವರು ಇಂದು ಸಿನಿಮಾದ ಫಸ್ಟ್‌ಲುಕ್ ರಿಲೀಸ್ ಮಾಡುವ ಬಗ್ಗೆ ಭಾನುವಾರವೇ ಮಾಹಿತಿ ನೀಡಿದ್ದರು. ಅದರಂತೆಯೇ ಇಂದು ಅಭಿಮಾನಿಗಳಿಗೆ ಟ್ವಿಟ್ಟರಿನಲ್ಲಿ ವಿಕ್ರಾಂತ್ ರೋಣನ ದರ್ಶನ ಮಾಡಿಸಿದ್ದಾರೆ. ರಿಲೀಸ್ ಆಗಿರುವ ಪೋಸ್ಟರ್ ಅದ್ಭುತವಾಗಿ ಮೂಡಿ ಬಂದಿದ್ದು, ಸುದೀಪ್ ಖಡಕ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

    ಫ್ಯಾಂಟಮ್ ಕೋಟೆಯ ಬಾಗಿಲಲ್ಲಿ ಪಿಸ್ತೂಲ್ ಹಿಡಿದು ಸುದೀಪ್ ಕುಳಿತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಮೊತ್ತೊಂದು ಕಡೆ ಚಾಟಿ ಇರುವುದನ್ನು ನೋಡಬಹುದು. ಆ ಕೋಟೆಯ ಮೇಲೆ ದಿ ವರ್ಲ್ಡ್ ಆಫ್ ಫ್ಯಾಂಟಮ್‍ಗೆ ಸ್ವಾಗತ ಎಂದು ಬರೆಯಲಾಗಿದೆ. ಇನ್ನೂ ಕೆಳಗೆ ಬಾದ್‍ಷಾ ವಿಕ್ರಾಂತ್ ರೋಣ ಆಗಿ ಕಿಚ್ಚ ಸುದೀಪ್” ಎಂದು ಬರೆಯಲಾಗಿದೆ.

    “ವಿಕ್ರಾಂತ್ ರೋಣನ ಹೆಸರಲ್ಲಿ ಎಷ್ಟು ಪವರ್ ಇದಿಯೋ ಆ ಪಾತ್ರ ಕೂಡ ಅಷ್ಟೇ ಪವರ್ ಫುಲ್ ಆಗಿದೆ. ವಿಕ್ರಾಂತ್ ರೋಣ ಏನು ಮಾಡುತ್ತಾನೆ, ಹೇಗೆ, ಏಕೆ ಮಾಡುತ್ತಾನೆ ಎಂದು ಯಾರಿಗೂ ಅರ್ಥವಾಗುವುದಿಲ್ಲ. ಆದರೆ ಅವನು ಏನೇ ಮಾಡಿದರೂ ಅದಕ್ಕೆ ಒಂದು ಕಾರಣ ಇರುತ್ತದೆ” ಎಂದು ನಿರ್ದೇಶಕ ಅನುಪ್ ಭಂಡಾರಿ ಹೇಳುವ ಮೂಲಕ ಪೋಸ್ಟರ್ ರಿಲೀಸ್ ಮಾಡಿದ್ದಾರೆ.

  • ನಾಳೆ ಸುದೀಪ್ ಅಭಿಮಾನಿಗಳಿಗೆ ಸರ್ಪ್ರೈಸ್ – ವಿಕ್ರಾಂತ್ ರೋಣನ ಫಸ್ಟ್‌ಲುಕ್ ರಿಲೀಸ್

    ನಾಳೆ ಸುದೀಪ್ ಅಭಿಮಾನಿಗಳಿಗೆ ಸರ್ಪ್ರೈಸ್ – ವಿಕ್ರಾಂತ್ ರೋಣನ ಫಸ್ಟ್‌ಲುಕ್ ರಿಲೀಸ್

    ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ‘ಫ್ಯಾಂಟಮ್’ ಸಿನಿಮಾದ ಚಿತ್ರೀಕರಣ ಈಗಾಗಲೇ ಆರಂಭವಾಗಿದ್ದು, ಚಿತ್ರತಂಡ ಸಣ್ಣ ಸಣ್ಣ ವಿಡಿಯೋ ರಿಲೀಸ್ ಮಾಡುವ ಮೂಲಕ ಸದ್ದು ಮಾಡುತ್ತಿದೆ. ಈ ನಡುವೆ ಚಿತ್ರತಂಡ ಅಭಿಮಾನಿಗಳಿಗೆ ಸರ್ಪ್ರೈಸ್ ಕೊಡಲು ಮುಂದಾಗಿದೆ.

    ‘ಫ್ಯಾಂಟಮ್’ ಚಿತ್ರತಂಡ ಸಿನಿಮಾದ ಫಸ್ಟ್‌ಲುಕ್ ರಿಲೀಸ್ ಮಾಡಲು ಮುಂದಾಗಿದೆ. ಸೋಮವಾರ ಅಂದರೆ ನಾಳೆ ಸುದೀಪ್ ಅವರ ಫಸ್ಟ್‌ಲುಕ್ ರಿಲೀಸ್ ಆಗಲಿದೆ. ಈ ಬಗ್ಗೆ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಅವರು ಟ್ವಿಟ್ಟರಿನಲ್ಲಿ ವಿಡಿಯೋವೊಂದನ್ನು ಅಪ್ಲೋಡ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

    “ನಮ್ಮ ಪ್ಯಾಂಟಮ್ ಸಿನಿಮಾದ ಪ್ರತಿಯೊಂದು ಪಾತ್ರವನ್ನು ಪೋಸ್ಟರ್ ಮೂಲಕ ತಿಳಿಸಲು ಮುಂದಾಗಿದ್ದೇವೆ. ಅದೇ ರೀತಿ ಮೊದಲು ಚಿತ್ರದ ನಾಯಕ ವಿಕ್ರಾಂತ್ ರೋಣ ಅವರ ಮೊದಲ ಪೋಸ್ಟರ್ ರಿಲೀಸ್ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ. ಜೊತೆಗೆ ಸೋಮವಾರ ಬೆಳಗ್ಗೆ 10 ಗಂಟೆಗೆ ಸುದೀಪ್ ಅವರ ಫಸ್ಟ್‌ಲುಕ್ ರಿಲೀಸ್ ಆಗಲಿದೆ. ಈ ಮೂಲಕ ‘ಫ್ಯಾಂಟಮ್’ ಸಿನಿಮಾದಲ್ಲಿ ಸುದೀಪ್ ಯಾವ ಲುಕ್‍ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

    ಕೊರೊನಾ ಲಾಕ್‍ಡೌನ್‍ನಿಂದ ಚಿತ್ರರಂಗ ಸ್ತಬ್ಧವಾಗಿತ್ತು. ಆದರೆ ಇತ್ತೀಚೆಗೆ ಆಂಧ್ರಪ್ರದೇಶದಲ್ಲಿ ಸಿನಿಮಾ ಶೂಟಿಂಗ್‍ಗೆ ಅನುಮತಿ ನೀಡಲಾಗಿತ್ತು. ಹೀಗಾಗಿ ಸುದೀಪ್ ನಟನೆಯ ಫ್ಯಾಂಟಮ್ ಚಿತ್ರತಂಡ ಚಿತ್ರೀಕರಣಕ್ಕಾಗಿ ಹೈದರಾಬಾದಿಗೆ ಹೋಗಿದ್ದು, ಅಲ್ಲಿ ಕಾಡಿನ ಅದ್ಧೂರಿ ಸೆಟ್ ಹಾಕಿ ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ.

    ಮೊದಲಿಗೆ ‘ಫ್ಯಾಂಟಮ್’ ಚಿತ್ರತಂಡ ಒಂದು ಚಿಕ್ಕ ವಿಡಿಯೋವನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಕಿಚ್ಚ ಸುದೀಪ್ ಮತ್ತು ಒಂದು ಚಿಕ್ಕ ಮಗು ಮಾತ್ರ ಪ್ರಮುಖವಾಗಿ ಕಾಣಿಸಿಕೊಂಡಿತ್ತು. ಈ ದೃಶ್ಯದಲ್ಲಿನ ಹಿನ್ನೆಲೆ ಸಂಗೀತಕ್ಕೆ ಅಭಿಮಾನಿಗಳು ಫಿದಾ ಆಗಿದ್ದರು. ಮತ್ತೆ ಕಿಚ್ಚ ಸುದೀಪ್ ಅವರು ತಮ್ಮ ಟ್ವಿಟ್ಟರಿನಲ್ಲಿ ಇನ್ನೊಂದು ದೃಶ್ಯವನ್ನು ಹಂಚಿಕೊಂಡಿದ್ದರು. ಅದರಲ್ಲಿ ಬೈಕಿನಲ್ಲಿ ಬರುವ ಕಿಚ್ಚ ನಂತರ ಟಾರ್ಚ್ ಹಿಡಿದು ಏನನ್ನೋ ಹುಡುಕುತ್ತಾ ಕಾಡಿನೊಳಗೆ ಹೋಗುವುದನ್ನು ನಾವು ಕಾಣಬಹುದು. ಈ ದೃಶ್ಯದ ಹಿನ್ನೆಲೆ ಸಂಗೀತ ಕೂಡ ಸಖತ್ ಕ್ಯಾಚಿಯಾಗಿದೆ.

