Tag: ಅಪರಿಚಿತ ವ್ಯಕ್ತಿ

  • ಐ ಲವ್ ಯೂ, ಐ ಮಿಸ್ ಯೂ – 2.5 ಕಿ.ಮೀ ರಸ್ತೆಯುದ್ದಕ್ಕೂ ಬರೆದ ಪಾಗಲ್ ಪ್ರೇಮಿ

    ಐ ಲವ್ ಯೂ, ಐ ಮಿಸ್ ಯೂ – 2.5 ಕಿ.ಮೀ ರಸ್ತೆಯುದ್ದಕ್ಕೂ ಬರೆದ ಪಾಗಲ್ ಪ್ರೇಮಿ

    ಮುಂಬೈ: ಸಾಮಾನ್ಯವಾಗಿ ಪ್ರೀತಿ ಮಾಡುವವರು ತಮ್ಮ ಸಂಗಾತಿಯನ್ನು ಆಕರ್ಷಿಸಲು ಸರ್ ಪ್ರೈಸ್‍ಗಳನ್ನು ನೀಡುವುದು, ಗಿಫ್ಟ್ ನೀಡುವುದು ಹೀಗೆ ಹಲವಾರು ರೀತಿಯ ಸರ್ಕಸ್‍ಗಳನ್ನು ಮಾಡುತ್ತಾರೆ. ಆದರೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ವ್ಯಕ್ತಿಯೋರ್ವ ತನ್ನ ಭಾವನೆಗಳನ್ನು ಗೆಳತಿ ಮುಂದೆ ವಿಭಿನ್ನ ಶೈಲಿಯಲ್ಲಿ ವ್ಯಕ್ತಪಡಿಸಿದ್ದಾನೆ.

    ಕೊಲ್ಹಾಪುರದ ಶಿರೋಲ್ ತಹಸಿಲ್‍ನ ಧರಂಗುಟ್ಟಿಯಲ್ಲಿ ವ್ಯಕ್ತಿಯೋರ್ವ ಸಿನಿಮಾ ಮಾದರಿ 2.5 ಕಿ.ಮೀ ವಿಸ್ತಾರದ ಹಳ್ಳಿಯ ಮುಖ್ಯ ರಸ್ತೆಯುದ್ದಕ್ಕೂ ಪೇಯಿಂಟ್‍ನಲ್ಲಿ ‘ಐ ಲವ್ ಯೂ’ ಹಾಗೂ ‘ಐ ಮಿಸ್ ಯೂ’ ಎಂದು ಬರೆದಿದ್ದಾನೆ. ಅಲ್ಲದೆ ‘ಐ ಮಿಸ್ ಯೂ’ ಜೀವನದೊಂದಿಗೆ, ಜೀವನದ ನಂತರವೂ ಎಂಬ ಸಂದೇಶವೊಂದನ್ನು ಬರೆದಿದ್ದಾನೆ.

    ಈ ಸಂದೇಶವನ್ನು ಬಿಳಿಯ ಆಯಿಲ್ ಪೇಯಿಂಟ್‍ನಲ್ಲಿ ಜೈಸಿಂಗ್‍ಪುರದಿಂದ ಧರಂಗುಟ್ಟಿದ 2.5ಕಿ.ಮೀ ಮಾರ್ಗದವರೆಗೂ ಬರೆಯಲಾಗಿದೆ. ಘಟನೆ ಕುರಿತಂತೆ ಗ್ರಾಮಸ್ಥರು ಮುಖ್ಯ ರಸ್ತೆಯಲ್ಲಿ ಹಿಂದೆ ಎಂದೂ ಕಾಣಿಸದ ಈ ಬರಹಗಳನ್ನು ಬರೆದಿರುವ ಪಾಗಲ್ ಪ್ರೇಮಿ ಯಾರಿರಬಹುದು ಎಂದು ಅಚ್ಚರಿಗೊಂಡಿದ್ದಾರೆ. ಜೊತೆಗೆ ಈ ಕಿಡಿಗೇಡಿ ಕೃತ್ಯದ ಹಿಂದೆ ಗ್ರಾಮದ ಕೆಲವು ಯುವಕರು ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

  • ಮಗಳ ಮುಂದೆಯೇ ಮಹಿಳೆಗೆ ಕತ್ತರಿಯಿಂದ ಇರಿದು ಕೊಂದ ಪ್ರಿಯಕರ!

    ಮಗಳ ಮುಂದೆಯೇ ಮಹಿಳೆಗೆ ಕತ್ತರಿಯಿಂದ ಇರಿದು ಕೊಂದ ಪ್ರಿಯಕರ!

