Tag: ಅನ್ನಸಂತರ್ಪಣೆ

  • ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡುವ ವೇಳೆ  ಅಶ್ವಿನಿ ಗಳಗಳನೇ ಕಣ್ಣೀರಿಟ್ಟಿದ್ದಾರೆ.

    ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 12 ದಿನ ಕಳೆದಿದೆ. ಪುನೀತ್ ಸವಿ ನೆನಪಿನಲ್ಲಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಸಹೋದರ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಅವರ ಪತ್ನಿ ಮಂಗಳ ಅಭಿಮಾನಿಗಳಿಗೆ ಊಟ ಬಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಇದೇ ವೇಳೆ ಅಭಿಮಾನಿಗಳಿಗೆ ಊಟ ಬಡಿಸುತ್ತಿದ್ದ ಅಶ್ವಿನಿ, ಪತಿ ಪುನೀತ್ ರಾಜ್‍ಕುಮಾರ್ ಅವರನ್ನು ನೆನೆದು ಗಳಗಳನೇ ಕಣ್ಣೀರಿಟ್ಟಿದ್ದಾರೆ. ಕೊಂಚ ಸಮಯ ಊಟ ಬಡಿಸಿ ಅಶ್ವಿನಿ ಅವರು ನಂತರ ಭಾವುಕರಾಗಿ ಮನೆಗೆ ವಾಪಸ್ ತೆರಳಿದರು. ಇದನ್ನೂ ಓದಿ: ರಾಜರತ್ನ ಅಪ್ಪು ಅಗಲಿ 12ನೇ ದಿನ – ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

    ಅಪ್ಪು ಅಭಿಮಾನಿಗಳಿಗೆ ಅನ್ನ ಸಂತರ್ಪಣಾ ಕಾರ್ಯಕ್ರಮಕ್ಕೆ ವೆಜ್ ಜೊತೆಗೆ ನಾನ್ ವೆಜ್ ವ್ಯವಸ್ಥೆಯನ್ನು ಸಹ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ.

  • ‘ಅಪ್ಪು’ ಸವಿನೆನಪು – ನ.9 ರಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ

    ‘ಅಪ್ಪು’ ಸವಿನೆನಪು – ನ.9 ರಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ

    ಬೆಂಗಳೂರು: ಪುನೀತ್ ಸವಿನೆನಪಿನಲ್ಲಿ ನವೆಂಬರ್ 9 ರಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಪುನೀತ್ ರಾಜ್‍ಕುಮಾರ್ ಓರ್ವ ನಟ ಮಾತ್ರ ಅಲ್ಲ. ರಾಜ್ಯದ ಹಲವರ ಬಾಳು ಬೆಳಗಿದ ಮಹಾನ್ ವ್ಯಕ್ತಿ. ಸಂಕಷ್ಟದಲ್ಲಿ ನೆರವಿನ ಹಸ್ತ ಚಾಚಿದ ಕರುಣಾಮಯಿ. ಸಾವಿರಾರು ಅಭಿಮಾನಿಗಳ ಪಾಲಿನ ಆರಾಧ್ಯ ದೈವ. ಹೀಗಾಗಿ ಪುನೀತ್ ಅಗಲಿಕೆ ಆಘಾತದಿಂದ ಹೊರಬರುವುದಕ್ಕೆ ಸಾಧ್ಯವಾಗದೆ ಅಭಿಮಾನಿಗಳು ಇನ್ನೂ ಕಣ್ಣೀರಿಡುತ್ತಿದ್ದಾರೆ. ಇದನ್ನೂ ಓದಿ: ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ಇದರ ಬೆನ್ನಲ್ಲೇ ಪುನೀತ್ ಸ್ಮರಣಾರ್ಥ ಹಲವು ಕಾರ್ಯಕ್ರಮಗಳು ನಿರ್ಧಾರವಾಗಿವೆ. ಚಿತ್ರರಂಗದಿಂದ ದೊಡ್ಡ ಮಟ್ಟದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೀತಿದೆ. ಇದಕ್ಕೆ ಸರ್ಕಾರವೂ ಕೈಜೋಡಿಸಿದೆ. ಇದೇ ವಿಚಾರವಾಗಿ ಶುಕ್ರವಾರ ಸಿಎಂ ಬೊಮ್ಮಾಯಿ ಪುನೀತ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರ ಜೊತೆ ಚರ್ಚೆ ನಡೆಸಿದರು. ಇದೇ 8ರಂದು ಪುನೀತ್ ಪುಣ್ಯತಿಥಿ ಆಚರಿಸಿದರೆ, 9 ರಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇನ್ನು ನವೆಂಬರ್ 16ರಂದು ಚಲನಚಿತ್ರ ವಾಣಿಜ್ಯ ಮಂಡಳಿ ಪುನೀತ್ ನಮನ ಹೆಸರಿನಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಭದ್ರತೆ ಹಾಗೂ ಸಂಚಾರ ವ್ಯವಸ್ಥೆ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಪತ್ನಿಯ ಎದೆಹಾಲು ಕದ್ದು ಕುಡಿದ ಆಯುಷ್ಮಾನ್ ಖುರಾನಾ

