ವಿಜಯಪುರ: ಜಿಲ್ಲೆಯಲ್ಲಿ ಜೋಡಿ ಕೊಲೆ ಆಗಿವೆ. ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನ ಬರ್ಬರ ಹತ್ಯೆ ಮಾಡಲಾಗಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ.
ಎರಡು ವರ್ಷಗಳ ಹಿಂದೆ ಈರನಗೌಡ ಎಂಬಾತನ ಮೇಲೆ ಇಸಾಕ್ ಖರೇಷಿ ಹಾಗೂ ಸಾಗರ ತೀವ್ರ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದು ಈರಣಗೌಡ ಮೃತಪಟ್ಟಿದ್ದನಂತೆ. ಈ ದ್ವೇಷದ ಕಾರಣ ಇಬ್ಬರ ಕೊಲೆ ನಡೆದಿರೋ ಸಂಶಯ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾರವಾರ | ಮೆಡಿಕಲ್ ಟೆಸ್ಟ್ಗೆ ಕರೆತಂದಿದ್ದ ಆರೋಪಿ ಪರಾರಿ
ಸಂತ್ರಸ್ತ ಮಗುವಿನ ಪೋಷಕರು ಬಿಹಾರ ಮೂಲದವರೆಂದು ತಿಳಿದುಬಂದಿದೆ. ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕಳೆದೊಂದು ವರ್ಷದಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಮಂಡ್ಯ 2ನೇ ಜಿಲ್ಲಾ ಸೆಷನ್ ಕೋರ್ಟ್ (Mandya Sessions Court) ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಶ್ರೀರಂಗಪಟ್ಟಣ (SriRangapatna) ತಾಲ್ಲೂಕಿನ ಬೆಳಗೊಳ ಗ್ರಾಮದ ಶಿವಣ್ಣ (59) ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ. 2023ರ ಡಿ.11 ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ತನ್ನ ಮನೆಯ ಮುಂದೆ ಬಾಲಕಿ ಆಟವಾಡುತ್ತಿದ್ದಾಗ ಆರೋಪಿಯೂ ಬಾಲಕಿಯನ್ನು ಪುಸಲಾಯಿಸಿಕೊಂಡು ಪಕ್ಕದಲ್ಲೇ ಇರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅಮ್ಮನಿಗೆ ಹೇಳಬಾರದೆಂದು ಬೆದರಿಕೆ ಕೂಡ ಹಾಕಿದ್ದ. ಇದನ್ನೂ ಓದಿ: ತಪ್ಪಿದ ಭಾರಿ ಅನಾಹುತ: ಆಯತಪ್ಪಿ ಬಿದ್ದ ನಟಿ
ನಂತರ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕೃಷ್ಣರಾಜ ಸಾಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012ರ ಅಡಿಯಲ್ಲಿ ದೂರು ದಾಖಲಾಗಿತ್ತು. ಅಂದಿನ ಪಿಎಸ್ಐ ಬಸವರಾಜು ಅವರು ಪ್ರಕರಣ ದಾಖಲು ಮಾಡಿಕೊಂಡಿದ್ದರು. ಈ ಹಿಂದೆ ಕೃಷ್ಣರಾಜ ಸಾಗರ ವೃತ್ತ ನಿರೀಕ್ಷಕರಾಗಿದ್ದ ಪುನೀತ್ ಟಿ.ಎಂ. ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪ ಪಟ್ಟಿಯನ್ನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ದರ್ಶನ್ಗೆ ಮಾದರಿಯಾದ ಸಂಜು ಬಸಯ್ಯ – ಪತ್ನಿಗೆ ಅಶ್ಲೀಲ ಮೆಸೇಜ್ ಕಳಿಸಿದವನಿಗೆ ಬುದ್ಧಿ ಹೇಳಿದ ನಟ