  • ಹೈದರಾಬಾದ್‍ನಲ್ಲಿ ಶೂಟಿಂಗ್ ಆರಂಭಿಸಿದ ‘ಫ್ಯಾಂಟಮ್’ ಚಿತ್ರತಂಡ- ಸೆಟ್‍ನಲ್ಲಿ ಕನ್ನಡಿಗರಿಗೆ ಅವಕಾಶ

    ಹೈದರಾಬಾದ್‍ನಲ್ಲಿ ಶೂಟಿಂಗ್ ಆರಂಭಿಸಿದ ‘ಫ್ಯಾಂಟಮ್’ ಚಿತ್ರತಂಡ- ಸೆಟ್‍ನಲ್ಲಿ ಕನ್ನಡಿಗರಿಗೆ ಅವಕಾಶ

    ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತದೊಂಡಿದ್ದ ಸಿನಿರಂಗದ ಚಿತ್ರೀಕರಣಕ್ಕೆ ಸದ್ಯ ಮರುಚಾಲನೆ ಲಭಿಸುತ್ತಿದೆ. ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ‘ಫ್ಯಾಂಟಮ್’ ಸಿನಿಮಾದ ಚಿತ್ರೀಕರಣ ಹೈದರಾಬಾದ್‍ನಲ್ಲಿ ಆರಂಭವಾಗಿದೆ.

    ಹೈದರಾಬಾದ್‍ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಚಿತ್ರತಂಡ ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ಚಿತ್ರೀಕರಣದ ಕೆಲಸಕ್ಕೆ ಚಾಲನೆ ನೀಡಿದೆ. ಕೊರೊನಾ ಲಾಕ್‍ಡೌನ್ ಮುನ್ನವೇ ಚಿತ್ರತಂಡ ಹೈದರಾಬಾದ್‍ನಲ್ಲಿ ಚಿತ್ರೀಕರಣ ಆರಂಭಿಸಿತ್ತು. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರಬೇಕಿತ್ತು. ಆದರೆ ಕೊರೊನಾ ಲಾಕ್‍ಡೌನ್ ಕಾರಣದಿಂದ ಬ್ರೇಕ್ ಬಿದ್ದಿತ್ತು. ಇದನ್ನು ಓದಿ: ದಟ್ಟಕಾನನದ ನಡುವೆ ಕಿಚ್ಚನ ‘ಫ್ಯಾಂಟಮ್’

    ರಾಜ್ಯದಲ್ಲಿ ಸಿನಿಮಾ ಶೂಟಿಂಗ್‍ಗೆ ಅವಕಾಶ ನೀಡಿಲ್ಲವಾದರೂ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಮಾರ್ಗಸೂಚಿಗಳನ್ನು ಜಾರಿ ಮಾಡಿ ಶೂಟಿಂಗ್‍ಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೂಟಿಂಗ್ ಆರಂಭಿಸಿದೆ. ವಿಶೇಷ ಎಂದರೇ ಚಿತ್ರದ ಶೂಟಿಂಗ್ ವೇಳೆ ಅಗತ್ಯವಿರುವ ಸಿಬ್ಬಂದಿಯನ್ನು ಬೆಂಗಳೂರಿನಿಂದಲೇ ಕರೆದುಕೊಂಡು ಹೋಗುವ ಮೂಲಕ ಕನ್ನಡಿಗರಿಗೆ ಮನ್ನಣೆ ನೀಡಲಾಗಿದೆ.

    ಈ ಕುರಿತು ಚಿತ್ರತಂಡ ಮಾಹಿತಿ ನೀಡಿದ್ದು, ಇಂದು ಕೊರೊನಾ ಬಳಿಕ ಶೂಟಿಂಗ್ ಶುರುವಾಗಿದೆ. ವಿಶೇಷ ಎಂದರೇ ಕನ್ನಡ ಒಕ್ಕೂಟ ಶೂಟಿಂಗ್ ವೇಳೆ ಕನ್ನಡಿಗರನ್ನೇ ಬಳಕೆ ಮಾಡಿಕೊಳ್ಳಲು ಮನವಿ ಮಾಡಿತ್ತು. ಸುದೀಪ್ ಅವರು ಕೂಡ ಶೂಟಿಂಗ್‍ಗೆ ಅಗತ್ಯವಿರುವ ತಂತ್ರಜ್ಞರೆಲ್ಲರನ್ನು ಬೆಂಗಳೂರಿಂದಲೇ ಕರೆದುಕೊಂಡು ಹೋಗುವಂತೆ ಹೇಳಿದ್ದರು. ಅದರಂತೆ 200 ರಿಂದ 250 ಜನರನ್ನು ಹೈದರಾಬಾದ್‍ಗೆ ಕರೆದುಕೊಂಡು ಬಂದಿದ್ದೇವೆ. ಆ ಮೂಲಕ ನಮ್ಮ ಕೆಲಸಗಾರರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದು ಹೇಳಿದೆ.

    ಕೊರೊನಾ ಕಾರಣದಿಂದ ಚಿತ್ರತಂಡ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ತಂತ್ರಜ್ಞರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಚಿತ್ರೀಕರಣದ ಸಮಯದಲ್ಲಿ ಎಲ್ಲರನ್ನು ಪ್ರತಿದಿನ ಪರೀಕ್ಷೆ ನಡೆಸಿಯೇ ಒಳಬಿಡಲಾಗುತ್ತಿದೆ. ಅಲ್ಲದೇ ಒಬ್ಬ ವೈದ್ಯರು ಸೇರಿದಂತೆ ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಚಿತ್ರತಂಡ ಮಾಡಿಕೊಂಡಿದೆ.

    ಫ್ಯಾಂಟಮ್’ ಕಿಚ್ಚ ಸುದೀಪ್ ಹಾಗೂ ರಂಗಿತರಂಗ ಸಾರಥಿ ಅನೂಪ್ ಭಂಡಾರಿ ಕಾಂಬಿನೇಷನ್‍ನಲ್ಲಿ ತಯಾರಾಗ್ತಿರೋ ಮೊದಲ ಸಿನಿಮಾ. ಸಿನಿಮಾ ಟೈಟಲ್ ಹಾಗೂ ಕಿಚ್ಚನ ವಿಕ್ರಾಂತ್ ರೋಣಾ ಪಾತ್ರ ಈಗಾಗಲೇ ಗಾಂಧಿನಗರದಲ್ಲಿ ಸುನಾಮಿ ಎಬ್ಬಿಸಿರುವ ಚಿತ್ರ. ಪೋಸ್ಟರ್ ನಲ್ಲಿ ಕಿಚ್ಚನ ಅರ್ಧ ಫೇಸ್ ನೋಡಿ, ಮೊನಚು ಮೀಸೆ ಮೋಡಿಗೆ ಕಳೆದುಹೋಗಿರುವ ಫ್ಯಾನ್ಸ್, `ವಿಕ್ರಾಂತ್ ರೋಣ’ನ ಖಡಕ್ ಲುಕ್‍ನ ನೋಡೋದಕ್ಕೆ ಕಾಯುತ್ತಿದ್ದಾರೆ.

  • ದಟ್ಟಕಾನನದ ನಡುವೆ ಕಿಚ್ಚನ ‘ಫ್ಯಾಂಟಮ್’

    ದಟ್ಟಕಾನನದ ನಡುವೆ ಕಿಚ್ಚನ ‘ಫ್ಯಾಂಟಮ್’

    ಬೆಂಗಳೂರು: ದಟ್ಟ ಕಾನನನದ ನಡುವೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಫ್ಯಾಂಟನ್ ನಿರ್ಮಾಣವಾಗುತ್ತಿದೆ. ಈ ದಟ್ಟ ಕಾನನಕ್ಕಾಗಿ ಫ್ಯಾಂಟಮ್ ಅಖಾಡದಲ್ಲಿ ರಾಜಮಂಡ್ರಿಯಿಂದ ಗಿಡ-ಮರಗಳನ್ನು ತುಂಬಿಕೊಂಡ 22 ಲಾರಿಗಳು ಆಗಮಿಸಿವೆ.

    ಫ್ಯಾಂಟಮ್ ನಿರ್ಮಾಪಕರು ಸುಮಾರು 30 ರಿಂದ 40 ಲಕ್ಷ ಬಂಡವಾಳ ಹಾಕಿ ಈ ಗಿಡಮರಗಳನ್ನು ಖರೀದಿಸಿದ್ದಾರಂತೆ. ಲಾಕ್‍ಡೌನ್ ಮುನ್ನ ಈ ಗಿಡಗಳನ್ನು ತರಿಸಲಾಗಿತ್ತು. ಶೇಕಡ 70ರಷ್ಟು ಸೆಟ್ ವರ್ಕ್ ಕೂಡ ನಡೆದಿತ್ತು. ಈ ನಡುವೆ ಲಾಕ್‍ಡೌನ್ ಆಗಿದ್ರಿಂದ ಶೂಟಿಂಗ್ ಕ್ಯಾನ್ಸಲ್ ಆಯ್ತು. ಹಾಗಾಗಿ ಸೆಟ್ ನಲ್ಲಿ ಗಿಡಗಳಿಗೆ ಬಿಸಿಲು ತಾಗದಂತೆ ಚಿತ್ರತಂಡ ನೆರಳಿನ ವ್ಯವಸ್ಥೆಯನ್ನು ಸಹ ಮಾಡಿದೆ. ಇದೀಗ ಚಿತ್ರೀಕರಣಕ್ಕೆ ಆಂಧ್ರ-ತೆಲಂಗಾಣ ಸರ್ಕಾರ ಅನುಮತಿ ನೀಡಿದ್ದು, ‘ಫ್ಯಾಂಟಮ್’ ಅಂಗಳದಲ್ಲಿ ಸೆಟ್ ವರ್ಕ್ ಕೆಲಸ ಭರದಿಂದ ಸಾಗುತ್ತಿದೆ.

