Tag: ಅಪರ್ಣಾ ಬಾಲಮುರಳಿ

  • ಅಪರ್ಣಾ ಬಾಲಮುರಳಿ ಜೊತೆ ರಾಜ್ ಬಿ ಶೆಟ್ಟಿ ಮತ್ತೊಂದು ಮಲಯಾಳಂ ಸಿನಿಮಾ

    ಅಪರ್ಣಾ ಬಾಲಮುರಳಿ ಜೊತೆ ರಾಜ್ ಬಿ ಶೆಟ್ಟಿ ಮತ್ತೊಂದು ಮಲಯಾಳಂ ಸಿನಿಮಾ

    ನ್ನಡದ ನಟ ರಾಜ್ ಬಿ ಶೆಟ್ಟಿ (Raj B Shetty) ಅವರು ಮಮ್ಮುಟ್ಟಿಗೆ ವಿಲನ್ ಆಗಿ ನಟಿಸಿ ಗೆದ್ಮೇಲೆ ಇದೀಗ ಮತ್ತೊಂದು ಮಲಯಾಳಂ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ (Aparna Balamurali) ಜೊತೆ ‘ರುಧಿರಂ’ (Rudhiram) ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ.

    ಬಹುಭಾಷೆಗಳಲ್ಲಿ ಮೂಡಿ ಬರಲಿರುವ ‘ರುಧಿರಂ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜೇನು ಸಾಕಾಣಿಕೆ ವ್ಯಕ್ತಿಯಾಗಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅದಷ್ಟೇ ಅಲ್ಲ, ಹಲವು ಶೇಡ್‌ಗಳಲ್ಲಿ ನಟ ಕಾಣಿಸಿಕೊಂಡಿದ್ದು, ಚಿತ್ರದಲ್ಲಿ ಹೀರೋನಾ? ವಿಲನ್ ಪಾತ್ರನಾ? ಎಂಬ ಕುತೂಹೂಲ ನೋಡುಗರಿಗೆ ಮೂಡಿದೆ.

     

    View this post on Instagram

     

    A post shared by Rudhiram (@rudhiramthemovie)

    ಇಡೀ ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ, ಅಪರ್ಣಾ ಮತ್ತು ಒಂದು ನಾಯಿ ಮಾತ್ರ ತೋರಿಸಲಾಗಿದೆ. ಅಲ್ಲಲ್ಲಿ ರಕ್ತ, ಕೆಲವು ಆಯುಧಗಳು, ಬಂದೂಕುಗಳು ಸಹ ಕಾಣಿಸಿಕೊಳ್ಳುತ್ತದೆ. ಇದೊಂದು ಪಕ್ಕಾ ಥ್ರಿಲ್ಲರ್ ಸಿನಿಮಾ ಆಗಿದೆ. ಇನ್ನೂ ‘ರುಧಿರಂ’ ಚಿತ್ರವನ್ನು ಜಿಶೋ ಲೋನ್ ಆಂಟನಿ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ರಿಲೀಸ್ ಆಗಲಿದೆ. ಇದನ್ನೂ ಓದಿ:ರಾಷ್ಟ್ರ ಪ್ರಶಸ್ತಿ ವಿಜೇತ ಸಿನಿಮಾ ನಿರ್ಮಾಪಕ ಅರುಣ್ ರೈ ವಿರುದ್ಧ ಎಫ್‌ಐಆರ್

    ಇನ್ನೂ ‘ಟೋಬಿ’ ನಟ ರಾಜ್ ಬಿ ಶೆಟ್ಟಿಗೆ ಬಾಲಿವುಡ್‌ನಿಂದಲೂ ಬುಲಾವ್ ಬಂದಿದೆ. ನಿರ್ದೇಶಕ ಅನುರಾಗ್ ಕಶ್ಯಪ್ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