ಕೃಷ್ಣರಾಜ ಸಾಗರ ಠಾಣೆಯ ಪಿಎಸ್ಐ ರಮೇಶ್ ಕರಕೀಕಟ್ಟಿ ಹಾಗೂ ಸಿಬ್ಬಂದಿಯವರಾದ ಎಎಸ್ಐ ಸತೀಶ್, ಸಿಬ್ಬಂದಿ ಯಧುರಾಜ್, ರೇಣುಕುಮಾರ್, ಅಶ್ವಿನಿ, ಪುಟ್ಟಲಕ್ಷ್ಮಿ ಅವರು ತನಿಖಾ ತಂಡದಲ್ಲಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ದಿಲೀಪ್ ಕುಮಾರ್ ಶುಕ್ರವಾರ (2025 ಜೂನ್ 11) ಆರೋಪಿಗೆ ಜೀವಿತಾವಧಿ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಕಿರುತೆರೆ ನಟಿ ಶ್ರುತಿಗೆ ಮನೆಯಲ್ಲೇ ಚಾಕು ಇರಿದು ಕೊಲೆಗೆ ಯತ್ನ, ಪತಿ ಅರೆಸ್ಟ್
ವಿಶೇಷ ಸರ್ಕಾರಿ ಅಭಿಯೋಜಕರಾದ ಹೆಬ್ಬಕವಾಡಿ ನಾಗರಾಜು ಅವರು ಸಂತ್ರಸ್ಥರ ಪರ ವಾದ ಮಂಡಿಸಿದ್ದರು. ಕೃಷ್ಣರಾಜ ಸಾಗರ ಪೊಲೀಸ್ ಠಾಣಾ ಅಧಿಕಾರಿಗಳು ಹಾಗೂ ಸಿಬ್ಬಂದಿಯವರ ಕಾರ್ಯಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಳಿಕ ಅದೇ ವೀಡಿಯೊ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಅಪ್ರಾಪ್ತೆಯ ಮೇಲೆ ಮತ್ತೊಮ್ಮೆ ರೇಪ್ ಮಾಡಿದ್ದರು. ಈ ಸಂದರ್ಭದಲ್ಲೂ ಸಹ ದುರುಳರು ವೀಡಿಯೊ ಮಾಡಿಕೊಂಡಿದ್ದರು. ಅತ್ಯಾಚಾರದ ವೀಡಿಯೊ ಇಟ್ಟುಕೊಂಡು, ಈಗ ಮತ್ತೆ ಅಪ್ರಾಪ್ತ ಬಾಲಕಿಯನ್ನು ಬೆದರಿಸುತ್ತಿರುವ ಹಿನ್ನೆಲೆ ಆರೋಪಿಗಳ ವಿರುದ್ಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ಪಂಜಾಬ್-ಮುಂಬೈ ನಡ್ವೆ ಕ್ವಾಲಿಫೈಯರ್-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್ಸಿಬಿ ಗುದ್ದಾಟ!
ವಾರದ ಹಿಂದೆಯಷ್ಟೇ ರೆಸಾರ್ಟ್ ಒಂದರಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಆಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿ ಸೇರಿ ಐದು ಜನರ ಬಂಧನವಾಗಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಲಿಂಗಕಾಮಿ ಗೆಳೆಯನಿಗಾಗಿ ದೊಡ್ಡಮ್ಮನ ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ದತ್ತು ಪುತ್ರನನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ.
ಪ್ರಥಮ್ ಬಂಧಿತ ಆರೋಪಿ. ದತ್ತು ಪಡೆದು ಸಾಕಿದ್ದ ಮಗನಿಂದಲೇ ದೊಡ್ಡಮ್ಮನ ಮನೆಗೆ ಕನ್ನ ಹಾಕಲಾಗಿದೆ. ಹೊಸಕೆರೆಹಳ್ಳಿಯ ಡಾಕ್ಟರ್ ಶಾಂತಿಯವರ ಕುಟುಂಬ ಮುಂಬೈಗೆ ಹೋಗಿದ್ದಾಗ ಚಿನ್ನಾಭರಣ ಕಳ್ಳತನವಾಗಿತ್ತು. ಈ ಬಗ್ಗೆ ಗಿರಿನಗರ ಪೊಲೀಸ್ ಠಾಣೆಗೆ ಡಾಕ್ಟರ್ ಶಾಂತಿ ದೂರು ನೀಡಿದ್ದರು.