    ಹೈದ್ರಾಬಾದ್‍ನ ಅನ್ನಪೂರ್ಣೇಶ್ವರಿ ಸ್ಟುಡಿಯೋದಲ್ಲಿ ಸೆಟ್‍ವರ್ಕ್ ಕೆಲಸದಲ್ಲಿ ನಿರತವಾಗಿದೆ. ಸೆಟ್‍ನಲ್ಲಿ ವೈದ್ಯಕೀಯ ತಂಡವನ್ನು ನಿಯೋಜನೆ ಮಾಡಲಾಗಿದ್ದು, ಸಿನಿಕಾರ್ಮಿಕರ ಬಗ್ಗೆ ಕಾಳಜಿ ವಹಿಸಲಾಗಿದೆ. ಸರ್ಕಾರದ ನೀತಿ-ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸೋದರ ಜೊತೆಗೆ ಸೆಟ್‍ನಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ಚಿತ್ರತಂಡ ನೇಮಕ ಮಾಡಿದೆ. ಸೆಟ್‍ಗೆ ಸಿನಿಕಾರ್ಮಿಕರನ್ನು ಬಿಡುವ ಮುನ್ನವೇ ಪ್ರತಿದಿನ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಾಗುತ್ತಿದೆ.

    ಫ್ಯಾಂಟಮ್’ ಕಿಚ್ಚ ಸುದೀಪ್ ಹಾಗೂ ರಂಗಿತರಂಗ ಸಾರಥಿ ಅನೂಪ್ ಭಂಡಾರಿ ಕಾಂಬಿನೇಷನ್‍ನಲ್ಲಿ ತಯಾರಾಗ್ತಿರೋ ಮೊದಲ ಸಿನಿಮಾ. ಸಿನಿಮಾ ಟೈಟಲ್ ಹಾಗೂ ಕಿಚ್ಚನ ವಿಕ್ರಾಂತ್ ರೋಣಾ ಪಾತ್ರ ಈಗಾಗಲೇ ಗಾಂಧಿನಗರದಲ್ಲಿ ಸುನಾಮಿ ಎಬ್ಬಿಸಿರುವ ಚಿತ್ರ. ಪೋಸ್ಟರ್‍ನಲ್ಲಿ ಕಿಚ್ಚನ ಅರ್ಧ ಫೇಸ್ ನೋಡಿ, ಮೊನಚು ಮೀಸೆ ಮೋಡಿಗೆ ಕಳೆದುಹೋಗಿರುವ ಫ್ಯಾನ್ಸ್, ‘ವಿಕ್ರಾಂತ್ ರೋಣ’ನ ಖಡಕ್ ಲುಕ್‍ನ ನೋಡೋದಕ್ಕೆ ಕಾಯುತ್ತಿದ್ದಾರೆ.

    ಚಿತ್ರಕ್ಕಾಗಿ ನಿರ್ಮಾಪಕರಾದ ಜಾಕ್‍ಮಂಜು ಮತ್ತು ಶಾಲಿನಿ ಮಂಜುನಾಥ್ ಕೋಟಿಕೋಟಿ ಸುರಿಯೋದಕ್ಕೆ ರೆಡಿಯಾಗಿದ್ದಾರೆ. ರಾಜಮಂಡ್ರಿಯಿಂದ ಗಿಡಗಳನ್ನು ಇಂಪೋರ್ಟ್ ಮಾಡಿಕೊಂಡು ಹೈದ್ರಬಾದ್‍ನಲ್ಲಿ ಫಾರೆಸ್ಟ್ ಸೆಟ್ ನಿರ್ಮಿಸಲಾಗ್ತಿದೆ. ಇದಕ್ಕಾಗಿ ಕೋಟಿಗಟ್ಟಲೇ ಬಂಡವಾಳ ಸುರಿಯಲಾಗಿದ್ದು, ಕಣ್ಣಿಗೆ ಹಬ್ಬ ನೀಡುವ ಕಾಡಿನ ದೃಶ್ಯಾವಳಿಗಳು ಕ್ಯಾಮೆರಾದಲ್ಲಿ ಸೆರೆಯಾಗಲಿವೆ. ಫ್ಯಾಂಟಮ್ ಸಿನಿಮಾ ಮೂಲಕ ಬೆಳ್ಳಿತೆರೆ ಬೆಳಗಲಿವೆ.

  • ವಿಕ್ರಾಂತ್ ರೋಣನ ಅವತಾರ ತಾಳಿದ ಕಿಚ್ಚ

    ವಿಕ್ರಾಂತ್ ರೋಣನ ಅವತಾರ ತಾಳಿದ ಕಿಚ್ಚ

    ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆ ಫ್ಯಾಂಟಮ್ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಅಭಿಮಾನಿಗಳಲ್ಲಿ ಒಂದು ರೀತಿಯ ಕ್ರೇಜ್ ಕ್ರಿಯೇಟ್ ಮಾಡಿದೆ. ಇಷ್ಟು ದಿನ ನಾಯಕಿಯರ ಆಯ್ಕೆ ಕುರಿತು ಫ್ಯಾಂಟಮ್ ಸುದ್ದಿಯಾಗುತ್ತಿತ್ತು. ಇದೀಗ ಕಿಚ್ಚ ಸುದೀಪ್ ಚಿತ್ರದಲ್ಲಿ ತಮ್ಮ ಪಾತ್ರದ ಹೆಸರನ್ನು ರಿವೀಲ್ ಮಾಡಿದ್ದು, ಅಷ್ಟೇ ಖಡಕ್ ಹಾಗೂ ಖದರ್ ಆಗಿದೆ.

    ಒಂದು ಪೋಸ್ಟರ್‍ನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಪಾತ್ರದ ರೋಚಕತೆಯ ಸುಳಿವನ್ನು ಸುದೀಪ್ ನೀಡಿದ್ದಾರೆ. ಈ ಸಿನಿಮಾದಲ್ಲಿ ಕಿಚ್ಚ ವಿಕ್ರಾಂತ್ ರೋಣನಾಗಿ ಬದಲಾಗುತ್ತಿದ್ದಾರೆ. ಮೀಸೆ ತಿರುವುವ ಪೋಸ್ಟರ್‍ನಲ್ಲಿ ಈ ಹೆಸರನ್ನು ಬರೆಯಲಾಗಿದ್ದು, ಕಿಚ್ಚನ ಖಡಕ್ ಲುಕ್ ನೀಡಿದ್ದಾರೆ.

    ಈ ಪೋಸ್ಟರ್‍ನಲ್ಲಿ ಕಿಚ್ಚ ಖಡಕ್ ಆಗಿ ಮೀಸೆ ತಿರುವಿದ್ದು, ಈ ಮೂಲಕ ಕಿಚ್ಚ ಸುದೀಪ್ ಫ್ಯಾಂಟಮ್‍ನಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎಂಬುದರ ಝಲಕ್ ತೋರಿಸಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ಈ ಫೋಟೋ ನೋಡಿದ ಅಭಿಮಾನಿಗಳು, ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಲೈಕ್ ಕಮೆಂಟ್ ಮಾಡುವ ಮೂಲಕ ಪಾತ್ರದ ಕುರಿತ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

    ಚಿತ್ರ ತಂಡ ಈಗಾಗಲೇ ಹೈದರಾಬಾದ್‍ನಲ್ಲಿ ಚಿತ್ರೀಕರಣ ಆರಂಭಿಸಿದ್ದು, ಈ ಚಿತ್ರದಲ್ಲಿ ಸುದೀಪ್ ಖಡಕ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ರಂಗಿತರಂಗ ನಿರ್ದೇಶಕ ಅನೂಪ್ ಭಂಡಾರಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಚಿತ್ರದ ಮತ್ತೊಂದು ಪಾತ್ರದಲ್ಲಿ ನಿರೂಪ್ ಭಂಡಾರಿ ಅಭಿನಯಿಸಿದ್ದಾರೆ ಎನ್ನಲಾಗಿದೆ.

    ಶಾಲಿನಿ ಮಂಜುನಾಥ್ ಮತ್ತು ಜಾಕ್ ಮಂಜು ಬಂಡವಾಳ ಹೂಡಿದ್ದಾರೆ. ಮೊದಲ ಹಂತದ ಚಿತ್ರೀಕರಣ ಹೈದರಾಬಾದ್‍ನಲ್ಲಿ ನಡೆಯಲಿದ್ದು, 2ನೇ ಹಂತದ ಚಿತ್ರೀಕರಣವನ್ನು ಸಿಲಿಕಾನ್ ಸಿಟಿಯಲ್ಲಿ ನಡೆಸಲು ನಿರ್ದೇಶಕರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಚಿತ್ರದ ಕುರಿತು ಇರುವ ಕುತೂಹಲದಷ್ಟೇ, ನಾಯಕಿಯಾರು ಎಂಬುದರ ಕುರಿತು ಸಹ ಇದೆ. ಟಾಲಿವುಡ್ ಬೆಡಗಿ ಸಮಂತಾ ಅಕ್ಕಿನೇನಿ ಹೆಸರು ಮೊದಲ ಸ್ಥಾನದಲ್ಲಿದೆ. ಆದರೆ ಇನ್ನೂ ಖಚಿತವಾಗಿಲ್ಲ.