    ಪ್ರಮುಖ ರಸ್ತೆ, ಪಾರ್ಕ್‍ಗಳಿಗೆ ಪುನೀತ್ ಹೆಸರಿಡಲು ಅಭಿಮಾನಿಗಳು ಒತ್ತಾಯಿಸಿದ್ದಾರೆ. ಈ ಸಂಬಂಧ ಬಿಬಿಎಂಪಿ ಜೊತೆ ಚರ್ಚಿಸಿ ಸಿಎಂ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ. ವೆಸ್ಟ್ ಆಫ್ ಕಾರ್ಡ್ ರಸ್ತೆ ಅಥವಾ ಬಳ್ಳಾರಿ ರಸ್ತೆಗೆ ಪುನೀತ್ ಹೆಸರಿಡಲು ಒತ್ತಾಯ ಕೇಳಿ ಬಂದಿದೆ. ಪುನೀತ್ ಹೆಸರಿಡಲು ಪ್ರಮುಖ ಪಾರ್ಕ್, ಕ್ರೀಡಾಂಗಣ, ಮೈದಾನ, ಸರ್ಕಲ್‍ಗಳ ಪಟ್ಟಿಯನ್ನು ಬಿಬಿಎಂಪಿ ಮಾಡಿಕೊಳ್ಳುತ್ತಿದೆ.

  • ಅನ್ನಸಂತರ್ಪಣೆಯೊಂದಿಗೆ `ನಟಸಾರ್ವಭೌಮ’ನಿಗೆ ಅಭಿಮಾನಿಗಳು ಸ್ವಾಗತ

    ಅನ್ನಸಂತರ್ಪಣೆಯೊಂದಿಗೆ `ನಟಸಾರ್ವಭೌಮ’ನಿಗೆ ಅಭಿಮಾನಿಗಳು ಸ್ವಾಗತ

    ಚಿತ್ರದುರ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ನಟಸಾರ್ವಭೌಮ ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ನಟ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘದಿಂದ ಜಿಲ್ಲೆಯ ಬಸವೇಶ್ವರ ಚಿತ್ರ ಮಂದಿರದಲ್ಲಿ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

    ಕೋಟೆನಾಡಿನ ಬಸವೇಶ್ವರ ಚಿತ್ರ ಮಂದಿರದಲ್ಲಿ ತೆರೆಕಂಡಿರೋ ನಟಸಾರ್ವಭೌಮ ಚಿತ್ರ ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಬೆಳ್ಳಂಬೆಳಗ್ಗೆ ಅನ್ನಸಂತರ್ಪಣೆ ಏರ್ಪಡಿಸಿ ಅಭಿಮಾನಿಗಳು ನಟಸಾರ್ವಭೌಮನಿಗೆ ವಿನೂತವಾಗಿ ಸ್ವಾಗತ ಕೋರಿದ್ದಾರೆ. ಮೊದಲ ಶೋಗೆ ಚಿತ್ರಮಂದಿರ ಮುಂದೆ ಅಪ್ಪು ಫ್ಯಾನ್ಸ್ ಕಿಕ್ಕಿರಿದು ಸೇರಿದ್ದಾರೆ. ಅಪ್ಪು ಬೃಹತ್ ಕಟೌಟ್ ಮುಂದೆ ಕುಂಬಳಕಾಯಿ ಒಡೆದು, ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ನಟಸಾರ್ವಭೌಮನನ್ನು ಅಭಿಮಾನಿಗಳು ಭರ್ಜರಿಯಾಗಿ ಬರ ಮಾಡಿಕೊಂಡಿದ್ದಾರೆ.

    ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನಟಸಾರ್ವಭೌಮನಾಗಿ ನೋಡಲು ಬಹು ದಿನಗಳಿಂದ ಕಾತುರದಿಂದ ಕಾದು ಕುಳಿತಿದ್ದರು. ಬೆಳ್ಳಂಬೆಳಗ್ಗೆ 5 ಗಂಟೆಗೆ ಚಿತ್ರಮಂದಿರದ ಬಳಿ ಅಪ್ಪು ಅಭಿಮಾನಿಗಳು ಜಮಾಯಿಸಿದ್ದು, ಈಗಾಗಲೇ 7 ಗಂಟೆಯಿಂದ ಬಸವೇಶ್ವರ ಚಿತ್ರ ಮಂದಿರದಲ್ಲಿ ಮೊದಲ ಶೋ ಆರಂಭವಾಗಿದೆ. ಅಭಿಮಾನಿಗಳು ಚಿತ್ರ ವೀಕ್ಷಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv