Tag: ಅನೇಕಲ್

  • ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

    ಇಸ್ರೇಲ್‍ನಿಂದ ತಂದಿದ್ದ ಜೀಬ್ರಾ ಬನ್ನೇರುಘಟ್ಟದಲ್ಲಿ ಸಾವು

    ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಗಂಡು ಜೀಬ್ರಾ ಏಕಾಏಕಿ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

    ಇಸ್ರೇಲ್ ನಿಂದ ಪ್ರಾಣಿಯ ವಿನಿಮಯ ಒಪ್ಪಂದದ ಅಡಿಯಲ್ಲಿ 4 ವರ್ಷಗಳ ಹಿಂದೆ ಎರಡು ಹೆಣ್ಣು, ಎರಡು ಗಂಡು ಜೀಬ್ರಾಗಳನ್ನು ತರಲಾಗಿತ್ತು. ಈ ತಂಡದಲ್ಲಿ ಇದ್ದ ಗಂಡು ಜೀಬ್ರಾ ಸಾವನ್ನಪ್ಪಿರುವುದಕ್ಕೆ ಪ್ರಾಣಿ ಪ್ರೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಇಸ್ರೇಲ್ ನಿಂದ ತಂದಿದ್ದ ಜೀಬ್ರಾಗಳಲ್ಲಿ ಕಳೆದ ವರ್ಷವಷ್ಟೇ ಗರ್ಭಿಣಿಯಾಗಿದ್ದ ಜೀಬ್ರಾವೊಂದು ಗಿಡ ನೆಡಲು ತೆಗೆಯಲಾಗಿದ್ದ ಗುಂಡಿಗೆ ಬಿದ್ದು ಸಾವನ್ನಪ್ಪಿತ್ತು. ಆದಾದ ಒಂದು ವರ್ಷದ ಮತ್ತೊಂದು ಜೀಬ್ರಾ ಸಾವನ್ನಪ್ಪಿದೆ. ಉದ್ಯಾನವನದ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಅಂದು ಜೀಬ್ರಾ ಮೃತಪಟ್ಟಿತ್ತು. ಈ ಘಟನೆ ಮಾಸುವ ಮುನ್ನವೇ ಈಗ ಮತ್ತೊಂದು ಜೀಬ್ರಾ ಸಾವನ್ನಪ್ಪಿದೆ.

    ಜೀಬ್ರಾ ಸಾವಿನ ಮಾಹಿತಿಗಾಗಿ ಮರಣೋತ್ತರ ಪರೀಕ್ಷೆ ಯನ್ನು ಉದ್ಯಾನವನದ ವೈದ್ಯರ ತಂಡ ಕೈಗೊಂಡಿದ್ದು, ಇದೀಗ ಉದ್ಯಾನವನದಲ್ಲಿ ವಿದೇಶದಿಂದ ತರಲಾಗಿರುವ ನಾಲ್ಕು ಜೀಬ್ರಾಗಳಲ್ಲಿ ಕೇವಲ 2 ಜೀಬ್ರಾಗಳು ಮಾತ್ರ ಉಳಿದಿವೆ.

    ಜೀಬ್ರಾ ಬಂದ ಆರಂಭದಲ್ಲಿ ಇವುಗಳನ್ನು ಪ್ರತ್ಯೇಕವಾಗಿ ಇರಿಸಿ ನೋಡಲಾಗಿತ್ತು. ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ಬಳಿಕವೇ ಪ್ರವಾಸಿಗರ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು.

  • ಧರ್ಮ ಒಡೆಯಲು ಹೋಗಿಲ್ಲವೆಂದು ಹೇಳಲು ಧೈರ್ಯ ಇದೆಯಾ: ಪ್ರತಾಪ್ ಸಿಂಹ ಪ್ರಶ್ನೆ

    ಧರ್ಮ ಒಡೆಯಲು ಹೋಗಿಲ್ಲವೆಂದು ಹೇಳಲು ಧೈರ್ಯ ಇದೆಯಾ: ಪ್ರತಾಪ್ ಸಿಂಹ ಪ್ರಶ್ನೆ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರು ತಮ್ಮ ಸ್ವಹಿತಾಸಕ್ತಿಗಾಗಿ ವೀರಶೈವ ಲಿಂಗಾಯತ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ. ಅವರೇ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮನವಿ ಸಲ್ಲಿಸಿ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದನ್ನು ಅವರು ಇಲ್ಲ ಎಂದು ಹೇಳಲು ಧೈರ್ಯ ಇದೆಯಾ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದಾರೆ.