    ರಾಜಮೌಳಿ ನಿರ್ದೇಶನದ ಈಗ ಸಿನಿಮಾದಲ್ಲಿ ಕ್ಯೂಟ್ ಬೆಡಗಿ ಸಮಂತಾ ಕಿಚ್ಚನ ಜೊತೆಯಾಗಿದ್ದರು. ಇದೀಗ ಮತ್ತೊಮ್ಮೆ ಅಭಿನಯ ಚಕ್ರವರ್ತಿಗೆ ಜೋಡಿಯಾಗಲಿದ್ದಾರೆ ಎಂಬ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿವೆ. ಅಲ್ಲದೆ ಕನ್ನಡತಿ ಶ್ರದ್ಧಾ ಶ್ರೀನಾಥ್ ಅವರ ಹೆಸರು ಸಹ ಕೇಳಿಬರುತ್ತಿದೆ. ಯಾರು ಅಂತಿಮವಾಗಲಿದ್ದಾರೆ ಎಂಬುದು ಕುತೂಹಲದ ಪ್ರಶ್ನೆಯಾಗಿದೆ.

  • ಕಿಚ್ಚ ದಬಾಂಗ್‍ಗೆ ಹೋದರೆ ಬಿಲ್ಲಾರಂಗನ ಕತೆಯೇನು?

    ಕಿಚ್ಚ ದಬಾಂಗ್‍ಗೆ ಹೋದರೆ ಬಿಲ್ಲಾರಂಗನ ಕತೆಯೇನು?

    ಪೈಲ್ವಾನ್ ಸಿನಿಮಾ ಮುಗಿಸಿ ಕೋಟಿಗೊಬ್ಬ-3 ಸಿನಿಮಾದ ಶೂಟಿಂಗ್‍ನಲ್ಲಿ ತೊಡಗಿಕೊಂಡಿರುವ ಸುದೀಪ್ ಮುಂದಿನ ಸಿನಿಮಾ ಯಾವುದು? ರಂಗಿತರಂಗ, ರಾಜರಥ ಸಿನಿಮಾದ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದಲ್ಲಿ ‘ಬಿಲ್ಲಾರಂಗ’ದಲ್ಲಿ ನಟಿಸುತ್ತಾರೆ ಅನ್ನೋದು ಈಗಾಗಲೇ ಹೊರಬಿದ್ದಿರುವ ವಿಚಾರ. ಇದಕ್ಕೂ ಮುಂದೆ ಸರಿಸುಮಾರು ಎಂಭತ್ತು ದಿನಗಳ ಡೇಟ್ಸ್ ಅನ್ನು ದಬಾಂಗ್-3 ಗಾಗಿ ಸುದೀಪ್ ನೀಡಿದ್ದಾರೆ. ಸಲ್ಮಾನ್ ಖಾನ್ ನಟನೆಯ ಈ ಸಿನಿಮಾವನ್ನು ಪ್ರಭುದೇವಾ ನಿರ್ದೇಶಿಸುತ್ತಿದ್ದು, ಇದರಲ್ಲಿ ಸುದೀಪ್ ಅವರಿಗೆ ಹೀರೋಗೆ ಸರಿಸಮನಾಗಿರುವ ವಿಲನ್ ಪಾತ್ರ ಎಂದು ಹೇಳಲಾಗುತ್ತಿದೆ.

    ಕನ್ನಡದಲ್ಲಿ ಸೂಪರ್ ಸ್ಟಾರ್‍ಗಳಾಗಿರುವ ಸುದೀಪ್, ಉಪೇಂದ್ರರಂಥಾ ನಟರು ಪರಭಾಷೆಗಳಲ್ಲಿ ವಿಲನ್ನುಗಳಾಗಿ ಹೆಸರು ಮಾಡುತ್ತಿರೋದು ವಿಚಿತ್ರವಾದರೂ ವಿಶೇಷವಾಗಿದೆ. ಅಂದಹಾಗೆ ಸುದೀಪ್ ಹಾಲಿವುಡ್ ಸಿನಿಮಾವೊಂದರಲ್ಲಿ ನಟಿಸುವುದಾಗಿ ಸುದ್ದಿಯಾಗಿತ್ತಲ್ಲಾ? ಅದು ಖುದ್ದು ಸುದೀಪ್ ಅವರ ಕಾರಣಕ್ಕೇ ಒಮ್ಮೆ ಮುಂದೂಡಲಾಗಿದೆಯಂತೆ.

    ಈಗ ದಬಾಂಗ್-3ಗಾಗಿ ಎಂಭತ್ತು ದಿನ ಡೇಟ್ಸ್ ಕೊಟ್ಟಿರುವ ಸುದೀಪ್ ಹಾಲಿವುಡ್ ಸಿನಿಮಾದಲ್ಲಿ ನಟಿಸುತ್ತಾರಾ ಇಲ್ಲವಾ ಅನ್ನೋದು ಇದೇ ಏಪ್ರಿಲ್‍ನಲ್ಲಿ ಗೊತ್ತಾಗಲಿದೆಯಂತೆ. ಒಂದು ವೇಳೆ ಹಾಲಿವುಡ್ ಸಿನಿಮಾದಲ್ಲಿ ನಟಿಸುವುದು ಪಕ್ಕಾ ಆದರೆ ಕನ್ನಡದ ಬಿಲ್ಲಾರಂಗ ಶುರುವಾಗೋದು ಲೇಟು. ಅಲ್ಲಿಗೆ 2019ರಲ್ಲಿ ಪೈಲ್ವಾನ್ ಮತ್ತು ಕೋಟಿಗೊಬ್ಬ-3 ರಿಲೀಸಾದರೆ, 2020ರಲ್ಲಿ ಸುದೀಪ್ ನಟನೆಯ ಯಾವ ಕನ್ನಡ ಸಿನಿಮಾಗಳೂ ಬಿಡುಗಡೆಯಾಗೋದು ಡೌಟು!

  • ಬಿಲ್ಲ ರಂಗ ಭಾಷ: ಮೂರು ಪಾತ್ರದಲ್ಲಿ ನಟಿಸ್ತಾರಾ ಕಿಚ್ಚ?

    ಬಿಲ್ಲ ರಂಗ ಭಾಷ: ಮೂರು ಪಾತ್ರದಲ್ಲಿ ನಟಿಸ್ತಾರಾ ಕಿಚ್ಚ?

    ಬೆಂಗಳೂರು: ಅನೂಪ್ ಭಂಡಾರಿ ನಿರ್ದೇಶನದಲ್ಲಿ ಕಿಚ್ಚಾ ಸುದೀಪ್ ನಟಿಸ್ತಿರೋ ಚಿತ್ರ ಬಿಲ್ಲ ರಂಗ ಭಾಷ. ಕಳೆದ ವಾರ ತಾನೇ ಇದರ ಟೈಟಲ್ ಲಾಂಚ್ ಆಗಿದೆ. ಈ ಟೈಟಲ್ ನೋಡಿಯೇ ಕಿಚ್ಚನ ಅಭಿಮಾನಿಗಳು ಖುಷಿಗೊಂಡಿದ್ದಾರೆ. ಅದಾಗಲೇ ಗೆಲುವು ಗ್ಯಾರೆಂಟಿ ಎಂಬಂಥಾ ಭವಿಷ್ಯವೂ ಕೇಳಿ ಬರುತ್ತಿದೆ.

    ಆದರೆ ಟೈಟಲ್ ಒಂದನ್ನು ಹೊರತುಪಡಿಸಿ ಮತ್ಯಾವ ವಿಚಾರವೂ ಈ ಚಿತ್ರದ ಬಗ್ಗೆ ಹೊರಬಿದ್ದಿಲ್ಲ. ಹೀಗಿರೋದರಿಂದಲೇ ಕೆಲ ಗೊಂದಲಗಳೂ ಕಿಚ್ಚನ ಅಭಿಮಾನಿ ಬಳಗವನ್ನು ಕಾಡುತ್ತಿದೆ. ಈ ಟೈಟಲ್ಲಿನಲ್ಲಿ ಮೂರು ಹೆಸರುಗಳಿವೆಯಲ್ಲಾ? ಕಿಚ್ಚ ಇದರಲ್ಲಿ ಮೂರು ಪಾತ್ರಗಳಿಗೆ ಜೀವ ತುಂಬಲಿದ್ದಾರಾ ಎಂಬ ಪ್ರಶ್ನೆಯೂ ಎಲ್ಲರಲ್ಲಿದೆ.