ಡಾಕ್ಟರ್ ತಂಗಿ ಮಗ ಬಂದು ಹೋಗಿದ್ದ ಬಗ್ಗೆ ಅನುಮಾನಗೊಂಡ ಪೊಲೀಸರಿಗೆ, ಏಕಾಏಕಿ ಪ್ರಥಮ್ ಅಕೌಂಟ್ಗೆ ಹಣ ಬಂದಿರೋದು ಗೊತ್ತಾಗಿತ್ತು. ವಿಚಾರಣೆ ವೇಳೆ ಆರೋಪಿ ತಾನೇ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದ. ಕಳ್ಳತನವಾದ ಮನೆ ಮಾಲೀಕೆ ಡಾಕ್ಟರ್ ಶಾಂತಿಯ ತಂಗಿ ಮಗನಾಗಿದ್ದ ಪ್ರಥಮ್. ಮಕ್ಕಳು ಇಲ್ಲ ಅಂತ ಪ್ರಥಮ್ನನ್ನ ದತ್ತು ಪಡೆದು ಡಾಕ್ಟರ್ ಶಾಂತಿ ತಂಗಿ ಸಾಕಿದ್ದರು. ಸ್ವಂತ ಮಗನಂತೆ ಚೆನ್ನಾಗಿ ಸಾಕಿ ಬಿಬಿಎ ಸಹ ಓದಿಸಿದ್ದರು.
ಆಗಾಗ ದೊಡ್ಡಮ್ಮನ ಮನೆಗೆ ಹೋಗಿ ಬರುತ್ತಿದ್ದ ಆರೋಪಿ ಪ್ರಥಮ್ ಸಲಿಂಗಕಾಮಿಯಾಗಿದ್ದ. ಪ್ರಥಮ್ ತನ್ನ ಬಾಯ್ಫ್ರೆಂಡ್ಗಾಗಿ ದೊಡ್ಡಮ್ಮನ ಮನೆಯಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಬಂಧಿತ ಆರೋಪಿಯಿಂದ 258 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಆರೋಪಿ ಚೆನ್ನೈನಲ್ಲಿದ್ದ ತನ್ನ ಬಾಯ್ಫ್ರೆಂಡ್ಗಾಗಿ ಕಳ್ಳತನ ಮಾಡಿದ್ದ. ಮೊದಲು ಬ್ಯಾಂಕ್ ಮ್ಯಾನೇಜರ್ ಆಗಿದ್ದ ಆರೋಪಿ, ನಂತರ ಬಾಯ್ಫ್ರೆಂಡ್ಗಾಗಿ ಕೆಲಸ ಬಿಟ್ಟು ಚೆನ್ನೈನಲ್ಲಿ ಕೆಲಸ ಹುಡುಕಿದ್ದ. ಕದ್ದ ಚಿನ್ನ ಮಾರಾಟ ಮಾಡಿ ಹಲವು ಬಾರಿ ವಿಮಾನದಲ್ಲಿ ಓಡಾಡಿದ್ದ ಎನ್ನುವುದು ತನಿಖೆಯಿಂದ ಗೊತ್ತಾಗಿದೆ.
ಕೆಂಚಗಯ್ಯನದೊಡ್ಡಿ ದೊಡ್ಡಿ ನಿವಾಸಿಗಳಾದ ಕಾಂತಿಕುಮಾರ್, ಕಿರಣ್ ಕುಮಾರ್ ಮತ್ತು ಗೋಪಾಲ್ ಜೊತೆ ಓರ್ವ ಬಾಲಾಪರಾಧಿ ಕೂಡ ಅರೆಸ್ಟ್ ಆಗಿದ್ದಾನೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ವಿನೋದ್ ಕುಮಾರ್ ಇನ್ನೂ ಪತ್ತೆಯಾಗಿಲ್ಲ.
ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್ನಲ್ಲಿ ಕುಡಿದ ನಶೆಯಲ್ಲಿದ್ದ ಕಾಂತಿಕುಮಾರ್ ಗ್ಯಾಂಗ್ಗೆ ಸುರೇಶ್ ಕುಡಿದ ನಶೆಯಲ್ಲಿ ಆವಾಜ್ ಹಾಕಿದ್ದ. ಜೋರಾಗಿ ಕಿರುಚಾಡಬೇಡಿ ಎಂದು ಆವಾಜ್ ಹಾಕಿದ್ದಾನೆ. ಅಷ್ಟಕ್ಕೆ ರೊಚ್ಚಿಗೆದ್ದಿದ್ದ ಆರೋಪಿ ಕಾಂತಿಕುಮಾರ್, ‘ನಾನು ಯಾರೂ ಗೊತ್ತಾ? ಕಾಂತ….! ನನ್ನ ಮುಂದೆ ತಲೆಯೆತ್ತಿ ಪ್ರಶ್ನೆ ಮಾಡ್ತಿಯಾ? ನಿನ್ನ ತಲೆ ಎತ್ತಿಬಿಡ್ತೀನಿ’ ಎಂದು ಅವಾಜ್ ಹಾಕಿದ್ದಾನೆ. ರಾತ್ರಿ 10 ಗಂಟೆ ಸುಮಾರಿಗೆ ಕೊಂದು ಮುಗಿಸಿ ಎಸ್ಕೇಪ್ ಕೂಡ ಆಗಿದ್ದರು. ಈಗ ಪೊಲೀಸರ ಅತಿಥಿಯಾಗಿದ್ದಾರೆ. ಇದನ್ನೂ ಓದಿ: Anytime, Anywhere – ಬ್ರಹ್ಮೋಸ್ ಹಾರಿಸಿ ಎಲ್ಲದ್ದಕ್ಕೂ ಸಿದ್ಧ ಎಂದ ನೌಕಾಸೇನೆ
ಮೈಸೂರು: ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮೈಸೂರಿನ ಕೆಸಿ.ಬಡಾವಣೆಯಲ್ಲಿ ನಡೆದಿದೆ.