    ಧರ್ಮ ಒಡೆಯುವ ಕೆಲಸ ಮಾಡಲು ಹೋಗಿದ್ದಕ್ಕೆ ಜನ ತಕ್ಕ ಪಾಠ ಕಲಿಸಿದ್ದಾರೆ. ಆದರೆ ಅವರು ಇಂದು ನಾವು ಏನು ಮಾಡಿಲ್ಲ. ಈ ಪತ್ರ ನಕಲಿ ಎನ್ನುತ್ತಿದ್ದಾರೆ ವಿನಃ ಪತ್ರ ನಕಲಿ ಹೆಡರ್ ಬಗ್ಗೆ ತನಿಖೆ ನಡೆಸದೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಂಬ ಕಾರಣಕ್ಕೆ ಪತ್ರಕರ್ತರನ್ನು ಬಂಧನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಧರ್ಮವನ್ನು ಒಡೆಯೊವುದು ತಪ್ಪಲ್ಲ, ಆದರೆ ಯಾವುದೋ ಲೆಟರ್ ಹೆಡ್ ತಪ್ಪೆಂದು ಪತ್ರಕರ್ತರನ್ನ ಜೈಲಿಗೆ ಕಳಿಸುವುದು ಎಷ್ಟು ಸರಿ? ಲೆಟರ್ ಹೆಡ್ ಬಗ್ಗೆ ತನಿಖೆ ನಡೆಸಬೇಕೆ ವಿನಾ: ರಾಜಕಾರಣ ನಡೆಸೋದು ಸರಿಯಲ್ಲ ಎಂದರು. ಇದೇ ವೇಳೆ ಜಿ.ಟಿ ದೇವೇಗೌಡರ ಹೇಳಿಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಾಯಕರು ಕೂಡ ಮೈತ್ರಿ ಧರ್ಮ ಪಾಲನೆ ಮಾಡಿಲ್ಲ. ಮೈತ್ರಿ ಧರ್ಮ ಎಂದು ಹೇಳಿ ಜೆಡಿಎಸ್ ಪಕ್ಷಕ್ಕೆ ತುಮಕೂರು, ಹಾಸನ, ಮಂಡ್ಯ ಕ್ಷೇತ್ರದಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದರು.

    ಸದ್ಯ ಪತ್ರಕರ್ತ ಹೇಮಂತ್ ಅವರನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬಲು ಇಲ್ಲಿಗೆ ಆಗಮಿಸಿದ್ದು, ಕಾನೂನು ಹೋರಾಟ ಮಾಡಲಾಗುತ್ತದೆ ಎಂದರು.

    ಸ್ಪಷ್ಟನೆ: ಸಚಿವ ಡಿ.ಕೆ ಶಿವಕುಮಾರ್ ಕಾಲಿಗೆ ನಮಸ್ಕಾರಿಸಿದ ಬಗ್ಗೆ ಸ್ಪಷ್ಟನೆ ನೀಡಿ, ಹಿರಿಯರು ಯಾರೇ ಸಿಕ್ಕರೂ ಆರ್ಶೀವಾದ ಪಡೆದುಕೊಳ್ಳುತ್ತೇನೆ. ಇದು ನಮ್ಮ ಸಂಪ್ರದಾಯ. ಕಾಂಗ್ರೆಸ್ ಪಕ್ಷದ ನಾಯಕರಾದ ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ ಸೇರಿದಂತೆ ಹಲವು ನಾಯಕರ ಬಳಿ ಆಶೀರ್ವಾದ ಪಡೆದಿದ್ದೇನೆ. ಆದರೆ ಇದಕ್ಕೆ ರಾಜಕೀಯ ಬಣ್ಣದ ಲೇಪನ ಮಾಡಲಾಗಿದೆ ಎಂದರು.

  • ರೌಡಿಸಂನಲ್ಲಿ ಹೆಸರು ಮಾಡಲು ಯುವಕನನ್ನು ಬರ್ಬರವಾಗಿ ಕೊಲೆಗೈದ್ರು!