    ಈ ವಿಚಾರವನ್ನ ನಿಖರವಾಗಿ ಅನೂಪ್ ಭಂಡಾರಿಯವರಾಗಲಿ, ಸುದೀಪ್ ಅವರಾಗಲಿ ಬಹಿರಂಗ ಪಡಿಸಿಲ್ಲ. ಆದರೆ ಅನೂಪ್ ಭಂಡಾರಿ ಈ ಚಿತ್ರದ ಮೂಲಕ ಮತ್ತೆ ರಂಗಿತರಂಗವನ್ನೇ ಮೀರಿಸುವಂಥಾ ಯಶಸ್ಸಿನ ತರಂಗವೆಬ್ಬಿಸಲು ರೆಡಿಯಾಗಿರೋದಂತೂ ನಿಜ. ಅಷ್ಟಕ್ಕೂ ಈ ಕಥೆಯನ್ನು ತುಂಬಾ ಇಷ್ಟಪಟ್ಟೇ ಸುದೀಪ್ ನಟಿಸಲು ಒಪ್ಪಿಕೊಂಡಿದ್ದಾರೆ. ಅವರು ಮೆಚ್ಚಿಕೊಂಡಿದ್ದಾರೆಂದರೆ ಕಮಾಲ್ ಮಾಡುವಂಥಾ ಕಂಟೆಂಟ್ ಇದೆಯೆಂದೇ ಅರ್ಥ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿನಿಮಾರಂಗದವರಿಗೆ ಕಿಚ್ಚನಿಂದ ಹೊಸ ಸವಾಲ್

    ಸಿನಿಮಾರಂಗದವರಿಗೆ ಕಿಚ್ಚನಿಂದ ಹೊಸ ಸವಾಲ್

    ಬೆಂಗಳೂರು: ಇತ್ತೀಚೆಗೆ ನಟ ಸುದೀಪ್ ಫಿಟ್ ನೆಸ್ ಚಾಲೆಂಜ್ ಸ್ವೀಕರಿಸಿದ್ದು, ವಿಡಿಯೋ ಅಪ್ಲೋಡ್ ಮಾಡಿದ್ದರು. ಈಗ ಸುದೀಪ್ ಅವರೇ ಹೊಸದೊಂದು ಚಾಲೆಂಜ್ ಹಾಕಿದ್ದಾರೆ.

    ಕಿಚ್ಚ ಸುದೀಪ್ ಭಾರತ ತಂಡದ ಕ್ರಿಕೆಟರ್ ವಿನಯ್ ಕುಮಾರ್ ಅವರ ಚಾಲೆಂಜ್ ಸ್ವೀಕರಿಸಿದ್ದರು. ವಿನಯ್ ಕುಮಾರ್ ಚಾಲೆಂಜ್ ಸ್ವೀಕರಿಸಿದ ನಂತರ ಕಿಚ್ಚ ಬಾಲಿವುಡ್ ನಟ ರಿತೇಶ್ ದೇಶಮುಖ್, ಸೋಹೆಲ್ ಖಾನ್, ತಮ್ಮ ಪತ್ನಿ ಪ್ರಿಯಾ ಸುದೀಪ್, ಯಶ್ ಹಾಗೂ ಶಿವರಾಜ್‍ಕುಮಾರ್ ಅವರಿಗೆ ಫಿಟ್ನೆಸ್ ಚಾಲೆಂಜ್ ನೀಡಿದ್ದರು. ಈಗ ಸುದೀಪ್ ಕನ್ನಡ ಚಿತ್ರರಂಗದವರಿಗೆ ಹೊಸ ಸವಾಲು ಹಾಕಿದ್ದಾರೆ.

    ಸುದೀಪ್ `ಬ್ರಿಂಗ್ ಔಟ್ ದಿ ಪೈಲ್ವಾನ್ ಇನ್ ಯು’ ಎನ್ನುವ ಸವಾಲು ಹಾಕಿದ್ದಾರೆ. `ಬ್ರಿಂಗ್ ಔಟ್ ದಿ ಪೈಲ್ವಾನ್ ಇನ್ ಯು’ ಚಾಲೆಂಜ್ ಎಂದರೆ ಇಂದಿನ ತಮ್ಮ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಬೇಕು. ನಂತರ ಪ್ರತಿದಿನ ವರ್ಕ್ ಔಟ್ ಮಾಡಿ ಒಂದು ತಿಂಗಳ ನಂತರ ಅವರು ಮತ್ತೆ ತಮ್ಮ ಫೋಟೋವನ್ನು ಅಪ್ಲೋಡ್ ಮಾಡಬೇಕು. ಆಗ ಎರಡು ಫೋಟೋಗಳ ಮೂಲಕ ಅದರಲ್ಲಿ ಏನೆಲ್ಲಾ ಬದಲಾವಣೆಯಾಗಿರುತ್ತದೆ ಎಂಬುದನ್ನು ತೋರಿಸಬೇಕು.

    ಸುದೀಪ್ ಈ ಸವಾಲನ್ನು ಬರೆದು ನಿರ್ದೇಶಕ ಪವನ್ ಒಡೆಯರ್, ನಿರ್ಮಾಪಕ ಕಾರ್ತಿಕ್, ಅನೂಪ್ ಭಂಡಾರಿ ಮತ್ತು ನಟ ರಾಜೀವ್ ಅವರಿಗೆ ಟ್ವೀಟ್ ಮಾಡಿದ್ದಾರೆ. ಸುದೀಪ್ ಹಾಕಿದ್ದ ಸವಾಲನ್ನು ಪವನ್ ಒಡೆಯರ್ ಸ್ವೀಕರಿಸಿ ಮರು ಟ್ವೀಟ್ ಮಾಡಿದ್ದಾರೆ. “ಸುದೀಪ್ ಸರ್ ನಾನು ನಿಮ್ಮ ಸವಾಲನ್ನು ಸ್ವೀಕರಿಸುತ್ತಿದ್ದೇನೆ. ಈಗ ನನ್ನ ಇಂದಿನ ಫೋಟೋ ಅಪ್ಲೋಡ್ ಮಾಡಿದ್ದೇನೆ. ನಂತರ ಒಂದು ತಿಂಗಳಾದ ಮೇಲೆ ಬದಲಾವಣೆಯ ಜೊತೆ ಫೋಟೋ ಹಾಕುತ್ತೇನೆ” ಎಂದು ಬರೆದು ರೀ ಟ್ವೀಟ್ ಮಾಡಿದ್ದಾರೆ.

    ಸುದೀಪ್ ಹಾಕಿದ್ದ ಸವಾಲನ್ನು `ಹೆಬ್ಬುಲಿ’ ಮತ್ತು `ಪೈಲ್ವಾನ್’ ಸಿನಿಮಾ ನಿರ್ದೇಶಕರಾದ ಕೃಷ್ಣ ಕೂಡ ಸ್ವೀಕರಿಸಿದ್ದಾರೆ. ಜೊತೆಗೆ ನಿರ್ಮಾಪಕ ಕಾರ್ತಿಕ್ ಕೂಡ ಚಾಲೆಂಜ್ ಸ್ವೀಕರಿಸಿದ್ದಾರೆ. ಕೃಷ್ಣ ಅವರು ಸವಾಲನ್ನು ಸ್ವೀಕರಿಸಿದ ನಂತರ ಸುದೀಪ್ ತಮ್ಮ ಶೂಟಿಂಗ್ ಮುಗಿಯುವಷ್ಟರಲ್ಲಿ ಐದು ಕೆಜಿ ತೂಕ ಕಡಿಮೆ ಮಾಡಿಕೊಳ್ಳಲು ತಿಳಿಸಿದ್ದಾರೆ.

     

  • ರಾಜರಥ ಸಿನಿಮಾ ವಿವಾದದ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ ರ‍್ಯಾಪಿಡ್ ರಶ್ಮಿ

    ರಾಜರಥ ಸಿನಿಮಾ ವಿವಾದದ ಕುರಿತಾಗಿ ಅಚ್ಚರಿಯ ಹೇಳಿಕೆ ನೀಡಿದ ರ‍್ಯಾಪಿಡ್ ರಶ್ಮಿ

    ಬೆಂಗಳೂರು: ಇತ್ತೀಚೆಗೆ ರಾಜರಥ ಸಿನಿಮಾದ ವಿವಾದವೊಂದು ಅಂತ್ಯವಾಗಿದೆ. ವಿವಾದಕ್ಕೆ ಸಂಬಂಧಿಸಿದಂತೆ ರಾಜರಥ ಸಿನಿಮಾ ನಿರ್ದೇಶಕ ನಿರೂಪ್ ಭಂಡಾರಿ ಮತ್ತು ನಟ ಅನೂಪ್ ಭಂಡಾರಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ಜನತೆಯಲ್ಲಿ ಕ್ಷಮೆ ಕೇಳಿದ್ದಾರೆ.

    ರ‍್ಯಾಪಿಡ್ ರಶ್ಮಿ ನಡೆಸಿದ ಸಂದರ್ಶನದಲ್ಲಿ ನಿರೂಪ್ ಭಂಡಾರಿ, ತಮ್ಮ `ರಾಜರಥ’ ಸಿನಿಮಾ ನೋಡದೇ ಇರುವರು ಕಚಡಾ ನನ್ಮಕ್ಕಳು ಅಂತಾ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ರು. ಇದರ ಜೊತೆಗೆ ಅವಂತಿಕಾ ಶೆಟ್ಟಿ ಮತ್ತು ನಿರೂಪ್ ಭಂಡಾರಿ ಸಹ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಈಗ ಕಾರ್ಯಕ್ರಮ ನಿರೂಪಕಿ ರ್ಯಾಪಿಡ್ ರಶ್ಮಿ ರಾಜರಥ ಸಿನಿಮಾದ ಬಗ್ಗೆ ತಮ್ಮ ಫೇಸ್‍ಬುಕ್ ಪೇಜ್ ನಲ್ಲಿ ಪೂರ್ಣ ವಿಡಿಯೋವನ್ನು ಅಪ್ಲೋಡ್ ಮಾಡಿಕೊಂಡು ಸ್ಪಷ್ಟನೆ ನೀಡಿದ್ದಾರೆ.