ಮಾ.5 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆ ನಿವಾಸಿ ಶಕುಂತಲಾ (42) ಕೊಲೆ ಆರೋಪಿ. ಕೊಲೆಯಾದ ಸುಲೋಚನಾ ಪೊಲೀಸ್ ಇಲಾಖೆ ನಿವೃತ್ತ ನೌಕರ ಗಂಗಣ್ಣರ ಪತ್ನಿ.
ಮಾ.5 ರಂದು ಮನೆಗೆ ಬಂದ ಸುಲೋಚನಾರನ್ನು ಉಸಿರುಗಟ್ಟಿಸಿ ಶಕುಂತಲಾ ಕೊಲೆ ಮಾಡಿ ಮೃತದೇಹದ ಮೇಲಿದ್ದ ಚಿನ್ನದ ಸರ ಕಳಚಿ ಕೊಂಡಿದ್ದಳು. ನಂತರ ಪ್ರಜ್ಞೆ ತಪ್ಪಿ ಬಿದ್ದುಹೋದರೆಂದು ಸುತ್ತಲ ಮನೆಯವರನ್ನು ಶಕುಂತಲಾ ನಂಬಿಸಿದ್ದಳು. ನಂತರ ಅನುಮಾನದೊಂದಿಗೆ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಇವರಿಬ್ಬರು ಒಂದೇ ಬೀದಿಯ ನಿವಾಸಿಗಳು.
ಶಕುಂತಲಾ ಕುಟುಂಬ ಅಡುಗೆ ಕೆಲಸ ಮಾಡಿಕೊಂಡಿತ್ತು. ಸಾಲದ ಸುಳಿಯಲ್ಲಿ ಸಿಲುಕಿತ್ತು. ತೀರಿಸಲು ಇಂತಹ ಕೃತ್ಯವೆಸಗಿದ್ದಾಳೆ. ಸುಲೋಚನಾ ಸರ ಕದ್ದು 1.5 ಲಕ್ಷಕ್ಕೆ ಶಕುಂತಲಾ ಗಿರವಿ ಇಟ್ಟಿದ್ದಳು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ: ಪ್ರೀತಿಸುವ ನೆಪದಲ್ಲಿ ಬಡ ಹೆಣ್ಣು ಮಕ್ಕಳನ್ನು ಬುಟ್ಟಿಗೆ ಹಾಕಿಕೊಂಡು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕಾಮುಕನನ್ನು ಹುಬ್ಬಳ್ಳಿ (Hubballi) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶರಾವತಿ ನಗರದ ಕೆಇಬಿ ಲೇಔಟ್ ನಿವಾಸಿ ಅಶ್ಪಾಕ್ ಜೋಗನ್ಕೊಪ್ಪ (38) ಎಂದು ಗುರುತಿಸಲಾಗಿದೆ. ಆತ ಹತ್ತಕ್ಕೂ ಹೆಚ್ಚು ಯುವತಿಯರು, ಮಹಿಳೆಯರು ಹಾಗೂ ಅಪ್ರಾಪ್ತೆಯರ ಜೊತೆ ಪ್ರೀತಿಯ ನಾಟಕವಾಡಿದ್ದಾನೆ. ಅಲ್ಲದೇ ಅವರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ಇಟ್ಟುಕೊಂಡು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.