  • Hombale Films ನಿರ್ಮಾಣದ  ‘ಧೂಮಂ’ ಫಸ್ಟ್ ಲುಕ್ ಔಟ್

    Hombale Films ನಿರ್ಮಾಣದ ‘ಧೂಮಂ’ ಫಸ್ಟ್ ಲುಕ್ ಔಟ್

    ಲೂಸಿಯಾ ಖ್ಯಾತಿಯ ನಿರ್ದೇಶಕ ಪವನ್ ಕುಮಾರ್- ಫಹಾದ್ ಫಾಸಿಲ್ ಕಾಂಬಿನೇಷನ್ ‘ಧೂಮಂʼ ಸಿನಿಮಾ ಫಸ್ಟ್ ಲುಕ್ ಇದೀಗ ಹೊಂಬಾಳೆ ಫಿಲ್ಮ್ಸ್ (Hombale Films) ರಿವೀಲ್ ಮಾಡಿದೆ. ಪೋಸ್ಟರ್ ಲುಕ್‌ನಿಂದ ‘ಧೂಮಂ’ ಸಿನಿಮಾ ಗಮನ ಸೆಳೆಯುತ್ತಿದೆ.

    ಪ್ರತಿಷ್ಠಿತ ಹೊಂಬಾಳೆ ಫಿಲ್ಮ್ಸ್‌ನಿರ್ಮಾಣದ ಕೆಜಿಎಫ್. ಕೆಜಿಎಫ್ 2, ಕಾಂತಾರ ಸಿನಿಮಾ ಸೇರಿದಂತೆ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವ ಮೂಲಕ ಸದ್ದು ಮಾಡ್ತಿದೆ. ಇದೀಗ ಮೊದಲ ಬಾರಿಗೆ ಮಲಯಾಳಂ ಚಿತ್ರ ‘ಧೂಮಂ’ (Dhoomam) ಸಿನಿಮಾಗೆ ಸಾಥ್ ನೀಡಿದೆ. ಈ ಚಿತ್ರವನ್ನ ಕನ್ನಡದ ಪ್ರತಿಭಾನ್ವಿತ ನಿರ್ದೇಶಕ ಪವನ್‌ ಕುಮಾರ್ (Pawan Kumar) ಆ್ಯಕ್ಷನ್ ಕಟ್ ಹೇಳಿದ್ದಾರೆ.

    ಫಹಾದ್ ಫಾಸಿಲ್ – ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ (Aparna Balamurali) ನಟನೆಯ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ಏ.17ರಂದು ರಿವೀಲ್ ಆಗಿದೆ. ಡಿಫರೆಂಟ್ ಕಂಟೆಂಟ್‌ನಲ್ಲಿ ಸಿನಿಮಾ ಮೂಡಿ ಬಂದಿದೆ. ಮಲಯಾಳಂ ಸೇರಿದಂತೆ ಕನ್ನಡ, ತೆಲುಗು, ತಮಿಳು ಭಾಷೆಯಲ್ಲೂ ಚಿತ್ರ ಮೂಡಿ ಬಂದಿದೆ. ಇದನ್ನೂ ಓದಿ:ಬಿರುಕಿನ ಸಂಬಂಧಕ್ಕೆ ‘ಮಾವು-ಬೇವು’ ಸಿನಿಮಾ ಅಮೃತ ದಾರ

     

    View this post on Instagram

     

    A post shared by Hombale Films (@hombalefilms)

    ಪೋಸ್ಟರ್ ಫಸ್ಟ್ ಲುಕ್‌ನಲ್ಲಿ ನಟ ಫಹಾದ್, ಭಿನ್ನ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಲುಕ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬೆಂಕಿಯಿಲ್ಲದೇ ಹೊಗೆ ಇಲ್ಲ, ಇಲ್ಲಿ ಮೊದಲ ಕಿಡಿ ಎಂದು ಅಡಿಬರಹದೊಂದಿಗೆ ಚಿತ್ರದ ಲುಕ್ ರಿವೀಲ್ ಮಾಡಲಾಗಿದೆ.