    ರ‍್ಯಾಪಿಡ್ ರಶ್ಮಿ ಹೇಳಿದ್ದು ಹೀಗೆ:
    ಎಲ್ಲರಿಗು ನಮಸ್ಕಾರ – ರಾಜರಥ ವಿವಾದದ ಬಗ್ಗೆ ನನ್ನ ಉತ್ತರ ವನ್ನ ಎದುರು ನೋಡ್ತಿರೋರಿಗೆ ನನ್ನ ಆಲೋಚನೆಗಳು ಹೀಗೆ… ಈ ಸಮಯದಲ್ಲಿ ಕೆಲವರು ಏನು ಹೇಳಿದ್ರು ಹೇಳದಿದ್ರೂ ತಪ್ಪನ್ನೇ ಹುಡುಕದೆ natural ಆಗಿದೆ. ನೀವು ಒಬ್ಬ ತಪ್ಪು ಒಪ್ಪುಗಳನ್ನ ಸಮವಾಗಿ ಪರಿಶೀಲಿಸುವ ಪ್ರೇಕ್ಷಕ/ಪ್ರೇಕ್ಷಕಿ ಯಾಗಿ ಓದುವಿರಿ ಅಂತ ಭರವಸೆ ಇದೆ.

    ರ‍್ಯಾಪಿಡ್ ರಶ್ಮಿ ಆರ್‍ಜೆ ಆಗಿ, ಈಗ ನಿರೂಪಕಿ, ಗಾಯಕಿ ಮತ್ತು ನಟಿ ಹೀಗೆ ಇಷ್ಟು ವರುಷ ಪ್ರೀತಿ ಕೊಟ್ಟು ನನ್ನ ಬೆಳೆಸಿದ್ದೀರಾ 11 ವರುಷದ ಈ ಕೆರಿಯರ್ ನಲ್ಲಿ ನನ್ನ ಮಾತಿನ ದಾಟಿ, ಹಾಸ್ಯ ಮನೋಭಾವ, ತರಲೆ ಮಾತು, ಬೋಲ್ಡ್ ಆಗಿ ಮಾತಾಡಿದಾಗ ಬೆನ್ನು ತಟ್ಟಿದ್ದೀರಾ.. ಕೆಲವರು ಏನು ಹಿಂಗೇ ಮಾತಾಡ್ತಾರೆ ಅಂತ ಕಣ್ಣು ಬಾಯಿ ಬಿಟ್ಟಿದ್ದೀರಾ.. ಒಬ್ಬರ ಶೈಲಿ ಇಷ್ಟ ಪಡೋದು, ಪಡದೆ ಇರೋದು ಅದಕ್ಕೆ ನೀವು ಸ್ವತಂತ್ರರು. ಪ್ರೇಕ್ಷಕರೇ ಯಾವತ್ತೂ ಬೆಳೆಸೋದು, ಇನ್ನು ಯಾವುದೋ ವಿವಾದ ಆದಾಗ ತಪ್ಪಿದ್ದರೆ ಬೀಳಿಸಿ ಎಚ್ಚರಿಸೋದು. ಇದನ್ನೂ ಓದಿ: ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ಈಗ ರಾಜರಥ ಸಂದರ್ಶನ ನಡೆದ ಘಟನೆ ಎಲ್ಲ ತಿರುವನ್ನು ತೆಗೆದುಕೊಂಡು ಕೆಲವರು ನನ್ನ ಕಡೆ ತಿರುಗಿ ಪ್ರಶ್ನೆ ಕೇಳಿ, ಎಡುವಿದ್ದಿಯ, ಪ್ರಚೋದಿಸಿದ್ದೀಯಾ ತಿದ್ಕೋ ಅಂತ ಕೆಲವು ಕಮೆಂಟ್ ಬರೆದಿದ್ದಾರೆ. ಎಲ್ಲವನ್ನು ಗೌರವಿಸಿ ಕೂಲಂಕುಷವಾಗಿ ಎಲ್ಲ ಆಯಾಮ ದಲ್ಲೂ ನೋಡಿ ತಿದ್ದುಕೊಂಡು ಮುಂದೆ ನಡೀತಾ ನಡೆದ ವಿಚಾರದ ಬಗ್ಗೆ ನನಗಿರುವ ಕೆಲವು ವಿಚಾರಗಳು/ ಪ್ರಶ್ನೆ ಹೀಗಿದೆ.

    ನಿನ್ನೆ ಪೂರಾ ಹರಿದು ಬಂದ ಮೆಸೇಜ್, ಈ ಸಮಯದಲ್ಲಿ ನನಗೆ ನಗಿಸಿದ ಒಂದು ಜೋಕ್.. ಕೆಲವರ ಮೀಮ್ಸ್, ಟ್ರೋಲ್!! – 1 ಲಕ್ಷ ಕೊಟ್ಟು ಕಾರ್ಯಕ್ರಮಕ್ಕೆ ಬರಬೇಕು, ರೊಚ್ಚಿಗೆಬ್ಬಿಸುವ ಪ್ರಶ್ನೆ!! ಇಷ್ಟು ಹಣ ಮೂವಿ ಪ್ರಮೋಶನ್ ಕೊಟ್ಟಿರೋ ಒಬ್ಬರು ಬರಲಿ ಸಾಕ್ಷಿಗೆ.. ಇಲ್ಲದ ಸಲ್ಲದ ಕಸ ಕಡ್ಡಿ ಎಲ್ಲ ಸೇರಿಸೋದೇ ಸಿಕ್ಕಿದ್ದೇ ಚಾನ್ಸ್ ಅಂತಾ?

    ವತ್ತಿಗೂ ಕೇಳಿರುವ ಪ್ರಶ್ನೆಯ್ ನನಗೆ ತಪ್ಪನಿಸಿಲ್ಲ, ಕುಣೀಲಾರದವರು ನೆಲ —- ಅಂದ್ರಂತೆ ಕಥೆ ಇದು.

    “ಡ್ಯಾಶಿಂಗ್ ಪ್ರಶ್ನೆಯ “ಸೆಗಮಂಟ್ ಕೇಳಿದ ಪ್ರಶ್ನೆ – ರಾಜರಥ ಸಿನಿಮಾ ನೋಡದವರು —– , ಅವರು ಕೊಟ್ಟ ಉತ್ತರ ನನ್ನ ಕಂಟ್ರೋಲ್ ನಲ್ಲಿ ಇರಲಿಲ್ಲ.. ವಿಷಯ ಲಕ್ಷಾಂತರ ಕನ್ನಡ ಪದಗಳಿವೆ ತುಂಬಿಸಲಿಕ್ಕೆ. ಉದಾಹರಣೆ- ಒಳ್ಳೆ ಸಿನಿಮಾ ಮಿಸ್ ಮಾಡಿಕೊಳ್ಳೋರು ,ಬ್ಯುಸಿ ಇರೋರು , ಕನ್ನಡ ಬರದಿದ್ದವರು, ಕನ್ನಡ ಸಿನಿಮಾಗಳನ್ನ ಬೆಳಸದೆ ಇರೋರು ..ಇತ್ಯಾದಿ ಇತ್ಯಾದಿ .. ಆದ ತಪ್ಪಿಗೆ ಅವರು ಅವರ ಸಮರ್ಥನೆ ಕೊಟ್ರು.. ನನ್ನ ಕಡೆಯಿಂದ ಎಡಿಟೆಡ್ ವಿಡಿಯೋ ನಲ್ಲಿ ತಪ್ಪಾಗಿ ಪೊರಟೆರಿ ಗೊಂಡದ್ದು ನಕ್ಕಿದ್ದು ಮತ್ತು ಚಪ್ಪಾಳೆ ಹೊಡೆದದ್ದು ಅದಕ್ಕೆ ಕ್ಷಮಿಸಿ.. ಆ ಸಂಪೂರ್ಣ ವಿಡಿಯೋ ನೋಡಿ ಏನಾಯಿತು ಆ ಫ್ಲೋ ನಲ್ಲಿ ಗೊತ್ತಾಗತ್ತೆ . ನಾನು ಯಾರಿಗೂ ಹಾಗೆ ಉತ್ತರ ಕೊಡಕ್ಕೆ ಪ್ರಚೋದಿಸಿಲ್ಲ, ಅವರವರ ಮಾತಿಗೆ ಅಭಿಪ್ರಾಯಕ್ಕೆ ಅವರೇ ಜವಾಬ್ದಾರರು . ಇನ್ನು ಅದೇ ರೌಂಡ್ ಅಲ್ಲಿ -ರಾಜರಥ ಸಿನಿಮಾ ಫಸ್ಟ್ ಡೇ, ಫಸ್ಟ್ ಶೋ ನೋಡೋರು —— ಅಂತ ಕೇಳಿದಾಗ ಅವರೇ ದೇವತೆ ಗಳು/ ದೇವರುಗಳು ಅಂತ ಅದೇ ಸಂದರ್ಶನದಲ್ಲಿ ಹೇಳಿದ್ದಾರೆ .. ಎರಡನ್ನು ನೀವೇ ನೋಡಿ. ಇಷ್ಟೆಲ್ಲಾ ಆಗಿ ಬೇಕು ಬೇಕು ಅಂತ ಆಗಿದ್ದಲ್ಲ .. ಎಡವಟ್ಟಾಗಿ ಊಹಿಸದೇ ಗೊತ್ತಿಲದೇ ತೊಗೊಂಡ ತಿರುವಿಗೆ ಕ್ಷಮೆ ಇರಲಿ. ಈ ಘಟನೆ ಇಂದ ಪಾಠ ಕಲಿತು, ತಿದ್ದುಕೊಂಡು ಇನ್ನು ಮುಂದಿನ ದಿನದಲ್ಲೂ ನಿಮ್ಮ ಹೆಮ್ಮೆಯ ರಶ್ಮಿ ನಡೆಸೋ ಜವಾಬ್ದಾರಿ ಇರೋ ಶೋ ಆಗಿ ಮುಂದಿನ ದಿನಗಳಲ್ಲೂ ಇರುವೆ.