ಆರೋಪಿ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಜೆರಾಕ್ಸ್ ಮತ್ತು ಮೊಬೈಲ್ ರೀಚಾರ್ಜ್ ಸ್ಟೋರ್ ಇಟ್ಟುಕೊಂಡಿದ್ದ. ಇದೇ ಅಂಗಡಿಗೆ ಬರುವ ಬಡ ಹೆಣ್ಣು ಮಕ್ಕಳನ್ನ ಬಳಸಿಕೊಂಡಿದ್ದಾನೆ. ಹಣದಾಸೆ ಮತ್ತು ಪ್ರೀತಿಸುವ ಆಟವಾಡಿ ಬಡ ಹೆಣ್ಣುಮಕ್ಕಳ ಜೊತೆಗೆ ರಾಸಲೀಲೆ ನಡೆಸಿದ್ದಾನೆ. ಅಲ್ಲದೇ ವಿಡಿಯೋ ಕಾಲ್ನಲ್ಲಿ ಮಹಿಳೆಯರು ಬಟ್ಟೆ ಬಿಚ್ಚಿಸಿ ರೆಕಾರ್ಡ್ ಮಾಡಿಕೊಂಡಿದ್ದಾನೆ.
ಅಪ್ರಾಪ್ತ ಬಾಲಕಿಯೊಬ್ಬಳ ಪೋಷಕರಿಂದ ದುಷ್ಕರ್ಮಿಯ ವಿರುದ್ಧ ದೂರು ದಾಖಲಿಸಿದ್ದಳು. ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ಆರೋಪಿಯ ವಿಕೃತ ಮುಖ ಬಯಲಾಗಿದೆ.
ವಿಜಯಪುರ: ನಗರದಲ್ಲಿ ಖತರ್ನಾಕ್ ಮುಸುಕುಧಾರಿಗಳ ಗ್ಯಾಂಗ್ ದಾಂಧಲೆ ನಡೆಸಿದೆ. ರಾತ್ರೋ ರಾತ್ರಿ ಮನೆಗೆ ನುಗ್ಗಿ ದಾಂಧಲೆ ಸೃಷ್ಟಿಸಿದ ಮುಸುಕುಧಾರಿಗಳು ನಗರದ ಜೈನಾಪೂರ ಲೈಔಟ್ನಲ್ಲಿ ಅಟ್ಟಹಾಸ ಮೆರೆದಿದ್ದಾರೆ. ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಹಲ್ಲೆ ಮಾಡಿ ಬಂಗಾರ ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರ ಬೆನ್ನುಹತ್ತಿದ್ದ ಪೊಲಿಸರು ಗುಂಡಿನ ದಾಳಿ ಮಾಡಿದ್ದಾರೆ.
ಕೈಯ್ಯಲ್ಲಿ ಕೊಡಲಿ, ರಾಡ್, ತಲ್ವಾರ್ ಹಿಡಿದು ಬರ್ತಿರೋ ಮುಸುಕುಧಾರಿ ಗ್ಯಾಂಗ್ ವಿಜಯಪುರ ಜಿಲ್ಲೆಯ ಜನರ ನಿದ್ದೆಗೆಡಿಸಿದೆ. ಮುಸುಕುಧಾರಿಗಳ ಗ್ಯಾಂಗ್ ಜಿಲ್ಲೆಯಲ್ಲಿ ಆಕ್ಟೀವ್ ಆಗಿದ್ದು, ಒಂದು ವಾರದಲ್ಲಿ ಜಿಲ್ಲೆಯ ಮೂರು ಕಡೆ ದರೋಡೆ ನಡೆಸಿದ್ದಾರೆ. ಗುರುವಾರ ತಡರಾತ್ರಿ ನಗರದ ಜೈನಾಪುರ ಬಡಾವಣೆಯಲ್ಲಿ ಸಂತೋಷ ಎಂಬುವರ ಮನೆಯ ಬಾಗಿಲು ಮುರಿದು ನುಗ್ಗಿ ಸಂತೋಷನ ಪತ್ನಿಯ ಬಂಗಾರದ ಮಾಂಗಲ್ಯ ಸರ ಕದ್ದಿದ್ದಾರೆ. ಅಲ್ಲದೇ ಇದನ್ನ ತಡೆಯಲು ಬಂದ ಸಂತೋಷನ ಮೇಲೆ ಚಾಕುವಿನಿಂದ ಮೂರು ಕಡೆ ಚುಚ್ಚಿ ಮೊದಲನೇ ಮಹಡಿಯಿಂದ ಬಿಸಾಕಿ ಪರಾರಿಯಾಗಿದ್ದಾರೆ. ಈ ದರೋಡೆಕೋರರನ್ನ ಬೆನ್ನುಹತ್ತಿದ್ದ ಗೋಲ್ಗುಂಬಜ್ ಪೊಲೀಸರ ಶುಕ್ರವಾರ (ಇಂದು) ಬೆಳಗ್ಗಿನ ಜಾವ ನಗರದ ಹೊರವಲಯದ ಬೆಂಗಳೂರಿನ ಟೋಲ್ ಬಳಿ ದರೋಡೆಕೋರರನ್ನ ಚೇಸ್ ಮಾಡಿದ್ದಾರೆ. ಆಗ ಬೈಕ್ ಮೇಲಿಂದ ತಪ್ಪಿಸಿಕೊಳ್ಳಲು ದರೋಡೆಕೋರರು ಯತ್ನಿಸಿದ್ದು ಪೊಲೀಸರು ಗುಂಡು ಹಾರಿಸಿದ್ದಾರೆ.