    ರೌಡಿಸಂನಲ್ಲಿ ಹೆಸರು ಮಾಡಲು ಯುವಕನನ್ನು ಬರ್ಬರವಾಗಿ ಕೊಲೆಗೈದ್ರು!

    ಅನೇಕಲ್: ರೌಡಿಸಂ ಹೆಸರು ಮಾಡಲು ಮುಂದಾಗಿದ್ದ ಆರೋಪಿಗಳು ಯುವನೊಬ್ಬನನ್ನು ಬರ್ಬರವಾಗಿ ಕೊಲೆಮಾಡಿ ಈಗ ಪೊಲೀಸರ ಅತಿಥಿಗಳಾಗಿರುವ ಘಟನೆ ಅನೇಕಲ್ ತಾಲೂಕಿನಲ್ಲಿ ನಡೆದಿದೆ.

    ಬಂಧಿತರನ್ನು ವಿನಿತ್(21) ಮುನೇಂದ್ರ(20) ವಜ್ರಮುನಿ (25) ಮನು (21) ಹಾಗೂ ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಆರೋಪಿಗಳು ಇದೇ ತಿಂಗಳ 14 ರಂದು ಎಂ ಮೇಡಹಳ್ಳಿ ಬಡಾವಣೆಯೊಂದರ ಬಳಿ ಯವಕ ದೇವರಾಜ್ (23) ಬರ್ಬರವಾಗಿ ಕೊಲೆ ಮಾಡಿದ್ದರು.

    ಪ್ರಕರಣವನ್ನು ಬೆನ್ನತ್ತಿದ್ದ ಅತ್ತಿಬೆಲೆ ಪೊಲೀಸ್ ಸಿಬ್ಬಂದಿ 6 ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರೆಲ್ಲರೂ ಕೂಡ ಅನೇಕಲ್ ತಾಲೂಕಿನ ಬೆಸ್ತಮಾನಹಳ್ಳಿಯ ನಿವಾಸಿಗಳಾಗಿದ್ದಾರೆ. ಈ ಪ್ರಕರಣದ ಮತ್ತೊರ್ವ ಆರೋಪಿ ಹೊಸೂರಿನ ಪ್ರವೀಣ್ ತಲೆ ಮರೆಸಿಕೊಂಡಿದ್ದು ಆತನ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ.

    ಈ ಕೊಲೆಯ ಸೂತ್ರಧಾರಿಗಳು ಸುನಿಲ್ ಹಾಗೂ ನವೀನ್ ಎನ್ನಲಾಗಿದ್ದು, ಇಬ್ಬರು ಈ ಹಿಂದೆ ಜಯಂತ್ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಉಳಿದಂತೆ ಆನೇಕಲ್ ಮನು ಹಾಗೂ ಸುನಿಲ್ ಗ್ಯಾಂಗ್ ರೌಡಿಸಂನಲ್ಲಿ ಹೆಸರುಗಳಿಸಲು ಯತ್ನಿಸುತ್ತಿದ್ದು, ಜೈಲಿನಲ್ಲಿದ್ದುಕೊಂಡೆ ಸುನಿಲ್ ಹಾಗೂ ಮನುವಿನ ಸ್ನೇಹಿತ ದೇವರಾಜ ನನ್ನು ಬಳಿಸಿಕೊಂಡು ಕೊಲೆ ಮಾಡಿಸಿದ್ದಾನೆ ಎನ್ನಲಾಗುತ್ತಿದೆ.

    ಕೊಲೆಯಾದ ಯುವಕನ ದೇವರಾಜು ಕೂಡ ಕೆಲ ದಿನಗಳ ಹಿಂದೆ ಗಲಾಟೆಯೊಂದರಲ್ಲಿ ಜೈಲು ಸೇರಿದ್ದ. ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಜೈಲಿನಿಂದ ಹೊರಬಂದಿದ್ದ ಆತ ಕೂಡ ಫೀಲ್ಡ್‍ನಲ್ಲಿ ಹೆಸರು ಮಾಡಲು ಮುಂದಾಗಿದ್ದ. ಈ ಹಂತದಲ್ಲಿ ಸುನಿಲ್ ನೊಂದಿಗೆ ಕಿರಿಕ್ ಮಾಡಿಕೊಂಡಿದ್ದ, ಇದರಿಂದ ರೊಚ್ಚಿಗೆದ್ದ ಸುನಿಲ್ ಜೈಲಿನಿಂದಲೇ ತನ್ನ ಹುಡುಗರಿಗೆ ಪ್ಲಾನ್ ತಿಳಿಸಿ ಕೊಲೆ ಮಾಡಿಸಿದ್ದಾನೆ. ಕೊಲೆಯಾದ ದಿನ ದೇವರಾಜು ಮೊಬೈಲ್ ಬಂದಿದ್ದ ಕರೆ ಆಧರಿಸಿ ಆರೋಪಗಳನ್ನು ಬಂಧಿಸಲು ಪೊಲೀಸರು ಯಶಸ್ವಿಯಾಗಿದ್ದಾರೆ.