    – ಪ್ರಿಯಕರನನ್ನು ಭೇಟಿಯಾಗಲು ಬಂದಿದ್ದ ಮಹಿಳೆ
    – ತೀವ್ರ ರಕ್ತಸ್ರಾವವಾಗಿ ಮಗಳ ಎದುರೇ ಉಸಿರು ನಿಲ್ಲಿಸಿದ್ಳು

    ಇಂದೋರ್: ಇಂದಿನ ಕಾಲದ ಯುವಕ-ಯುವತಿಯರು ಸೋಶಿಯಲ್ ಮೀಡಿಯಾಗೆ ಫುಲ್ ಅಡಿಕ್ಟ್ ಆಗಿ ಹೋಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರ ಕೈನಲ್ಲೂ ಒಂದಲ್ಲ ಒಂದು ಮೊಬೈಲ್ ಇದ್ದೇ ಇರುತ್ತದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾಗುವ ಅಪರಿಚಿತರೊಂದಿಗೆ ಚಾಟಿಂಗ್, ಡೇಟಿಂಗ್ ಎಂದು ಲೋಕವನ್ನೇ ಮರೆತು ಹೋಗಿರುತ್ತಾರೆ. ಹೀಗೆ ಆನ್‍ಲೈನ್ ನಲ್ಲಿ ಶುರುವಾದ ಪ್ರೀತಿಯೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

    ಪ್ರಿಯಾ ಅಗರ್‍ವಾಲ್(26) ಎಂಬ ಮಹಿಳೆಯೊಬ್ಬಳು ಪತಿ ಮತ್ತು ಮುದ್ದಾದ ಮಗಳೊಂದಿಗೆ ಇಂದೋರ್ ನಲ್ಲಿ ನೆಲೆಸಿದ್ದಳು. ಆದರೆ ಪ್ರಿಯಾ ಅಗರ್‍ವಾಲ್‍ಗೆ ಆನ್‍ಲೈನ್ ಮೂಲಕ ಕಳೆದ ವರ್ಷ ಸೌರಭ್ ಎಂಬ ವ್ಯಕ್ತಿ ಪರಿಚಯವಾಗಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆಯಿತು. ಹೀಗೆ ಚಾಟ್ ಮಾಡುತ್ತಾ, ಮಾಡುತ್ತಾ ಒಬ್ಬರಿಗೊಬ್ಬರು ಬಹಳ ಆತ್ಮೀಯರಾದರು. ಇತ್ತೀಚೆಗೆ ಪ್ರಿಯಾ ಸೌರಭ್ ಜೊತೆ ಮಾತನಾಡುವುದನ್ನು ಕಡಿಮೆ ಮಾಡಿದ್ದಾಳೆ. ಇದರಿಂದ ಕೋಪಗೊಂಡ ಸೌರಭ್, ಆಕೆಯನ್ನು ಭೇಟಿ ಮಾಡುವಂತೆ ಕರೆಸಿಕೊಂಡಿದ್ದಾನೆ.

    ಅಂತೆಯೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಪ್ರಿಯಾ, ಆತನನ್ನು ಭೇಟಿ ಮಾಡಲು ಮಗಳೊಂದಿಗೆ ಗ್ಯಾನಶೀಲ ಸೂಪರ್ ಸಿಟಿ ಬಳಿ ಇರುವ ಖಾಲಿ ಜಾಗಕ್ಕೆ ಬಂದಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ಜಗಳ ಮಾಡುತ್ತಾ ವಿಕೋಪಕ್ಕೆ ತಿರುಗಿ ಸೌರಭ್ ತನ್ನ ಬಳಿ ಇದ್ದ ಕತ್ತರಿಯಿಂದ ಆಕೆಯ ಮೇಲೆ ಎರಡು ಬಾರಿ ಚುಚ್ಚಿದ್ದಾನೆ. ಪರಿಣಾಮ ಮುಖ ಮತ್ತು ಕತ್ತಿಗೆ ಇರಿದ ಪರಿಣಾಮ ತೀವ್ರವಾಗಿ ಗಾಯಗೊಂಡ ಪ್ರಿಯಾಗೆ ರಕ್ತ ಹರಿಯಲು ಆರಂಭಿಸಿದೆ. ಮಗಳ ಮುಂದೆ ಉಸಿರಾಡಲು ಕೂಡ ಆಗದೇ ಪ್ರಿಯಾ ಸಮೀಪದಲ್ಲಿದ್ದ ಅಂಗಡಿ ಮುಂದೆ ಕುಸಿದಿದ್ದಾಳೆ. ಆದರೂ ಸೌರಭ್ ಇದಕ್ಕೂ ತನಗೂ ಸಂಬಂಧವೇ ಇಲ್ಲ ಎಂಬಂತೆ ಸ್ಕೂಟರ್ ಹತ್ತಿ ಆರಾಮವಾಗಿ ಸ್ಥಳದಿಂದ ಹೋಗುತ್ತಾನೆ. ಇನ್ನೂ ಈ ವೀಡಿಯೋ ರಸ್ತೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

  • ಸುಟ್ಟು ಕರಕಲಾದ ಐಷರಾಮಿ ಕಾರಿನಲ್ಲಿ ಮೃತದೇಹ – ಸಜೀವ ದಹನದ ಶಂಕೆ

    ಸುಟ್ಟು ಕರಕಲಾದ ಐಷರಾಮಿ ಕಾರಿನಲ್ಲಿ ಮೃತದೇಹ – ಸಜೀವ ದಹನದ ಶಂಕೆ

    ಚಿಕ್ಕಬಳ್ಳಾಪುರ: ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಐಷಾರಾಮಿ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೇತನಾಯಕನಹಳ್ಳಿ ಬಳಿ ನಡೆದಿದೆ.

    ಚಿಂತಾಮಣಿ-ದಿಬ್ಬೂರಹಳ್ಳಿ ಮಾರ್ಗದ ಕೇತನಾಯಕನಹಳ್ಳಿ ಬಳಿಯ ಮುಖ್ಯ ರಸ್ತೆಯ ಬದಿಯ ನೀಲಗಿರಿ ತೋಪಿನಲ್ಲಿ ಸುಟ್ಟು ಕರಕಲಾದ ಬ್ರಿಜಾ ಕಾರು ಪತ್ತೆಯಾಗಿದೆ. ಕಾರಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಸಹ ಪತ್ತೆಯಾಗಿದೆ.

    ಸುಟ್ಟು ಕರಕಲಾದ ಕಾರು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತನೀರೀಕ್ಷಕ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟು ಕರಕಲಾದ ಕಾರು ಬ್ರಿಜಾ ಕಾರಾಗಿದ್ದು, ಕಾರಿನ ನಂಬರ್ ಸಹ ಸಂಪೂರ್ಣ ಸುಟ್ಟು ಹೋಗಿದೆ. ಹೀಗಾಗಿ ಕಾರು ಯಾರದ್ದು, ಮೃತಪಟ್ಟವರು ಯಾರು ಎಂಬುದು ತಿಳಿದುಬಂದಿಲ್ಲ. ಸದ್ಯ ಇದು ಸಜೀವದಹನವೋ ಅಥವಾ ಯಾರಾದರೂ ಕೊಲೆ ಮಾಡಿ ಕಾರು ಸಮೇತ ವ್ಯಕ್ತಿಯನ್ನು ಸುಟ್ಟು ಹಾಕಿದರೋ ಎಂಬ ಅನುಮಾನ ಮೂಡಿದೆ.

  • ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿದ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ

    ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿದ ಮಹಿಳೆ ಮೇಲೆ ಗುಂಡು ಹಾರಿಸಿದ ವ್ಯಕ್ತಿ

    ಲಕ್ನೋ: ಡ್ಯಾನ್ಸ್ ಮಾಡುವುದನ್ನು ನಿಲ್ಲಿಸಿದ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಘಟನೆ ಡಿಸೆಂಬರ್ 1ರಂದು ಉತ್ತರ ಪ್ರದೇಶದ ಚಿತ್ರಕೂಟ್‍ನಲ್ಲಿ ನಡದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಈ ಘಟನೆಯ ವಿಡಿಯೋ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಒಂದು ನಿಮಿಷದ ವಿಡಿಯೋದಲ್ಲಿ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮಹಿಳೆ ಡ್ಯಾನ್ಸ್ ಮಾಡಿ ನಿಲ್ಲಿಸಿದ ತಕ್ಷಣ ಗುಂಡು ಹಾರಿಸುತ್ತೇನೆ ಎಂದು ಹೇಳಿದ್ದಾನೆ.

    ಈ ಸಂದರ್ಭದಲ್ಲಿ ಆರೋಪಿ ಜೊತೆ ಮತ್ತೊಬ್ಬ ವ್ಯಕ್ತಿ, ಅಣ್ಣ ನೀನು ಈಗ ಗುಂಡು ಹಾರಿಸಲೇ ಬೇಕು ಎಂದು ಹೇಳಿದ್ದಾನೆ. ಈ ವೇಳೆ ಗುಂಡು ಹಾರಿ ಮಹಿಳೆಯ ಮುಖಕ್ಕೆ ತಾಗಿದೆ. ತಕ್ಷಣ ಎಲ್ಲರೂ ಆಘಾತಕ್ಕೆ ಒಳಗಾದರು. ಮಹಿಳೆಯ ಮುಖಕ್ಕೆ ಗುಂಡು ಬಿದ್ದಿದೆ.

    ಡಿಸೆಂಬರ್ 1ರಂದು ಈ ವಿಡಿಯೋ ಸೆರೆ ಹಿಡಿಯಲಾಗಿದ್ದು, ಮಹಿಳೆ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಳು. ಗ್ರಾಮದ ಮುಖ್ಯಸ್ಥರ ಕುಟುಂಬದ ಸದಸ್ಯರೊಬ್ಬರು ಮಹಿಳೆಗೆ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಅಪರಿಚಿತ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಪೊಲೀಸ್ ಅಧಿಕಾರಿ ಅಂಕಿತ್ ಮಿಥಲ್, ನಾವು ಆರೋಪಿಯನ್ನು ಬಂಧಿಸಲು ಪ್ರಯತ್ನ ಮಾಡುತ್ತಿದ್ದೇವೆ. ಆರೋಪಿಯನ್ನು ನ್ಯಾಯಾಲಯಕ್ಕೆ ತರಲು ಎಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಕಾನ್ಪುರ ಆಸ್ಪತ್ರೆಯಲ್ಲಿ ಮಹಿಳೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆಕೆಯ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ ಎಂದು ತಿಳಿಸಿದರು.

  • ನಡುರಸ್ತೆಯಲ್ಲಿ ಲಾಂಗ್ ಹಿಡಿದು ಓಡಾಡಿದ ಅಪರಿಚಿತ – ಆತಂಕದಲ್ಲಿ ಜನರು

    ನಡುರಸ್ತೆಯಲ್ಲಿ ಲಾಂಗ್ ಹಿಡಿದು ಓಡಾಡಿದ ಅಪರಿಚಿತ – ಆತಂಕದಲ್ಲಿ ಜನರು

    ಚಿಕ್ಕಮಗಳೂರು: ಅಪರಿಚಿತ ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಲಾಂಗ್ ಹಿಡಿದು ಕೆಲ ಹೊತ್ತು ಜನರಿಗೆ ಆತಂಕ ಹುಟ್ಟಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದಿದೆ.

    ಅಪರಿಚಿತ ವ್ಯಕ್ತಿ ಕೊಪ್ಪ ಬಸ್ ನಿಲ್ದಾಣ ಹಾಗೂ ಮುಖ್ಯ ರಸ್ತೆಯಲ್ಲಿ ಓಡಾಡಿದ್ದು, ಲಾಂಗ್ ಹಿಡಿದು ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

    ಪೊಲೀಸರು ಕೊಪ್ಪ ಪಟ್ಟಣದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೂ ಸಹ ಆ ಅಪರಿಚಿತ ವ್ಯಕ್ತಿ ಪತ್ತೆ ಆಗಲಿಲ್ಲ. ಲಾಂಗ್ ಹಿಡಿದು ಓಡಾಡಿದ ನಂತರ ಆ ವ್ಯಕ್ತಿ ನಾಪತ್ತೆಯಾಗಿದ್ದಾನೆ. ಹೀಗಾಗಿ ಪೊಲೀಸರು ಫೋಟೋ ಆಧರಿಸಿ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಸೋಮವಾರ ಸಂಜೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಬೆಂಗಳೂರಲ್ಲಿ ಅಪರಿಚಿತರಿಂದ ಗುಂಡಿನ ದಾಳಿ

    ಬೆಂಗಳೂರಲ್ಲಿ ಅಪರಿಚಿತರಿಂದ ಗುಂಡಿನ ದಾಳಿ

    ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ.

    ಸೈಯದ್ ಝುಬೇರ್ ದಾಳಿಗೊಳಗಾದ ವ್ಯಕ್ತಿ. ನಗರದ ಔಟರ್ ರಿಂಗ್ ರಸ್ತೆಯ ಎಚ್‍ಬಿಆರ್ ಲೇಔಟ್‍ನಲ್ಲಿ ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಸೈಯದ್ ಝುಬೇರ್ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ.

    ದುಷ್ಕರ್ಮಿಗಳು ತಮ್ಮ ಕೈಯಲ್ಲಿದ್ದ ಬ್ಯಾಗಿನಿಂದ ಪಿಸ್ತೂಲ್ ತೆಗೆದು ಝುಬೇರ್ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ದಾಳಿ ಮಾಡಿದವರು ಹೆಲ್ಮೆಟ್ ಹಾಕಿಕೊಂಡು ಬಂದಿದ್ದರು. ಇತ್ತ ಗುಂಡೇಟು ತಿಂದ ಝುಬೇರ್ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನಾ ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಮಹಿಳೆಗೆ ಚಾಕು ಇರಿತ!

    ತಡರಾತ್ರಿ ಏಕಾಏಕಿ ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯಿಂದ ಮಹಿಳೆಗೆ ಚಾಕು ಇರಿತ!

    ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಚಾಕು ಇರಿದ ಘಟನೆಯೊಂದು ನಗರದ ಕೆಆರ್ ಪುರಂನ ಪೈ ಲೇಔಟ್ ನಲ್ಲಿ ನಡೆದಿದೆ.

    ಲುಮೀನ (35) ಹಲ್ಲೆಗೊಳಗಾದ ಮಹಿಳೆ. ಮಂಗಳವಾರ ತಡರಾತ್ರಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ, ಏಕಾಏಕಿ ಮಹಿಳೆಯಿದ್ದ ಮನೆಗೆ ನುಗ್ಗಿ ಆಕೆಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾನೆ.

    ಘಟನೆಯಿಂದ ಗಂಭೀರ ಗಾಯಗೊಂಡ ಲುಮೀನ ಅವರನ್ನು ಕೂಡಲೇ ಸ್ಥಳೀಯರು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

    ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಅಪರಿಚಿತ ಶವ ಪತ್ತೆ

    ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಅಪರಿಚಿತ ಶವ ಪತ್ತೆ

    ಚಾಮರಾಜನಗರ: ದೇವಸ್ಥಾನದ ಆವರಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಪತ್ತೆಯಾಗಿದೆ.

    ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಮಲೆ ಮಹದೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ರಾತ್ರಿಯಿಂದಲೂ ಅಪರಿಚಿತ ಶವ ಬಿದ್ದಿದರೂ ಅಧಿಕಾರಿಗಳು ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

    ದೇವಸ್ಥಾನದ ಆವರಣದಲ್ಲಿ ಶವವನ್ನು ನೋಡುತ್ತಿರುವ ಭಕ್ತರು ಇದೀಗ ಗಾಬರಿಯಾಗುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗೆ ತಿಳಿಸಿದರೂ ಸಹ ಶವವನ್ನು ಸ್ಥಳಾಂತರ ಮಾಡುವ ಕೆಲಸಕ್ಕೆ ಮಾತ್ರ ಮುಂದಾಗುತ್ತಿಲ್ಲ. ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಮುಂದೆಯೇ ಈ ಘಟನೆ ಜರುಗಿದ್ದರೂ ಸಹ ಅಧಿಕಾರಿಗಳು ಈ ಬಗ್ಗೆ ಕ್ಯಾರೆ ಎನ್ನುತ್ತಿಲ್ಲ.

    ಕಳೆದ 3 ತಿಂಗಳ ಹಿಂದೆಯೂ ಶವ ಪತ್ತೆಯಾಗಿತ್ತು. ಆ ಸಂದರ್ಭದಲ್ಲೂ ಅಧಿಕಾರಿಗಳು ತಲೆ ಕೆಡಿಸಿಕೊಂಡಿರಲಿಲ್ಲ.

  • ನಾಲೆಯಲ್ಲಿ ತೇಲಿ ಬಂತು ಕೈಕಾಲು ಕಟ್ಟಿ ಎಸೆದ ಮೃತದೇಹ

    ನಾಲೆಯಲ್ಲಿ ತೇಲಿ ಬಂತು ಕೈಕಾಲು ಕಟ್ಟಿ ಎಸೆದ ಮೃತದೇಹ

    ಮಂಡ್ಯ: ಜಿಲ್ಲೆಯ ಪಾಂಡವಪುರದ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ.

    ಪಟ್ಟಣದಲ್ಲಿ ಹರಿದು ಹೋಗುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಈ ಅಪರಿಚಿತ ವ್ಯಕ್ತಿಯ ಶವ ತೇಲಿ ಬಂದಿದೆ. ಸುಮಾರು 42 ವರ್ಷದ ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.