ಈ ವೇಳೆ ಒಟ್ಟು ನಾಲ್ವರು ದರೋಡೆಕೋರರು ಇದ್ದರು ಎನ್ನಲಾಗಿದೆ. ಪೊಲೀಸರು 5 ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಓರ್ವ ಆರೋಪಿ ಕಾಲಿಗೆ ಮೂರು ಗುಂಡು ತಗುಲಿದೆ. ಮಧ್ಯಪ್ರದೇಶ ಮೂಲದ ಮಹೇಶ್ ಎಂಬ ಆರೋಪಿಗೆ ಗುಂಡು ತಗುಲಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
ವಿಜಯಪುರದ ಕನಕದಾಸ ಬಡಾವಣೆಯಲ್ಲಿ ಕಳ್ಳತನಕ್ಕೆ ಸ್ಕೆಚ್ ಹಾಕಿದ್ದಾಗ, ಪೊಲೀಸರ ಕಣ್ಣಿಗೆ ಬಿದ್ದಿದ್ದಾರೆ. ಆಗ ಅವರನ್ನ ಪೋಲಿಸರು ಚೇಸ್ ಮಾಡಿದ್ದಾರೆ. ದರೋಡೆಕೋರರು ಬೈಕ್ ಮೇಲೆ ಪರಾರಿಯಾಗಲು ಯತ್ನಿಸಿದ್ದಾಗ ಗುಂಡು ಹಾರಿಸಿದ್ದು, ಎಡಗಾಲಿಗೆ 2 ಗುಂಡು, ಬಲಗಾಲಿಗೆ ಒಂದು ಗುಂಡು ತಗುಲಿದೆ. ಸದ್ಯ ಆರೋಪಿ ಮಹೇಶ್ನ ಆರೋಗ್ಯ ಸ್ಥರವಾಗಿದೆ. ಸ್ಕ್ಯಾನಿಂಗ್ಗೆ ಒಳಪಡಿಸಿದ ನಂತರ ಗುಂಡು ತಗುಲಿದೆಯಾ ಇಲ್ವಾ ಅನ್ನೊದು ಗೊತ್ತಾಗಲಿದೆ ಅಂತಾ ಜಿಲ್ಲಾಸ್ಪತ್ರೆಯ ಸರ್ಜನ್ ಶಿವಾನಂದ ಮಾಸ್ತಿಹೊಳಿ ʻಪಬ್ಲಿಕ್ ಟಿವಿʼಗೆ ಸ್ಪಷ್ಟಪಡಿಸಿದ್ದಾರೆ.