  • ಬೆಂಗಳೂರಿಗೂ ಕಾಲಿಟ್ಟ ಚಡ್ಡಿ ಗ್ಯಾಂಗ್ – ಅರೆಬೆತ್ತಲಾಗಿ ಬಂದು ಕಳ್ಳತನ ಮಾಡ್ತಾರೆ – ವಿಡಿಯೋ ನೋಡಿ

    ಬೆಂಗಳೂರಿಗೂ ಕಾಲಿಟ್ಟ ಚಡ್ಡಿ ಗ್ಯಾಂಗ್ – ಅರೆಬೆತ್ತಲಾಗಿ ಬಂದು ಕಳ್ಳತನ ಮಾಡ್ತಾರೆ – ವಿಡಿಯೋ ನೋಡಿ

    ಬೆಂಗಳೂರು: ದಂಡುಪಾಳ್ಯ ಗ್ಯಾಂಗ್ ಬಳಿಕ ನಗರಕ್ಕೆ ಮತ್ತೊಂದು ಕಳ್ಳರ ಗ್ಯಾಂಗ್ ಕಾಲಿಟ್ಟಿದೆ. ಅರೆಬೆತ್ತಲಾಗಿ ಲಾಂಗು, ಮಚ್ಚು ಹಿಡಿದು, ಮೈಗೆ ಎಣ್ಣೆ ಹಚ್ಚಿಕೊಂಡು ಗ್ಯಾಂಗ್‍ವೊಂದು ಕಳ್ಳತನಕ್ಕೆ ಯತ್ನಿಸಿರುವ ಪ್ರಕರಣಗಳು ನಗರದ ಹೊರವಲಯದ ಬನ್ನೇರುಘಟ್ಟ ಸುತ್ತಮುತ್ತಲಿನ ಪ್ರದೇಶದ ಮನೆಗಳಲ್ಲಿ ನಡೆದಿದೆ.

    ಮುಖಕ್ಕೆ ಬಟ್ಟೆ ಕಟ್ಟಿಕೊಂಡಿರುವ ಮುಸುಕುದಾರಿ ಗ್ಯಾಂಗ್ ಅರೆಬೆತ್ತಲಾಗಿ ಆಗಮಿಸಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಬನ್ನೇರುಘಟ್ಟ, ಜಿಗಣಿ ಕೈಗಾರಿಕ ಪ್ರದೇಶದಲ್ಲಿ ಗ್ಯಾಂಗ್ ಕಾಣಿಸಿಕೊಂಡಿದ್ದು ಹೊರವಲಯದ ಮನೆಗಳ ಬಳಿ ಕಳ್ಳತನಕ್ಕೆ ಬಂದು ವಿಫಲ ಯತ್ನ ನಡೆಸಿ ವಾಪಸ್ಸಾಗಿದೆ. ಬನ್ನೇರುಘಟ್ಟ, ಸಕಲವಾರ, ಮಂಟಪಾ ಗ್ರಾಮಗಳ ಕೆಲ ಮನೆಗಳಿಗೆ ಕಳ್ಳತನಕ್ಕೆಂದು ಬಂದ ಗ್ಯಾಂಗ್‍ನ ಚಲನವಲನಗಳು ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಈ ಘಟನೆ ಜೂನ್ 7ರಂದು ನಡೆದಿದ್ದು, ಗ್ಯಾಂಗ್ ಬನ್ನೇರುಘಟ್ಟದ ಹಲವೆಡೆಗಳಲ್ಲಿ ಸಂಚರಿಸಿದ್ದ ಕಳ್ಳತನಕ್ಕೆ ಯತ್ನಿಸಿದೆ. ಸದ್ಯ ಸಿಸಿಟಿವಿ ದೃಶ್ಯ ಆಧಾರಿಸಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಗ್ಯಾಂಗ್ ಪತ್ತೆಗೆ ಈಗಾಗಲೇ ಪೊಲೀಸರು ಬಲೆ ಬೀಸಿದ್ದು ತಮಿಳುನಾಡು ಕಡೆಯಿಂದ ಈ ಗ್ಯಾಂಗ್ ಬಂದಿರಬಹುದು ಎಂಬ ಶಂಕೆ ಪೊಲೀಸ್ ವಲಯದಲ್ಲಿ ವ್ಯಕ್ತವಾಗಿದೆ.