    2 ವಾರದ ಹಿಂದೆ ಮಾಡಿದ ರಾಜರಥ ಎಫ್ ಬಿ ಲೈವ್ .. ರಿಲೀಸ್ ಆಗೋ ಮುಂಚೆ ನಡೆದ ಎಫ್ ಬಿ ಲೈವ್ , ಎಡಿಟ್ ಆಗಿರೋ ವಿಡಿಯೋ ವೈರಲ್ ಆಗಿ ಇಷ್ಟೆಲ್ಲ ಆಗಿದೆ, ಈಗ ಒರಿಜಿನಲ್ ವಿಡಿಯೋ ಅಪ್ಲೋಡ್ ಮಾಡ್ತೀವಿ ನೋಡಿ.

    ಮತ್ತೆ ಸಂದರ್ಶನದಲ್ಲಿ ಅವರಿಂದ ಬಾಯಿ ತಪ್ಪಿ ಬಂದ ಪದ ಬಳಕೆ ಬಗ್ಗೆ ಬೇಸರ ನನಗೂ ಇದೆ, ಮಾತಾಡಿದವರೇ ಕ್ಷಮೆ ಕೇಳಿದ್ದಾರೆ.. ನನ್ನ ರಿಯಾಕ್ಷನ್ ಬಗ್ಗೆ ನನಗೂ ಪ್ರಶ್ನೆ ಇದೆ.. ಯಾಕೆ ಹೀಗೆ ಮಾತಾಡಿದ್ರಿ ಅಂತ ಎದುರು ಬೀಳಕ್ಕೆ – ರಾಜರಾಥ ಕನ್ನಡ ಮತ್ತು ತೆಲಗು ಎರಡು ಭಾಷೆ ಸಿನಿಮಾ, ಇವರು ಉತ್ತರ ಆ ಫ್ಲೋ ನಲ್ಲಿ ಯಾರಿಗೆ ಹಿಂಗೇ ಹೇಳಿದ್ರು ಅಂತ ರೀ ಆಯ್ಯಕ್ಷನ್ ನ ಅರಗಿಸ್ಕೊಂಡು ಮತ್ತೆ ಅದು ಮುಂದೊಂದು ದಿನ ಕನ್ನಡಿಗರಿಗೆ ಹಿಂಗೇ ತಿರುಗಿಸಿರೋದು ಅಂತ ಟ್ರೋಲ್ ಆಗತ್ತೆ ಆ ಕ್ಷಣ ಹೊಳಿಯಲಿಲ್ಲ .. ಮುಂದಿನ ದಿನ ಪ್ರಶ್ನೆಯ ಕೇಳೋ ಭರದಲ್ಲಿ ಉತ್ತರಕ್ಕೂ ಏನು ಹೇಳಿದ್ರು ಯೋಚಿಸಿ ತಪ್ಪಿದ್ದರೆ ತಿದ್ದಿ ಮುಂದೆ ಪ್ರಶ್ನೆಗೆ ಹೋಗುವೆ .ಈಗ ನಾನು ಕನ್ನಡದವಳೇ ಆಗಿ, ನಾನು ಕನ್ನಡದ ಬಗ್ಗೆ, ಕನ್ನಡಿಗರ ಬಗ್ಗೆ ಎಲ್ಲೂ ತಪ್ಪಾಗಿ ಮಾತಾಡಿಲ್ಲ ಇಲ್ಲಿವರೆಗೂ .. ಮುಂದೇನೂ ಸಾಧ್ಯವೇ ಇಲ್ಲ.. ಮತ್ತೆ ಈ ವಿಡಿಯೋ ನೋಡಿ. ನಮ್ಮ ಶೋ ಇಂದ ಏನಾದ್ರು ತಪ್ಪಾಗಿದ್ಯಾ?? ಈ ವಿಡಿಯೋ ನೋಡಿ ನೀವೇ ನಿರ್ಧಾರ ಮಾಡಿ, ತಪ್ಪು ಆಗಿದ್ದರೆ ಮತ್ತೆ ಕ್ಷಮಿಸಿ?? 80 ಸಿನಿಮಾಗಳನ್ನು ಜವಾಬ್ದಾರಿ ಇಂದ ಪ್ರಮೋಟ್ ಮಾಡಿದ್ದೀವಿ , ಮುಂದೆ ಇನ್ನ್ನು ಹೆಚ್ಚು ಜಾಗರೂಕರಾಗಿ ಇನ್ನು ನಿಭಾಯಿಸ್ತೀವಿ. ಅಲ್ಲಿದ್ದ ಸ್ಟುಡಿಯೋ ಆಡಿಯೆನ್ಸ್ ಚಪ್ಪಾಳೆ ಹೊಡಿದಿದ್ದಾರೆ ಎಲ್ಲಾ ಉತ್ತರಕ್ಕೂ ಮತ್ತೆ ಕೆಲವು ಪ್ರಶ್ನೆ ಗೆ ನಾನು ಚಪ್ಪಾಳೆ ಹೊದೆದಿದ್ದೀನಿ, ಉದ್ದೇಶ ಪೂರ್ವಕ ಪ್ರತಿಕ್ರಿಯ ಅಲ್ಲ ಅದು ಮತ್ತು ನಾವು ಕೊಟ್ಟಿರೋ ಓರಿಜಿನಲ್ ವಿಡಿಯೋ ನೋಡಿ

    ಈ ಮಧ್ಯೆ ನಾವಿದ್ದೀವಿ, ಕೇಳಿದ ಪ್ರಶ್ನೆ ತಪ್ಪಿಲ್ಲ ಅಂದವರಿಗೆ…, ಇಲ್ಲ ಬೇರೆ ಪ್ರಶ್ನೆಇರಲಿಲ್ಲವಾ ಕೆಳಕ್ಕೆ ಅಂದವರಿಗೆ …

    ಬೇಸರ ಅಂದರೆ , ಸಂಪೂರ್ಣ ಸಂದರ್ಶನ ನೋಡಿ, ತಮಗೆ ಬೇಕಾಗಿರೋ ಹಾಗೆ 40 -50 ಸೆಕೆಂಡ್ ವಿವಾದಾತ್ಮಕ ಹೇಳಿಗೆ ಆಗಿ ಕತ್ತರಿ ಹಾಕಿರೋ ಎಡಿಟೆಡ್ ವಿಡಿಯೋ ಓಡಾಡಿದೆ. ಕನ್ನಡಿಗರು ವಿಶಾಲ ಹೃದಯದವರು ಹಾಗೆ ಪ್ರಜ್ಞಾವಂತರು, ಅವರ ಭಾವನೆಗಳ ಜೊತೆ ಆಟಾಡೋ ಹಾಗೆ ಎಡಿಟ್ ಮಾಡಿರೋರಿಗೆ ಕನ್ನಡಿಗರೇ ಉತ್ತರ ಕೊಡಲಿ. ಕೊನೆ ತೀರ್ಪು ನಿಮ್ಮದೇ ..ಆದರೂ ಫುಲ್- ವಿಡಿಯೋ ಯಾಕೆ ಸ್ವಾಮಿ ಹಾಕಿಲ್ಲ ! !!??

    ಈಗ ಲೈಕ್ ಮಾಡಿ, ಒರಿಜಿನಲ್ ವಿಡಿಯೋ ಶೇರ್ ಮಾಡಿ, ಮತ್ತು ಇಷ್ಟೊತ್ತು ಹಂಚಿಕೆ ಆಗಿರೋ ಎಡಿಟೆಗ್ ಮಾಡಿದ ತಮಾಷೆಗೆ ——-?????

    ಮುಂದಿನ ದಿನದಲ್ಲೂ ನಿಮ್ಮ ಪ್ರೀತಿ, ಅಭಿಮಾನಕ್ಕೆ ಧಕ್ಕೆ ಬಾರದ ಹಾಗೆ ನಡೆಯುವೆ.
    ಇಂತಿ ನಿಮ್ಮ ರ‍್ಯಾಪಿಡ್ ರಶ್ಮಿ.