ಇನ್ನೂ ಮೂವರು ದರೋಡೆಕೋರರು ಪರಾರಿಯಾಗಿದ್ದು, ಪೊಲೀಸರು ಶೋಧ ನಡೆಸಿದ್ದಾರೆ. ಈ ನಡುವೆ ಕೆಲವು ಸ್ಥಳೀಯರು ದರೋಡೆಕೋರರನ್ನ ಹಿಡಿಯಲು ಹಕ್ಕು ಕೊಡಿ, ನಾವು ರಾತ್ರಿ ಹೊತ್ತು ಗಸ್ತು ಕಾಯುತ್ತೇವೆ ಅಂತ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಮಂಡ್ಯ: ಕ್ಯಾತನಹಳ್ಳಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮದ್ ಇಬ್ರಾಹಿಂ ಕುರಿತ ಸ್ಫೋಟಕ ವಿಚಾರಗಳು ಒಂದೊಂದೇ ಬೆಳಕಿಗೆ ಬರುತ್ತಿವೆ. ಆನ್ಲೈನ್ ಗೇಮ್ ಸುಳಿಗೆ ಸಿಲುಕಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಇಬ್ರಾಹಿಂ ದರೋಡೆಗಾಗಿ ಹತ್ತು ಹಲವು ಊರು ಸುತ್ತಾಡುತ್ತಿದ್ದ ಸ್ಫೋಟಕ ವಿಚಾರ ತನಿಖೆ ವೇಳೆ ಬಯಲಾಗಿದೆ.
ಕ್ಯಾತನಹಳ್ಳಿಗೆ ಹೋಗುವ ಮುನ್ನ ಪಾತಕಿ ಇಬ್ರಾಹಿಂ ಒಂಟಿ ಮನೆಗಳನ್ನ ಗುರಿಯಾಗಿಸಿ ಹಲವು ಗ್ರಾಮಗಳಲ್ಲಿ ದರೋಡೆಗೆ ಹೊಂಚು ಹಾಕಿದ್ದ. ಇದಕ್ಕೆ ಪುಷ್ಟಿ ನೀಡುವಂತೆ ಆರೋಪಿ ಮರ ಕತ್ತರಿಸುವ ಯಂತ್ರವನ್ನಿಟ್ಟುಕೊಂಡು ಸುತ್ತಾಟ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಪೊಲೀಸರಿಗೆ ಲಭ್ಯವಾಗಿದೆ.
ಸ್ಕೋಟರ್ನಲ್ಲಿ ಮರ ಕತ್ತರಿಸುವ ಯಂತ್ರ ಇಟ್ಟುಕೊಂಡು ಶ್ರೀರಂಗಪಟ್ಟಣದ ಚಂದಗಿರಿಕೊಪ್ಪಲು, ಸೇಬಿನಕುಪ್ಪೆ, ದರಸಗುಪ್ಪೆ ಸೇರಿ ಹತ್ತು ಹಲವು ಗ್ರಾಮಗಳಲ್ಲಿ ಸುತ್ತಾಡಿದ್ದ. ಒಂಟಿ ಮನೆಗಳನ್ನ ಗುರಿಯಾಗಿಸಿಕೊಂಡಿದ್ದ. ಆ ದಿನ ಮಧ್ಯಾಹ್ನ ಮೂರು ಗಂಟೆ ವೇಳೆ ಶ್ರೀರಂಗಪಟ್ಟಣದ ಚಂದಗಿರಿಕೊಪ್ಪಲಿನಲ್ಲಿ, ಸಂಜೆ 6 ಗಂಟೆ ವೇಳೆಗೆ ಕೆನ್ನಾಳು ಗ್ರಾಮಕ್ಕೆ ಎಂಟ್ರಿಕೊಟ್ಟಿದ್ದ. ಆದ್ರೆ ಒಂಟಿ ಮನೆಗಳ ಸಮೀಪ ಜನರ ಸಂಚಾರದಿಂದ ದರೋಡೆ ಯತ್ನ ವಿಫಲವಾಗಿತ್ತು. ಬಳಿಕ ತೋಟದ ಮನೆಗೆ ನುಗ್ಗಿ ರಮೇಶ್ನನ್ನ ಹತ್ಯೆಗೈದ್ದ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ನಿವಾಸಿಯಾಗಿರುವ ಆರೋಪಿ ಇಬ್ರಾಹಿಂ, ಆನ್ಲೈನ್ ಗೇಮ್ ಸುಳಿಗೆ ಸಿಲುಕಿ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ. ಮಾಡಿದ ಸಾಲ ತೀರಿಸಲು ದರೋಡೆಗೆ ಪ್ಲ್ಯಾನ್ ಮಾಡಿದ್ದ. ದರೋಡೆಗಾಗಿ ಮರ ಕತ್ತರಿಸುವ ಯಂತ್ರದೊಂದಿಗೆ ಮನೆಯೊಂದಕ್ಕೆ ಬಂದಿದ್ದ. ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನಕ್ಕಿಳಿದಿದ್ದ.
ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.