    ಇನ್ನು ಆನೇಕಲ್, ಅತ್ತಿಬೆಲೆ ಗಡಿಭಾಗ ಸೇರಿದಂತೆ ಈ ಗ್ಯಾಂಗ್ ಬಗ್ಗೆ ಪೊಲೀಸರು ಎಲ್ಲಾ ಠಾಣೆಗಳಿಗೆ ಮಾಹಿತಿ ನೀಡಿದ್ದು ಅವರ ಚಲನವಲನ ಕಂಡು ಬಂದಲ್ಲಿ ಸೆರೆಹಿಡಿಯುವಂತೆ ಮಾಹಿತಿ ನೀಡಿದ್ದಾರೆ.

    https://www.youtube.com/watch?v=zA1Y_tlISQQ

  • ಕುಡಿದ ಮತ್ತಿನಲ್ಲಿ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

    ಕುಡಿದ ಮತ್ತಿನಲ್ಲಿ ತಮ್ಮನನ್ನೇ ಗುಂಡಿಟ್ಟು ಕೊಂದ ಅಣ್ಣ

    ಅನೇಕಲ್: ಕುಡಿದ ಮತ್ತಿನಲ್ಲಿ ಸಹೋದರರ ನಡುವೆ ಜಗಳ ನಡೆದು ಅಣ್ಣ ತಮ್ಮನ ಮೇಲೆ ಗುಂಡಿನ ದಾಳಿ ನಡೆಸಿದ ಪರಿಣಾಮ ತಮ್ಮ ಸ್ಥಳದಲ್ಲೇ ಸಾವನಪ್ಪಿದ ಘಟನೆ ಆನೇಕಲ್ ಗಡಿಗೆ ಹೊಂದಿಕೊಂಡಿರೋ ತಮಿಳುನಾಡಿನ ದೇವರಬೆಟ್ಟ ಗ್ರಾಮದಲ್ಲಿ ನಡೆದಿದೆ.

    ದೇವರಬೆಟ್ಟ ಗ್ರಾಮದ ಗಣೇಶ್(32) ಅಣ್ಣ ಶಂಕರಪ್ಪನಿಂದ ಕೊಲೆಯಾದ ದುರ್ದೈವಿ. ಗಣೇಶ ಅನೇಕಲ್ ಸುತ್ತಮುತ್ತ ಕೂಲಿ ಕೆಲಸ ಮಾಡಿಕೊಂಡಿದ್ದು ಹಬ್ಬದ ಪ್ರಯುಕ್ತ ನಿನ್ನೆ ಸ್ವಗ್ರಾಮ ದೇವರಬೆಟ್ಟಕ್ಕೆ ತೆರಳಿದ್ದ. ಅಣ್ಣ, ತಮ್ಮ ಇಬ್ಬರು ಒಟ್ಟಿಗೆ ಸೇರಿ ಮದ್ಯಪಾನ ಪಾರ್ಟಿ ನಡೆಸಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿ ಶಂಕರಪ್ಪ ಮನೆಯಲ್ಲಿದ್ದ ಡಬ್ಬಲ್ ಬ್ಯಾರಲ್ ಗನ್ ನಿಂದ ತಮ್ಮನ ಮೇಲೆ ಗುಂಡು ಹರಿಸಿದ್ದಾನೆ. ಗುಂಡೇಟು ತಿಂದ ಗಣೇಶ್ ಸ್ಥಳದಲ್ಲೇ ಸಾವನಪ್ಪಿದ್ದಾನೆ.

