Tag: ಅಪಪ್ರಚಾರ

  • ಉಪ್ಪಿನಂಗಡಿಯ ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಅಪಪ್ರಚಾರ, ದೂರು ದಾಖಲು

    ಉಪ್ಪಿನಂಗಡಿಯ ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಅಪಪ್ರಚಾರ, ದೂರು ದಾಖಲು

    ಮಂಗಳೂರು: ದ.ಕ ಜಿಲ್ಲೆಯ ಉಪ್ಪಿನಂಗಡಿಯ ಹಿಂದೂ ಮಾಲೀಕತ್ವದ ಅಂಗಡಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರದ ಸಂದೇಶವೊಂದು ಹರಿದಾಡುತ್ತಿದೆ.

    ಉಪ್ಪಿನಂಗಡಿಯ 32 ಹಿಂದೂ ಅಂಗಡಿಗಳ ಹೆಸರು ಉಲ್ಲೇಖಿಸಿ ಅಪಪ್ರಚಾರ ಮಾಡಲಾಗಿದೆ. ಹಿಂದೂ ವರ್ತಕರ ಬೇಕರಿ, ಮೆಡಿಕಲ್, ಸಲೂನ್, ಜನರಲ್ ಸ್ಟೋರ್‌ಗಳ ಹೆಸರಲ್ಲಿ ಸಂದೇಶ ವೈರಲ್ ಆಗಿದೆ. ನಗರದ ವರ್ತಕರ ಸಂಘವು ನಕಲಿ ಸಂದೇಶ ಪ್ರಕಟಿಸಿದ ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದೆ. ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿಕೆಶಿ

    ಎಲ್ಲಾ ಸಮುದಾಯದವರು ನಮ್ಮ ಗ್ರಾಹಕರು.ಇದನ್ನು ಹಾಳು ಮಾಡುವ ರೀತಿ ಸಂದೇಶ ಕಳುಹಿಸಲಾಗಿದೆ. ಮತೀಯ ಸಾಮರಸ್ಯ ಹಾಳು ಮಾಡುವವರ ವಿರುದ್ಧ ಹಿಂದೂ ವರ್ತಕರ ಸಂಘವು ಕ್ರಮಕ್ಕೆ ಆಗ್ರಹಿಸಿದೆ. ಇದನ್ನೂ ಓದಿ: ಮಾತುಬಾರದ ಬಾಲಕನ ಕೊಂದು ಗೋಣಿ ಚೀಲದಲ್ಲಿ ತುಂಬಿ ಎಸೆದ್ರು

    ದೂರಿನಲ್ಲಿ ಏನಿದೆ?
    ವಾಟ್ಸಪ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಶಾಂತಿ ಭಂಗ ಹಾಗೂ ಮತೀಯ ದ್ವೇಷ ಮೂಡಿಸುವ ರೀತಿಯಲ್ಲಿ ದುಷ್ಕರ್ಮಿಗಳು ಸಂದೇಶವೊಂದನ್ನು ಸೃಷ್ಟಿಸಿಕೊಂಡು ಸಮಾಜದಲ್ಲಿ ದ್ವೇಷ ಮೂಡಿಸುವ ತನ್ಮೂಲಕ ವ್ಯವಹಾರಿಕ ತೊಂದರೆಯೊಡ್ಡುವ ಕೃತ್ಯವನ್ನು ಎಸಗಿರುತ್ತಾರೆ. ಈ ಸಂದೇಶದಲ್ಲಿ ಹಿಂದೂ ವರ್ತಕರ ಒಕ್ಕೂಟ ಉಪ್ಪಿನಂಗಡಿ ಎಂದು ಉಲ್ಲೇಖಿಸಿ ನಮ್ಮ ಅಂಗಡಿಗಳ ಹೆಸರನ್ನು ಸೇರಿದಂತೆ ಒಟ್ಟು 32 ಹಿಂದೂ ಸಮುದಾಯದ ಅಂಗಡಿಗಳ ಹೆಸರನ್ನು ಬಳಸಿ ‘ನಮ್ಮ ಅಂಗಡಿಗಳಿಂದ ಯಾವುದೇ ಸಾಮಗ್ರಿಗಳನ್ನು ಮುಸ್ಲಿಮರಿಗೆ ಕೊಡುವುದಿಲ್ಲ. ನಮಗೆ ಹಿಂದೂ ಸಹೋದರರ ವ್ಯಾಪಾರ ಧಾರಾಳ’ ಎಂಬಿತ್ಯಾದಿ ಮತೀಯ ದ್ವೇಷದ ವಾಕ್ಯಗಳನ್ನು ರಚಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ರೀತಿಯ ಸಂದೇಶ ಕಳುಹಿಸಿ ಮತೀಯ ಸಾಮರಸ್ಯ ಹಾಳು ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು.

  • ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ – ಮನನೊಂದು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ

    ಸಾಲ ವಾಪಸ್ ಕೇಳಿದ್ದಕ್ಕೆ ಅನೈತಿಕ ಸಂಬಂಧದ ಅಪಪ್ರಚಾರ – ಮನನೊಂದು ಮಕ್ಕಳೊಂದಿಗೆ ನಾಲೆಗೆ ಹಾರಿದ ತಾಯಿ

    ಶಿವಮೊಗ್ಗ: ಅಪಪ್ರಚಾರದ ಕಾರಣಕ್ಕೆ ಮನನೊಂದು ಡೆತ್‌ನೋಟ್ ಬರೆದಿಟ್ಟು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಡೇಹಳ್ಳಿಯಲ್ಲಿ ನಡೆದಿದೆ.

    ವೀಣಾ(32), ವರ್ಷ(7), ಹಾಗೂ 1 ವರ್ಷದ ಹೆಣ್ಣು ಮಗು ಮೃತ ದುರ್ದೈವಿಗಳು. ಸಂತೋಷ್ ಎಂಬ ವ್ಯಕ್ತಿಗೆ ವೀಣಾ 8 ಲಕ್ಷ ರೂ. ಸಾಲ ನೀಡಿದ್ದರು. ಸಾಲದ ಹಣವನ್ನು ವೀಣಾ ಸಂತೋಷ್‌ನಿಂದ ವಾಪಾಸ್ ಕೇಳಿದಾಗ ಆತ ವೀಣಾ ವಿರುದ್ಧ ಅನೈತಿಕ ಸಂಬಂಧದ ಬಗ್ಗೆ ಅಪಪ್ರಚಾರ ಮಾಡಿದ್ದಾನೆ. ಇದನ್ನೂ ಓದಿ: ಹಾರೆಯಿಂದ ಹೊಡೆದು ಪತ್ನಿಯ ಕೊಲೆ – ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

    BRIBE

    ಇದರಿಂದ ಮನನೊಂದ ವೀಣಾ ತನ್ನ ಇಬ್ಬರು ಮಕ್ಕಳೊಂದಿಗೆ ಶುಕ್ರವಾರ ಸಿದ್ಧಾಪುರ ಬಳಿಯ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಹೊನ್ನಾಳಿ ತಾಲೂಕಿನ ಯಕ್ಕನಹಳ್ಳಿ ಬಳಿ ವೀಣಾ ಮೃತದೇಹ ಪತ್ತೆಯಾಗಿದೆ. ಚನ್ನಗಿರಿ ತಾಲೂಕಿನ ನಲ್ಲೂರು ಬಳಿ 7 ವರ್ಷದ ಮಗುವಿನ ಮೃತದೇಹವೂ ದೊರಕಿದೆ. 1 ವರ್ಷದ ಮಗುವಿನ ಮೃತದೇಹಕ್ಕೆ ಶೋಧಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಜಪ್ತಿ ಮಾಡುವ ನೆಪದಲ್ಲಿ ಚಿನ್ನಾಭರಣ, ನಗದು ರಾಬರಿ ಮಾಡಿದ್ದ ನಕಲಿ ಪೊಲೀಸ್ ಗ್ಯಾಂಗ್ ಅಂದರ್

    POLICE JEEP

    ಘಟನೆಯ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸಂತೋಷ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.