    ಅನೂಪ್ ಭಂಡಾರಿ ಫೇಸ್‍ಬುಕ್ ನಲ್ಲಿ ಕ್ಷಮೆ:
    ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೇ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ದಯವಿಟ್ಟು ಕ್ಷಮಿಸಿ, ಇನ್ನು ಮುಂದೆ ಹೀಗೆ ಆಗಲ್ಲ: ಅನೂಪ್ ಭಂಡಾರಿ

    ಬೆಂಗಳೂರು: ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ಕ್ಷಮಿಸಿ. ನಮಗೆ ಇದರಿಂದ ತುಂಬ ನೋವಾಗಿದೆ ಇನ್ಮುಂದೆ ಹೀಗೆ ಆಗುವುದಿಲ್ಲ. ನಾವು ಕನ್ನಡಿಗರಿಗೆ ನೋಯಿಸಬೇಕು ಅಂತ ಆ ರೀತಿ ಮಾತನಾಡಲಿಲ್ಲ ಎಂದು ಹೇಳಿ ರಾಜರಥ ಸಿನಿಮಾ ನಿರ್ದೇಶಕ ಅನೂಪ್ ಭಂಡಾರಿ ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ.

    ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರ್ಯಾಪಿಡ್ ರಶ್ಮಿ ಅವರಲ್ಲಿ ಆ ವಿಡೀಯೊವನ್ನ ಡಿಲೀಟ್ ಮಾಡಲು ತಿಳಿಸಿದ್ದೇವೆ. ಯಾವುದೋ ಸಮಯದಲ್ಲಿ ಹೀಗೆ ಆಗಿ ಹೋಗಿದೆ ಎಂದು ಹೇಳಿದರು. ಈ ವೇಳೆ ರಾಜರಥ ಚಿತ್ರ ತಂಡ ಎದ್ದುನಿಂತು ಕನ್ನಡಿಗರ ಕ್ಷಮೆ ಯಾಚಿಸಿತು.

    ಚಲನ ಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ ರಾ ಗೋವಿಂದ್ ಮಾತನಾಡಿ, ನಿನ್ನೆ ಸಂಜೆಯಿಂದ ದೂರವಾಣಿ ಕರೆಗಳು ಬರುತ್ತಿದೆ. ಸಾರ್ವಜನಿಕವಾಗಿ ತಪ್ಪು ನಡೆದಿದೆ ನೀವೇ ಕ್ಷಮೆ ಕೇಳಬೇಕು ಅಂತ ಹೇಳಿದಾಗ ಚಿತ್ರ ತಂಡದವರು ಬಂದಿದ್ದಾರೆ. ಚಿತ್ರ ರಿಲೀಸ್ ಆಗುವ ಮೊದಲೇ ಈ ರೀತಿ ಮಾತನಾಡಿದ್ದಾರೆ. ಕೆಲವರು ಕೇಳುವ ಪ್ರಶ್ನೆಗಳು ಉದ್ರೇಕಗೊಳಿಸುತ್ತದೆ. ಎಂತಹವರಿಗಾದರು ಸಿಟ್ಟು ತರಿಸುತ್ತೆ ಎಂದು ಹೇಳಿದರು.

    ಮಾಡಿದ ಸಿನಿಮಾಗಳೆಲ್ಲಾ ಹಿಟ್ ಆಗಲೇ ಬೇಕು ಅಂತ ಇಲ್ಲ. ಕೆಟ್ಟ ಪದವನ್ನು ಯಾರು ಬಳಸಿರಲಿಲ್ಲ. ರಾಜ್ ಕುಮಾರ್ ಆಗಿರಲಿ, ವಿಷ್ಣುವರ್ಧನ್, ಅಂಬರೀಶ್ ಯಾರೂ ಸಹ ಕೆಟ್ಟದಾಗಿ ಮಾತನಾಡಿರಲಿಲ್ಲ ಆದರೆ ಇಂದು ಪರಿಸ್ಥಿತಿ ಹಾಗಿಲ್ಲ. ಚಿತ್ರತಂಡ ಪೂರ್ತಿ ಕನ್ನಡದವರು, ಕನ್ನಡಿಗರ ಬಗ್ಗೆ ಈ ರೀತಿಯ ಮಾತು ಸರಿಯಲ್ಲ ಎಂದರು.

    ಭಂಡಾರಿ ಸಹೋದರರು ಹೇಳಿದ್ದು ಏನು?
    ಸಂದರ್ಶನದ ನಡುವೆ ರ್ಯಾಪಿಡ್ ರಶ್ಮಿ “ರಾಜರಥ ಸಿನಿಮಾ ನೋಡದ ಪ್ರೇಕ್ಷಕರು______” ಎಂದು ಬಿಟ್ಟ ಸ್ಥಳವನ್ನು ತುಂಬಿಸುವಂತೆ ಕೇಳುತ್ತಾರೆ. ಮೊದಲು ಉತ್ತರಿಸಿದ ಅನೂಪ್ ಭಂಡಾರಿ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ನನ್ ಮಕ್ಳು” ಎಂದು ಹೇಳುತ್ತಾರೆ. ನಂತರ ಆ ಪ್ರಶ್ನೆ ನಟಿ ಅವಾಂತಿಕಾ ಶೆಟ್ಟಿಗೆ ಹೋಗುತ್ತದೆ. ಅವರೂ ಸಹ ಅನೂಪ್ ಅವರ ಉತ್ತರವನ್ನೇ ಮತ್ತೆ ಹೇಳುತ್ತಾರೆ. ಕೊನೆಗೆ ನಿರೂಪ್ ಭಂಡಾರಿ ಕೂಡ ರಾಜರಥ ಸಿನಿಮಾ ನೋಡದ ಪ್ರೇಕ್ಷಕರು “ಕಚಡ ಮಾತ್ರವಲ್ಲ ಲೋಫರ್ ನನ್ ಮಕ್ಳು” ಎಂದು ಹೇಳಿದ್ದಾರೆ.

    ಫೇಸ್‍ಬುಕ್ ನಲ್ಲಿ ಕ್ಷಮೆ:
    ರಾಜರಥ ಚಿತ್ರದ ಬಿಡುಗಡೆಗೆ ಮುನ್ನ ಭಾಗವಹಿಸಿದ ಒಂದು ಹಾಸ್ಯಮಯ ಕಾರ್ಯಕ್ರಮದ ಸಣ್ಣ ತುಣುಕು ನಿಮ್ಮೆಲ್ಲರಿಗು ನೋವುಂಟು ಮಾಡಿರುವುದಕ್ಕೆ ಕ್ಷಮೆ ಯಾಚಿಸುತ್ತೇವೆ. ಸಂದರ್ಶನಕ್ಕೂ ಮುನ್ನ, ಹಲವರು ಕನ್ನಡ ಸಿನಿಮಾ ನೋಡುವುದಿಲ್ಲ, ಹಲವಾರು ಒಳ್ಳೆ ಚಿತ್ರಗಳು ಬರುತ್ತಿವೆ ಆದರು ಏಕೆ ಹೀಗೆ, ಎಂದು ಚರ್ಚಿಸಿದ್ದೆವು. ಹಾಗೆ ಸಂದರ್ಶನದಲ್ಲಿ ಬಂದ ಪ್ರಶ್ನೆಗೆ ಆ ಹಿನ್ನೆಲೆಯಲ್ಲಿ ಕೊಟ್ಟ ತಪ್ಪು ಉತ್ತರವದು. ಇದು ಖಂಡಿತವಾಗಿಯು ಕನ್ನಡ ಪ್ರೇಕ್ಷಕರನ್ನುದ್ದೇಶಿಸಿ ಹೇಳಿದ ಮಾತಲ್ಲ. ನಾವು ಏನೇ ಯಶಸ್ಸು ಕಂಡಿದ್ದರೂ ಅದಕ್ಕೆ ಪ್ರೇಕ್ಷಕರೇ ಕಾರಣ. ನಮ್ಮ ಯಾವುದೇ ಬೇರೆ ಸಂದರ್ಶನಗಳನ್ನು ನೋಡಿದರೂ ನಮ್ಮ ಗೆಲುವಿಗೆ ಪ್ರೇಕ್ಷಕರೇ ಕಾರಣ ಎಂದು ಹಲವು ಬಾರಿ ಹೇಳಿದ್ದೇವೆ. ಕನ್ನಡ ಮತ್ತು ಕನ್ನಡ ಸಿನಿಮಾದ ಬಗ್ಗೆ ನಮಗೆ ಅಪಾರ ಅಭಿಮಾನ, ಅದಕ್ಕಾಗಿಯೇ ಪ್ರತಿ ಹಾಡಿನಲ್ಲೂ ಅಚ್ಚ ಕನ್ನಡವನ್ನೇ ಬಳಸುತ್ತೇವೆ. ಕಾರ್ಯಕ್ರಮದಲ್ಲಿ ತಪ್ಪಾಗಿ ಆಡಿದ ಮಾತುಗಳನ್ನು ದಯವಿಟ್ಟು ಮನ್ನಿಸಿ. ಯಾರಿಗೂ ನೋವುಂಟು ಮಾಡಬೇಕು ಅನ್ನುವ ಉದ್ದೇಶ ನಮ್ಮದಲ್ಲ. ನಿಮ್ಮ ಆಶಿರ್ವಾದ ನಮ್ಮ ಮೇಲೆ ಸದಾ ಇರಲಿ ಎಂದು ಬರೆದು ತನ್ನ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟ್ ಮಾಡಿದ್ದಾರೆ.