    ಪ್ರಕರಣ ದಾಖಲಿಸಿಕೊಂಡ ತಮಿಳುನಾಡಿನ ಥಳಿ ಪೊಲೀಸರು ಆರೋಪಿ ಶಂಕರಪ್ಪನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

  • ಬಾಟಲಿಯಿಂದ ಪತ್ನಿಯನ್ನು ಚುಚ್ಚಿ, ಕುತ್ತಿಗೆಯನ್ನು ಕಾಲಿನಿಂದ ತುಳಿದು ಕೊಂದ!

    ಬಾಟಲಿಯಿಂದ ಪತ್ನಿಯನ್ನು ಚುಚ್ಚಿ, ಕುತ್ತಿಗೆಯನ್ನು ಕಾಲಿನಿಂದ ತುಳಿದು ಕೊಂದ!

    ಅನೇಕಲ್: ಶೀಲ ಶಂಕಿಸಿದ ಪತಿರಾಯ ತನ್ನ ಪತ್ನಿಯನ್ನು ಬಾಟಲಿನಿಂದ ಚುಚ್ಚಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಅತ್ತಿಬೆಲೆ ಸಮೀಪದ ಮುತ್ಸಂದ್ರ ಗ್ರಾಮದಲ್ಲಿ ಕಲಾವತಿ (24) ಕೊಲೆಯಾದ ದುರ್ದೈವಿ. ಪತಿ ನಾಗೇಶ್ ತನ್ನ ಪತ್ನಿ ಶೀಲ ಶಂಕಿಸಿ ನಿತ್ಯ ಜಗಳವಾಡುತ್ತಿದ್ದು, ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಕುಡಿದು ಮನೆಗೆ ಬಂದು ಹೆಂಡತಿ ಜೊತೆ ಜಗಳವಾಡಿದ್ದಾನೆ. ಜಗಳ ವಿಕೋಪಕ್ಕೆ ತಿರುಗಿ ನಾಗೇಶ್ ಮದ್ಯದ ಬಾಟಲಿಯಿಂದ ಪತ್ನಿಗೆ ಚುಚ್ಚಿ, ಕುತ್ತಿಗೆಯನ್ನು ಕಾಲಿನಿಂದ ತುಳಿದುಕೊಂಡು ಉಸಿರುಗಟ್ಟಿಸಿ ಸಾಯಿಸಿದ್ದಾನೆ.

    ಈ ಕೃತ್ಯ ನಡೆಸಿದ ನಂತರ ಪತಿ ನಾಗೇಶ್ ಅತ್ತಿಬೆಲೆ ಪೊಲೀಸ್ ಠಾಣೆಗೆ ಬಂದು ತನ್ನ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿ ಪೊಲೀಸರಿಗೆ ಶರಣಾಗಿದ್ದಾನೆ. ಕಲಾವತಿಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ತಾಯಿ ಕೊಲೆಯಾಗಿದ್ದು, ತಂದೆ ಜೈಲು ಪಾಲಾಗಿರುವುದರಿಂದ ಅಪ್ಪ ಅಮ್ಮ ಇಲ್ಲದೆ ತಬ್ಬಲಿಯಾಗಿವೆ.

  • ವರ್ತೂರು ಕೋಡಿಯಲ್ಲಿ ನೊರೆಯ ಆರ್ಭಟ- ನೊರೆಯಲ್ಲಿ ಫೋಟೊ ಕ್ಲಿಕಿಸಿಕೊಳ್ಳಲು ಮುಂದಾದ ಜನ

    ವರ್ತೂರು ಕೋಡಿಯಲ್ಲಿ ನೊರೆಯ ಆರ್ಭಟ- ನೊರೆಯಲ್ಲಿ ಫೋಟೊ ಕ್ಲಿಕಿಸಿಕೊಳ್ಳಲು ಮುಂದಾದ ಜನ

    ಬೆಂಗಳೂರು: ಕಳೆದ ರಾತ್ರಿ ಸುರಿದ ಮಳೆಗೆ ವರ್ತೂರು ಕೋಡಿ ಕೆರೆಯಲ್ಲಿ ನೊರೆಯ ಆರ್ಭಟ ಹೆಚ್ಚಾಗಿದೆ. ಇನ್ನೂ ನೊರೆಯ ಒಂದೆಡೆ ಶೇಖರಣೆಯಾಗಿ ಹಿಮಾಲಯದಂತೆ ಕಾಣಿಸುತ್ತಿದ್ದು, ಸೆಲ್ಫೀ ಪ್ರಿಯರು ನೊರೆಯ ಮುಂಭಾಗದಲ್ಲಿ ಫೋಟೋ ಕ್ಲಿಕಿಸಿಕೊಳ್ಳುತ್ತಿದ್ದಾರೆ.

    ನೊರೆಯ ಸಮಸ್ಯೆಯನ್ನು ತಡೆಗಟ್ಟುವ ಸಲುವಾಗಿ ಬಿಡಿಎ ವತಿಯಿಂದ 20 ಅಡಿ ಎತ್ತರದ ಕಬ್ಬಿಣದ ಮೆಷ್ ಅಳವಡಿಸಲಾಗಿತ್ತು. ಆದರೆ ಬಿಡಿಎ ಅರ್ಧ ಭಾಗಕ್ಕೆ ಮಾತ್ರ ಮೆಷ್ ಅಳವಡಿಸಿ ಉಳಿದ ಅರ್ಧಭಾಗ ಕಾಲಿ ಬಿಟ್ಟಿರುವುದರಿಂದಾಗಿ ನೊರೆ ಹೆಚ್ಚು ಸಂಗ್ರಹಣೆಯಾಗಿದೆ. ಮೆಷ್ ಒಳಗಡೆ ಭಾರೀ ಪ್ರಮಾಣದಲ್ಲಿ ನೊರೆ ಸಂಗ್ರಹಣೆಯಾಗಿದ್ದು, ನೊರೆ ರಸ್ತೆಗೆ ಬಂದು ವಾಹನ ಸವಾರರು ಪರದಾಡುವಂತಾಗಿದೆ.

    ಇಲ್ಲಿಯ ವರ್ಜೀನಿಯ ಮಾಲ್ ಗೇಟ್ ನಲ್ಲಿ ಬಳಿಯೇ ನೊರೆ ಶೇಖರಣೆಯಾಗಿದ್ದು, ಮಾಲ್ ಗೆ ಬರುವ ಗ್ರಾಹಕರಿಗೂ ತೊಂದರೆ ಉಂಟಾಗಿದೆ. ಮಾಲ್ ಸಿಬ್ಬಂದಿ ನೊರೆಯನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

    https://www.youtube.com/watch?v=_FxnpjRlTKg

  • ಆನೇಕಲ್ ಪ್ರೇಮಿಗಳ ವೈರಲ್ ವಿಡಿಯೋ: ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಅರೆಸ್ಟ್

    ಆನೇಕಲ್ ಪ್ರೇಮಿಗಳ ವೈರಲ್ ವಿಡಿಯೋ: ಅಪ್ರಾಪ್ತೆಯನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಅರೆಸ್ಟ್

    ಬೆಂಗಳೂರು: ಅಪ್ರಾಪ್ತೆಯನ್ನು ಕಿಪಡ್ ಮಾಡಿ, ತಮ್ಮ ಪ್ರೇಮಕ್ಕೆ ಪೊಲೀಸರು ಅಡ್ಡಿಪಡಿಸಿದರೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಂದು ವಿಡಿಯೋ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶ್ವಸಿಯಾಗಿದ್ದಾರೆ.

    ವೇಣು ಬಂಧಿತ ಆರೋಪಿ. ಮೂರು ದಿನಗಳ ಹಿಂದೆ ಅಪ್ರಾಪ್ತ ಯುವತಿಯನ್ನು ವೇಣು ಎಂಬಾತ ಅಪಹರಣ ಮಾಡಿದ್ದಾನೆ ಎಂದು ಬಾಲಕಿಯ ಪೋಷಕರು ನಗರದ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ವೇಣುಗೆ ಕರೆಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

    ಇದನ್ನೂ ಓದಿ: ಮನೆ ಬಿಟ್ಟು ಓಡಿ ಹೋಗಿ, ನಮ್ಮನ್ನ ಹುಡ್ಕಬೇಡಿ ಎಂದು ಪೊಲೀಸರಿಗೆ ವಾಟ್ಸಪ್ ವಿಡಿಯೋ ಕಳಿಸಿದ್ರು-ವಿಡಿಯೋ ತಲುಪವ ಮುನ್ನ ಲವ್ ಸ್ಟೋರಿಗೊಂದು ಟ್ವಿಸ್ಟ್