    ಪವನ್ ಕುಮಾರ್ ಕೂಡ ವಿಭಿನ್ನ ಕಥೆಯನ್ನ ಫಹಾದ್- ಅಪರ್ಣಾ ಜೋಡಿಯೊಂದಿಗೆ ತೆರೆಯ ಮೇಲೆ ತೋರಿಸಲು ಹೊರಟಿದ್ದಾರೆ. ‘ಧೂಮಂʼ ಸಿನಿಮಾ ತೆರೆಯ ಮೇಲೆ ಅದೆಷ್ಟರ ಮಟ್ಟಿಗೆ ಕಮಾಲ್ ಮಾಡಲಿದೆ ಎಂಬುದನ್ನ ಕಾದುನೋಡಬೇಕಿದೆ.

  • ನಾಳೆ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ :  ಹೊಂಬಾಳೆ ಫಿಲ್ಮ್ಸ್

    ನಾಳೆ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಹೊಂಬಾಳೆ ಫಿಲ್ಮ್ಸ್

    ಲೂಸಿಯಾ ಪವನ್ (Lucia Pawan) ನಿರ್ದೇಶನದ ಧೂಮಂ (Dhoomam) ಸಿನಿಮಾದ ಫಸ್ಟ್ ಲುಕ್ (First Look) ಅನ್ನು ನಾಳೆ ಬೆಳಗ್ಗೆ 10.45ಕ್ಕೆ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಈ ಕುರಿತು ಸಂಸ್ಥೆಯು ಸೋಷಿಯಲ್ ಮೀಡಿಯಾದಲ್ಲಿ ವಿವರ ಹಂಚಿಕೊಂಡಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಪವನ್ ಇದೇ ಮೊದಲ ಬಾರಿಗೆ ಆ ಭಾಷೆಯಲ್ಲಿ ಚಿತ್ರ ಮಾಡಿದ್ದಾರೆ. ಈ ಪೋಸ್ಟರ್ ಪೋಸ್ಟ್ ಮಾಡಿದ ಬೆನ್ನಲ್ಲೇ ಸಲಾರ್ ಸಿನಿಮಾದ ಅಪ್ ಡೇಟ್ ನೀಡಿ ಎಂದು ಅಭಿಮಾನಿಗಳು ಕೇಳಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್ (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ  (Aparna Balamurali)ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ.

    ಧೂಮಂ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಹೊಂಬಾಳೆ ಸಂಸ್ಥೆ (Hombale Films), ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಬರಲಿದೆ ಎಂದಿದೆ. ಕ್ರಮವಾಗಿ ಮಲಯಾಳಂ, ಕನ್ನಡ, ತಮಿಳು ತೆಲುಗು ಭಾಷೆಯ ಹೆಸರು ಹಾಕಿರುವುದರಿಂದ ಮೂಲ ಮಲಯಾಳಂನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕನ್ನಡ ಮತ್ತು ಇತರ ಭಾಷೆಗೆ ಸಿನಿಮಾವನ್ನು ಡಬ್ ಮಾಡುತ್ತಾರಾ ಕಾದು ನೋಡಬೇಕು.

  • ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ಮಲಯಾಳಂ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾದ ರಾಜ್ ಬಿ ಶೆಟ್ಟಿ

    ನ್ನಡದ ಹೆಸರಾಂತ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ (Raj B Shetty) ಮಲಯಾಳಂ ಸಿನಿಮಾ ರಂಗಕ್ಕೆ ಹಾರಿದ್ದಾರೆ. ರಮ್ಯಾ ನಿರ್ಮಾಣದ ಚೊಚ್ಚಲು ಸಿನಿಮಾದ ಶೂಟಿಂಗ್ ಮುಗಿಸಿರುವ ರಾಜ್, ಮಲಯಾಳಂ ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಇದು ಇವರ ಚೊಚ್ಚಲು ಮಲಯಾಳಂ ಸಿನಿಮಾವಾಗಿದ್ದು, ಚಿತ್ರಕ್ಕೆ ರುಧಿರಂ (Rudhiram) ಎಂದು ಹೆಸರಿಡಲಾಗಿದೆ.