    ಪೊಲೀಸರ ವಿಚಾರಣೆಗೆ ಹೆದರಿದ ವೇಣು ಅಪ್ರಾಪ್ತ ಯುವತಿಗೆ ಪುಸಲಾಯಿಸಿ ತಮ್ಮ ಪ್ರೀತಿಗೆ ಪೊಲೀಸರು ಅಡ್ಡಿಪಡಿಸುತ್ತಿದ್ದಾರೆ ಮತ್ತು ನಮ್ಮನ್ನು ದೂರ ಮಾಡಲು ಯತ್ನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

    ಸೋಮವಾರ ತಡರಾತ್ರಿ ಹೊಸಕೋಟೆ ಪೊಲೀಸರು ವೇಣುನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯನ್ನು ಪೋಷಕರ ವಶಕ್ಕೆ ನೀಡಿದ್ದಾರೆ. ಇನ್ನು ವೇಣು ವಿರುದ್ಧ ಪೂಕ್ಸೋ ಕಾಯ್ದೆ ಅಡಿ, ಅಪಹರಣ ಹಾಗು ಆತ್ಮಹತ್ಯೆ ಪ್ರಚೋದನೆ ಕೇಸು ದಾಖಲಿಸಿದ್ದಾರೆ.

    https://www.youtube.com/watch?v=mHzsyglE0is

     

  • ಬೆಂಗಳೂರು: ಬಿಜೆಪಿ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಬೆಂಗಳೂರು: ಬಿಜೆಪಿ ಮುಖಂಡನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

    ಬೆಂಗಳೂರು: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರೋ ಘಟನೆ ಹೊಸೂರು ಮುಖ್ಯ ರಸ್ತೆಯ ಬಿಟಿಎಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.

    35 ವರ್ಷದ ವಾಸು ಕೊಲೆಯಾದ ಬಿಜೆಪಿ ಮುಖಂಡ. ಇಂದು ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ವಾಸು ಬೊಮ್ಮಸಂದ್ರ ಪುರಸಭೆಯ ಬಿಜೆಪಿಯ ಸದಸ್ಯರಾಗಿದ್ದರು. ರಾಜಕೀಯ ವೈಷಮ್ಯದಿಂದ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

    ವಾಸು ಬೊಮ್ಮಸಂದ್ರ ಪುರಸಭೆಯ ಅಧ್ಯಕ್ಷ ಸ್ಥಾನದ ರೇಸ್‍ನಲ್ಲಿ ಮುಂಚೂಣಿಯಲ್ಲಿದ್ದರು. ಇನ್ನು ವಾಸು ರಾಜಕೀಯವಾಗಿ ಬೆಳಯತೊಡಗಿದ್ದು, ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ತಮ್ಮ ಪತ್ನಿಯನ್ನು ಗೆಲ್ಲಿಸಿದ್ದರು. ವಾಸು ರಾಜಕೀಯವಾಗಿ ಪ್ರಬಲ ಮುಖಂಡರಾಗಿ ಗುರುತಿಸಿಕೊಂಡಿದ್ದರು.

    ಇಂದು ಬೆಳಗಿನ ಜಾವ ವಾಸು ಅವರಿಗೆ ಒಂದು ಫೋನ್ ಕಾಲ್ ಬಂದಿತ್ತು. ಕಾಲ್ ಬಂದ ನಂತರ ತಮ್ಮ ಇನ್ನೋವಾ ಕಾರು ತೆಗೆದುಕೊಂಡು ಬಿಟಿಎಲ್ ಕಾಲೇಜು ಮುಂಭಾಗದ ಪಾರ್ಕಿಂಗ್ ಜಾಗದಲ್ಲಿ ನಿಂತಿದ್ದಾಗ ಕೊಲೆ ನಡೆದಿದೆ.

    ಸ್ಥಳಕ್ಕೆ ಬೆಂಗಳೂರು ಗ್ರಾಮಂತರ ಎಸ್‍ಪಿ ಅಮಿತ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇತ್ತ ವಾಸು ಸಾವಿನ ಸುದ್ದಿ ತಿಳಿದ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಆಗಮಿಸುತ್ತಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.