    ರುಧಿರಂ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ ಕೇವಲ ನಟನೆಯನ್ನು ಮಾತ್ರ ಮಾಡುತ್ತಿದ್ದಾರೆ. ಜಿಶೋ ಲೋನ್ ಆಂಟೋನಿ (Jisho Lone Antony) ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಫೆಬ್ರವರಿ 14 ರಂದು ಈ ಚಿತ್ರಕ್ಕೆ ಮುಹೂರ್ತವಾಗಿದ್ದು, ಇದೀಗ ಚಿತ್ರೀಕರಣವನ್ನು ಆರಂಭಿಸಿದ್ದಾರೆ ನಿರ್ದೇಶಕರು. ರಾಜ್ ಬಿ ಶೆಟ್ಟಿ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ (Aparna Balamurali) ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ: ಜಾಹೀರಾತಿನ ಪೋಸ್ಟ್‌ನೊಂದಿಗೆ ಮುದ್ದು ಮಗುವಿನ ಫೋಟೋ ಹಂಚಿಕೊಂಡ ನಟಿ ಆಲಿಯಾ

    ಒಂದು ಮೊಟ್ಟೆಯ ಕಥೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದವರು ರಾಜ್ ಬಿ ಶೆಟ್ಟಿ. ಆನಂತರ ಅನೇಕ ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕರಾಗಿ ಕೆಲಸ ಮಾಡಿದವರು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ತಂಡದ ಸಕ್ರೀಯ ಸದಸ್ಯನಾಗಿರುವ ರಾಜ್, ತಮ್ಮದೇ ಆದ ರೀತಿಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಎಲ್ಲದರ ಯಶಸ್ಸೇ ಇಂದು ಅವರನ್ನು ಮಲಯಾಳಂ ಚಿತ್ರರಂಗಕ್ಕೆ ಕರೆದುಕೊಂಡು ಹೋಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    `ಸೂರರೈ ಪೊಟ್ರು’ (Soorarai Potru) ಸಿನಿಮಾದ ನಟಿ ಅಪರ್ಣಾ ಬಾಲಮುರಳಿ (Aparna Balamurali) ಸದ್ಯ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಹಲವು ಭಾಷೆಗಳಲ್ಲಿ ಸಿನಿಮಾ ಮಾಡುತ್ತಿರುವ ನಟಿ ಅಪರ್ಣಾ ಇತ್ತೀಚೆಗೆ ಕೇರಳದ ಕಾಲೇಜಿಗೆ ಭೇಟಿ ನೀಡಿದ್ದರು. ಕಾಲೇಜು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬರು ಅಪರ್ಣಾ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಆ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ʻತಂಕಂʼ ಸಿನಿಮಾ ಪ್ರಚಾರ ಕಾರ್ಯಕ್ಕಾಗಿ ಕೇರಳದ (Kerala) ಕಾಲೇಜಿಗೆ ಅಪರ್ಣಾ ಮತ್ತು ತಂಡ ಬಂದಿದ್ದರು. ಈ ವೇಳೆ ವೇದಿಕೆ ಮೇಲೆ ಕುಳಿತಿದ್ದ ಅಪರ್ಣಾ ಕಡೆ ವಿದ್ಯಾರ್ಥಿಯೊಬ್ಬರು (Student) ಓಡಿ ಬಂದ. ಬಂದವನೇ ಅಪರ್ಣಾ ಕೈ ಹಿಡಿದು ಮಾತನಾಡಿದ, ಬಳಿಕ ಸೆಲ್ಫಿ ಕೇಳಿದ. ಅಪರ್ಣಾ ಕೂಡ ಸೆಲ್ಫಿ ಕೊಡಲು ಎದ್ದು ನಿಂತರು. ಆಗ ವಿದ್ಯಾರ್ಥಿ ಅಪರ್ಣಾ ಹೆಗಲ ಮೇಲೆ ಕೈ ಹಾಕಿದ. ಅಪರ್ಣಾ ಆತನಿಂದ ತಪ್ಪಿಸಿಕೊಂಡು ದೂರ ಹೋದರು. ಇದನ್ನೂ ಓದಿ: ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾದ `ಸತ್ಯ’ ಸೀರಿಯಲ್ ಖ್ಯಾತಿಯ ಸಾಗರ್- ಸಿರಿ ರಾಜು

    ಕಾಲೇಜು ವಿದ್ಯಾರ್ಥಿಯ ಕೆಟ್ಟ ವರ್ತನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಘಟನೆಯಿಂದ ಅಪರ್ಣಾ ತುಂಬಾ ಹಿಂಸೆ ಅನುಭವಿಸಿದ್ದಾರೆ.

    ಈ ಘಟನೆಯ ಬಳಿಕ ಕೆಲವು ವಿದ್ಯಾರ್ಥಿಗಳು ನಟಿಯ ಬಳಿ ಬಂದು ಕ್ಷಮೆ ಕೇಳಿದ್ದಾರೆ. ಬಳಿಕ ಅನುಚಿತವಾಗಿ ವರ್ತಿಸಿದ ವಿದ್ಯಾರ್ಥಿ ಕೂಡ ಕ್ಷಮೆ ಕೇಳಿದ್ದಾರೆ. ನಾನು ನಿಮ್ಮ ದೊಡ್ಡ ಅಭಿಮಾನಿ, ನಿಮ್ಮ ಜೊತೆ ಹೀಗೆ ವರ್ತಿಸುವ ಯೋಚನೆ ನನ್ನಲ್ಲಿರಲಿಲ್ಲ ಎಂದು ಹೇಳಿದ್ದಾರೆ. ಘಟನೆ ನಡೆದ ವೇಳೆ `ತಂಕಂ’ ಚಿತ್ರತಂಡ ಒಂದು ಮಾತನಾಡದೇ ಸೈಲೆಂಟ್ ಆಗಿದ್ದಕ್ಕೆ ತಂಡದ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಪವನ್ ನಿರ್ದೇಶಕ, ಫಹಾದ್ ಹೀರೋ

    ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಪವನ್ ನಿರ್ದೇಶಕ, ಫಹಾದ್ ಹೀರೋ

    ಲೂಸಿಯಾ ಖ್ಯಾತಿಯ ಪವನ್ ಕುಮಾರ್ (Pawan Kumar) ಮತ್ತು ಮಲಯಾಳಂ ಹೆಸರಾಂತ ನಟ ಫಹಾದ್ ಫಾಸಿಲ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎಂದು ಮೊದಲ ಬಾರಿಗೆ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಅದೀಗ ನಿಜವಾಗಿದೆ. ಈ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರಲಿದ್ದು, ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಿನ್ನೆಯಷ್ಟೇ ಹೊಸ ಸುದ್ದಿಯೊಂದನ್ನು ಕೊಡಲಿದ್ದೇವೆ ಎಂದು ಹೊಂಬಾಳೆ ಹೇಳಿಕೊಂಡಿತ್ತು.

    ಅಂದುಕೊಂಡಂತೆ ಆಗಿದ್ದರೆ, ಪವನ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನ ದ್ವಿತ್ವ ಸಿನಿಮಾ ಆಗಬೇಕಿತ್ತು. ಪುನೀತ್ ಅವರ ಹಠಾತ್ ನಿಧನದಿಂದಾಗಿ ದ್ವಿತ್ವ ಸೆಟ್ಟೇರಲಿಲ್ಲ. ಈಗ ಅದೇ ಕಥೆಯನ್ನು ಫಾಸಿಲ್ ಗೆ ಮಾಡಲಿದ್ದಾರಾ ಅಥವಾ ಬೇರೆ ಕಥೆಯನ್ನು ಪವನ್ ಆಯ್ಕೆ ಮಾಡಿಕೊಂಡಿದ್ದಾರಾ ಅವರೇ ಹೇಳಬೇಕು. ಒಟ್ಟಿನಲ್ಲಿ ಫಾಸಿಲ್ ಗಾಗಿ ಪವನ್ ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಧೂಮ್ (Dhoom) ಎಂದು ಹೆಸರಿಡಲಾಗಿದೆ. ಇದನ್ನೂ ಓದಿ:`ಜೂನಿಯರ್’ ಆಗಿ ಸಿನಿರಸಿಕರನ್ನು ಗೆಲ್ಲಲು ಬಂದ್ರು ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ

    ಧೂಮ್ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಹೊಂಬಾಳೆ ಸಂಸ್ಥೆ (Hombale Films), ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಬರಲಿದೆ ಎಂದಿದೆ. ಕ್ರಮವಾಗಿ ಮಲಯಾಳಂ, ಕನ್ನಡ, ತಮಿಳು ತೆಲುಗು ಭಾಷೆಯ ಹೆಸರು ಹಾಕಿರುವುದರಿಂದ ಮೂಲ ಮಲಯಾಳಂನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕನ್ನಡ ಮತ್ತು ಇತರ ಭಾಷೆಗೆ ಸಿನಿಮಾವನ್ನು ಡಬ್ ಮಾಡುತ್ತಾರಾ ಕಾದು ನೋಡಬೇಕು.

    ಫಹಾದ್ ಫಾಸಿಲ್ (Fahadh Faasil) ನಾಯಕನಾಗಿ ನಟಿಸುತ್ತಿದ್ದರೆ, ಸೂರರೈ ಪೋಟ್ರು ನಾಯಕಿ ಅಪರ್ಣಾ ಬಾಲಮುರಳಿ (Aparna Balamurali) ಈ ಸಿನಿಮಾದ ನಾಯಕಿ. ಅಕ್ಟೋಬರ್ 9 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಫಹಾದ್ ಪ್ರತಿಭಾವಂತ ನಟ, ಪವನ್ ಕುಮಾರ್ ಹೊಸ ಬಗೆಯ ಯೋಚಿಸುವ ನಿರ್ದೇಶಕ. ಹಾಗಾಗಿ ಧೂಮಂ ಸಿನಿಮಾದ ಬಗ್ಗೆ ಈಗಿನಿಂದಲೇ ನಿರೀಕ್ಷೆ ದುಪ್ಪಟ್ಟಾಗಿದೆ. ಹೊಂಬಾಳೆ ಫಿಲ್ಸ್ಮ್ ನಿಂದ ಈಗಾಗಲೇ ಸಲಾರ್, ಬಘೀರ್, ರಾಘವೇಂದ್ರ ಸ್ಟೋರ್ಸ್ ಸಿನಿಮಾಗಳು ರೆಡಿಯಾಗಿದ್ದು, ಈ ಸಿನಿಮಾ ಸಾಲಿಗೆ ಧೂಮ್ ಕೂಡ ಸೇರ್ಪಡೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯನ್ನೇ ಬಿಡಲಿಲ್ಲ ಬಾಡಿ ಶೇಮಿಂಗ್‌ ಭೂತ

    ರಾಷ್ಟ್ರ ಪ್ರಶಸ್ತಿ ವಿಜೇತ ನಟಿಯನ್ನೇ ಬಿಡಲಿಲ್ಲ ಬಾಡಿ ಶೇಮಿಂಗ್‌ ಭೂತ

    ಕಾಲಿವುಡ್‌ನ `ಸೂರರೈ ಪೋಟ್ರು’ (Surarai Potru) ಚಿತ್ರದ ಮೂಲಕ ಗಮನ ಸೆಳೆದ ನಟಿ ಅಪರ್ಣಾ ಬಾಲಮುರಳಿ(Aparna Balamurali) ಮತ್ತೆ ಸುದ್ದಿಯಲ್ಲಿದ್ದಾರೆ. `ಸೂರರೈ ಪೋಟ್ರು’ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿಯ ಗರಿ (National Award Winner) ಮುಡಿಗೇರಿಸಿಕೊಂಡಿದ್ದರು. ಈಗ ಬಾಡಿ ಶೇಮಿಂಗ್ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ದಪ್ಪಗಾಗಿದ್ದಾರೆ ಎಂದು ಟ್ರೋಲ್ ಮಾಡಿದವರಿಗೆ ಖಡಕ್ ಆಗಿ ನಟಿ ತಿರುಗೇಟು ನೀಡಿದ್ದಾರೆ.

    ತೆಲುಗು ಮತ್ತು ತಮಿಳು ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ನಟಿ ಅಪರ್ಣಾ ಬಾಲಮುರಳಿ ಅವರು ಸುಧಾ ಕೊಂಗರ ನಿರ್ದೇಶನದ `ಸೂರರೈ ಪೋಟ್ರು’ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಬಾಚಿಕೊಂಡರು. ಸೂರ್ಯ ಅವರ ಪತ್ನಿಯ ಪಾತ್ರದಲ್ಲಿ ಮನೋಜ್ಞವಾಗಿ ನಟಿಸಿದ್ದರು. ಈಗ ಸಾಲು ಸಾಲು ಚಿತ್ರಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ.

    ಇನ್ನು ಮೊದಲಿಂದಲೂ ಗುಂಡಗಿದ್ದ ನಟಿ ಅಪರ್ಣಾ ಈಗ ಮತ್ತಷ್ಟು ದಪ್ಪಗಾಗಿದ್ದಾರೆ. ಇದೇ ಕಾರಣಕ್ಕೆ ಅವರಿಗೆ ಬಾಡಿ ಶೇಮಿಂಗ್ ಕಾಟ ಶುರುವಾಗಿದೆ. ಇತ್ತೀಚೆಗೆ `ನೀತಂ ಒರು ವಾನಂ’ ಅಪರ್ಣಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ತೆಲುಗು ಮತ್ತು ತಮಿಳು ಭಾಷೆಯಲ್ಲಿ ಏಕಕಾಲದಲ್ಲಿ ರಿಲೀಸ್ ಆಗುತ್ತಿದೆ. ನಟಿಯ ಹುಟ್ಟುಹಬ್ಬ ಸಂದರ್ಭದಲ್ಲಿ ಲಂಗ ದಾವಣಿ ಲುಕ್‌ನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿರುವ ಪೋಸ್ಟರ್‌ವೊಂದನ್ನ ರಿಲೀಸ್ ಮಾಡಲಾಗಿತ್ತು. ಅಪರ್ಣಾ ಲುಕ್ ನೋಡಿ ಕೆಲ ನೆಟ್ಟಿಗರು, ಅದೆಷ್ಟು ದಪ್ಪಗಾಗಿದ್ದೀರಾ ನೀವು ಬರೀ ತಾಯಿಯ ಪಾತ್ರಕ್ಕೆ ಲಾಯಕ್ಕು ಎಂದು ನಟಿಗೆ ಟೀಕೆ ಮಾಡಿದ್ದಾರೆ. ಅವರ ಫೋಟೋಗಳನ್ನ ಕೂಟ ಟ್ರೋಲ್ ಮಾಡಿದ್ದಾರೆ. ಇದನ್ನೂ ಓದಿ:‘ಮೀಟು’ ಅನ್ನೋದು ಕಾಮನ್ ಆಗಿದೆ, ಊರು ಅಂದ್ಮೇಲೆ ಸಮಸ್ಯೆ ಇರುತ್ತೆ: ನಿರ್ದೇಶಕ ಶಶಾಂಕ್

    ಇದೀಗ ಟ್ರೋಲಿಗರಿಗೆ ನಟಿ ಅಪರ್ಣಾ ಖಡಕ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ದೇಹದ ತೂಕಕ್ಕೂ ಟ್ಯಾಲೆಂಟ್‌ಗೂ ಯಾವುದೇ ಸಂಬಂಧವಿಲ್ಲ. ದೇಹದಲ್ಲಿನ ಕೆಲ ಸಮಸ್ಯೆಗಳಿಂದ ವ್ಯಕ್ತಿಯ ತೂಕ ಹೆಚ್ಚಿಸುತ್ತದೆ. ನನಗೆ ತಾಯಿ ಪಾತ್ರ ಮಾಡುವಷ್ಟು ವಯಸ್ಸಾಗಿಲ್ಲ. ತೆಳ್ಳಗಿರುವುದು ನಟಿಯಾಗಲು ಇರಬೇಕಾದ ಅರ್ಹತೆಗಳಲ್ಲಿ ಒಂದಲ್ಲ ಎಂದು ಅಪರ್ಣಾ ತಿರುಗೇಟು ನೀಡಿದ್ದಾರೆ. ನಟಿಯ ಪ್ರತಿಕ್ರಿಯೆ ಅಭಿಮಾನಿಗಳ  ಮೆಚ್ಚುಗೆಗೆ ಪಾತ್ರವಾಗಿದೆ.

    Live Tv
    [brid partner=56869869 player=32851 video=960834 autoplay=true]

  • 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

    2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್‌ಗೆ 30 ಭಾಷೆಗಳಲ್ಲಿ 400ಕ್ಕೂ ಅಧಿಕ ಸಿನಿಮಾಗಳ ಅರ್ಜಿ ಸಲ್ಲಿಸಿದ್ದವು. ಇಂದು ನವದೆಹಲಿಯಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    1954ರಿಂದ ರಾಷ್ಟ್ರ ಪ್ರಶಸ್ತಿ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈಗ 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಭಾರತ ಸರ್ಕಾರವು ಚಲನಚಿತ್ರೋತ್ಸವ ಜವಬ್ದಾರಿ ಹೊತ್ತುಕೊಂಡಿದೆ. ಕೋವಿಡ್‌ನಿಂದ ರಾಷ್ಟ್ರ ಪ್ರಶಸ್ತಿ ಕಾರ್ಯವನ್ನ ಮುಂದೂಡಲಾಗಿತ್ತು. 2020ರ ಸಾಲಿನಲ್ಲಿ ಸಾಧನೆ ಮಾಡಿದ ಪ್ರತಿಭೆಗೆ ಗುರುತಿಸಿ, ಗೌರವಿಸಲಾಗಿದೆ. ಇದನ್ನೂ ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ

    ಚಲನಚಿತ್ರ ನಿರ್ಮಾಪಕರಾದ ವಿಪುಲ್ ಶಾ ಮತ್ತು ಅನುರಾಗ್ ಠಾಕೂರ್ ಅವರನ್ನ ಭೇಟಿ ಮಾಡಿ, 68ನೇ ರಾಷ್ಟ್ರ ಪ್ರಶಸ್ತಿಯ ಕುರಿತು ವರದಿ ಸಲ್ಲಿಸಲಾಯಿತು. ಯಾರಿಗೆಲ್ಲಾ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಕುರಿತ ಡಿಟೈಲ್ಸ್ ಇಲ್ಲಿದೆ.

    ಅತ್ಯುತ್ತಮ ಚಲನಚಿತ್ರ: ಸೂರರೈ ಪೋಟ್ರು

    ಅತ್ಯುತ್ತಮ ನಿರ್ದೇಶಕ: ಸಚಿ, ಅಯ್ಯಪ್ಪನಂ ಕೊಶಿಯಮ್

    ಅತ್ಯುತ್ತಮ ಮನರಂಜನೆ ಚಿತ್ರ: ತಾನ್ಹಾಜಿ

    ಅತ್ಯುತ್ತಮ ನಟ: ಸೂರ್ಯ (ಸೂರರೈ ಪೋಟ್ರು)
    ಅಜಯ್ ದೇವಗನ್ ( ತಾನ್ಹಾಜಿ)

    ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ( ಸೂರರೈ ಪೋಟ್ರು)

    ಅತ್ಯುತ್ತಮ ಪೋಷಕ ನಟಿ: ಬಿಜು ಮೆನನ್( ಅಯ್ಯಪ್ಪನಂ ಕೋಶಿಯಂ)

    Live Tv
    [brid partner=56869869 player=32851 video=960834 autoplay=true]